Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ಇದು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೌದು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ರೇಣುಕಾ ಪೂಜಾರಿಯವರು ಅರೆಕಾಲಿಕ ಕನ್ನಡ ಪ್ರಾಧ್ಯಾಪಕಿಯಾಗಿ ನೇಮಕಗೊಂಡಿದ್ದಾರೆ. ಒಬ್ಬ ಮಂಗಳಮುಖಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವುದು ಕರ್ನಾಟಕದಲ್ಲೇ ಮೊದಲು. ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೆಣುಕಾ ಪೂಜಾರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಮುಗಿಸಿದ್ದರು. ಬಳ್ಳಾರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ಶಿಕ್ಷಣ, ಕುರುಗೋಡಿನಲ್ಲಿ ಪದವಿ ಹಾಗೂ ಕನ್ನಡ ವಿಷಯದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಬಳ್ಳಾರಿಯ ವಿಜಯನಗರ ಶ್ರೀಕೃಷ್ನದೇವರಾಯ ವಿವಿಯಲ್ಲಿ ಮುಗಿಸಿದ್ದರು.ಇದೀಗ ಪ್ರಾದ್ಯಾಪಕರಾಗಿ ನೇಮಕವಾಗಿರುವುದು ಕರ್ನಾಟಕದಲ್ಲಿ ಇದೆ ಮೊದಲು . ವಿದ್ಯಾರ್ಥಿಯಾಗಿರುವ ವೇಳೆ ದೇಹದಲ್ಲಿ ನೈಸರ್ಗಿಕ ಬದಲಾವಣೆ ಆದ ಹಿನ್ನೆಲೆಯಲ್ಲಿ ಮಂಗಳಮುಖಿಯಾಗಿ ಬದಲಾಗಿದ್ದಾರೆ. ಎಸ್ಎಸ್ ಎಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ.70ರಷ್ಟು ಅಂಕಗಳನ್ನು ಪಡೆದಿದ್ದಾರೆ. ಇವರು, ವಿಶ್ವವಿದ್ಯಾಲಯದ ಪೂರ್ಣಕಾಲಿಕ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಬೇಕು. ಉತ್ತಮ ಭವಿಷ್ಯ ರೂಪಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಎಚ್ಚೆತ್ತುಕೊಂಡ ಚಾಲಕ ಮತ್ತು ನಿರ್ವಾಹಕ ಬಸ್ ನಲ್ಲಿದ್ದ ಸುಮಾರು 40ಕ್ಕು ಹೆಚ್ಚು ಪ್ರಯಾಣಿಕರನ್ನು ಬಸ್ನಿಂದ ಕೆಳಗೆ ಇಳಿಸಿದ್ದಾರೆ. ಹೀಗಾಗಿ ಭಾರಿ ಅನಾಹುತ ಒಂದು ತಪ್ಪಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಹೌದು ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಬಸ್ ನಲ್ಲಿ 40 ಜನ ಪ್ರಾಣಿಸುತ್ತಿದ್ದರು. ಕೂಡಲೇ ಸ್ಥಳಿಯರು ಪ್ರಯಾಣಿಕರನ್ನು ಹಾಗೂ ಚಾಲಕ ಮತ್ತು ನಿರ್ವಾಹಕರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಸ್ಥಳೀಯರು ಸಾರಿಗೆ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಈ ವೇಳೆಸಾರಿಗೆ ಸಿಬ್ಬಂದಿಗಳು ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿದರು.
