Author: kannadanewsnow05

ಬೆಂಗಳೂರು : ಕಾಂಗ್ರೆಸ್ ಬೆಂಬಲಿಸುತ್ತಿದ್ದ ಎಸ್ಸಿ ಎಸ್ಟಿ ಸಮಾಜಗಳಿಗೆ ಇದೀಗ ಬೇಸರ ಉಂಟಾಗಿದೆ.ಎಸ್ಸಿ ಎಸ್ಟಿ ಸಮುದಾಯಗಳು ಭ್ರಮ ನಿರಸನಗೊಂಡಿವೆ. ದೀನ ದಲಿತರಿಗೆ ರಕ್ಷಣೆ ಎಲ್ಲಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದಾಗ ಮೀಸಲಾತಿ ಹೆಚ್ಚು ಮಾಡಿದೆ ಆಗ ಅದನ್ನು ರಾಜಕೀಯ ಗಿಮಿಕ್ ಎಂದು ಹೇಳಿದರು ಗ್ಯಾರಂಟಿಗಳಿಗೆ ಎಸ್ಸಿ ಎಸ್ಟಿ ಹಣವೇ ಬೇಕಿತ್ತಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಲೋಕಸಭಾ ಚುನಾವಣೆ ಕುರಿತಾಗಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬರುತ್ತದೆ. ದಕ್ಷಿಣ ಭಾರತದಲ್ಲಿ ಆಶ್ಚರ್ಯಕರ ಫಲಿತಾಂಶ ಬರುತ್ತದೆ. ಕರ್ನಾಟಕದಲ್ಲಿ 25 ಕ್ಕಿಂತಲೂ ಹೆಚ್ಚು ಸ್ಥಾನಗಳು ಬರುತ್ತವೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Read More

ಮಂಡ್ಯ : ಜಿಲ್ಲೆಯ ಮೇಲುಕೋಟೆ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೆಳಕಿಗೆ ಬಂದ 30 ಗಂಟೆಯಲ್ಲಿ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲಾ ಶಿಕ್ಷಕಿ ದೀಪಿಕಾ ಗಳನ್ನು ನಿತೀಶ್ (21) ಎನ್ನುವ ಯುವಕ ಹತ್ಯೆ ಮಾಡಿ ಪರಾರಿಯಾಗಿದ್ದ. ಡಿವೈಎಸ್ಪಿ ಮುರುಳಿ ನೇತೃತ್ವದಲ್ಲಿ ಇದೀಗ ಆರೋಪಿಯನ್ನ ಬಂಧಿಸಲಾಗಿದೆ. ಆರೋಪಿ ಯುವಕ ಮೊದಲೇ ಪ್ಲಾನ್ ಮಾಡಿ ಶಿಕ್ಷಕಿಯನ್ನು ಕೊಲೆ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ದೀಪಿಕಾ ಕೊಲೆಗೂ ಮುನ್ನ ಆರೋಪಿ ಗುಂಡಿ ತೆಗೆದಿದ್ದ ಎಲ್ಲನಾಗಿದೆ.ನಂತರ ಮಾರನೇ ದಿನ ಶಿಕ್ಷಕಿ ದೀಪಿಕಾ ಅಡ್ಡಗಟ್ಟಿ ಕೊಲೆ ಗೈದಿದ್ದಾನೆ ವೆಲ್ ನಿಂದ ಶಿಕ್ಷಕಿಯ ಕುತ್ತಿಗೆ ಬಿಗಿದು ನಿತೀಶ್ ಕೊಲೆ ಮಾಡಿದ್ದಾನೆ. ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಕೊಲೆ ಮಾಡಿದ ನಂತರ ದೀಪಿಕಾಳನ್ನು ಮಣ್ಣಿನಲ್ಲಿ ನಿತೀಶ್ ಹೂತಿದ್ದ. ಜನವರಿ 20 ರಂದು ಶಾಲೆಗೆ ಹೋಗಿದ್ದ ದೀಪಿಕಾ ನಾಪತ್ತೆಯಾಗಿದ್ದರು. ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ನಿವಾಸಿಯಾಗಿದ್ದರು ಎಂದು ಹೇಳಲಾಗುತ್ತಿದ್ದು, ಪತ್ನಿ ನಾಪತ್ತೆ ಬಗ್ಗೆ ಪತಿ ಲೋಕೇಶ್ ಪೊಲೀಸರಿಗೆ ದೂರು ನೀಡಿದ್ದರು.…

