Subscribe to Updates
Get the latest creative news from FooBar about art, design and business.
Author: kannadanewsnow05
ಮಹಾರಾಷ್ಟ್ರ : ಮಹಾರಾಷ್ಟ್ರದ ಮುಂಬೈನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಆಕಸ್ಮಿಕ ಬೆಂಕಿಯಿಂದ ರೆಸ್ಟೋರೆಂಟ್ ಒಂದು ಹೊತ್ತಿ ಉರಿದಿರುವ ಘಟನೆ ಮುಂಬೈನ ಕಾಮಾಟಿಪುರ ಬಳಿ ಇರುವ ರೆಸ್ಟೋರೆಂಟ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿಕೊಂಡಿರುವ ಘಟನೆ ನಡೆದಿದೆ. ರೆಸ್ಟೋರೆಂಟ್ ಬೆಂಕಿಯಿಂದ ಹೊತ್ತಿ ಉರಿದಿದೆ ಎನ್ನಲಾಗುತ್ತಿದ್ದು, ಅಗ್ನಿ ಅವಘಡದಲ್ಲಿ ಯಾವುದೇ ರೀತಿಯಾದಂತಹ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಅಪಾರ್ಟ್ಮೆಂಟ್ ನಲ್ಲಿ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿವೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ರೆಸ್ಟೋರೆಂಟ್ ಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿರ ಇರಬಹುದು ಎಂದು ಶಂಕಿಸಲಾಗುತ್ತಿದ್ದು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಅಲ್ಲದೆ ಅಗ್ನಿಶಾಮಕ ದಳ ಸಿಬ್ಬಂದಿ ರೆಸ್ಟೋರೆಂಟ್ ಗೆ ಹೊಂದಿಕೊಂಡಿರುವ ಬೆಂಕಿಯನ್ನು ನಂದಿಸಲು ಹರ ಸಾಹಸ ಪಡುತ್ತಿರುವುದು ಕಂಡುಬಂದಿದೆ.
ಬೆಂಗಳೂರು : ಕ್ಯಾಬ್ ಚಾಲಕರಿಗೆ, ಟ್ಯಾಕ್ಸಿ ಚಾಲಕರಿಗೆ ಅನುಕೂಲವಾಗಲೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲಕರು ಸೇರಿ ದಂತೆ ಸಾರ್ವಜನಿಕರಿಗೆ ಕಡಿಮೆ ಬೆಲೆ ಯಲ್ಲಿ ಆಹಾರ ದೊರೆಯಲು ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಜ.31ರಂದು ಉದ್ಘಾಟನೆಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಟ್ಯಾಕ್ಸಿ ಚಾಲಕರು ಸಲ್ಲಿಸಿದ್ದ ಬೇಡಿಕೆಯಂತೆ ಸರ್ಕಾರ ಬಿಬಿಎಂಪಿಗೆ ಎರಡು ಇಂದಿರಾ ಕ್ಯಾಂಟೀನ್ ನಿರ್ಮಿಸುವಂತೆ ಆದೇಶಿಸಿತ್ತು. ಪ್ರಿಕಾಸ್ಟ್ ಮಾದರಿಯಲ್ಲಿ ಸದ್ಯ ಒಂದು ಕ್ಯಾಂಟೀನ್ ಕಟ್ಟಡ ನಿರ್ಮಿಸಲಾಗುತ್ತಿದೆ. 1.30 ಕೋಟಿ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ಜತೆಗೆ ಅಡುಗೆ ಮನೆಯನ್ನೂ ಪ್ರಿಕಾಸ್ಟ್ ಮಾದರಿಯಲ್ಲಿ ನಿರ್ಮಿಸಲಾಗುತ್ತಿದೆ. ಈ ಕ್ಯಾಂಟೀನ್ಗೆ ವ್ಯಕ್ತವಾಗುವ ಸ್ಪಂದನೆ ಆಧರಿಸಿ ಮತ್ತೊಂದು ಕ್ಯಾಂಟೀನ್ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಸದ್ಯ ಕ್ಯಾಂಟೀನ್ ಮತ್ತು ಅಡುಗೆ ಮನೆ ಯನ್ನು ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿನ 7ನೇ ಪ್ಲಾಟ್ಫಾರಂನಲ್ಲಿ ನಿರ್ಮಿಸಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಧಾನಸೌಧ, ಎಂಎಸ್ ಕಟ್ಟಡ ಸೇರಿದಂತೆ ಪ್ರಮುಖ ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣಗಳು, ಹೊಸ ವಾಡ್ ೯ಗಳಲ್ಲಿ…
ಮಡಿಕೇರಿ: 2022-23 ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜನವರಿ, 28 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮಡಿಕೇರಿ ನಗರದ ಶಾಲೆ, ಕಾಲೇಜುಗಳಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಯ ಸಂಬಂಧ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸುವುದು, ಜಿಪ್ ಪಾಕೆಟ್ಗಳು, ದೊಡ್ಡ ಬಟನ್ಗಳು ಇರುವ ಶರ್ಟ್ಗಳನ್ನು ಧರಿಸತಕ್ಕದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ಗಳನ್ನು ಧರಿಸಬಾರದು. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕರಾದ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ.
