Author: kannadanewsnow05

ಮಂಡ್ಯ : ಮಂಡ್ಯದಲ್ಲಿ ನಿಶ್ಚಿತಾರ್ಥವಾಗಿ ಮದುವೆ ರದ್ದಾಗಿದ್ದಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆ‌ರ್. ಪೇಟೆ ತಾಲೂಕಿನ ಕಿಕ್ಕೇರಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ವಳಗೆರೆಮೆಣಸ ಗ್ರಾಮದ ಕಾವ್ಯಾ (26) ಎಂದು ತಿಳಿದುಬಂದಿದೆ. ಅವರು ಕಿಕ್ಕೇರಿಯ ರೈತ ಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. 15 ದಿನದ ಹಿಂದೆ ಹಾಸನದ ಹುಡುಗನ ಜೊತೆ ನಿಶ್ಚಿತಾರ್ಥ ಆಗಿತ್ತು. ಹುಡುಗ ಪದವೀಧರ, ಉದ್ಯೋಗದಲ್ಲಿದ್ದಾನೆ ಎಂದು ಆತನ ಮನೆಯವರು ಸುಳ್ಳು ಹೇಳಿ ಮದುವೆ ಮಾಡಿಸಲು ಮುಂದಾಗಿದ್ದರು. ಆದರೆ ವಿಷಯ ಸುಳ್ಳೆಂದು ತಿಳಿದ ಹುಡುಗಿಯ ಮನೆಯವರು ಮದುವೆ ರದ್ದು ಮಾಡಿದ್ದರು. ಇದರಿಂದ ಮನನೊಂದ ಕಾವ್ಯಾ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಳಗಾವಿ : ಕಳೆದ 2 ದಿನಗಳ ಹಿಂದೆ ವಿಜಯಪುರದಲ್ಲಿ ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ನಗರದ ಗಾಂಧಿ ಚೌಕ್ ಬಳಿ ನಡೆದಿತ್ತು. ಶುಭಂ (22) ಎಂಬ ಯುವಕ ಧ್ವಜದಿಂದ ವಿದ್ಯುತ್ ತಂತಿ ಮೇಲೇತ್ತುವಾಗ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ್ದಾನೆ. ಈ ಘಟನೆ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ವೇಳೆ ಹೊಂಡದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಹೌದು ಬೆಳಗಾವಿ ನಗರದ ಜಕ್ಕೇರಿ ಹೊಂಡದಲ್ಲಿ ಗಣೇಶ ವಿಸರ್ಜನೆ ವೇಳೆ ಹೊಂಡದಲ್ಲಿ ಮುಳುಗುತ್ತಿದ್ದ ಬೆಳಗಾವಿಯ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ್​​ನನ್ನು ರಕ್ಷಣೆ ಮಾಡಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೂರ್ತಿ ವಿಸರ್ಜನೆ ಮಾಡಿ ಹಿಂದಿರುಗುವಾಗ ಕೈ ಸೋತು ಶುಭಂ ಕುಪ್ಪಟಗೇರಿ ಕೊಚ್ಚಿಕೊಂಡು ಹೋಗಿದ್ದಾನೆ. ಶುಭಂ, ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಯಡೋಗ ನಿವಾಸಿ. ಯಡೋಗ-ಚಾಪಗಾವಿ ನಡುವಿನ ಮಲಪ್ರಭಾ ನದಿ ಸೇತುವೆ ಬಳಿ ಘಟನೆ ನಡೆದಿದೆ. ಸದ್ಯ ಎಸ್​ಡಿಆರ್​ಎಫ್ ಸಿಬ್ಬಂದಿಯಿಂದ ಶುಭಂ…

Read More

ರಾಯಚೂರು : ಕಳೆದ ವರ್ಷ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು ಇಡಿ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿತ್ತು. ಈ ಬಾರಿ ನಾಗಮಂಗಲದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಆದರೆ ರಾಯಚೂರಲ್ಲಿ ನಿನ್ನೆ ಕಿಡಿಗೇಡಿಗಳು ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಹೌದು ರಾಯಚೂರಿನಲ್ಲಿ ಗಣೇಶ ಮೂರ್ತಿಯ ಅದ್ಧೂರಿ ಮೆರವಣಿಗೆ ವೇಳೆ ಇಬ್ಬರು ದುಷ್ಕರ್ಮಿಗಳು ದುಷ್ಟತನ ಮೆರೆದಿದ್ದಾರೆ. ಗಂಗಾ ನಿವಾಸ ರಸ್ತೆಯಲ್ಲಿ ಪಾರ್ವತಿ ಸುತನ ಮೆರವಣಿಗೆ ವೇಳೆ, ಇಬ್ಬರು ಮನೆ ಮೇಲೆ ನಿಂತು ರಾಜಾರೋಷವಾಗಿ ಕಲ್ಲು ತೂರಿದ್ದಾರೆ. ಈ ವೇಳೆ ವಿನಯ್, ಗಣೇಶ್ ಎಂಬುವರು ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಕೆರಳಿದ ಸಾರ್ವಜನಿಕರು ಪುಂಡರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಳೆ ವೈಷಮ್ಯ ಮನಸ್ಸಿನಲ್ಲಿ ಇಟ್ಕೊಂಡು, ತಮ್ಮ ಏರಿಯಾದಲ್ಲಿ ಮೂರ್ತಿಯ ಶೋಭಯಾತ್ರೆ ಮಾಡಬಾರದು ಅಂತಾ ಈ ಕೃತ್ಯ ಎಸಗಿದ್ದಾಗಿ ಆರೋಪಿಗಳಾದ ಪ್ರಶಾಂತ್ ಹಾಗೂ ಪ್ರವೀಣ್,…

Read More

ವಿಜಯಪುರ : ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಭೂಸ್ವಾಧಿನ ಪಡಿಸಿಕೊಳ್ಳಲು ಡಿಸಿಎಂ ಡಿ.ಕೆ.ಶಿವಕುಮಾರ್ ನಡೆಸಿದ ಸಭೆ ಬಹುತೇಶ್ ಫಲಪ್ರದವಾಗಿದ್ದು, ಮುಂದಿನ ವಾರ ದರ ನಿಗದಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆಲಮಟ್ಟಿ ಅಣೆಕಟ್ಟೆಯಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಭೂ ಪರಿಹಾರ ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಬಾಧಿತ ರೈತರು, ಹೋರಾಟಗಾರರ ಜೊತೆ ಬೆಳಗಾವಿಯಲ್ಲಿ ಸಭೆ ನಡೆಸಿದ್ದೇವೆ. ಅವರೆಲ್ಲರೂ ಒಂದೇ ಬಾರಿ ಕನ್ಸೆಂಟ್ ಅವಾರ್ಡ್ ಮಾಡಿ ಎಂದು ತಿಳಿಸಿದ್ದಾರೆ. ಸರ್ಕಾರವೂ ಇದಕ್ಕೆ ಒಪ್ಪಿದೆ ಎಂದರು. 3 ದಿನಗಳ ಹಿಂದೆ ಡಿಸಿಎಂ ಡಿ.ಕೆ. ಈ ವಿಚಾರ ಒಂದು ಹಂತಕ್ಕೆ ಬಂದಿದೆ. ಮುಂದಿನ ವಾರದಲ್ಲಿ ನಾನು, ಡಿಕೆಶಿ, ಸಚಿವರು, ಶಾಸಕರು, ಸೇರಿ ಒಂದು ದರ ನಿಗದಿ ಮಾಡುತ್ತೇವೆ. ಖುಷ್ಕಿ ಜಮೀನು, ನೀರಾವರಿ ಜಮೀನು, ನಾಲಾ ಜಮೀನುಗಳಿಗೆ ಎಷ್ಟೆಷ್ಟು ಪರಿಹಾರ ಕೊಡಬೇಕು ಎಂದು ತೀರ್ಮಾನಿಸುತ್ತೇವೆ. ಇದನ್ನು ರೈತರು ಒಪ್ಪಿಕೊಳ್ಳಬೇಕು. ಯಾರೂ ಕೋರ್ಟ್‌ಗೆ ಹೋಗಬಾರದು.…

Read More

ಬೆಂಗಳೂರು : ಖಗೋಳದ ಅಪರೂಪದ ಮತ್ತು ಅಪೂರ್ವವಾದ ವಿದ್ಯಮಾನ ಖಗ್ರಾಸ ಚಂದ್ರ ಗ್ರಹಣ ಸೆ.7ರ ರಾತ್ರಿ ಜರುಗಲಿದ್ದು, ಚಂದಿರನು ರಕ್ತ ವರ್ಣ/ತಾಮ್ರ ವರ್ಣದಲ್ಲಿ ಕಾಣಿಸಲಿದ್ದಾನೆ. ಈ ಅಪರೂಪದ ಖಗೋಳ ವಿಸ್ಮಯ ಭಾರತದಲ್ಲಿ 5 ತಾಸು 27 ನಿಮಿಷಗಳ ಕಾಲ ಇರಲಿದೆ. ಅದರಲ್ಲಿ 1 ತಾಸು 22 ನಿಮಿಷಗಳ ಕಾಲ ಸಂಪೂರ್ಣ ಗ್ರಹಣ ಇರಲಿದೆ. ನಾಗರಿಕರು ತಮ್ಮ ಮನೆಗಳ ಮೇಲೆ ನಿಂತು ಬರಿಗಣ್ಣಿನಲ್ಲೇ ಕೆಂಪು ಶಶಿಯನ್ನು ವೀಕ್ಷಿಸಬಹುದಾಗಿದೆ ಎಂದು ಜವಾಹರಲಾಲ್‌ ನೆಹರುತಾರಾಲಯದ ನಿರ್ದೇಶಕ, ವಿಜ್ಞಾನಿ ಡಾ.ಬಿ.ಆರ್. ಗುರುಪ್ರಸಾದ್ ತಿಳಿಸಿದರು. ಸೆ.7ರಂದು ರಾತ್ರಿ 8.58ಕ್ಕೆ ಚಂದ್ರ ಗ್ರಹಣ ಆರಂಭವಾಗಿ, 9.57ರಿಂದ ಭಾಗಶಃ ಚಂದ್ರಗ್ರಹಣ ಶುರುವಾಗು ತ್ತದೆ. ಆದರೆ, ರಾತ್ರಿ 11ರಿಂದ ಸಂಪೂರ್ಣ ಗ್ರಹಣ ಆರಂಭವಾಗುತ್ತದೆ. ಈ ಅವಧಿಯಲ್ಲೇ ಕೆಂಪು ಚಂದಿರನನ್ನು ಕಾಣಬಹುದಾಗಿದೆ. ಗ್ರಹಣ ತಡರಾತ್ರಿ 1.26 ಮುಕ್ತಾಯಗೊಳ್ಳಲಿದೆ. ಭಾರತದ ಎಲ್ಲೆಡೆ ಈ ಗ್ರಹಣ ಕಾಣಿಸುತ್ತದೆ. ಜಗತ್ತಿನ ಜನಸಂಖ್ಯೆಯ ಶೇ.88ರಷ್ಟು ಜನ ಈ ಗ್ರಹಣವನ್ನು ವೀಕ್ಷಿಸಬಹುದುಎಂದು ಗುರುಪ್ರಸಾದ್ ಮಾಹಿತಿ ನೀಡಿದರು. ಸೂರ್ಯ, ಭೂಮಿ ಮತ್ತು ಚಂದ್ರ…

Read More

ವಿಜಯಪುರ : ಕಳೆದ ಎರಡು ದಿನಗಳ ಹಿಂದೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಆಧಾರದಲ್ಲಿ ಚಡಚಣ ಪಿಎಸ್‌ಐ ಪ್ರವೀಣ್‌ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಪಂ ಅಧ್ಯಕ್ಷ ಭೀಮನಗೌಡ ಬಿರಾದಾರ್‌ನ ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಮೇಲೆ ಚಡಚಣ ಪಿಎಸ್ಐ ಪ್ರವೀಣರನ್ನು ಸಸ್ಪೆಂಡ್‌ ಮಾಡಲಾಗಿದೆ. ಅಮಾನತು ಆದೇಶವನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ಜಾರಿ ಮಾಡಿದ್ದಾರೆ. ಕಳೆದ ಸೆ.3 ರ ಬೆಳಗ್ಗೆ ದೇವರನಿಂಬರಗಿ ಗ್ರಾಮದಲ್ಲಿ ಗುಂಡಿಕ್ಕಿ ಭೀಮನಗೌಡ ಹತ್ಯೆ ಮಾಡಲಾಗಿತ್ತು. ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಬೆಳಗ್ಗೆ ಕಟಿಂಗ್ ಶಾಪ್‌ಗೆ ಬಂದಿದ್ದ ಭೀಮನಗೌಡನನ್ನ ನಾಲ್ವರು ಆರೋಪಿಗಳು ಕೃತ್ಯ ಎಸಗಿದ್ದರು. ಕಣ್ಣಿಗೆ ಖಾರದ ಪುಡಿ ಎರಚಿ ಕಂಟ್ರೀ ಪಿಸ್ತೂಲ್‌ನಿಂದ ಗುಂಡುಗಳನ್ನು ಹಾರಿಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಘಟನೆ ನಡೆದ ದಿನವೇ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಜೀವುಲ್ಲಾ ಮಕಾನದಾರ್‌, ವಾಸೀಂ ಮನಿಯಾರ್‌,…

Read More

ಬೀದರ್ : ಖಾಸಗಿ ಶಾಲಾ ಬಸ್ ಹರಿದು ಯುಕೆಜಿ ಓದುತ್ತಿದ್ದ 6 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಎಕ್ಕಂಬಾ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕಾವೇರಿ ಆಕಾಶ್ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿ ಶಾಲೆಯ ಬಸ್‌ನಿಂದ ಕೆಳಗಡೆ ಇಳಿಯುವಾಗ ಅವಘಡ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯವೇ ಪುಟ್ಟ ವಿದ್ಯಾರ್ಥಿನಿ ದಾರುಣ ಸಾವಿಗೆ ಕಾರಣವಾಗಿದೆ. ಸದ್ಯ ನಿರ್ಲಕ್ಷ್ಯ ಮಾಡಿದ ಚಾಲಕನ ವಿರುದ್ಧ ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣದಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎಂಬ ಆರೋಪಕ್ಕೆ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಇದೀಗ ಶಾಸಕ ಜನಾರ್ಧನ್ ರೆಡ್ಡಿ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೈಲ್ಡಿಶ್ ಗಳಿಗೆ ಉತ್ತರ ಕೊಡಬೇಕಾ ಅಂತ ಇಷ್ಟು ದಿನ ಸುಮ್ಮನಿದ್ದೆ . ಆದರೆ ಈಗ ಪ್ರತಿದಿನ ಒಂದು ಸ್ಟೋರಿ ಬರುತ್ತಿದೆ ಇದು ಸರಿಯಾದ ಸಮಯವೆಂದು ಮಾನನಷ್ಟ ಕೇಸ್ ದಾಖಳಿಸಿದ್ದೇನೆ. ನಾನು 10 ವರ್ಷಗಳ ಕಾಲ ಕರ್ನಾಟಕದಲ್ಲಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಆರೋಪ ಮಾಡಿದ ವ್ಯಕ್ತಿ ಯಾರು ಗೊತ್ತಾ? ಕರ್ನಾಟಕದ ಸಂಪತ್ತು ಲೂಟಿ ಹೊಡೆದು 7 ವರ್ಷ ಜೈಲಿನಲ್ಲಿ ಇದ್ದವರು ಎಂದು ಕಿಡಿ ಕಾರಿದರು. ದೇಶದಲ್ಲಿ ರಾಜ್ಯದ ಮರ್ಯಾದೆ ಹರಾಜು ಹಾಕಿದವರು. ನನಗೆ ದೆಹಲಿಯಲ್ಲಿ ಮನೆಯಲ್ಲಿ ಇಲ್ಲ ದೆಹಲಿಗೆ ತಲೆ ಬುರುಡೆ ತೆಗೆದುಕೊಂಡು ಹೋಗಿದ್ದೇನೆ ಅಂತಾರೆ. ತಲೆಬುರುಡೆಯಲ್ಲಿ ಸಿಗುತ್ತೆ ಅಂತಾನೆ ಗೊತ್ತಿಲ್ಲ ಬಹುಶಃ ಅದು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ…

