Author: kannadanewsnow05

ದಾವಣಗೆರೆ : ದಾವಣಗೆರೆಯಲ್ಲಿ ಪೊಲೀಸರು ಭರ್ಜರಿ ಕಯಾಚರಣೆ ನಡೆಸಿದ್ದು ಖಾಸಗಿ ಹೋಟೆಲ್ ನಲ್ಲಿ ಅಕ್ರಮವಾಗಿ ಜೂಜು ಆಡುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ 26 ಜನರನ್ನು ವಶಕ್ಕೆ ಪಡೆದುಕೊಂಡು 25 ಲಕ್ಷ ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಹೌದು ನಗರದ ಡೆಂಟಲ್ ಕಾಲೇಜ್ ರಸ್ತೆಯ ಹೋಟೆಲ್ ಒಂದರಲ್ಲಿ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಹೋಟೆಲ್ ನಲ್ಲಿ ಅಕ್ರಮವಾಗಿ ಜೂಜು ಆಡುತ್ತಿದ್ದಾಗ ಈ ವೇಳೆ ಅಲ್ಲೇ ಜೂಜಾಡುತ್ತಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದು, ಅಡ್ಡೆಯಲ್ಲಿದ್ದ 24,86,500 ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

Read More

ತುಮಕೂರು : ಸದ್ಯಕ್ಕೆ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ವಿಚಾರ ಅಪ್ರಸ್ತುತ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ತುಮಕೂರಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇ ತಿಂಗಳೊಳಗೆ ಬಿಬಿಎಂಪಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆ ಆಗಬೇಕು ಎಂದು ಕೋರ್ಟ್ ಹೇಳಿದೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸರ್ಕಾರಕ್ಕೆ ಜನ ಉತ್ತರ ಕೊಡುತ್ತಾರೆ. ಸಿಎಂ, ಡಿಸಿಎಂ ಸಚಿವರ ನಡುವೆ ಸಮನ್ವಯ ಇಲ್ಲ. ಅವರ ಒಳಜಗಳದಿಂದಲೇ ಚುನಾವಣೆ ಮುಂದೂಡುತ್ತಿರಬಹುದು. ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯ ಬಗ್ಗೆ ನಾಯಕರು ನಿರ್ಧರಿಸುತ್ತಾರೆ. ಸಮನ್ವಯ ಸಮಿತಿ ಮಾಡಿ ಕಾರ್ಯಕರ್ತರಿಗೆ ಸಿಹಿ ಸುದ್ದಿ ನೀಡುತ್ತಾರೆ ಎಂದರು. ಎಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಕೆಲಸ ಮಾಡುತ್ತಿಲ್ಲ ಅನ್ನೋದಿದೆ. ವಯಸ್ಸಿಗೆ ಮೀರಿ ಎಚ್ ಡಿ ಕುಮಾರಸ್ವಾಮಿ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರ ವಿಚಾರ ಸದ್ಯಕ್ಕೆ ಅಪಪ್ರಸ್ತುತ. ಸದ್ಯಕ್ಕೆ ಜೆಡಿಎಸ್ ಅಧ್ಯಕ್ಷರಾಗಿ ಎಚ್ ಡಿ…

Read More

ಧಾರವಾಡ : ಧಾರವಾಡದಲ್ಲಿ ಗ್ಯಾಸ್ ಲೀಕ್ ಆಗಿ ಮನೆ ಒಂದು ಹೊತ್ತಿ ಉರಿದು ಛಿದ್ರ ಛಿದ್ರವಾಗಿರುವ ಘಟನೆ ಧಾರವಾಡ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ. ಸಿದ್ದವ ದಾನಪ್ಪ ನವರಿಗೆ ಸೇರಿದ ಮನೆ ಗ್ಯಾಸ್ ಲೀಕ್ ನಿಂದ ಮನೆ ಸ್ಫೋಟಗೊಂಡಿದೆ. ಈ ವೇಳೆ ಮನೆಯವರು ಎಲ್ಲರೂ ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.ಅಗ್ನಿಶಾಮಕದಳ ಕೂಡಲೇ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ನಿನ್ನೆ ಬೆಳಗಾವಿಯಲ್ಲಿ ಕನ್ನಡ ಮಾತಾಡು ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಮಹಾರಾಷ್ಟ್ರದ ಹಲವು ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ತನ್ನ ಬಸ್ ಗಳ ಸಂಚಾರವನ್ನು ಇದೀಗ ಸ್ಥಗಿತಗೊಳಿಸಿದೆ. ಹೌದು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿದೆ. ಸಾರಿಗೆ ಬಸ್ ಸಂಚಾರ ಬಂದ್ ಮಾಡಿ ಮಹಾರಾಷ್ಟ್ರ ಸರ್ಕಾರ. ಬೆಳಗಾವಿ ಗಡಿಯವರೆಗೆ ಮಾತ್ರ ಮಹಾರಾಷ್ಟ್ರದ ಸಾರಿಗೆ ಬಸ್ ಗಳು ಇದೀಗ ಬರುತ್ತವೆ. ಕರ್ನಾಟಕದಿಂದ ಎಂದಿನಂತೆ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ ನಡೆಸುತ್ತಿವೆ. ಮಹಾರಾಷ್ಟ್ರದ ವಿವಿಧ ಕಡೆಗೆ ಕರ್ನಾಟಕದ ಸಾರಿಗೆ ಬಸ್ಗಳು ಸಂಚರಿಸುತ್ತಿವೆ. ಪ್ರಕರಣ ಹಿನ್ನೆಲೆ? ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಗೆ ಮರಾಠಿ ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಹದೇವ್ ಹಲ್ಲೆಗೊಳಗಾದ ಕಂಡೆಕ್ಟರ್ ಎಂದು ತಿಳಿದುಬಂದಿದೆ. ಬೆಳಗಾವಿಯಲ್ಲಿ ಮತ್ತೆ ಮರಾಠಾ ಯುವಕರು ಗೂಂಡಾಗಿರಿ ಮೆರೆದಿದ್ದಾರೆ. ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಯುವತಿಯೊಬ್ಬಳು ಮರಾಠಿಯಲ್ಲಿ…

Read More

ಮೈಸೂರು : ನಿನ್ನೆ ತಾನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳು ಹೊತ್ತಿಸಿದ ಬೆಂಕಿಗೆ ಇಡೀ ಚಾಮುಂಡಿ ಬೆಟ್ಟವೆ ಹೊತ್ತಿ ಉರಿದಿರುವ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ ಮೈಸೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಹೌದು ಮೈಸೂರು ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ವಸ್ತು ಪ್ರದರ್ಶನ ಆವರಣದಲ್ಲಿ ಬೆಂಕಿ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಡಾಲಿ ಮದುವೆಗೆ ಈ ಒಂದು ಹಾಕಲಾಗಿದ್ದ ಸೆಟ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಕಿಯಿಂದ ಮೈಸೂರು ನಗರದಲ್ಲಿ ದಟ್ಟ ಹೊಗೆ ಆವರಿಸಿದೆ. ಡಾಲಿ ಮದುವೆ ಬಳಿಕ ಈ ಒಂದು ತ್ಯಾಜ್ಯ ಹಾಕಲಾಗಿತ್ತು. ಕಿಡಿಗೇಡಿಗಳು ಈ ಒಂದು ತ್ಯಾಜ್ಯಕ್ಕೆ ಬೆಂಕಿ ಹಾಕಿರುವ ಶಂಕೆ ಇದೀಗ ವ್ಯಕ್ತವಾಗುತ್ತದೆ. ದಟ್ಟ ಹೊಗೆಯಿಂದಾಗಿ ಇದೀಗ ಮೈಸೂರು ನಗರ ಸಂಪೂರ್ಣವಾಗಿ ಹೊಗೆಮಯವಾಗಿದೆ. ವಸ್ತು ಪ್ರದರ್ಶನ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸುತ್ತಿದ್ದಾರೆ.

