Author: kannadanewsnow05

ಬಳ್ಳಾರಿ : ಈಗಾಗಲೇ ಮಂಡ್ಯದಲ್ಲಿ ಕಳೆದ 2 ದಿನಗಳಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದೆ. ಇನ್ನು ಮುಂದಿನ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 68 ವರ್ಷಗಳ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಂತಾಗಿದೆ. ಹೌದು ಬಳ್ಳಾರಿಯಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು, ನಗರದಲ್ಲಿ ಶನಿವಾರ ರಾತ್ರಿ ಖಾಸಗಿ ಹೋಟೆಲ್‌ನಲ್ಲಿ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ನೇತೃತ್ವದಲ್ಲಿ ಜರುಗಿದ ಎಲ್ಲ ಜಿಲ್ಲೆಗಳ ಕಸಾಪ ಪ್ರತಿನಿಧಿಗಳ ಸಭೆಯಲ್ಲಿ ಗಡಿನಾಡು ಬಳ್ಳಾರಿಯಲ್ಲಿ ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಸರ್ವಾನುಮತದಿಂದ ನಿರ್ಣಯಿಸಲಾಯಿತು. 1926 ಹಾಗೂ 1938ರಲ್ಲಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆದಿತ್ತು. ಸ್ವಾತಂತ್ರ್ಯಾನಂತರ 1958 ರಲ್ಲಿ ವಿ.ಕೃ.ಗೋಕಾಕ್ ಅವರ ಅಧ್ಯಕ್ಷತೆಯಲ್ಲಿ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಮ್ಮೇಳನ ಅರ್ಥಪೂರ್ಣವಾಗಿ ನಡೆದಿತ್ತು. ಸುದೀರ್ಘ…

Read More

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಘೋಷಣೆ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಾಲ್ಕೂ ನಿಗಮಗಳ ನಿವೃತ್ತ ಸಿಬ್ಬಂದಿಗೆ ನೀಡಬೇಕಾದ ಬಾಕಿ ಉಪ ಧನ ಮತ್ತು ಗಳಿಕೆ ರಜೆ ನಗದೀಕರಣ ಪಾವತಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ನೀಡಿದ್ದಾರೆ. ವೇತನ ಹೆಚ್ಚಳ, ಹೆಚ್ಚುವರಿ ವೇತನ ಸಹಿತ ನಿವೃತ್ತ ನೌಕರರ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಬಾಕಿ ಉಳಿದಿರುವಂತೆ ನೌಕರರಿಗೆ ಸಾರಿಗೆ ನೌಕರರು ಡಿ.31 ರಿಂದ ಕರ್ತವ್ಯ ಬದ್ಧರಾಗಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಮುಷ್ಕರ ತಡೆಯುವ ಉದ್ದೇಶದಿಂದ ರಾಮಲಿಂಗಾರೆಡ್ಡಿ, 11,694 ನಿವೃತ್ತ ಸಿಬ್ಬಂದಿಗೆ ರೂ.224.05 ಕೋಟಿ ಬಾಕಿ ಉಪಧನ ಮತ್ತು ಗಳಿಗೆ ರಜೆ ನಾಗದೀಕರಣ ಪಾವತಿಗೆ ಆದೇಶ ನೀಡಲಾಗಿದೆ. ಶನಿವಾರ ಮೂವರು ನಿವೃತ್ತ ಸಿಬ್ಬಂದಿಗೆ ಸಾಂಕೇತಿಕವಾಗಿ ಚೆಕ್ ವಿತರಿಸಲಾಗಿದೆ. ಉಳಿದವರಿಗೆ ಹಣ ನೀಡಲು ಸೂಚಿಸಿದ್ದಾರೆ. ನೌಕರರು ಮುಷ್ಕರದಿಂದ ಹಿಂದೆ ಸರಿಯುವ ಕುರಿತು ಇನ್ನೂ ಸ್ಪಷ್ಟತೆ ನೀಡಿಲ್ಲ. ಒಂದು ವೇಳೆ ಮುಷ್ಕರ ನಡೆಸಿದರೆ ನೌಕರರ ವಿರುದ್ಧ ಎಸ್ಮಾ…

