Author: kannadanewsnow05

ಬೆಂಗಳೂರು : ನೀತಿ ಆಯೋಗದ ಸಿಇಒ ಬಿ ವಿ ಆರ್‌ ಸುಬ್ರಮಣ್ಯಂ ಲೇಖನ ಉಲ್ಲೇಖಿಸಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಯ್ದಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿರುವ ಭಾರತದ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವಂತಹ ಕೇಂದ್ರದ ನರೇಂದ್ರಮೋದಿ ಸರ್ಕಾರದ ಗೋಪ್ಯ ಅಜೆಂಡಾವನ್ನು ನೀತಿ ಆಯೋಗದ ಸಿಇಒ ಬಿ ವಿ ಆರ್‌ ಸುಬ್ರಮಣ್ಯಂ ಅವರು ಹೊರಗೆಡವಿದ್ದಾರೆ. ‘’ಅಲ್‌-ಜಝೀರಾ’’ ದಲ್ಲಿ ಪ್ರಕಟವಾಗಿರುವ ಲೇಖನ ನಾನು ಕಳೆದ ಹತ್ತು ವರ್ಷಗಳಿಂದ ಹೇಳುತ್ತಾ ಬಂದಿರುವುದನ್ನು ದೃಡೀಕರಿಸಿದೆ. ರಾಜ್ಯಗಳಿಗೆ ಹಂಚಿಕೆಯಾದ ಹಣವನ್ನು ಗಮನಾರ್ಹವಾಗಿ ಕಡಿತಗೊಳಿಸುವ ಏಕೈಕ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಹಣಕಾಸು ಆಯೋಗದೊಂದಿಗೆ ರಹಸ್ಯ ಮಾತುಕತೆಗಳಲ್ಲಿ 2014ರಿಂದ ತೊಡಗಿಸಿಕೊಂಡಿದ್ದರು ಎನ್ನುವುದು ಕಳವಳಕಾರಿ ಬೆಳವಣಿಗೆ. ರಾಜ್ಯಗಳ ತೆರಿಗೆ ಪಾಲಿನ ಹಣವನ್ನು ಪ್ರಸ್ತಾವಿತ 42% ನಿಂದ 32%ಗೆ ಇಳಿಸಲು ಬಿಜೆಪಿ ಸರ್ಕಾರವು ತನ್ನ ಹಿಂದಿನ ಆಡಳಿತಾವಧಿಯಲ್ಲಿ ನಡೆಸಿದ್ದ ಸಂಚು ಕೂಡಾ…

Read More

ಹುಬ್ಬಳ್ಳಿ : ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಎಂದು ಯತಿಂದ್ರ ಹೇಳಿ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ಸಚಿನ ಪಾರ್ಟಿ ನಾವು ಶಿಸ್ತನ್ನು ಪಾಲಿನ ಮಾಡುತ್ತೇವೆ ಸದ್ಯ ಸಿಎಂ ಬಲಾವಣೆ ಯಾವುದೇ ವಿಷಯ ಪ್ರಸ್ತಾಪ ಇಲ್ಲ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್, ಕಾಂಗ್ರೆಸ್ ಶಿಸ್ತಿನ ಪಾರ್ಟಿ ನಾವು ಶಿಸ್ತನ್ನು ಪಾಲನೆ ಮಾಡುತ್ತೇವೆ ಸದ್ಯ ಸಿಎಂ ಬದಲಾವಣೆ ಯಾವುದೇ ವಿಷಯ ಪ್ರಸ್ತಾಪ ಇಲ್ಲ ಈಗ ಆ ವಿಷಯ ಚರ್ಚೆ ಮಾಡುವುದು ಅನವಶ್ಯಕ ಹಾಗೂ ಅನಗತ್ಯ ಅಭಿವೃದ್ಧಿ ವಿಚಾರದಲ್ಲಿ ಸಿದ್ದರಾಮಯ್ಯ ಹೆಸರು ಕೇಳಿ ಬರುತ್ತಿದೆ. ಇದನ್ನು ಡೈವರ್ಟ್ ಮಾಡಲು ಈ ರೀತಿ ವಿಷಯ ಹೊರಬರುತ್ತಿದೆ ಎಂದು ಹುಬ್ಬಳಿಯಲ್ಲಿ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಬಹಳಷ್ಟು ಜನ ಪಕ್ಷಕ್ಕೆ ಬರುತ್ತಾರೆ. ಮನಸಿದ್ದವರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಇದು…