Read More

ಬೆಂಗಳೂರು : ರಾಯಚೂರು ಜಿಲ್ಲೆಯಲ್ಲಿ 2856 ಅಂಗನವಾಡಿ ಕೇಂದ್ರಗಳ ಪೈಕಿ ಒಟ್ಟು 808 ಬಾಡಿಗೆ ಕಟ್ಟಡಗಳ ಕೋಟ್ಯಂತರ ರೂಪಾಯಿ ಬಾಡಿಗೆಯನ್ನು ಬಿಡುಗಡೆ ಮಾಡದೆ ರಾಜ್ಯ ಸರ್ಕಾರ ಬಾಕಿ ಉಳಿಸಿದೆ.ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲೂ ಯೋಗ್ಯತೆ ಇಲ್ಲದ ಕಾಂಗ್ರೆಸ್ ಸರ್ಕಾರ, ಅಂಗನವಾಡಿ ಕಾರ್ಯಕರ್ತೆಯರು ಬಡ್ಡಿಗೆ ಸಾಲ ತಂದು ಕಟ್ಟಡದ ಬಾಡಿಗೆ ಕಟ್ಟುವ ಪರಿಸ್ಥಿತಿ ತಂದಿಟ್ಟಿದೆ. ಗ್ರಾಮೀಣ ಭಾಗದ ಬಡ ಕುಟುಂಬದ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ಅಂಗನವಾಡಿಯಲ್ಲಿ ಸಿಗುವ ಬಿಸಿಯೂಟ, ಪೌಷ್ಠಿಕ ಆಹಾರವೇ ಜೀವನಾಧಾರ ಎಂದರು. ಬಡವರ ಪಾಲಿನ ಆಸರೆಯಾದ ಅಂಗನವಾಡಿಗಳಿಗೆ ಬಾಡಿಗೆ ಕಟ್ಟಲೂ ಯೋಗ್ಯತೆ ಇಲ್ಲದ ನಿಮ್ಮ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಸಿಎಂ ಸಿದ್ದರಾಮಯ್ಯನವರೇ” ಎಂದು ಅಶೋಕ್ ಟ್ವೀಟ್…

Read More

ಅಯೋಧ್ಯಾ : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಗರ್ಭಗುಡಿಯಲ್ಲಿ ರಾಮಲಲ್ಲ ಮೂರ್ತಿ ಪ್ರತಿಷ್ಠಾಪನೆ ಅತ್ಯಂತ ಸಡುಗರ ಸಂಭ್ರಮದಿಂದ ನೆರವೇರಿದೆ ಈ ಒಂದು ಮೂರ್ತಿಯನ್ನು ನಮ್ಮ ಕರ್ನಾಟಕದ ಮೈಸೂರು ಜಿಲ್ಲೆಯ ಹೆಗ್ಗಡ ದೇವನ ಕೋಟೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರು ನಿರ್ಮಿಸಿದ್ದಾರೆ. ಹೀಗಾಗಿ ಅಯೋಧ್ಯ ಶ್ರೀರಾಮ ಮಂದಿರ ನಿರ್ಮಾಣದಲ್ಲಿ ಕರುನಾಡಿನ ಕೊಡುಗೆ ಅಪಾರವಾಗಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಮುಗಿಸಿಕೊಂಡು ಇಂದು ಕರ್ನಾಟಕಕ್ಕೆ ಶಿಲ್ಪಿ ಅರುಣ್ ಯೋಗಿರಾಜ್ ಆಗಮಿಸಲಿದ್ದು, ಈಗಾಗಲೇ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಅವರನ್ನು ಬರಮಾಡಿಕೊಳ್ಳಲು, ಭವ್ಯ ಸ್ವಾಗತಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಎಂದು ಹೇಳಲಾಗುತ್ತಿದೆ. ಇನ್ನು ಕರ್ನಾಟಕಕ್ಕೆ ಬರುವ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ ಅರುಣ್ ಯೋಗಿರಾಜ್ ಅವರು ನಾನು, ನನ್ನದಲ್ಲ, ಇದು ದೇಶದ ಆಸ್ತಿ. ಭಾರತ ಇತಿಹಾಸದಲ್ಲೇ ಹೆಸರು ಉಳಿಯುವ ವಿಷಯ ಇದಾಗಿದೆ. ದೊಡ್ಡ ಕೆಲಸ ಕೊಟ್ಟ ಮೇಲೆ ನಮ್ಮ ಮೇಲು ಜವಾಬ್ದಾರಿ ಇರುತ್ತದೆ. ಇದಕ್ಕಾಗಿ ರಕ್ತದ ಹೊಳೆಯನ್ನೇ ಹರಿಸಿದ್ದಾರೆ ಎಂದು ಅಯೋಧ್ಯೆಯಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಪ್ರತಿಕ್ರಿಯೆ ನೀಡಿದ್ದಾರೆ.…

Read More

ಕೋಲ್ಕತ್ತಾ: ಲೋಕಸಭಾ ಚುನಾವಣೆಗೂ ಮುನ್ನ ಇಂಡಿಯಾ ಮೈತ್ರಿಕೂಟದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಯಾವುದೇ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಟಿಎಂಸಿ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತದೆ. ನಾವು ಯಾರ ಜೊತೆಗೂ ಕೈಜೋಡಿಸುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಷ್ಟನೆ ನೀಡಿದ್ದಾರೆ.ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿದ್ದ ಕಾಂಗ್ರೆಸ್l ಗೆ ಮತ ಬ್ಯಾನರ್ಜಿ ಬಿಗ್ ಶಾಕ್ ನೀಡಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಂಗಾಳದಲ್ಲಿ ಕಾಂಗ್ರೆಸ್‌ಗೆ ಎರಡಕ್ಕಿಂತ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮೀಸಲಿಡಲು ಸಿದ್ಧವಿಲ್ಲ ಎಂದು ಮಂಗಳವಾರ ಸ್ಪಷ್ಟಪಡಿಸಿದ್ದಾರೆ ಮತ್ತು ಎಂಟು ರಿಂದ 14 ಲೋಕಸಭೆಯ ತಮ್ಮ ಅಪ್ರಾಯೋಗಿಕ ಬೇಡಿಕೆಗಳಿಗೆ ಮಣಿಯಲು ಸಾಧ್ಯವಿಲ್ಲ ಎಂದರು. ಅವರು ಕಾಳಿಘಾಟ್‌ನಲ್ಲಿ ಪಕ್ಷದ ಬಿರ್ಭೂಮ್ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಸಿಪಿಎಂ ಮತ್ತು ಬಿಜೆಪಿಗೆ ಹೇಚ್ಚುವರಿ ಸ್ಥಾನಗಳನ್ನು ಹಸ್ತಾಂತರಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಸೂಚಿಸಿದರು. ಪಕ್ಷದ ನಾಯಕರೊಬ್ಬರು, ಇದು ಮುಂದುವರಿಯಲು ಸಾಧ್ಯವಿಲ್ಲ, ಅಗತ್ಯವಿದ್ದರೆ, ನಾವು ಬಂಗಾಳದಲ್ಲಿ ಏಕಾಂಗಿಯಾಗಿ ಹೋರಾಡುತ್ತೇವೆ. ಏಕಾಂಗಿಯಾಗಿ ಹೋರಾಡಲು…

Read More

ಚಿಕ್ಕಮಗಳೂರು : ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದೇಶದ ಎಲ್ಲಾ ದೇವಸ್ಥಾನಗಳಲ್ಲಿ ಅಂದು ಹೋಮ ಹವನ ಹಾಗೂ ಪೂಜೆ ಕೈಗೊಳ್ಳಲಾಗಿತ್ತು. ಅದರಂತೆ ಚಿಕ್ಕಮಂಗಳೂರು ಜಿಲ್ಲೆಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಾತ್ರೇಯ ಪೀಠದಲ್ಲಿ ರಾಮ ತಾರಕ ಹೋಮಕ್ಕೆ ಚಿಕ್ಕಮಂಗಳೂರು ಜಿಲ್ಲಾಡಳಿತ ನಿರಾಕರಿಸಿತ್ತು. ಚಿಕ್ಕಮಂಗಳೂರು ಜಿಲ್ಲಾಡಳಿತ ಈ ಒಂದು ನಡೆಗೆ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರನ್ನು ಕೆರಳಿಸಿದ್ದು ಅಂದು ಪ್ರತಿಭಟನೆ ನಡೆಸಿದರು.ಈ ವೇಳೆ ಪ್ರತಿಭಟನಾ ನಿರತರ ಪೈಕಿ ಇವರ ಮೇಲೆ ಪೊಲೀಸರು fir ದಾಖಳಿಸಿದ್ದರು.ಹೋಮಕ್ಕೆ ನಿರಾಕರಿಸಿದಕ್ಕೆ ಪ್ರತಿಭಟನಾ ನಿರತರ ಪೈಕಿ 5 ಜನರ ಮೇಲೆ ಪೊಲೀಸರು FIR ದಾಖಲಿಸಿದ್ದರು.ಇದನ್ನು ವಿರೋಧಿಸಿ ನಾಳೆ ದತ್ತಪೀಠ ಚಲೋಗೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿವೆ ಎಂದು ತಿಳಿದುಬಂದಿದೆ. ನಾಳೆ ಹುಣ್ಣಿಮೆ ಹಿನ್ನೆಲೆಯಲ್ಲಿ ದತ್ತ ಗುಹೆಯಲ್ಲಿ ಹೋಮ ನಡೆಸುತ್ತಿದ್ದು, ದತ್ತ ಪಾದುಕೆ ಪೂಜೆಗೆ 500ಕ್ಕೂ ಅಧಿಕ ಹಿಂದು ಕಾರ್ಯಕರ್ತರು ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಬಾಲ ರಾಮಮೂರ್ತಿ ಪ್ರತಿಷ್ಠಾಪನೆ…

Read More

ಹುಬ್ಬಳ್ಳಿ : ಹುಬ್ಬಳ್ಳಿಯ ಖ್ಯಾತ ಉದ್ಯಮಿ ಅಶೋಕ ನಗರದಲ್ಲಿರುವ ಉದ್ಯಮಿ ಗಣೇಶ ಸೇಠ್ ನಿವಾಸದ ಮೇಲೆ ಐಟಿ ದಾಳಿ ನಡೆಸಿದ್ದು, ಸತತವಾಗಿ 10 ಗಂಟೆಗಳಿಂದ ಐ ಟಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಹಾಗೂ ಶೋಧ ಕಾರ್ಯ ಮುಂದುವರೆದಿದೆ. ಹುಬ್ಬಳ್ಳಿಯಲ್ಲಿ ಉದ್ಯಮಿ ಗಣೇಶ್ ಶೆಟ್ ಮನೆ ಮೇಲೆ ಐಟಿ ದಾಳಿ ನಡೆಸಿದೆ. ಏಕಕಾಲಕ್ಕೆ ನಾಲ್ಕು ಕಡೆಗಳಲ್ಲಿ ಐಟಿ ಅಧಿಕಾರಿಗಳಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಸುತ್ತಿದೆ.ಉದ್ಯಮಿ ಗಣೇಶ ಸೇಟ ಮನೆ ಕಚೇರಿ ಹಾಗೂ ಹೋಟೆಲ್ ಗಳ ಮೇಲೆ ಐಟಿ ದಾಳಿ ನಡೆಸಿದೆ ಎಂದು ತಿಳಿಬಂದಿದೆ. ಕೆಜೆಪಿ ಜುವೆಲರಿ ಜವಳಿ ಉದ್ಯಮ, ಹೋಟೆಲ್ ನಟಿಸುತ್ತಿರುವ ಗಣೇಶ್ ಹುಬ್ಬಳ್ಳಿಯ ಸ್ಟೇಷನ್ ರಸ್ತೆಯ ಕೆಜೆಪಿ ಸಿಲ್ವರ್ ಬ್ಯಾಲೆನ್ಸ್ ಅಲ್ಲಿ ಕೂಡ ಐಟಿ ಅಧಿಕಾರಿಗಳು ಶೋಧ ನೆಡಿಸುತ್ತಿದ್ದಾರೆ. ಅಲ್ಲದೆ ಗಣೇಶ್ ಸೇಟ್ ಹಾಗೂ ಆತನ ಪುತ್ರ ಶ್ರೀಗಂಧ ಸೇಠನ್ನು ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿಗೆ ಇಡಿ ರಾಜ್ಯವೆ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ಒಂಟಮೂರಿಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಅಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೂವರೆ ತಿಂಗಳಲ್ಲೇ ಸಿಐಡಿ ತನಿಖೆ ಮುಗಿಸಿದೆ. ತನಿಖ ವರದಿ ಸಲ್ಲಿಸಲು ಅಂತಿಮ ಹಂತದ ಸಿದ್ಧತೆ ಮಾಡಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದ್ದು, ಇದೇ ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಘಟನೆ ಕುರಿತಂತೆ ಸ್ವಯಂ ಪ್ರೇರಿತವಾಗಿ ಹೈಕೋರ್ಟ್ ವಿಚಾರಣೆ ನಡೆಸಿತ್ತು.ಬೆಳಗಾವಿಯ ವಂಟಮೂರಿಯಲ್ಲಿ ನಡೆದಿದ್ದ ಅಮಾನವೀಯ ಘಟನೆ ಮಹಿಳೆಯನ್ನ ಬೆತ್ತಲೆ ಮಾಡಿಥಳಿಸಿದ್ದ ಘಟನೆ ನಡೆದಿತ್ತು.ಇದೀಗ ಸಿಐಡಿ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿ ವರದಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಮಗಳು ಕೂಡ ಹೇಳಿಕೆ ಕೊಟ್ಟಿದ್ದು, ಸಾಕಷ್ಟು ಪ್ರಮುಖತೆ ಪಡೆದುಕೊಂಡಿದೆ. ಯುವಕನ ಜೊತೆ ಓಡಿ ಹೋಗಿದ್ದ ಯುವತಿ ತಂದೆ ಮತ್ತು ಚಿಕ್ಕಪ್ಪನ ವಿರುದ್ಧವೇ ಹೇಳಿಕೆ ಕೊಟ್ಟಿದ್ದಾಳೆ. ನಾನು ಪ್ರೀತಿ ಮಾಡಿದ ಯುವಕನ ಜೊತೆ ಹೋಗಿರುವುದು.ನನ್ನ ಯಾರು ಬಲವಂತವಾಗಿ ಕರೆದುಕೊಂಡು ಹೋಗಿಲ್ಲ ನನ್ನ ತಂದೆ ಮತ್ತು ಚಿಕ್ಕಪ್ಪ ಪ್ರಿಯಕರನ ಮನೆ ದ್ವಂಸ ಮಾಡಿ ಹಲ್ಲೆ…

Read More

ಬೆಂಗಳೂರು : ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ ಜೋಡು ನ್ಯಾಯಾತ್ರೆಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರು ಸಿರಿಗಂತೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅದರಂತೆ ಕಾಂಗ್ರೆಸ್ ಮುಖಂಡ ನಲಪಾಡ್ ಹ್ಯಾರಿಸ್ ಸೇರಿದಂತೆ ಅಸ್ಸಾಂನಲ್ಲಿ ಕಾಂಗ್ರೆಸ್ ಯಾತ್ರೆಗೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಧರಣಿ ನಡೆಸುತ್ತಿದ್ದು ಕಾಂಗ್ರೆಸ್ ಭವನದ ಬಳಿ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಇದೆ ವೇಳೆ ಪಂಜಿನ ಮೆರವಣಿಗೆ ಮಾಡಿದ್ದರು ನಲಪಾಡ್ ಮತ್ತು ತಂಡ ಇದೆ ವೇಳೆ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಹಿನೆಲೆಯಲ್ಲಿ, ಜನರಿಗೆ ತೊಂದರೆ ನೀಡಿದ ಆರೋಪದಡಿ ನಲಪಾಡ್ ಸೇರಿದಂತೆ 25 ಜನರ ವಿರುದ್ಧ FIR ದಾಖಲಾಗಿದೆ. ಮಹಮ್ಮದ್ ನಲಪಾಡ್ ವಿರುದ್ಧ ದಾಖಲಾಗಿದೆ 25 ಮಂದಿ ವಿರುದ್ಧ ಇದೀಗ ಕೇಸ್ ದಾಖಲಾಗಿದೆ .ಭಾರತ ನ್ಯಾಯ ಯಾತ್ರೆಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಅದನ ವಿರೋಧಿಸಿ ರಸ್ತೆ ತಡೆ ಮಾಡಿದ್ದರು ಸಾರ್ವಜನಿಕವಾಗಿ ಸಂಚಾರಕ್ಕೆ ಅಡ್ಡಿ ತೊಂದರೆ ಆರೋಪದ ಮೇರೆಗೆ ಬೆಂಗಳೂರಿನ ಹೈ ಗ್ರೌಂಡ್ಸ್…

