Author: kannadanewsnow05

ಮಂಡ್ಯ : ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಘಟನೆಗೆ ಸಂಬಂಧಿಸಿದಂತೆ ಮೂರು ದಿನದ ಬಳಿಕ ಮದ್ದೂರು ಪಟ್ಟಣ ಸಹಜ ಸ್ಥಿತಿಯತ್ತ ಮರಳಿದೆ. ಇಂದು ಎಂದಿನಂತೆ ವ್ಯಾಪರ ವಹಿವಾಟು ಆರಂಭವಾಗಿದೆ. ಅಂಗಡಿ ಮುಂಗಟ್ಟು ತೆರೆದಿರಿವ ವರ್ತಕರು. ಮೂರು ದಿನ ಬಂದ್ ಸಂಪೂರ್ಣ ಮುಚ್ಚಿದ್ದ ಅಂಗಡಿ ಮುಂಗಟ್ಟುಗಳು. ಇಂದು ಮತ್ತೆ ಓಪನ್ ಆಗಿವೆ. ವ್ಯಾಪಾರಸ್ಥರು ವ್ಯಾಪರ ವಹಿವಾಟು ನಿಲ್ಲಿಸಿ ಹೋರಾಟಕ್ಕೆ ಬೆಂಬಲ ನೀಡಿದ್ದರು. ಇಂದು‌ ಬೆಳಿಗ್ಗೆಯಿಂದಲೇ ಅಂಗಡಿ ತೆರೆದು ವ್ಯಾಪಾರ ಶುರುವಾಗಿದೆ. ಭಾನುವಾರ ರಾತ್ರಿ ಗಣೇಶ ಮೆರವಣಿಗೆ ಮೇಲೆ ಕಲ್ಲು ಎಸೆತವಾಗಿತ್ತು. ರಾಮ್ ರಹೀಮ್ ನಗರದ ಮಸೀದಿ ಮುಂಭಾಗ ದುಷ್ಕೃತ್ಯ ನಡೆದಿತ್ತು. ಘಟನೆ ಖಂಡಿಸಿ ಸೋಮವಾರ‌ ಹಿಂದುಗಳಿಂದ ಬೃಹತ್ ಪ್ರತಿಭಟನೆ. ನಡೆಸಲಾಯಿತು. ಮಂಗಳವಾರ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಲಾಗಿತ್ತು. ಬುಧವಾರ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಿತು. ಈ ವೇಳೆ ವರ್ತಕರು ಮೂರು ದಿನವೂ‌ ವ್ಯಾಪಾರ ವಹಿವಾಟು ನಿಲ್ಲಿಸಿದ್ದರು. ಮದ್ದೂರು ಪಟ್ಟಣ ಸಹಜ ಸ್ಥಿತಿಗೆ ಮರಳುತ್ತಿದ್ದರೂ ಸಹ ಪೊಲೀಸ್…

Read More

ಬೆಂಗಳೂರು ಸೆ 11: ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ನುಡಿದರು.ಅರಣ್ಯ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿ ಮಾತನಾಡಿದರು. ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತೆ ಮಾಡಿದರೆ ಅರಣ್ಯ ಮಾನವ ಸಂಘರ್ಷವನ್ನು ತಡೆಗಟ್ಟಬಹುದು ಎಂದರು. ಕಾಡು ಪ್ರಾಣಿಗಳ ಮತ್ತು ಮಾನವರ ಸಂಘರ್ಷ ತಪ್ಪಿಸಲು ರೈಲ್ವೇ ಬ್ಯಾರಿಕೇಡ್ ಗಳನ್ನು ನಿರ್ಮಿಸಲು ಮತ್ತು ಇವುಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಿರ್ಮಿಸಲು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ. ಅರಣ್ಯ ಇಲಾಖೆ ಬಳಿಯೂ ಸಾಕಷ್ಟು ಹಣ ಇದೆ. ಅಗತ್ಯಬಿದ್ದರೆ ಸರ್ಕಾರ ಕೂಡ ಹಣ ಕೊಡಲು ಸಿದ್ದವಿದೆ. ಆದ್ದರಿಂದ ಸಮರ್ಪಕವಾಗಿ ಬ್ಯಾರಿಕೇಡ್ ನಿರ್ಮಿಸಿ ಆನೆ-ಮಾನವ ಸಂಘರ್ಷ ತಪ್ಪಿಸಬೇಕು ಎಂದರು. ಹಿರಿಯ ಅಧಿಕಾರಿಗಳು ಆಗಿಂದ್ದಾಗೇ ಕಾಡಿಗೆ ಭೇಟಿ…

