Subscribe to Updates
Get the latest creative news from FooBar about art, design and business.
Author: kannadanewsnow05
೯-೯-೨೦೨೫ ಇಂದು ಬ್ರಹ್ಮಾಂಡದ ಮಾಯಾಲೋಕದ ೯೯೯ನೇ ದಿನ. ನಮ್ಮ ಜೀವನದಲ್ಲಿ ಸಮಸ್ಯೆಗಳು ಪ್ರತಿದಿನ ನಮ್ಮನ್ನು ಬೆನ್ನಟ್ಟುತ್ತಲೇ ಇರುತ್ತವೆ. ಆದರೂ ನಾವು ನಮ್ಮ ಉಳಿದ ಜೀವನವನ್ನು ಚೆನ್ನಾಗಿ ಬದುಕಲು ಓಡುತ್ತಲೇ ಇರುತ್ತೇವೆ. ನಮ್ಮನ್ನು ಬೆನ್ನಟ್ಟುವ ನಿರಂತರ ಸಮಸ್ಯೆಗಳಿಂದ ಮುಕ್ತರಾಗಲು ದೇವರು ನಮಗೆ ಕೆಲವು ಶಕ್ತಿಶಾಲಿ ದಿನಗಳನ್ನು ನೀಡುತ್ತಾನೆ. ಆ ಕ್ರಮದಲ್ಲಿ, ಇಂದು ಅತ್ಯಂತ ಶಕ್ತಿಶಾಲಿ ವಿಶ್ವ ದಿನ. ಈ ದಿನದ ವಿಶೇಷತೆ ಏನು? ಈ ಶುಭ ದಿನದಂದು ನಾವು ಮಾಡಬೇಕಾದ ಪರಿಹಾರಗಳೇನು? ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ,…
ಮಂಡ್ಯ : ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಲ್ಲು ತೂರಿದ್ದ ಕಿಂಗ್ ಪಿನ್ ನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಗಣೇಶ ಮೆರವಣಿಗೆಯನ್ನು ಸಹಿಸದೆ ಈ ಒಂದು ಗ್ಯಾಂಗ್ ಕಲ್ಲು ತೂರಾಟ ನಡೆಸುತ್ತದೆ. ಹೌದು ಅನ್ಯ ಕೋಮುವಿನ ಐದರಿಂದ ಆರು ಯುವಕರು ಈ ದುಷ್ಕೃತ್ಯ ಎಸಗಿದ್ದಾರೆ ಅನ್ಯಕೋಮಿನ ಯುವಕರ ಪೂರ್ವ ನಿಯೋಜಿತ ಕೃತ್ಯವಾಗಿದೆ. ಕಲ್ಲು ತೂರಾಟದ ಕಿಂಗ್ ಪಿನ್ ನನ್ನು ಇರ್ಫಾನ್ ಎಂದು ತಿಳಿದುಬಂದಿದೆ. ಈತ ಚನ್ನಪಟ್ಟಣ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮದ್ದೂರಿನಲ್ಲಿ ವಾಸವಾಗಿದ್ದ, ಮಸೀದಿಯ ಮುಂದೆ ಗಣೇಶ ಮೆರವಣಿಗೆ ಸಹಿಸಲಾಗದೆ ಈ ದುಷ್ಕೃತ ಎಸಗಿದ್ದಾನೆ. ಈಗಾಗಲೇ ಪೊಲೀಸರು ಹಲವು ಕಿಡಿಗೇಡಿಗಳನ್ನು ಅರೆಸ್ಟ್ ಮಾಡಿದ್ದು ಇರ್ಫಾನ್ಗಾಗಿ ಬಲೇ ಬೀಸಿದ್ದಾರೆ.