ಹುಬ್ಬಳ್ಳಿ : ಇಂದು ಬೆಳಿಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಅನಿವಾರ್ಯವಲ್ಲ ಅವರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಎಲ್ಲಿಯೂ ಕೂಡ ಚರ್ಚೆ ನಡೆದಿಲ್ಲ. ಶೆಟ್ಟರ್ ಪಕ್ಷಕ್ಕೆ ಸೇರ್ಪಡೆ ಕುರಿತಂತೆ ಯಾವುದೇ ರೀತಿಯಾಗಿ ಮಾತುಕತೆ ಆಗಿಲ್ಲ ಎಂದು ಹುಬ್ಬಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ತಿಳಿಸಿದ್ದರು. ಆದರೆ ಇದೀಗ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಹೈಕಮಾಂಡ್ ಏನು ತೀರ್ಮಾನ ಮಾಡಿದ್ದಾರೆ ಅದಕ್ಕೆ ಅದನ್ನು ಸ್ವಾಗತ ಮಾಡುತ್ತೇವೆ. ಬಿಜೆಪಿ ಪಕ್ಷಕ್ಕೆ ಅನಿವಾರ್ಯತೆ ಇರುವುದು ಯಾವುದೇ ಇಲ್ಲ. ಯಾರೊಬ್ಬರೂ ಕೂಡ ಅನಿವಾರ್ಯತೆ ಇಲ್ಲ ಅವರಿಗೆ ಅನಿವಾರ್ಯತೆ ಇರುವುದರಿಂದ ಅವರು ಬರುತ್ತಾರೆ. ಹೈಕಮಾಂಡ್ ನಿರ್ಧರಿಸಿದ್ದು ಅದನ್ನು ನಾವು ಸ್ವಾಗತ ಮಾಡುತ್ತೇವೆ ಎಂದರು. ಬೂತ್ ಮಟ್ಟದ ಕಾರ್ಯಕರ್ತರು ಹಿಡಿದುಕೊಂಡು ರಾಜ್ಯ ನಾಯಕರು ಯಾರೇ ಬಂದರು ಪಾರ್ಟಿಯಲ್ಲಿ ಇದ್ದರೂ ಎಲ್ಲರೂ ಕೂಡಿ ಕಾರ್ಯ ನಿರ್ವಹಿಸುತ್ತೇವೆ.ಈಗ ಜಗದೀಶಟ್ಟರು ಬಂದಿರುವುದರಿಂದ ಎಲ್ಲರೂ ಜೊತೆಗೂಡಿ ಕೆಲಸ ಮಾಡುತ್ತೇವೆ. ಜಗದೀಶ್ ಶೆಟ್ಟರ್ ಗೆ ಲೋಕಸಭೆ ಟಿಕೆಟ್ ನೀಡುವುದರ ಕುರಿತಾಗಿ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಶಾಸಕ…
ಕೊಡಗು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿಲ್ಲವೆಂದು ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ದೆಹಲಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಮತ್ತೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ ಈ ವಿಚಾರವಾಗಿ ಕೊಡೋಗಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಅವರಿಗೆ ಯಾವುದೇ ರೀತಿಯಾಗಿ ಅನ್ಯಾಯವಾಗಿಲ್ಲ ಎಂದು ತಿಳಿಸಿದರು. ಈ ವಿಷಯದ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷಕ್ಕೆ ಭಾರತೀಯ ಜನತಾ ಪಕ್ಷದ ಅವಮಾನ ಮಾಡಿದ್ದಾರೆ, ಬಿಜೆಪಿ ಪಕ್ಷ ಟಿಕೆಟ್ ಕೊಡಲಿಲ್ಲ ಎಂದು ಅವರನ್ನು ಪಕ್ಷಕ್ಕೆ ಬಂದಾಗ ಟಿಕೆಟ್ ನೀಡಿದೆವು. ಅಸೆಂಬ್ಲಿ ಚುನಾವಣೆಯಲ್ಲಿ ಅವರು ಅವರ ಕ್ಷೇತ್ರದಲ್ಲಿ ಸೋತರು.ಆಗ ನಾವು ಅವರಿಗೆ ಎಂಎಲ್ಸಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಯಾವುದೇ ರೀತಿಯಾಗಿ ಅನ್ಯಾಯ ಆಗಿಲ್ಲ ಅವಮಾನ ಕೂಡ ಆಗಿಲ್ಲ. ಅವರನ್ನು ನಾನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡೋಗ್ಗಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಬಲವಂತದಿಂದ ಕರೆದುಕೊಂಡು ಹೋಗಿದ್ದಾರೆ : ಡಿಕೆಶಿ ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ…
