Author: kannadanewsnow05

ಧಾರವಾಡ : ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದ ಹೋರಾಟಗಾರರು, ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುವ ಹೊತ್ತಲ್ಲೇ, ಸುವರ್ಣಸೌಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದೀಗ ಈ ಒಂದು ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಹೌದು ಬೆಳಗಾವಿ ಸುವರ್ಣಸೌಧದ ಎದುರು ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರಿಂದ ಲಾಠಿ ಜಾರ್ಚ್ ವಿಚಾರಕ್ಕೆ ಸಂಬಂಧ ಧಾರವಾಡ ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ವಕೀಲರ ಪರಿಷತ್ ಸೇರಿ ನಾಲ್ವರು ಧಾರವಾಡ ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಸರ್ಕಾರ, ಗೃಹ ಇಲಾಖೆ, ಪೊಲೀಸ್ ಇಲಾಖೆಗೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್ ಜಾರಿಯಾಗಿದೆ ಎಂದು ತಿಳಿದುಬಂದಿದೆ. ಅರ್ಜಿ ಕುರಿತಂತೆ ಧಾರವಾಡದಲ್ಲಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಲಾಠಿ ಚಾರ್ಜ್ ಬಳಿಕ ಎಫ್‌ಐಆರ್ ಆಗಿದೆ. 12 ಜನರ ಮೇಲೆ…

Read More

ಚಾಮರಾಜನಗರ : ರಾಜ್ಯದಲ್ಲಿ ಕಳೆದ ಹಲವು ತಿಂಗಳಗಳ ಹಿಂದೆ ‘ಹುಲಿ ಉಗುರು’ ಭಾರಿ ಸದ್ದು ಮಾಡಿತ್ತು. ಇದೀಗ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ‌ಹನೂರು ಮುಖ್ಯರಸ್ತೆಯಲ್ಲಿನ ಲೊಕ್ಕನಹಳ್ಳಿ ಬಳಿ ನಾಲ್ಕು ಹುಲಿ ಉಗುರುಗಳನ್ನು ಬೈಕಿನಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಹರವೆ ಗ್ರಾಮದ ನವೀನ್ ಕುಮಾರ್ ಬಿನ್ ಮಂಜು, (24), ಹೆಚ್.ಡಿ ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮದ ಕುಮಾರನಾಯಕ ಬಿನ್ ಚೆಲುವನಾಯಕ, (32) ಎಂದು ತಿಳಿದುಬಂದಿದೆ. ಕೊಳ್ಳೇಗಾಲ-ಹನೂರು ಮುಖ್ಯ ರಸ್ತೆಯಿಂದ ಲೊಕ್ಕನಹಳ್ಳಿ ಕಡೆಗೆ ಹೋಗುವ ರಸ್ತೆಯ ಜಂಕ್ಷನ್ ಬಳಿ ಹುಲಿಯ 04 ಉಗುರುಗಳನ್ನು ಬೈಕಿನಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ, ಅರಣ್ಯ ಸಂಚಾರ ದಳದ ಪೊಲೀಸರು ದಾಳಿ ಮಾಡಿದ್ದಾರೆ.ಕೂಡಲೆ ಹುಲಿ ಉಗುರನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿ ವನ್ಯಜೀವಿ ಸಂರಕ್ಷಾಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ

Read More

ಬೆಂಗಳೂರು : ರೈಲ್ವೆ ಇಲಾಖೆಯಲ್ಲಿ ಟಿಸಿ ಕೆಲಸ ಕೊಡಿಸುವುದಾಗಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಕಲಬುರಗಿ ವಿದ್ಯಾನಗರದ ಲಕ್ಷ್ಮಿಕಾಂತ ಹೊಸಮನಿ (41), ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಕುಲಪ್ಪಸಿಂಗೆ, ಉತ್ತರಹಳ್ಳಿಯ ಮುರಳಿ ಎಂದು ತಿಳಿದುಬಂದಿದೆ.ವಂಚನೆಗೊಳಗಾದ ಆಲಮೇಲದ ಹುಸೇನಪ್ಪ ಮಾಡ್ಯಾಳ ಸಿಸಿಬಿ ಠಾಣೆಗೆ ದೂರು ನೀಡಿದ್ದ ಎಂದು ಹೇಳಲಾಗುತ್ತಿದೆ. ಡಿಸೆಂಬರ್ 9 ರಂದು ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಉಳಿದ ಐವರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಸಿಬಿ ಇನ್ಸ್ಪೆಕ್ಟರ್ ದೇವೇಂದ್ರಪ್ಪ ನೇತೃತ್ವದ ತಂಡ ತನಿಖೆ ನಡೆಸಿ ತಾಂತ್ರಿಕ ಮಾಹಿತಿ ಆಧರಿಸಿ ಮೌರ್ಯ ಹೋಟೆಲ್ ಜಂಕ್ಷನ್ ಮತ್ತು ಹೊಸಕೆರೆಹಳ್ಳಿ ಬಸ್ ನಿಲ್ದಾಣದ ಸಮೀಪ ಆರೋಪಿಗಳನ್ನು ಬಂಧಿಸಿದೆ.

Read More

ಗದಗ : ದುಷ್ಕರ್ಮಿಗಳು ಮನೆಗೆ ನುಗ್ಗಿ, ರೊಟ್ಟಿ ಮಾಡುವ ಕಟ್ಟಿಗೆ ಕ್ವಾಮಣಿಗೆಯಿಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನವನಗರದಲ್ಲಿ ನಡೆದಿದೆ. ಇನ್ನು ಕೊಲೆಯಾದ ಮುಖ್ಯ ಶಿಕ್ಷಕಿಯನ್ನು ಅನ್ನಪೂರ್ಣ ರಾಠೋಡ್ (55) ಎಂದು ತಿಳಿದುಬಂದಿದೆ.ಇವರು ಗಜೇಂದ್ರಗಡ ತಾಲೂಕಿನ ರೋಣದ ಬಿಇಒ ಕಚೇರಿಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೌದು ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಮಾಧ್ಯಮಿಕ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದ ಅನ್ನಪೂರ್ಣ ರಾಠೋಡ್ ಗ್ರಾಮದಲ್ಲಿ ಎಸ್‌ಡಿಎಮ್ ಸಿ ಸಮಿತಿ ಕೆಲವರ ಜೊತೆಗೆ ಭಿನ್ನಾಭಿಪ್ರಾಯದ ಕಾರಣದಿಂದಾಗಿ ರೋಣ ಬಿಇಒ ಕಚೇರಿಗೆ ವರ್ಗಾವಣೆ ಮಾಡಿಸಿಕೊಂಡಿದ್ದರು ಎಂದು ಕುಟಂಬಸ್ಥರು ಆರೋಪಿಸಿದ್ದಾರೆ. ಕೊಲೆಗೆ ಇದು ಕೂಡ ಕಾರಣ ಎಂದು ಅವರು ಹೇಳಿದ್ದಾರೆ. ಮನೆಯಲ್ಲಿದ್ದ ಮುಖ್ಯ ಶಿಕ್ಷಕಿಯ ತಲೆಗೆ ದುಷ್ಕರ್ಮಿಗಳು ರೊಟ್ಟಿ ಮಾಡುವ ಕಟ್ಟಿಗೆಯ ಕ್ವಾಮಣಗಿಯಿಂದ ಹೊಡೆದು ಭೀಕರ ಕೊಲೆ ಮಾಡಲಾಗಿದ್ದು, ಇದನ್ನು ಕಂಡ ಗಜೇಂದ್ರಗಡ ನಿವಾಸಿಗಳು ಆತಂಕಗೊಂಡಿದ್ದಾರೆ. ಇನ್ನೂ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು,…

Read More

ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ಬೈದು ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಹೈಕೋರ್ಟ್ ನಲ್ಲಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಒಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ಜಿ ಉಮಾ ಅವರು, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಸಿಟಿ ರವಿ ಬಿಡುಗಡೆಗೆ ಆದೇಶ ಹೊರಡಿಸಿದರು. ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರ ಪರವಾಗಿ ಸಂದೇಶ ಚೌಟ ಅವರು ವಾದ ಮಂಡಿಸಿದರು.ಅರೆಸ್ಟ್ ಅನ್ನೇ ನಾವು ಪ್ರಶ್ನಿಸಿದ್ದೇವೆ. ಬಂಧನವೇ ಕಾನೂನು ಬಾಹಿರವಾದರೆ ತಕ್ಷಣ ಬಿಡುಗಡೆ ಮಾಡಬೇಕು. ಸೆಕ್ಷನ್ 75 ಮತ್ತು 79 ರ ಅಡಿ ಕೇಸ್ ದಾಖಲಾಗಿದೆ. ಆರೋಪಿ ಹಾಗೂ ದೂದಾರ ಇಬ್ಬರು ಶಾಸಕರು ಎಂದು ಸಂದೇಶ್ ಚೌಟ ವಾದಿಸಿದರು. ವಾದ ಅಂತ್ಯವಾದ ಬಳಿಕ ಹೈ ಕೋರ್ಟ್ ನ ನ್ಯಾಯಮೂರ್ತಿ ಎಂ. ಜೆ ಉಮಾ ಅವರು ಆದೇಶವನ್ನು ಪ್ರಕಟಿಸುವ ವೇಳೆ, ಆರೋಪಿ ದೂರುದಾರ ಇಬ್ಬರು…

Read More

ಬೆಂಗಳೂರು : ಬೆಳಗಾವಿಯ ಸುವರ್ಣಸೌಧದಲ್ಲಿ MLC ಸಿ.ಟಿ ರವಿ ಅವರ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಗಾವಿಯ JMFC ಕೋರ್ಟ್ ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಡ್ಜ್ ಸಂತೋಷ್ ಗಜಾನನ್ ಭಟ್ ಅವರು ವಿಚಾರಣೆ ನಡೆಸಿ ಬಳಿಕ ಜಾಮೀನು ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿ ಆದೇಶ ಹೊರಡಿಸಿದರು. ವಿಚಾರಣೆಯ ಆರಂಭದಲ್ಲಿ, ಪೊಲೀಸ್ ಕಸ್ಟಡಿಗೆ ನೀಡಿದ್ದಾರಾ ಇಲ್ಲವಾ ಎನ್ನುವುದು ಸ್ಪಷ್ಟವಾಗಿಲ್ಲ. ಕೋರ್ಟ್ ಆದೇಶದ ಪ್ರತಿ ಇನ್ನೂ ಲಭ್ಯವಾಗಿಲ್ಲ ಎಂದು ವಾದ ಮಂಡಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪರ ಹಿರಿಯ ವಕೀಲರವರು ವಾದ ಮಂಡಿಸಿದರು. ದಸ್ತಗಿರಿ ಮಾಡದೆ ಇದ್ದರೆ ಫಿರ್ಯಾದಿ ಬೆಂಬಲಿಗರು ಕಾನೂನು ಸುವ್ಯವಸ್ಥೆಗೆ ಸಮಸ್ಯೆ ಮಾಡಬಹುದು ಹೀಗೆ ಎಂದು ಪೊಲೀಸರು ರಿಮಾಂಡ್ ಅರ್ಜಿಯಲ್ಲಿ ತಿಳಿಸಿದ್ದಾರೆ ರಿಮಾಂಡ್ ಅರ್ಜಿಯನ್ನು ವಕೀಲರು ಓದುತ್ತಿದ್ದಾರೆ. ಇನ್ನು ಸಿಟಿ ರವಿ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದು, ಇದು ಕೋರ್ಟ್ ಆದೇಶದ ಯಥಾವತ್…

Read More

ನವದೆಹಲಿ : ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಯಲ್ಲಿ ಮುಂದಿನ ಏಳು ದಿನದ ಒಳಗಾಗಿ ಕಬ್ಬು ಅರೆಯುವ ಪ್ರಕ್ರಿಯೆಯನ್ನು ಆರಂಭಿಸಲು ಸೂಕ್ತ ಆದೇಶ ನೀಡುವಂತೆ ರಾಜ್ಯಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿರುವುದಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಎಥೆನಾಲ್ ಉತ್ಪಾದನೆ ವಿಚಾರದಲ್ಲಿ ‌ನಿಯಮ ಉಲ್ಲಂಘನೆ ಆರೋಪದಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು. ನೋಟಿಸ್ ಪ್ರಶ್ನಿಸಿ ಯತ್ನಾಳ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯವು ಕಾರ್ಖಾನೆ ತೆರೆಯಲು ಅನುಮತಿ ನೀಡಿತ್ತು. ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್‌ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮೇಲ್ಮನವಿ ಸಲ್ಲಿಸಿರುವ ಸಂಬಂಧ ಪ್ರಮಾಣಪತ್ರ ಸಲ್ಲಿಸುವಂತೆ ಕಾರ್ಖಾನೆ ಮಾಲೀಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸುಪ್ರೀಂ ಕೋರ್ಟ್‌ ಈ ಹಿಂದೆ ಸೂಚಿಸಿತ್ತು. ಈ ಕುರಿತಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡು,…

Read More

ಮಂಗಳೂರು : ಬಿಜೆಪಿಯ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎನ್ಐಎ ಅಧಿಕಾರಿಗಳು ಪ್ರಕರಣದ ಆರನೇ ಆರೋಪಿಯನ್ನು ದೆಹಲಿಯ ಏರ್ಪೋರ್ಟ್ ನಲ್ಲಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಎಂದು ತಿಳಿದುಬಂದಿದೆ. ಬಂಧಿತ ಮಹಮ್ಮದ್ ಶರೀಫ್ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಜೊತೆಗೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್​ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು.ಅಲ್ಲದೇ ಈತನ ಪತ್ತೆಗಾಗಿ ಎನ್​ಐಎ‌ ಅಧಿಕಾರಿಗಳು 5 ಲಕ್ಷ ರೂ. ರಿವಾರ್ಡ್ ಕೂಡ ಘೋಷಿಸಿದ್ದರು. ಈ ವರೆಗೆ 20 ಜನ ಅರೆಸ್ಟ್! ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದ ಒಂದು ಕೊಲೆ ರಾಜ್ಯದಲ್ಲಿ ಬೆಚ್ಚಿ ಬೀಳಿಸಿತ್ತು. ಹಿಂದು ಪರ ಹೋರಾಟಗಾಗರು ಸ್ವತಃ ಬಿಜೆಪಿ ವಿರುದ್ದ ರೊಚ್ಚಿಗೇಳುವಂತೆ ಆಗಿತ್ತು ಅವತ್ತಿನ ಸ್ಥಿತಿ. ಎನ್​ಐಎ ಪ್ರವೀಣ್ ನೆಟ್ಟಾರು…