Read More

ಮಂಡ್ಯ : ದರೋಡೆ ಮಾಡಲು ಬಂದ ದುರುಳ ವ್ಯಕ್ತಿಯೊಬ್ಬರನ್ನು ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯ ತೋಟದ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.ಮರ ಕತ್ತರಿಸುವ ಯಂತ್ರದಿಂದ 60 ವರ್ಷದ ರಮೇಶ್ ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ನಿನ್ನೆ ಸಂಜೆ 7:00ಗೆ ತೋಟಕೆ ಮನೆಗೆ ವ್ಯಕ್ತಿ ಆಗಮಿಸಿ ವ್ಯಕ್ತಿಗೆ ಮರ ಕತ್ತರಿಸುವ ಯಂತ್ರದಿಂದ ರಮೇಶ್ ಅವರನ್ನು ಭೀಕರ ಮವಾಗಿ ಹತ್ಯೆ ಮಾಡಿದ್ದಾನೆ. ಈ ವೇಳೆ ರಮೇಶ್ ಪತ್ನಿ ಯಶೋಧಮ್ಮಗೆ ಮರ ಕತ್ತರಿಸುವ ಯಂತ್ರ ಬಂದಿದೆ ಆರ್ಡರ್ ಮಾಡಿದ್ದೀರಿ ಅಂತ ಹೇಳಿದಾಗ ನಾವು ಮಾಡಿಲ್ಲ ಅಂದಾಗ ಅವರ ಕುತ್ತಿಗೆ ಹಿಡಿದು ತಳ್ಳಿದ್ದಾನೆ. ಈ ವೇಳೆ ಯಶೋದಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಆಮೇಲೆ ರಮೇಶ್ ಅವರನ್ನು ಮರ ಕತ್ತರಿಸುವ ಯಂತ್ರದಿಂದ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಸೀನಿಮಿಯ ರೀತಿಯಲ್ಲಿ ಹಂತಕ…

Read More

ಕೊಪ್ಪಳ : ಲಂಚದ ಹಣ ಸ್ವೀಕರಿಸಿದ ಬಳಿಕ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ಲಂಚದ ಹಣವನ್ನು ಸ್ವೀಕರಿಸಿದ ಬಳಿಕ ಅಧಿಕಾರಿ ಒಬ್ಬ ನುಂಗಿದ್ದಾನೆ. ಈ ವೇಳೆ ಲೋಕಾಯುಕ್ತ ಪೊಲೀಸರು ಅಧಿಕಾರಿಗೆ ವಾಂತಿ ಮಾಡಿಸಿ ಹಣ ಕಕ್ಕಿಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಹೌದು ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಇಂದು ಸಂಜೆ ಕೊಪ್ಪಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. ದಸ್ತಗಿರ್ ಅಲಿ, ಲೋಕಾ ಬಲೆಗೆ ಬಿದ್ದ ಅಧಿಕಾರಿ ಎನ್ನಲಾಗಿದ್ದು, ಲಂಚದ ಹಣ ನುಂಗಿದ್ದನ್ನು ಲೋಕಾಯುಕ್ತ ಅಧಿಕಾರಿಗಳು ವಾಂತಿ ಮಾಡಿಸಿ ಕಕ್ಕಿಸಿರುವ ಘಟನೆ ನಡೆದಿದೆ. ಎನ್​ಜಿಓಗೆ ಪ್ರಮಾಣ ಪತ್ರ ನೀಡಲು ಭೀಮನಗೌಡ ಅನ್ನೋರಿಗೆ ದಸ್ತಗಿರ್ ಅಲಿ ಎರಡು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಭೀಮನಗೌಡ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ದಸ್ತಗಿರಿ ಯನ್ನು ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರ ಬಲೆಗೆ ಬೀಳ್ತಿದ್ದಂತೆ ದಸ್ತಗಿರ್ ಅಲಿ ಹೈಡ್ರಾಮಾವೇ ಮಾಡಿದ್ದಾರೆ.…