ನವದೆಹಲಿ : ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್ಗೆ ಹೋಗಿದ್ದ ಲಿಂಗಾಯತ ನಾಯಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವನೆಗೂ ಮುನ್ನವೇ ಬಿಜೆಪಿಗೆ ಸೇರ್ಪಡೆಯಾಗಲು ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈಗ ಈ ಮಾತುಕತೆಯೂ ಯಶಸ್ವಿಯಾಗಿದ್ದು, ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಆಗಿದ್ದು, . ಇದೆ ವಿಷಯದ ಕುರಿತಾಗಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಭೂಪೇಂದ್ರ ಯಾದವ್, ಬಿಎಸ್ ಯಡಿಯೂರಪ್ಪ, ಬಿ ವೈ ಜಯಂದ್ರ ಹಾಗೂ ಬಿಜೆಪಿಯ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿಯ ಶಾಲು ಹಾಕಿ ಹೂಗುಚ್ಚ ನೀಡಿ ಜಗದೀಶ ಶೆಟ್ಟರ್ ರವರನ್ನು ಬರಮಾಡಿಕೊಳ್ಳಲಾಯಿತು. ಸುದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ ಇವತ್ತು ಬಹಳ ಸಂತೋಷದ ಸಂಗತಿ ನಾನು ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದು ಅಲ್ಲಿಂದ ಇಲ್ಲಿಯವರೆಗೆ ಕಳೆದ 8-9 ತಿಂಗಳಿಂದ ರಾಜ್ಯದ…
ಹುಬ್ಬಳ್ಳಿ : ಒಂದೆಡೆ ಜಗದೀಶ್ ಶೆಟ್ಟರ್ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮತ್ತೆ ಬಿಜೆಪಿ ಪಕ್ಷಕ್ಕೆ ಮರಳಲಿದ್ದಾರೆ ಹಾಗೂ ಇಂದು ಸಂಜೆ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆ ಕುರಿತಂತೆ ಘೋಷಿಸಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಇದರ ಮಧ್ಯ ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಅನಿವಾರ್ಯವಲ್ಲ ಅವರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಎಲ್ಲಿಯೂ ಕೂಡ ಚರ್ಚೆ ನಡೆದಿಲ್ಲ. ಶೆಟ್ಟರ್ ಪಕ್ಷಕ್ಕೆ ಸೇರ್ಪಡೆ ಕುರಿತಂತೆ ಯಾವುದೇ ರೀತಿಯಾಗಿ ಮಾತುಕತೆ ಆಗಿಲ್ಲ ಎಂದು ಹುಬ್ಬಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ತಿಳಿಸಿದರು. ಈಗಾಗಲೇ ಹೈಕಮಾಂಡ್ ಜೊತೆ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಕರೆತರುವ ಕುರಿತಂತೆ ಮಾತನಾಡಿದ್ದೇನೆ. ಆದರೆ ಅವರು ಮೋದಿಯನ್ನ ಭೇಟಿಯಾಗಲಿಕ್ಕೆ ಹೋಗಿದ್ದು ಸತ್ಯಕ್ಕೆ ದೂರವಾಗಿದೆ. ನಮ್ಮ ಪಕ್ಷಕ್ಕೆ ಶೆಟ್ಟರ್ ಅವರನ್ನು ಕರೆತರುವ ಯಾವುದೇ ಬೆಳವಣಿಗೆ ಆಗಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರು : ಲೋಕಸಭೆ ಚುನಾವಣೆ ಅಷ್ಟೆ ಅಲ್ಲ ವಿಧಾನಸಭಾ ಚುನಾವಣೆ ಇದ್ದರೂ ಕೂಡ ರಾಜಕಾರಣಿಗಳು ಪಕ್ಷದಿಂದ ಪಕ್ಷಕ್ಕೆ ತೆರಳುವ ಪಕ್ಷಾಂತರ ಪರ್ವ ಸಹಜವಾದದ್ದು, ಅದರಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು. ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಅವರನ್ನು ಸ್ವಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದ್ದು ಇದೀಗ ಅಮಿತ್ ಶಾ ಜೊತೆ ಜಗದೀಶ್ ಶೆಟ್ಟರ್ ಮಾತುಕತೆ ನಡೆಸಿದ್ದು ಮತ್ತೆ ಬಿಜೆಪಿಗೆ ಮರಳಿದ್ದಾರೆ ಎಂಬ ಸುದ್ದಿ ತಿಳಿದು ಬಂದಿದೆ.ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಗೆ ಶೆಟ್ಟರ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ ಬಿಜೆಪಿ ಸೇರ್ಪಡೆ ಕುರಿತು ಜಗದೀಶ್ ಶೆಟ್ಟರ್ ಈ ಕುರಿತು ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ ಶೆಟ್ಟರ್ ಬಿಜೆಪಿ ಮರು ಸೇರ್ಪಡೆಗೆ ಇದೀಗ ಕೌಂಟ್ ಡೌನ್ ಶುರುವಾಗಿದೆ. ಜಗದೀಶಟರ್ ಬಿಜೆಪಿ ಮರು ಸೇರ್ಪಡೆ ಫಿಕ್ಸ್ ಆದಂತಿದೆ.ರಾಜ್ಯ ಬಿಜೆಪಿ ವರಿಷ್ಠರಿಗೆ ಅಮಿತ್ ಶಾ ಜೊತೆ ಜಗದೀಶ್ ಶೆಟ್ಟರ್ ಮಾತುಕತೆ…
ಬೆಂಗಳೂರು : ಕೆಐಡಿಬಿ ಜಾಗದಲ್ಲಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಡುಬಿಸನಹಳ್ಳಿಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಮನೆಗಳನ್ನು ಜೆಸಿಬಿ ಮುಖಾಂತರ ನೆಲಸಮಗೊಳಿಸಲಾಗಿದೆ. ಆದರೆ ಮನೆಯಲ್ಲಿ ವಾಸಿಸುತ್ತಿದ್ದ ಜನರಿಗೆ ಯಾವುದೇ ರೀತಿಯಾದಂತಹ ಪರಿಹಾರ ಕೊಡದೆ ಹಾಗೂ ನೋಟಿಸ್ ನೀಡದೆ ಈ ರೀತಿ ಏಕಾಏಕಿ ಬಂದು ಜೆಸಿಬಿಯಿಂದ ಮನೆಗಳನ್ನು ನೆಲಸಮಗೊಳಿಸಲಾಗಿದೆ. ಮನೆಗಳು ನೆಲಸಮ ಮಾಡುತ್ತಿರುವುದಕ್ಕೆ ನಿವಾಸಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ. ಅಧಿಕಾರಿಗಳ ನಡೆಗೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಮ್ಮ ಮೇಲೆ ದೌರ್ಜನ್ಯ ಮಾಡಬೇಡಿ ಅಂತ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ.ಬೆಂಗಳೂರಿನಲ್ಲಿ ನೂರಕ್ಕೂ ಹೆಚ್ಚು ಮನೆಗಳ ನೆಲಸಮ ಮಾಡಲಾಗಿದೆ. ಸ್ಥಳದಲ್ಲಿ ಯಾವುದೇ ರೀತಿಯಾಗಿ ಅಹಿತಕರ ಘಟನೆ ನಡೆದಂತೆ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿತ್ತು ನೆಲಸಮಗೊಳಿಸುವ ಕಾಡುಬಿಸನಹಳ್ಳಿ ಪ್ರದೇಶ ನಲ್ಲಿ ಇದು ಕೆ ಐ ಡಿ ಬಿ ಗೆ ಸೇರಿರುವ ಪ್ರದೇಶವಾಗಿದೆ ಎಂದು ಹೇಳಲಾಗುತ್ತಿದೆ. ನಮಗೆ ಒಂದು ನೋಟಿಸ್ ಬಂದಿಲ್ಲ ತಕ್ಷಣ ಬಂದು ಎಲ್ಲರೂ ಬಡವರು ಇರುವುದು ಹೊಡೆದು ಬಿಟ್ಟು ಊಟ ಎಲ್ಲ ತಿಂದಿಲ್ಲ ಮಕ್ಕಳಲ್ಲ…
ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ…