Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ನಮ್ಮದೇ ಸರ್ಕಾರ ಇದ್ದರೂ ನಮಗೆ ಅನುದಾನ ಸಿಗುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ಬಗ್ಗೆ ಘೋಷಣೆ ಮಾಡಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು,ಅಪೆಂಡಿಕ್ಸ್ ಇ ನಲ್ಲಿ 4,000 ಕೋಟಿ ರೂ., ಗ್ರಾಮೀಣ ರಸ್ತೆಗೆ 2,000 ಕೋಟಿ ರೂ. ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ರೂ. ವಿತರಣೆ ಮಾಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. ಅನುದಾನ ಕೊರತೆ ನೀಗಿಸಲು ಒಟ್ಟು 6 ಸಾವಿರ ಕೋಟಿ ರೂ. ಬಿಡುಗಡೆ ಸಂಬಂಧ ಘೋಷಣೆ ಮಾಡುತ್ತೇನೆ. ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ ರೂ., ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ 2 ಸಾವಿರ ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗುವುದು.ಗ್ರಾಮೀಣ…
ಮಂಗಳೂರು : ಸಾಲ ಮರುಪಾವತಿಗೆ ಬ್ಯಾಂಕ್ ಅಧ್ಯಕ್ಷನಿಂದ ಕಿರುಕುಳ ಆರೋಪ ಹಿನ್ನೆಲೆಯಲ್ಲಿ, ಕಿರುಕುಳ ಬಗ್ಗೆ ವಾಟ್ಸಪ್ ಸ್ಟೇಟಸ್ ವಿಡಿಯೋ ಹಾಕಿ ದಿವ್ಯಾಂಗ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಪೆರ್ಮಾಯಿ ಎಂಬಲ್ಲಿ ಈ ಒಂದು ಘಟನೆ ನಡೆದಿದೆ. ಪೆರ್ಮಾಯಿ ನಿವಾಸಿ ಮನೋಹರ್ ಪಿರೇರ (46) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದ್ದು. ಕ್ಯಾತೋಲಿಕ್ ಸಹಕಾರಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಆರೋಪ ಮಾಡಿದ್ದಾರೆ. ಎಂಸಿಸಿ ಬ್ಯಾಂಕ್ ನಿಂದ 15 ಲಕ್ಷ ರೂಪಾಯಿ ಮನೋಹರವರು ಸಾಲ ಪಡೆದಿದ್ದರು. ಕೋವಿಡ್ ವೇಳೆ ನಷ್ಟಕ್ಕೆ ಈಡಾಗಿ ಬ್ಯಾಂಕ್ ಸಾಲ ಕಟ್ಟಲು ಅವರಿಗೆ ಆಗಿರಲಿಲ್ಲ. ಹಾಗಾಗಿ ಮನೆಯನ್ನು ಜಪ್ತಿ ಮಾಡಲು ಬ್ಯಾಂಕಿನ ಆಡಳಿತ ಮಂಡಳಿ ಮುಂದಾಗಿದೆ. ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ವಿರುದ್ಧ ಮನೋಹರ್ ಕಿರುಕುಳದ ಆರೋಪ ಮಾಡಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿರುವ ಮನೋಹರ್ ಪಿರೇರಾ ನನ್ನ ಸಾವಿಗೆ ಬ್ಯಾಂಕ್ ಅಧ್ಯಕ್ಷ ಅನಿಲ್ ಕಾರಣ ಎಂದು ಹೇಳಿಕೆ ನೀಡಿದ್ದಾರೆ.ಅನಿಲ್ ಲೋಬೊ ಕಿರುಕುಳ ನೀಡಿದ್ದಾನೆ ಎಂದು ಮನೋಹರ್…
ಹುಬ್ಬಳ್ಳಿ : ಮುಂದಿನ ವರ್ಷ 2025 ಫೆಬ್ರವರಿ 4 ರಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಸ್ಥೆ ಉದ್ಘಾಟನೆ ಆಗಲಿದ್ದು, ಸುಮಾರು 1008 ಸ್ವಾಮೀಜಿಗಳಿಂದ ಪಾದಪೂಜೆ ಮಾಡಿ ಉದ್ಘಾಟನೆ ಮಾಡುತ್ತೇವೆ ಎಂದು ಬಿಜೆಪಿಯ ಮಾಜಿ ಸಚಿವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ತಿಳಿಸಿದರು. ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 18 ಸಾಧುಸಂತರ ಪಾದ ಪೂಜೆ ಮಾಡಿ ಉದ್ಘಾಟನೆ ಮಾಡುತ್ತೇವೆ. ನಮ್ಮ ಸರ್ಕಾರ ಇದ್ದಾಗ ಎರಡು ಬಾರಿ ಮಠಕ್ಕೆ ಹಣ ಬಿಡುಗಡೆ ಮಾಡಿದ್ದೇವೆ ಸದಾನಂದ ಗೌಡ ಹಾಗೂ ಬಸವರಾಜ ಬೊಮ್ಮಾಯಿ 2 ಬಾರಿ ಹಣ ಬಿಡುಗಡೆ ಮಾಡಿದರು ಕರ್ನಾಟಕ ರಾಜ್ಯದಲ್ಲಿ ಸಾವಿರಾರು ಸಣ್ಣ ಮಟ್ಟಗಳಿವೆ ಕ್ರಾಂತಿವೀರ ಬ್ರಿಗೇಡ್ನಿಂದ ಸಣ್ಣ ಮಟ್ಟಗಳಿಗೆ ನ್ಯಾಯ ಕೊಡಿಸುವ ಕೆಲಸವಾಗುತ್ತದೆ ನಾನು ಮೀಸಲಾತಿ ಪರವು ಅಲ್ಲ ವಿರೋಧವು ಅಲ್ಲ. ಹಿಂದೂ ಧರ್ಮದ ರಕ್ಷಣೆಗೆ ನಮ್ಮ ಹೋರಾಟ. ಎಂದು ಹುಬ್ಬಳ್ಳಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹೇಳಿಕೆ ನೀಡಿದರು. ಇದೇ…
ತುಮಕೂರು : ಕೃಷಿಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟಿಸಿ ಸದ್ಯ ಜೈಲು ಪಾಲಾಗಿರುವ ಡ್ರೋನ್ ಪ್ರತಾಪ್ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆm ಈ ಒಂದು ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿಗಳ ಕಚೇರಿ ಸಂಪೂರ್ಣ ವರದಿ ನೀಡಲು ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. ಹೌದು ಸೋಡಿಯಂ ಮೆಟಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧುಗಿರಿ ಸಿಪಿಐ ಕಚೇರಿಗೆ ಇದೀಗ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಆಗಮಿಸಿದ್ದಾರೆ. ಸಂಪೂರ್ಣ ವರದಿಗೆ ಸಿಎಂ ಕಚೇರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈಗ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪೊಲೀಸರನ್ನು ಭೇಟಿಯಾಗಿದ್ದರೆ. ಸಿಎಂ ಕಚೇರಿಯಿಂದ ಸಂಪೂರ್ಣ ವರದಿ ನೀಡಲು ಸೂಚನೆ ನೀಡಿದ್ದರ ಹಿನ್ನೆಲೆಯಲ್ಲಿ ಮಧುಗಿರಿ ಸಿಪಿಐ ಅವರನ್ನು ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಭೇಟಿಯಾದರು. ಹೆಚ್ಚಿನ ಮಾಹಿತಿ ಸಂಗ್ರಹಿಸಲು ಮಂಡಳಿ ಅಧಿಕಾರಿಗಳು ಆಗಮಿಸಿದ್ದಾರೆ. ಸಂಪೂರ್ಣ ವರದಿ ನೀಡಲು ಸಿಎಂ ಕಚೇರಿ ಸೂಚನೆ ನೀಡಿದ್ದರಿಂದ, ಡ್ರೋನ್ ಪ್ರತಾಪ್ ಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗಲಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಶುಕ್ರವಾರದಂದು ಹೈಕೋರ್ಟ್ ಕೊಲೆ ಆರೋಪಿಗಳಾದಂತಹ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಉಳಿದ ಎಲ್ಲಾ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಕೊಲೆ ಆರೋಪಿ A1 ಪವಿತ್ರ ಗೌಡ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ತುಮಕೂರು ಹಾಗೂ ಕಲ್ಬುರ್ಗಿ ಕೇಂದ್ರ ಕಾರಾ ಗೃಹಗಳಲ್ಲಿ ಇತರೆ ಆರೋಪಿಗಳು ಕೂಡ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲೆ ಬಿಜಿಎಸ್ ಆಸ್ಪತ್ರೆಯಿಂದ ಇಂದು ಮಧ್ಯಾಹ್ನದ ಬಳಿಕ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ ಒಂದುವರೆ ತಿಂಗಳಿನಿಂದ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಧ್ಯಂತರ ಜಾಮಿನು ಪಡೆದುಕೊಂಡು ನಟ ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದಾರೆ. ಫಿಜಿಯೋಥೆರಫಿ ಮಾಡಿಸಿ ಬೇಲ್…