ಕೊಪ್ಪಳ : ಇತ್ತೀಚಿಗೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದಂತಹ ಗ್ರಹಲಕ್ಷ್ಮಿ ಯೋಜನೆಯಿಂದ ಬಂದಂತಹ ಹಣದಿಂದ ಅತ್ತೆ ಹಾಗೂ ಸೊಸೆ ಬೋರ್ವೆಲ್ ಕೊರೆಸಿದ್ದ ಸುದ್ದಿ, ಭಾರಿ ವೈರಲಾಗಿತ್ತು. ಇದಕ್ಕೆ ಸಿಎಂ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದ್ದರು. ಇದೀಗ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಹಿಳೆಯೊಬ್ಬರು, ಗೃಹಲಕ್ಷ್ಮಿ ಹಣ ಕೂಡಿಟ್ಟು ಮಾಂಗಲ್ಯ ಸರ ಖರೀದಿಸಿದ ಘಟನೆ ನಡೆದಿದೆ. ಹೌದು ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿಗಳಾದ ಶಂಕರಮ್ಮ ನಾಯಕ ತನಗೆ ಬರುವ ಪ್ರತಿ ತಿಂಗಳ ಹಣವನ್ನು ತನ್ನ ಅನಾಥ ಮೊಮ್ಮಗಳ ಖಾತೆಗೆ ಜಮಾ ಮಾಡುತ್ತಿದ್ದಾರೆ. ಕೆ. ನರಸಮ್ಮ ಮಾಂಗಲ್ಯ ಸರ ಖರೀದಿ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ಬರುವಂತಹ ಪ್ರತಿ ತಿಂಗಳು 2,000ಗಳನ್ನು, ಕುರಿತುಕೊಂಡು ಈ ಒಂದು ಮಾಂಗಲ್ಯ ಸರ ಮಾಡಿಸಿಕೊಂಡಿದ್ದೇನೆ. ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ತುಂಬಾ ಧನ್ಯವಾದಗಳು ಎಂದು ಶಂಕ್ರಮ್ಮ ನಾಯಕ್ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಗೃಹಲಕ್ಷ್ಮಿ ಹಣದಿಂದ ಮಾಂಗಲ್ಯ ಸರ ಖರೀದಿಸಿದ…
ಉತ್ತರಪ್ರದೇಶ : ಇತ್ತೀಚಿನ ದಿನಮಾನಗಳಲ್ಲಿ ಮಹಿಳೆಯರ ಹಾಗೂ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದೀಗ ಉತ್ತರ ಪ್ರದೇಶದ ನೋಯ್ಡಾದಲ್ಲಿ ಶಿಕ್ಷಕಿಯರ ಶೌಚಾಲಯದಲ್ಲಿ ಸ್ಪೈ ಕ್ಯಾಮೆರಾ ಅಳವಡಿಸಿದ್ದ ಶಾಲೆಯ ನಿರ್ದೇಶಕನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಶಿಕ್ಷಕಿಯರ ವಾಶ್ರೂಮನ್ ಬಲ್ಬ್ ಸಾಕೆಟ್ನಲ್ಲಿ ಸ್ಪೈ ಕ್ಯಾಮರಾವನ್ನು ಶಾಲಾ ನಿರ್ದೇಶಕನೊಬ್ಬ ಇಟ್ಟಿದ್ದ ಎನ್ನಲಾಗಿದೆ. ಆತ ತನ್ನ ಕಂಪ್ಯೂಟರ್ ಹಾಗೂ ಮೊಬೈಲ್ ಮೂಲಕ ವಾಶ್ರೂಂನ ವಿಡಿಯೋವನ್ನು ಲೈವ್ ಆಗಿ ವೀಕ್ಷಿಸುತ್ತಿದ್ದ. ಈ ಕುರಿತು ಶಿಕ್ಷಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು.ಶಿಕ್ಷಕಿಯ ದೂರಿನ ಮೇರೆಗೆ ಆತನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆ ಹಿನ್ನೆಲೆ? ಡಿಸೆಂಬರ್ 10 ರಂದು ನೋಯ್ಡಾದ ಸೆಕ್ಟರ್ 70 ರ ಪ್ಲೇ ಸ್ಕೂಲ್ ಆದ ಲರ್ನ್ ವಿತ್ ಫನ್ನಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿಯೊಬ್ಬರು ವಾಶ್ರೂಮ್ನ ಬಲ್ಬ್ ಹೋಲ್ಡರ್ನಲ್ಲಿ ಮಸುಕಾದ ಬೆಳಕಿರುವುದನ್ನು ಗಮನಿಸಿದರು. ಅದು ಅನುಮಾನವನ್ನು ಹುಟ್ಟುಹಾಕಿತ್ತು. ಸೂಕ್ಷ್ಮವಾಗಿ ಗಮನಿಸಿದಾಗ ಅಲ್ಲಿ ಸ್ಪೈ ಕ್ಯಾಮರಾ…
ಬೆಂಗಳೂರು : ಬಿಜಿಎಸ್ ಆಸ್ಪತ್ರೆಯಿಂದ ಇಂದು ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದುವರೆ ತಿಂಗಳಿನಿಂದ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಈಗಾಗಲೇ ಆಸ್ಪತ್ರೆ ಆವರಣದಲ್ಲಿ ಪತ್ನಿ ವಿಜಯಲಕ್ಷ್ಮಿ ಜೊತೆಗೆ ಕಾರಿನಲ್ಲಿ ತಮ್ಮ ನಿವಾಸಕ್ಕೆ ಹೋಗುತ್ತಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿ ದರ್ಶನ್ ಹೊಸಕೆರೆ ಹಳ್ಳಿಯ ಫ್ಲ್ಯಾಟ್ ಗೆ ತೆರಳಲಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಫ್ಲಾಟ್ ಗೆ ದರ್ಶನವರು ತೆರಳಲಿದ್ದಾರೆ.ಮಧ್ಯಂತರ ಜಾಮಿನು ಪಡೆದುಕೊಂಡು ನಟ ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದಾರೆ. ಫಿಜಿಯೋಥೆರಫಿ ಮಾಡಿಸಿ ಬೇಲ್ ಸಿಗುತ್ತಿದ್ದಂತೆ ಇದೀಗ ದರ್ಶನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. .ಯಾವಾಗ ಬೇಕಾದರೂ ಸರ್ಜರಿ ಮಾಡಿಸಿಕೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಇಂದು ಪತ್ನಿ ವಿಜಯಲಕ್ಷ್ಮಿ ಫ್ಲಾಟ್ ಗೆ ತೆರಳಲಿದ್ದಾರೆ. ವೈದ್ಯರ ಸಲಹೆ ಮೇರೆಗೆ ದರ್ಶನ ಡಿಸ್ಚಾರ್ಜ್ ಮಾಡಲಾಗಿದೆ. ತಂದೆಗೆ ನೆರವಾದ ವಿನೀಶ್! ವಿನೀಶ್ ದರ್ಶನ್ ಅಪ್ಪ ಡಿಸ್ಚಾರ್ಜ್ ಆಗಿ ಬರುತ್ತಿದ್ದಂತೆ ಜೊತೆಗೆ…
ಬೆಂಗಳೂರು : ಕಳೆದ ಡಿಸೆಂಬರ್ 9 ರಂದು ಬೆಂಗಳೂರಿನ ಮಂಜುನಾಥ ಲೇಔಟ್ ನ ಫ್ಲಾಟ್ ನಲ್ಲಿ ಉತ್ತರ ಪ್ರದೇಶದ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಹೌದು ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ ಕೇಸ್ ಪ್ರಕರಣ ಸಂಬಂಧ ಓರ್ವ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿ ಸುಶೀಲ್ ಗೆ ಇದೀಗ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತುಲ್ ಪತ್ನಿ ನಿಖಿತ ಸಿಂಘಾಣಿಯ, ತಾಯಿ ನಿಶಾ ಸಿಂಘಾಣಿಯ ನಿಖಿತಾ ಸಹೋದರ ಅನುರಾಗ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆದರೆ ಮತ್ತೊಬ್ಬ ಆರೋಪಿ ಸುಶೀಲ್ ಶೈಲ್ ಗೆ ಸದ್ಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸುಶೀಲಗೆ ಅಲಹಾಬಾದ್ ಹೈಕೋರ್ಟ್ನಿಂದ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಸುಶೀಲ್ ಸಿಂಗಾಣಿಯ ಪರ ಮನೀಶ್ ತಿವಾರಿ ವಾದ ಮಂಡಿಸಿದರು.
ಬೆಂಗಳೂರು : ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೇರಿಯಾ ದೇಶದ ಪ್ರಜೆಯನ್ನು ಬಂಧಿಸಲಾಗಿದೆ. ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿದ್ದ ಆರೋಪಿಯಿಂದ 30 ಗ್ರಾಂ ಕೊಕೇನ್ ಅನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಯನ್ನು ನೈಜಿರಿಯಾದ ಮೈಕೆಲ್ ಒಕಾಫರ್ ಓಡಿಕ್ಪೋ (44) ಎಂದು ತಿಳಿದುಬಂದಿದೆ. 2024ರ ಮಾರ್ಚ್ ತಿಂಗಳಲ್ಲಿ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿತ್ತು. ಅಂಬ್ಲಮೊಗರು ನಿವಾಸಿಗಳಾದ ಸದಕತ್ ಯು. ಹಾಗೂ ಮಹಮ್ಮದ್ ಅಶ್ಫಕ್ ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 34 ಗ್ರಾಂ ಕೊಕೇನ್ ಹಾಗೂ ಇತರ ಒಟ್ಟು 2,72,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ಗೋವಾದ ಡ್ರಗ್ ಪೆಡ್ಲರ್ ಮೈಕೆಲ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ಉತ್ತರ ಗೋವಾದ ಕಾಲನ್ಗೂಟ್ ಎಂಬಲ್ಲಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ಬಳಿಯಿದ್ದ 30 ಗ್ರಾಂ ಕೊಕೇನ್, ಸಾಗಾಟಕ್ಕೆ ಉಪಯೋಗಿಸಿದ ಕಾರು, ಎರಡು…
ಬೆಳಗಾವಿ : ಲಡಾಖ್ನಲ್ಲಿ ಭೂಕುಸಿತದಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಸೈನಿಕ ಮಹೇಶ್ ಮೃತಪಟ್ಟಿದ್ದಾರೆ. ಡಿಸೆಂಬರ್ 14 ರಂದು ಕರ್ತವ್ಯದಲ್ಲಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅವರ ಪಾರ್ಥಿವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮಕ್ಕೆ ತರಲಾಯಿತು. ಹೌದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಇರಣಟ್ಟಿ ಗ್ರಾಮದ ಸೈನಿಕ ಮಹೇಶ್ ಡಿಸೆಂಬರ್ 14ರಂದು ಲಡಾಖ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗುಡ್ಡ ಕುಸಿದು ಮೃತಪಟ್ಟಿದ್ದಾರೆ. ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಹೊರತೆಗೆದಿದ್ದರು.ಮಹೇಶ್ ಅವರ ಪಾರ್ಥಿವ ಶರೀರ ಮಂಗಳವಾರ ನಿನ್ನೆ ಸಂಜೆ ಇರಣಟ್ಟಿ ಗ್ರಾಮಕ್ಕೆ ಆಗಮಿಸಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಗೌರವ ಸಮರ್ಪಿಸಿದರು. ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ಮಹೇಶ್ ಅವರ ಅಂತ್ಯಸಂಸ್ಕಾರ ನೆರವೇರಿತು. ಎರಡು ತಿಂಗಳ ಹಿಂದೆಯಷ್ಟೇ ಸೈನಿಕ ಮಹೇಶ್ ಅವರ ನಿಶ್ಚಿತಾರ್ಥ ಕೂಡ ಆಗಿದ್ದು, ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಇದೀಗ ಮನೆಯ ಮಗನ ಈ ಒಂದು ಸಾವಿನಿಂದಾಗಿ ಎರಡು ಕುಟುಂಬಗಳ ಮನೆಯಲ್ಲಿ…
