Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ನಿನ್ನೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯಲ್ಸಿ ಸಿಟಿ ರವಿ ಅವರನ್ನು ಇದೀಗ ಬೆಳಗಾವಿಯ ಜೆಎಂಎಫ್ ಸಿ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೋರ್ಟ್ ಹಾಲ್ ನಲ್ಲಿ ಸಿಟಿ ರವಿ ಗಳಗಳನೆ ಅತ್ತ ಪ್ರಸಂಗ ನಡೆಯಿತು. ಕಣ್ಣೀರು ಹಾಕಿದ ಸಿ ಟಿ ರವಿ ಅವರಿಗೆ ಬಿಜೆಪಿ ನಾಯಕರು ಸಮಾಧಾನ ಹೇಳಿದರು. ಸಿಟಿ ರವಿಗೆ ವಿಪಕ್ಷ ನಾಯಕ ಆರ್ ಅಶೋಕ ದೈರ್ಯ ತುಂಬಿದರು. ಬಿಜೆಪಿ ನಾಯಕರು ಹಾಗೂ ವಕೀಲರು ನ್ಯಾಯಾಧೀಶರಿಗಾಗಿ ಕಾಯುತ್ತಿದ್ದಾರೆ. ಗಳಗಳನೆ ಅತ್ತ ಸಿಟಿ ರವಿ ಅವರಿಗೆ ಮಹೇಶ್ ತೆಂಗಿನ ಕಾಯಿ ಹಾಗೂ ಸುನಿಲ್ ಕುಮಾರ್ ಆತ್ಮಸ್ಥೈರ್ಯ ತುಂಬಿದರು. ಸಿಟಿ ರವಿ ಕೋರ್ಟ್ ಗೆ ಹಾಜರು ನಿನ್ನೆ ಸುವರ್ಣಸೌಧದಲ್ಲಿ ಕಲಾಪದ ಸಂದರ್ಭದಲ್ಲಿ ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆಗೆ ವಿರೋಧಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಬಿಜೆಪಿಯ ಸದಸ್ಯರು ಕೂಡ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ…
ಮಂಡ್ಯ : ಸದ್ಯ ರಾಜ್ಯ ರಾಜಕೀಯದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವಾಚ್ಯ ಪದ ಬಳಸಿದ್ದು ಭಾರಿ ಸದ್ದು ಮಾಡುತ್ತಿದ್ದು, ಈಗ ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಎಂಎಲ್ಸಿ ಸಿಟಿ ರವಿ ಅವರನ್ನು ಪೊಲೀಸರು ಹಾಜರುಪಡಿಸಿದ್ದಾರೆ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು ಯಾರಾದರೂ ಹೆಣ್ಣು ಮಕ್ಕಳಿಗೆ ಬೈದಿದ್ದನ್ನು ಒಪ್ಪಿಕೊಳ್ಳುತ್ತಾರಾ? ಎಂದು ಪ್ರಶ್ನಿಸಿದರು. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಯಾಕೆ ಆ ಪದಸಿದ್ದಾರೋ ನನಗೆ ಗೊತ್ತಿಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ ನನಗೆ ಅವಾಚ್ಯ ಪದ ಬಳಸಿದರು ಅಂತ. ಬೈದಿದ್ದು ನನಗೆ ಗೊತ್ತಿಲ್ಲ ಅಲ್ಲಿ ಬೇರೆಯವರು ಕೇಳಿದ್ದಾರೆ ಅಲ್ವ? ಆಡಿಯೋ ವಿಡಿಯೋ ಬಗ್ಗೆ ನನಗೆ ಗೊತ್ತಿಲ್ಲ. ಅಲ್ಲದೆ ಘಟನೆ ನಡೆದಾಗ ಹೊರಟ್ಟಿ ಅವರು ಇರಲಿಲ್ಲ ಎಂದು ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಒಬ್ಬ ಹೆಣ್ಣು ಮಗಳಿಗೆ ಅವಹೇಳನಕಾರಿಯಾಗಿ ಬೈದರೆ ತುಚ್ಚವಾಗಿ ಸಿಟಿ ರವಿ ಮಾತನಾಡಿದರೆ ಸಪೋರ್ಟ್ ಮಾಡುತ್ತಾರಾ? ಸಿಟಿ ರವಿ ಹೇಳಿಕೆ…
ಬೆಳಗಾವಿ : ನಿನ್ನೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯಲ್ಸಿ ಸಿಟಿ ರವಿ ಅವರನ್ನು ಇದೀಗ ಬೆಳಗಾವಿಯ ಜೆಎಂಎಫ್ ಸಿ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದರು. ಇತ್ತ ಇನ್ನೊಂದು ಕಡೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿ ನಿನ್ನೆ ಸಿ ಟಿ ರವಿ ಹೇಳಿದ್ದನ್ನು ಬಿಜೆಪಿಯ ಸದಸ್ಯರು ಕೇಳಿಸಿಕೊಂಡಿದ್ದರು. ಬಳಿಕ ನನ್ನ ಕಿವಿಯಲ್ಲಿ ಬಂದು sorry ಕೇಳಿದ್ದಾರೆ. ಸದನದಲ್ಲಿ ಬಿಜೆಪಿ ಸದಸ್ಯರು ಒಂತರ ಧೃತರಾಷ್ಟ್ರರಾದರು ಎಂದು ಕಣ್ಣೀರು ಹಾಕಿದರು. ನಿನ್ನೆ ನಡೆದ ಘಟನೆ ಕುರಿತಂತೆ ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು, ಸಿಟಿ ರವಿಯವರು ನನಗೆ 10 ಬಾರಿ ತೇಜೋವಧೆ ಮಾಡಿದರು. ಈ ವೇಳೆ ಬಿಜೆಪಿ ಸದಸ್ಯರು ಕೂಡ ಅವರು ಬಳಸಿದ ಪದವನ್ನು ಕೇಳಿಸಿಕೊಂಡಿದ್ದಾರೆ. ಆದರೆ ಬಹಿರಂಗವಾಗಿ ಯಾರು ಖಂಡಿಸಲೇ ಇಲ್ಲ ಸದನದಲ್ಲಿ ಬಿಜೆಪಿಯವರು ದೃತರಾಷ್ಟ್ರರಾದರು ಎಂದು ಸುದ್ದಿಗೋಷ್ಠಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಕಣ್ಣೀರು ಹಾಕಿದರು. ನನ್ನ ಪಕ್ಷ ನನ್ನ ಜೊತೆಗೆ…
ಮಹಾರಾಷ್ಟ್ರ : ಇತ್ತೀಚಿಗೆ ಚಿಕ್ಕ ಮಕ್ಕಳ ಕೈಯಲ್ಲಿ ಕೂಡ ಮೊಬೈಲ್ ಎನ್ನುವುದು ಆಟದ ಸಾಮಾನಿನಂತೆ ಆಗಿದೆ. ಕೆಲವು ಮಕ್ಕಳು ಅದರಿಂದ ಒಳ್ಳೆಯದನ್ನು ಕಲಿತರೆ, ಇನ್ನೂ ಕೆಲವು ಮಕ್ಕಳು ಅದರಿಂದ ಕೆಟ್ಟ ಅಭ್ಯಾಸಗಳನ್ನು ರೂಢಿಸಿಕೊಳ್ಳುತ್ತಿವೆ. ಇದೀಗ ಮಹಾರಾಷ್ಟ್ರದ ಪುಣೆಯಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. ಸಾಮಾಜಿಕ ಜಾಲತಾಣವನ್ನು ಮೊಬೈಲ್ನಲ್ಲಿ ನೋಡುತ್ತಿದ್ದ 9 ವರ್ಷದ ಬಾಲಕ ಅದರಲ್ಲಿ ಬರುವ ವಿಡಿಯೋಗಳಿಂದ ಪ್ರಭಾವಿತನಾಗಿ 3 ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಹೌದು ಈ ಒಂದು ಘಟನೆ ಕಳೆದ ಡಿಸೆಂಬರ್ 15ರಂದು ನಡೆದಿದೆ. ಆ ಹೆಣ್ಣು ಮಗು ತನ್ನ ಮನೆಯ ಬಳಿ ಒಬ್ಬಳೇ ಇದ್ದಾಗ ಲೈಂಗಿಕ ದೌರ್ಜನ್ಯ ನಡೆದಿದ್ದು, ಆಕೆ ತನ್ನ ತಾಯಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ. ತಾಯಿ ಪೊಲೀಸರಿಗೆ ಮಾಹಿತಿ ನೀಡಿದರು. 3ನೇ ತರಗತಿಯ ಬಾಲಕನ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಲ್ಲೆಗೆ ಸಂಬಂಧಿಸಿದ ಕೇಸ್ ದಾಖಲಿಸಲಾಗಿದೆ. ಆತ ಸೋಷಿಯಲ್ ಮೀಡಿಯಾದ ಪ್ರಭಾವದಿಂದ ಈ ರೀತಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಆರೋಪದ…
ಚಿಕ್ಕಮಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದೆ. ಹೀಗಾಗಿ ನಾಳೆ ಚಿಕ್ಕಮಗಳೂರು ನಗರ ಬಂದ್ ಮಾಡಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಈ ಕುರಿತು ಇಂದು ಸಿಟಿ ರವಿ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು ಸಭೆ ನಡೆಸಿದರು. ಸಭೆಯ ಬಳಿಕ ಬಂದ್ ಬಗ್ಗೆ ಬಿಜೆಪಿ ಮುಖಂಡರು ಖಚಿತಪಡಿಸಿದ್ದಾರೆ. ಇನ್ನೂ ಇದೆ ವಿಚಾರವಾಗಿ ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದು, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪರಿಷತ್ ಉಪನಾಯಕ ಅರವಿಂದ್ ಬೆಲ್ಲದ್ ಹಾಗೂ ಎಂಎಲ್ಸಿ ಎನ್ ರವಿ ಕುಮಾರ್ ಚರ್ಚೆ ಮಾಡಿದ್ದಾರೆ. ಸಿಟಿ ರವಿ ಬಂಧನಾ ಕುರಿತು ಎಲ್ಲಾ ಬಿಜೆಪಿ ಮುಖಂಡರು ಚರ್ಚಿಸಿದ್ದಾರೆ. ಬಳಿಕ ಸಿಟಿ ರವಿ ಭೇಟಿಗೆ ಎಲ್ಲಾ ನಾಯಕರು ಖಾನಾಪುರದತ್ತ ತೆರಳಿದರು.
BREAKING : ತುಮಕೂರಿನ ಸಿದ್ದಗಂಗಾ ಮಠಕ್ಕೆ ಕೊಟ್ಟಿದ್ದ ’70 ಲಕ್ಷ ರೂ.’ ವಿದ್ಯುತ್ ಬಿಲ್ ಮನ್ನಾ ಮಾಡಿದ ರಾಜ್ಯ ಸರ್ಕಾರ!
ತುಮಕೂರು : ರಾಜ್ಯ ಸರ್ಕಾರದಿಂದ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠಕ್ಕೆ ನೀರಾವರಿ ವಿದ್ಯುತ್ ಬಿಲ್ 70.31 ಲಕ್ಷ ರೂ. ನೀಡುವಂತೆ ನೊಟೀಸ್ ಜಾರಿ ಮಾಡಲಾಗಿತ್ತು.ಇದೀಗ ಸಿದ್ಧಗಂಗಾ ಮಠಕ್ಕೆ ನೀಡಲಾಗಿದ್ದ 70.31 ಲಕ್ಷ ರೂ. ನೀರಾವರಿ ವಿದ್ಯುತ್ ಬಿಲ್ ಅನ್ನು ಮನ್ನಾ ಮಾಡುವುದಾಗಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಘೋಷಿಸಿದ್ದಾರೆ. ಹೌದು ಈ ವಿಚಾರವಾಗಿ ಸಚಿವ ಎಂ ಬಿ ಪಾಟಿಲ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಿದ್ಧಗಂಗಾ ಮಠವು ಪ್ರತಿದಿನವೂ 10 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಅನ್ನ ದಾಸೋಹ ಶಿಕ್ಷಣ ನೀಡುತ್ತಾ ಬಂದಿದೆ. ಸರಕಾರ ಕೂಡ ಇದನ್ನು ಸಿಎಸ್ಆರ್ ರೀತಿಯಲ್ಲಿ ತನ್ನ ಸಾಮಾಜಿಕ ಜವಾಬ್ದಾರಿ ಎಂದು ಭಾವಿಸುತ್ತದೆ. ಮಠಕ್ಕೆ ನೋಟಿಸ್ ಕೊಟ್ಟಿದ್ದರೆ ಅದು ತಪ್ಪು. ಸಿದ್ಧಗಂಗಾ ಮಠವು ವಿಶ್ವದಲ್ಲೇ ಶ್ರೇಷ್ಠವಾದ ಮಠವಾಗಿದೆ. ಅಲ್ಲಿ ಜಾತ್ಯತೀತವಾಗಿ ಶಿಕ್ಷಣ ಕೊಡಲಾಗುತ್ತಿದೆ. ಮುಂದಿನ ದಿನಗಳಲ್ಲೂ ನೀರನ್ನು ಬಳಸಿಕೊಳ್ಳಲು ಮಠಕ್ಕೆ ಅನುಮತಿ ಕೊಡಲಾಗುವುದು ಎಂದು ಸ್ಪಷ್ಟಪಡಿಸಿದರು. ಮಠಕ್ಕೆ ವಿದ್ಯುತ್ ಬಿಲ್ ಪಾವತಿಗೆ ಪತ್ರ ನೀಡಿದ್ದು ತಪ್ಪಾಗಿದೆ. ಮಠಕ್ಕೆ ನೀರು ಬಳಸಿದ್ದರೂ…
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಚೆನ್ನಗಿರಿ ರಸ್ತೆಯಲ್ಲಿರುವ ರೈಸ್ ಮಿಲ್ ನಲ್ಲಿ ಬಾಯ್ಲರ್ ಸ್ಪೋಟಗೊಂಡು ಕಟ್ಟಡ ಕುಹಿತವಾಗಿದೆ ಈ ಒಂದು ಕಟ್ಟಡ ಕುಸಿತದಲ್ಲಿ ಹಲವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು ಚೆನ್ನಗಿರಿ ರಸ್ತೆಯಲ್ಲಿರುವ ಹೀಗೆ ಬಾಗಿಯಲ್ಲಿ ಇರುವಂತಹ ರೈಸ್ ಮಿಲ್ ನಲ್ಲಿ ಬೈಲರ್ ಸ್ಫೋಟಗೊಂಡು ಕಟ್ಟಡ ಕುಸಿದಿದೆ. ಈ ಒಂದು ಕಟ್ಟಡ ಕುಸಿತದಲ್ಲಿ ಐದಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಇನ್ನು ಅವಶೇಷಗಳ ಅಡಿ ಮತ್ತೋರ್ವ ವ್ಯಕ್ತಿ ಸಿಲುಕಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ರಕ್ಷಣಾ ಕಾರ್ಯಚರಣೆ ನಡೆಸಿದೆ.
ಗದಗ : ಗದಗದಲ್ಲಿ ಇಂದು ಘೋರ ದುರಂತ ಒಂದು ಸಂಭವಿಸಿದ್ದು, ನೀರಿನ ಟ್ಯಾಂಕರ್ ಒಂದು 2 ವರ್ಷದ ಮಗುವಿನ ಮೇಲೆ ಹರಿದ ಪರಿಣಾಮ, ಮಗು ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ, ಗದಗ ನಗರದ ಒಕ್ಕಲಗೇರಿ ಓಣಿಯ ರಾಚೋಟೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತ ಮಗುವನ್ನು ರೀದಾ ಸೊರಟೂರು (2) ಎಂದು ತಿಳಿದುಬಂದಿದೆ. ಮೃತ ಮಗುವಿನ ಸಬಂಧಿ ಮಹಿಳೆ ಸ್ಕೂಟಿ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರುಗಡೆ ನೀರಿನ ಟ್ಯಾಂಕರ್ ಬಂದಿದೆ. ಈ ವೇಳೆ ಸ್ಕೂಟಿಯನ್ನು ಪಕ್ಕಕ್ಕೆ ನಿಲ್ಲಿಸಿದ್ದಾಗ, ಆಯತಪ್ಪಿ ಮಗು ಪಕ್ಕಕ್ಕೆ ವಾಲಿದೆ. ಈ ವೇಳೆ ಸಡನ್ ಆಗಿ ಬಂದ ಟ್ಯಾಂಕರ್ ಮಗುವಿನ ಮೇಲೆ ಹರಿದಿದೆ. ಮಗು ಸ್ಥಳದಲ್ಲಿ ಸಾವನ್ನಪ್ಪಿದೆ.ಘಟನೆಯು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನೀರಿನ ಟ್ಯಾಂಕರ್ ನ ಹಿಂಬದಿ ಚಕ್ರಕ್ಕೆ ಮಗುವಿನ ತಲೆಬುರುಡೆ ಸಿಕ್ಕು ಅಪ್ಪಚ್ಚಿಯಾಗಿ ಸ್ಥಳದಲ್ಲೇ ಮಗು ಸಾವನ್ನಪ್ಪಿದೆ.ಕಣ್ಣೆದುರಿಗೆ ತನ್ನ ಕಂದಮ್ಮ ಬಲಿಯಾದ ದೃಶ್ಯ ನೋಡಿದ ಬೈಕ್ ಚಲಾಯಿಸುತ್ತಿದ್ದ ಮಗುವಿನ ಸಂಬಂಧಿ ಮಗುವನ್ನ ಎತ್ತಿಕೊಂಡು ಗೋಳಾಟ ನಡೆಸಿದ್ದಾಳೆ.ಬಳಿಕ ಸ್ಥಳೀಯರು ಪೊಲೀಸರಿಗೆ…
ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಕಲಾಪದ ವೇಳೆ ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅವಾಚ್ಯ ಪದ ಬಳಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಸಿಟಿ ರವಿ ಅವರ ವಿರುದ್ಧ ದೂರು ನೀಡಿದ್ದರು. ಹೀಗಾಗಿ ಸಿಟಿ ರವಿ ಅವರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದಾದ ಬಳಿಕ ಸುವರ್ಣ ಸೌಧದಿಂದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಈ ಕುರಿದಂತೆ ನಾನು ನಾಳೆ ಮಾತನಾಡುತ್ತೇನೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕಣ್ಣೀರು ಹಾಕುತ್ತಲೇ ಭಾವುಕರಾಗಿ ಉತ್ತರಿಸಿದರು.
ಬೆಳಗಾವಿ : ಇಂದು ಬೆಳಗಾವಿಯ ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಎಂಎಲ್ಸಿ ಸಿಟಿ ರವಿ ವಿರುದ್ಧ ದೂರು ಸಲ್ಲಿಸಿದ್ದು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಇದೀಗ ಬಿಜೆಪಿ MLC ಸಿಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಕುರಿತಂತೆ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್…