Read More

ಹೈದ್ರಾಬಾದ್ : ಪುಷ್ಪಾ 2 ಸಿನೆಮಾ ವೀಕ್ಷಣೆಯ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಇದೊಂದು ದುರದೃಷ್ಟಕರ ಅಪಘಾತ. ಇದರಿಂದ ಮನೆಯಲ್ಲಿ ಒಬ್ಬನೇ ಕೂರುತ್ತಿದ್ದೇನೆ. ನಾನು ಇದಕ್ಕೆ ನೇರ ಕಾರಣ ಅಲ್ಲ ಎಂದು ನನಗೆ ನಾನೇ ಹೇಳಿಕೊಳ್ಳುತ್ತಿದ್ದೇನೆ ಎಂದು ಅಲ್ಲು ಅರ್ಜುನ್ ಭಾವುಕರಾದರು. ಇಂದು ಹೈದರಾಬಾದ್ ನ ಜುಬ್ಲಿ ಹಿಲ್ಸ್ ನಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೃತ ಮಹಿಳೆ ಮಗು ಹೇಗಿದೆ ಎಂಬುದರ ಬಗ್ಗೆ ನಾನು ಗಂಟೆಗೊಮ್ಮೆ ವೈದ್ಯರು, ಕುಟುಂಬಸ್ಥರಿಂದ ಮಾಹಿತಿ ಪಡೆಯುತ್ತಿದ್ದೇನೆ. ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಒಂದೇ ಒಂದು ಒಳ್ಳೆಯ ವಿಷಯವೆಂದರೆ ಹುಡುಗ ಸುಧಾರಿಸುತ್ತಿದ್ದಾನೆ.ಪ್ರೇಕ್ಷಕರಿಗೆ ಉತ್ತಮ ಮನರಂಜನೆಯನ್ನು ನೀಡುವುದು ಮತ್ತು ಜನರು ನಗುವಿನೊಂದಿಗೆ ಹೊರಡಬೇಕೆಂದು ಬಯಸುವುದು ನನ್ನ ಸಂಪೂರ್ಣ ಪ್ರಯತ್ನವಾಗಿದೆ ಎಂದು ಹೇಳಿದರು. ಹೊರಗೆ ಸಾಕಷ್ಟು ಜನ ಸೇರುತ್ತಿದ್ದಾರೆ ದಯವಿಟ್ಟು ಹೊರಡಿ ಎಂದು ಪೊಲೀಸರು ಹೇಳಿದರು. ನಾನು ಆ ಕ್ಷಣವೇ ಮನೆಗೆ ನಡೆದೆ. ಮರುದಿನವೇ ಸಾವಿನ ವಿಚಾರ ತಿಳಿಯಿತು. ನನಗೆ…

Read More

ಬೆಂಗಳೂರು : ಇಂದು ಬೆಂಗಳೂರಿನ ನೆಲಮಂಗಲದ ತಾಲೂಕಿನ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತದಲ್ಲಿ 6 ಜನರು ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೆಲಮಂಗಲ ಆಸ್ಪತ್ರೆಯಲ್ಲಿ ಇಬ್ಬರ ಪೋಸ್ಟ್ ಮಾರ್ಟಂ ಅಂತ್ಯವಾಗಿದ್ದು, ವಿಜಯಲಕ್ಷ್ಮಿ ಹಾಗೂ ದೀಕ್ಷಾ ಮರಣೋತ್ತರ ಪರೀಕ್ಷೆ ಅಂತ್ಯವಾಗಿದೆ. ಸದ್ಯ ಮೃತ ದೇಹ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. 6 ಮೃತದೇಹ ತೆಗೆದುಕೊಂಡು ಹೋಗಲು 3 ಆಂಬುಲೆನ್ಸ್ ಗಳು ಸಿದ್ಧವಾಗಿವೆ. ಇಂದು ಬೆಂಗಳೂರಿನ ನೆಲಮಂಗಲದ ತಾಲೂಕಿನ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದರೆ. ಇದೀಗ ಈ ಒಂದು ಪ್ರಕರಣ ವಿಶೇಷ ತನಿಖಾಧಿಕಾರಿಯಾಗಿ Dysp ಜಗದೀಶ್ ನೇಮಕವಾಗಿದ್ದರೆ. ನೆಲಮಂಗಲ ಉಪ ವಿಭಾಗದ ಡಿವೈಎಸ್ಪಿ ಜಗದೀಶ್ ನೇಮಕವಾಗಿದ್ದಾರೆ. ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದ ಕುರಿತ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ಹಿನ್ನೆಲೆ? ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ…

