Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಮಕ್ಕಳ ತಿಂಡಿ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟಗೊಂಡಿರುವ ಘಟನೆ ನಡೆದಿದೆ. ಬೆಳಿಗ್ಗೆ ಬಾಯ್ಲರ್ ರಿಪೇರಿ ಮಾಡುವ ವೇಳೆ ಬಾಯ್ಲರ್ ಸ್ಪೋಟಗೊಂಡಿದೆ. ದಾಬಸ್ ಪೇಟೆಯ ಫಿಜೂ ಫುಡ್ ಪ್ರೊಡಕ್ಟ್ ಕಂಪನಿಯಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆಯಲ್ಲಿ ಈ ಘಟನೆ ನಡೆದಿದೆ. ಸುಮಾರು 100 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸ್ಥಳಕ್ಕೆ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನೆ ಕುಡಿದಂತೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ರಾಜ್ಯ ಸರ್ಕಾರ ರಸಗೊಬ್ಬರ ತಯಾರಿಸಲ್ಲ ಕೇಂದ್ರದ ಬಳಿ ಕೊಡಿಸಲಿ ಬಿಜೆಪಿ ಏನೆ ತಿಪ್ಪರಲಾಗ ಹಾಕಿದರು ಮುಂದೆ ನಾವೇ ಗೆಲ್ಲುತ್ತೇವೆ. ರಾಜ್ಯದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಚ್ ಡಿ ಕುಮಾರಸ್ವಾಮಿ ಕೇಂದ್ರದಲ್ಲಿ ಪ್ರಬಲ ಖಾತೆ ಹೊಂದಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಕೇಂದ್ರದ ಬಳಿ ರಸಗೊಬ್ಬರ ಕೊಡಿಸಲಿ ಎಂದು ಮದ್ದೂರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ರೈತರಿಗೆ ರಸಗೊಬ್ಬರ ಸ್ಟಾಕ್ ಇಲ್ಲ ಎಂದು ಅಂಗಡಿಗಳು ಬೋರ್ಡ್ ಹಾಕಿಕೊಂಡಿದ್ದು ಈ ಕುರಿತು ರೈತರು ಹಾಗೂ ಬಿಜೆಪಿ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಈಗ ರಸಗೊಬ್ಬರದ ಅಭಾವ ಇಲ್ಲ ಆದರೆ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬ ಕೊಡಲು ಕೇಂದ್ರದಿಂದ ಆಗಿಲ್ಲ ಎಂದು ತಿಳಿಸಿದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಉದ್ಘಾಟಿಸಿ ಮಾತನಾಡಿದ ಅವರು, ನಮಗೆ 6 ಲಕ್ಷ…

Read More

ಮಂಡ್ಯ : ರಾಜ್ಯದಲ್ಲಿ ರೈತರಿಗೆ ರಸಗೊಬ್ಬರ ಸ್ಟಾಕ್ ಇಲ್ಲ ಎಂದು ಅಂಗಡಿಗಳು ಬೋರ್ಡ್ ಹಾಕಿಕೊಂಡಿದ್ದು ಈ ಕುರಿತು ರೈತರು ಹಾಗೂ ಬಿಜೆಪಿ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಈಗ ರಸಗೊಬ್ಬರದ ಅಭಾವ ಇಲ್ಲ ಆದರೆ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬ ಕೊಡಲು ಕೇಂದ್ರದಿಂದ ಆಗಿಲ್ಲ ಎಂದು ತಿಳಿಸಿದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಉದ್ಘಾಟಿಸಿ ಮಾತನಾಡಿದ ಅವರು, ನಮಗೆ 6 ಲಕ್ಷ ಮೆಟ್ರಿಕ್ ಟನ್ ರಸ ಗೊಬ್ಬರದ ಬೇಡಿಕೆ ಇತ್ತು ಕೇಂದ್ರ ಸರ್ಕಾರ 5.27 ಮಾತ್ರ ನಮಗೆ ಕೊಟ್ಟಿದೆ. ಈ ಕುರಿತು ನಾವು ವಿಜಯೇಂದ್ರನಿಂದ ಪಾಠ ಕಲಿಯಬೇಕಾ? ಅವರಪ್ಪ ಸಿಎಂ ಆಗಿದ್ದಾಗ ಗೋಲಿಬಾರ್ ಮಾಡಿ ರೈತರನ್ನು ಸಾಯಿಸಿದರು. ಹಾವೇರಿಯಲ್ಲಿ ಗೋಲಿಬಾರ್ ಮಾಡಿ ರೈತರ ಸಾಯಿಸಿದರು. ನಿಮಗೆ ನಾಚಿಕೆ ಆಗಲ್ವಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರ ರಸಗೊಬ್ಬರ ತಯಾರಿಸಲ್ಲ ಕೇಂದ್ರದ ಬಳಿ ಕೊಡಿಸಲಿ ಬಿಜೆಪಿ…

Read More

ಬೆಂಗಳೂರು : ನಟ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಸಂದೇಶ ವಿಚಾರವಾಗಿ ಮಾಜಿ ಸಂಸದೆ ರಮ್ಯಾ ಬೆನ್ನಿಗೆ ಇದೀಗ ಮಹಿಳಾ ಆಯೋಗ ನಿಂತುಕೊಂಡಿದೆ. ಮಹಿಳಾ ಆಯೋಗದ ರಾಜ್ಯಾಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಬೆಂಗಳೂರು ಪೊಲೀಸ್ ಕಮಿಷನರಿಗೆ ಪತ್ರ ಬರೆದಿದ್ದಾರೆ. ಹೌದು ಮಾಜಿ ಸಂಸದೆ ಹಾಗೂ ಚಲನಚಿತ್ರ ನಟಿ ರಮ್ಯಾರವರ ವಿರುದ್ಧ, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ನೀಡಿರುವ ಬಗ್ಗೆ ವರದಿಯಾಗಿರುತ್ತದೆ. ಇದರಿಂದ ಮಹಿಳೆಯ ಸ್ಥಾನಮಾನಕ್ಕೆ ತೊಂದರೆಯಾಗುತ್ತಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿರುತ್ತದೆ. ಆದ್ದರಿಂದ ಸದರಿ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಿ, ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದೆ’ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ನಾಗಲಕ್ಷ್ಮಿ ಚೌದರಿ ಮಾತನಾಡಿದ್ದು, ಮನಸ್ಸಿಗೆ ತಕ್ಕಂತೆ ಕಮೆಂಟ್ ಮತ್ತು ಪೋಸ್ಟ್ ಮಾಡೋದು ತಪ್ಪು. ನಟಿ ರಮ್ಯಾ ನಮಗೇನು ಕಾಲ್ ಮಾಡಿಲ್ಲ ಈ ವಿಷಯಗಳಲ್ಲಿ ಯಾರು ಕಾಲ್…

Read More

ಶ್ರೀನಗರ : ಶ್ರೀನಗರದ ಡಚಿಗಮ್ ರಾಷ್ಟ್ರೀಯ ಉದ್ಯಾನವನದ ಬಳಿಯ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ತೀವ್ರವಾದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ” ಎಂದು ಹೇಳುತ್ತಾ, ಸೇನೆಯ ಚಿನಾರ್ ಕಾರ್ಪ್ಸ್ X ನಲ್ಲಿ ಬೆಳವಣಿಗೆಯನ್ನು ದೃಢಪಡಿಸಿತು..ಭಾರತೀಯ ಸೇನೆಯ ಜೊತೆಗೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ತಂಡಗಳು ಸಹ ಆಪರೇಷನ್ ಮಹಾದೇವ್‌ನಲ್ಲಿ ಭಾಗಿಯಾಗಿವೆ. ಶ್ರೀನಗರದ ಹರ್ವಾನ್‌ನಲ್ಲಿರುವ ಡಚಿಗಮ್ ಅರಣ್ಯದ ಮೇಲ್ಭಾಗದಲ್ಲಿ ವಿದೇಶಿ ಭಯೋತ್ಪಾದಕರ ಚಲನವಲನಗಳನ್ನು ಭಾರತೀಯ ಪಡೆಗಳು ತಡೆದಿವೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಅಲೆಮಾರಿಗಳು ಪಡೆಗಳಿಗೆ ಸುಳಿವು ನೀಡಿದ್ದಾರೆ ಎಂದು ಎಎನ್ ಇಂಡಿಯಾ ಟುಡೇ ವರದಿ ತಿಳಿಸಿದೆ. https://twitter.com/ChinarcorpsIA/status/1949728422948909192?t=HLbxN8G7-LDZIqv7d8GDMg&s=19

Read More

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಮಾರು 3.75 ಲಕ್ಷ ಸುಸ್ತಿದಾರಿಗೆ ನೋಟಿಸ್ ಜಾರಿ ಮಾಡಿ ಬಾಕಿ ತೆರಿಗೆ ವಸೂಲಿ ಮಾಡಲಾಗುವುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯ ಆಯುಕ್ತರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಆಸ್ತಿ ತೆರಿಗೆ ಸಂಗ್ರಹಿಸಲು ಹೆಚ್ಚು ಆದ್ಯೆತೆ ನೀಡುತ್ತಿದ್ದು, ಇನ್ನೂ ಪರಿಣಾಮಕಾರಿಯಾಗಿ ಆಸ್ತಿ ತೆರಿಗೆ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ 3.75 ಲಕ್ಷ ಸುಸ್ತಿದಾರರು ಸುಮಾರು 700 ರಿಂದ 800 ಕೋಟಿ ರೂ. ಪಾಲಿಕೆಗೆ ಬಾಕಿ ಆಸ್ತಿ ತೆರಿಗೆ ಪಾವತಿಸಬೇಕಿದ್ದು, ಈ ನಿಟ್ಟಿನಲ್ಲಿ ಎಸ್.ಎಂ.ಎಸ್ ಹಾಗೂ ಇಮೇಲ್ ಮೂಲಕ ನೋಟೀಸ್ ಜಾರಿ ಮಾಡಲಾಗುವುದು. ಈಗಾಗಲೇ ಪಾವತಿಸಿದ್ದಲ್ಲಿ ಯಾವುದೇ ಸಮಸ್ಯೆ ಇಲ್ಲ. ಪಾವತಿಸಬೇಕಿದ್ದಲ್ಲಿ ಕೂಡಲೆ ಬಾಕಿ ಆಸ್ತಿ ತೆರಿಗೆ ಪಾವತಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ…

Read More

ಮಂಡ್ಯ : ಮಂಡ್ಯದ ಮದ್ದೂರಿಗೆ ಆಗಮಿಸಿದ ಇದೀಗ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಿದ್ದು, ಮದ್ದೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮ ಹಿನ್ನೆಲೆ ಮದ್ದೂರು ಪಟ್ಟಣದ ಹೊರ ವಲಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ ಉದ್ಘಾಟನೆ ನೆರವೇರಿಸಲಾಯಿತು ಶಾಸಕ ಕದಲೂರು ಉದಯ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಸಿಎಂಗೆ ಡಿಸಿಎಂ ಡಿಕೆಶಿ, ಸಚಿವರಾದ ಚಲುವರಾಯಸ್ವಾಮಿ, ಮತ್ತಿತರರ ಸಾಥ್ ನೀಡಿದರು. ಸಿಎಂ, ಡಿಸಿಎಂಗೆ ಬೃಹತ್ ಬೆಲ್ಲ ಹಾಗೂ ಕಬ್ಬಿನ ಹಾರ ಹಾಕುವ ಮೂಲಕ ಸ್ವಾಗತ ಇದೆ ವೇಳೆ ಅಭಿಮಾನಿಗಳು ಕ್ರೇನ್ ಮೂಲಕ ಬೆಲ್ಲ ಹಾಗೂ ಬೆಲ್ಲದ ಹಾರ ಹಾಕುವ ಮೂಲಕ ಸಿಎಂ ಡಿಸಿಎಂ ಗೆ ಸ್ವಾಗತ ಕೋರಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಮದ್ದೂರಿನ ಹೊರವಲಯದಲ್ಲಿ ಈ ಒಂದು ಬೃಹತ್ ಕಾರ್ಯಕ್ರಮ ನಡೆಯುತ್ತಿದೆ. ಸುಮಾರು 1,147 ಕೋಟಿ ರೂ. ವೆಚ್ಚದ…

Read More

ನವದೆಹಲಿ : ಇಂದು ಸುಪ್ರೀಂ ಕೋರ್ಟ್ ನಲ್ಲಿ ಬಿಬಿಎಂಪಿ ಚುನಾವಣೆ ಕುರಿತಂತೆ ಅರ್ಜಿ ವಿಚಾರಣೆ ನಡೆಯಿತು. ಬಿಬಿಎಂಪಿ ವಾರ್ಡ್ ಗಳ ಕ್ಷೇತ್ರ ಮರು ವಿಂಗಡಣೆ ಪ್ರಕ್ರಿಯೆ ಮುಗಿಸುತ್ತೇವೆ. ವಾರ್ಡ್ ಗಳ ಕ್ಷೇತ್ರ ಮರು ವಿಂಗಡಣೆ ಬಗ್ಗೆ ಆಫೀಡಿವೇಟ್ ಸಲ್ಲಿಸಿದ್ದೇವೆ. ನವೆಂಬರ್ ತಿಂಗಳ ಒಳಗೆ ಎಲ್ಲಾ ಪ್ರಕ್ರಿಯೆ ಮುಗಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ನಲ್ಲಿ ಸರ್ಕಾರದ ಪರ ವಕೀಲ ಅಭಿಷೇಕ್ ಮನುಸಿಂಗ್ವಿ ವಾದಿಸಿದರು. ಪ್ರಕ್ರಿಯೆ ಮುಗಿಯೋದರಿಂದ ಬಿಬಿಎಂಪಿ ಚುನಾವಣೆ ವಿಳಂಬ ಆಗಿಲ್ಲ. ಬಿಬಿಎಂಪಿ ಚುನಾವಣೆ ಮಾಡಲು ನಾವು ತಯಾರಿದ್ದೇವೆ ಎಂದು ಅಭಿಷೇಕ್ ಮನುಸಿಂಗ್ವಿ ತಿಳಿಸಿದರು. ನವೆಂಬರಲ್ಲಿ ವಾರ್ಡ್ ಪುನರ್ ವಿಂಗಡಣೆ ಮುಗಿದರೂ ಬಿಬಿಎಂಪಿ ವ್ಯಾಪ್ತಿ ಮತದಾರರ ಪಟ್ಟಿ ತಯಾರಿಕೆಗೆ ಸಮಯ ಬೇಕು ಎಂದು ಚುನಾವಣಾ ಆಯೋಗದ ಪರವಾಗಿ ವಕೀಲ ಫಣಿಂದ್ರ ವಾದ ಮಂಡಿಸಿದರು. 10 ವರ್ಷದಿಂದ ಚುನಾವಣೆ ನಡೆದಿಲ್ಲ ಎಂದು ಶಿವರಾಜು ಪರ ವಕೀಲರು ವಾದ ಮಂಡಿಸಿದರು. ವಾದ ಪ್ರತಿವಾದ ಆಲಿಸಿದ ಬಳಿಕ ಅಫಿಡಿಟ್ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಇದೆ ವೇಳೆ ಸೂಚನೆ…

Read More

ಬೆಂಗಳೂರು : ಆನ್ಲೈನ್ ಮೂಲಕ ಬಿ ಖಾತಾದಿಂದ ಎ ಖಾತ ಮಾನ್ಯತೆ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಹತ್ವದ ಹೇಳಿಕೆ ನೀಡಿದ್ದು, ಬಿ ಖಾತದಿಂದ ಎ ಖಾತ ಕೊಡಲು ಸರಕಾರದಿಂದ ಆದೇಶ ಆಗಿದೆ ಎಂದು ಬಿಬಿಎಂಪಿ ಆಯುಕ್ತ ಮಹೇಶ್ವರ ರಾವ್ ತಿಳಿಸಿದರು. ಎರಡು ವಾರದಲ್ಲಿ ಈ ಬಗ್ಗೆ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡುತ್ತೇವೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಎರಡು ವಾರದಲ್ಲಿ ಅವಕಾಶ ನೀಡುತ್ತೇವೆ. ಏನು ನಿಯಮಗಳು ಇರುತ್ತವೋ ಅದನ್ನು ಫಾಲೋ ಮಾಡಬೇಕಾಗುತ್ತದೆ. ಎ ಖಾತ ಮಾಡಿಸಿಕೊಳ್ಳುವುದಕ್ಕೆ ಎಷ್ಟು ಹಣ ಭರಿಸಬೇಕೆಂಬುದರ ಕುರಿತು ಚರ್ಚಿಸಲಾಗಿದ್ದು, ಅದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ.ಹೊಸ ಮಾರ್ಗಸೂಚಿಯಲ್ಲಿಯೇ ಎಲ್ಲ ಮಾಹಿತಿ ನೀಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ಹೇಳಿಕೆ ನೀಡಿದರು.

Read More

ಬೆಂಗಳೂರು : ನಾಲ್ವಡಿ ಕೃಷ್ಣರಾಜ ಒಡೆಯರಿಗಿಂತ ಸಿಎಂ ಸಿದ್ದರಾಮಯ್ಯ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ನಾಲ್ವಡಿ ಕೃಷ್ಣರಾಜ ಅವರಿಗೆ ಹೋಲಿಕೆ ಮಾಡಿದ ವಿಚಾರವಾಗಿ ಇದೀಗ ಬಿಜೆಪಿ ನಾಯಕರು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಮಾತನಾಡಿ ಯತೀಂದ್ರ ಅವರ ತಾಯಿಯ ಜೊತೆ ಸೇರಿ ಜಾಗ ಲೂಟಿ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಒಂದು ಮಾತನ್ನು ಮಾತ್ರ ಸ್ವಲ್ಪ ಮಟ್ಟಿಗೆ ಒಪ್ಪಿಕೊಳ್ಳ ಬಹುದು ಅರಸರು ಲೂಟಿ ಮಾಡದೆ ತನ್ನಲ್ಲಿದ್ದನ್ನು ಎಲ್ಲರಿಗೂ ಕೊಟ್ಟರು. ಯತೀಂದ್ರ ಅವರ ಅಪ್ಪ ಇಡೀ ರಾಜ್ಯವನ್ನು ಲೂಟಿ ಮಾಡಿದರು. ತಾಯಿಯ ಜೊತೆ ಸೇರಿ ಜಾಗ ಲೂಟಿ ಮಾಡಲು ಶುರು ಮಾಡಿದರು. ಅದನ್ನು ಅರಸರು ಮಾಡಲಿಲ್ಲ ಹಾಗಾಗಿ ಶಹಬಾಸ್ ಗಿರಿ ಕೊಟ್ಟಿರಬಹುದು ಆ ಮನುಷ್ಯ ಇಡೀ ರಾಜ್ಯದ ಜನರ ಕ್ಷಮೆ ಕೇಳಬೇಕು ಒಡೆಯರ್ ಕುಟುಂಬ ಬಗ್ಗೆ ಮಾತಾಡುವ…

Read More