Author: kannadanewsnow05

ಬೆಂಗಳೂರು : ಇದೇ ತಿಂಗಳ 27ರಂದು ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಸಭೆ ನಿಗದಿಯಾಗಿದ್ದು, ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕಾರಿಣಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪರವಾಗಿ ಅವರ ಆಪ್ತರಾಗಿರುವ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ್‌ ಅವರು ಆಗಮಿಸುತ್ತಿರುವುದು ಕುತೂಹಲದ ಸಂಗತಿ. ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಗೊಂಡ ಕೆಲನಾಯಕರು ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದರು. ರಾಜ್ಯ ಘಟಕದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದರು. ಇದನ್ನು ಆಲಿಸಿದ್ದ ಅಮಿತ್ ಶಾ ಅವರು ತಿಂಗಳಾಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯಕ್ಕೆ ಖುದ್ದು ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸುವುದಾಗಿ ಭರವಸೆ ನೀಡಿದ್ದರು. ಇದೀಗ ಅಮಿತ್ ಶಾ ಅವರು ಮ್ಮ ಭರವಸೆಗೆ ಪೂರಕವಾಗಿ ಆಪ್ತರಾಗಿರುವ ಭೂಪೇಂದ್ರ ಯಾದವ್‌ ಅವರನ್ನು ರಾಜ್ಯ ಕಾರ್ಯಕಾರಿಣಿ ಸಭೆಗೆ ಕಳುಹಿಸುತ್ತಿದ್ದಾರೆ. ಯಾದವ್ ಅವರು ಈ ಭೇಟಿ…

Read More

ಬೆಂಗಳೂರು : ಇಂದಿನಿಂದ ಎರಡು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಮತ್ತು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಬೆಳಗ್ಗೆ 10 ಗಂಟೆಗೆ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ತೆರಳಲಿದ್ದಾರೆ. ಮೈಸೂರಿನಲ್ಲಿ ನಡೆಯುವ. ಪ್ರಮುಖ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಜಲ ಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.ಮುತ್ತಿನಮುಳಿಸೋಗೆ ಬಳಿ ಕಾವೇರಿ ನದಿಯಿಂದ ನೀರೆತ್ತುವ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳಿಸೋಗೆ ಎಪ್ಪತ್ತು ಗ್ರಾಮಗಳು 150 ಕೆರೆ ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟಿಸಿ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ ಕಾರ್ಯಕ್ರಮ ಮುಗಿಸಿ ಎಂದು ಮೈಸೂರಿನಲ್ಲಿ ತಂಗಲಿದ್ದಾರೆ ಎಂದು ತಿಳಿದುಬಂದಿದೆ. ನಂತರ ನಾಳೆ ಮೈಸೂರಿನಿಂದ ಹೆಲಿಕ್ಯಾಪ್ಟರ್ ನಲ್ಲಿ ಕೊಡಗು ಜಿಲ್ಲೆಗೆ ಪ್ರಯಾಣಿಸಲಿದ್ದಾರೆ. ಸಿಎಂ ಕಾನೂನು ಸಲಹೆಗಾರ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.ಎಸ್ ಎ ಪೋನನ್ನ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದು,…

Read More

ಬೆಂಗಳೂರು: ದೊಡ್ಡ ಪ್ರಮಾಣದ ಉದ್ಯೋಗ ಸೃಷ್ಟಿಸುವ, ಆರ್ಥಿಕ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ಗೇಮಿಂಗ್, ಅನಿಮೇಷನ್, ವಿಷುಯಲ್‌ಎಫ್ ಎಕ್ಸ್ (ಜಿಎಎಫ್‌ಎಕ್ಸ್) ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ವಾತಾವರಣ ಸೃಷ್ಟಿಸಲು, ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ನೀಡಲು ಹಾಗೂ ಈ ಕ್ಷೇತ್ರದಲ್ಲಿರುವವರು ಒಂದೇ ವೇದಿಕೆಯಡಿ ಚರ್ಚಿಸಲು ಜ.29ರಿಂದ 31ರವರೆಗೆ ನಗರದ ‘ದಿ ಹೊಟೇಲ್ ಲಲಿತ್ ಅಶೋಕ್ ‘ನಲ್ಲಿ ‘ಬೆಂಗಳೂರು ಜಿಎಎಫ್‌ಎಕ್ಸ್-2024″ ಸಮ್ಮೇಳನ ನಡೆಯಲಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಈ ವಿಷಯ ತಿಳಿಸಿದ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ 2016ರಿಂದ ಈ ಸಮ್ಮೇಳನ ನಡೆಸಿಕೊಂಡು ಬರಲಾಗುತ್ತಿದೆ. ಪ್ರಸ್ತುತ ಕರ್ನಾಟಕ ಮಾಧ್ಯಮ ಮತ್ತು ಮನರಂಜನಾ ಉದ್ಯಮದಲ್ಲಿ ಶೇ. 2 – 20ರಷ್ಟು ಪಾ ಪಾಲು ಹೊಂದಿದೆ. ಈ ಸಮ್ಮೇಳನದಲ್ಲಿ ವಿವಿಧ ಈ ಸಮ್ಮೇಳನದಲ್ಲಿ ವಿವಿಧ ವಿಷಯಗಳ ಕುರಿತು 115 ಗೋಷ್ಠಿ ಏರ್ಪಡಿಸಲಾಗಿದೆ. 130 ಜನರು ವಿಷಯ ಮಂಡನೆ ಮಾಡಲಿದ್ದಾರೆ. 22 ಪ್ರಖ್ಯಾತ ಅಂತರಾಷ್ಟ್ರೀಯ ಭಾಷಣಕಾರರು 100 ವಿವಿಧ ದೇಶಗಳ ಪ್ರತಿನಿಧಿಗಳುಭಾಗಿಯಾಗಲಿದ್ದಾರೆ. ಜತೆಗೆ ರಾಜ್ಯದಲ್ಲಿ ವ್ಯಾಪಾರದ ಬೆಳವಣಿಗೆಗೆ ಅನುಕೂಲವಾಗುವಂತೆ…

Read More

ಬೆಂಗಳೂರು : ಮೆಟ್ರೋ ಸೇವೆ ಆರಂಭ ಅದಾಗಿನಿಂದ ಬೆಂಗಳೂರಿನ ಜನತೆಗೆ ಸಾಕಷ್ಟು ಅನುಕೂಲ ಆಗಿದೆ ಎಂಬುದಕ್ಕೆ ಇದೆ ಉದಾಹರಣೆಯಾಗಿದೆ.ಬೆಂಗಳೂರು ಮೆಟ್ರೋ ನಿಗಮ ಕಳೆದ ಡಿಸೆಂಬರ್‌ನಲ್ಲಿ ಒಟ್ಟಾರೆ ನೂರು ಕೋಟಿ ಪ್ರಯಾಣಿಕರಿಗೆ ಸೇವೆ ಕಲ್ಪಿಸಿದ ಮೈಲುಗಲ್ಲು ಸ್ಥಾಪಿಸಿದೆ. ಸದ್ಯ ಪ್ರತಿದಿನ 7 ಲಕ್ಷ ಸರಾಸರಿ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. 2011ರ ಅ.20ರಿಂದ ನಮ್ಮ ಮೆಟ್ರೋ ವಾಣಿಜ್ಯ ಸಂಚಾರ ಆರಂಭಿಸಿದ್ದು, ಕಳೆದ ಡಿ.29ರಂದು ನೂರು ಕೋಟಿ ಪ್ರಯಾಣಿಕರ ಸಂಖ್ಯೆಯನ್ನು ದಾಟಿದೆ. ಜನವರಿಯಲ್ಲಿ ಈವರೆಗೆ ಸರಿಸುಮಾರು 1.40 ಕೋಟಿಗೂ ಪ್ರಯಾಣಿಕರು ಸಂಚಾರ ಮಾಡಿದ್ದಾರೆ.ಡಿಸೆಂಬರ್‌ನಲ್ಲಿ ಒಟ್ಟು 1.73 ಕೋಟಿ ಪ್ರಯಾಣಿಕರು ಸಂಚರಿಸಿದ್ದು, ಡಿ.13ರಂದು ಗರಿಷ್ಠ 7.48ಲಕ್ಷ ಪ್ರಯಾಣಿ ಕರು ಸಂಚಾರ ಮಾಡಿದ್ದರು. ಇದರಲ್ಲಿ ಶೇ. 51ರಷ್ಟು ಪ್ರಯಾಣಿಕರು ಸ್ಮಾರ್ಟ್ ಕಾರ್ಡ್, ಶೇ.31ರಷ್ಟು ಟೋಕನ್ ಬಳಕೆದಾರರು ಸೇರಿದ್ದಾರೆ. ಜೊತೆಗೆ ಶೇ. 14ರಷ್ಟು ಕ್ಯೂ ಆರ್ ಟಿಕೆಟ್ ಬಳಕೆದಾರರಿದ್ದಾರೆ.2023ರ ಜನವರಿಯಲ್ಲಿ 5.11 ಲಕ್ಷವಿದ್ದ ಕ್ಯೂ ಆರ್ ಟಿಕೆಟ್ ಬಳಕೆದಾರರ ಸಂಖ್ಯೆ ಡಿಸೆಂಬರ್‌ಗೆ 25.9 ಲಕ್ಷ ದಾಟಿದೆ ಎಂದು ಮೆಟ್ರೋ ನಿಗಮ ತಿಳಿಸಿದೆ.

