Author: kannadanewsnow05

ಬೆಂಗಳೂರು : ಇಂದು ಐತಿಹಾಸಿಕ ದಿನವಾಗಿದ್ದು ಅಯ್ಯೋಧ್ಯಾ ದೆಹಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮವು ಇಡೀ ದೇಶದ ರಾಮ ಭಕ್ತರು ಅತ್ಯಂತ ಸಂತೋಷಪಡುವ ಐತಿಹಾಸಿಕ ದಿನವಾಗಿದೆ. ಅಲ್ಲದೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಯಿಂದ ಸೀತಾರಾಮ, ಲಕ್ಷ್ಮಣ ಸಮೇತ ಆಂಜನೇಯ ದೇಗುಲ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೇವಸ್ಥಾನವನ್ನು ಉದ್ಘಾಟಿಸಲಿದ್ದು, ಬೆಂಗಳೂರು ಪೂರ್ವ ತಾಲೂಕಿನ ಹಿರಂಡಹಳ್ಳಿಯಲ್ಲಿರುವ ದೇವಸ್ಥಾನವನ್ನು ಸಿಎಂ ಉದ್ಘಾಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸುಮಾರು 32 ಅಡಿ ಎತ್ತರದ ಹನುಮಾನ ಮೂರ್ತಿ ಸೇರಿದಂತೆ ದೇವಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಒಂದು ದೇವಸ್ಥಾನವನ್ನು ಶ್ರೀರಾಮ ಟ್ರಸ್ಟ್ ನಿಂದ ನಿರ್ಮಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ ಬಿಜೆಪಿ ನಾಯಕರು ಇಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ದಿನವಾಗಿರುವುದರಿಂದ ದೇಶದ ವಿವಿಧ ರಾಜ್ಯಗಳಲ್ಲಿ ಅಲ್ಲಿನ ಸರಕಾರಗಳು ಈಗಾಗಲೇ ರಜೆ ಘೋಷಣೆ ಮಾಡಿವೆ ಅದರಂತೆ ಕರ್ನಾಟಕ ರಾಜ್ಯದಲ್ಲೂ ಸಹ ರಾಜ್ಯ ಸರ್ಕಾರ ಇವತ್ತು ಒಂದು ದಿನ ಸಾರ್ವಜನಿಕರ ಜಯ ಘೋಷಿಸಬೇಕು ಎಂದು ಮನವಿ ಮಾಡಿದವು ಆದರೆ…

Read More

ಬೆಂಗಳೂರು : ಬಿಜೆಪಿ ಸರ್ಕಾರದ ಆಡಳಿತದಲ್ಲಿ ನಡೆದಿದೆ ಎನ್ನಲಾದ 545 ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪಿಎಸ್ಐ ನೇಮಕಾತಿ ಅಕ್ರಮದ ವರದಿಯನ್ನು ವಿಚಾರಣಾ ಆಯೋಗದ ನ್ಯಾ.ಬಿ ವೀರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ 10:30 ಕ್ಕೆ ಸಿಎಂ ಸಿದ್ದರಾಮಯ್ಯಗೆ ಸಮಿತಿಯು ವರದಿ ಸಲ್ಲಿಸಲಿದೆ ಎಂದು ಹೇಳಲಾಗುತ್ತಿದೆ.ಸಮಿತಿಯು ಪಿಎಸ್ಐ ಅಕ್ರಮದ ವರದಿಯನ್ನು ಸಲ್ಲಿಸಲಿದೆ. 545 ಪಿಎಸ್ಐ ನೇಮಕಾತಿಯ ಅಕ್ರಮದ ವರದಿಯನ್ನು ಸಮಿತಿಯು ಸಿದ್ಧಪಡಿಸಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ನಡೆದಿತ್ತು ಎನ್ನಲಾಗಿದ್ದು, ಮರು ತನಿಖೆಗಾಗಿ ಇತ್ತೀಚಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಿತಿ ರಚಿಸಿತ್ತು. ನಿವೃತ್ತ ನ್ಯಾ. ಬಿ ವೀರಪ್ಪ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಿತಿಯನ್ನು ರಚಿಸಿತ್ತು. ಸರ್ಕಾರದ ನಿರ್ದೇಶನದಂತೆ ಇದೀಗ ಸಮಿತಿ ವರದಿಯನ್ನು ಸಿದ್ಧಪಡಿಸಿದೆ ಪ್ರಕರಣದಲ್ಲಿ ಈಗಾಗಲೇ ಕೆಲ ಪೊಲೀಸ್ ಅಧಿಕಾರಿಗಳ ಬಂದನ ಕೂಡ ಆಗಿದೆ ಅಲ್ಲದೆ ಪ್ರಭಾವಿ ರಾಜಕೀಯ ಮುಖಂಡರು ಭಾಗಿಯಾಗಿದ್ದಾರೆ ಎಂಬ…