ಬೆಂಗಳೂರು : ಬಿಜಿಎಸ್ ಆಸ್ಪತ್ರೆಯಿಂದ ಇಂದು ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದುವರೆ ತಿಂಗಳಿನಿಂದ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಈಗಾಗಲೇ ಆಸ್ಪತ್ರೆ ಆವರಣದಲ್ಲಿ ಪತ್ನಿ ವಿಜಯಲಕ್ಷ್ಮಿ ಕಾರು ಬಂದಿದ್ದು ದರ್ಶನ್ ಬರುವಿಕೆಗೆ ಕಾಯುತ್ತಿದ್ದಾರೆ. ಈಗಾಗಲೇ ಆರೋಪಿ ದರ್ಶನ್ ಡಿಸ್ಚಾರ್ಜ್ ಪ್ರಕ್ರಿಯೆ ಆರಂಭವಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿ ದರ್ಶನ್ ಹೊಸಕೆರೆ ಹಳ್ಳಿಯ ಫ್ಲ್ಯಾಟ್ ಗೆ ತೆರಳಲಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಫ್ಲಾಟ್ ಗೆ ದರ್ಶನವರು ತೆರಳಲಿದ್ದಾರೆ.ಮಧ್ಯಂತರ ಜಾಮಿನು ಪಡೆದುಕೊಂಡು ನಟ ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದಾರೆ. ಫಿಜಿಯೋಥೆರಫಿ ಮಾಡಿಸಿ ಬೇಲ್ ಸಿಗುತ್ತಿದ್ದಂತೆ ಇದೀಗ ದರ್ಶನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. .ಯಾವಾಗ ಬೇಕಾದರೂ ಸರ್ಜರಿ ಮಾಡಿಸಿಕೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಇಂದು ಪತ್ನಿ ವಿಜಯಲಕ್ಷ್ಮಿ ಫ್ಲಾಟ್ ಗೆ ತೆರಳಲಿದ್ದಾರೆ. ವೈದ್ಯರ ಸಲಹೆ ಮೇರೆಗೆ ದರ್ಶನ ಡಿಸ್ಚಾರ್ಜ್ ಮಾಡಲಾಗಿದೆ.
ನವದೆಹಲಿ : ವಕ್ಫ್ ಆಸ್ತಿ ಕಬಳಿಕೆಗೆ ಮೌನವಾಗಿರಲು ಬಿವೈ ವಿಜಯೇಂದ್ರ ಅನ್ವರ್ ಮಣಿಪ್ಪಾಡಿಗೆ 150 ಕೋಟಿ ರೂಪಾಯಿ ಆಮಿಷ ಒಡ್ಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಗಂಭೀರವಾದ ಆರೋಪ ಮಾಡಿದ್ದಾರೆ. ಈ ಒಂದು ಆರೋಪಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿಯ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅನ್ವರ್ ಮಣಿಪಾಡಿಗೆ 150 ಕೋಟಿ ರೂಪಾಯಿ ಆಮಿಷ ಒಡ್ಡಿದು, ಧರ್ಮಸಿಂಗ್ ಪುತ್ರ, ಬಿವೈ ವಿಜಯೇಂದ್ರ ಅಲ್ಲ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸಿಂಗ್ ಪುತ್ರ ಅನ್ವರ್ ಮಣಿಪಾಡಿಗೆ ಆಮಿಷ ಒಡ್ಡಿದ್ದರು. 150 ಕೋಟಿ ಆಮಿಷ ಒಡ್ಡಿದ್ದು ಧರ್ಮಸಿಂಗ್ ಪುತ್ರ. ಅನ್ವರ್ ಮಾಡಿಪಾಡಿಗೆ ಆಮಿಷಡ್ಡಿ ಕಾಂಗ್ರೆಸ್ ಮುಖಂಡರಿಗೆ ಬುದ್ಧಿ ಭ್ರಮಣೆ ಆಗಿದೆ. ವಕ್ಫ್ ವಕ್ಫ್ ವರದಿಯಲ್ಲಿ ತಮ್ಮ ಹೆಸರು ಕೈಬಿಡಬೇಕೆಂದು ಧರ್ಮಸಿಂಗ್ ಪುತ್ರ ಅನ್ವರ್ ಮಣಿಪ್ಪಾಡಿಗೆ ಆಮಿಷ ಒಡ್ಡಿದ್ದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೆ.