Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು ಆಕಸ್ಮಿಕ ಬೆಂಕಿ ತಗುಲೋ ಪ್ಲಾಸ್ಟಿಕ್ ಗೋಡೌನ್ ಒಂದು ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ.ಇಂದು ಬೆಳಿಗ್ಗೆ 4 ಗಂಟೆಯ ಸುಮಾರಿಗೆ ಆಕಸ್ಮಿಕ ಬೆಂಕಿ ತಗುಲಿ ಘಟನೆ ನಡೆದಿದೆ. ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೊಸಕೋಟೆ ತಾಲೂಕಿನ ಪಿಳ್ಳಗುಂಟೆ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇಡೀ ಪ್ಲಾಸ್ಟಿಕ್ ಗೋಡೌನ್ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ವರದಿಯಾಗಿದೆ. ಆದರೆ ಘಟನೆಯಲ್ಲಿ ಯಾವುದೇ ಸಾವನವ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ನೆಲಮಂಗಲ : ಕಳೆದ ಕೆಲವು ದಿನಗಳ ಹಿಂದೆ ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದು ದುರಂತ ನಡೆದಿತ್ತು. ಇದೀಗ ಮನೆಯ ಬಳಿ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರು ಹರಿದ ಪರಿಣಾಮ ಬಾಲಕ ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ನಗರದಲ್ಲಿ ನಡೆದಿದೆ. ಎರ್ಟಿಗಾ ಕಾರು ಚಾಲಕನ ಬೇಜವಾಬ್ದಾರಿತನದ ರೀತಿಯಲ್ಲಿ ಕಾರು ಚಾಲನೆ ಮಾಡಿ ಬಾಲಕನ ಮೇಲೆ ಕಾರನ್ನು ಚಲಾಯಿಸಿದ್ದಾನೆ. ಇನ್ನೂ ಅದೃಷ್ಟವಶಾತ್ ಬಾಲಕ ಪವಾಡ ಸದೃಶ್ಯದಂತೆ ಪಾರಾಗಿದ್ದಾನೆ. ಇನ್ನೂ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರು ಹರಿಯುತ್ತಿದ್ದಂತೆ ಬಾಲಕನ ಚೀರಾಟ ಕಂಡು ಮನೆಯಿಂದ ಜನರು ಓಡಿ ಬಂದಿದ್ದಾರೆ. ಬಾಲಕನ ಮೇಲೆ ಕಾರು ಹರಿಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಮೂರು ವರ್ಷದ ದಕ್ಷಿತ್ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಾಲಕನ ತಲೆ, ಮುಖ, ಬೆನ್ನಿನ ಮೇಲೆ ಕಾರು ಹರಿದಿದೆ. ಮಾರುತಿ ಎರ್ಟಿಗಾ ಕಾರು ತಿರುವಿನಲ್ಲಿ ವೇಗವಾಗಿ ಬಂದು ಮಗುವಿನ ಮೇಲೆ ಹರಿದಿದ್ದು, ಗಂಭೀರವಾಗಿ ಗಾಯಗೊಂಡ…
ಬೆಂಗಳೂರು : ದಿತ್ವಾ ಚಂಡಮಾರುತದಿಂದ ಕರ್ನಾಟಕದಲ್ಲೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡದೆ.ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಬೆಂಗಳೂರು, ಯಾದಗಿರಿ ರಾಯಚೂರು, ಕೊಪ್ಪಳದಾಳಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಯಲ್ಲಿ ಮಳೆ ಆಗೋ ಸಾಧ್ಯತೆ ಇದೆ. ಅಲ್ಲದೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಉತ್ತರಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್ಜ್ ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್ : ಬೀದರ್ ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಡಿಶಾ ಮೂಲದ ಪಿಕಪ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದಾಗ, ಹೈದ್ರಾಬಾದ್ ನಿಂದ ಸೊಲ್ಲಾಪುರಕ್ಕೆ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ 6.60 ಕೋಟಿ ಗಾಂಜಾ ಜಪ್ತಿ ಮಾಡಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಸಮೀಪ ದಾಳಿ ನಡೆಸಿದ್ದಾರೆ. ಬಸವಕಲ್ಯಾಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ 6.60 ಕೋಟಿ ರೂ. ಮೌಲ್ಯದ 660 ಕೆಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು, ಮಹಾರಾಷ್ಟ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರು : ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರಿಗೆ ಲ್ಯಾಪ್ಟಾಪ್ ನೀಡುವ ಮೂಲಕ ಶೇ.100 ರಷ್ಟು ಇಲಾಖೆಯ ಎಲ್ಲಾ ಕೆಲಸಗಳನ್ನು ಆನ್ಲೈನ್ ಅಡಿಯಲ್ಲಿ ತರಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಶನಿವಾರ ವಿಕಾಸಸೌಧದಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಸಭೆ ಸಂಬಂಧ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಆಡಳಿತದಲ್ಲಿ ಪಾರದರ್ಶಕತೆ ತರಬೇಕು. ಸಚಿವರಿಂದ ವಿಎ ವರೆಗೂ ಎಲ್ಲರೂ ಇ-ಆಫೀಸ್ ಮೂಲಕವೇ ಕೆಲಸ ಮಾಡಬೇಕು. ಕಾಗದ ವ್ಯವಹಾರಕ್ಕೆ ಇತಿಶ್ರೀ ಹಾಡಬೇಕು ಎಂಬ ಏಕೈಕ ಕಾರಣಕ್ಕೆ ಕ್ಯಾಬಿನೆಟ್ ಅನುಮತಿಯೊಂದಿಗೆ ಈಗಾಗಲೇ 5000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟಾಪ್ ನೀಡಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರಿಗೆ (ಆರ್ಐ) ಲ್ಯಾಪ್ಟಾಪ್ ನೀಡುವ ಶೇ.100 ರಷ್ಟು ಇಲಾಖೆಯ ಎಲ್ಲಾ ಕೆಲಸಗಳನ್ನು ಆನ್ಲೈನ್ ಅಡಿಯಲ್ಲಿ ತರಲಾಗುವುದು ಎಂದರು.
ಉತ್ತರಕನ್ನಡ : ಉತ್ತರ ಕನ್ನಡದ ಕುಮಟಾ ತಾಲೂಕಿನ ಗೋಕರ್ಣ ಕಡಲತೀರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆಯ ಶಿಕ್ಷಕ ಹಾಗೂ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಲೈಫ್ ಗಾರ್ಡ್ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ರಕ್ಷಣೆ ಮಾಡಿದ್ದಾರೆ. ಸದ್ಯ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ನಿಯಾಜ್(15), ಮೊಹಮ್ಮದ್ ಜಿಲಾಲ್(15), ಆಕಾಶ್(15) ಸೇರಿ ಇನ್ನೋರ್ವನ ರಕ್ಷಣೆಗೊಳಗಾದವರು. ಲೈಫ್ಗಾರ್ಡ್ ಸಿಬ್ಬಂದಿ ದರ್ಶನ್ ಹರಿಕಾಂತ್, ಚಿದಾನಂದ ಲಕ್ಕುಮನೆ, ದೀಪಕ್ ಗೌಡ, ಅಶೋಕ್ ಹರಿಕಾಂತ್, ಮಹೇಶ್ ಮತ್ತು ಜಗ್ಗುರಿಂದ ರಕ್ಷಣೆ ಮಾಡಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾಲುವೆ ನೀರಲ್ಲಿ ನಾಪತ್ತೆಯಾದ ಮೂವರ ಶೋಧಕ್ಕೆ ಮುಂದಾಗಿದ್ದರು. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿತ್ತು.
ಮಂಡ್ಯ : ನನಗೆ ಉನ್ನತ ಹುದ್ದೆ ಸಿಗಲೆಂದು ಹೋಮ ಮಾಡಿದ್ದು ಗೊತ್ತಿಲ್ಲ. ಎಲ್ಲ ಹಿರಿಯರು, ಶ್ರೀಗಳು ನನ್ನ ಪ್ರೀತಿಯಿಂದ ಕಾಣ್ತಿದಾರಾಷ್ಟೇ ಎಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕಲ್ಲಹಳ್ಳಿಯಲ್ಲಿರುವ ಭೂವರಾಹನಾಥ ದೇವಾಲಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ದೇಗುಲಕ್ಕೆ ಭೇಟಿ ನೀಡಿ ಮೃತ್ಯುಂಜಯ ಹೋಮದಲ್ಲೋ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಒಳಿತಾಗಲಿ ಎಂದು ದೇವರ ಬಳಿ ಪ್ರಾರ್ಥಿಸಿದ್ದೆನೆ. 2ವರ್ಷಗಳಿಂದ ನನ್ನ ಸ್ನೇಹಿತರು ಈ ದೇಗುಲಕ್ಕೆ ಹೋಗಿ ಅಂತಿದ್ರು ಬೇರೆ ಪಕ್ಷದ ಸ್ನೇಹಿತರೊಬ್ಬರೂ ಇಲ್ಲಿಗೆ ಹೋಗಲು ಹೇಳ್ತಿದ್ರು. ಇಲ್ಲಿ ಬಂದುನೋಡಿದಾಗ ನನಗೆ ಮಹಿಮೆ ಅರ್ಥ ಆಯ್ತು. ಇದು ಅದ್ಭುತ, ಐತಿಹಾಸಿಕ ದೇವಾಲಯ. ಈ ದೇವಾಲಯಕ್ಕೆ ಬರಲು ಕಾರಣ ಆ ದೇವರ ಪ್ರೇರಣೆ. ಇಂದು ಬೆಳಿಗ್ಗೆಯಷ್ಟೇ ದೇಗುಲ ಭೇಟಿ ನಿಗದಿಯಾಗಿತ್ತು. ಬರುವಾಗ ಏನಾದ್ರು ತರಬೇಕಾ ಎಂದು ಅರ್ಚಕರನ್ನು ಕೇಳಿದೆ. ಏನು ಬೇಡ ಬಂದು ದರ್ಶನ ಮಾಡಿ ಸಾಕು ಎಂದಿದ್ದರು ಎಂದು ತಿಳಿಸಿದರು.
ದಾವಣಗೆರೆ : ದಾವಣಗೆರೆಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ. ಮನೆಯಲ್ಲಿಯೇ ಬಂದುಕಿನಿಂದ ಗುಂಡು ಹರಿಸಿಕೊಂಡು ತುರಾಯಿ (70) ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕನಹಳ್ಳಿ ಬಡಾವಣೆಯ ಖಾದಿ ಗ್ರಾಮೋದ್ಯೋಗ ಕಚೇರಿ, ಬಳಿ ಇರುವ ಮನೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಸದ್ಯ ಘಟಕದ ಸ್ಥಾಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹೆಚ್.ವೈ ತುರಾಯಿ ಘಟನೆ ಕುರಿತು ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೆಂಗಳೂರಿನ ವಿಚಾರಗಳನ್ನೇ ಕೈಗೆತ್ತಿಕೊಳ್ಳುವುದಾದರೆ, ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಸುವ ಔಚಿತ್ಯ ಏನು? 20 ದಿನವಾದರೂ ಬೆಳಗಾವಿಯಲ್ಲಿ ಅಧಿವೇಶನ ನಡೆಸಿ, ಅಲ್ಲಿನ ಸಮಸ್ಯೆಗಳನ್ನು ಚರ್ಚಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು. ಖಾಸಗಿ ಹೋಟೆಲ್ನಲ್ಲಿ ಇಂದು ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಬ್ರೇಕ್ ಫಾಸ್ಟ್ ಮೀಟಿಂಗ್ ಬ್ರೇಕ್ ಆಗಿದೆ. ಬ್ರೇಕ್ ಆದ ಲಕ್ಷಣ ಕಾಣಿಸುತ್ತಿದೆ. ರಾಜ್ಯದ ಅಭಿವೃದ್ಧಿಗೆ ಇದರಿಂದ ತೊಂದರೆ ಆಗಿದೆ. ಇದನ್ನು ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತೇವೆ. ನಾವು, ಜೆಡಿಎಸ್ ಹಾಲು-ಜೇನಿನಂತೆ ಜೊತೆಯಾಗಿ ಹೋಗುತ್ತೇವೆ. ಅಧಿವೇಶನದಲ್ಲಿ ಹೋರಾಟ ಮಾಡುತ್ತೇವೆ ಎಂದರು. ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬೆಳಗಾವಿ ಅಧಿವೇಶನ ನಡೆಸುತ್ತಿದೆ. ಅದು 8 ದಿನಕ್ಕಿಂತ ಹೆಚ್ಚು ಕಾಲ ನಡೆಯಲಾರದು. ಹಾಲಿ ಶಾಸಕರು ಮೃತಪಟ್ಟ ಕಾರಣ ಒಂದು ದಿನ ನಡೆಯಲಾರದು. ಆಡಳಿತ ಪಕ್ಷ ಕಾಂಗ್ರೆಸ್ ತನ್ನ ಮರ್ಜಿಗೋಸ್ಕರ, ಮಸೂದೆ ಅಂಗೀಕಾರಕ್ಕೆ ಈ ಅಧಿವೇಶನವನ್ನು ಬಳಸಿಕೊಳ್ಳುತ್ತಿದೆ. ಬೆಂಗಳೂರು ಅಭಿವೃದ್ಧಿ, ಬೆಂಗಳೂರು ಪಾಲಿಕೆ ಈ ತರಹದ ವಿಚಾರಗಳನ್ನು ತಂದಿದ್ದಾರೆ ಎಂದರು.…
BREAKING : ಬೆಂಗಳೂರಲ್ಲಿ IT ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ : 100 ಕೋಟಿ ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ!
ಬೆಂಗಳೂರು : ತೆರಿಗೆ ಅಕ್ರಮದಲ್ಲಿ ಭಾಗಿಯಾಗಿದ್ದ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ)ದ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ನಗರದ ಕೇಂದ್ರ ವಲಯದ ಚಿಕ್ಕಪೇಟೆ, ಅವೆನ್ಯೂ ರಸ್ತೆ, ಬಿವಿಕೆ ಅಯ್ಯಂಗಾರ್ ರಸ್ತೆ, ಜೆ.ಸಿ ರಸ್ತೆ, ಎಸ್.ಪಿ ರಸ್ತೆಯಲ್ಲಿರುವ ವಿವಿಧ ಅಂಗಡಿಗಳಲ್ಲಿ ತಪಾಸಣೆ ನಡೆಸಲಾಗಿದ್ದು, ಈ ವೇಳೆ ವ್ಯಾಪಾರಿಗಳ ಕಳ್ಳಾಟ ಬಹಿರಂಗವಾಗಿದೆ. ದೆಹಲಿ ಮತ್ತಿತರ ಕಡೆಗಳಿಂದ ಬಿಲ್ ರಹಿತವಾಗಿ ಹೆಚ್ಚಿನ ಸರಕು ಖರೀದಿಸಿ ತಂದು ಅವುಗಳನ್ನು ಬಿಲ್ ನೀಡದೆಯೇ ಮಾರಾಟ ಮಾಡುತ್ತಿದ್ದುದನ್ನು ವಾಣಿಜ್ಯ ತೆರಿಗೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಕಳೆದ 15 ದಿನಗಳಲ್ಲಿ ಬೆಂಗಳೂರಿನ ಚಿಕ್ಕಪೇಟೆ, ಅವೆನ್ಯೂ ರೋಡ್, ಬಿ.ವಿ.ಕೆ. ಆಯ್ಯಂಗಾರ್ ರೋಡ್, ಜೆ.ಸಿ ರಸ್ತೆ, ಎಸ್.ಪಿ.ರಸ್ತೆಗಳಲ್ಲಿ 500ಕ್ಕೂ ಹೆಚ್ಚು ವ್ಯಾಪಕ ತಪಾಸಣೆ ನಡೆಸಲಾಗಿದ್ದು 100 ಕೋಟಿ ಮೌಲ್ಯದ ತೆರಿಗೆ ಮರೆಮಾಚಿ ನಡೆಸುತ್ತಿದ್ದ ವಹಿವಾಟು ಪತ್ತೆ ಮಾಡಲಾಗಿದೆ.ದಾಖಲೆ ಪರಿಶೀಲನೆ, ಡೇಟಾ ವಿಶ್ಲೇಷಣೆ ಮತ್ತು ಮುಂದಿನ ತನಿಖೆಗಳು ಪ್ರಗತಿಯಲ್ಲಿವೆ ಎಂದು ವಾಣಿಜ್ಯ ತೆರಿಗೆ ಇಲಾಖೆ ತಿಳಿಸಿದೆ. ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ? ಎಲೆಕ್ಟ್ರಾನಿಕ್ಸ್,…














