Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಸಿ.ಟಿ. ರವಿಯನ್ನು ಬಂಧಿಸಲಾಗಿದೆ. ಈ ಮಧ್ಯೆ ಕರ್ನಾಟಕ ಕಾಂಗ್ರೆಸ್ ಸಮಿತಿ ಮಹಿಳಾ ಆಯೋಗಕ್ಕೆ ದೂರು ನೀಡಿದೆ. ಸಿಟಿ ರವಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಈಗಾಗಲೇ ನಿನ್ನೆ ಬೆಳಗಾವಿಯ ಹಿರೇ ಬಾಗೇವಾಡಿ ಪೊಲೀಸರು ಎಂಎಲ್ಸಿ ಸಿಟಿ ರವಿ ಅವರನ್ನು ಅರೆಸ್ಟ್ ಮಾಡಿ ಇಂದು ಬೆಂಗಳೂರಿನ ಜೆಎಂಎಫ್ಸಿ ಕೋರ್ಟಿಗೆ ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ಉಚ್ಚಾರಣೆ ಬಳಿಕ ಜಡ್ಜ್ ಸ್ಪರ್ಶ ಡಿಸೋಜ ಅವರು ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಪೊಲೀಸರು ಸಿಟಿ ರವಿ ಅವರನ್ನು ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾರೆ. ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಡ್ಜ್ ಸಂತೋಷ ಭಟ್ ಅವರು ಪ್ರಕರಣದ ಕುರಿತು ವಿಚಾರಣೆ ಆರಂಭಿಸಿದ್ದಾರೆ. ಬೆಳಗಾವಿ ಅಧಿವೇಶನ ನಡೆಯುತ್ತಿದ್ದ ಸುವರ್ಣ ಸೌಧದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…
ಉತ್ತರಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಕೋಲಾರ ಜಿಲ್ಲೆಯ ವಸತಿ ನಿಲಯದ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದರು.ಇದೀಗ ಇದೇ ಕೋಲಾರ ಜಿಲ್ಲೆಯಿಂದ ಪ್ರವಾಸಕ್ಕೆಂದು ಆಗಮಿಸಿದಂತಹ ಶಾಲಾ ಬಸ್ ಒಂದು ಪಲ್ಟಿಯಾಗಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಹೌದು ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿಯಾಗಿ 30 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹೊನ್ನಾವರ ಮುಗ್ವಾ ಅರೊಳ್ಳೀ ಕ್ರಾಸ್ ಬಳಿ ಗುರುವಾರ ಮಧ್ಯರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಾಲೂರು ಮಾಸ್ತಿಹಳ್ಳ ಪ್ರೌಢಶಾಲೆಯಿಂದ ಪ್ರವಾಸಕ್ಕೆ ಬಂದಿದ್ದ ಕರ್ನಾಟಕ ಪ್ರೌಢಶಾಲಾ ವಿದ್ಯಾರ್ಥಿಗಳಿದ್ದ ಬಸ್ ವಾಪಸ್ಸಾಗುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಅವರನ್ನು ಮಣಿಪಾಲಕ್ಕೆ ಚಿಕಿತ್ಸೆಗಾಗಿ ಸಾಗಿಸಲಾಗಿದೆ. ಇತ್ತೀಚೆಗೆ ಕೋಲಾರದ ಮಕ್ಕಳು ಪ್ರವಾಸಕ್ಕೆ ಬಂದು ನಾಲ್ವರು ವಿದ್ಯಾರ್ಥಿನಿಯರು ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದರು.ಇದೀಗ ಇಂದು…
ಬೆಳಗಾವಿ : ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಜಯಂ ಎಫ್ ಸಿ ಕೋರ್ಟ್ ನಲ್ಲಿ ಸಿಟಿ ರವಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು ಇದೀಗ JMFC ಜಡ್ಜ್ ಸ್ಪರ್ಶ ಡಿಸೋಜ ಅವರು ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿ ಅವರನ್ನು ಬೆಳಗಾವಿಯಿಂದ ಬೆಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಯಾವುದೇ ನೋಟಿಸ್ ಕೊಡದೆ ಅಕ್ರಮ ಬಂಧನದಲ್ಲಿ ಇಟ್ಟು ರಾತ್ರಿ ಇಡೀ ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿ, ಸರ್ವಾಧಿಕಾರ ಮೆರೆದಿದ್ದಾರೆ. ಎಲ್ಲದಕ್ಕೂ ಒಂದು ಫುಲ್ ಸ್ಟಾಪ್ ಇದ್ದೆ ಇರುತ್ತೆ. ಫುಲ್ ಸ್ಟಾಪ್ ಬೀಳುತ್ತೆ. ಸರ್ವಾಧಿಕಾರ ಬಹಳ ದಿನ ನಡೆಯಲ್ಲ ಸರ್ವಾಧಿಕಾರ ಕೊನೆ ಆಗಲೇಬೇಕು . ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಹಲ್ಲೆ ನಡೆಸಿದ್ದೀರಲ್ಲ ಅತ್ತೆಗೆ ಒಂದು ಕಾಲ ಸೊಸೆಗೆ ಒಂದು ಕಾಲ ಎಂಬಂತೆ,…
ಪುಣೆ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಳಿಕ, ಹೊಸ ಮಂದಿರ-ಮಸೀದಿ ವಿವಾದಗಳನ್ನು ಉದ್ದೇಶಪೂರ್ವಕವಾಗಿ ಹುಟ್ಟುಹಾಕಲಾಗುತ್ತಿದೆ. ಇಂತಹ ವಿವಾದಗಳನ್ನು ಸೃಷ್ಟಿಸುವ ಮೂಲಕ ಕೆಲವರು ತಾವು ಹಿಂದೂ ನಾಯಕ ಎಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದರಿಂದ ಸಮಾಜಕ್ಕಾಗುವ ಹಾನಿಯನ್ನು ನಾವು ಅರಿಯಬೇಕಿದೆ. ರಾಮಮಂದಿರ ಕಟ್ಟುವ ಮೂಲಕ ಹಿಂದೂ ನಾಯಕನಾಗಲು ಸಾಧ್ಯವಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಪುಣೆ ನಗರದಲ್ಲಿ ನಡೆದ ವಿಶ್ವಗುರು ಭಾರತ್ ಎಂಬ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಯುಗಯುಗಾಂತರಗಳಿಂದ ವಿವಿಧ ಧರ್ಮ, ಜಾತಿ, ಮತ, ಮತ, ಸಿದ್ಧಾಂತಗಳ ಜನರು ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಅದಕ್ಕಾಗಿಯೇ ನಾವು ವಿಭಜನೆಯ ಭಾಷೆಯನ್ನು ಬಿಟ್ಟು, ಅಲ್ಪಸಂಖ್ಯಾತ-ಬಹುಸಂಖ್ಯಾತ ತಾರತಮ್ಯ ಮರೆತು ಹೋರಾಡಬೇಕು. ನಮ್ಮ ಅಂತರ್ಗತ ಸಂಸ್ಕೃತಿಯ ಅಡಿಯಲ್ಲಿ ನಾವು ಒಂದಾಗಬೇಕು ಎಂದು ಸಲಹೆ ನೀಡಿದ್ದಾರೆ. ಹಿಂದೂ ಸೇವಾ ಮಹಾವತ್ ಕಾರ್ಯಕ್ರಮದ ಸಂದರ್ಭದಲ್ಲಿ, ಆರ್ಎಸ್ಎಸ್ ಮುಖ್ಯಸ್ಥರು ಇತ್ತೀಚಿನ ಮಂದಿರ-ಮಸೀದಿ ವಿವಾದಗಳನ್ನೂ ಪ್ರಸ್ತಾಪಿಸಿದರು. ರಾಮ ಮಂದಿರ ನಿರ್ಮಾಣದ ನಂತರ ಕೆಲವರು ಹೊಸ ಜಾಗಗಳಲ್ಲಿ ಇದೇ ವಿಚಾರಗಳನ್ನು…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಜಯಂ ಎಫ್ ಸಿ ಕೋರ್ಟ್ ನಲ್ಲಿ ಸಿಟಿ ರವಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಇದೀಗ ನ್ಯಾಯಾಧೀಶರು ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸಿ ಟಿ ರವಿ ವಿರುದ್ಧ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿ ಎಂದು ಬೆಳಿಗ್ಗೆ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಸಿಟಿ ರವಿ ಅವರ ಪರ ವಕೀಲ ಎಂಬಿ ಜಿರಲಿ ಅವರು ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಬಳಿಕ ಜಡ್ಜ್ ಮದ್ಯಾಹ್ನ 3 ಗಂಟೆಗೆ ವಿಚಾರಣೆ ಒಂದುಡಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ಬಂದ ಮಾಹಿತಿಗಳ ಪ್ರಕಾರ ಸಿ ಟಿ ರವಿ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ…
ದಾವಣಗೆರೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಬಿಜೆಪಿಯ MLA ಸಿಟಿ ರವಿ ಅವ್ರು ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ನಿನ್ನೆ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ಸಿಟಿ ರವಿಯವರನ್ನು ಅರೆಸ್ಟ್ ಮಾಡಿದರು. ಈ ವಿಚಾರವಾಗಿ ದಾವಣಗೆರೆಯಲ್ಲಿ ಬಿಜೆಪಿ ಮಾಜಿ ಸಚಿವ MP ರೇಣುಕಾಚಾರ್ಯ ಸಿಟಿ ರವಿ ಅವರನ್ನು ಕೊಲೆ ಮಾಡುವ ಉದ್ದೇಶ ಇತ್ತು ಎಂದು ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. MLC ಸಿಟಿ ರವಿ ಹತ್ಯೆ ಮಾಡುವ ಉದ್ದೇಶವಿತ್ತು. ಸಿಟಿ ರವಿ ತಲೆಗೆ ಪೆಟ್ಟಾಗಿದೆ, ಇಡೀ ರಾತ್ರಿ ವ್ಯಾನಿನಲ್ಲಿ ಸುತ್ತಾಡಿಸಿದ್ದಾರೆ. ಇದರ ಹಿಂದೆ ಸಿಟಿ ರವಿ ಅವರ ಹತ್ಯೆಯ ಉದ್ದೇಶವಿದೆ. ಸಿಟಿ ರವಿ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಏಕವಚನದಲ್ಲಿ ಮಾತನಾಡಿದ್ದಾರೆ.ಸಿಟಿ ರವಿ ಮಾತನಾಡಿದ್ದು ರೆಕಾರ್ಡ್ ಆಗಿಲ್ಲವೆಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಹಾಗಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ ಕೇಳಬೇಕು ಎಂದು ದಾವಣಗೆರೆಯಲ್ಲಿ ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಮಂಡ್ಯ : ಸಕ್ಕರೆ ನಗರಿ ಮಂಡ್ಯದಲ್ಲಿ ಡಿ. 20, 21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ,ಆಡಳಿತದಲ್ಲಿ ಕನ್ನಡ ಭಾಷೆ ಬಳಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಮಗ್ರ ಕನ್ನಡ ಭಾಷಾ ಬಳಕೆಯನ್ನು ಜಾರಿಗೆ ತಂದಿದ್ದೇವೆ. ಕನ್ನಡಕ್ಕೆ ಮೊದಲ ಪ್ರಾಶಸ್ತ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಎಷ್ಟೇ ಭಾಷೆ ಕಲಿತರು ಕೂಡ ಹೃದಯದ ಭಾಷೆ ಮಾತೃ ಭಾಷೆಯಾಗಿರುತ್ತದೆ. ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣಗಳನ್ನು ತಿಳಿದುಕೊಳ್ಳಬೇಕಿದೆ. ಕನ್ನಡ ಉಳಿಯಬೇಕಾದರೆ ಮಕ್ಕಳನ್ನು ಕನ್ನಡ ಶಾಲೆಗೆ ಸೆಳೆಯಬೇಕಾಗಿದೆ. ಆಡಳಿತದಲ್ಲಿ ಕನ್ನಡ ಭಾಷೆ ಬಳಸಲು ಸರ್ಕಾರ ಬದ್ಧವಾಗಿದೆ. ನಾವು ಬದುಕುತ್ತಿರುವ ಕಾಲ ಅತ್ಯಂತ ವಿಷಯವಾಗಿದೆ ಜಗತ್ತಿನ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಬೇಕಿದೆ. ಕುವೆಂಪು ಮಾಡಿರುವ ಸ್ಮರಣೆಯ ಕೆಲಸಗಳನ್ನು ನೆನಪಿಸಿಕೊಳ್ಳಬೇಕಿದೆ…
ಮಂಡ್ಯ :ಸಕ್ಕರೆ ನಗರಿ ಮಂಡ್ಯದಲ್ಲಿ ಡಿ. 