Read More

ಬೆಂಗಳೂರು : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್‌ ಖಂಡ್ರೆ, ಪರಿಸರಕ್ಕೆ ತೀವ್ರ ಹಾನಿ ಮಾಡುತ್ತಿರುವ ಘಟಕಗಳನ್ನು ಪತ್ತೆ ಮಾಡಿ ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದರಲ್ಲೂ ಪರಿಸರಕ್ಕೆ ಹಾನಿಯಾಗಲಿದೆ ಹೀಗಾಗಿ ಕೈಗಾರಿಕೆ ಮುಚ್ಚುವಂತೆ ಆದೇಶಿಸಿದ್ದರೂ, ಅದಕ್ಕೆ ಬೆಲೆ ಕೊಡದೆ ಕೈಗಾರಿಕೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು. ನಿಯಮ ಉಲ್ಲಂಘನೆ ಮತ್ತು ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಕೈಗಾರಿಕಾ ಘಟಕಗಳನ್ನು ಮುಚ್ಚಲು ಅಂತಿಮ ಆದೇಶ ನೀಡಿದ್ದರೂ, ಅದನ್ನು ಲೆಕ್ಕಿಸದೆ ಕಾರ್ಯನಿರ್ವಹಿಸುವ ಕೈಗಾರಿಕೆಗಳ ಮಾಲೀಕರು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ. ಬೆಂಗಳೂರಿನ ಬೆಳ್ಳಂದೂರು, ವರ್ತೂರು ಕೆರೆಗಳಿಗೆ ಕಲುಷಿತ ನೀರು ಹರಿಸಲಾಗುತ್ತಿದೆ. ಹೀಗಾಗಿ ಕೆರೆ ಭಾಗದಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಅಳವಡಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಗಡುವು ನೀಡಿತ್ತು.…