Read More

ಬೆಂಗಳೂರು : ತನಿಖಾ ಸಂಸ್ಥೆಗಳು ತನಿಖೆ ನಡೆಸುವುದರ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕ್ರಿಮಿನಲ್​​​​​​​​​​ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ, ಹೊಸದಾಗಿ ತನಿಖೆ ಮಾಡುವುದು ಅಥವಾ ಬೇರೊಂದು ತನಿಖಾ ಸಂಸ್ಥೆಗೆ ವರ್ಗಾವಣೆ ಮಾಡುವ ಅಧಿಕಾರ ಸಾಂವಿಧಾನಿಕವಾಗಿ ರಚನೆಯಾಗಿರುವ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್​ಗೆ ಮಾತ್ರ ಇದೆ ಎಂದು ಹೈಕೋರ್ಟ್​ ಸ್ಪಷ್ಟಪಡಿಸಿದೆ. CRPC ಸೆಕ್ಷನ್​ 156(3) ಅಡಿಯಲ್ಲಿ ಮರು/ಮುಂದಿನ ತನಿಖೆಗಾಗಿ ಬೆಂಗಳೂರು 31ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ, ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು. ಅಲ್ಲದೆ, ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿರುವ ಆದೇಶ ಬಿಎನ್ಎಸ್ಎಸ್​​ ಅನ್ನು ಅನುಸರಿಸಬೇಕೇ ಅಥವಾ ಸಿಆರ್​ಪಿಸಿ ಸೆಕ್ಷನ್​ನ್ನು​ ಅನುಸರಿಸಬೇಕೇ ಎಂಬ ಬಗ್ಗೆ ಅಸ್ಪಷ್ಟವಾಗಿದೆ. ಪ್ರಕರಣದ ಮರು ತನಿಖೆ, ಹೊಸ ತನಿಖೆ ಅಥವಾ ತನಿಖೆಯನ್ನು ಯಾವುದೇ ಇತರ ಸಂಸ್ಥೆಗೆ ವರ್ಗಾಯಿಸುವ ಅಧಿಕಾರ ಸಾಂವಿಧಾನಿಕ ನ್ಯಾಯಾಲಯಗಳ ವಿಶೇಷ ಹಕ್ಕು ಆಗಿದೆ. ಹೀಗಾಗಿ, ಈ ಆದೇಶದಲ್ಲಿ ಮರು ಅಥವಾ…

Read More

ಬೆಂಗಳೂರು : ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ಬಲಿಯಾಗುತ್ತಲೇ ಇರುತ್ತಾರೆ. ಇದಕ್ಕೆ ಪ್ರಮುಖ ಕಾರಣ ಡಕೋಟಾ ಬಸ್ ಗಳು. ಇದರಿಂದ ಅದೆಷ್ಟೋ ಜೀವಗಳು ಬಲಿಯಾಗಿವೆ.ಕಳೆದ ಒಂದು ವರ್ಷದಲ್ಲಿ ಬಿಎಂಟಿಸಿ ಬಸ್ ಅಪಘಾತಗಳಲ್ಲಿ 44 ಜನ ಪ್ರಾಣ ಕಳೆದುಕೊಂಡಿದ್ದರೆ, ಕಳೆದ ಒಂದು ತಿಂಗಳಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಕೇಂದ್ರ ಸರ್ಕಾರ ಬಿಎಂಟಿಸಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, 4500 ಹೊಸ ಬಸ್​​ಗಳನ್ನು ಬಿಎಂಟಿಸಿಗೆ ನೀಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ವರ್ಷದ ಕೊನೆ ಅಥವಾ ಮುಂದಿನ ವರ್ಷ ಆರಂಭದಿಂದ ಹಂತ ಹಂತವಾಗಿ ಹೊಸ ಬಸ್​​ಗಳು ಬಿಎಂಟಿಸಿ ಸೇರಲಿವೆ. ಈ 4500 ಹೊಸ ಬಸ್​ಗಳು ಬರುತ್ತಿದ್ದಂತೆಯೇ ಬಿಎಂಟಿಸಿಯ ಹಳೆಯ ಬಸ್​ಗಳು ಗುಜರಿ ಸೇರಲಿವೆ. 4100 ಸಾಮಾನ್ಯ ಎಲೆಕ್ಟ್ರಿಕ್ ಬಸ್, 400 ಎಸಿ ಎಲೆಕ್ಟ್ರಿಕ್ ಬಸ್ ಬರಲಿದ್ದು ಈಗಾಗಲೇ ಬಿಎಂಟಿಸಿ ನಿಗಮದ 15 ರಿಂದ 20 ಡಿಪೋ ಗಳಲ್ಲಿ ಚಾರ್ಜಿಂಗ್ ಸ್ಟೇಷನ್​ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಬಿಎಂಟಿಸಿಯಲ್ಲಿ ಸದ್ಯ 1200 ಎಲೆಕ್ಟ್ರಿಕ್ ಬಸ್​ಗಳಿವೆ. 4500…

Read More