Read More

ಬಾಗಲಕೋಟೆ :  ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲವಾಗಿ ನಿಂದಿಸಿರುವ ಕುರಿತಂತೆ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಬಿಜೆಪಿಯವರ ಸಂಸ್ಕೃತಿಯೇ ಅದು. ಬಿಜೆಪಿಯ ನಾಯಕರು ಕೀಳುಮಟ್ಟದ ಭಾಷೆಯನ್ನು ಬಳಸುತ್ತಾರೆ. ವಿಜಯಪುರದ ಒಂದು ಕೋಣ ಅಲ್ಲ ಗೊಡ್ಡೆಮ್ಮೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು. ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸ್ಕೃತಿಗೆ ಅದು. ಅವರಿಗೆ ಸಂಸ್ಕಾರ ಸಂಸ್ಕೃತಿಯೇ ಇಲ್ಲ. ಬಿಜೆಪಿ ನಾಯಕರು ಕೀಳು ಮಟ್ಟದ ಶಬ್ದವನ್ನು ಬಳಸಿದ್ದಾರೆ. ಬಿಜೆಪಿ ಶಾಸಕ ಯತ್ನಾಳ ಹೆಸರು ಹೇಳದೆ ವಿಜಯಾನಂದ ಕಾಶಪ್ಪನವರ್ ವಾಗ್ದಾಳಿ ನಡೆಸಿದ್ದು, ವಿಜಯಪುರದ ಕೋಣ ಅಲ್ಲಲ್ಲ ಗೊಡ್ಡೆಮ್ಮೆ ಎಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಬಿಜೆಪಿ ನಿಂದಿಸಿದ್ದಾರೆ. ಸಿಟಿ ರವಿ ಒಬ್ಬ ಬಚ್ಚಾ. ಸದನದಲ್ಲಿ ಯಾವ ಶಬ್ದ ಬಳಕೆ ಮಾಡಬೇಕೆಂಬ ಬಗ್ಗೆ ನಿಯಮವಿದೆ. ಆದರೆ ಸಿಟಿ ರವಿ ಮಂತ್ರಿಯಾಗಿದ್ದರೂ ಸಂಸದೀಯ ಪದ ಬಳಸಿದ್ದಾರೆ. ಒಬ್ಬ ಹೆಣ್ಣು ಮಗಳ ಬಗ್ಗೆ ಅಶ್ಲೀಲವಾಗಿ…

Read More

ರಾಯಚೂರು : ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದ್ದು, ಅತಿಯೇ ತನ್ನ ಪತ್ನಿಯ ಕೊಲೆ ಮಾಡಿರುವ ಸಂಖ್ಯೆ ವ್ಯಕ್ತವಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಎಂಬಲ್ಲಿ ನಡೆದಿದೆ. ಇನ್ನು ಮೃತ ಗೃಹಿಣಿಯನ್ನು ಲಿಪಿ ಸರ್ಕಾರ್ (23) ಎಂದು ತಿಳಿದುಬಂದಿದೆ. ಈಕೆ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಕಳೆದ ಕೆಲವು ವರ್ಷಗಳ ಹಿಂದೆ ಲಿಪಿ ಸರ್ಕಾರ ಮಂಜುನಾಥ್ ಎನ್ನುವ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಮಂಜುನಾಥ್ ಯಾವುದೇ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದ. ಈ ಹಿನ್ನೆಲೆಯಲ್ಲಿ ಮದುವೆಯಾದ ಬಳಿಕ ದಿನವೂ ಕುಡಿದು ಬಂದು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಸದ್ಯ ರಿಮ್ಸ್ ಆಸ್ಪತ್ರೆಗೆ ಮೃತ ಲಿಪಿ ಸರ್ಕಾರ್ ಮೃತದೇಹವನ್ನು ರವನಿಸಲಾಗಿದೆ. ಘಟನೆ ಹಿನ್ನೆಲೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಪತಿ ಮಂಜುನಾಥ ವಿರುದ್ಧ ಕೇಸ್ ದಾಖಲಾಗಿದೆ.

Read More