Read More

ಕಲಬುರ್ಗಿ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಮತ್ತೆ 17 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಮಲಘಾಣ ಗ್ರಾಮದಲ್ಲಿ ನಡೆದಿದೆ. ನಿನ್ನೆ ಐವರು ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು, ತಲೆ ಸುತ್ತು, ಸುಸ್ತು ಸೇರಿ ಇತರೆ ಲಕ್ಷಣಗಳು ಕಂಡು ಬಂದು ಕಾಳಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಕೂಡ 17 ಮಕ್ಕಳಲ್ಲಿ ಅದೇ ತರಹದ ಲಕ್ಷಣಗಳು ಕಂಡುಬಂದಿವೆ ಎಂದು ತಿಳಿದುಬಂದಿದೆ. ಕೋರವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ ಶಾಲೆಗೆ ಆಗಮಿಸಿ, ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ಮಾಡಿದರು. ಈ ದಿನ ಮಕ್ಕಳಿಗೆ ಬಿಸಿಯೂಟ ಬಡಿಸದೆ ಬಿಸ್ಕೆಟ್, ಒಆರ್‌ಎಸ್‌ ನೀಡಿದರು.ಕಾಳಗಿ ಆಸ್ಪತ್ರೆಯಲ್ಲೇ ಎಲ್ಲ ಅಧಿಕಾರಿಗಳು ಇದ್ದು ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಶಾಲೆಗೆ ನೀರು ಸರಬರಾಜು ಮಾಡುವ ಪೈಪ್ ಲೈನ್ ಮೋಟಾ‌ರ್ ಸುಟ್ಟಿದ್ದು ಕೆಲದಿನಗಳಿಂದ ನೀರು ಪೂರೈಕೆ ಸ್ಥಗಿತಗವಾಗಿದೆ. ಯಾವ ಕಾರಣಕ್ಕೆ ಈ ತೊಂದರೆ ಕಾಣಿಸಿಕೊಳ್ಳುತ್ತಿದೆ ಎಂಬುದೇ…

Read More

ನವದೆಹಲಿ : ಕೋವಿಡ್ -19 ಕಾಯಿಲೆಗೆ ಕಾರಣವಾಗುವ ವೈರಸ್ ಸಾರ್ಸ್-ಕೋವ್-2 ಗೆ ಹೋಲುವ ಮತ್ತೊಂದು ವೈರಸ್’ನ್ನ ಚೀನಾ ಕಂಡು ಹಿಡಿದಿದೆ. ಕೋವಿಡ್ -19 ಸಾಂಕ್ರಾಮಿಕ ರೋಗಕ್ಕೆ ಕಾರಣವೆಂದು ಶಂಕಿಸಲಾದ ಸಂಶೋಧನೆಗೆ ಕುಖ್ಯಾತರಾಗಿರುವ ಚೀನಾದ ವಿಜ್ಞಾನಿ ಶಿ ಜೆಂಗ್ಲಿ ಅಧ್ಯಯನದ ನೇತೃತ್ವ ವಹಿಸಿದ್ದಾರೆ. ಕೊರೊನ ಹೊಡೆತದಿಂದ ಈಗಾಗಲೇ ಇಡೀ ಜಗತ್ತೇ ತತ್ತರಿಸಿ ಹೋಗಿದ್ದು, ಇನ್ನು ಹಲವು ದೇಶಗಳು ಆರ್ಥಿಕವಾಗಿ ಮೇಲೆ ಏಳಲು ಹರಸಾಹಸ ಪಡುತ್ತಿವೆ. ಇದರ ಮಧ್ಯ ಚೀನಾದಲ್ಲಿ ಮತ್ತೊಂದು ವೈರಸ್ ಪತ್ತೆಯಾಗಿದ್ದು, ಇದು ಬಾವಲಿಗಳ ಮೂಲಕ ಮಾನವನ ದೇಹವನ್ನು ಪ್ರವೇಶಿಸುತ್ತದೆ ಎಂದು ತಿಳಿದು ಬಂದಿದೆ. ಈ ಒಂದು ಹೊಸ ವೈರಸ್‌ಗೆ ಚೀನಾ ರಾಷ್ಟ್ರದ ವಿಜ್ಞಾನಿಗಳು HKU-5-Cov-2 ಎಂದು ನಾಮಕರಣ ಮಾಡಿದ್ದಾರೆ. ಹೌದು ಚೀನಾದಲ್ಲಿ ಮತ್ತೊಂದು ಅಪಾಯಕಾರಿ ವೈರಸ್ ಪತ್ತೆಯಾಗಿದೆ. ಬಾವಲಿ ಮೂಲಕ ಮಾನವನ ದೇಹ ಹೊಕ್ಕಿರುವ ಹೊಸ ಬಗೆಯ ವೈರಸ್ ಇದಾಗಿದ್ದು, ಹೊಸ ವೈರಸ್‌ಗೆ HKU-5-Cov-2 ಎಂದು ನಾಮಕರಣ ಮಾಡಲಾಗಿದೆ. ಮಾನವನ ಜೀವಕೋಶದ ಪ್ರೋಟೀನ್ ಗಳನ್ನು ಈ ಒಂದು ವೈರಸ್ ಹಾನಿ…

