Author: kannadanewsnow05

ಬೊಮ್ಮನಹಳ್ಳಿ: ಕಾಂಗ್ರೆಸ್‌ನವರಿಗೆ ರಾಮನನ್ನು ಕಂಡರೆ ಆಗಲ್ಲವೆಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿಷಾದ ವ್ಯಕ್ತಪಡಿಸಿದರು.ನರೇಂದ್ರ ಮೋದಿ ಹಾಗೂ ಶ್ರೀರಾಮ ಈರ್ವರನ್ನು ಕಂಡರೂ ಕಾಂಗ್ರೆಸ್‌ನವರಿಗೆ ಭಯ ಶುರುವಾಗಿದೆ ಎಂದು ತಿಳಿಸಿದರು. ಇಂತಹ ಐತಿಹಾಸಿಕ ಕಾರ್ಯಕ್ರಮಕ್ಕೆ ರಜೆ ನೀಡದಕ್ಕೆ ಸಿದ್ದರಾಮಯ್ಯನವರಿಗೆ ಶ್ರೀರಾಮ ಒಳ್ಳೆಯ ಬುದ್ದಿ ಕೊಡಲಿ ಎಂದರು.ರೂಪೇನ ಅಗ್ರಹಾರದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ದಾರ ಕುಂಬಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ಕಾಂಗ್ರೆಸ್ ನವರಿಗೆ ಮೊದಲಿನಿಂದಲೂ ಪ್ರಧಾನಿ ಅವರನ್ನು ಕಂಡರೆ ಭಯವಿದ್ದೇ ಇದೆ ಎಂದರು.ಶಾಸಕ ಎಂ.ಸತೀಶ್ ರೆಡ್ಡಿ ಮಾತನಾಡಿ, ಜ.22 ಇತಿಹಾಸದ ಪುಟದಲ್ಲಿ ಅಳಿಸಲಾಗದ ಹೆಜ್ಜೆ ಗುರುತಾಗಲಿದೆ. ಪ್ರಧಾನಿ ಮೋದಿ ಅವರು ಪ್ರಪಂಚದೆಲ್ಲೆಡೆ ರಾಮನ ನೀತಿ, ತತ್ವ, ದಕ್ಷತೆ, ಪ್ರಾಮಾಣಿಕತೆಯನ್ನು ಪಸರಿಸಲು ಮುಂದಾಗಿದ್ದಾರೆ ಎಂದು ಹೇಳಿದರು. ಬೆಂ.ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ, ಯಲಹಂಕ ಶಾಸಕ ವಿಶ್ವನಾಥ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ದೇವಸ್ಥಾನದ ಜೀರ್ಣೋದ್ದಾರದ ಮುಖಂಡರಾದ ನರೇಂದ್ರ ಬಾಬು, ಬಿಜೆಪಿ ಮುಖಂಡರಾದ ಶ್ರೀನಿವಾಸ…

Read More

ಬೆಂಗಳೂರು : ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ PSI ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್ ಆದೇಶದ ಮೇರೆಗೆ ಇಂದು 545 ಪಿಎಸ್‌ಐ ನೇರ ನೇಮಕಾತಿ ಸಂಬಂಧ ಮಂಗಳವಾರ ಮರುಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಸಕಲ ಸಿದ್ಧತೆ ಮಾಡಿಕೊಂಡಿದೆ. ಕಳೆದ ಬಾರಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಕೆಲ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಎಸಗಿ ಭಾರೀ ಅವ್ಯವಹಾರ ನಡೆದಿತ್ತು.ಹೀಗಾಗಿ ಪ್ರಾಧಿಕಾರವು ಈ ಬಾರಿ ಕೇವಲ ಬೆಂಗಳೂರು ನಗರದ 117 ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರ ಮರು ಪರೀಕ್ಷೆನಡೆಸಲು ಮುಂದಾಗಿದೆ. ಒಟ್ಟು 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಮೊದಲ ಪೇಪರ್ ಮತ್ತು ಮಧ್ಯಾಹ್ನ 1ರಿಂದ 2.30ರವರೆಗೆ ಎರಡನೇ ಪೇಪರ್‌ಗೆ ಲಿಖಿತ ಪರೀಕ್ಷೆ ನಡೆಯಲಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ನಾಲ್ವರು ಸಶಸ್ತ್ರ ಪೇದೆಗಳು ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ ಒಟ್ಟು 6 ಮಂದಿಯನ್ನು ಭದ್ರತ್ರೆಗೆ ನಿಯೋಜಿಸಲಾಗಿದೆ. ಪರೀಕ್ಷಾ…

