Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮತ್ತೊಂದು ತಿರುವು ಸಿಕ್ಕಿದ್ದು ಭೈರತಿ ಬಸವರಾಜ ವಿರುದ್ಧ ನಾನು ದೂರು ಕೊಟ್ಟೆ ಇಲ್ಲ ಎಂದು ಕೊಲೆಯಾದ ಬಿಕ್ಲು ಶಿವು ತಾಯಿ ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದು, ಪೊಲೀಸರೇ ಅವರ ಹೆಸರು ಹಾಕಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮಧ್ಯಾಗಳೊಂದಿಗೆ ಮಾತನಾಡಿದ ಅವರು, ಯಾರ ಬಗ್ಗೆ ದೂರು ನೀಡಿದ್ದಾರೆ ಏನೋ ಗೊತ್ತಿಲ್ಲ ಅಂದರೆ ನಾನು ಯಾರ ಹೆಸರು ಹೇಳಲಿ? ನಾನು ನನ್ನ ಮಗ ಶಿವು ಕೊಲೆಯಾದ ಟೆನ್ಶನ್ ನಲ್ಲಿ ಇದ್ದೆ, ಕೊಲೆ ಮಾಡಿದ್ದು ನೋಡಿದೆ ಅನ್ನೋ ಕೇಸ್ ಸ್ಟ್ರಾಂಗ್ ಆಗುತ್ತೆ ಹೀಗಂತ ಹೇಳಿದಾಗ ನಾನು ಹು ಅಂದಿರಬೇಕು ಅಷ್ಟೇ ಎಂದು ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದಾರೆ. ಪೊಲೀಸರೇ ಅವರ ಹೆಸರು ಹಾಕಿಕೊಂಡಿರುವುದು. ನನ್ನ ಮಗನ ಕೊಲೆಯಾಗಿದ್ದು ಅವನಿಗೆ ನ್ಯಾಯ ಬೇಕು ಅವರ ಮಕ್ಕಳಿಗೆ ರಕ್ಷಣೆ ನೀಡಬೇಕು. ನಾನು ಯಾರ ವಿರುದ್ಧವೂ ದೂರು ಕೊಟ್ಟಿಲ್ಲ. ವಿಷಯ ಏನು ಅಂತ ನನಗೆ ಗೊತ್ತಿಲ್ಲದ ಮೇಲೆ ಯಾರ ವಿರುದ್ಧ ನಾನು ದೂರು ಕೊಡಲಿ ಎಂದು…
ಕಲಬುರ್ಗಿ : ಕಲ್ಬುರ್ಗಿ ಜಿಲ್ಲಾಧಿಕಾರಿ ಬಹುಷಃ ಪಾಕಿಸ್ತಾನದಿಂದ ಬಂದಿರಬೇಕು ಎಂದು ಪ್ರತಿಭಟನೆ ವೇಳೆ ಬಿಜೆಪಿ ನೀಡಿದ್ದರು. ಈ ಒಂದು ಹೇಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಕಲಬುರ್ಗಿಯಲ್ಲಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಕಲ್ಬುರ್ಗಿಯ ಡಿಸಿ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ ವಿಚಾರವಾಗಿ 2ನೇ ಬಾರಿಗೆ ಎಂಎಲ್ಸಿ ರವಿಕುಮಾರ್ ವಿಚಾರಣೆಗೆ ಹಾಜರಾಗಿದ್ದಾರೆ. ಕಲ್ಬುರ್ಗಿಯ ದಕ್ಷಿಣ ವಿಭಾಗದ ಎಸಿಪಿ ಕಚೇರಿಯಲ್ಲಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಇದು ಈಗ ವಿಚಾರಣೆಗೆ ಹಾಜರಾಗಿದ್ದಾರೆ ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಶರಣಪ್ಪ ಸುಬೇದಾರ್ ಅವರಿಂದ ರವಿಕುಮಾರ್ ವಿಚಾರಣೆ ನಡೆಯುತ್ತಿದೆ ಕಲ್ಬುರ್ಗಿಯ ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಕಲಬುರ್ಗಿ ಚಲೋ ಕಾರ್ಯಕ್ರಮ ವೇಳೆ ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು.
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಇಂದು ಮತ್ತೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲಾ ಮಣ್ಣಿನಿಂದ ಮುಚ್ಚಿಹೋಗಿದೆ. ಇದರಿಂದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಂಚಾರ ಸ್ಥಗಿತವಾಗಿದೆ. ಈ ಪ್ರದೇಶದಲ್ಲಿ ರಸ್ತೆಯ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೇ ಕತ್ತರಿಸಲಾಗಿದೆ. ಪರಿಣಾಮವಾಗಿ ಮಳೆ ಬರುತ್ತಿದ್ದಂತೆ ಮಣ್ಣು ಸಡಿಲಗೊಂಡು ಕುಸಿದು ಬೀಳುತ್ತಿದೆ. ಇದೀಗ ಹಲವು ಬಾರಿ ಹೆದ್ದಾರಿ ಬಂದ್ ಆಗುವ ಸ್ಥಿತಿ ನಿರ್ಮಾಣವಾಗಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ತೆರವು ಕಾರ್ಯ ಮಧ್ಯಾಹ್ನದವರೆಗೆ ನಡೆಯಲಿದೆ. ಹೀಗಾಗಿ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು…
ರಾಜಸ್ತಾನ್ : ರಾಜ್ಯದಲ್ಲಿ ಹೃದಯಾಘಾರದಿಂದ ಸರಣಿ ಸಾವು ಪ್ರಕರಣ ಮುಂದುವರಿದಿದ್ದು ಇಂದು ಬೆಳಿಗ್ಗೆ ತಾನೇ ಹಾವೇರಿಯಲ್ಲಿ 25 ವರ್ಷದ ಶಾಲಾ ಬಸ್ ಚಾಲಕೀರಪ್ಪ ಹೃದಯಘಾತದಿಂದ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಊಟ ಮಾಡೋಕೆ ಬಾಕ್ಸ್ ಓಪನ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಸಿಕಾರ್ ಪಟ್ಟಣದಲ್ಲಿ ನಡೆದಿದೆ. ಹೌದು ರಾಜಸ್ಥಾನದಲ್ಲಿ ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಸಿಕಾರ್ ಪಟ್ಟಣದ ಆದರ್ಶ ವಿದ್ಯಾಮಂದಿರ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದ್ದು, 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನಪ್ಪಿದ್ದಾಳೆ. ಶಾಲೆಯಲ್ಲಿ ಊಟ ಮಾಡಲೆಂದು ಬಾಕ್ಸ್ ಓಪನ್ ಮಾಡುತ್ತಿದ್ದ ವೇಳೆ ಪ್ರಗತಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಆದರೆ ಅಸ್ಟೊತ್ತಿಗಾಗಲೇ ವೈದ್ಯರು ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ದೃಢಪಡಿಸಿದ್ದಾರೆ.
ಬೆಂಗಳೂರು : ಕೊಪ್ಪಳದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸತತ ಮಳೆಯಿಂದಾಗಿ ಮನೆ ಕುಸಿದು ಒಂದುವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮನೆ ಕುಸಿದು ಒಂದುವರೆ ವರ್ಷದ ಪ್ರಶಾಂತಿ ಎನ್ನುವ ಮಗು ಸಾವನಪ್ಪಿದ್ದು, ಮನೆಯಲ್ಲಿದ್ದ ಆರು ಜನರಿಗೆ ಗಂಭೀರವಾದ ಗಾಯಗಳಾಗಿವೆ, ಗಾಯಗೊಂಡ ಹನುಮಂತಿ, ದುರ್ಗಮ್ಮ, ಭೀಮಮ್ಮ, ಹುಸೇನಪ್ಪ ಹಾಗೂ ಫಕೀರಪ್ಪ ಸೇರಿ ಆರು ಜನರಿಗೆ ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ 131 ದಿನಗಳ ಬಳಿಕ ಸೆರೆವಾಸದಿಂದ ಮುಕ್ತಿ ಪಡೆದಿರುವ ನಟ ದರ್ಶನ್ಗೆ ಇಂದು ಬಿಗ್ ಡೇ ಆಗಿದೆ. ನಟ ದರ್ಶನ್ ಪವಿತ್ರಾ ಗೌಡ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ. ಅಲ್ಲದೇ ಬೆಂಗಳೂರು ಪೊಲೀಸರ ಮುಂದೆ ಕೋರ್ಟ್ ಎರಡು ಪ್ರಶ್ನೆ ಇಟ್ಟಿತ್ತು. ಕೊಲೆಯಲ್ಲಿ ದರ್ಶನ್ ನೇರ ಹಸ್ತಕ್ಷೇಪ ಅದಕ್ಕೆ ಪೂರಕವಾದ ಸಾಕ್ಷ್ಯಗಳ ಬಗ್ಗೆ ಮಾಹಿತಿ ಕೇಳಿತ್ತು. ಇಂದು…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹಗರಣ ಹೊರಗಡೆ ಬರುತ್ತಲೇ ಇವೆ. ಇತ್ತ ಮೈಸೂರಲ್ಲಿ ಸಾಧನ ಸಮಾವೇಶ ಮಾಡುತ್ತಿದ್ದರೆ, ಇನ್ನೊಂದು ಕಡೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಕುರಿತು ಬಿಜೆಪಿ ಹೋರಾಟ ಮಾಡುತ್ತಿದೆ. ಇದೀಗ ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಈ ಹಿಂದೆ ಲೋಕಾಯುಕ್ತ ಡಿವೈಎಸ್ಪಿಗೆ ದೂರು ನೀಡಿದ್ದ ಬಿಜೆಪಿ ಶಾಸಕರು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ. ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ ದೊಡ್ಡ ಟೆಂಡರ್ ಆಗಿರುವುದರಿಂದ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಹಾಗೆ ಮಾಡದೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಿ ರಾಜಶ್ರೀ ಎಲೆಕ್ಟ್ರಿಕಲ್ಸ್ ಕಂಪೆನಿಗೆ…
ಕಲಬುರ್ಗಿ : ಸಾಮಾನ್ಯವಾಗಿ ಯಾವುದೇ ಆಸ್ಪತ್ರೆಗಳಿರಲಿ ಒಪಿಡಿಯಲ್ಲಿ ಯಾವುದೇ ರೋಗಿಗಳು ಬಂದರೆ ಅವರ ದಾಖಲಾತಿ ಹೆಸರು, ಮೊಬೈಲ್ ನಂಬರ್, ವಿಳಾಸ ಬರೆದುಕೊಳ್ಳುವುದನ್ನು ನೋಡಿದ್ದೇವೆ. ಆದರೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕು ಆಸ್ಪತ್ರೆಯಲ್ಲಿ ಅಲ್ಲಿನ ಸಿಬ್ಬಂದಿಗಳು ಓ ಪಿ ಡಿ ದಾಖಲಾತಿ ಪುಸ್ತಕದಲ್ಲಿ ಸಿನಿಮಾ ಹಾಡುಗಳನ್ನು ಬರೆದಿದ್ದಾರೆ. ಇಂದು ದಿಢೀರ್ ಎಂದು ಲೋಕಾಯುಕ್ತ ಎಸ್ ಪಿ ಸಿದ್ದರಾಜು ಆಸ್ಪತ್ರೆಗೆ ಭೇಟಿ ನೀಡಿದಾಗ ಈ ಒಂದು ಅವ್ಯವಸ್ಥೆ ಕಂಡು ದಂಗಾಗಿದ್ದಾರೆ. ಹೌದು ತಾಲೂಕು ಆಸ್ಪತ್ರೆಯ ಒಪಿಡಿ ದಾಖಲಾತಿ ಪುಸ್ತಕದಲ್ಲಿ ಸಿನಿಮಾ ಹಾಡು ಬರೆದಿದ್ದು, ‘ಪೂಜಿಸಲೆಂದು ಹೂಗಳ ತಂದೆ’ ಎಂದು ಆಸ್ಪತ್ರೆಯ ಸಿಬ್ಬಂದಿಗಳು ಪುಸ್ತಕದ ದಾಖಲಾತಿಯಲ್ಲಿ ಈ ಹಾಡು ಬರೆದಿದ್ದಾರೆ.ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕು ಆಸ್ಪತ್ರೆ ಪುಸ್ತಕದಲ್ಲಿ ಸಿಬ್ಬಂದಿಗಳು ಈ ಹಾಡು ಬರೆದಿದ್ದಾರೆ.ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿದ್ದಾಗ ಲೋಕಾಯುಕ್ತ ಎಸ್ಪಿ ಸಿದ್ದರಾಜು ಆಸ್ಪತ್ರೆಯ ಕರ್ಮ ಕಾಂಡ ಬಯಲಾಗಿದೆ. ತಾಲೂಕು ಆಸ್ಪತ್ರೆಯ ಬೇಜವಾಬ್ದಾರಿತನ ಕಂಡು ದಂಗಾಗಿದ್ದಾರೆ.. ಇದು ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಕ್ಷೇತ್ರದ ಆಸ್ಪತ್ರೆನಾ? ಎಂದು ಸಹಜವಾಗಿ…