ಶಿವಮೊಗ್ಗ : ಒಂದು ಕಡೆ ಗಣೇಶ ವಿಸರ್ಜನೆ ವೇಳೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದು, ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಇಂದು ಮದ್ದೂರು ಪಟ್ಟಣ ಬಂದ್ ಗೆ ಕರೆ ನೀಡಿವೆ. ಅಲ್ಲದೆ ಇಂದು ಬಿಜೆಪಿ ನಿಯೋಗ ಮದ್ದೂರು ಪಟ್ಟಣಕ್ಕೆ ಭೇಟಿ ಕೊಡಲಿದೆ. ಇತ್ತ ಇನ್ನೊಂದು ಕಡೆ ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ವರದಿಯಾಗಿದೆ. ಹೌದು ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದ್ದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನೆನ್ನೆ ಈ ಒಂದು ಘಟನೆ ನಡೆದಿದೆ ಪಾಕಿಸ್ತಾನ ಜಿಂದಾಬಾದ್ ಎಂದು ಕಿಡಿಗೇಡಿಗಳು ವಿರುದ್ಧ ಇದೀಗ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ ಕಿಡಿಗೇಡಿಗಳ ವಿರುದ್ಧ ಹಿಂದೂ ಸಂಘಟನೆಗಳು ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್…
ಬೆಂಗಳೂರು : ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಇದೀಗ ಬಿಗ್ ಶಾಕ್ ನೀಡಿದ್ದು, ಏಕ ಸದಸ್ಯ ಪೀಠ ನೀಡಿದ ಮಧ್ಯಂತರ ಆದೇಶಕ್ಕೆ, ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ. ಸಿಜೆ ವಿಭು ಭಕ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ಪೀಠ ಆದೇಶ ಹೊರಡಿಸಿದೆ.ನವೆಂಬರ್ 26ರ ವರೆಗೆ ಏಕ ಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆಗೆ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಏಕ ಸದಸ್ಯ ಪೀಠದ ಆದೇಶ ಪ್ರಶ್ನೆಗೆ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಆರು ಎಕರೆ ಒತ್ತುವ ರೀತಿಯಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ದಾಖಲೆ ಹಾಜರುಪಡಿಸುವಂತೆ ಎಸ್ಐಟಿ ನೋಟಿಸ್ ಜಾರಿಗೊಳಿಸಿದೆ. ಆದರೆ ಎಸ್ ಐ ಟಿ ರಚನೆಗೆ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತ್ತು. ಹಾಗಾಗಿ ತಡೆಯಾಜ್ಞೆ ತೆರವಿಗೆ ಎಜಿ…
ಮಂಗಳೂರು : ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸ್ಫೋಟಕವಾದ ವಿಚಾರ ಬಹಿರಂಗವಾಗಿದ್ದು, ಇದೀಗ ಮಂಗಳೂರಿನಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಮಾಡಿದ್ದು ವಿಠ್ಠಲ ಗೌಡ ಅಂತ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಮಾಡಿದ್ದು ವಿಠ್ಠಲ ಗೌಡ ಈ ಕುರಿತು ನನ್ನ ಬಳಿ ಮಾಹಿತಿ ಮತ್ತು ಸಾಕ್ಷಿಗಳಿವೆ. ಅದೆಲ್ಲವನ್ನು ನಾನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗೆ ಕೊಡುತ್ತೇನೆ ಈ ತನಿಖೆ ಮತ್ತೆ ಮುಂದುವರಿಸುವಂತೆ ದೂರು ನೀಡುತ್ತೇನೆ ಎಂದು ಮಂಗಳೂರಿನಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/the-continuation-of-temporary-stoppages-for-these-trains-at-this-railway-station/ https://kannadanewsnow.com/kannada/breaking-violence-breaks-out-in-massive-protest-against-social-media-ban-in-nepal-one-dead/
ಬೆಂಗಳೂರು : ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸೆಪ್ಟೆಂಬರ್ 22 ರವರೆಗೆ ಶಾಸಕ ವೀರೇಂದ್ರ ಪಪ್ಪಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಿದ್ದರು. ಈ ವೇಳೆ ರಿಮೈಂಡ್ ಅರ್ಜಿಯಲ್ಲಿ ಇಡಿ ಅಧಿಕಾರಿಗಳು ಕಸ್ಟಡಿಗೆ ಕೇಳಿಲ್ಲ. ಹಾಗಾಗಿ ಇದೀಗ ಶಾಸಕ ವೀರೇಂದ್ರ ಪಪ್ಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.a
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಾಲೂಕು ಕಚೇರಿಯಲ್ಲಿನ ಸಭೆಯ ಬಳಿಕ ಹಿಂದು ಕಾರ್ಯಕರ್ತರು ಪ್ರತಿಭಟನೆಯನ್ನು ವಾಪಸ್ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ನಾಳೆ ಬಿಜೆಪಿನೇಯೋಗ ಮದ್ದೂರು ಪಟ್ಟಣಕ್ಕೆ ಭೇಟಿ ನೀಡಲಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯದಲ್ಲಿ ಕಳೆದ ಬಾರಿ ಹನುಮಾನ್ ಧ್ವಜ ಇಳಿಸಿದ್ದರು. ನಾಗಮಂಗಲದಲ್ಲಿ ಕಲ್ಲುತೂರಾಟ ನಡೆಸಿತ್ತು. ಪೊಲೀಸರ ಕೈಗೆ ಬೇಡಿ ಹಾಕಿದಂತೆ ಕಾಣುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ದಾಳಿ ಪ್ರಕರಣ ಹೆಚ್ಚುತ್ತಿವೆ. ಹಿಂದೂಗಳ ಅಪಮಾನ ಮಾಡುವಂತ ಕೆಲಸ ನಡೆಯುತ್ತಿದೆ ಎಂದರು. ನಿನ್ನೆ ಮಂಡ್ಯ ಜಿಲ್ಲೆಯ ಮದ್ದೂರ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕೆಲವು ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮದ್ದೂರು ಪಟ್ಟಣದಲ್ಲಿ ನಿಷೇಧಜ್ಞೆ ಜಾರಿಗೆ ಇದ್ದರೂ ಸಹ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು…
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಾಲೂಕು ಕಚೇರಿಯಲ್ಲಿನ ಸಭೆಯ ಬಳಿಕ ಹಿಂದು ಕಾರ್ಯಕರ್ತರು ಪ್ರತಿಭಟನೆಯನ್ನು ವಾಪಸ್ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಮಂಡ್ಯ ಜಿಲ್ಲೆಯ ಮದ್ದೂರಿ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕೆಲವು ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮದ್ದೂರು ಪಟ್ಟಣದಲ್ಲಿ ನಿಷೇಧಜ್ಞೆ ಜಾರಿಗೆ ಇದ್ದರೂ ಸಹ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನೆ ವೇಳೆ ಕೂಡ ಕೆಲವು ಕಡೆಗೆಗಳು ಕಲ್ಲುತೂರಾಟ ನಡೆಸಿದ್ದಾರೆ ಈ ಹಿನ್ನೆಲೆಯಲ್ಲಿ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದರು ಇದೀಗ ಪರಿಸ್ಥಿತಿ ತಿಳಿಕೊಟ್ಟಿದ್ದು ಪ್ರತಿಭಟನೆಯನ್ನು ಹಿಂದೂ ಕಾರ್ಯಕರ್ತರು ಹಿಂಪಡೆದಿದ್ದಾರೆ. ಈಗ ನಾಳೆ ಮದ್ದೂರು ಪಟ್ಟಣ ಬಂದ್ ಗೆ ಹಿಂದೂ ಸಂಘಟನೆಗಳು ಕರೆ ನೀಡಿವೆ. ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆಯಬಾರದು ನಡೆದು ಹೋಗಿದ್ದು ಶಾಂತಿಯಿಂದ ನಡೆಯುತ್ತಿದ್ದ ಮೆರವಣಿಗೆಯಲ್ಲಿ…
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ್ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಸೀದಿಯಲ್ಲಿ ಕಲ್ಲುಗಳನ್ನು ಸಂಗ್ರಹಿಸಿ ಇಟ್ಟುಕೊಂಡು ಹೊಡೆದಿದ್ದಾರೆ. ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಿದವರು ಶಾಂತಿ ಪ್ರಿಯರ? ಎಂದು ಪ್ರತಾಪ್ ಸಿಂಹ ಕಿಡಿ ಕಾರಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಾಲಿಬಾನ್ ಆಡಳಿತ ನಡೆಸುತ್ತಿದೆ ನಾಗಮಂಗಲ ಆಯ್ತು ಇದೀಗ ಮದ್ದೂರಿಗೆ ಇಂತಹ ಪರಿಸ್ಥಿತಿ ಬಂದಿದೆ ಇಲ್ಲಿ ಹುಟ್ಟಿ ಬೆಳೆದು ಗಡಿಯಾಚಿಗೆ ನಿಷ್ಠೆ ಇಟ್ಟುಕೊಂಡವರಿಂದ ಕೃತ್ಯ ಎಸೆಯಲಾಗಿದೆ ಉತ್ತರ ಪ್ರದೇಶದ ಪೊಲೀಸರು ಗಣೇಶ ಮೆರವಣಿಗೆಗೆ ಬಂದು ಡ್ಯಾನ್ಸ್ ಮಾಡುತ್ತಾರೆ. ತಾಲಿಬಾನ್ ಮನಸ್ಥಿತಿಯ ಕಾಂಗ್ರೆಸ್ ಸರ್ಕಾರದಲ್ಲಿ ಇದು ಸಾಧ್ಯವಿಲ್ಲ. ಅವರು ಯಾವ ಮುಲ್ಲಾ? ಕಲ್ಲು ಹೊಡೆದವರು ಅರೆಸ್ಟ್ ಆಗಬೇಕು ಹೆಣ್ಣು ಮಕ್ಕಳ ಮೇಲೆ ಲಾಠಿ ಬೀಸಿದ ಪೊಲೀಸರನ್ನು ಅಮಾನತು ಮಾಡಿ. ಆತ್ಮ ರಕ್ಷಣೆಗಾಗಿ ಹಿಂದೂಗಳು ತಿರುಗಿ ಬೀಳುತ್ತಾರೆ. ನೂರಾರು ವರ್ಷ ಆಕ್ರಮ ನಡೆದರೂ 80% ಹಿಂದೂಗಳಿದ್ದಾರೆ. ಹಿಂದೂಗಳು ಕಲ್ಲು ಬಿಸಾಡುವುದಿಲ್ಲ ಕಲ್ಲು ಬೀಸಾಡಿದ್ರೆ ಬಿಡಲ್ಲ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿರುವ…
ಮೈಸೂರು : ಸಾಹಿತಿ ಬಾನು ಮುಷ್ತಾಕ್ ಅವರು ಮುಸ್ಲಿಂ ಅಂತ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ವಿರೋಧ ಮಾಡುತ್ತಿಲ್ಲ. ಬದಲಾಗಿ 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಭುವನೇಶ್ವರಿ ತಾಯಿಯ ಬಗ್ಗೆ ಅವರು ಆಡಿದ ಮಾತಿಗೆ ಕ್ಷಮೆ ಕೇಳಬೇಕು. ಕ್ಷಮೆ ಕೇಳಿದಲ್ಲಿ ನಾನು ಹಾಕಿರುವ ಕೇಸ್ ವಾಪಸ್ ಪಡೆಯುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಯನ್ನು ಹೈಕೋರ್ಟ್ನಲ್ಲಿ ಕಲಂ 26ರ ಅಡಿ ಕೇಸ್ ಹಾಕಿದ್ದೇನೆ. ಇದರಲ್ಲಿ ಹಿಂದೂ ಧಾರ್ಮಿಕ ಪೂಜಾ ವಿಧಿವಿಧಾನಗಳ ಕುರಿತು ಹಾಗೂ ಸಂಪ್ರದಾಯಗಳ ವಿರುದ್ಧ ಕಂಡು ಬಂದರೆ ಪ್ರಶ್ನೆ ಮಾಡಬಹುದು ಎಂದು ಕಲಂ 26ರಲ್ಲಿ ತಿಳಿಸಲಾಗಿದೆ. ಹಾಗಾಗಿ ಅದರಂತೆ ಕೇಸ್ ಹಾಕಿದ್ದೇನೆ. 2023ರಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಬಾನು ಮುಷ್ತಾಕ್ ಮಾತನಾಡಿರುವುದಕ್ಕೆ ಕ್ಷಮೆ ಕೇಳಬೇಕು ಹಾಗೂ ದಸರಾ ಉದ್ಘಾಟನಾ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳ ಬಗ್ಗೆ ಸ್ಪಷ್ಟನೆ ಕೊಡಬೇಕು. ಹಾಗಾದರೆ ಮಾತ್ರ ನಾನು…