ಮೈಸೂರು : ಮನೆಯ ಒಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಈ ಒಂದು ಕಾರ್ಯಾಚರಣೆಯಲ್ಲಿ ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದು ಅಲ್ಲದೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ, ಮೈಸೂರಿನ ಬಸವ ಗುಡಿಯ ಬಳಿ ನಡೆದಿದೆ. ಹೌದು ಮೈಸೂರಿನ ಹೆಬ್ಬಾಳು ಪೊಲೀಸ್ ಠಾಣೆಯ ಬಳಿ ಬಸವನಗುಡಿ ವೃತ್ತದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು, ಈ ಕುರಿತಂತೆ ಒಡನಾಡಿ ಸಂಸ್ಥೆ ಮುಖ್ಯಸ್ಥ ಸ್ಟ್ಯಾನ್ಲಿ ಪರುಶು ಪೊಲೀಸರಿಗೆ ಮಾಹಿತಿ ನೀಡಿದರು. ಕೊಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಎಸಿಪಿ ಗಜೇಂದ್ರ ಪ್ರಸಾದ ನೇತೃತ್ವದಲ್ಲಿ ಮನೆಯ ಮೇಲೆ ದಾಳಿ ಮಾಡಿದರು. ಈ ವೇಳೆ ಹಾಸನ, ಮೈಸೂರು ಹಾಗೂ ಕೆ ಆರ್ ನಗರದ ಮೂಲದ ಐವರು ಮಹಿಳೆಯರನ್ನು ರಕ್ಷಣೆ ಮಾಡಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗೂ ಓರ್ವ ಗ್ರಾಹಕರನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆAಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸಬಹುದಾಗಿದೆ.
ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಳಗಾವಿಯ ಸುವರ್ಣಸೌಧ ಮುತ್ತಿಗೆ ಹಾಕಲು ಪಂಚಮಸಾಲಿ ಹೋರಾಟಗಾರರು ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆಯಲು ಮುಂದಾಗಿದ್ದರು ಕೂಡ ಹೋರಾಟಗಾರರು ಬ್ಯಾರಿಕೇಡ್ ತಳ್ಳಿ ಸುವರ್ಣಸೌಧ ಮತ್ತಿಗೆಗೆ ಹಾಕಲು ಯತ್ನಿಸಿದಾಗ, ಲಾಠಿ ಚಾರ್ಜ್ ನಡೆಸಿದರು. ಈ ವಿಚಾರವಾಗಿ ಇಂದು ಪರಿಷತ್ ನಲ್ಲಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದರು. ಹೌದು ಪಕ್ಷಿಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಟಿಚಾರ್ಜ್ ಮಾಡಿದ್ದನ್ನು ಖಂಡಿಸಿ, ವಿಧಾನ ಪರಿಷತ್ ನಲ್ಲಿ ಸದನದ ಬಾವಿಗಳಿಗೆ ಬಿಜೆಪಿ ಸದಸ್ಯರು ಧರಣಿ ನಡೆಸುತ್ತಿದ್ದಾರೆ. ಪಂಚಮಸಾಲಿ ಸಮಾಜದ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಆಗಿದೆ. ಮೀಸಲಾತಿ ನೀಡುವ ವಿಚಾರದಲ್ಲಿ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಸರ್ಕಾರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಬಾವಿಗಿಳಿದು ಧರಣಿ ಮಾಡುತ್ತಿದ್ದಾರೆ.