20, 21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಮೇಲೆ ಜ್ಯೋತಿ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ಇಂದಿನಿಂದ ಮೂರು ದಿನಗಳ ಕಾಲ ಈ ಒಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸ್ಪೀಕರ್ ಯುಟಿ ಖಾದರ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥಶ್ರೀ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ, ಸಚಿವರಾದ ಡಾ. ಮಹದೇವಪ್ಪ, ಶಿವರಾಜ್ ತಂಗಡಗಿ, ಕೆ ಹೆಚ್ ಮುನಿಯಪ್ಪ, ಶಾಸಕರಾದ ರವಿ ಗಣಿಗ, ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿಎಂ ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಎಚ್ ಡಿ ಮಂಜು ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ…
ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ನಿನ್ನೆ ಬಿಜೆಪಿಯ ಮೇಲೆ ಸಿಟಿ ರವಿ ಅವರನ್ನು ಬೆಳಗಾವಿಯ ಹಿರೇಬಾಗೇವಾಡಿಯ ಪೊಲೀಸರು ಬಂಧಿಸಿದ್ದರು. ಇಂದು ಬೆಳಗಾವಿಯ ಜೆಎಂಎಫ್ಸಿ ಕೋರ್ಟಿಗೆ ಹಾಜರುಪಡಿಸಿದ ಬಳಿಕ ನ್ಯಾಯಾಧೀಶರು ಸಿಟಿ ರವಿ ಪರ ವಕೀಲ ಎಂಬಿ ಜಿರಲಿ ಅವರ ವಾದ ಆಲಿಸಿದರು. ನಂತರ ಮಧ್ಯಾಹ್ನ 3 ಗಂಟೆಗೆ ವಿಚಾರಣೆಯನ್ನು ಮುಂದೂಡಿದರು. ಇದೀಗ ಸಿಟಿ ರವಿ ಯಾರು ಬೆಂಗಳೂರಿನ ಸೇಷನ್ಸ್ ಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯಕ್ಕೂ ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೌದು ಬೆಂಗಳೂರಿನ ಸೇಷನ್ಸ್ ಕೋರ್ಟ್ ಗೂ ಸಹ ಸಿಟಿ ರವಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ಜಾಮೀನು ಕೋರಿ ಸೆಷನ್ ಕೋರ್ಟಿಗೆ ಇದೀಗ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರತ್ಯೇಕ ಸೆಕ್ಷನ್ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಿಟಿ ರವಿ ಪರ ಶ್ರೀನಿವಾಸ್ ರಾವ್ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ಮಧ್ಯಾಹ್ನ 3 ಗಂಟೆಗೆ ವಿಚಾರಣೆ ನಡೆಯುವ ಸಾಧ್ಯತೆ…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ನಿನ್ನೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಬಂಧಿಸಿದ್ದರು. ಇಂದು ಬೆಳಗಾವಿಯ ಜೆಎಂಎಫ್ಸಿ ಕೋರ್ಟಿಗೆ ಅವರನ್ನು ಹಾಜರೂಪಡಿಸಿದ್ದು, ಜಡ್ಜ್ ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿ ಆದೇಶಿಸಿದರು. ಈ ವೇಳೆ ಕೋರ್ಟ್ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಈ ಒಂದು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ನೋಟಿಸ್ ನೀಡಿ ಕಾನೂನು ಪ್ರಕಾರ ಎಂಎಲ್ಸಿ ಸಿಟಿ ರವಿ ಅವರನ್ನು ಬಂಧಿಸಬೇಕು. ಆದರೆ ಸುವರ್ಣ ಸೌಧದಲ್ಲಿ ಇರುವಾಗಲೇ ಅವರನ್ನು ಏಕಾಏಕಿ ಪೊಲೀಸರು ಹೊತ್ತುಕೊಂಡು ಹೋಗಿದ್ದಾರೆ. ನ್ಯಾಯಾಲಯ ಸಿಟಿ ರವಿ ಪರ ವಕೀಲರ ವಾದವನ್ನು ಆಲಿಸಿದೆ. ಮಧ್ಯಾಹ್ನ 3:00ಗೆ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಎಂ ಎಲ್ ಸಿ ಸಿಟಿ ರವಿ ಕೂಡ ಜೆಡ್ಸ್ ಮುಂದೆ ವಿವರಣೆ ನೀಡಿದ್ದಾರೆ ಎಂದು ತಿಳಿಸಿದರು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು.…