Read More

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಸದನ ನಡಿಯೋ ವೇಳೆ ಬಿಜೆಪಿ ಎಂಎಲ್ಸಿ ಸಿಟಿ ರವಿಯವರು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪರಹ ಪದ ಬಳಸಿದರು ಈ ವಿಚಾರವಾಗಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿಯವರು ದೇಶದಲ್ಲಿ ಇಂತಹ ಘಟನೆ ಹೊಸದೇನಲ್ಲ ಎಂದು ಹೇಳಿಕೆ ನೀಡಿದ್ದು ಇದೀಗ ಭಾರಿ ಸಂಚಲನ ಮೂಡಿಸಿದೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಘಟನೆ ಆಗಿದ್ದು ಆಗಿಹೋಗಿದೆ ಮುಂದುವರಿಸೋದ್ರಲ್ಲಿ ಅರ್ಥವಿಲ್ಲ.ದೇಶದಲ್ಲಿ ಇಂಥ ಘಟನೆಗಳು ಹೊಸದೇನಲ್ಲ, ಸಂಸತ್ತು, ವಿಧಾನಸಭೆಯಲ್ಲಿ ಬಹಳಷ್ಟು ನಡೆದಿವೆ. ಘಟನೆಗೆ ಕ್ಷಮೆ ಕೇಳಿದ ಬಳಿಕ ಮುಗಿದು ಹೋಗಿವೆ. ಈಗಲೂ ಅದೇ ರೀತಿ ಮುಗಿಸೋದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನವಶ್ಯಕ ‌ಎಂದರು. ನನ್ನನ್ನು ಪೊಲೀಸರು ಹತ್ಯೆ ಮಾಡಲು ಯತ್ನಿಸಿದ್ದರು ಎಂದು ಸಿಟಿ ರವಿ ಆರೋಪಿಸಿರುವ ಕುರಿತಾಗಿ, ಸಿಟಿ ರವಿ ಓರ್ವ ಶಾಸಕ ಅವರನ್ನು ಹೇಗೆ ಎನ್ಕೌಂಟರ್ ಮಾಡಲಾಗುತ್ತೆ? ತೊಂದರೆ ಕೊಡಬೇಕೆಂದು ಠಾಣೆಯಿಂದ ಠಾಣೆಗೆ ಸುತ್ತಾಡಿಸಿಲ್ಲ ಮೊದಲೆಲ್ಲ ಬಿಜೆಪಿ ಕಾರ್ಯಕರ್ತರು ಧರಣಿ ಶುರುಮಾಡಿದರು ಈ ಕಾರಣಕ್ಕೆ…

Read More

ವಿಜಯಪುರ : ಕಳೆದ ಕೆಲವು ದಿನಗಳ ಹಿಂದೆ ಮುರುಡೇಶ್ವರ ಬೀಚ್ ನಲ್ಲಿ ಸಮುದ್ರದಲ್ಲಿ ಮುಳುಗಿ ಕೋಲಾರ ಜಿಲ್ಲೆಯ ವಸತಿ ನಿಲಯದ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು. ಇದೀಗ ಶಾಲಾ ಶೈಕ್ಷಣಿಕ ಪ್ರವಾಸದ ಬಳಿಕ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಬಳಲಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು ವಿದ್ಯಾರ್ಥಿನಿಯ ಪ್ರಾಣಕ್ಕೆ ಇದೀಗ ಶಾಲಾ ಶೈಕ್ಷಣಿಕ ಪ್ರವಾಸ ಕಂಟಕವಾಗಿದೆ ಎನ್ನಲಾಗಿದೆ. ಪ್ರವಾಸದ ಬಳಿಕ ಅನಾರೋಗ್ಯದಿಂದ ಶಂಕ್ರಮ್ಮ ಮಲ್ಲನಗೌಡ (15) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ. ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳಿದ್ದಾಳೆ.ಪ್ರವಾಸದ ಬಳಿಕ ಅನಾರೋಗ್ಯದಿಂದ 30ಕ್ಕೂ ಹೆಚ್ಚು ಮಕ್ಕಳು ಬಳಲುತ್ತಿದ್ದರು. ಈ ಪೈಕಿ 9ನೇ ತರಗತಿಯ ವಿದ್ಯಾರ್ಥಿನಿ ಶಂಕ್ರಮ್ಮ ಮಲ್ಲನಗೌಡ ಬಿರಾದರ್ ಸಾವನ್ನಪ್ಪಿದ್ದಾಳೆ. ವಿಜಯಪುರ ತಾಲೂಕಿನ ಹೆಗಡಿಹಾಳ ಗ್ರಾಮದ ಸರ್ಕಾರಿ ಶಾಲೆಯ ಸುಮಾರು 110 ಮಕ್ಕಳನ್ನು ಕಳೆದ ಡಿಸೆಂಬರ್ 9 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆ ಎಂದು ಕರೆದುಕೊಂಡು ಹೋಗಲಾಗಿತ್ತು. ಪ್ರವಾಸದ ಬಳಿಕ ಚಳಿ ಜ್ವರ ನೆಗಡಿ ಕೆಮ್ಮು ಕಫದಿಂದ 30ಕ್ಕೂ ಹೆಚ್ಚು…

