Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಕರ್ತವ್ಯಲೋಪ ಹಿನ್ನಲೆಯಲ್ಲಿ ಇಬ್ಬರೂ ಪಿಡಿಒ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಾಲ್ ಅವರು ಈ ಆದೇಶ ಹೊರಡಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆ ತಲುಪಿಸಲು ನಿರ್ಲಕ್ಷ ವಹಿಸಿದ ಹಿನ್ನೆಲೆಯಲ್ಲಿ ಇಬ್ಬರು ಪಿಡಿಒ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ. ಪಿಡಿಒ ಅಧಿಕಾರಿಗಳಾದ ಶಾಂತಿನಾಥ ಜೈನ ಹಾಗೂ ಮಾಬುಸಾಬ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಕವಲೆತ್ತು ಗ್ರಾಮ ಪಂಚಾಯಿತಿ ಪಿಡಿಓ ಆಗಿದ್ದ ಶಾಂತಿನಾಥ ಜೈನ್ ಹಾಗೂ ಹಾವೇರಿ ತಾಲೂಕಿನ ಯರಗಚ್ಚ ಗ್ರಾಮ ಪಂಚಾಯಿತಿ ಪಿಡಿಒ ಮಾಬುಸಾಬ್ ಅಮಾನತುಗೊಂಡವರು. ಕಳೆದ ನಾಲ್ಕು ವರ್ಷಗಳಿಂದ ಅಭಿವೃದ್ಧಿ ಮತ್ತು ಕಾಮಗಾರಿಗಳು ಮತ್ತು ಎನ್ ಆರ್ ಜಿ ಕಾಮಗಾರಿಯಲ್ಲಿ ಈ ಇಬ್ಬರು ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತವೆ. ಇದೀಗ ಈ ಒಂದು ಬೆದರಿಕೆ ಕರೆಗಳ ಕುರಿತಂತೆ ಬೆಂಗಳೂರಿನ ಸದಾಶಿವನಗರ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಇದೀಗ ಎಫ್ಐಆರ್ ದಾಖಲಿಸಿದ್ದಾರೆ.ಆರ್ ಎಸ್ ಎಸ್ ಕುರಿತ ಹೇಳಿಕೆ ಬೆನ್ನಲ್ಲೇ ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಸಂದೇಶ ಬಂದಿತ್ತು.ಎರಡು ದಿನಗಳ ಹಿಂದೆ ಕಿಡಿಗೇಡಿಗಳು ಪ್ರಿಯಾಂಕ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಸದ್ಯ ಸದಾಶಿವ ನಗರ ಠಾಣೆ ಪೋಲಿಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ನಿಷೇಧ ಹೇರುವಂತೆ ಪ್ರಿಯಾಂಕ ಖರ್ಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ನಿಷೇಧ ಫಿಕ್ಸ್ ಎಂದು ಹೇಳಲಾಗುತ್ತಿದೆ. ಹೌದು ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಇರುವ ಕುರಿತು ಸಿಎಂ ಸಿದ್ದರಾಮಯ್ಯ ಪರೋಕ್ಷ ಸುಳಿವು ಕೊಟ್ಟಿದ್ದಾರೆ. ತಮಿಳುನಾಡು ಮಾದರಿಯಲಿಗೆ ಆರ್ ಎಸ್ ಎಸ್ ಗೆ ನಿಷೇಧ ಹೇರುವ ಸಾಧ್ಯತೆ ಇದೆ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆಗಳು ಇವೆ ಪ್ರಿಯಾಂಕ ಖರ್ಗೆ ಬೆಂಬಲಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ನಿಂತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಅನೌಪಚಾರಿಕ ಚರ್ಚೆ ಸಾಧ್ಯತೆ ಇದೆ ಆರ್ ಎಸ್ ಎಸ್ ಗೆ ನೇರವಾಗಿ ಅಲ್ಲದಿದ್ದರೂ ನಿರ್ಬಂಧದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಆರ್ ಎಸ್ ಎಸ್…
