Author: kannadanewsnow05

ಬೆಂಗಳೂರು: ಜಗದೀಶ ಶೆಟ್ಟರ್‌ ಅವರು ಬಿಜೆಪಿಗೆ ಮರಳಿದ ಬೆನ್ನಲ್ಲೇ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಮತ್ತು ಕಲ್ಯಾಣರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರೂ ಸದ್ಯದಲ್ಲೇ ಬಿಜೆಪಿಗೆ ವಾಪಾಸಾಗಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. ಈ ಮಧ್ಯೆ, ಲಕ್ಷ್ಮಣ ಸವದಿಯವರು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸವದಿ, ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ. ಬಿಜೆಪಿ ಸೇರುತ್ತೇನೆ ಎನ್ನುವುದು ಕೇವಲ ಊಹಾಪೋಹ ಎಂದು ಹೇಳಿದರು. ಬಿ.ವೈ.ವಿಜಯೇಂದ್ರ ಅಧ್ಯಕ್ಷರಾದ ಬೆನ್ನಲ್ಲೇ ಪಕ್ಷ ಬಿಟ್ಟು ಹೋದವರನ್ನು ಮರಳಿ ಕರೆತರುವ ವಿಚಾರಕ್ಕೆ ಚಾಲನೆ ಸಿಕ್ಕಿತ್ತು. ವರಿಷ್ಠರ ಅನುಮತಿ ಪಡೆದುಕೊಂಡೇ ಇದಕ್ಕೆ ಪೂರಕವಾಗಿ ‘ಆಪರೇಷನ್’ ಆರಂಭಿಸಲಾಯಿತು. ಶೆಟ್ಟರ್‌ ಅವರನ್ನು ಕರೆತರುವುದಕ್ಕೆ ಮೊದಲ ಆದ್ಯತೆ ನೀಡಲಾಯಿತು. ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಶೆಟ್ಟರ್‌ ಜತೆ ಮಾತುಕತೆ ನಡೆಸಿ, ಮನವೊಲಿಸಿದರು. ಇಬ್ಬರೂ ನಾಯಕರು ಮುಂಬೈನಲ್ಲಿ ಎರಡು ಬಾರಿ ಭೇಟಿ ಮಾಡಿದ್ದರು…

Read More

ಬೆಳಗಾವಿ : ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪತಸಂಚಲನ ನಡೆಯುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.ಅದರಂತೆ ದೆಹಲಿಯಲ್ಲಿ ನಡೆಯಲಿರುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧರೊಬ್ಬರು ಆಯ್ಕೆಯಾಗಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ಯೋಧ ಅದೃಶ್ಯ ಮಾವಿನಕಟ್ಟಿ ಆಯ್ಕೆಯಾಗಿದ್ದಾರೆ. ಇವರು ಮದ್ರಾಸ್ ರೆಜಿಮೆಂಟ್ ಕ್ರೊಪ ವೆಲ್ಲಿಂಗ್ಟನ್ ನಲ್ಲಿ ತರಬೇತಿ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಕಳೆದ ಹಲವು ವರ್ಷಗಳಿಂದ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಎನ್ ಸಿಸಿ (NCC) ತರಬೇತಿ ಕೂಡ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಅಂಗವಾಗಿ ಇದೀಗ ದೆಹಲಿಯಲ್ಲಿ ನಡೆಯುವ ಪೆರೇಡ್‌ನಲ್ಲಿ ಅದೃಶ್ಯ ಭಾಗಿಯಾಗಿರುವುದು ಕುಟುಂಬಸ್ಥರು ಸೇರಿದಂತೆ ಕರುನಾಡಿನ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ

Read More

ಹಾಸನ: ಜಗದೀಶ್​​ ಶೆಟ್ಟರ್​​ ಬಿಜೆಪಿಗೆ ಮರುಸೇರ್ಪಡೆಯಾಗಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರಿಂದ ವಿವಿಧ ರೀತಿಯ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು ಅದೇ ರೀತಿಯಾಗಿ, ಕಾಂಗ್ರೆಸ್​ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಶೀಘ್ರವಾಗಿ ನೆಲಕ್ಕಚ್ಚುತ್ತದೆ ಎಂದು ಟೀಕಿಸಿದರು. ಹಾಸನ ಜಿಲ್ಲೆಯ ಆಲೂರಿನಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಸಮರ್ಥ ನಾಯಕರು. ಮಾಜಿ ಮುಖ್ಯಮಂತ್ರಿ ಯಾಗಿದ್ದವರು. ಅವರನ್ನು ಕಾಂಗ್ರೆಸ್‌ನವರು ಪಕ್ಷಕ್ಕೆ ಉತ್ಸಾಹದಿಂದ ಸೇರಿಸಿಕೊಂಡರು. ಹೀಗೆ ಸೇರಿಸಿಕೊಂಡ ಮೇಲೆ ಅವರನ್ನು ಒಂದು ಮಂತ್ರಿ ಮಾಡುವಷ್ಟು ಸೌಜನ್ಯ ಬೇಡವೇ?. ನಾನು ಯಾರ ಬಗ್ಗೆಯೂ ನಿಂದನೆ ಮಾಡಲ್ಲ. ರಾಜ್ಯದ ಮುಖ್ಯಮಂತ್ರಿಯಾಗಿ, ಸಮರ್ಥ ನಾಯಕರಾಗಿ ಕೆಲಸ ಮಾಡಿದ್ದಾರೆ ಎಂದರು. ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದವರನ್ನು ಕರೆದುಕೊಂಡು ಬಂದು ಒಂದು ಮಂತ್ರಿ ಕೆಲಸ ಕೊಡಲಿಲ್ಲ. ಕಾಂಗ್ರೆಸ್ ಹೇಗೆ ಮೋಸ ಮಾಡುತ್ತದೆ ಅನ್ನುವುದಕ್ಕೆ ಈ ಉದಾಹರಣೆ ಸಾಕು. ಇದು ಕಾಂಗ್ರೆಸ್‌ನ ದೌರ್ಬಲ್ಯ. ಮುಂದಿನ ದಿನಗಳಲ್ಲಿ ಈ ದೇಶದಲ್ಲಿ ಕಾಂಗ್ರೆಸ್ ಹಂತಹಂತವಾಗಿ ನೆಲಕಚ್ಚುತ್ತೆ ಎಂದ ಅವರು, ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವುದು ಸ್ವಾಗತ.…

Read More

ಬೆಂಗಳೂರು : ಮಗನನ್ನು ಗುಂಡು ಹಾರಿಸಿ , ತಂದೆ ಒಬ್ಬ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕಲ್ ಎಂಬಲ್ಲಿ ಘಟನೆ ನಡೆದಿದೆ. 32 ವರ್ಷದ ನರ್ತನ್ ಭೂಪಣ್ಣ ಕೊಲೆಯಾದ ಯುವಕ ಎಂದು ಹೇಳಲಾಗುತ್ತಿದೆ. ಸ್ಥಳೀಯರ ಮಾಹಿತಿಯನ್ನು ಆಧರಿಸಿ ಈಗ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದರೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಂತಹ ನರ್ತನ ನನ್ನು ವಿಕ್ಟೊರಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ವಾಗುತ್ತದೆ ಕೊನೆಯುಸಿರೆಳೆದಿದ್ದಾನೆ. ಘಟನೆ ಕುಡಿತ ದೇವಾ ಕಾಮಾಕ್ಷಿ ಪೊಲೀಸ್ ಠಾಣಾದಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದೂ ರಾಜಧಾನಿ ಬೆನಗಳೂರಿನಲ್ಲಿ ಮಾಣಿಕ್ ಶಾ ಮೈದಾನದಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ ಅವರು ಧ್ವಜಾರೋಹಣ ನೆರವೇರಿಸಲಿದ್ದು ಧ್ವಜಾರೋಹಣ ಮಾಡಿ ರಾಜ್ಯಪಾಲರು ಗೌರವವನ್ನು ಸ್ವೀಕರಿಸಲಿದ್ದಾರೆ. ಬಿಬಿಎಂಪಿ ಜಿಲ್ಲಾಡಳಿತ ಹಾಗೂ ಪೋಲಿಸ್ ಇಲಾಖೆಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. 38 ತುಕಡಿಯಿಂದ 1,150 ಜನ ಪರೇಡ್ ನಲ್ಲಿ ಭಾಗವಹಿಸಲಿದ್ದು ಪೊಲೀಸರು ಗ್ರಹ ರಕ್ಷಕ ದಳ ಕೇರಳ ಪೊಲೀಸರು ಸ್ಕೌಟ್ ಮತ್ತು ಗೈಡ್ಸ್ ಎನ್‌ಸಿಸಿ ಸೇರಿದಂತೆ ಶಾಲಾ ಮಕ್ಕಳು ಪೆರೇಡ್ ನಲ್ಲಿ ಭಾಗಿಯಾಗಲಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಪೊಲೀಸರು ಎಚ್ಚರಿಕೆವಹಿಸಿದ್ದು, 7,000 ಆಸನಗಳ ವ್ಯವಸ್ಥೆ ಇರಲಿದ್ದು 100 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವಿಐಪಿ ವಿವಿಐಪಿ ಸಾರ್ವಜನಿಕರ ಪ್ರವೇಶಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದ್ದು 9 ಡಿಸಿಪಿ, 16 ಎಸಿಪಿ 575 ಪೊಲೀಸ್ ಅಧಿಕಾರಿಗಳನ್ನು ಯೋಜನೆ ಮಾಡಲಾಗಿದೆ.ಒಂದು ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆ ನಿಯೋಜಿಸಲಾಗಿದೆ.ಕಬ್ಬನ್ ರಸ್ತೆ…