Read More

ತೆಲಂಗಾಣ : ಇತ್ತೀಚಿಗೆ ವಯಸ್ಸಿನ ಅಂತರವಿಲ್ಲದೆ ಎಲ್ಲರಲ್ಲೂ ಹೃದಯಘಾತ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಮಗಳ ಮದುವೆ ಸಂದರ್ಭದಲ್ಲಿ ಅಳಿಯನ ಪಾದ ತೊಳೆದು ಕನ್ಯಾದಾನ ಮಾಡುವಾಗಲೇ, ಹೃದಯಾಘಾತದಿಂದ ಮಾವ ಸಾವನಪ್ಪಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಭಿಕ್ಕನೂರ್ ಮಂಡಲದ ರಾಮೇಶ್ವರಪಲ್ಲಿಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಕುಡಿಕ್ಯಾಲ ಬಾಲಚಂದ್ರಂ (56) ಎಂದು ತಿಳಿದುಬಂದಿದ್ದು, ಇವರು ಮಗಳ ಮದುವೆ ನಡೆಯುತ್ತಿದ್ದಾಗ, ತಂದೆ ಅದೇ ಸಭಾಂಗಣದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಪ್ರಾಣ ಬಿಟ್ಟಿರುವ ಘಟನೆ ನಡೆದಿದೆ.ಕನ್ಯಾದಾನ ಸಮಾರಂಭ ಮುಗಿದ ತಕ್ಷಣ, ವಧುವಿನ ತಂದೆಗೆ ಹೃದಯಾಘಾತವಾಯಿತು.ತಕ್ಷಣ ಎಚ್ಚೆತ್ತ ಕುಟುಂಬ ಸದಸ್ಯರು ಅವರನ್ನು ಆಸ್ಪತ್ರೆಗೆ ಸಾಗಿಸಿದರು, ಅಲ್ಲಿ ಅವರು ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದರು. ನಿನ್ನೆ ಜಂಗಂಪಳ್ಳಿಯ ಹೊರವಲಯದಲ್ಲಿರುವ ಬಿಟಿಎಸ್ ಬಳಿಯ ಮದುವೆ ಮಂಟಪದಲ್ಲಿ ಏರ್ಪಡಿಸಿದ್ದರು. ಈ ಭವ್ಯ ಸಮಾರಂಭದಲ್ಲಿ ಎಲ್ಲಾ ಸಂಬಂಧಿಕರು ಮತ್ತು ಸ್ನೇಹಿತರು ಭಾಗವಹಿಸಿದ್ದರು. ವರನ ಪಾದಗಳನ್ನು ತೊಳೆದು ಕನ್ಯಾದಾನ ಮಾಡಿದ ನಂತರ, ಬಾಲಚಂದ್ರ ತೀವ್ರ ಅಸ್ವಸ್ಥನಾಗಿ ಮದುವೆ ಮಂಟಪದಲ್ಲಿ…

