Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಮೇಲಿಂದ ಬಾಲಕಿಯೊಬ್ಬಳು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಕಟ್ಟಡದಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಟ್ಟಡದ 29ನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹುಳಿಮಾವು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಬೇಗೂರು ಬಳಿ ಇರುವ ಅಪಾರ್ಟ್ಮೆಂಟಲ್ಲಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಅಪಾರ್ಟ್ಮೆಂಟ್ ನಲ್ಲಿ ಬಾಲಕಿ ಅಪ್ಪ ಅಮ್ಮನ ಜೊತೆಯಲ್ಲಿ ಇದ್ದಳು. ಆದರೆ ಬಾಲಕಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಹುಳಿಮಾವು ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಕೇಸ್ ದಾಖಲಾಗಿದೆ
ಬೆಂಗಳೂರು : ಈಗಾಗಲೇ ಹೈಕಮಾಂಡ್ ಅಂಗಳಕ್ಕೆ ನಿಗಮ ಮಂಡಳಿ ಚೆಂಡು ತಲುಪಿದ್ದು, ಆದರೂ ಪಟ್ಟಿ ಬಿಡುಗಡೆಗೆ ವಿಳಂಬ ಮಾಡಲಾಗುತ್ತಿದೆ. ನಿಗಮ ಮಂಡಳಿ ನೇಮಕ ವಿಚಾರ ಕುರಿತಂತೆ ಕಾಂಗ್ರೆಸ್ ನಲ್ಲಿ ಇನ್ನೂ ಗೊಂದಲ ಬಗೆ ಹರಿಯುವಂತೆ ಕಾಣುತ್ತಿಲ್ಲ. ಏಕೆಂದರೆ ಸಿಎಂ ಹಾಗೂ ಡಿಸಿಎಂ ನಡುವೆ ಈ ಕುರಿತಂತೆ ಜಟಾಪಟಿ ನಡೆಯುತ್ತಿದ್ದು ಕೆ ಸಿ ವೇಣುಗೋಪಾಲ್ ಪಟ್ಟಿ ಬಿಡುಗಡೆಗೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಇದರಿಂದ ಸಿಎಂ ಡಿಸಿಎಂ ಬೇಸರ ವ್ಯಕ್ತಪಡಿಸಿದ್ದು, ಗೊಂದಲ ಬಗೆಹರಿಸಲು ಜನವರಿ 26ರಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಈ ಹಿನೆಲೆಯಲ್ಲಿ ಜನವರಿ 26ರಂದು AICC ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಂದು ಖರ್ಗೆ ಅವರ ಉಪಸ್ಥಿತಿಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ರಾಜಕೀಯ ನಾಯಕರು ಸಿಎಂ ಹಾಗೂ ಡಿಸಿ ಮಧ್ಯೆ ಚಿಟಾಪಟಿ ನಡೆಯುತ್ತಿದ್ದು ಹೈಕಮಾಂಡ್ ಪಟ್ಟಿಗೆ ಗ್ರೀನ್…
ಚಿಕ್ಕಮಗಳೂರು : ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ಧ ಪುರಾತನ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್ ಅವರಿಗೆ ವೇತನ ಹಿಂತಿರುಗಿಸುವಂತೆ ಜಿಲ್ಲಾಡಳಿತ ನೋಟಿಸ್ ನೀಡಿತ್ತು. ಇದೀಗ, ಈ ನೋಟಿಸ್ ಹಿಂಪಡೆಯುವುದಾಗಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ, ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡುವುದಾಗಿ ತಿಳಿಸಿದರು. ಸ್ಥಳೀಯ ತಹಶೀಲ್ದಾರ್ ಅವರ ತಪ್ಪು ತೀರ್ಮಾನದಿಂದ ನೋಟಿಸ್ ಜಾರಿಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಕಳೆದ 10 ವರ್ಷಗಳಿಂದ ಕಣ್ಣನ್ಗೆ ನಿಗದಿಗಿಂತ ಹೆಚ್ಚುವರಿಯಾಗಿ ಗೌರವಧನ ಪಾವತಿಯಾಗಿದೆ. ಆಡಿಟಿಂಗ್ ಸಮಸ್ಯೆ ಆಗಬಾರದೆಂಬ ಕಾರಣಕ್ಕೆ 4.74 ಲಕ್ಷ ರೂ.ಗಳನ್ನು ದೇವಾಲಯದ ಖಾತೆಗೆ ಮರುಪಾವತಿಸುವಂತೆ ಸೂಚಿಸಲಾಗಿದೆ ಎನ್ನುವುದು ತಹಸೀಲ್ದಾರ್ ಸಮಜಾಯಿಷಿ. 2017ಕ್ಕಿಂತ ಮೊದಲು ಮಾಸಿಕ 2 ಸಾವಿರ ರೂ. ಗೌರವಧನ ನಿಗದಿಪಡಿಸಲಾಗಿತ್ತು. 2017ರಿಂದ ಗೌರವ ಧನವನ್ನು…
ಬೆಂಗಳೂರು : ಟ್ಯೂಷನ್ ಗೆ ಹೋಗಿ ಬರುತ್ತೇನೆ ಎಂದು ಹೇಳಿ ನಾಪತ್ತೆಯಾಗಿದ್ದ ಬಾಲಕ ಇದೀಗ ಹೈದರಾಬಾದ್ ನಲ್ಲಿ ಪತ್ತೆಯಾಗಿದ್ದಾನೆ ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಬಾಲಕ ಇದೀಗ ಹೈದರಾಬಾದ್ ನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಪರಿಣವ (12) ವರ್ಷದ ಬಾಲಕ ನಿನ್ನೆ ಬೆಂಗಳೂರಿಗೆ ನಂದನಪತೆಯಾಗಿದ್ದ. ಟ್ಯೂಷನ್ಗೆ ತೆರಳಿದ್ದ 12 ವರ್ಷದ ಬಾಲಕ ನಿಗೂಢವಾಗಿ ನಾಪತ್ತೆ ಆಗಿರುವಂತಹ ಘಟನೆ ನಗದರಲ್ಲಿ ನಡೆದಿತ್ತು. ವಿಜಯನಗರದ ಸುಖೇಶ್, ನಿವೇದಿತಾ ದಂಪತಿ ಪುತ್ರ ಪರಿನವ್ ನಾಪತ್ತೆ ಆದ ಬಾಲಕ. ಗುಂಜೂರಿನ ಡೆನ್ ಅಕಾಡೆಮಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಪರಿನವ್, ಭಾನುವಾರ ಮಧ್ಯಾಹ್ನ 12.15ರ ಸುಮಾರಿಗೆ ನಾಪತ್ತೆ ಆಗಿದ್ದ. ವೈಟ್ಫೀಲ್ಡ್ನ ಅಲೆನ್ ಟೂಷನ್ ಸೆಂಟರ್ಗೆ ತಂದೆ ಡ್ರಾಪ್ ಮಾಡಿದ್ದಾರೆ. ಮಧ್ಯಾಹ್ನ ಕರೆತರಲು ಹೋಗುವುದು ತಡವಾಗಿದ್ದರಿಂದ ನಾಪತ್ತೆ ಆಗಿದ್ದ. ಟ್ಯೂಷನ್ ಸೆಂಟರ್ನಿಂದ ಮಾರತ್ತಹಳ್ಳಿವರೆಗೆ ಬಾಲಕ ನಡೆದುಬಂದಿದ್ದು, ನಂತರ ಬಿಎಂಟಿಸಿ ಬಸ್ ಹತ್ತಿರುವ ಸಿಸಿಕ್ಯಾಮರಾ ದೃಶ್ಯ ಲಭ್ಯವಾಗಿತ್ತು. ಆನಂತರ ಬಾಲಕ ಪರಿನವ್ ಎಲ್ಲಿ ಹೋದನೆಂದು ಈವರೆಗೂ ಪತ್ತೆಯಾಗಿಲ್ಲ. ಬಾಲಕ ನಾಪತ್ತೆ ಬಗ್ಗೆ ವೈಟ್ಫೀಲ್ಡ್…
ಬೆಂಗಳೂರು : ಬೆಂಗಳೂರಿನ ನಾಲ್ಕು ವರ್ಷದ ಬಾಲಕಿಯ ಅಮೇರಿಕನ್ ಪಿಟ್ ಬುಲ್ ಭೀಕರವಾಗಿ ದಾಳಿ ನಡೆಸಿರುವ ಘಟನೆ ನಡೆದಿದ್ದು ಅಮೆರಿಕನ್ ಪಿಟ್ ಬುಲ್ ನಾಯಿಂದ ಬಾಲಕಿ ಮೇಲೆ ಭೀಕರ ದಾಳಿ ನಡೆದಿದೆ. ಜನವರಿ 13 ರಂದು ಬೆಂಗಳೂರಿನ ಸಂಜಯ್ ನಗರದಲ್ಲಿ ಘಟನೆ ನಡೆದಿದೆ.ನೇಪಾಳ ಮೂಲದ ಸಾನಿಯಾಗೆ ಪಿಟ್ ಬುಲ್ ನಾಯಿ ದಾಳಿ ಮಾಡಿದರಿಂದ 4 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ವೇಳೆ ತಕ್ಷಣ ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಲೀಕರ ಮನೆಗೆ ಮಗಳನ್ನು ಕರೆದೊಯ್ದಿದ್ದಾಗ ಬಾಲಕಿಯ ಮೇಲೆ ನಾಯಿ ದಾಳಿ ನಡೆಸಿದೆ.ಎಂದು ತಿಳಿದುಬಂದಿದ್ದು, ಈ ಕುರಿತಂತೆ ಪೊಲೀಸರಿಂದ ಬಾಲಕಿ ತಂದೆ ಸುನಿಲ್ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾಲೀಕರು ವಿರುದ್ಧ ತಂದೆ ಸುನಿಲ್ ದೂರು ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ನನ್ನ ಮಗಳ ಮೇಲೆ ಅವ್ರ ನಾಯಿ ದಾಳಿ ಮಾಡಿದೆ ಈಗ ಅವರೇ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಒಂದು ವೇಳೆ ದೂರು ಕೊಟ್ಟರೆ ಮುಂದೆ ನನ್ನ ಮಗಳ ಗತಿ ಏನೂ? ನನ್ನ…
ಮೈಸೂರು : ಮೈಸೂರಿನ ಕಾವೇರಿ ನಗರದ ಬದಾಮಿನ ಮೇಲೆ ಸಿಸಿಬಿ ದಾಳಿ ನಡೆಸಿದ್ದು ಮಹದೇವಪುರ ಮುಖ್ಯ ರಸ್ತೆಯ ಕಾವೇರಿ ನಗರದ ಗೋದಾಮಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಸಿಸಿಬಿ ಪೊಲೀಸರಿಂದ ಗಾಯ ಮಾರುತಿದ್ದ ಇಬ್ಬರನ್ನು ಬಂಧಿಸಿದ್ದಾರೆ 20.19 ಲಕ್ಷ ಮೌಲ್ಯದ 57 ಕೆಜಿ 700 ಗ್ರಾಂ ಮೌಲ್ಯದ ಗಾಂಜಾವನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳು ಗೋದಾಮಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳು ತಕ್ಷಣ ಗೋದಮಿನ ಮೇಲೆ ದಾಳಿ ಮಾಡಿದ್ದಾರೆ.ಈ ವೇಳೆ ಆಸಿಮ್ ನದೀಮ್ ಸೆರೆಯಾಗಿದ್ದು ಮತ್ತೊಬ್ಬ ಆರೋಪಿ ಫರ್ಜು ಎನ್ನುವ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಉಡುಪಿ : ಮಥುರಾದ ಶ್ರೀ ಕೃಷ್ಣ ದೇವಸ್ಥಾನ ವಿಮೋಚನಾ ವಿಚಾರವಾಗಿ ಉಡುಪಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಸಿಟಿ ರವಿ ಮಾತನಾಡಿದ್ದು ಅತಿಕ್ರಮಣ ಜಾಗದಲ್ಲಿ ನಮಾಜ್ ಮಾಡಿದರೆ ಅದು ಹರಾಮಾಗುತ್ತದೆ ಇದನ್ನು ಸ್ವತಃ ಸಜ್ಜನ ಮುಸಲ್ಮಾನರೆ ಹೇಳುತ್ತಾರೆ ಎಂದು ಸಿಟಿ ರವಿ ತಿಳಿಸಿದರು. ಜ್ಞಾನವಾಪಿಯ ನಂದಿ ಕಾಶಿಯ ಪುನೂರುಥಾನಕ್ಕೆ ಕಾಯುತ್ತಿದ್ದಾನೆ. ಹಿಂದಿನವರು ಮಾಡಿದ ತಪ್ಪಿಗೆ ಪ್ರಾಯಶ್ಚಿತ ಮಾಡಲು ಇದೀಗ ಅವಕಾಶವಿದೆ.ರಾಮ ಕಾಲ್ಪನಿಕ ಅಂದವರು ರಾಮನಾಮ ಜಪ ಆರಂಭಿಸಿದ್ದಾರೆ.ರಾಮ ಕೃಷ್ಣ ಶಿವನ ಜೊತೆ ಮುಸಲ್ಮಾನರು ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಉಡುಪಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಸಿಟಿ ರವಿ ಹೇಳಿಕೆ ನೀಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಅಯೋಧ್ಯೆಯಲ್ಲಿ ಐತಿಹಾಸಿಕ ಕ್ಷಣ ಎಂದೇ ಹೇಳಲಾಗುತ್ತಿರುವ ನೂತನವಾಗಿ ನಿರ್ಮಾಣವಾಗಿರುವ ರಾಮಂದಿರದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು ಅಲ್ಲದೆ ಇಡೀ ದೇಶದ ಜನತೆಯ ಕೂಡ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದ್ದಕ್ಕೆ ಹರ್ಷ ವ್ಯಕ್ತಪಡಿಸಿದೆ.
ಹೊಸದಿಲ್ಲಿ : ಲೋಕಸಭೆ ಚುನಾವಣೆ-2024ಕ್ಕೆ ಇಷ್ಟರಲ್ಲಿಯೇ ದಿನಾಂಕ ಘೋಷಿಸಲಾಗುತ್ತದೆ ಎಂದು ಸುದ್ದಿ ಹರಡುತ್ತಿರುವ ಬೆನ್ನಲ್ಲಿಯೇ, ಮಹತ್ವದ ಸಂದೇಶವೊಂದನ್ನು ಚುನಾವಣಾ ಆಯೋಗತನ್ನ ಎಕ್ಸ್ ಹ್ಯಾಂಡಲ್ನಲ್ಲಿ ಹರಿಬಿಟ್ಟಿದೆ.ಸಾಮಾಜಿಕ ಜಾಲತಾಣದಲ್ಲಿನ ವೈರಲ್ ವಿಚಾರಕ್ಕೆ ಆಯೋಗ ಇದೀಗ ಸ್ಪಷ್ಟನೆ ನೀಡಿದೆ. ಲೋಕಸಭಾ ಚುನಾವಣೆ ದಿನಾಂಕದ ವಿಡಿಯೋ ವೈರಲ್ ವಿಚಾರವಾಗಿ ಇದು ಕೇವಲ ಟಿಪ್ಪಣಿ ಮಾತ್ರ ಅಂತಿಮ ದಿನಾಂಕವಲ್ಲ ಎಂದು ಚುನಾವಣಾ ಆಯೋಗದ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿನ ವೈರಲ್ ವಿಚಾರಕ್ಕೆ ಆಯೋಗ ಇದೀಗ ಸ್ಪಷ್ಟನೆ ನೀಡಿದೆ. ಏಪ್ರಿಲ್ 16ನ್ನು ಲೋಕಸಭೆ ಚುನಾವಣೆ ಮತದಾನದ ಹಂತಗಳ ಆರಂಭದ ದಿನಾಂಕ ಎಂದು ನಿಗದಿಪಡಿಸಲಾಗಿದೆಯೇ? ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಕೆಲವು ಮಾಧ್ಯಮಗಳು ನಮ್ಮನ್ನು ಸಂಪರ್ಕಿಸಿವೆ. ಏಪ್ರಿಲ್ 16 ಚುನಾವಣಾ ಆಯೋಗದ ಅಧಿಕಾರಿಗಳು ಮುಂದಿನ ಕಾರ್ಯಯೋಜನೆಯನ್ನು ರೂಪಿಸಲು ಪರಿಶೀಲನೆಗಾಗಿ ಈ ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ ಎಂದು ಚುನಾವಣಾ ಆಯೋಗ ಎಕ್ಸ್ನಲ್ಲಿ ಸ್ಪಷ್ಟನೆ ನೀಡಿದೆ. ಅದರ ಪ್ರಕಾರ, ಪರಿಶೀಲನೆʼಗಾಗಿ ದಿನಾಂಕವೊಂದನ್ನು ತಾತ್ಕಾಲಿಕವಾಗಿ ನಿಗದಿಪಡಿಸಿರುವುದಾಗಿ ತಿಳಿಸಿದೆ. ಆ ದಿನಾಂಕ ಏಪ್ರಿಲ್ 16. ಆಯೋಗದ ಪ್ರಕಾರ…
ಹೊಸದಿಲ್ಲಿ: 2023ರ ಡಿ.13 ರಂದು ಸಂಸತ್ ಭವನದಲ್ಲಿ ಸಂಭವಿಸಿದ್ದ ಭದ್ರತಾ ವೈಫಲ್ಯ ಹಿನ್ನಲೆಯಲ್ಲಿ ಮುಂಬರುವ ಬಜೆಟ್ ಅಧಿವೇಶನದ ವೇಳೆ ಸಂಸತ್ಗೆ ವಿಮಾನ ನಿಲ್ದಾಣದ ಮಾದರಿಯಲ್ಲಿ ಹೊಸ ಮಾದರಿಯ ಭದ್ರತೆ ಒದಗಿಸಲಾಗಿದೆ.ಇದರ ಪ್ರಯುಕ್ತ ಕೇಂದ್ರ ಸರ್ಕಾರವು 140 CISF ಸಿಬ್ಬಂದಿ ನಿಯೋಜನೆ ಮಾಡಿದ್ದೂ, ಬ್ಯಾಗ್ ಮತ್ತಿತರ ವಸ್ತುಗಳ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. 2023ರ ಡಿ.13 ರಂದು ಸಂಸತ್ ಭವನದಲ್ಲಿ ಸಂಭವಿಸಿದ್ದ ಭದ್ರತಾ ವೈಫಲ್ಯ ಹಿನ್ನಲೆಯಲ್ಲಿ ಮುಂಬರುವ ಬಜೆಟ್ ಅಧಿವೇಶದ ವೇಳೆ ಅಹಿತಕರ ಘಟನೆ ತಡೆಯಲು ಸಂದರ್ಶಕರು ತರುವ ಬ್ಯಾಗ್ ಮತ್ತಿತರ ವಸ್ತುಗಳನ್ನು ಪರಿಶೀಲಿಸಲು ಕೇಂದ್ರೀಯ ಭದ್ರತಾ ಪಡೆಯ (ಸಿಐಎಸ್ಎಫ್) 140 ಯೋಧರನ್ನು ನಿಯೋಜಿಸಲಾಗಿದೆ. ಅಲ್ಲದೇ ಏರ್ಪೋರ್ಟ್ ಮಾದರಿಯ ಭದ್ರತೆ ನೀಡಲು ಗೃಹ ಸಚಿವಾಲಯ ಸೂಚಿಸಿದ್ದು, ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಪರೀಕ್ಷಿಸಿದಂತೆ ಸಂಸತ್ ಭವನಕ್ಕೆ ಬರುವ ಸಂದರ್ಶನಕರನ್ನು ಸಿಐಎಸ್ ಎಫ್ ಪರೀಕ್ಷೆಗೆ ಒಳಪಡಿಸಲಿದೆ.ಸಂಸತ್ ಭವನಕ್ಕೆ ಆಗಮಿಸುವ ಸಂದರ್ಶಕರನ್ನು ಎಕ್ಸ್-ರೇ ಸ್ಕ್ಯಾನ್ ಮಷಿನ್ ಮೂಲಕ ಪರೀಕ್ಷಿಸಲಾಗುತ್ತದೆ. ಪ್ರತಿಯೊಬ್ಬರ ಶೂ, ಬೆಲ್ಟ್, ಜಾಕೆಟ್ ಮೊದಲಾದ…
ಬೆಂಗಳೂರು: ಎಐಸಿಸಿ ಅಧ್ಯಕ್ಷರ ಜತೆ ಚರ್ಚಿಸಿ ಮುಂದೂಡಿಕೆಯಾಗಿರುವ ಮಂಗಳೂರಿನಲ್ಲಿ ನಡೆಯಬೇಕಿರುವ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶಕ್ಕೆ ಹೊಸ ದಿನಾಂಕ ನಿಗದಿಪಡಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದಅವರು,ಮಂಗಳೂರಿನಲ್ಲಿಜ.21ಕ್ಕೆ ನಡೆಯಬೇಕಿದ್ದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಮುಂದೂಡಲಾಗಿದೆ. ಜ.26ರಂದು ಗಣರಾಜ್ಯೋತ್ಸವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಧ್ವಜಾರೋಹಣಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ಅವರೊಂದಿಗೆ ಚರ್ಚಿಸಿ ಕಾರ್ಯಕರ್ತರ ಸಮಾವೇಶಕ್ಕೆ ಬದಲೀ ದಿನಾಂಕ ಪ್ರಕಟಿಸಲಾಗುವುದು ಎಂದರು. ಪುಟ್ಟಣ್ಣ ಮೇಲ್ಮನೆ ಅಭ್ಯರ್ಥಿಯಾಗಿದ್ದಾರೆರಾಜ್ಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಪುಟ್ಟಣ್ಣ ನಮ್ಮ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ. ನಮ್ಮ ಅಭ್ಯರ್ಥಿ ಗೆಲ್ಲುವಂತೆ ಕಾರ್ಯಕರ್ತರು ಮಾಡಬೇಕು. ಲೋಕಸಭೆ ಚುನಾವಣೆ ನಂತರ ಪಾಲಿಕೆ ಹಾಗೂ ಇತರೆ ಚುನಾವಣೆ ನಡೆಯುತ್ತವೆ. ಕಾರ್ಯಕರ್ತರು, ಮುಖಂಡರ ಸಂಘಟನೆ ನೋಡಿ ಪಾಲಿಕೆ ಚುನಾವಣೆಯಲ್ಲಿ ಅವಕಾಶ ನೀಡಲಾಗುವುದು ಎಂದರು.