Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಧರ್ಮಸ್ಥಳ ಪ್ರಕರಣದಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎಂಬ ಆರೋಪಕ್ಕೆ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ತಿರುಗೇಟು ನೀಡಿದ್ದಾರೆ.ಚೈಲ್ಡಿಶ್ ಗಳಿಗೆ ಉತ್ತರ ಕೊಡಬೇಕಾ ಅಂತ ಇಷ್ಟು ದಿನ ಸುಮ್ಮನಿದ್ದೆ . ಆದರೆ ಈಗ ಪ್ರತಿದಿನ ಒಂದು ಸ್ಟೋರಿ ಬರುತ್ತಿದೆ ಇದು ಸರಿಯಾದ ಸಮಯವೆಂದು ಮಾನನಷ್ಟ ಕೇಸ್ ದಾಖಲಿಸುತ್ತೇನೆ ಎಂದು ಆಕ್ರೋಶ ಹೊರಹಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು 10 ವರ್ಷಗಳ ಕಾಲ ಕರ್ನಾಟಕದಲ್ಲಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಆರೋಪ ಮಾಡಿದ ವ್ಯಕ್ತಿ ಯಾರು ಗೊತ್ತಾ? ಕರ್ನಾಟಕದ ಸಂಪತ್ತು ಲೂಟಿ ಹೊಡೆದು 7 ವರ್ಷ ಜೈಲಿನಲ್ಲಿ ಇದ್ದವರು. ದೇಶದಲ್ಲಿ ರಾಜ್ಯದ ಮರ್ಯಾದೆ ಹರಾಜು ಹಾಕಿದವರು. ನನಗೆ ದೆಹಲಿಯಲ್ಲಿ ಮನೆಯಲ್ಲಿ ಇಲ್ಲ ದೆಹಲಿಗೆ ತಲೆ ಬುರುಡೆ ತೆಗೆದುಕೊಂಡು ಹೋಗಿದ್ದೇನೆ ಅಂತಾರೆ. ತಲೆಬುರುಡೆಯಲ್ಲಿ ಸಿಗುತ್ತೆ ಅಂತಾನೆ ಗೊತ್ತಿಲ್ಲ ಬಹುಶಃ ಅದು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ಗೊತ್ತಿರಬೇಕು. ಸಿಟಿ ಸಿವಿಲ್ ಕೋರ್ಟ್ ಬಳಿ ಸಂಸದ ಶಶಿಕಾಂತ್…
BREAKING : ಅಕ್ರಮ ಆನ್ಲೈನ್ ಬೆಟ್ಟಿಂಗ್ ಕೇಸ್ : ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ‘ED’ ದಾಳಿ!
ಚಿತ್ರದುರ್ಗ : ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚಳ್ಳಕೆರೆಯಲ್ಲಿ ಇಡಿ ಅಧಿಕಾರಿಗಳು ಇಂದು ಮತ್ತೆ ದಾಳಿ ನಡೆಸಿದ್ದಾರೆ. ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ವೀರಶೈವ ಸಹಕಾರಿ ಬ್ಯಾಂಕ್, ಮಹೇಂದ್ರ ಕೋಟಕ್ ಬ್ಯಾಂಕ್ ನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಶಾಸಕ ವೀರೇಂದ್ರ ಪಪ್ಪಿ ಅವರಿಂದ ಸಿಕ್ಕ ಮಾಹಿತಿಯನ್ನು ಆಧರಿಸಿ ಇಂದು ಇಡಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದಾರೆ.