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರುನಲ್ಲಿ ಪಿಎಸ್ಐ ಮರು ಪರೀಕ್ಷೆ ನೇಮಕ ಪ್ರಶ್ನೆ ಪತ್ರಿಕೆ ಹಾಗೂ ಸಿಟಿಐ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐ ಲಿಂಗಯ್ಯ ಈ ಒಂದು ಪ್ರಕರಣದಲ್ಲಿ ಕೈವಾಡ ಇದೆ ಎಂದು ಆರೋಪಿಸಲಾಗಿದ್ದು, ತಕ್ಷಣ ಸಿಸಿಬಿ ಅಧಿಕಾರಿಗಳು ಎಸ್ಐ ಲಿಂಗಯ್ಯನನ್ನು ವಶಪಡಿಸಿಕೊಂಡು ತನಿಖೆ ನಡೆಸಿದ್ದಾರೆ. ಇದೀಗ ಸಿಸಿಬಿ ಅಧಿಕಾರಿಗಳ ಮುಂದೆ ಎಸ್ಐ ಲಿಂಗಯ್ಯ ಬಾಯಿಬಿಟ್ಟಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಲಿಂಗಯ್ಯನನ್ನು ಸಿಸಿಬಿ ವಿಚಾರಣೆ ನಡೆಸಿದ್ದು ವಿಚಾರಣೆ ವೇಳೆ ನನ್ನದೇನು ತಪ್ಪಿಲ್ಲ ಎಂದು ಲಿಂಗಯ್ಯ ಸಮರ್ಥಿಸಿಕೊಂಡಿದ್ದಾನೆ. ನನ್ನ ವಿರುದ್ಧ ಮಾಡಿರುವ ಪರೀಕ್ಷಾ ಅಕ್ರಮದ ಆರೋಪಗಳು ನಿರಾಧಾರವಾಗಿವೆ ಅಂತ ತನಿಖಾಧಿಕಾರಿ ಮುಂದೆ ಲಿಂಗಯ್ಯ ಹೇಳಿಕೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನುಳಿದಬ್ಬರಿಗೆ ನೋಟಿಸ್ ಜಾರಿ ಮಾಡಿದ್ದು ಪವನ್ ಹಾಗೂ ರಜತ್ ಎನ್ನುವವರಿಗೆ ಸಿಸಿಬಿ ನೋಟಿಸ್ ಜಾರಿಗೊಳಿಸಿದೆ.ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ಸೂಚಿಸಿದ್ದರೆ ಎಂದು ತಿಳಿದುಬಂದಿದೆ. ಇಬ್ಬರನ್ನು ವಿಚಾರಣೆ ನಡೆಸಿ ಸಿಸಿಬಿ ಪೊಲೀಸರು ಪ್ರಕರಣ ಕುರಿತಂತೆ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಇಂಟಲಿಜೆನ್ಸ್…

