Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೇರಿಯಾ ದೇಶದ ಪ್ರಜೆಯನ್ನು ಬಂಧಿಸಲಾಗಿದೆ. ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿದ್ದ ಆರೋಪಿಯಿಂದ 30 ಗ್ರಾಂ ಕೊಕೇನ್ ಅನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಯನ್ನು ನೈಜಿರಿಯಾದ ಮೈಕೆಲ್ ಒಕಾಫರ್ ಓಡಿಕ್ಪೋ (44) ಎಂದು ತಿಳಿದುಬಂದಿದೆ. 2024ರ ಮಾರ್ಚ್ ತಿಂಗಳಲ್ಲಿ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿತ್ತು. ಅಂಬ್ಲಮೊಗರು ನಿವಾಸಿಗಳಾದ ಸದಕತ್ ಯು. ಹಾಗೂ ಮಹಮ್ಮದ್ ಅಶ್ಫಕ್ ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 34 ಗ್ರಾಂ ಕೊಕೇನ್ ಹಾಗೂ ಇತರ ಒಟ್ಟು 2,72,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ಗೋವಾದ ಡ್ರಗ್ ಪೆಡ್ಲರ್ ಮೈಕೆಲ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ಉತ್ತರ ಗೋವಾದ ಕಾಲನ್ಗೂಟ್ ಎಂಬಲ್ಲಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ಬಳಿಯಿದ್ದ 30 ಗ್ರಾಂ ಕೊಕೇನ್, ಸಾಗಾಟಕ್ಕೆ ಉಪಯೋಗಿಸಿದ ಕಾರು, ಎರಡು…
ಬೆಳಗಾವಿ : ಲಡಾಖ್ನಲ್ಲಿ ಭೂಕುಸಿತದಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಸೈನಿಕ ಮಹೇಶ್ ಮೃತಪಟ್ಟಿದ್ದಾರೆ. ಡಿಸೆಂಬರ್ 14 ರಂದು ಕರ್ತವ್ಯದಲ್ಲಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅವರ ಪಾರ್ಥಿವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮಕ್ಕೆ ತರಲಾಯಿತು. ಹೌದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಇರಣಟ್ಟಿ ಗ್ರಾಮದ ಸೈನಿಕ ಮಹೇಶ್ ಡಿಸೆಂಬರ್ 14ರಂದು ಲಡಾಖ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗುಡ್ಡ ಕುಸಿದು ಮೃತಪಟ್ಟಿದ್ದಾರೆ. ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಹೊರತೆಗೆದಿದ್ದರು.ಮಹೇಶ್ ಅವರ ಪಾರ್ಥಿವ ಶರೀರ ಮಂಗಳವಾರ ನಿನ್ನೆ ಸಂಜೆ ಇರಣಟ್ಟಿ ಗ್ರಾಮಕ್ಕೆ ಆಗಮಿಸಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಗೌರವ ಸಮರ್ಪಿಸಿದರು. ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ಮಹೇಶ್ ಅವರ ಅಂತ್ಯಸಂಸ್ಕಾರ ನೆರವೇರಿತು. ಎರಡು ತಿಂಗಳ ಹಿಂದೆಯಷ್ಟೇ ಸೈನಿಕ ಮಹೇಶ್ ಅವರ ನಿಶ್ಚಿತಾರ್ಥ ಕೂಡ ಆಗಿದ್ದು, ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಇದೀಗ ಮನೆಯ ಮಗನ ಈ ಒಂದು ಸಾವಿನಿಂದಾಗಿ ಎರಡು ಕುಟುಂಬಗಳ ಮನೆಯಲ್ಲಿ…
ಬೆಂಗಳೂರು : ಬಿಜಿಎಸ್ ಆಸ್ಪತ್ರೆಯಿಂದ ಇಂದು ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದುವರೆ ತಿಂಗಳಿನಿಂದ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಈಗಾಗಲೇ ಆಸ್ಪತ್ರೆ ಆವರಣದಲ್ಲಿ ಪತ್ನಿ ವಿಜಯಲಕ್ಷ್ಮಿ ಕಾರು ಬಂದಿದ್ದು ದರ್ಶನ್ ಬರುವಿಕೆಗೆ ಕಾಯುತ್ತಿದ್ದಾರೆ. ಈಗಾಗಲೇ ಆರೋಪಿ ದರ್ಶನ್ ಡಿಸ್ಚಾರ್ಜ್ ಪ್ರಕ್ರಿಯೆ ಆರಂಭವಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿ ದರ್ಶನ್ ಹೊಸಕೆರೆ ಹಳ್ಳಿಯ ಫ್ಲ್ಯಾಟ್ ಗೆ ತೆರಳಲಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಫ್ಲಾಟ್ ಗೆ ದರ್ಶನವರು ತೆರಳಲಿದ್ದಾರೆ.ಮಧ್ಯಂತರ ಜಾಮಿನು ಪಡೆದುಕೊಂಡು ನಟ ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದಾರೆ. ಫಿಜಿಯೋಥೆರಫಿ ಮಾಡಿಸಿ ಬೇಲ್ ಸಿಗುತ್ತಿದ್ದಂತೆ ಇದೀಗ ದರ್ಶನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. .ಯಾವಾಗ ಬೇಕಾದರೂ ಸರ್ಜರಿ ಮಾಡಿಸಿಕೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಇಂದು ಪತ್ನಿ ವಿಜಯಲಕ್ಷ್ಮಿ ಫ್ಲಾಟ್ ಗೆ ತೆರಳಲಿದ್ದಾರೆ. ವೈದ್ಯರ ಸಲಹೆ ಮೇರೆಗೆ ದರ್ಶನ ಡಿಸ್ಚಾರ್ಜ್ ಮಾಡಲಾಗಿದೆ.