Read More

ಬೆಂಗಳೂರು : ಕೋಟ್ಯಾಂತರ ಭಾರತೀಯರ ಕನಸು ನಿನ್ನೆ ನನಸಾಗಿದೆ. ಎಷ್ಟು ವರ್ಷಗಳಿಂದ ಕಾಯುತ್ತಿದ್ದ ರಾಮನ ಭಕ್ತರ ಕನಸು ನಿಜವಾಗಿದೆ. ಅತ್ಯಂತ ಯಶಸ್ವಿಯಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕೂಡ ಮುಗಿದಿದೆ ಆದರೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ರಾಮನ ವಿಚಾರವಾಗಿ ರಾಜಕೀಯ ಕೆಸರೆರ ಚಾಟ ಮುಂದುವರೆದಿದೆ ಅದರ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಹೇಳಿದ ರಾಮನನ್ನು ಪೂಜಿಸುತ್ತದೆ ಹೊರತು ಬಿಜೆಪಿ ಹೇಳಿದ ರಾಮನನ್ನು ಅಲ್ಲ ಎನ್ನುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾವು ಮಹಾತ್ಮಾ ಗಾಂಧಿಯವರು ಹೇಳಿದ ರಾಮನ ಭಕ್ತರು. ಮಹಾತ್ಮಾ ಗಾಂಧೀಜಿಯವರು ರಘುಪತಿ ರಾಘವ ರಾಜಾರಾಮ್ ಎಂದು ಭಜಿಸುತ್ತಿದ್ದು, ಅವರು ಸಾಯುವಾಗಲೂ ಹೇ ರಾಮ್ ಎಂದೇ ಜೀವ ಬಿಟ್ಟರು. ಬಿಜೆಪಿ ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತದೆ. ಬಿಜೆಪಿ ಹೇಳಿದ ರಾಮನನ್ನು ಅಲ್ಲ ಎಂದು ಬರೆದುಕೊಂಡಿದ್ದಾರೆ. ಮುಂದುವರೆದು ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ…

Read More

ಉತ್ತರಪ್ರದೇಶ : ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ರಾಮಲಲ್ಲ ಪ್ರಾಣ ಪ್ರತಿಷ್ಟಪನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನರವೇರಿದ್ದು, ರಾಮನ ಮೂರ್ತಿಯು ಕರ್ನಾಟಕದ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದೂ ಇದೀಗ ರಾಮ ಗರ್ಭಗುಡಿಯಲ್ಲಿ ವಿರಾಜಮಾನವಗಿದ್ದಾನೆ. ಇನ್ನೂ ಅಯೋಧ್ಯೆಯಲ್ಲಿರುವ ಅರುಣ್ ಯೋಗಿರಾಜ್ ಅವರು ಭಾವುಕರಗಿ ಮಾತನಾಡಿದ್ಧು, ನಾನು ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ. ನನ್ನ ಪೂರ್ವಜರು, ಕುಟುಂಬ ಸದಸ್ಯರು, ಭಗವಾನ್‌ ರಾಮಲಲ್ಲಾನ ಆಶೀರ್ವಾದ ಎಂದಿಗೂ ನನ್ನ ಮೇಲಿದೆ ಎಂದು ರಾಮಲಲ್ಲಾನ ವಿಗ್ರಹ ಕೆತ್ತಿದ ಅರುಣ್ ಯೋಗಿರಾಜ್‌ ಭಾವುಕರಾಗಿ ನುಡಿದಿದ್ದಾರೆ. ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆ ಎಂದು ನನಗೆ ಅನಿಸುತ್ತದೆ. ಇದು ನನ್ನ ಬದುಕಿನಲ್ಲಿ ಸ್ಮರಣೀಯ ದಿನ ಎಂದು ಅಯೋಧ್ಯೆ ರಾಮಮಂದಿರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ.ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾ ವಿಗ್ರಹವನ್ನು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತನೆ ಮಾಡಿದ್ದಾರೆ. ವಿಗ್ರಹ ಕೆತ್ತನೆಗಾಗಿ ಅವರು 6 ತಿಂಗಳು ತೆಗೆದುಕೊಂಡಿದ್ದರು

Read More

ಬೆಂಗಳೂರು : ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಡಿಕೆ ಶಿವಕುಮಾರ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ. ಜತೆಗೆ, ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ. ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತೆರಳದೇ ಇರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಯಾರೂ ಆಹ್ವಾನ ಇದ್ದರೂ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ತೆರಳದೇ ಇರಲು ನಿರ್ಧರಿಸಿದ್ದಾರೆ. ರಾಮ ಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮ ಎಂದೂ ಕಾಂಗ್ರೆಸ್​ನ ಕೆಲವು ನಾಯಕರು…

Read More

ಬೆಂಗಳೂರು : ಬಿಬಿಎಂಪಿ ಅಧಿಕಾರಿ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಬಿಗ್ ಬಾಸ್ ಸ್ಪರ್ದಿ ಡ್ರೋನ್ ಪ್ರತಾಪ್ ಆರೋಪಿಸಿದ್ದರು.ಈ ಹಿನೆಲೆಯಲ್ಲಿ ಬಿಬಿಎಂಪಿ ನೋಡಲ್ ಅಧಿಕಾರಿ ಪ್ರಯಾಗ  ಅವರು ಪ್ರತಾಪ್ ವಿರುದ್ಧ ಕೋರ್ಟ್ನಲ್ಲಿ ಮಾನನಷ್ಟ ಮೋಕದಮೆ ಹೂಡಿದ್ದರು. ಇದೀಗ ಕೋರ್ಟ್ ಡ್ರೋನ್ ಪ್ರತಾಪಗೆ ಫೆಬ್ರವರಿ 20ರಂದು ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ. ಫೆಬ್ರವರಿ 20ರಂದು ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಆರೋಪ ಮಾಡಿದ್ದ ಪ್ರತಾಪ್ ಎಂದು ಹೇಳಲಾಗುತ್ತಿದ್ದು ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಪ್ರತಾಪ್ ಆರೋಪಿಸಿದ್ದ. ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್ ಆರೋಪ ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿ ಪ್ರಯಾಗ್ ಮಾನನಷ್ಟ ಮುಖದ್ದಮೆ ಹೂಡಿದ್ದಾರೆ. ಮೊಕದಮ್ಮೆ ಹೂಡಿದ್ದರು ಇದೀಗ ಡ್ರೋನ್ ಪ್ರತಾಪ್ ಗೆ ಕೋರ್ಟ್ ಇಂದ ಸಮನ್ಸ್ ಜಾರಿ ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಡ್ರೋನ್ ಪ್ರತಾಪ್ ಆರೋಪ ಮಾಡಿದ್ದರು ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಪ್ರತಾಪ್ ಆರೋಪಿಸಿದ್ದರು.…

Read More

ಚಿಕ್ಕಮಗಳೂರು :ಅಯೋಧ್ಯೆಯಲ್ಲಿ ರಾಮನಲ್ಲ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಎಂದು ಇಡೀ ದೇಶದ ಜನತೆಯ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಒಂದು ಹಬ್ಬದ ರೀತಿಯಲ್ಲಿ ಒಂದು ಕ್ಷಣವನ್ನು ಆನಂದಿಸುತ್ತಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಕೂಡ ಎಂದು ರಾಮಲಲ್ಲ ಪ್ರಾಣಾ ಪ್ರತಿಷ್ಠಾಪನೆ ಅಂಗವಾಗಿ ಮುಜರಾಯಿ ಇಲಾಖೆಗೆ ಒಳಪಡುವಂತ ದೇವಸ್ಥಾನಗಳಲ್ಲಿ ಪೂಜೆ ನೆರವೇರಿಸಬೇಕೆಂದು ಆದೇಶವಿದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಚಿಕ್ಕಮಂಗಳೂರಿನ ದತ್ತಪೀಠದಲ್ಲಿ ರಾಮ ತಾರಕ ಹೋಮಕ್ಕೆ ಅಲ್ಲಿನ ಜಿಲ್ಲಾಡಳಿತವು ನಿರ್ಬಂಧ ವಿಧಿಸಿದೆ ಎಂದು ತಿಳಿದುಬಂದಿದೆ.ಯಾಗ ಶಾಲೆಗೆ ಚಿಕ್ಕಮಗಳೂರು ಜಿಲ್ಲಾ ಆಡಳಿತ ಬೀಗ ಹಾಕಿದೆ ವಿವಾದಿತ ಇನಾಮ ದತ್ತಾತ್ರೇಯ ದರ್ಗಾದ ಸಮೀಪವಿರುವ ಯಾಗ ಶಾಲೆಗೆ ಈಗ ಜಿಲ್ಲಾಡಳಿತ ಬೀಗ ಹಾಗಿದೆ ಎಂದು ತಿಳಿದುಬಂದಿದೆ. ಇಂದು ದತ್ತಪೀಠ ವ್ಯವಸ್ಥಾಪನ ಸಮಿತಿ ಸಿದ್ಧತೆ ನಡೆಸಿತ್ತು ಎಂದು ಹೇಳಲಾಗುತ್ತಿದೆ. ರಾಮ ತಾರಕ ಹೋಮ ಮಾಡಲು ವ್ಯವಸ್ಥಾಪನ ಸಮಿತಿ ಸಿದ್ಧತೆ ನಡೆಸಿತ್ತು.ದತ್ತ ಪೀಠದಲ್ಲಿ ಪೂಜೆ ಹೋಮ ಮಾಡದಂತೆ ಜಿಲ್ಲಾಡಳಿತದಿಂದ ನಿರ್ಬಂಧ ವಿಧಿಸಲಾಗಿದೆ.ಬಾಬಾ ಬುಡನ್ ಸ್ವಾಮಿ ದರ್ಗಾ ಮುಜರಾಯಿ ಇಲಾಖೆಗೆ ಸೇರಿದಾಗಿದೆ. ಮುಜರಾಯಿ ಇಲಾಖೆಯ ವಲಯಗಳಲ್ಲಿ…

Read More

ಬೆಂಗಳೂರು : ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದ ಅಂಗವಾಗಿ ದೇಶದ ವಿವಿಧ ಗಣ್ಯ ವ್ಯಕ್ತಿಗಳು ಅಯೋಧ್ಯೆಗೆ ತೆರಳಿದ್ದಾರೆ. ಅದರಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕೂಡ ತಮ್ಮ ಕುಟುಂಬದ ಸದಸ್ಯರೊಂದಿಗೆ ಅಯೋಧ್ಯೆಗೆ ತೆರಳಿದ್ದು, ಈ ಕುರಿತಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟಿವಿನಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ. ಟ್ವೀಟ್ ನಲ್ಲಿ ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ.‌ ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರಮೋದಿ ಅವರ ನೇತೃತ್ವದಲ್ಲಿ ಇಂದು ನೆರವೇರುತ್ತಿದೆ. ಈ ಎಲ್ಲಾ ಕರಸೇವಕರ ಪರಿಶ್ರಮದ ಫಲದಿಂದ ಇಂತಹ ದಿವ್ಯಕ್ಷಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗುವ ಪುಣ್ಯ ನನಗೆ ಧಕ್ಕಿದೆ ಮತ್ತು ಶ್ರೀರಾಮ ದೇವರಿಗೆ ಭಕ್ತಿ ಸಮರ್ಪಣೆ ಮಾಡುವ ಸುದೈವವೂ, ಅವಕಾಶವು ನನ್ನದಾಗಿದೆ ಎಂದು ಅವರು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.…

