Author: kannadanewsnow05

ಬೆಂಗಳೂರು : ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ನಾಳೆ ಕನ್ನಡ ಪರ ಸಂಘಟನೆಗಳಿಂದ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಸಾರಿಗೆ ಸಂಘಟನೆಗಳು ಕೂಡ ಬಂದ್ ಗೆ ಬೆಂಬಲ ನೀಡಿದ್ದು ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು ಎಂದು ಸಾರಿಗೆ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹೌದು ಸಾರಿಗೆ ಸಂಘಟನೆಗಳಿಗೆ ಬೆಂಗಳೂರು ಕಮಿಷನರ್ ಬಿ ದಯಾನಂದ್ ನೋಟಿಸ್ ನೀಡಿದ್ದು, ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಬಹುದು. ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಕಡೆ ಪ್ರತಿಭಟನೆ ಮಾಡಂಗಿಲ್ಲ. ಬೇರೆ ಕಡೆ ಪ್ರತಿಭಟನೆ ಮೆರವಣಿಗೆಗಳನ್ನು ಮಾಡುವಂತಿಲ್ಲ.ಅಕಸ್ಮಾತ್ ಮಾಡಿದ್ರೆ ಕ್ರಮ ಕೈಗೊಳ್ಳಲಾಗುತ್ತೆ. ಹೈ ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ನೋಟಿಸ್ ನೀಡಲಾಗಿದೆ. ಸಾರಿಗೆ ಸಂಘಟನೆಗಳಿಗೆ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೂಚನೆ ನೀಡಿದ್ದಾರೆ.

Read More

ಕೊಪ್ಪಳ : ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಅಷ್ಟೇ ಉತ್ಸಾಹದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದಾರೆ. ಆದರೆ ಕೊಪ್ಪಳದಲ್ಲೊಂದು ಹೃದಯವಿದ್ರ ಘಟನೆ ನಡೆದಿದ್ದು, ತಾಯಿಯ ನಿಧನದ ನೋವಿನಲ್ಲಿ ಕೂಡ ವಿದ್ಯಾರ್ಥಿ ಒಬ್ಬ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದಾನೆ. ಹೌದು ತಾಯಿಯ ಅಗಲಿಕೆಯ ನೋವಿನ ಮಧ್ಯೆಯೂ ವಿದ್ಯಾರ್ಥಿಯೊಬ್ಬ ಪರೀಕ್ಷೆ ಬರೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೇಸರಹಟ್ಟಿಯಲ್ಲಿ ನಡೆದಿದೆ.ನೋವಿನಲ್ಲಿದ್ದ ವಿದ್ಯಾರ್ಥಿ ಅಡಿವೆಯ್ಯ ಸ್ವಾಮಿ ಮನೆಗೆ ಬಂದ ಶಿಕ್ಷಕರು ಸಾಂತ್ವಾನ ಹೇಳಿದರು. ಬಳಿಕ ಪರೀಕ್ಷಾ ಕೇಂದ್ರದವರೆಗೆ ಕರೆದೊಯ್ಯಲು ನೆರವಾದರು. ಪರೀಕ್ಷೆಯ ಬಳಿಕ ವಿದ್ಯಾರ್ಥಿ ತನ್ನ ತಾಯಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ. ಗ್ರಾಮದ ಸ್ವಾಮಿ ವಿವೇಕಾನಂದ ಇಂಗ್ಲಿಷ್​ ಮೀಡಿಯಂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಡಿವೆಯ್ಯ ಸ್ವಾಮಿ ಎಂಬ ಹತ್ತನೇ ತರಗತಿಯ ವಿದ್ಯಾರ್ಥಿಯ ತಾಯಿ ವಿಜಯಲಕ್ಷ್ಮಿ ಸಿದ್ದಯ್ಯಸ್ವಾಮಿ (38) ಶುಕ್ರವಾರ ಬೆಳಗಿನ ಸಮಯದಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿದ್ಯಾರ್ಥಿ ತಾಯಿ ವಿಜಯಲಕ್ಷ್ಮಿ ಕಳೆದ ಕೆಲ ದಿನಗಳ…

Read More

ಬೆಂಗಳೂರು : ಬೆಂಗಳೂರಿನಲ್ಲಿ ವ್ಯಕ್ತಿಯ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಕೂಡಲೇ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ FIR ದಾಖಲಾಗಿದೆ. ಹೌದು ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಕೂಡಲೇ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಸದ್ಯಆರೋಪಿ ಅಬ್ದುಲ್ ರೆಹಮಾನ್ ವಿರುದ್ಧ FIR ದಾಖಲಾಗಿದೆ.