ನವದೆಹಲಿ : ವಕ್ಫ್ ಆಸ್ತಿ ಕಬಳಿಕೆಗೆ ಮೌನವಾಗಿರಲು ಬಿವೈ ವಿಜಯೇಂದ್ರ ಅನ್ವರ್ ಮಣಿಪ್ಪಾಡಿಗೆ 150 ಕೋಟಿ ರೂಪಾಯಿ ಆಮಿಷ ಒಡ್ಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಗಂಭೀರವಾದ ಆರೋಪ ಮಾಡಿದ್ದಾರೆ. ಈ ಒಂದು ಆರೋಪಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿಯ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅನ್ವರ್ ಮಣಿಪಾಡಿಗೆ 150 ಕೋಟಿ ರೂಪಾಯಿ ಆಮಿಷ ಒಡ್ಡಿದು, ಧರ್ಮಸಿಂಗ್ ಪುತ್ರ, ಬಿವೈ ವಿಜಯೇಂದ್ರ ಅಲ್ಲ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸಿಂಗ್ ಪುತ್ರ ಅನ್ವರ್ ಮಣಿಪಾಡಿಗೆ ಆಮಿಷ ಒಡ್ಡಿದ್ದರು. 150 ಕೋಟಿ ಆಮಿಷ ಒಡ್ಡಿದ್ದು ಧರ್ಮಸಿಂಗ್ ಪುತ್ರ. ಅನ್ವರ್ ಮಾಡಿಪಾಡಿಗೆ ಆಮಿಷಡ್ಡಿ ಕಾಂಗ್ರೆಸ್ ಮುಖಂಡರಿಗೆ ಬುದ್ಧಿ ಭ್ರಮಣೆ ಆಗಿದೆ. ವಕ್ಫ್ ವಕ್ಫ್ ವರದಿಯಲ್ಲಿ ತಮ್ಮ ಹೆಸರು ಕೈಬಿಡಬೇಕೆಂದು ಧರ್ಮಸಿಂಗ್ ಪುತ್ರ ಅನ್ವರ್ ಮಣಿಪ್ಪಾಡಿಗೆ ಆಮಿಷ ಒಡ್ಡಿದ್ದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೆ.
ಬೆಳಗಾವಿ : ನಮ್ಮದೇ ಸರ್ಕಾರ ಇದ್ದರೂ ನಮಗೆ ಅನುದಾನ ಸಿಗುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ಬಗ್ಗೆ ಘೋಷಣೆ ಮಾಡಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು,ಅಪೆಂಡಿಕ್ಸ್ ಇ ನಲ್ಲಿ 4,000 ಕೋಟಿ ರೂ., ಗ್ರಾಮೀಣ ರಸ್ತೆಗೆ 2,000 ಕೋಟಿ ರೂ. ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ರೂ. ವಿತರಣೆ ಮಾಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. ಅನುದಾನ ಕೊರತೆ ನೀಗಿಸಲು ಒಟ್ಟು 6 ಸಾವಿರ ಕೋಟಿ ರೂ. ಬಿಡುಗಡೆ ಸಂಬಂಧ ಘೋಷಣೆ ಮಾಡುತ್ತೇನೆ. ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ ರೂ., ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ 2 ಸಾವಿರ ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗುವುದು.ಗ್ರಾಮೀಣ…
ಮಂಗಳೂರು : ಸಾಲ ಮರುಪಾವತಿಗೆ ಬ್ಯಾಂಕ್ ಅಧ್ಯಕ್ಷನಿಂದ ಕಿರುಕುಳ ಆರೋಪ ಹಿನ್ನೆಲೆಯಲ್ಲಿ, ಕಿರುಕುಳ ಬಗ್ಗೆ ವಾಟ್ಸಪ್ ಸ್ಟೇಟಸ್ ವಿಡಿಯೋ ಹಾಕಿ ದಿವ್ಯಾಂಗ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಪೆರ್ಮಾಯಿ ಎಂಬಲ್ಲಿ ಈ ಒಂದು ಘಟನೆ ನಡೆದಿದೆ. ಪೆರ್ಮಾಯಿ ನಿವಾಸಿ ಮನೋಹರ್ ಪಿರೇರ (46) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದ್ದು. ಕ್ಯಾತೋಲಿಕ್ ಸಹಕಾರಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಆರೋಪ ಮಾಡಿದ್ದಾರೆ. ಎಂಸಿಸಿ ಬ್ಯಾಂಕ್ ನಿಂದ 15 ಲಕ್ಷ ರೂಪಾಯಿ ಮನೋಹರವರು ಸಾಲ ಪಡೆದಿದ್ದರು. ಕೋವಿಡ್ ವೇಳೆ ನಷ್ಟಕ್ಕೆ ಈಡಾಗಿ ಬ್ಯಾಂಕ್ ಸಾಲ ಕಟ್ಟಲು ಅವರಿಗೆ ಆಗಿರಲಿಲ್ಲ. ಹಾಗಾಗಿ ಮನೆಯನ್ನು ಜಪ್ತಿ ಮಾಡಲು ಬ್ಯಾಂಕಿನ ಆಡಳಿತ ಮಂಡಳಿ ಮುಂದಾಗಿದೆ. ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ವಿರುದ್ಧ ಮನೋಹರ್ ಕಿರುಕುಳದ ಆರೋಪ ಮಾಡಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿರುವ ಮನೋಹರ್ ಪಿರೇರಾ ನನ್ನ ಸಾವಿಗೆ ಬ್ಯಾಂಕ್ ಅಧ್ಯಕ್ಷ ಅನಿಲ್ ಕಾರಣ ಎಂದು ಹೇಳಿಕೆ ನೀಡಿದ್ದಾರೆ.ಅನಿಲ್ ಲೋಬೊ ಕಿರುಕುಳ ನೀಡಿದ್ದಾನೆ ಎಂದು ಮನೋಹರ್…
ಹುಬ್ಬಳ್ಳಿ : ಮುಂದಿನ ವರ್ಷ 2025 ಫೆಬ್ರವರಿ 4 ರಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಸ್ಥೆ ಉದ್ಘಾಟನೆ ಆಗಲಿದ್ದು, ಸುಮಾರು 1008 ಸ್ವಾಮೀಜಿಗಳಿಂದ ಪಾದಪೂಜೆ ಮಾಡಿ ಉದ್ಘಾಟನೆ ಮಾಡುತ್ತೇವೆ ಎಂದು ಬಿಜೆಪಿಯ ಮಾಜಿ ಸಚಿವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ತಿಳಿಸಿದರು. ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 18 ಸಾಧುಸಂತರ ಪಾದ ಪೂಜೆ ಮಾಡಿ ಉದ್ಘಾಟನೆ ಮಾಡುತ್ತೇವೆ. ನಮ್ಮ ಸರ್ಕಾರ ಇದ್ದಾಗ ಎರಡು ಬಾರಿ ಮಠಕ್ಕೆ ಹಣ ಬಿಡುಗಡೆ ಮಾಡಿದ್ದೇವೆ ಸದಾನಂದ ಗೌಡ ಹಾಗೂ ಬಸವರಾಜ ಬೊಮ್ಮಾಯಿ 2 ಬಾರಿ ಹಣ ಬಿಡುಗಡೆ ಮಾಡಿದರು ಕರ್ನಾಟಕ ರಾಜ್ಯದಲ್ಲಿ ಸಾವಿರಾರು ಸಣ್ಣ ಮಟ್ಟಗಳಿವೆ ಕ್ರಾಂತಿವೀರ ಬ್ರಿಗೇಡ್ನಿಂದ ಸಣ್ಣ ಮಟ್ಟಗಳಿಗೆ ನ್ಯಾಯ ಕೊಡಿಸುವ ಕೆಲಸವಾಗುತ್ತದೆ ನಾನು ಮೀಸಲಾತಿ ಪರವು ಅಲ್ಲ ವಿರೋಧವು ಅಲ್ಲ. ಹಿಂದೂ ಧರ್ಮದ ರಕ್ಷಣೆಗೆ ನಮ್ಮ ಹೋರಾಟ. ಎಂದು ಹುಬ್ಬಳ್ಳಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹೇಳಿಕೆ ನೀಡಿದರು. ಇದೇ…
ತುಮಕೂರು : ಕೃಷಿಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟಿಸಿ ಸದ್ಯ ಜೈಲು ಪಾಲಾಗಿರುವ ಡ್ರೋನ್ ಪ್ರತಾಪ್ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆm ಈ ಒಂದು ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿಗಳ ಕಚೇರಿ ಸಂಪೂರ್ಣ ವರದಿ ನೀಡಲು ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. ಹೌದು ಸೋಡಿಯಂ ಮೆಟಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧುಗಿರಿ ಸಿಪಿಐ ಕಚೇರಿಗೆ ಇದೀಗ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಆಗಮಿಸಿದ್ದಾರೆ. ಸಂಪೂರ್ಣ ವರದಿಗೆ ಸಿಎಂ ಕಚೇರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈಗ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪೊಲೀಸರನ್ನು ಭೇಟಿಯಾಗಿದ್ದರೆ. ಸಿಎಂ ಕಚೇರಿಯಿಂದ ಸಂಪೂರ್ಣ ವರದಿ ನೀಡಲು ಸೂಚನೆ ನೀಡಿದ್ದರ ಹಿನ್ನೆಲೆಯಲ್ಲಿ ಮಧುಗಿರಿ ಸಿಪಿಐ ಅವರನ್ನು ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಭೇಟಿಯಾದರು. ಹೆಚ್ಚಿನ ಮಾಹಿತಿ ಸಂಗ್ರಹಿಸಲು ಮಂಡಳಿ ಅಧಿಕಾರಿಗಳು ಆಗಮಿಸಿದ್ದಾರೆ. ಸಂಪೂರ್ಣ ವರದಿ ನೀಡಲು ಸಿಎಂ ಕಚೇರಿ ಸೂಚನೆ ನೀಡಿದ್ದರಿಂದ, ಡ್ರೋನ್ ಪ್ರತಾಪ್ ಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗಲಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಶುಕ್ರವಾರದಂದು ಹೈಕೋರ್ಟ್ ಕೊಲೆ ಆರೋಪಿಗಳಾದಂತಹ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಉಳಿದ ಎಲ್ಲಾ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಕೊಲೆ ಆರೋಪಿ A1 ಪವಿತ್ರ ಗೌಡ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ತುಮಕೂರು ಹಾಗೂ ಕಲ್ಬುರ್ಗಿ ಕೇಂದ್ರ ಕಾರಾ ಗೃಹಗಳಲ್ಲಿ ಇತರೆ ಆರೋಪಿಗಳು ಕೂಡ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲೆ ಬಿಜಿಎಸ್ ಆಸ್ಪತ್ರೆಯಿಂದ ಇಂದು ಮಧ್ಯಾಹ್ನದ ಬಳಿಕ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ ಒಂದುವರೆ ತಿಂಗಳಿನಿಂದ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಧ್ಯಂತರ ಜಾಮಿನು ಪಡೆದುಕೊಂಡು ನಟ ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದಾರೆ. ಫಿಜಿಯೋಥೆರಫಿ ಮಾಡಿಸಿ ಬೇಲ್…
ಮೈಸೂರು : ಮನೆಯ ಒಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಈ ಒಂದು ಕಾರ್ಯಾಚರಣೆಯಲ್ಲಿ ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದು ಅಲ್ಲದೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ, ಮೈಸೂರಿನ ಬಸವ ಗುಡಿಯ ಬಳಿ ನಡೆದಿದೆ. ಹೌದು ಮೈಸೂರಿನ ಹೆಬ್ಬಾಳು ಪೊಲೀಸ್ ಠಾಣೆಯ ಬಳಿ ಬಸವನಗುಡಿ ವೃತ್ತದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು, ಈ ಕುರಿತಂತೆ ಒಡನಾಡಿ ಸಂಸ್ಥೆ ಮುಖ್ಯಸ್ಥ ಸ್ಟ್ಯಾನ್ಲಿ ಪರುಶು ಪೊಲೀಸರಿಗೆ ಮಾಹಿತಿ ನೀಡಿದರು. ಕೊಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಎಸಿಪಿ ಗಜೇಂದ್ರ ಪ್ರಸಾದ ನೇತೃತ್ವದಲ್ಲಿ ಮನೆಯ ಮೇಲೆ ದಾಳಿ ಮಾಡಿದರು. ಈ ವೇಳೆ ಹಾಸನ, ಮೈಸೂರು ಹಾಗೂ ಕೆ ಆರ್ ನಗರದ ಮೂಲದ ಐವರು ಮಹಿಳೆಯರನ್ನು ರಕ್ಷಣೆ ಮಾಡಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗೂ ಓರ್ವ ಗ್ರಾಹಕರನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.