ಕಾಳಿ ದೇವಿಯನ್ನು ಈ ರೀತಿ ಒಮ್ಮೆ ಪೂಜಿಸುವುದರಿಂದ ಸಾಕು, ನಮಗೆ ಒಂದರ ನಂತರ ಒಂದರಂತೆ ತೊಂದರೆ ಉಂಟುಮಾಡುವ ಮತ್ತು ಜೀವನದ ಶಾಂತಿಯನ್ನು ಕಸಿದುಕೊಳ್ಳುವ ಶತ್ರುಗಳನ್ನು ದೂರವಿಡಬಹುದು. ಅಂದರೆ ನಮ್ಮ ಪ್ರಗತಿಯ ಬಗ್ಗೆ ಅಸೂಯೆ ಪಡುವ ಪ್ರತಿಯೊಬ್ಬ ವ್ಯಕ್ತಿಯು ನಮ್ಮನ್ನು ಶತ್ರುಗಳೆಂದು ಭಾವಿಸುತ್ತಾರೆ. ಅಷ್ಟೇ ಅಲ್ಲ, ನಾವು ಯಾವುದೇ ರೀತಿಯಲ್ಲಿ ಪ್ರಗತಿ ಹೊಂದದಂತೆ ತಡೆಯುವ ದುಷ್ಟ ಉದ್ದೇಶದಿಂದ ಅವರು ದುಷ್ಟ ಕೃತ್ಯಗಳಲ್ಲಿ ತೊಡಗುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ,…
ಬೆಂಗಳೂರು: ಆರು ತಿಂಗಳ ಹಿಂದೆ ನಡೆದ ವೈದ್ಯೆಯೊಬ್ಬರ ಸಾವಿನ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಎಫ್ಎಸ್ಎಲ್ ವರದಿಯ ಹಿನ್ನೆಲೆಯಲ್ಲಿ, ವೈದ್ಯೆ ಪತ್ನಿಗೆ ಅರಿವಳಿಕೆ ಔಷಧಿ ನೀಡಿ ಕೊಲೆಗೈದ ಗಂಭೀರ ಆರೋಪದ ಮೇಲೆ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಡಾ.ಕೃತಿಕಾ ರೆಡ್ಡಿಗೆ ಅನಾರೋಗ್ಯವಿತ್ತು. ಅದನ್ನು ಮುಚ್ಚಿಟ್ಟು ವಿವಾಹ ಮಾಡಿದ ಕಾರಣಕ್ಕೆ ಡಾ. ಮಹೇಂದ್ರ ರೆಡ್ಡಿ ಆಕೆಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿತ್ತು. ಆದರೆ, ಈ ಕೊಲೆ ಪ್ರಕರಣ ಸಂಬಂಧ ಇದೀಗ ಸ್ಟೋಟಕ ಮಾಹಿತಿ ಹೊರಬಿದ್ದಿದೆ. ಪ್ರಕರಣದ ಕುರಿತು ಕೃತಿಕಾ ಸಹೋದರಿ ಡಾ. ನಿಖಿತಾ ಮಾತನಾಡಿ, ಅಕ್ಕನ ಸಾವಿಗೆ ಪತಿ ಮಹೇಂದ್ರನೇ ಕಾರಣ. ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಆರೋಪ ಮಾಡಿದ್ದಾರೆ. ಕೃತಿಕಾ ಮೃತಪಟ್ಟ ದಿನವೇ ನಮಗೆ ಅನುಮಾನ ಬಂದಿತ್ತು. ಆಗಲೇ ಪೋಸ್ಟ್ಮಾರ್ಟಂ ಮಾಡಬೇಕು ಎಂದು ನಾವು ಒತ್ತಾಯಿಸಿದ್ದೆವು. ಆದರೆ ಮಹೇಂದ್ರ ಪೋಸ್ಟ್ಮಾರ್ಟಂ ಬೇಡ ಎಂದು ನಾಟಕ ಮಾಡಿದರು. ನಂತರ ತನಿಖೆಯ ವೇಳೆ ಮಹೇಂದ್ರಗೆ ಅನೈತಿಕ ಸಂಬಂಧವಿತ್ತು ಎಂಬುದು ಗೊತ್ತಾಯಿತು ಎಂದು ನಿಖಿತಾ ಹೇಳಿದ್ದಾರೆ. ‘ಕೃತಿಕಾ…
ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಜೈಲಿಗೆ ಹೋಗಿ ಬಂದಿದ್ದಾರೆ. ಆದರೂ ಕೂಡ ಇಡಿ ಅಧಿಕಾರಿಗಳು ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದು, ಈಗ ಶಾಸಕ ನಾಗೇಂದ್ರ ಅವರ ಕುರುಬ ನಾಗರಾಜ್ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಹೌದು ಕಾಂಗ್ರೆಸ್ ಶಾಸಕ ಸಚಿವ ಬಿ ನಾಗೇಂದ್ರ ಆಪ್ತ ಕುರುಬ ನಾಗರಾಜ್ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಬಳ್ಳಾರಿ ನಗರದ ತಾಳೂರು ರಸ್ತೆಯಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಆಪ್ತನಾಗಿರುವ ಕುರುಬ ನಾಗರಾಜಗೆ ಇದೀಗ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ನಿಷೇಧ ಕುರಿತಂತೆ ಇತ್ತೀಚಿಗೆ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಈ ಹಿನ್ನೆಲೆ ಅವರಿಗೆ ನಿರಂತರವಾಗಿ ಬೆದರಿಕೆ ಸಂದೇಶ ಬಂದಿದ್ದವು. ಇದೀಗ ಪ್ರಿಯಾಂಕ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಸರ್ಕಾರಿ ಸಿಬ್ಬಂದಿ ಭಾಗಿಯಾಗಬಾರದು, ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ನಿಯಮ ಜಾರಿಯಲ್ಲಿದೆ.ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021ರ ಅಡಿ ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿ ಭಾಗಿ ಆದರೆ ಶಿಸ್ತು ಕ್ರಮ ಆಗಲಿದೆ ಎಂದು ಈ ಕುರಿತು ಸುತ್ತೋಲೆ ಹೊರಡಿಸಲು ಸಿದ್ಧರಾಮಯ್ಯ ಅವರಿಗೆ ಪ್ರಿಯಾಂಕ ಖರ್ಗೆ ಮನವಿ ಮಾಡಿದ್ದಾರೆ ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಸಿಎಂಗೆ ಬರೆದ ಪತ್ರದಲ್ಲೇನಿದೆ? ಯಾವುದೇ ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ. ಅವುಗಳೊಂದಿಗೆ ಅನ್ಯತಾ ಸಂಬಂಧ ಹೊಂದಿರತಕ್ಕದ್ದಲ್ಲ. ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದ್ದರು ಸಹ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮನೆ ಸ್ಪೋಟಿಸುವುದಾಗಿ ಈಮೇಲ್ ಬೆದರಿಕೆ ಸಂದೇಶ ಬಂದಿದೆ. ಆರು ಆರ್ ಡಿ ಎಕ್ಸ್ ಫಿಕ್ಸ್ ಮಾಡಿದ್ದೇವೆ dkshivakumar1@gmail.com ಗೆ ಈ ಒಂದು ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. arnaashinkumar@gmail.com ಇಂದ ಈ ಒಂದು ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಬಾಂಬ್ ಸ್ಕ್ವಾಡ್ ಸಿಎಂ ಡಿಸಿಎಂ ನಿವಾಸಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇದು ಹುಸಿಬಾಂಬ್ ಕರೆ ಎಂದು ಈ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ, ಅಶ್ವಥ್ ನಾರಾಯಣಸ್ವಾಮಿ ಎಂಬವರ ದೂರು ಆಧರಿಸಿ ಕೇಸ್ ದಾಖಲಾಗಿದೆ.