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲೀಸ್ ಗೆ ಪಡೆದ ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ನಗರಸಭೆಯ ಬಿಜೆಪಿ ಸದಸ್ಯ ಹಾಗೂ ನಗರಸಭೆಯ ಓರ್ವ ಅಧಿಕಾರಿ ವ್ಯಕ್ತಿಯೊರ್ವರ ಬಳಿ 3 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಹೌದು ಲೋಕಾಯುಕ್ತ ಬಲೆಗೆ ನಗರಸಭೆ ಸದಸ್ಯ ಹಾಗೂ ಓರ್ವ ಅಧಿಕಾರಿ ಬಲೆಗೆ ಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನಗರಸಭೆ ಸದಸ್ಯ ಹಾಗೂ ನಗರಸಭೆ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. 3 ಲಕ್ಷ ರೂಪಾಯಿ ಲಂಚ ಪಡೆಯುವಾಗ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೀಸ್ ಗೆ ಪಡೆದ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಲಂಚ ಸ್ವೀಕರಿಸಿದ್ದಾರೆ. ನಗರಸಭೆಯ ಹಾಲಿ ಬಿಜೆಪಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಗಣಪತಿ ನಾಯಕ್ ಹಾಗೂ ಅಧಿಕಾರಿ ಆರ್ಎಂ ವರ್ಣೇಕರ್ ಲೋಕಾಯುಕ್ತ…
ಚಿಕ್ಕಬಳ್ಳಾಪುರ : ಇತ್ತೀಚಿಗೆ ದಾವಣಗೆರೆಯಲ್ಲಿ ಆನ್ಲೈನ್ ಗೇಮ್ ನಿಂದ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದ ಘಟನೆ ನಡೆದಿತ್ತು. ಇದೀಗ ಆನ್ಲೈನ್ ಜೂಜಾಟಕ್ಕೆ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಹೌದು ಲಕ್ಷಾಂತರ ರೂಪಾಯಿ ಸಾಲ ತೀರಿಸಲಾಗದೆ ಹೆಡ್ ಕಾನ್ಸ್ಟೇಬಲ್ ರಾಜಶೇಖರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರದ ಪೊಲೀಸ್ ಕ್ವಾಟರ್ಸ್ ನಲ್ಲಿ ಮಂಚೇನಹಳ್ಳಿ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜಶೇಖರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೂಜಾಟ ಆಡುವ ಮೂಲಕ ರಾಜಶೇಖರ್ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದಾರೆ. ಈ ಕುರಿತು ತಂದೆ ತಾಯಿಯ ಬಳಿಗೂ ಕಷ್ಟ ಹೇಳಿದ್ದರು. ಈ ವೇಳೆ ಮಗನಿಗೆ ಕಷ್ಟ ಎಂದು ತಂದೆ ತಾಯಿಯರು ಕೂಡ ತಮ್ಮ ಕೈಲಾದಷ್ಟು ಹಣ ರಾಜಶೇಖರ್ ಗೆ ನೀಡಿದ್ದಾರೆ. ಆದರೂ ಕೂಡ ಸಾಲ ತೀರಿಸಲಾಗಿಲ್ಲ. ಅಲ್ಲದೇ ಸಾಲ ತೀರಿಸುವುದಕ್ಕೆ ಪತ್ನಿಯ ಚಿನ್ನಾಭರಣವನ್ನು ಕೂಡ ರಾಜಶೇಖರ್ ಅಡವಿಟ್ಟಿದ್ದರು ಎನ್ನಲಾಗಿದೆ. ಸದ್ಯ ಘಟನೆ ಸಂಬಂಧ ಚಿಕ್ಕಬಳ್ಳಾಪುರ ಎಸ್ ಪಿ ಸ್ಥಳಕ್ಕೆ ಭೇಟಿ…