Read More

ಬೀದರ್ : ಬೀದರ ಜಿಲ್ಲೆಯ ಹುಮ್ನಾಬಾದ್ ನಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷನಿಲ ಸೋರಿಕೆ ಯಾಗಿ ಇಬ್ಬರು ವ್ಯಕ್ತಿಗಳು ದಾರುಣವಾಗಿ ಸಾವನಪ್ಪಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂಟು ಜನ ಕಾರ್ಮಿಕರು ತೀವ್ರವಾಗಿ ಅಸ್ವಸ್ಥ ಗೊಂಡಿರುವ ಘಟನೆ ಜರುಗಿದೆ. ಕಾರ್ಖಾನೆಯಲ್ಲಿ ವಿಷ ಅನಿಲ ಸೋರಿಕೆಯಿಂದ ಇಬ್ಬರು ವ್ಯಕ್ತಿಗಳ ಸಾವನ್ನಪ್ಪಿದ್ದು, ಹುಮ್ನಾಬಾದ್ ಬಳಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಬೀದರ ಜಿಲ್ಲೆಯ ಹುಮ್ನಾಬಾದ್ ಬಳಿ ಇರುವ ಕೆಮಿಕಲ್ ಕಾರ್ಖಾನೆಯಲ್ಲಿ ವಿಷ ಅನಿಲ ಸೋರಿಕೆಯಿಂದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಮಧ್ಯಪ್ರದೇಶದ ಮೂಲದ ಕಾರ್ಮಿಕರು ಎಂದು ಹೇಳಲಾಗುತ್ತಿದೆ. ಮೊಹಮ್ಮದ್ ಶಾಬಾದ್ (21) ಇಂದ್ರಜಿತ್ (23) ಎನ್ನುವ ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎಂಟು ಕಾರ್ಮಿಕರು ಅಸ್ವಸ್ಥವಾಗಿದ್ದು ತಾಲೂಕು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಘಟನೆ ಕುರಿತಂತೆ ಹುಮ್ನಾಬಾದ್ ನಗರ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

Read More

ಗದಗ : ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್‌ ದಫೇದಾ‌ರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಗಜೇಂದ್ರಗಡ ಪೊಲೀಸರು ತಾಜುದ್ದೀನ್‌ ದಫೇದಾ‌ರ್ ಎಂಬಾತನನ್ನು ಬಂಧಿಸಿದ್ದಾರೆ. ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗದಗ : ಇಡೀ ದೇಶವೇ ಇವತ್ತು ಐತಿಹಾಸಿಕ ದಿನಕ್ಕೆ ಸಾಕ್ಷಿ ಆಗಲಿದ್ದು, ರಾಮಲೆಲ್ಲ ಪ್ರಾಣ ಪ್ರತಿಷ್ಠಾಪನಕ್ಕೆ ರಾಮ ಭಕ್ತರು ಎದುರು ನೋಡುತ್ತಿದ್ದಾರೆ. ಎಲ್ಲರ ಮನೆಯಲ್ಲೂ ಸಂಭ್ರಮದ ಕಳೆ ಬಂದಿದೆ. ಆದರೆ ಗದಗದಲ್ಲಿ ಕಿಡಿಗೇಡಿ ಒಬ್ಬ ರಾಮಮಂದಿರದ ಮೇಲೆ ಹಸಿರು ಬಾವುಟ ಹಾರಾಡುವಂತೆ ಫೋಟೋ ತಿರುಚಿ ಸಮಾಜಘಾತನಾದಲ್ಲಿ ಹರಿಬಿಟ್ಟಿದ್ದಾನೆ. ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭದಲ್ಲಿ ಇಂತಹ ಘಟನೆ ನಡೆದಿದೆ. ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾಕಿರುವ ಚಿತ್ರ ಫೇಸ್‌ಬುಕ್‌ನಲ್ಲಿ ಫೋಸ್ಟ್ ಮಾಡಲಾಗಿದೆ. ಸುದ್ಧಿ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದ್ದು ಗಜೇಂದ್ರಗಡ ಪೊಲೀಸರು ತಾಜುದ್ದೀನ್‌ ದಫೇದಾ‌ರ್ ಎಂಬಾತನನ್ನು ಬಂಧಿಸಿದ್ದಾರೆ.…

Read More