Read More

ಬಾಗಲಕೋಟೆ : ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ನಡೆದಿದ್ದು ಟ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲಿ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಟ್ರ್ಯಾಕ್ಟರ್ ಗೆ ಹೆಮ್ಮೆಯಿಂದ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮಹಿಳೆ ಸೇರಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ನಸುಕಿನ ಜಾವದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಕ್ಟರ್ ಗೆ ಹಿಂದಿನಿಂದ ಬಂದ ಕಾರೊಂದು ವೇಗವಾಗಿ ಬಂದು ಗುದ್ದಿದ ಪರಿಣಾಮವಾಗಿ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬೀಳಗಿ ಪೊಲೀಸ್ ಠಾಣಗತ್ತಿಯಲ್ಲಿ ನಡೆದ ಪ್ರಕರಣವಾಗಿದೆ.ಮೃತರ ಕುರಿತಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನ ನಡೆಸುತ್ತಿದ್ದು, ಘಟನೆ ಕುರಿತಂತೆ ಬೀಳಗಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಬೆಂಗಳೂರು : ಪೀಣ್ಯ ನಾಗಸಂದ್ರ ನಡುವೆ ಇಂದಿನಿಂದ ಮೂರು ದಿನ ನಮ್ಮ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಬಿಎಮ್ಆರ್‌ಸಿಎಲ್ ಮಾಹಿತಿ ನೀಡಿದೆ ಜನವರಿ 29 ರ ಮುಂಜಾನೆ ಐದರಿಂದ ಎಂದಿನಂತೆ ನಮ್ಮ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದೆ.. ನಾಗಸಂದ್ರ ಮತ್ತು ಮಾದಾವರದಿಂದ ಮಾರ್ಗ ವಿಸ್ತರಣೆಗೆ ಸಂಬಂಧಿಸಿದ ವಿದ್ಯುತ್ ಕಾಮಗಾರಿಗಳಿಗೆ ಅನುಕೂಲವಾಗುವಂತೆ ಹಸಿರು ಮಾರ್ಗದಲ್ಲಿ ಜನವರಿ 26, 27 ಮತ್ತು 28 ರಂದು ಸಿಲ್ಕ್ ಇನ್‌ಸ್ಟಿಟ್ಯೂಟ್ ಮತ್ತು ಪೀಣ್ಯ ಇಂಡಸ್ಟ್ರಿ ನಡುವೆ ಮಾತ್ರ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಜಾಲಹಳ್ಳಿ, ದಾಸರಹಳ್ಳಿ ಮತ್ತು ನಾಗಸಂದ್ರ ಮೆಟ್ರೊ ನಿಲ್ದಾಣಗಳಿಗೆ ತೆರಳುವ ಪ್ರಯಾಣಿಕರಿಗೆ ವ್ಯತ್ಯಯ ಉಂಟಾಗಲಿದೆ. ಚಲ್ಲಘಟ್ಟದಿಂದ ವೈಟ್‌ಫೀಲ್ಡ್ (ಕಾಡುಗೋಡಿ) ವರೆಗೆ ಸಾಗುವ ನೇರಳೆ ಮಾರ್ಗದ ರೈಲು ಕಾರ್ಯಾಚರಣೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮೂರು ದಿನಗಳಲ್ಲಿ ಪೀಣ್ಯ ಇಂಡಸ್ಟ್ರಿ ಮತ್ತು ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿಯನ್ನು ನಿರೀಕ್ಷಿಸಲಾಗಿದೆ ಎಂದು BMRCL ಪ್ರಯಾಣಿಕರಿಗೆ WhatsApp ಅಥವಾ Namma Metro…