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ಆಗುತ್ತಿದ್ದು ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಿ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಕುರಿತು ಹೊಸ ಚರ್ಚೆಗಳು ಆಗುತ್ತಿದ್ದು, ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಫೋಟಕವಾದ ಹೇಳಿಕೆ ನೀಡಿದ್ದು, ಸಮ್ಮಿಶ್ರ ಸರ್ಕಾರ ಸಂದರ್ಭದಲ್ಲಿ ಬಿಜೆಪಿಯಿಂದ ನನಗೆ ಡಿಸಿಎಂ ಆಫರ್ ಬಂದಿತ್ತು ಆದರೆ ನಾನು ಪಕ್ಷದ ನಿಷ್ಠೆಗಾಗಿ ಜೈಲನ್ನೇ ಆಯ್ಕೆ ಮಾಡಿಕೊಂಡೆ ಎಂದು ಹೊಸ ಬಾಂಬ್ ಸಿಡಿಸಿದರು. ನಗರದ ಎಫ್ಕೆಸಿಸಿಐ ಸಭಾಂಗಣದಲ್ಲಿ ಲೇಖಕ ಕೆ.ಎಂ. ರಘು ಅವರು ರಚಿಸಿದ ‘ಎ ಸಿಂಬಲ್ ಆಫ್ ಲಾಯಲ್ಟಿ ಡಿ.ಕೆ. ಶಿವಕುಮಾರ್’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉಳಿಸಲು ನಾನು ಪ್ರಯತ್ನಿಸುತ್ತಿದ್ದಾಗ, ಬಿಜೆಪಿಯ ಹಿರಿಯ ನಾಯಕರೊಬ್ಬರು ನನಗೆ ಉಪಮುಖ್ಯಮಂತ್ರಿ ಹುದ್ದೆಯ ಆಮಿಷವೊಡ್ಡಿದ್ದರು. ಅದಕ್ಕೆ ಒಪ್ಪದಿದ್ದಲ್ಲಿ ಜೈಲಿಗೆ ಕಳುಹಿಸುವುದಾಗಿ ಬೆದರಿಸಿದ್ದರು. ಆದರೆ, ನಾನು ನನ್ನ ಪಕ್ಷದ ನಿಷ್ಠೆಗೆ ಬದ್ಧನಾಗಿ ಜೈಲನ್ನೇ ಆಯ್ದುಕೊಂಡೆ. ಒಂದು ವೇಳೆ ಅಂದು ನಾನು ಡಿಸಿಎಂ ಸ್ಥಾನಕ್ಕೆ ಆಸೆಪಟ್ಟು ಹೋಗಿದ್ದರೆ, ರಾಜ್ಯದ ರಾಜಕೀಯ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಈ ಮೇಲ್ ಸಂದೇಶ ಬಂದಿದೆ. ಹೌದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಇಮೇಲ್ ಐಡಿಗೆ ಅಪರಿಚಿತ ಇ-ಮೇಲ್ ನಿಂದ ಬೆದರಿಕೆ ಸಂದೇಶ ಬಂದಿದ್ದು ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಇನ್ನು ಬೆಂಗಳೂರು ನಗರದಾದ್ಯಂತ ಈ ಹಿಂದೆ ಶಾಲಾ ಕಾಲೇಜುಗಳಿಗೆ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಬಾಂಬ್ ಬೆದರಿಕೆ ಸಂದೇಶ ಕುರಿತಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದಲ್ಲಿ ಎಸ್ಐಟಿ ರಚನೆ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೊಂದು ಬಾಂಬ್ ಬೆದರಿಕೆ ಸಂದೇಶ ಬಂದಿದೆ.