Read More

ಚಿಕ್ಕಮಗಳೂರು : ಎಲ್ಲದಕ್ಕೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ. ಆದರೆ ಇಂದಿನ ಯುವಜನತೆ ಸಣ್ಣ ಪುಟ್ಟ ವಿಷಯಕ್ಕೂ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದೀಗ ಚಿಕ್ಕಮಗಳೂರಲ್ಲಿ ಘೋರ ಘಟನೆ ನಡೆದಿದ್ದು, 9ನೇ ತರಗತಿಯಲ್ಲಿ ಫೇಲ್ ಆಗುತ್ತೇನೆ ಎಂದು ಆತಂಕಗೊಂಡ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ವರ್ಷಿಣಿ (15) ಎಂದು ತಿಳಿದುಬಂದಿದೆ. ವರ್ಷಿಣಿ ಈ ವರ್ಷ 9ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಡಿ.ಕಾರೇಹಳ್ಳಿಯ ಬೋವಿ ಕಾಲನಿ ಗ್ರಾಮದಲ್ಲಿ ನಡೆದಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಆತಂಕದಿಂದ ಮನನೊಂದು ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಇಬ್ಬರು ಬಾಲಕಿಯರು ಓರ್ವ ಮಹಿಳೆಗೆ ಕಚ್ಚಿದ ಹುಚ್ಚು ನಾಯಿ ಕಚ್ಚಿ ಗಾಯಗೊಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. 4 ವರ್ಷದ ಆರಾಧ್ಯ ರಮೇಶ್ ಕಿವಿಯನ್ನು ಹುಚ್ಚು ನಾಯಿ ತುಂಡರಿಸಿದೆ. ಅಲ್ಲದೆ 10 ವರ್ಷದ ನಿದಾ ಆಶಿಫ್ ಸಂಶೇದ್ ಮುಖಕ್ಕೆ ನಾಯಿ ಕಚ್ಚಿದೆ. 35 ವರ್ಷದ ಲಕ್ಷ್ಮಿ ಎನ್ನುವ ಮಹಿಳೆಗೆ ಕೈ, ಮತ್ತು ಕಾಲಿಗೆ ಕಚ್ಚಿ ಹುಚ್ಚುನಾಯಿ ಎಳೆದಾಡಿದೆ. ಮೂವರು ಗಾಯಾಳುಗಳನ್ನು ತಕ್ಷಣ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಚ್ಚುನಾಯಿಯನು ಸೆರೆಹಿಡಿವಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಿ ಜನರು ಮನವಿ ಮಾಡಿದ್ದಾರೆ. ಆದರೆ ಎಷ್ಟು ಬಾರಿ ಜನರ ಮನವಿ ಮಾಡಿದರು ಕೂಡ ಗ್ರಾಮ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ ವಹಿಸಿದ್ದಾರೆ. ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಸಚಿವರ ವಿರುದ್ಧ ಹನಿಟ್ರ್ಯಾಪ್ ವಿಷಯ ಗಂಭೀರವಾಗಿ ಚರ್ಚೆಯಾಯಿತು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದು ನೇರವಾಗಿ ಹೇಳಿಕೆ ನೀಡಿದರು. ಬಳಿಕ ಕೆ.ಎನ್ ರಾಜಣ್ಣ ಇದಕ್ಕೆ ಪ್ರತಿಕ್ರಿಯೆ ನೀಡಿದರು. ಅಲ್ಲದೆ ಆರ್ ಆರ್ ಕ್ಷೇತ್ರದ ಶಾಸಕ ಮುನಿರತ್ನ ಅವರು ಕೂಡ ಆಕ್ರೋಶ ಹೊರಹಾಕಿದರು. ಇದೀಗ ಸಚಿವ ಸತೀಶ್ ಜಾರಕಿಹೊಳಿ ಮತ್ತೊಂದು ಹೇಳಿಕೆ ನೀಡಿದ್ದು, ಬಿಜೆಪಿಯಲ್ಲಿ ಪ್ರಭಾವಿ ಸಚಿವರನ್ನು ಸಿಡಿ ಮೂಲಕ ಬೆದರಿಕೆ ಹಾಕಿದ್ದರು ಎಂದಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರವನ್ನು ವರಿಷ್ಠರಿಗೆ ತಲುಪಿಸುವ ಪ್ರಯತ್ನ ಮಾಡಬೇಕು. ಕಾಂಗ್ರೆಸ್ ಹೈಕಮಾಂಡ್ ಗಮನಸೆಳೆಯುವ ಪ್ರಯತ್ನ ಮಾಡುತ್ತೇವೆ. ರಮೇಶ್ ಜಾರಕಿಹೊಳಿ, ಕೆ.ಎನ್ ರಾಜಣ್ಣ ಮೂಲಕ ಪ್ರಕರಣ ಹೊರ ಬಂದಿದೆ. ಈ ಎಪಿಸೋಡ್ ಇಲ್ಲಿಗೆ ಕೊನೆಯಾಗಬೇಕು. ಬಿಜೆಪಿಯಲ್ಲಿ ಪ್ರಭಾವಿ ಸಚಿವರನ್ನು ಸಿಡಿ ಮೂಲಕ ಬೆದರಿಕೆ ಹಾಕಿದ್ದರು. ಸಿಡಿ ಮೂಲಕ ಸರ್ಕಾರದಲ್ಲಿ ಲಾಭ ಪಡೆಯುವ ಪ್ರಯತ್ನ ಆಗಿದೆ. ತನಿಖೆ…