Read More

ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ತೇಜೋವಧೆ ಮಾಡಿದ್ದು ಜಿಲ್ಲಾ ಪೊಲೀಸ್ ಸೈಬರ್ ಕ್ರೈಂ ಠಾಣೆ ಡಿವೈಎಸ್ಪಿ ಅವರಿಗೆ ದೂರು ನೀಡಲಾಗಿದ್ದು, ಎಫ್ಐಆರ್ ದಾಖಲಾಗಿದೆ. ರವಿರಾಜ್ ವಿ. ಹಿಂದೂ ಮತ್ತು ದರ್ಶನ್ ಪವರ್ ಎಂಬ ಹೆಸರಿನ ಫೇಸ್ ಬುಕ್ ಖಾತೆದಾರ ರಾಜ್ಯದ ತೋಟಗಾರಿಕ ಸಚಿವ ಎಸ್. ಎಸ್. ಮಲ್ಲಿಕಾರ್ಜನ್ ಅವರು ಈ ಹಿಂದೆ ಹಿಂದು ಮತ್ತು ಮುಸ್ಲಿಂ ಬಾಂಧವರು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುವಂತೆ ಮಾತನಾಡಿರುವ ವಿಡಿಯೋವನ್ನು ತಿರುಚಿರುವುದು ಕಂಡು ಬಂದಿದೆ. ರವಿರಾಜ್ ವಿ. ಹಿಂದೂ ಎಂಬವರು ಫೇಸ್ ಬುಕ್ ನಲ್ಲಿ. ತಮ್ಮ ಫೇಸ್ ಬುಕ್ ಖಾತೆಯಲಿ, ಎಸ್. ಎಸ್. ಮಲ್ಲಿಕಾರ್ಜುನ್ ಅವರು ಮಾತನಾಡಿರುವ ಭಾಷಣವನ್ನು ಎಡಿಟ್ ಮಾಡಿ, ಎಸ್. ಎಸ್. ಮಲ್ಲಿಕಾರ್ಜುನ್ ಮತ್ತು ಅವರ ತಂದೆಯ ಬಗ್ಗೆ, ಅವಹೇಳನಕಾರಿಯಾಗಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಫೇಸ್ ಬುಕ್ ನಲ್ಲೇ…

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಚಲಿಸುತ್ತಿದ್ದ ಬಸ್ನಲ್ಲಿ ಅಪ್ರಾಪ್ತ ಯುವತಿಗೆ ಚಾಲಕನೊಬ್ಬ ಕಿರುಕುಳ ನೀಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವಿಚಾರ ತಿಳಿದು ಚಾಲಕನಿಗೆ ಯುವತಿಯ ಪೋಷಕರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ನಲ್ಲಿ ಅಪ್ರಾಪ್ತೆ ಗೆ ಚಾಲಕ ಕಿರುಕುಳ ನೀಡಿದ್ದಾನೆ ಬಸ್ ಡ್ರೈವರ್ ಬಳಿ ಯುವತಿ ಮೊಬೈಲ್ ಚಾರ್ಜ್ ಗೆ ಹಾಕಿದ್ದಳು ಕಿಸ್ ಕೊಟ್ಟರೆ ಮೊಬೈಲ್ ಕೊಡುತ್ತೇನೆ ಅಂತ ಬಸ್ ಚಾಲಕ ಆರಿಫ್ ಹೇಳಿದ್ದಾನೆ. ಸ್ಪೇರ್ ಡ್ರೈವರ್ ಆರಿಫ್ ನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದೆ. ಈ ವಿಚಾರವಾಗಿ ಯುವತಿ ತನ್ನ ಅಣ್ಣನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾಳೆ.