Read More

ಉಡುಪಿ : ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ಉಡುಪಿ ಜಿಲ್ಲಾ ಪೋಕ್ಸೋ ವಿಶೇಷ ಕೋರ್ಟ್ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ 62,000 ದಂಡ ವಿಧಿಸಿ ಉಡುಪಿ ಜಿಲ್ಲಾ ಪೋಕ್ಸೋ ವಿಶೇಷ ಕೋರ್ಟ್ ಪ್ರಕರಣ ಕುರಿತಂತೆ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರು ಗ್ರಾಮದ ನಿವಾಸಿ ಶಂಶುದ್ದೀನಗೆ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಬಾಲಕಿಯನ್ನ ತನ್ನ ಆಟೋದಲ್ಲಿ ದಿನಾಲೂ ಶಾಲೆಗೆ ಕರೆದೊಯ್ಯುತ್ತಿದ್ದ ಎಂದು ಹೇಳಲಾಗುತ್ತಿದ್ದು, ಆಟೋದಲ್ಲಿ ಶಾಲೆಗೆ ಬಿಡುತ್ತಿದ್ದ ವೇಳೆ ವಿಡಿಯೋ ಮಾಡುತ್ತಿದ್ದ ಕಾಪು ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿತ್ತು. ನಂತರ ಬಾಲಕಿಗೆ ವಿಡಿಯೋ ತೋರಿಸಿ ಬ್ಲಾಕ್ಮೇಲ್ ಮಾಡಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳುತ್ತಿಲಾಗುತ್ತಿದ್ದು, ಅಪ್ರಾಪ್ತ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದ, ಲಾಡ್ಜ್, ರೆಸಾರ್ಟ್ ಗೆ ಕರೆದೋಯ್ದು ನಿರಂತರವಾಗಿ ಆಟೋ ಚಾಲಕ ಅತ್ಯಾಚಾರ ಎಸಗಿದ್ದಾನೆ. ಆರೋಪಿಯೂ ಮತ್ತೆ ಕರೆದಾಗ ಬಾಲಕಿ ನಿರಾಕರಿಸಿದಾಗ ವಿಡಿಯೋವನ್ನು ಅಪ್ರಾಪ್ತ ತಾಯಿಗೆ ಕಳುಹಿಸಿದ್ದ…

Read More

ಬೆಂಗಳೂರು: ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಗುರಿ ಹಾಕಿಕೊಂಡಿದೆ. ಮೊದಲ ಹಂತದಲ್ಲಿ 500 ಶಾಲೆಗಳನ್ನು ಕೆಪಿಎಸ್ ಆಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿದ್ದು, ಡಿಸಿಎಂ ಅಧ್ಯಕ್ಷತೆಯಲ್ಲಿ ಮೇಲುಸ್ತುವಾರಿ ಸಮಿತಿ ರಚಿಸಲಾಗಿದೆ. ಎನ್‌ಜಿಒ ಸಹಯೋಗ ಹಾಗೂ ಖಾಸಗಿ ಸಂಸ್ಥೆಗಳ ಸಿಎಸ್‌ಆರ್ ಅನುದಾನದಲ್ಲಿ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಸಮಿತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕಂದಾಯ ಸೇರಿ 18 ಮಂದಿ ಸಮಿತಿ ಸದಸ್ಯರಾಗಿದ್ದಾರೆ. ಜತೆಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷರಾಗಿದ್ದು, 8 ವಿವಿಧ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಕಾರ್ಯಕಾರಿ ಸಮಿತಿ ರಚಿಸಲಾಗಿದೆ. ಸಮಿತಿ ಕಾರ್ಯವೇನು? ಮೊದಲು ಶಾಲೆಗಳನ್ನು ಗುರುತಿಸಿ ನಂತರ ನವೀಕರಣದಲ್ಲಿ ತೊಡಗಬೇಕು. ನೂತನ ಕೊಠಡಿಗಳ ನಿರ್ಮಾಣ, ದುರಸ್ತಿ, ಪ್ರಯೋಗಾಲಯ, ಶೌಚಾಲಯ, ಕಾಂಪೌಂಡ್ ನಿರ್ಮಾಣ ಸೇರಿ ಮೊದಲಾದವಕ್ಕೆ ಆದ್ಯತೆ ನೀಡುವುದು.ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ, ಎನ್‌ಎಸ್‌ ಕ್ಯೂಎಫ್‌ ಲ್ಯಾಬ್‌, ಟಿಂಕರಿಂಗ್‌ ಲ್ಯಾಬ್, ಐಸಿಟಿ ಲ್ಯಾಬ್‌, ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಕಲಿಕಾ ಕೇಂದ್ರಗಳ ಸ್ಥಾಪನೆ.…