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರವಲ್ಲ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದು ಅಥವಾ ಬಿಡುವುದು ಹೈಕಮಾಂಡ್‌ ನಿರ್ಧಾರ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂಬ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿಗಳ ಕುರಿತು ನಾವು ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕೇವಲ ಸಿದ್ದರಾಮಯ್ಯ ಮಾತ್ರವಲ್ಲ. ಕೆಪಿಸಿಸಿ ಅಧ್ಯಕ್ಷರೂ ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು. ಕಾಂಗ್ರೆಸ್‌ನಲ್ಲಿ ಆಗಾಗ್ಗೆ ಮುನ್ನೆಲೆಗೆ ಚರ್ಚೆಗೆ ಬರುವ ‘ಪೂರ್ಣಾವಧಿ ಸಿಎಂ’ ವಿವಾದ ಮತ್ತೆ ಭುಗಿಲೆದ್ದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಹೆಚ್ಚು ಸ್ಥಾನ ಗಳಿಸಿದರೆ ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಮಾಜಿ…

Read More

ಬೆಂಗಳೂರು : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಆಯೋಜಿಸಿದ್ದು ಈ ಒಂದು ಕಾರ್ಯಕ್ರಮದಲ್ಲಿ ಪ್ರಮುಖರಿಗೆ ಮಾತ್ರ ಆಹ್ವಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮಂದಿರಕ್ಕೆ ಭೇಟಿ ನೀಡಲು ಪ್ರತಿಯೊಬ್ಬರಿಗೂ ಅವಕಾಶ ನೀಡಲಾಗುತ್ತದೆ. ಈ ವಿಷಯದ ಕುರಿತಾಗಿ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಡೆ ರಾಮನ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಯಾವ ಅಡೆತಡೆ ಇಲ್ಲದೆ ಕಾರ್ಯಕ್ರಮ ನಡೆಯುತ್ತದೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ಮೋದಿ ಎರಡು ದಿನ ಮೊದಲೇ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.ಎಲ್ಲರೂ ಬರುವುದು ಬೇಡ ಅಂತ ನಮಗೆ ಪ್ರಮುಖರ ಸೂಚನೆ ಇದೆ. 15 ದಿನದ ನಂತರ ಎಲ್ಲಾ ಸ್ನೇಹಿತರ ಜೊತೆಗೆ ನಾನು ಅಯೋಧ್ಯೆಗೆ ಹೋಗಿ ಬರುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ…

Read More

ಬೆಂಗಳೂರು : ರಾಜ್ಯದಲ್ಲಿ ಗೋದ್ರಾ ಹತ್ಯಾಕಾಂಡ ರೀತಿ ಘಟನೆ ಆಗುತ್ತದೆ ಎಂಬ ಕಾಂಗ್ರೆಸ್ ಎಮ್ ಎಲ್ ಸಿ ಬಿ ಕೆ ಹರಿಪ್ರಸಾದ್ ಅವರ ಹೇಳಿಕೆಗೆ ಇದೀಗ ಸರ್ಕಾರವೇ ಅಸ್ತ್ರ ಉಪಯೋಗಿಸಿದ್ದು ಎಂಎಲ್ಸಿ ಹರಿಪ್ರಸಾದರನ್ನು ಇದೀಗ ಪೊಲೀಸರು ವಿಚಾರಣೆಗೆ ಕರೆದಿದ್ದರೆ. ಕೆಕೆ ಗೆಸ್ಟ್ ಹೌಸ್ ನಲ್ಲಿ ಹರಿಪ್ರಸಾದ್ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಹೇಳಿಕೆಯನ್ನು ಆಧರಿಸಿ ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರು ಪೊಲೀಸರಿಗೆ ವಿವಿಐಪಿ ಟ್ರೀಟ್ಮೆಂಟ್ ಬೇಡ ಬೇಕಿದ್ದರೆ ಅರೆಸ್ಟ್ ಮಾಡಿ ಎಂದು ಎಂಎಲ್ಸಿ ಹರಿಪ್ರಸಾದ್ ಕಿಡಿ ಕಾರಿದ್ದಾರೆ. ಸರ್ಕಾರದ ನಡಿಗೆ ಎಂ ಎಲ್ ಸಿ ಬಿ ಕೆ ಹರಿಪ್ರಸಾದ್ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು ಇದು ಕಾಂಗ್ರೆಸ್ ಸರ್ಕಾರ ಅಥವಾ ಆರ್ ಎಸ್ ಎಸ್ ಸರ್ಕಾರವ ಎಂದು ಆಕ್ರೋಶ ಹೊರಹಾಕಿದ್ದಾರೆ. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್ ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ.ನನ್ನ ಜೊತೆಗೆ ವಿಜಯೇಂದ್ರರನ್ನು ಒಬ್ಬರು ಪರೀಕ್ಷೆಗೆ…

Read More

ಬೆಂಗಳೂರು : ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕೆಡವಿದ್ದ ನಂತರ ಅಲ್ಲಿಗೆ ಹೋಗಿದ್ದೆ. ಟೆಂಟ್​​ನಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು ಎಂದು ಸಚಿವ ಕೆನ್​ ರಾಜಣ್ಣ ಹೇಳಿದ್ದರು. ಇವರ ಈ ಹೇಳಿಕೆಗೆ ವ್ಯಾಪಕ ವಿರೋಧ ಮತ್ತು ಟೀಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಇದೀಗ ಕೆಎನ್​ ರಾಜಣ್ಣ ತಮ್ಮ ಹೇಳಿಕೆಯನ್ನು ಸಮರ್ಥಸಿಕೊಂಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದ್ರೆ ತಪ್ಪಾ? ಎಲ್ಲವೂ ನಮ್ಮ ನಂಬಿಕೆಗೆ ಬಿಡುವಂತಹದ್ದು. ಬಾಬ್ರಿ ಮಸೀದಿ ತೆರವು ಆದ ಮೇಲೆ ನಾನು ಹೋಗಿ ನೋಡಿದ್ದೇನೆ. ಅಯೋಧ್ಯೆಗೆ ಹೋದಾಗ ಇದ್ದ ಅಲ್ಲಿನ ಚಿತ್ರಣ ಹೇಳಿದ್ದೇನೆ ಅಷ್ಟೇ. ಏನು ಗೊಂಬೆಗಳನ್ನು ದೇವರು ಅಂತಾ ಪೂಜೆ ಮಾಡೋದೆ ಇಲ್ವಾ. ದಸರಾದಲ್ಲಿ ಬೊಂಬೆಗಳನ್ನು ಇಟ್ಟು ಪೂಜೆ ಮಾಡಲ್ವಾ? ಹಳ್ಳಿಗಳಲ್ಲಿ ಸಗಣಿ ಹುಂಡೆ ಮಾಡಿ ಗರಿಕೆ ಇಟ್ಟು ಪೂಜೆ ಮಾಡುತ್ತಾರೆ. ಅದನ್ನು ನಾವು ದೇವರು ಅಂದುಕೊಳ್ಳುತ್ತೇವೆ ಎಂದರು ಎಂದು ಹೇಳಿದರು. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಐದು ವರ್ಷ ಪೂರ್ಣ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಯತೀಂದ್ರ…

Read More

ಬೆಂಗಳೂರು : ಬೆಂಗಳೂರಿನ ಪಿಣ್ಯ ಫ್ಲೈ ಓವರ್ ನಲ್ಲಿ ಮತ್ತೆ ಸಂಚಾರ ಆರಂಭವಾಗಿದ್ದು, ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಪೀಣ್ಯ ಫ್ಲೈ ಓವರ್ ಕಳೆದ ಮೂರು ದಿನಗಳಿಂದ ಬಂದ್ ಆಗಿತ್ತು.ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಲೋಡ್ ಟೆಸ್ಟಿಂಗ್ ನಡೆಸಿತ್ತು.ಆದ್ದರಿಂದ ಲೋಡ ಟೆಸ್ಟಿಂಗ್ ಮುಕ್ತಾಯ ಹಿನ್ನೆಲೆ ಸಂಚಾರಕ್ಕೆ ಇದೀಗ ಅನುವು ಮಾಡಿಕೊಡಲಾಗಿದೆ. ಬೆಳಗ್ಗೆ 11 ಗಂಟೆಯಿಂದ ಮತ್ತೆ ವಾಹನಗಳ ಸಂಚಾರ ಆರಂಭವಾಗಲಿದೆ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಹೈವೇಗೆ ಅಳವಡಿಸಿದ್ದ ವಯಾಡಕ್ಟ್ ದುರಸ್ಥಿ ಹಿನ್ನೆಲೆ ಲೋಡ್ ಟೆಸ್ಟಿಂಗ್ ನಡೆಸಲಿರುವ ಕಾರಣ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ನಾಗಸಂದ್ರದ ಪಾರ್ಲೆ ಜಿ ಫ್ಯಾಕ್ಟರಿವರೆಗೂ 5 ಕಿಮೀ ಉದ್ದವಿರು ಪೀಣ್ಯ ಮೇಲ್ಸೇತುವೆಯ ವಯಾಡಕ್ಟ್​​ನ ಸಮಗ್ರತೆ ಹಾಗೂ ಲೋಡ್ ಟೆಸ್ಟಿಂಗ್ ಪರಿಶೀಲನೆ ಸಂಚಾರಕ್ಕೆ ನಿರ್ಬಂಧ ಹೇರಲು ಮುಖ್ಯ ಕಾರಣವಾಗಿದೆ. ಈ ಹಿಂದೆ ದುರಸ್ಥಿ ಸಂಬಂಧ ಐಐಎಸ್ಸಿ ತನಿಖೆ ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಫ್ಲೈಓವರ್ ನಲ್ಲಿ ಲೋಪ ಇರುವ ಸಂಬಂಧ ರಿಪೋರ್ಟ್ ನೀಡಿದ್ದು. ಈ ಕಾರಣ…

Read More

ಚಿತ್ರದುರ್ಗ : ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದ ವೇಳೆ ಟ್ಯಾಂಕರ್ ಲಾರಿ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ಮದಕರಿಪುರ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಬೆಂಗಳೂರು ಮೂಲದ ನಿರ್ಮಲ (55) ಹಾಗೂ ವಿನುತ (40)ಮಹಿಳೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಫಣಿರಾಜ್, ರಶ್ಮಿ, ಹಾಗೂ ಯಶಸ್ ಎನ್ನುವರಿಗೆ ಗಂಭಿರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಕಾರಲ್ಲಿ ಹೊಸಪೇಟೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರ್ಗಿ : ಮೈಸೂರಿನ ಅರುಣ್ ಯೋಗಿರಾಜ್ ಅವರ ಕೈಯಲ್ಲಿ ಮೂಡಿಬಂದಂತಹ ರಾಮಲಲ್ಲ ಮೂರ್ತಿಯನ್ನು ಈಗಾಗಲೇ ಅಯೋಧ್ಯ ಶ್ರೀರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ.ಅದೇ ರೀತಿಯಾಗಿ ಈ ಒಂದು ಕಾರ್ಯಕ್ರಮಕ್ಕೆ ಗಣ್ಯರಿಗೆ ಆಹ್ವಾನ ನೀಡಿದ್ದು, ಆ ಆಹ್ವಾನ ಪತ್ರಿಕೆಯಲ್ಲಿರುವ ಲೋಗೋ ಕಲಬುರ್ಗಿ ಕಲಾವಿದ ತಯಾರಿಸಿದ್ದು ಎಂದು ತಿಳಿದು ಬಂದಿದ್ದು ಇದೀಗ ಕರ್ನಾಟಕಕ್ಕೆ ಮತ್ತೊಂದು ಗರಿ ಸಿಕ್ಕಿದಂತಾಗಿದೆ. ಆಹ್ವಾನ ಪತ್ರಿಕೆಯ ಮೇಲೆ ಪ್ರಕಾಶಿಸುವ ಸೂರ್ಯನ ಮಧ್ಯೆ ಕಂಗೊಳಿಸುವ ಶ್ರೀರಾಮನ ಭಾವಚಿತ್ರವಿದೆ. ಕೆಳಭಾಗದಲ್ಲಿ ಕುಳಿತಿರುವ ಹನುಮಂತನ ಚಿತ್ರವಿದೆ. ಈ ರೀತಿಯಾದ ಲೋಗೋವನ್ನು ಕಲಬುರಗಿಯ ಕಲಾವಿದ ರಮೇಶ್ ತಿಪ್ಪನೂರ್ ಅವರು ಡಿಸೈನ್​ ಮಾಡಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಲೋಗೋ ತಯಾರಿಸಲು ಕರೆ ಕೊಟ್ಟಿತ್ತು. ​ದೇಶದ ವಿವಿಧ ಕಲಾವಿದರು ಲೋಗೋ ತಾಯಾರಿಸಿ ಟ್ರಸ್ಟ್​​ಗೆ ಕಳುಹುಸಿದ್ದರು. ಇನ್ನು ಕಲಾವಿದ ರಮೇಶ್ ತಿಪ್ಪನೂರ್ ಅವರು ತಾವು ತಯಾರಿಸಿದ ಲೋಗೋವನ್ನು ವಿಹೆಚ್​ಪಿ ಮುಖಂಡ ಗೋಪಾಲ್ ಜಿ ಅವರ ಮೂಲಕ ಟ್ರಸ್ಟ್​​ಗೆ ಕಳುಹಿಸಿದ್ದಾರೆ. ಟ್ರಸ್ಟ್​​ ದೇಶದ ವಿವಿಧಡೆಯಿಂದ ಬಂದ ಲೋಗೋ ಪರಿಶೀಲಿಸಿ, ಕೊನೆಗೆ ಕಲಬುರಗಿಯಲ್ಲಿ…

Read More

ಹಾಸನ : ಪತಿ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರಿಂದ ಹಾಸನ ಸಕಲೇಶಪುರದ ಪೊಲೀಸ್​ ಕ್ವಾರ್ಟರ್ಸ್​ನಲ್ಲಿ ಕಾನ್ಸ್​ಟೇಬಲ್​ ಸೋಮಶೇಖರ್ ಎನ್ನುವವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮೃತ ಸೋಮಶೇಖರ್ 112 ಪೊಲೀಸ್ ವಾಹನದ ಚಾಲಕನಾಗಿ l ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರು. ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More