Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ಕೃಷಿಹೊಂಡದಲ್ಲಿ ಸೋಡಿಯಂ ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡ್ರೋನ್ ಪ್ರತಾಪ್ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿತ್ತು.ಬಳಿಕ ಪೊಲೀಸರು ಮಧುಗಿರಿ ತಾಲೂಕಿನ JMFC ಕೋರ್ಟಿಗೆ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಹಾಜರಿಪಡಿಸಿದ್ದರು. ವಿಚಾರಣೆ ಬಳಿಕ ಡ್ರೋನ್ ಪ್ರತಾಪ್ ಅವರನ್ನು ಡಿಸೆಂಬರ್ 26ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಹೌದು ಡಿಸೆಂಬರ್ 26ರವರೆಗೂ ಡ್ರೋನ್ ಪ್ರತಾಪ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಮಧುಗಿರಿ ಜೆ ಎಂ ಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜಿಎಂಎಸ್ಸಿ ನ್ಯಾಯಾಲಯವು ಡಿಸೆಂಬರ್ 26ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಡ್ರೋನ್ ಪ್ರತಾಪ್ ಕಳೆದ ಕೆಲವು ದಿನಗಳ ಹಿಂದೆ ಅನುಮತಿ ಪಡೆಯದೆ ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟಿಸಿದ್ದ ಘಟನೆ ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಈ ವಿಚಾರವಾಗಿ ಮದುಗಿರಿ ತಾಲೂಕು ಮಿಡಿಶೇಸಿ ಠಾಣೆ ಪೋಲಿಸರು…
ಹೊಸನಗರ ತಾಲೂಕಿನ ನಿಟ್ಟೂರಿನಲ್ಲಿ ಬಿಜೆಪಿ ಬೆಂಬಲಿತ ವ್ಯಕ್ತಿಯ ಸಹೋದರನೊಬ್ಬ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ಇಡೀ ದೃಶ್ಯ ಸಮೀಪದ ಹೋಟೆಲ್ ನಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಕನ್ನಡ ನ್ಯೂಸ್ ನೌನೊಂದಿಗೆ ಮಾತನಾಡಿದ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್, ಸೈದಾಂತಿಕವಾಗಿ ಎದುರಿಸಲು ಆಗದವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಇದಕ್ಕೆಲ್ಲ ಹೆಸರುವುದಿಲ್ಲ. ಪೊಲೀಸರಿಗೆ ಸೂಕ್ತ ಕಾನೂನು ಕ್ರಮಕ್ಕೆ ದೂರು ನೀಡಿದ್ದೇನೆ. ದೇವರಾಜ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ ಎಂದರು. ನಾನು ಕಾಂಗ್ರೆಸ್ ಪರ ವ್ಯಕ್ತಿಗೆ ಸಹಕಾರ ಸಂಘದ ಚುನಾವಣೆಯಲ್ಲಿ ಬೆಂಬಲಿಸಿದ್ದೆ. ಇದಕ್ಕೆ ಸಿಟ್ಟಾದಂತ ಬಿಜೆಪಿ ಬೆಂಬಲಿತ ವ್ಯಕ್ತಿಯ ಸಹೋದರ, ಪುಡಿ ರೌಡಿ ದೇವರಾಜ್ ಎಂಬುವವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತನಾಗಿ ದುಡಿದ ನನ್ನ ಏಳಿಗೆ ಸಹಿಸದೇ ಈ ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಹೇಳಿದರು. ಮಾಜಿ ಶಾಸಕರೇ ಏನಿದು ನಿಮ್ಮ ಬೆಂಬಲಿಗನ ಅಟ್ಟಹಾಸ.? ನಾಗೋಡಿ ವಿಶ್ವನಾಥ್ ಮೇಲೆ ಹಲ್ಲೆ…