Read More

ರಾಯಚೂರು : ಬೈಕ್ ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಧಾರಣವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ನಲ್ಲಿ ನಡೆದಿದೆ. ಹೌದು ಲಾರಿ ಕೆಳಗೆ ಸಿಲುಕಿ ಹುಸೇನಮ್ಮ (55) ಎನ್ನುವ ಮಹಿಳೆ ಸಾವನ್ನಪ್ಪಿದ್ದು, ಲಾರಿ ಹರಿದ ಪರಿಣಾಮ ಹುಸೇನಮ್ಮರ ದೇಹ ಸಂಪೂರ್ಣವಾಗಿ ಛಿದ್ರ ಛಿದ್ರವಾಗಿದೆ. ಅರಗಿನಮರ ಕ್ಯಾಂಪ್ನಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಪರಮೇಶ್ವರದಿನ್ನಿ ಗ್ರಾಮದ ಹುಸೇನಮ್ಮ ದುರ್ಮರಣ ಹೊಂದಿದ್ದಾರೆ. ಬೈಕ್ ಗೆ ಹಿಂದಿನಿಂದ ಲಾರಿ ಡಿಕ್ಕಿಯಾಗಿ ಮಹಿಳೆ ಕೆಳಗೆ ಬಿದ್ದಿದ್ದರು. ಈ ವೇಳೆ ಲಾರಿ ಹರಿದು ಸ್ಥಳದಲ್ಲೇ ಹುಸೇನಮ್ಮ ಸಾವನಪ್ಪಿದ್ದಾರೆ. ತಾಯಿಯ ದೇಹದ ಅರ್ಧ ಭಾಗ ಹಿಡಿದು ಮಗ ಗೋಳಾಟ ನಡೆಸುತ್ತಿದ್ದಾನೆ.ಮಗ ಹಾಗೂ ತಾಯಿ ಬೈಕ್ ನಲ್ಲಿ ಸಿಂಧನೂರಿಗೆ ತೆರಳುತ್ತಿದ್ದರು. ಸಿಂಧನೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ನಾಳೆ ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಆಸ್ಪತ್ರೆಯ ವೈಶಿಷ್ಟತೆಗಳು ಕಲಬುರಗಿಯಲ್ಲಿ‌ ರೂ.377 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಆಸ್ಪತ್ರೆಯನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುತ್ತಿದ್ದು, ಹೈದರಾಬಾದ್ – ಕರ್ನಾಟಕ ವಿಶೇಷ ಪ್ರಾತಿನಿಧ್ಯ 371J ದೊರೆತು ದಶಕ ಪೂರೈಸಿದ ನೆನಪಿಗಾಗಿ 7 ಐಸಿಯು ಕೊಠಡಿ, 4 ಜನರಲ್ ವಾರ್ಡ್, 13 ಸೆಮಿ ಸ್ಪೆಷಲ್ ವಾರ್ಡ್‌ಗಳನ್ನು ಒಳಗೊಂಡ 371 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಇದು ರಾಜ್ಯದ ಮೂರನೇ ಸರ್ಕಾರಿ ಹೃದ್ರೋಗ ಆಸ್ಪತ್ರೆಯಾಗಿ ಲೋಕಾರ್ಪಣೆಗೊಳ್ಳುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಜನರಿಗೆ ಅನುಕೂಲವಾಗುವ ನಿರೀಕ್ಷೆಯಿದೆ.ಕಲಬುರಗಿಯಲ್ಲಿ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಳ್ಳುತ್ತಿರುವ ಜಯದೇವ ಆಸ್ಪತ್ರೆಯ ಬಗ್ಗೆ…

Read More