Read More

ಓಂ ಶ್ರೀ ಗುರುಭ್ಯೋ ನಮಃ  ‌ ‌ ‌ ದಾಂಪತ್ಯದಲ್ಲಿ ಅಡೆತಡೆಗಳಿದ್ದರೆ.. ಈ ವಾಸ್ತು ಸಲಹೆಯನ್ನು ಪ್ರಯತ್ನ ಮಾಡಿ. ಶೀಘ್ರದಲ್ಲಿಯೇ ಮದುವೆ ಯೋಗ ಬರಲಿದೆ ದಾಂಪತ್ಯದಲ್ಲಿ ಸಮಸ್ಯೆಗಳಿದ್ದರೆ… ಒಂದು ಬಾರಿ ವಾಸ್ತುದೋಷಗಳೂ ಕಾರಣವಾಗಿರಬಹುದು. ಆದ್ದರಿಂದ ನೀವು ಕೆಲವು ವಾಸ್ತು ಪರಿಹಾರ ಸಲಹೆಗಳನ್ನು ಪ್ರಯತ್ನಿಸಬಹುದು. ‌ ‌ ಮದುವೆಯಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ‌ ‌ ‌ ‌ ನೀವು ಶೀಘ್ರದಲ್ಲೇ ಮದುವೆಯಾಗಲು ಬಯಸಿದರೆ, ಮಲಗುವ ಹಾಸಿಗೆಯ ಕೆಳಗೆ ಯಾವುದೇ ಲೋಹದ ವಸ್ತುವನ್ನು ಇರಿಸಬೇಡಿ. ಈ ರೀತಿ ಕಬ್ಬಿಣದ ವಸ್ತುಗಳನ್ನು ಇಟ್ಟುಕೊಂಡು ಮಲಗಬೇಡಿ. ಹಾಗೆಯೇ ಕೋಣೆಯನ್ನು ಸ್ವಚ್ಛವಾಗಿಡಿ. ಇದು ಕೋಣೆಯಲ್ಲಿ ಧನಾತ್ಮಕ ಶಕ್ತಿಯನ್ನು ಹರಡುತ್ತದೆ. ‌ ‌ ‌ ‌ ‌ ‌ ‌ ವಿಶೇಷವಾಗಿ ಮಲಗುವ ಕೋಣೆ ಎಂದಿಗೂ ನೈಋತ್ಯ ದಿಕ್ಕಿನಲ್ಲಿರಬಾರದು. ಇದೇ ವೇಳೆ ಮದುವೆ ತಡವಾಗಬಹುದು. ವಾಸ್ತು ಪ್ರಕಾರ ಅವಿವಾಹಿತರು ಮಲಗುವ ಕೋಣೆ ವಾಯುವ್ಯ ದಿಕ್ಕಿನಲ್ಲಿರಬೇಕು. ಮದುವೆಯಾಗಲಿರುವ ಹುಡುಗ ಹುಡುಗಿಯರು ತಮ್ಮ ಪಾದಗಳನ್ನು ಉತ್ತರಕ್ಕೆ ಮುಖ…

Read More