ತುಮಕೂರು : ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು ಮಳಿಗೆಗಳು ಹೊತ್ತಿ ಉರಿದಿರುವ ಘಟನೆ ತುಮಕೂರು ನಗರದ ವಿಶ್ವವಿದ್ಯಾಲಯದ ಬಳಿಯ ಮಳಿಗೆಗಳಲ್ಲಿ ಇಂದು ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಮೊಬೈಲ್ ಅಂಗಡಿ ಸೇರಿದಂತೆ ಮೂರು ಮಳಿಗೆಗಳು ಸುಟ್ಟು ಭಸ್ಮವಾಗಿವೆ. ಈ ಒಂದು ಘಟನೆ ಶಾರ್ಟ್ ಸರ್ಕ್ಯೂಟ್ ನಿಂದ ಆಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, ಮೊದಲಿಗೆ ಮೊಬೈಲ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಪಕ್ಕದ ಸೌತ್ ಹೋಳಿಗೆ ಮನೆಗೂ ವ್ಯಾಪಿಸಿದೆ. ಆ ನಂತರ ಸಮೀಪದ ಎಸ್ಎಂಎಲ್ ತರಕಾರಿ ಅಂಗಡಿಗೂ ಬೆಂಕಿ ಹಬ್ಬಿದೆ. ಅಗ್ನಿ ಅವಘಡದಲ್ಲಿ ಸಿಸಿ ಕ್ಯಾಮೆರಾ, ಮೊಬೈಲ್, ಫ್ರಿಜ್ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ.ಹೊಸ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಈಗಾಗಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗಾವಿ : ವಕ್ಫ್ ಆಸ್ತಿ ಕಬಳಿಕೆಗೆ ಸಂಬಂಧಪಟ್ಟಂತೆ ಅನ್ವರ್ ಮಣಿಪಾಡಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ 150 ಕೋಟಿ ಆಮೀಷ ಒಡ್ಡಿದ್ದರು ಎಂಬ ಆರೋಪದ ವಿಚಾರವಾಗಿ ಇಂದು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಸದಸ್ಯರ ನಡುವೆ ತೀವ್ರ ಕೋಲಾಹಲ ಗಲಾಟೆ ನಡೆಯಿತು. ಈ ವಿಷಯವನ್ನು ಮೊದಲು ಬಿವೈ ವಿಜಯೇಂದ್ರ ಪ್ರಸ್ತಾಪಿಸಿದ್ದು, ವಿರುದ್ಧ 150 ಕೋಟಿ ಆಮೀಷ ಆರೋಪದ ಕುರಿತು, ಸಿಎಂ ಸಿದ್ದರಾಮಯ್ಯ ನನ್ನ ಮೇಲೆ ಈ ಕುರಿತು ಆರೋಪ ಮಾಡಿದ್ದಾರೆ. 150 ಕೋಟಿ ಆಮಿಷ ಎಂದು ಸಿಎಂ ಸಿದ್ದರಾಮಯ್ಯ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ತನಿಖೆಯನ್ನು CBI ಗೆ ಕೊಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಗೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ವಿಶ್ವಾಸ ಬಂದಿದ್ದಕ್ಕೆ ಸಂತೋಷವಾಗಿದೆ ಎಂದರು. ಸದನದಲ್ಲಿ ಅನ್ವರ್ ಮಣಿಪಾಡಿ ವರದಿ ಬಗ್ಗೆಯೂ ಚರ್ಚೆಯಾಗಲಿ ಸಿಎಂ ಸಿದ್ದರಾಮಯ್ಯ ಹಗರಣಗಳ ಸರಮಾಲೆಯಲ್ಲಿ ಸಿಲುಕಿಕೊಂಡಿದ್ದಾರೆ.ಸಿಬಿಐ ತನಿಖೆಗೆ ಕೊಡಲು ಸಿಎಂಗೆ ಪರಮಾಧಿಕಾರ ಇದೆ. ಈ ವೇಳೆ ವಿಜಯೇಂದ್ರ ಮಾತನಾಡುತ್ತಿದ್ದ…