Read More

ತುಮಕೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಇದೀಗ ಗೃಹ ಸಚಿವರ ಕ್ಷೇತ್ರದಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಸಹ ಇದೀಗ ಆತ್ಮಹತ್ಯೆಗಳಿಗೆ ಕಡಿವಾಣ ಬಿದ್ದಿಲ್ಲ. ತುಮಕೂರಲ್ಲಿ ಒಬ್ಬ ಆಟೋ ಚಾಲಕ ಹಾಗೂ ಓರ್ವ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಸುಗ್ರೀವಾಜ್ಞೆ ಜಾರಿ ಬಳಿಕವು ಮೈಕ್ರೋ ಟಾರ್ಚರ್ ನಿಂತಿಲ್ಲ. ಇದೀಗ ಗೃಹ ಸಚಿವರ ತವರಿನಲ್ಲಿ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆ ಎಂದು ತುಮಕೂರಿನಲ್ಲಿ ಒಂದೇ ದಿನ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಂಜನಮೂರ್ತಿ (35) ಆತ್ಮಹತ್ಯೆಗೆ ಶರಣಾದವರು. ಅಂಜನಮೂರ್ತಿ ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ ಎಂದು ತಿಳಿದುಬಂದಿದೆ. ಫೈನಾನ್ಸ್ ಕಿರುಕುಳಕ್ಕೆ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.ಹಣ ನೀಡುವಂತೆ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ವಿಡಿಯೋದಲ್ಲಿ ಮನವಿ ಮಾಡಿದ್ದಾನೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು…

Read More

ಚಿಕ್ಕಬಳ್ಳಾಪುರ : ನನ್ನ ಕೊನೆಯ ಉಸಿರು ಇರುವಾಗಲೇ ಏನಾದರೂ ಒಳ್ಳೆಯದು ಮಾಡಬೇಕು ಕರ್ನಾಟಕಕ್ಕೆ ಏನಾದರೂ ಒಳ್ಳೆಯದು ಮಾಡಬೇಕು ನಾನು ರೈತನ ಮಗ ಶಕ್ತಿ ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ತಿಳಿಸಿದರು. ನಾನು ಯಾವ ರಾಜಕಾರಣಿ ಬಗ್ಗೆಯೂ ಲಘುವಾಗಿ ಮಾತನಾಡಿಲ್ಲ. ಯಾವುದೇ ಪಕ್ಷ ಯಾವುದೇ ಜಾತಿಯ ನಾಯಕರ ಬಗ್ಗೆ ನಾನು ಮಾತನಾಡಿಲ್ಲ. ನನ್ನ ಕೊನೆಯ ಉಸಿರು ಇರುವಾಗಲೇ ಏನಾದರೂ ಒಳ್ಳೆಯದು ಮಾಡಬೇಕು. ಕರ್ನಾಟಕಕ್ಕೆ ಏನಾದರೂ ಒಳ್ಳೆಯದು ಮಾಡಬೇಕು ನಾನು ರೈತನ ಮಗ ಶಕ್ತಿ ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು. ಕೆಂಪುಕೋಟೆ ಮೇಲೆ ಒಂದು ಬಾರಿ ಬಾವುಟ ಹಾರಿಸಿದ್ದೇನೆ. ನನ್ನ ಶಕ್ತಿ ಭೈರವೈಕ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಆಗಿದ್ದರು.ಆದರೆ ಸ್ವಲ್ಪ ವ್ಯತ್ಯಾಸವಾದ ಕಾರಣ ತಕ್ಷಣ ನಾನೇ ಬಗೆಹರಿಸಿಕೊಂಡೆ ಮಠ, ಒಕ್ಕಲಿಗ ಸಮಾಜವನ್ನು ಸಮರ್ಪಕವಾಗಿ ಮುನ್ನಡೆಸುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದರು.

Read More