Read More

ಮೈಸೂರು : ಸರ್ಕಾರಿ ಆಂಬುಲೆನ್ಸ್ ಸೇವೆಗಳ ಕುರಿತು ಆಗಾಗ ಕಂಪ್ಲೇಂಟ್ ಗಳು ಬರುತ್ತಲೇ ಇರುತ್ತೆ ಇದೀಗ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಸರ್ಕಾರಿ ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ 3 ದಿನದ ಹಸುಗೂಸು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ನಡೆದಿದೆ. ಹೌದು ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಶ್ರೀರಾಂಪುರ ಬಡಾವಣೆಯ ರತ್ನಮ್ಮ ಎನ್ನುವರ ಮಾರ್ಚ್​ 17ರಂದು ಹೆರಿಗೆಗಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದು, ಹೆರಿಯಾದ ಬಳಿಕ ಮಗು ನೀಲಿ ಬಣ್ಣಕ್ಕೆ ತಿರುಗಿದೆ. ಇದರಿಂದ ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಮಕ್ಕಳ ಆಸ್ಪತ್ರೆಗೆ ತೆರಳುತ್ತಿದ್ದರು. ಆದ್ರೆ, ದುರದೃಷ್ಟವಶಾತ್​ ಮೈಸೂರು ತಲುಪುವ ಮುನ್ನವೇ ಮಗು ಮಾರ್ಗ ಮಧ್ಯೆ ಕೊನೆಯುಸಿರೆಳೆದಿದೆ. ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆ ಇದೆ ಎಂದು ಸಿಬ್ಬಂದಿಗಳಿಗೆ ತಿಳಿದಿದ್ದರು ಕೂಡ ಮಗುವನ್ನು ಹಾಗೆ ಶಿಫ್ಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮಗು ಸಾವನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ.ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿ ಮತ್ತು ಅಧಿಕಾರಿಗಳ…