ಬೆಳಗಾವಿ : ವಕ್ಫ್ ಆಸ್ತಿಯ ಕಬಳಿಕೆವಿ ಚಾರವಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ 150 ಕೋಟಿ ರೂಪಾಯಿ ಆಮೀಷವಡ್ಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿಯ ಸುವರ್ಣ ಸಹೋದರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಮಾಣಿಪಾಡ್ಡಿ ಈ ಹಿಂದೆ ಹೇಳಿಕೆ ನೀಡಿದಕ್ಕೆ ತಾನೆ ನಾವು ರಿಯಾಕ್ಟ್ ಮಾಡಿದ್ದು ನಾವು ರಿಯಾಕ್ಟ್ ಮಾಡಿದ್ದು ಸರಿ ಇದೆ ಎಂದು ಸಮರ್ಥಿಸಿಕೊಂಡರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಣಪ್ಪಾಡಿ ಪ್ರಕರಣ ಸಿಬಿಐಗೆ ಕೊಡುವ ಬಗ್ಗೆ ಚರ್ಚೆಯಾಗಿದೆ. ಅನ್ವರ್ ಮಾಣಪಾಡಿ ಈ ಹಿಂದೆ ವಿಜಯೇಂದ್ರ ಆಮಿಷ ಒದ್ದಿದ್ದರು ಎಂದು ಸ್ವತಃ ಅವರೇ ಹೇಳಿಕೆ ನೀಡಿದ್ದಾರೆ. ಯಾವುದು ಸರಿ ಯಾವುದು ತಪ್ಪು ನೋಡಬೇಕು. ಮೊದಲು ಅವರು ಹೇಳಿದ ಮೇಲೆ ತಾನೆ ನಾವು ರಿಯಾಕ್ಟ್ ಮಾಡಿದ್ದೇವೆ? ಈಗ ಇಲ್ಲ ಅಂದ್ರೆ ಏನು ಮಾಡಬೇಕು ನೀವೇ ಹೇಳಿ. ನಮ್ಮ ಪ್ರಕಾರ ನಾವು ರಿಯಾಕ್ ಮಾಡಿದ್ದು ಸರಿ ಇದೆ. 150 ಕೋಟಿ ಆಫರ್ ಮಾಡಿದ್ರು ಅಂತ ಅವರೇ ಹೇಳಿದ್ದಾರೆ. ಪ್ರೆಸ್ ಮೀಟ್ ಮಾಡಿ ಅವರೇ ಹೇಳಿದ್ದು…
ವಿಜಯನಗರ : ಜಿಲ್ಲೆಯ ಹೊಸಪೇಟೆಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಈ ಒಂದು ರಸ್ತೆ ಅಪಘಾತದಲ್ಲಿ ಪತಿಸಾವನ್ನಪ್ಪಿದ್ದು ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ನಡೆದಿದೆ. ಹೊಸಪೇಟೆಯ ಬಳಿ ಪತಿ ಪತ್ನಿ ಹಾಗೂ ಮಕ್ಕಳು ಬೈಕ್ ನಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದರು, ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕಿಗೆ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸಾವನಪ್ಪಿದ್ದು ಪತ್ನಿ ಮಕ್ಕಳಿಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗಳಿಗೆ ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಭೀಕರತೆಗೆ ಕಾರು ಬೈಕ್ ಸಂಪೂರ್ಣವಾಗಿ ನುಗ್ಗುಜ್ಜಾಗಿದೆ.ಕೂಡಲೇ ಅಲ್ಲಿದ್ದ ಸ್ಥಳೀಯರು ನೆರವಿಗೆ ಬಂದು, ಪತ್ನಿ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದು ಹೊಸಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಹಲ್ಲೆ ನಡೆದಿದ್ದು, ಹಳೆ ದ್ವೇಷ ಹಿನ್ನೆಲೆ ಹಾಗೂ ಅಭಿವೃದ್ಧಿ ಕಂಡು ಹೊಟ್ಟೆ ಉರಿಗೆ ಈ ಒಂದು ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಶಿವಮೊಗ್ಗ ಹೊಸನಗರದ ನಿಟ್ಟೂರಿನಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹಲ್ಲೆ ಮಾಡುವುದರ ದೃಶ್ಯ ಇದೀಗ ಸಿ ಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ದೇವರಾಜ ಎನ್ನುವವರಿಂದ ನಾಗೋಡಿ ವಿಶ್ವನಾಥ್ ಮೇಲೆ ಹಲ್ಲೆ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯ ನಾಗೋಡಿ ವಿಶ್ವನಾಥ್ ಗೆ ಇದೀಗ ಗಂಭೀರವಾದ ಗಾಯಗಳಾಗಿದ್ದು, ಗಾಯಾಳುವಿಗೆ ಹೊಸನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ : ಇತ್ತೀಚಿಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಯುವಕನೊಬ್ಬ ಗೆಳೆಯನ ಮದುವೆ ವೇಳೆ ಡಿಜೆ ಹಾಡಿಗೆ ಕುಣಿಯುತ್ತ ಕುಸಿದುಬಿದು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪಗಡಲಬಂಡಿ ಗ್ರಾಮದಲ್ಲಿ ನಡೆದಿದೆ. ಹೌದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪಗಡಲಬಂಡಿ ಗ್ರಾಮದಲ್ಲಿ ಆದರ್ಶ್ (25) ಎನ್ನುವ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಪಗಡಲಬಂಡಿ ಗ್ರಾಮದ ಆದರ್ಶ ಗೆಳೆಯನ ಮದುವೆ ಮೆರವಣಿಗೆ ವೇಳೆ ಡಿಜಿ ಸೌಂಡ್ ಗೆ ಕುಣಿದಿದ್ದಾನೆ. ಈ ವೇಳೆ ಡ್ಯಾನ್ಸ್ ಕುಣಿಯುತ್ತಲೇ ಕುಸಿದು ಬಿದ್ದಿದ್ದಾನೆ. ಆದರ್ಶನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು ಪರಶುರಾಂಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಆದರ್ಶ ಸಾವನ್ನಪ್ಪಿದ್ದಾನೆ. ನವೆಂಬರ್ 14 ರಂದು ನಡೆದ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕೆಲ ದಿನಗಳ ಹಿಂದೆ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದಂತ ಶಾಲಾ ಮಕ್ಕಳು ಸಮುದ್ರಪಾಲಾಗಿ ಹೋಗಿದ್ದರು. ನೀವು ಸಮುದ್ರ ದಂಡೆಗೆ ಪ್ರವಾಸಕ್ಕೆ ತೆರಳುತ್ತಿದ್ದರೇ ಅದಕ್ಕೂ ಮುನ್ನಾ ಈ ಕೆಳಗಿನ ವಿಷಯಗಳು ತಿಳಿದಿರಲಿ. ಅದೇನು ಅಂತ ಮುಂದೆ ಓದಿ. ಈ ಮಾಹಿತಿಯನ್ನು ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಅವರು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಶೇರ್ ಮಾಡಿದ್ದಾರೆ. ಅದರಲ್ಲಿ ಶಿಕ್ಷಣ ಇಲಾಖೆಯ ಒಂದು ಭಾಗವಾದ ಡಯಟ್ ನ ಮಂಗಳೂರು ಜಿಲ್ಲೆಯ ನಿವೃತ್ತ ಪ್ರವಾಚಕರಾದ (Reader) ದಿವಾಕರ್ ಶೆಟ್ಟಿ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ಮಹತ್ವದ ಮಾಹಿತಿ ಇದು ಎಂದು ಹೇಳಿದ್ದಾರೆ. ಕರ್ನಾಟಕದ ಶಿಕ್ಷಣ ಇಲಾಖೆ ಎಲ್ಲಾ ಶಾಲೆಗಳಿಗೆ ಮತ್ತು ಕಾಲೇಜುಗಳಿಗೆ ಈ ಮಾಹಿತಿಯನ್ನು ಕಳಿಸಿ ಎಲ್ಲರಿಗೂ ಈ ಕುರಿತು ತಿಳುವಳಿಕೆ ಕೊಡುವುದು ಅತ್ಯಗತ್ಯ. ನಾನು ಈ ಮಾಹಿತಿಯನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಿಕ್ಷಣ ಇಲಾಖೆಯ ಆಯುಕ್ತರ ಜೊತೆಯೂ ಹಂಚಿಕೊಂಡಿದ್ದೇನೆ ಎಂದಿದ್ದಾರೆ. ಸಮುದ್ರ ದಂಡೆಗೆ ಭೇಟಿ ನೀಡುವ ಎಲ್ಲರಿಗೂ ಈ…
ಆಂಧ್ರಪ್ರದೇಶ : ಸಾಮಾನ್ಯವಾಗಿ ಯಾರೇ ನಿದ್ದೆಗಣ್ಣಲ್ಲಿ ಇದ್ದರೂ ಕೂಡ ಗಂಟಲಿನಲ್ಲಿ ಹೋಗುವಂತ ಚಿಕ್ಕ ವಸ್ತುಗಳು ನುಂಗಬಹುದು. ಆದರೆ ಇಲ್ಲೊಬ್ಬ ವ್ಯಕ್ತಿ ನಿದ್ದೆ ಮಾಡುತ್ತಲೇ ಹಲ್ಲಿನ ಸೆಟ್ ಒಂದು ನುಂಗಿ ಶ್ವಾಸಕೋಶದಲ್ಲಿ ಸಿಲುಕಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಅಮರಾವತಿಯಲ್ಲಿ ನಡೆದಿದೆ. ಹೌದು ಅಮರಾವತಿಯ 52 ವರ್ಷದ ಈ ವ್ಯಕ್ತಿ ಕಳೆದ 7 ವರ್ಷಗಳಿಂದ ಹಲ್ಲುಸೆಟ್ ಬಳಸುತ್ತಿದ್ದರು. ಕಾಲಕ್ರಮೇಣ ಅದು ಸಡಿಲವಾಗಿದ್ದು, ಅವರು ನಿದ್ರಿಸುತ್ತಿದ್ದಾಗ ಶ್ವಾಸಕೋಶಗಳ ಒಳಗೆ ಹೋಗಿದೆ. ಇದರಿಂದಾಗಿ ಅವರಿಗೆ ಕೆಮ್ಮು ಶುರುವಾಗಿದ್ದು, ಚಿಕಿತ್ಸೆಗಾಗಿ ವಿಶಾಖಪಟ್ಟಣಂನ ಆಸ್ಪತ್ರೆಗೆ ಹೋಗಿದ್ದಾರೆ. ಈ ವೇಳೆ ಎಕ್ಸ್ರೇ ಹಾಗೂ ಸಿಟಿ ಸ್ಕ್ಯಾನ್ ನಡೆಸಿದ ವೈದ್ಯರು ಬ್ರಾಂಕೋಸ್ಕೋಪಿಯ ಮೂಲಕ ಹಲ್ಲು ಸೆಟ್ ಅನ್ನು ಹೊರತೆಗೆದಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಶುಕ್ರವಾರದಂದು ಹೈಕೋರ್ಟ್ ಕೊಲೆ ಆರೋಪಿಗಳಾದಂತಹ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಉಳಿದ ಎಲ್ಲಾ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತು. ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಕೊಲೆ ಆರೋಪಿ A1 ಪವಿತ್ರ ಗೌಡ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ತುಮಕೂರು ಹಾಗೂ ಕಲ್ಬುರ್ಗಿ ಕೇಂದ್ರ ಕಾರಾ ಗ್ರಹಗಳಲ್ಲಿರುವ ಇತರೆ ಆರೋಪಿಗಳು ಕೂಡ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲೆ ಬಿಜಿಎಸ್ ಆಸ್ಪತ್ರೆಯಿಂದ ಇಂದು ಮಧ್ಯಾಹ್ನದ ಬಳಿಕ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ ಒಂದುವರೆ ತಿಂಗಳಿನಿಂದ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಧ್ಯಂತರ ಜಾಮಿನು ಪಡೆದುಕೊಂಡು ನಟ ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದಾರೆ. ಫಿಜಿಯೋಥೆರಫಿ ಮಾಡಿಸಿ ಬೇಲ್…
ಶಿವಮೊಗ್ಗ : ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಸಾಕ್ಷಿಗೆ ಯುವಕನೊಬ್ಬ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇದೀಗ ಬೆದರಿಕೆ ಹಾಕಿದ ಯುವಕನ ವಿರುದ್ಧ ಕೇಸ್ ದಾಖಲಾಗಿದೆ. ಕೋರ್ಟಿಗೆ ತೆರಳಿ ಸಾಕ್ಷಿ ಹೇಳದಂತೆ ಸಾಕ್ಷಿದಾರನಿಗೆ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಪೊಲೀಸರು ಇದೀಗ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸಾಕ್ಷಿಯಾಗಿದ್ದ. ಡಿಸೆಂಬರ್ 12ರಂದು ಎನ್ಐಎ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ್ದ ಯುವಕ ಅನಂತರ ಸಾಕ್ಷಿ ಹೇಳದಂತೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಹಾಕಲಾಗಿತ್ತು. ಮರುದಿನ ಕೋರ್ಟ್ ಸೂಚನೆಯ ಮೇರೆಗೆ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಸೀಗೆಹಟ್ಟಿ ಬಳಿ ಎರಡು ವರ್ಷದ ಹಿಂದೆ ಹರ್ಷ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್ ಉದ್ಯೋಗಿಯೊಬ್ಬನನ್ನು NIA ಸಾಕ್ಷಿಯಾಗಿ ಪರಿಗಣಿಸಿತ್ತು.ಈಗ ಆತನಿಗೆ ಅಪರಿಚಿತನೊಬ್ಬ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಹಿಂದೂ ಹರ್ಷ ಹತ್ಯೆಯಾದ ದಿನ…