Read More

ಚಿಕ್ಕಮಗಳೂರು : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದರಿಂದ ನಿನ್ನೆ ಸಿಟಿ ರವಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಎಂಎಲ್ಸಿ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ 14ನೇ ವಯಸ್ಸಿನಲ್ಲಿ ಮೊದಲ ಬಾರಿ ಆಗಿತ್ತು. ನಮ್ಮ ಸಹನೆಗೂ ಒಂದು ಮಿತಿ ಇದೆ. ನೀವು ನನ್ನ ಮೇಲೆ 100 ‘FIR’ ದಾಖಲಿಸಿದರು ಎದುರಿಸುತ್ತೇನೆ, ಯಾವುದಕ್ಕೂ ಹೆದರಲ್ಲ ಎಂದು ಕಿಡಿ ಕಾರಿದ್ದಾರೆ. ಚಿಕ್ಕಮಗಳೂರಲ್ಲಿ ಮಾತನಾಡಿದ ಅವರು, ಗಣಪತಿ ಮೆರವಣಿಗೆ ಮೇಲೆ ಕಲ್ಲು ಹೊಡೆದರೆ ಸುಮ್ಮನಿರಬೇಕಾ? ಪೆಟ್ರೋಲ್ ಬಾಂಬ್ ಹಾಕಿದ್ರೆ ನಾವು ಸುಮ್ಮನಿರಬೇಕಾ? ಪಾಕಿಸ್ತಾನ ಪರ ಘೋಷಣೆ ಕೂಗಿದರೆ ಸಹಿಸಿಕೊರುವ ಕಾಲ ಅಲ್ಲ. ತಾಳ್ಮೆ ಕಟ್ಟೆ ಹೊಡೆದಿರುವುದು ತೋರಿಸಲೆಂದೇ ಜನಾಕ್ರೋಶ. ಮಂಡ್ಯ ಜಿಲ್ಲೆ, ಮದ್ದೂರಿನಲ್ಲಿ ನಮ್ಮ ಸಂಘಟನೆ ಬಲವಾಗಿಲ್ಲ. ಆದರೂ ಹಿಂದು ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿದೆ. ನೀವು ಏನು ಮಾಡಿದರೂ ಸಹಿಸಿಕೊಳ್ಳುತ್ತೇವೆ ಎಂಬ ಕಾಲ ಮುಗಿದಿದೆ. ನೀವು 100 ಹಾಕಿದರೂ ನಾನು ಎದುರಿಸುತ್ತೇನೆ. ನನಗೆ ಯಾವುದೇ ಹೆದರಿಕೆ…

Read More

ಮೈಸೂರು : ಚಾಮುಂಡಿ ಬೆಟ್ಟದ ದೇವಿಕೆರೆ ಕಟ್ಟೆ ಹಾಗೂ ತಾವರೆಕಟ್ಟೆಯ ಜನವಸತಿ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದು, ನಿವಾಸಿಗಳು ಹಾಗೂ ಭಕ್ತರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ, ಚಾಮುಂಡಿ ಬೆಟ್ಟ ಗ್ರಾಮ ಹಾಗೂ ಇಲ್ಲಿನ ನಾಗರಿಕ ಬಂಧುಗಳಿಗೆ ಈ ಮೂಲಕ ತಿಳಿಸುವುದೇನೆಂದರೆ, ಇತ್ತೀಚೆಗೆ ಚಾಮುಂಡಿ ಬೆಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಚಲನವಲನಗಳು ಕಂಡುಬಂದಿರುವುದಾಗಿ ವರದಿಯಾಗಿದೆ. ಈ ವಿಷಯದ ಕುರಿತು ಅರಣ್ಯ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ. ಸಾಯಂಕಾಲ ಮತ್ತು ಬೆಳಗಿನ ಸಮಯದಲ್ಲಿ, ವಿಶೇಷವಾಗಿ ಕತ್ತಲಾದ ಮೇಲೆ ಒಂಟಿಯಾಗಿ ಹೊರಗೆ ಹೋಗಬೇಡಿ. ಚಾಮುಂಡಿ ಬೆಟ್ಟ ಮೀಸಲು ಅರಣ್ಯ ಪ್ರದೇಶದ ಸುತ್ತಳತೆ 17ಕಿ.ಮೀ ಇದ್ದು ಅದಕ್ಕೆ ನಾಲ್ಕು ಗೇಟ್‌ಗಳಿವೆ. ಹೊಸಹುಂಡಿಯಿಂದ ಚಾಮುಂಡಿಬೆಟ್ಟ ಗ್ರಾಮಕ್ಕೆ ಹೋಗುವ ಮುಖ್ಯರಸ್ತೆಯ ಸಂಚಾರವನ್ನು ಸಂಜೆ 6 ಗಂಟೆಯಿಂದ ಬೆಳ್ಳಗೆ 6 ರ ವರೆಗೆ ನಿಷೇಧಿಸಲಾಗಿದೆ. ಚಾಮುಂಡಿ ಬೆಟ್ಟದ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಚಿರತೆಯ ಸಂಚಾರವನ್ನು ಪತ್ತೆ…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಜೆಸ್ಕಾಂ ನಿರ್ಲಕ್ಷಕ್ಕೆ ಬಾಲಕನೊಬ್ಬ ಕೈ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. 11 ಕೆ.ವಿ ವಿದ್ಯುತ್ ವೈರ್ ತಗುಲಿ ಕೈ ಕಟ್ಟಾಗಿದೆ. ಮನೆ ಮೇಲೆ ಆಟವಾಡುವಾಗ ಕೈಯಲ್ಲಿದ್ದ ವೈರಿಗೆ ಟಚ್ ಆಗಿದೆ, ಬಳ್ಳಾರಿಯ ವಿರಾಟ್ ನಗರದಲ್ಲಿ ಒಂದು ಘಟನೆ ಸಂಭವಿಸಿದೆ. ಬಾಲಕನ ಕೈಯಲ್ಲಿದ್ದ ವೈರ್ ಗೆ ತಗುಲಿದ ವಿದ್ಯುತ್ ತಂತಿ ಶಾಕ್ ಹೊಡೆದ ತೀವ್ರತೆಗೆ ಬಾಲಕನ ಕೈ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ 11 ಕೆ.ವಿ ವೈರ್ ಗೆ ಪ್ಲಾಸ್ಟಿಕ್ ಹಾಕದೆ ನಿರ್ಲಕ್ಷ ತೊರಿದ್ದು ಅಪಾರ್ಟ್ಮೆಂಟ್ ಮಾಲಿಕ ಮತ್ತು ಜೆಸ್ಕಾಂ ಇಂಜಿನಿಯರ್ ಮೇಲೆ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.aa

Read More

ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಎಸ್. ನಾರಾಯಣ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದ್ದು ಎಸ್ ನಾರಾಯಣ ಅವರ ಸೊಸೆ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿ ಬೆಂಗಳೂರಿನ ಜ್ಞಾನ ಭಾರತಿ ಠಾಣೆಗೆ ದೂರು ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ಎಸ್ ನಾರಾಯಣ ಹಾಗೂ ಅವರ ಪತ್ನಿ, ಪುತ್ರನ ವಿರುದ್ಧ FIR ಸಹ ದಾಖಲಾಗಿದೆ. ಈ ವಿಚಾರವಾಗಿ ಎಸ್ ನಾರಾಯಣ ನನ್ನ ಮನೆಯ ಹೆಣ್ಣು ಮಕ್ಕಳು ದುಡಿಯುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್ ನಾರಾಯಣ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಅವರು ದುಡಿದು ನನ್ನ ಸಾಕಬೇಕಾ? ನನ್ನ ಬಳಿ ಎಂಟು ಜನ ಕೆಲಸದವರು ಇದ್ದಾರೆ ನಮ್ಮ ಸೊಸೆ ಪವಿತ್ರ ಮನೆ ಬಿಟ್ಟು ಹೋಗಿ 14 ತಿಂಗಳಾಯಿತು ವರದಕ್ಷಿಣೆ ಪಿಡುಗು ತೊಲಗಿಸಬೇಕು ಅಂತ ಸಿನಿಮಾ ಮಾಡಿದವನು ನಾನು ಎಂದರು. ಪವನ್ ಪವಿತ್ರ ಪ್ರೀತಿಸಿ ಮದುವೆಯಾಗಿದ್ದರು ನಾವು ಸಹ ಅದಕ್ಕೆ ವಿರೋಧ…

Read More

ತುಮಕೂರು : ಇತ್ತೀಚಿಗೆ ಸದನದಲ್ಲಿ ಡಿಕೆ ಶಿವಕುಮಾರ್ ಮೊನ್ನೆ ಮೊನ್ನೆ ಅಷ್ಟೇ RSS ಗೀತೆ ಹಾಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಈಗ ಗೃಹ ಸಚಿವ ಜಿ.ಪರಮೇಶ್ವರ್ ಅವರ ನಡೆ ಕೂಡ ಚರ್ಚೆಗೆ ಗ್ರಾಸವಾಗಿದ್ದು, ಎಬಿವಿಪಿ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ರಾಣಿ ಅಬ್ಬಕ್ಕದೇವಿ 500ನೇ ಜಯಂತಿ ಪ್ರಯುಕ್ತ ನಿನ್ನೆ ಪಂಜಿನ ಮೆರವಣಿಗೆ ನಡೆಸಲಾಗುತ್ತಿತ್ತು. ಈ ಕಾರ್ಯಕ್ರಮದಲ್ಲಿ ಜಿ. ಪರಮೇಶ್ವರ್ ಭಾಗಿಯಾಗಿದ್ದಾರೆ ಎನ್ನಲಾಗಿದೆ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ಪರಮೇಶ್ವರ್ ಭಾಗಿಯಾಗಿದ್ದಾರೆ. ರಾಣಿ ಅಬ್ಬಕ್ಕ ದೇವಿ 500ನೇ ಜಯಂತಿ ಪ್ರಯುಕ್ತ ರಥಯಾತ್ರೆ ನಡೆಸಲಾಗಿತ್ತು. ಈ ಒಂದು ಪಂಜಿನ ಮೆರವಣಿಗೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಇನ್ನು ಎಬಿವಿಪಿ ರಥಯಾತ್ರೆ ಕಾರ್ಯಕ್ರಮದಲ್ಲಿ ಪರಮೇಶ್ವರ ಭಾಗಿಯಾಗಿರುವ ವಿಚಾರವಾಗಿ ನಾನು ಯಾವುದೇ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ನಾನು ಬರುವ ದಾರಿಯಲ್ಲಿ…

Read More

ಬೆಂಗಳೂರು : ಜೈಲು ವಾರ್ಡನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಲಾಗುತ್ತಿದ್ದೂ, ತಂಬಾಕು, ಮಾದಕ ವಸ್ತು ಪೂರೈಸುತ್ತಿದ್ದ ವಾರ್ಡನ್ ಕಲ್ಲಪ್ಪ ಎನ್ನುವನನ್ನು ಅರೆಸ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರ ಠಾಣೆ ಪೊಲೀಸರಿಂದ ಆರೋಪಿ ಕಲ್ಲಪ್ಪನನ್ನ ಅರೆಸ್ಟ್ ಮಾಡಲಾಗಿದೆ.ಆರೋಪಿ ಕಲ್ಲಪ್ಪನನ್ನು ಬಂಧಿಸಿ 100 ಗ್ರಾಂ ಆಶಿಶ್ ಆಯಿಲ್ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ಕಲ್ಲಪ್ಪ ಮಾದಕ ವಸ್ತು ಕಾಶೀಶೈಲ್ ತಂಬಾಕು ಯಾರಿಂದ ಪಡೆಯುತ್ತಿದ್ದ ಹಾಗೂ ಜೈಲಿನಲ್ಲಿರುವ ಯಾವ ಕೈದಿಗಳಿಗೆ ಪೂರೈಕೆ ಮಾಡುತ್ತಿದ್ದ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 2018 ರಲ್ಲಿ ಕಾರಾಗೃಹದ ಇಲಾಖೆಗೆ ಸೇರಿದ ಕೆಲತಿಗಳಿಂದ ಸೆಪ್ಟೆಂಬರ್ 7 ರಂದು ಸಂಜೆ ಜೈಲಿನ ಪ್ರವೇಶ ದ್ವಾರದ ಬಳಿ ಕಲ್ಲಪ್ಪನನ್ನು ಪರಿಶೀಲನೆ ಮಾಡಲಾಯಿತು. ಡ್ಯೂಟಿಗೆ ಬರುವ ವೇಳೆ ಸಿಐಎಸ್ಎಫ್ ಸಿಬ್ಬಂದಿಗಳು ಕಳ್ಳಪ್ಪನನ್ನು ಪರಿಶೀಲನೆ ಮಾಡಿದ್ದಾರೆ, ಈ ವೇಳೆ ತಂಬಾಕು ಹಾಗು ಆಶಿಶ್ ಪತ್ತೆಯಾಗಿದೆ

Read More