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಬೀದಿ ನಾಯಿಗಳಿಂದ ಮಕ್ಕಳು ಹಿರಿಯರು ಸಹ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದೀಗ ಬಾಲಕಿಯ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಐದು ಬೀದಿ ನಾಯಿಗಳು ಬಾಲಕಿಯ ಮೇಲೆ ದಾಳಿ ಮಾಡಿವೆ. ಬೆಂಗಳೂರಿನ ಹೊಸಕೋಟೆ ಗೋಕುಲ್ ಡೈರಿ ರಸ್ತೆ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಗೋಕುಲ್ ಡೈರಿ ರಸ್ತೆ ಬಳಿ ಬಾಲಕಿ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ನಾಯಿಗಳು ಅಟ್ಯಾಕ್ ಮಾಡಿವೆ ತಕ್ಷಣ ಅಲ್ಲಿಯೇ ಮನೆಯಲ್ಲಿದ್ದ ಮಹಿಳೆ ನಾಯಿಗಳನ್ನ ಓಡಿಸಿದ್ದಾರೆ. ಸ್ಥಳೀಯ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ಒಂದು ತಪ್ಪಿದೆ
ಬೆಂಗಳೂರು : ಧರ್ಮಸ್ಥಳ ಪ್ರಕರಣ ಇದೀಗ ದಿನದಿಂದ ದಿನಕ್ಕೆbಸ್ಪೋಟಕ ತಿರುವು ಪಡೆದುಕೊಳ್ಳುತ್ತಿದೆ. ಟೀ. ಜಯಂತ್ ನನ್ನು ವಶಕ್ಕೆ ಪಡೆದ ಎಸ್ಐಟಿ ಅಧಿಕಾರಿಗಳು ವಿಚಾರಣೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಬುರುಡೆ ಕೊಟ್ಟಿದ್ದು ಅಂತ ಸ್ಪೋಟಕ ಹೇಳಿಕೆ ನೀಡಿದ್ದಾನೆ. ಇದರ ಬೆನ್ನಲ್ಲೆ ಎಸ್ಐಟಿ ತನಿಖೆಯಲ್ಲಿ ಮತ್ತೊಂದು ಸ್ಪೋಟಕವಾದ ಅಂಶ ಬೆಳಕಿಗೆ ಬಂದಿದ್ದು ಈ ಒಂದು ಬುರುಡೆ ಗ್ಯಾಂಗ್ ಕೇರಳಕ್ಕೆ ತೆರಳಿ ಅಲ್ಲಿನ ಕಮ್ಯುನಿಸ್ಟ್ ಪಾರ್ಟಿಯ ಸಂಸದ ಸಂತೋಷ್ ಕುಮಾರ್ ಅವರನ್ನು ಭೇಟಿ ಮಾಡಿತ್ತು ಎಂದು ಎಸ್ ಐ ಟಿ ತನಿಖೆಯಲ್ಲಿ ಈ ಕುರಿತು ಸ್ಪೋಟಕ ಮಾಹಿತಿ ಬಯಲಾಗಿದೆ. ಸಂಸದ ಸಂತೋಷ ಕುಮಾರ್ ಎದುರಲ್ಲಿ ಗ್ಯಾಂಗ್ ಬುರುಡೆ ಇಟ್ಟಿತ್ತು. ಕಮ್ಯುನಿಸ್ಟ್ ಪಾರ್ಟಿಯ ಸಂಸದ ಸಂತೋಷ್ ಕುಮಾರ್ ಭೇಟಿ ಮಾಡಿ ಬುರುಡೆ ಇಟ್ಟಿತ್ತು ಎಂದು ತಿಳಿದು ಬಂದಿದೆ.