Read More

ಬೆಂಗಳೂರು : ಕಳೆದ ವರ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ ಜೋಡೋ ಯಾತ್ರೆ ಅತ್ಯಂತ ಯಶಸ್ವಿಯಾಗಿ ನಡೆದಿತ್ತು ಅದರಂತೆ ಮುಂದಿನ ಭಾಗವಾಗಿ ಈಗ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಭಾರತ್ ಜೋಡು ನ್ಯಾಯ ಯಾತ್ರೆ ಆರಂಭವಾಗಿದ್ದು ಇದೀಗ ಅಸ್ಸಾಂನಲ್ಲಿ ಭಟ್ ದ್ರವಥ್ಯಾನ ದೇವಸ್ಥಾನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನಿರ್ಬಂಧಿಸಿರುವದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೆ ವಿಷಯವಾಗಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಎಂಎಲ್ಸಿ ನಾರಾಯಣ ಸ್ವಾಮಿ ವಿವಾದಾತ್ಮಕ ಹೇಳಿಕೆ ಒಂದನ್ನು ನೀಡಿದ್ದು ಅಸಾಂನಲ್ಲಿ ಬಸ್ಸಿನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳುತ್ತಿದ್ದಂತೆ ಬಿಜೆಪಿ ನಾಯಿಗಳು ಓಡಿ ಹೋದರು ಎಂದು ಹೊಸ ವಿವಾದವನ್ನು ಹುಟ್ಟು ಹಾಕಿದ್ದಾರೆ. ಆದರಿಂದ ರಾಜ್ಯದ ವಿವಿಧ ಹೇಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಅಸ್ಸಾಂ ಬಿಜೆಪಿ ಸರ್ಕಾರದ ವಿರುದ್ಧ ಇದೀಗ ಪ್ರತಿಭಟನೆ ನಡೆಯುತ್ತಿದ್ದು ಬೆಂಗಳೂರಿನ ವೇಳಾ ಪಾರ್ಕನಲ್ಲೂ ಕೂಡ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆ ಸಂಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೂಡ ಅಸ್ಸಾಂ ಬಿಜೆಪಿ ಸರ್ಕಾರದವರು…

Read More

ಮಂಡ್ಯ : ಖಾಸಗಿ ಶಾಲಾ ಶಿಕ್ಷಕಿಯನ್ನು ಮಣ್ಣಲ್ಲಿ ಓಟು ಹಾಕಿರುವ ಪ್ರಕರಣಕ್ಕೆ ಇದೀಗ ಬಿಗ್ ಟ್ರಸ್ಟ್ ಸಿಕ್ಕಿದ್ದು ಪರಿಚಯಸ್ತ ಯುವಕನಿಂದಲೇ ಶಾಲಾ ಶಿಕ್ಷಕಿಯ ಹತ್ತೆ ನಡೆದಿದೆ ಎಂದು ಇದೀಗ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಜನವರಿ 20ರಂದು ಮೃತ ಶಿಕ್ಷಕಿ ದೀಪಿಕಾ ಮಧ್ಯಾಹ್ನ 12 ಗಂಟೆಗೆ ಯುವತಿಗೆ ಯುವಕನ ಕರೆ ಬಂದಿದ್ದು ಗ್ರಾಮದ ಯುವಕನ ಮೇಲೆ ಪೋಷಕರು ಸಾಕಷ್ಟು ಅನುಮಾನ ವ್ಯಕ್ತಪಡಿಸಿದ್ದರೆ. ಪೊಲೀಸರ ತನಿಖೆಯಲ್ಲಿ ಯುವಕನ ಕೊನೆಯ ಕರೆ ಕುರಿತು ಇದೀಗ ಪತ್ತೆಯಾಗಿದೆ. ಇದೀಗ ಯುವಕ ಘಟನೆ ನಡೆದ ದಿನದಿಂದ ನಾಪತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವಕ ಪರಿಚಯಸ್ಥ ಯುವಕ ಎಂದು ಹೇಳಲಾಗುತ್ತಿದ್ದು, ಆತನೇ ಹತ್ಯೆಯನ್ನು ಮಾಡಿದ್ದಾನೆ ಎಂಬುದು ಕೂಡ ತಿಳಿದು ಬಂದಿದೆ. ಜನವರಿ 20ರ ನಂತರ ದೀಪಿಕಾ ಶಾಲೆ ಮುಗಿಸಿಕೊಂಡು ಬರುವಾಗ ಅಡ್ಡಗಟ್ಟಿ ಹತ್ಯೆಗೈದು ಬೆಟ್ಟದ ತಪಲಿನಲ್ಲಿ ಗುಂಡಿನ ತೆಗೆದು ಶವವನ್ನು ಮುಚ್ಚಿದ್ದಾನೆ. ಇದೀಗ ನಾಪತ್ತೆಯಾಗಿರುವ ಯುವಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಘಟನೆ ಹಿನ್ನೆಲೆ? ಮಂಡ್ಯ ಜಿಲ್ಲೆಯಲ್ಲಿ ಒಂದು ರಾಜ್ಯವೇ ಬೆಚ್ಚಿ ಬಿಳಿಸುವಂತಹ…

Read More

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮಾರು 32 ಅಡಿ ಎತ್ತರದ ಹನುಮ ಮೂರ್ತಿ ಹಾಗೂ ಸೀತಾರಾಮ ಲಕ್ಷ್ಮಣರ ದೇವಸ್ಥಾನವನ್ನು ಉದ್ಘಾಟಿಸಿ ಶ್ರೀರಾಮ ಯಾರ ಸ್ವತ್ತು ಅಲ್ಲ ನಾನು ಕೂಡ ಜೈ ಶ್ರೀ ರಾಮ ಎಂದು ಘೋಷಣೆ ಹೇಳುತ್ತೇನೆ ಎಂದು ಘೋಷಣೆ ಕೂಗಿದರು. ಇದಕ್ಕೆ ಬಿಜೆಪಿ ನಾಯಕರು ಹಲವು ರೀತಿಯಾಗಿ ಪ್ರತಿಕ್ರಿಯೆ ನೀಡಿದ್ದರು. ಬಿಜೆಪಿಯವರ ಹೇಳಿಕೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ಜೈ ಶ್ರೀ ರಾಮ್ ಅಂದರೆ ತಪ್ಪೇನಿದೆ? ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ ತಿಳಿಸಿದರು.ನಾವು ಕೂಡ ಜೈ ಶ್ರೀ ರಾಮ್ ಎಂದು ಹೇಳಿದ್ದೇವೆ.ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ ನಾವೆಲ್ಲ ರಾಮನ ಭಕ್ತರೇ. ನಮಗೆ ದಶರಥ ರಾಮ ಬೇಕು, ಮೋದಿ ರಾಮ ಅಲ್ಲ.ರಾಮನ ಹೆಸರಲ್ಲಿ ಒಡೆದಾಳುವವರು ಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಸೇರಿದ ಪಿಎಸ್ಐ ಅಕ್ರಮದ ತನಿಖ ವರದಿ ಕುರಿತು ಮಾತನಾಡಿ, ಕಳೆದ ಬಿಜೆಪಿ ಸರ್ಕಾರದ ಆಡಳಿತದಲ್ಲಿ…

Read More

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆರಂಭಿಸಿರುವ ಭಾರತ ಜೋಡೋ ಯಾತ್ರೆಗೆ ಸಂಬಂಧಿಸಿದಂತೆ ನಿನ್ನೆ ಅಸ್ಸಾಂನಲ್ಲಿ ದೇವಸ್ಥಾನ ಹೊಂದಕ್ಕೆ ರಾಹುಲ್ ಗಾಂಧಿ ಅವರಿಗೆ ಪ್ರವೇಶಿಸಲು ನಿರ್ಬಂಧ ವಿಧಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನವಿದ್ದು ಅಸ್ಸಾಂ ಬಿಜೆಪಿ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಅದರ ಅಂಗವಾಗಿ ಅಸ್ಸಾಂ ಬಿಜೆಪಿ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು ರಾಹುಲ್ ಗಾಂಧಿ ಭರತ್ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ಬಿಜೆಪಿ ಸರ್ಕಾರ ತಡೆಯೊಡ್ಡಿದ ವಿಚಾರವಾಗಿ ಬಟ್ ದ್ರವಥನ ದೇವಸ್ಥಾನ ಪ್ರವೇಶಿಸಲು ರಾಹುಲ್ ಗೆ ನಿರ್ಬಂಧಿಸಿದ್ದು ಅಸ್ಸಾಂ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿ ಇದೀಗ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಇದೀಗ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಸಚಿವರು ಶಾಸಕರು, ಕಾರ್ಯಕರ್ತರು ಸೇರಿದಂತೆ ಪ್ರತಿಭಟನೆಯಲ್ಲಿ ಅನೇಕ ಜನರು ಭಾಗಿಯಾಗಿದ್ದಾರೆ.…

Read More

ಬೆಂಗಳೂರು : ಹಿಂಬದಿಯಿಂದ ಬಂದ ಬಿಕೆ ಒಂದು ಟಿಪ್ಪರ್ ಅನ್ನು ಓವರ್ ಟೇಕ್ ಮಾಡಲು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವಿದ್ಯಾರ್ಥಿ ಒಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ಉಳ್ಳಾಲ ಜೆರೆ ಹತ್ತಿರ ನಡೆದಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ಲಿಖಿತ್ ಎನ್ನುವ ಮೇಲೆ ಲಾರಿ ಹರಿದು ಸಾವನ್ನಪ್ಪಿದ್ದು ಉಳ್ಳಾಲ ಕೆರೆ ಬಳಿ ಬೈಕ್ ಸವಾರ ಲಿಖಿತ್ (22) ಸ್ಥಳದಲ್ಲೇ ಸಾವನಪ್ಪಿದ್ದಾನೆ. ಉಳ್ಳಾಲ ಬಳಿಯ ಖಾಸಗಿ ಕಾಲೇಜಿನಲ್ಲಿ ನಿಖಿತ್ ವ್ಯಾಸಂಗ ಮಾಡುತ್ತಿದ್ದ ಎಂದು ಹೇಳಲಾಗುತ್ತಿದ್ದು. ಲಾರಿ ಓವರ್ಟೇಕ್ ಮಾಡುವಾಗ ಲಿಖಿತ್ ಬೈಕ್ ನಲ್ಲಿ ತೆರಳುವ ಸಂದರ್ಭದಲ್ಲಿ ಟಿಪ್ಪರ್ ಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದಾನೆ. ಲಾರಿ ಹರಿದು ಸ್ಥಳದಲ್ಲೇ ಲಿಖಿತ್ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ ಅಲ್ಲದೆ ಹಿಂಬದಿ ಸವಾರ ಜ್ಞಾನೇಶ್ಗೆ ಗಂಭೀರವಾದೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿ ಶವ ಪತ್ತೆ ನಾಪತ್ತೆಯಾಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿದೆ. ಶಾಬಾದ್ ಕ್ರಾಸ್ ಬಳಿ…

Read More