Read More

ದಾವಣಗೆರೆ : ದಾವಣಗೆರೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ತ್ರಿಚಕ್ರ ಬೈಕ್ ಹಾಗೂ ಕಾರಿನ ನಡುವೆ ಬೀಖರವಾದ ಅಪಘಾತ ಸಂಭವಿಸಿದ್ದು ತ್ರಿಚಕ್ರ ವಾಹನದಲ್ಲಿದ್ದ 3 ವರ್ಷದ ಮಗು, ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದು, ದಂಪತಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಾವಣಗೆರೆ ತಾಲೂಕಿನಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಗಾಂಧಿನಗರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ತ್ರಿಚಕ್ರ ಬೈಕ್ ನಲ್ಲಿ ಪತ್ನಿ, ತಂದೆ ಹಾಗು ಪುತ್ರನ ಜೊತೆಗೆ ವಿಕಲಚೇತನ ಬರುತ್ತಿದ್ದ. ಈ ವೇಳೆ ಜಗಳೂರು ಕಡೆಯಿಂದ ಬರುತ್ತಿದ್ದ ತ್ರಿಚಕ್ರ ಬೈಕಿಗೆ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ದಾವಣಗೆರೆ ತಾಲೂಕಿನ ತೋಳಹುಣಸೆ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಸಚಿವರ ಹನಿಟ್ರ್ಯಾಪ್ ಭಾರಿ ಸದ್ದು ಮಾಡಿದ್ದು, ಆಡಳಿತ ಮತ್ತು ವಿಪಕ್ಷಗಳು ಇದರ ವಿರುದ್ಧ ಧ್ವನಿ ಎತ್ತಿದವು. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಚಿವ ಕೆ.ಎನ್ ರಾಜಣ್ಣ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಹೇಳಿಕೆ ನೀಡಿದರು. ಇದಕ್ಕೆ ಸ್ಪಷ್ಟನೆ ನೀಡಿದ ರಾಜಣ್ಣ ನನ್ನ ಮೇಲೂ ಹನಿಟ್ರ್ಯಾಪ್ ಗೆ ಪ್ರಯತ್ನ ನಡೆದಿದೆ.48ಕ್ಕೂ ಹೆಚ್ಚು ರಾಜ್ಯ & ಕೇಂದ್ರ ರಾಜಕಾರಣಿಗಳ ‘ಅಶ್ಲೀಲ ಪೆನ್ ಡ್ರೈವ್’ ಗಳಿವೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ಹನಿ ಟ್ರಾಪ್ ಬಗ್ಗೆ ಸದನದಲ್ಲಿ ಯತ್ನಾಳ್ ಪ್ರಸ್ತಾಪ ಮಾಡಿದ್ದರು. ಹನಿ ಟ್ರ್ಯಾಪ್ ನಲ್ಲಿ ಎಲ್ಲಾ ಪಕ್ಷದವರು ಸಿಲುಕಿದ್ದಾರೆ. ಈ ರೀತಿ ತೇಜೋವಧೆ ಮಾಡುವುದು ಯಾರಿಗೂ ಶೋಭೆ ತರಲ್ಲ. ಇದು ಅಂತ್ಯವಾಗಲು ಉನ್ನತ ಮಟ್ಟದ ತನಿಖೆ ಆಗಬೇಕು. ನನ್ನ ಮೇಲೂ ಹನಿಟ್ರ್ಯಾಪ್ ಗೆ ಪ್ರಯತ್ನ ನಡೆದಿದೆ. ಆದರೆ ನಾನು ಹನಿಟ್ರ್ಯಾಪ್ ಗೆ ಒಳಗಾಗಿಲ್ಲ ಎಂದು ಅವರು ತಿಳಿಸಿದರು.…

Read More

ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಭಂಧಿಸಿದಂತೆ ಈಗಾಗಲೇ ನಟಿ ರನ್ಯಾ ರಾವ್‌ ಅರೆಸ್ಟ್‌ ಆಗಿದ್ದಾರೆ.ಇದಿಗ ಬೆಂಗಳೂರಲ್ಲಿ ಮತ್ತೋರ್ವ ಮಹಿಳೆ ಆರೆಸ್ಟ್‌ ಆಗಿದ್ದು, ಆದರೆ ಈಕೆ ಚಿನ್ನದ ಕೇಸ್‌ ನಲ್ಲಿ ಆರೆಸ್ಟ್‌ ಆಗದೆ ಕೊಕೆನ್‌ ಸಾಗಾಟ ಮಾಡುತ್ತಿದ್ದಳು ಎಂದು ಈಗ ಡಿಆರ್‌ಐ ಅಧಿಕಾರಿಗಳು ಆರೆಸ್ಟ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ ಮಾರ್ಚ್ 18 ರಂದು ಕತಾರ್‌ ನಿಂದ ಬಂದಿದ್ದ ಮಹಿಳೆ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಮಹಿಳೆ ಮಾದಕ ದ್ರವ್ಯ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿ ಮಹಿಳೆ ಘಾನಾ ದೇಶದ ಪ್ರಜೆಯಾಗಿದ್ದಾಳೆ ಎನ್ನಲಾಗಿದೆ. ಅನುಮಾನಗೊಂಡು ಅದಿಕಾರಿಗಳು ಮಹಿಳೆಯ ಬ್ಯಾಗ್‌ ಅನ್ನು ಪರೀಶೀಲನೆ ಮಡಿದ ವೇಳೆ 38.8 ಕೋಟಿ ಮೌಲ್ಯದ 3 ಕೆಜಿ ಕೋಕೆನ್‌ ಮಾದಕ ದ್ರವ್ಯವನ್ನು ಮರೆಮಾಚಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ.ಬಳಿಕ ಆಕೆಯನ್ನು ಡಿಆರ್‌ಐ ಅಧಿಕಾರಿಗಳು ಅರೆಸ್ಟ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Read More