ಬೆಂಗಳೂರು : ನಾಳೆ ಖಗ್ರಾಸ ಚಂದ್ರ ಗ್ರಹಣ ಹಿನ್ನೆಲೆ ನಾಳೆ ಬೆಂಗಳೂರಿನ ಬಹುತೇಕ ದೇವಾಲಯಗಳು ಬಂದ್ ಆಗಿರಲಿವೆ. ನಾಳೆ ಬೆಳಿಗ್ಗೆಯಿಂದ ಗವಿ ಗಂಗಾಧರೇಶ್ವರ ದೇವಸ್ಥಾನ ಕ್ಲೋಸ್ ಆಗಿರಲಿದೆ. ಶಿವನಿಗೆ ಅಭಿಷೇಕ ಮಾಡಿ ಬೆಳಗ್ಗೆ 11 ಗಂಟೆಗೆ ದೇವಸ್ಥಾನ ಬಂದ್ ಮಾಡಲಾಗುತ್ತದೆ. ನಾಡಿದ್ದು ಅಂದರೆ ಸೋಮವಾರ ಮುಂಜಾನೆ ಶುದ್ಧೀಕಾರದ ಬಳಿಕ ದೇವಸ್ಥಾನ ತೆರೆಯಲಿದೆ.ನಾಳೆ ರಾತ್ರಿ 9:57 ರಿಂದ 1: 26ರವರೆಗೆ ಚಂದ್ರ ಗ್ರಹಣ ಸಂಭವಿಸಲಿದೆ. ಸುಮಾರು 3 ಗಂಟೆ 29 ನಿಮಿಷದವರೆಗೂ ಈ ಒಂದು ಖಗ್ರಾಸ ಚಂದ್ರ ಗ್ರಹಣ ಸಂಭವಿಸಲಿದೆ. ಈ ನೆಲೆಯಲ್ಲಿ ನಾಳೆ ಬೆಂಗಳೂರಿನ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನ ಸೇರಿದಂತೆ ಬಹುತೇಕ ದೇವಾಲಯಗಳು ಬಂದ್ ಆಗಿರಲಿವೆ.
ಬೆಂಗಳೂರು : ಬೆಂಗಳೂರಿನಲ್ಲಿ ವಕೀಲೆ ಒಬ್ಬಳಿಗೆ ಮದುವೆಯಾಗುತ್ತೇನೆ ಎಂದು ಹೇಳಿ ನಂಬಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಸ್ಪೆಷಲ್ ಆಕ್ಷನ್ ಫೋರ್ಸ್ ಅಲ್ಲಿದ್ದ ಸಿದ್ದೇಗೌಡ ಎನ್ನುವ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಬಸವೇಶ್ವರ ತ್ರಣಿ ಪೊಲೀಸರು ಇದೀಗ ಪೊಲೀಸ್ ಕಾನ್ಸ್ಟೇಬಲ್ ಸಿದ್ದೇಗೌಡನನ್ನು ಅರೆಸ್ಟ್ ಮಾಡಿದ್ದಾರೆ. ಸಿದ್ದೇಗೌಡನ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಬೆಂಗಳೂರು ಬಸವೇಶ್ವರನಗರ ಪೊಲೀಸರಿಂದ ಇದೀಗ ಪಿ.ಸಿ ಸಿದ್ದೇಗೌಡನನ್ನು ಬಂಧಿಸಲಾಗಿದೆ.ಮಂಗಳೂರಿನ ಪಾಂಡೇಶ್ವರ SAF ನಲ್ಲೀದ್ದ ಪಿಸಿ ಸಿದ್ದೇಗೌಡ, ವಿಜಯಪುರ ಜಿಲ್ಲೆಯ ಬಬಲೇಶ್ವರ ಮೂಲದ ಯುವತಿಯ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಸಿದ್ದೇಗೌಡ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮೂಲದ ನಿವಾಸಿ ಎಂದು