Read More

ಬೆಂಗಳೂರು : ಕ್ರಿಮಿನಲ್ ಪ್ರಕರಣ ದಾಖಲಾಗಿದೆ ಎಂಬ ಏಕ ಮಾತ್ರ ಕಾರಣಕ್ಕೆ ಸರ್ಕಾರದ ಕಾಯಂ ಉದ್ಯೋಗಿಯನ್ನು ಸೇವೆಯಿಂದ ವಜಾಗೊಳಿ ಸುವಂತಿಲ್ಲ ಎಂದು ಸ್ಪಷ್ಟಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪೋಕ್ಕೋಕಾಯ್ದೆಯಡಿ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಗಣೇಶ್ ಎಂಬಾತನನ್ನು ಬಿಲ್ ಕಲೆಕ್ಟರ್ ಉದ್ಯೋಗದಿಂದ ವಜಾಗೊಳಸಲು ತಾನು ತೆಗೆದುಕೊಂಡಿದ್ದ ನಿರ್ಣಯವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಅತ್ತಿಕರಿಬೆಟ್ಟು ಗ್ರಾಮ ಪಂಚಾಯತಿ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಸಾಮಾನ್ಯವಾಗಿ ಅಪರಾಧ ಪ್ರಕರಣಗಳಲ್ಲಿ ದೋಷಿಯಾಗಿ ತೀರ್ಮಾನಿಸಲ್ಪಟ್ಟು ಶಿಕ್ಷೆಗೆ ಒಳಗಾದ ಸಂದರ್ಭದಲ್ಲಿ ಉದ್ಯೋಗಿಯನ್ನು ಉದ್ಯೋಗದಾತರು, ಸೇವೆಯಿಂದ ವಜಾಗೊ ಇಸುತ್ತಾರೆ. ಆದರೆ, ದಾಖಲಾಗಿರುವ ಕ್ರಿಮಿ ನಲ್ ಪ್ರಕರಣ ವಿಚಾರಣೆಗೆ ಬಾಕಿಯಿದೆ ಎಂಬ ಕಾರಣಕ್ಕೆ ಉದ್ಯೋಗಿಯನ್ನು ವಜಾಗೊಳಿಸಲಾಗದು. ಹಾಗಾಗಿ ಅತ್ತಿಕರಿಬೆಟ್ಟು ಗ್ರಾ.ಪಂ. ಉದ್ಯೋಗಿಯಾದ ಗಣೇಶ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಿಚಾ ರಣೆ ಹಂತದಲ್ಲಿರುವುದರಿಂದ ಆತನನ್ನು…

Read More

ಕುಂದಾಪುರ: ಹೆಚ್ಚೆಚ್ಚು ಭಕ್ತರು ಬರುವ ಮೈಸೂರಿನ ಚಾಮುಂಡೇಶ್ವರಿ, ಕೊಪ್ಪಳದ ಹುಲಿಗೆಮ್ಮ ಹಾಗೂ ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಉಸ್ತುವಾರಿಗೆ ಪ್ರಾಧಿಕಾರ ರಚನೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ರಾಜ್ಯ ಮುಜರಾಯಿ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಭಾನುವಾರ ಇಲ್ಲಿನ ಮಾರಣಕಟ್ಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಜರಾಯಿ ಇಲಾಖೆ ದೇವಸ್ಥಾನಗಳ ಆಸ್ತಿ ಸರ್ವೇ ಮಾಡಲು ಈಗಾಗಲೇ ಕಂದಾಯ ಇಲಾಖೆ ಜೊತೆ ಕ್ರಮವಹಿಸಲಾಗಿದೆ.ಇಲಾಖೆಗೆ ಆಸ್ತಿಗಳುಪರಭಾರೆ ಅಥವಾಅತಿಕ್ರಮಣವಾಗಿದ್ದರೆ ಹಿಂಪಡೆಯಲು ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಮುಜರಾಯಿ ದೇವಸ್ಥಾನದ ಎ,ಬಿ ದರ್ಜೆಯ ನೌಕರರನ್ನು ಹೊರತುಪಡಿಸಿ ಉಳಿದವರನ್ನು ಇಲಾಖೆಯ ಇತರೆ ದೇವಾಲಯಗಳಿಗೆ ಅಂತರ್‌ವರ್ಗಾವಣೆ ಮಾಡುವ ಪ್ರಾಸ್ತಾಪ ಇಲ್ಲ. ಆದರೆ ನೌಕರರ ಮೇಲೆ ನಿರ್ದಿಷ್ಟ ದೂರುಗಳು ಬಂದಲ್ಲಿ ತನಿಖೆ ನಡೆಸಿ ವರ್ಗಾವಣೆ ಸೇರಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

Read More

ಶಿವಮೊಗ್ಗ : ಇಂದು ಆಯೋಧೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಆಯೋಜಿದು ಈ ನೆಲೆಯಲ್ಲಿ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರಜೆ ಘೋಷಿಸಿದೆ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ರಾಜ್ಯದಲ್ಲಿ ಯಾವುದೇ ರಾಜ್ಯ ಇಲ್ಲ ಎಂದು ನಿನ್ನೆ ತಿಳಿಸಿದರು ಇದಕ್ಕೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕಿಡಿ ಕಾರಿದ್ದು, ಹೇಗೆ ಶ್ರೀ ರಾಮನ ಮೂರ್ತಿ ಅಜರಾಮರವಾಗಿ ಇರುತ್ತದೆಯೋ ಅದೇ ರೀತಿ ಇತಿಹಾಸದಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಖಳನಾಯಕರಾಗಿ ಉಳಿಯುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದು ಇಡೀ ಪ್ರಪಂಚದ ಹಿಂದುಗಳು ನೆನಪಿಟ್ಟುಕೊಳ್ಳುವಂತಹ ಕಾರ್ಯಕ್ರಮವಾಗುತ್ತಿದ್ದು, ಗುಲಾಮಗಿರಿ ಸಂಕೇತದ ಬಾಬರ್ ಕಟ್ಟಡದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ.ಹಲವು ಹೋರಾಟ ಸಾವಿರಾರು ಜನರ ಬಲಿದಾನವಾಗಿದೆ ಕೇಂದ್ರ ಸರಕಾರಿ ನೌಕರರಿಗೆ ಮೋದಿ ಅರ್ಧ ದಿನ ರಜೆಯನ್ನು ಘೋಷಿಸಿದ್ದಾರೆ. ಅನೇಕ ರಾಜ್ಯ ಸರ್ಕಾರಗಳು ಕೂಡ ಈ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಿವೆ.ಆದರೆ ಸಿದ್ದರಾಮಯ್ಯ…

Read More

ಬೆಂಗಳೂರು: ಅಯೋಧ್ಯೆಯಲ್ಲಿ ಇಂದು ರಾಮನ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದ ಅಂಗವಾಗಿ ದೇಶದಾದ್ಯಂತ ಸಂಭ್ರಮ  ಮನೆ ಮಾಡಿದೆ ಅದರಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಅಯೋಧ್ಯ ಕಾರಣವಾಗಲಿದ್ದು ಇದರ ಪ್ರಯುಕ್ತ  ಕರ್ನಾಟಕ ರಾಜ್ಯದಲ್ಲೂ ಕೂಡ ರಜೆ ಘೋಷಿಸಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಮವಾರ ರಜೆ ಘೋಷಿಸದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ಮುಖಂಡರು ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಮ ವಿರೋಧಿ, ಹಿಂದೂ ವಿರೋಧಿ ನೀತಿ ತಾಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ರಜೆ ಘೋಷಿಸುವಂತೆ ವಿಪಕ್ಷ ನಾಯಕ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಶನಿವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹ ರಜೆ ನೀಡುವಂತೆ ಕೇಳಿದ್ದರು, ಆದರೆ ಸಿದ್ದರಾಮಯ್ಯ ರಜೆ ನೀಡುವುದಿಲ್ಲ ಎಂದಿದ್ದಕ್ಕೆ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ.. ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ಸಿಗರಿಗೆ ಶ್ರೀರಾಮನ…

Read More

ಬೆಂಗಳೂರು : ನಗರದ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳ ಬಳಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ಸಂಚಾರ ಪೊಲೀಸರು 510ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಶಾಲಾ-ಕಾಲೇಜುಗಳ బళి ಅಪ್ರಾಪ್ತ ಮಕ್ಕಳು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದಾರೆ. ವಾಹನ ಇಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೋಷಕರಿಂದ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಏಕಮುಖ ಸಂಚಾರ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ 154 ಪ್ರಕರಣಗಳು, ಹೆಲೈಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆಯ 328 ಪ್ರಕರಣಗಳು, ತ್ರಿಬಲ್ ರೈಡಿಂಗ್ 17 ಪ್ರಕರಣಗಳು, ಪಾದಾಚಾರಿ ಮಾರ್ಗ ದಲ್ಲಿ ದ್ವಿಚಕ್ರ ವಾಹನ ಚಾಲನೆಯ 11 ಪ್ರಕರಣಗಳು ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘಿಸಿದ ಸವಾರರ ವಿರುದ್ಧ 510ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪೈಕಿ 10 ವಾಹನ ಸವಾರರು ಅಪ್ರಾ ಪ್ತರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ…