Read More

ವಾರಾಣಸಿ: ಅಯೋಧ್ಯೆಯ ಬಾಬ್ರಿ ಮಸೀದಿ ಸ್ಥಳದಲ್ಲಿ ನಿರ್ಮಾಣಗೊಂಡ ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ, ಕಾಶಿಯ ಪ್ರಸಿದ್ಧ ವಿಶ್ವನಾಥ ಮಂದಿರಕ್ಕೆ ಹೊಂದಿಕೊಂಡಂತೆ ಇರುವ ಜ್ಞಾನವಾಪಿ ಮಸೀದಿಯನ್ನು ದೇಗುಲದ ಮೇಲೆ ನಿರ್ಮಿಸಲಾಗಿತ್ತು ಎಂದು ಈ ಕುರಿತು ಸಮೀಕ್ಷೆ ನಡೆಸಿದ್ದ ಪುರಾತತ್ವ ಇಲಾಖೆ ಹೇಳಿದೆ. ಮಸೀದಿ ಕುರಿತು ನಡೆಸಿದ್ದ ಸಮೀಕ್ಷೆ ವರದಿಯನ್ನು ಇಲಾಖೆ ಇತ್ತೀಚೆಗೆ ಕೋರ್ಟ್‌ಗೆ ಸಲ್ಲಿಸಿತ್ತು. ಕೋರ್ಟ್ ಈ ವರದಿಯನ್ನು ಹಿಂದೂ ಮತ್ತು ಮುಸ್ಲಿಂ ಅರ್ಜಿದಾರರಿಗೆ ಗುರುವಾರ ಹಸ್ತಾಂತರ ಮಾಡಿದೆ. ಅದರಲ್ಲಿ ದೇಗುಲ ಒಡೆದು ಮಸೀದಿ ನಿರ್ಮಿಸಲಾಗಿದೆ ಎಂಬ ಅಂಶಗಳಿವೆ ಎಂದು ಹಿಂದೂ ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್ ಮಾಹಿತಿ ನೀಡಿದ್ದಾರೆ. ವರದಿಯಲ್ಲಿ ಏನಿದೆ? 17ನೇ ಶತಮಾನದಲ್ಲಿ ಔರಂಗಾಜೇಬ್ ಕಾಲದಲ್ಲಿ ದೇಗುಲವನ್ನು ಧ್ವಂಸಗೊಳಿಸಿ ಮಸೀದಿ ನಿರ್ಮಿಸಲಾಗಿದೆ. ಮಸೀದಿಯ ಪಶ್ಚಿಮ ಭಾಗದ ಗೋಡೆ ದೇಗುಲಕ್ಕೆ ಸೇರಿದ್ದು. ಹಾಲಿ ಇರುವ ಮಸೀದಿ ಸಮುಚ್ಚಯದ ಕೆಳಗೆ ಬೃಹತ್ ಹಿಂದೂ ಮಂದಿರದ ಕುರುಹುಗಳು ಸಿಕ್ಕಿವೆ.ಹಳೆಯ ಕಟ್ಟಡದ ಮೇಲೆ ಈಗಿನ ಕಟ್ಟಡವನ್ನು ನಿರ್ಮಿಸಲಾಗಿದೆ. ಹಳೆಯ ಕಟ್ಟಡದ ಕಂಬಗಳನ್ನೇ ಬಳಸಿಕೊಳ್ಳಲಾಗಿದೆ. ಕೆಲವೊಂದು…

Read More