Read More

ಮೈಸೂರು : ನಾಳೆ ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನ ಐತಿಹಾಸಿಕ ಕಾರ್ಯಕ್ರಮ ನಡೆಯಲಿದ್ದು ಇಡೀ ದೇಶದ ಜನರೇ ಅತ್ಯಂತ ಕುತೂಹಲದಿಂದ ಈ ಒಂದು ಭವ್ಯವಾದ ಕಾರ್ಯಕ್ರಮ ನೋಡಲು ಕಾತುರದಿಂದ ಕಾಯುತ್ತಿದ್ದಾರೆ ಅದೇ ರೀತಿಯಾಗಿ ಮೈಸೂರಲ್ಲಿ ಇದರ ಪ್ರಯುಕ್ತ ಶ್ರೀ ರಾಮೋತ್ಸವಕ್ಕೆ ಸಿದ್ಧತೆ ಮಾಡಿ ಕೊಳ್ಳಲಾಗಿತ್ತು ಆದರೆ ಇದಕ್ಕೆ ಇದೀಗ ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರಿನಲ್ಲಿ ಶ್ರೀ ರಾಮೋತ್ಸವ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದ್ದು, ಗಣಪತಿ ಸಚ್ಚಿದಾನಂದ ಆಶ್ರಮದ ಮೆರವಣಿಗೆಗೆ ಅನುಮತಿಯನ್ನು ನಿರಾಕರಿಸಲಾಗಿದೆ.ಕೆಸರೆಯಿಂದ ಆಶ್ರಮದವರೆಗೂ ಮೆರವಣಿಗೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮೊದಲು ಅನುಮತಿಯನ್ನು ಪೋಲೀಸ ಅಧಿಕಾರಿಗಳು ನೀಡಿದ್ದರು ಇದೀಗ ಏಕಾಏಕಿ ಮೆರವಣಿಗೆಗೆ ಅನುಮತಿಯನ್ನು ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅರ್ಜಿ ವಜಾ ನಾಳೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ಸಂಭ್ರಮದ ಮನೆ ಮಾಡಿದ್ದು, ಇದರ ಅಂಗವಾಗಿ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಹಿಂದುಸ್ತಾನ್ ಸಂಘಟನೆ ಶೋಭಾಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ ಎಂದು…

Read More

ಹಾಸನ : ಶಾರ್ಟ್ ಸರ್ಕ್ಯೂಟ್ ಇಂದ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯ ಎಕ್ಸರೇ ರೂಮ್ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಹಾಸನ ನಗರದ ಶಂಕರ ಮಠ ರಸ್ತೆಯಲ್ಲಿರುವ ಮಂಜುನಾಥ್ ಆಸ್ಪತ್ರೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಹಾಸನದ ಆಸ್ಪತ್ರೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.ಕೂಡಲೇ ಕುಟುಂಬಸ್ಥರು ತಮ್ಮ ರೋಗಿಗಳನ್ನು ಹೊರ ಕರೆತಂದಿದ್ದಾರೆ. ಈ ವೇಳೆ ಬೆಂಕಿ ಕಾಣಿಸಿಕೊಂಡಿದ್ದರಿಂದ ರೋಗಿಗಳು ಗಾಬರಿಗೊಂಡಿದ್ದಾರೆ. ಕೂಡಲೇ ಆಸ್ಪತ್ರೆಯ ಸಿಬ್ಬಂದಿ ಕಿಟಕಿ ಕ್ಲಾಸ್ ಗಳನ್ನು ಒಡೆದು ಹಾಕಿದ್ದಾರೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯ ಕುರಿತು ಇನ್ನಷ್ಟು ಮಾಹಿತಿ ಬರಬೇಕಿದೆ.

Read More