ತಿಳಿದುಬಂದಿದೆ. ಹುಬ್ಬಳ್ಳಿ ಮದುವೆ ಒಂದರಲ್ಲಿ ಯುವತಿ ಸಿದ್ದೇಗೌಡನಿಗೆ ಪರಿಚಯವಾಗಿದೆ. ಮೊದಲಿಗೆ ಮದುವೆಯಾಗುವುದಾಗಿ ಸಿದ್ದೇಗೌಡ ಹೇಳಿದ್ದ ಮದುವೆಗೂ ಮುಂಚೆ ವತಿಯನ್ನು ಕರೆಸಿ ಅತ್ಯಾಚಾರ ಎಸಗಿದ್ದಾನೆ. ಬೆಂಗಳೂರಿನ ಕೆಲವು ಕಡೆ ಲಾಡ್ಜ್ ಬುಕ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ನಂತರ ಜಾತಿ ವಿಚಾರವಾಗಿ…
ವೈಭವ ಲಕ್ಷ್ಮಿ ಪೂಜೆ ಲಕ್ಷ್ಮಿ ಪೂಜೆ ನಮ್ಮಲ್ಲಿ ಪ್ರತಿಯೊಬ್ಬರಿಗೂ ಒಂದು ಕೋರಿಕೆ ಇರುತ್ತದೆ. ಅದು ನಮ್ಮ ವಯಸ್ಸು, ಸಂದರ್ಭ ಮತ್ತು ಪರಿಸ್ಥಿತಿಯನ್ನು ಅವಲಂಬಿಸಿ ಬದಲಾಗುತ್ತದೆ. ತಮ್ಮ ನ್ಯಾಯಸಮ್ಮತ ಕೋರಿಕೆ ಈಡೇರಬೇಕೆಂದು ಬಯಸುವವರು ಮಹಾಲಕ್ಷ್ಮಿ ದೇವಿಯನ್ನು ಸರಳ ರೀತಿಯಲ್ಲಿ ಪೂಜಿಸಬಹುದು ಮತ್ತು ಬಯಸಿದ ವರವನ್ನು ಪಡೆಯಬಹುದು. ವೈಭವ ಲಕ್ಷ್ಮಿ ನಮಗೆ ಬೇಕಾದ ವರವನ್ನು ನೀಡಬಲ್ಲ ದೇವತೆ. ಹಲವು ರೀತಿಯ ಲಕ್ಷ್ಮಿಗಳಿದ್ದಾರೆ. ವೈಭವ ಲಕ್ಷ್ಮಿ ಆ ಲಕ್ಷ್ಮಿಗಳಲ್ಲಿ ಒಬ್ಬರು. ವೈಭವ ಎಂದರೆ ಹಬ್ಬ, ಕೋಲಕಲಂ. ಹಬ್ಬದಲ್ಲಿ ಎಲ್ಲಾ ರೀತಿಯ ವಸ್ತುಗಳು ಲಭ್ಯವಿರುವಂತೆ ಮತ್ತು ಹಬ್ಬದ ಸಮಯದಲ್ಲಿ ನಾವು ಸಂತೋಷವಾಗಿರುತ್ತೇವೆ, ಹಾಗೆಯೇ ನಾವು ವೈಭವ ಲಕ್ಷ್ಮಿಯನ್ನು ಪೂಜಿಸುವಾಗ, ನಮಗೆ ಬೇಕಾದುದನ್ನು ನಾವು ಪಡೆಯಬಹುದು ಮತ್ತು ಸಂತೋಷದ ಜೀವನವನ್ನು ನಡೆಸಬಹುದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ…
BIG NEWS : BSY, HDK ಹಾಗೆ ನನ್ನನ್ನು ಉಚ್ಛಾಟಿಸಲಾಗಿದ್ದು, ನಾನು 2028ಕ್ಕೆ ‘CM’ ಆಗ್ತೀನಿ : ಶಾಸಕ ಯತ್ನಾಳ್ ಹೇಳಿಕೆ
ವಿಜಯಪುರ : ಸಿಎಂ ಅವರು ಸದನದಲ್ಲಿ ನನಗೆ ಯತ್ನಾಳ್ ನೀವು ಉಚ್ಚಾಟಿತರಾಗಿದ್ದೀರಿ ಎಂದು ತಿಳಿಸಿದಾಗ, ನಿಮ್ಮನ್ನೂ ದೇವೇಗೌಡ ಉಚ್ಚಾಟಿಸಿದ್ದರು ಸಿಎಂ ಆದಿರಿ. ಯಡಿಯೂರಪ್ಪ ಅವರನ್ನೂ ಉಚ್ಛಾಟಿಸಿದ್ದರು ಸಿಎಂ ಆದರು. ಒಮ್ಮೆ ಕುಮಾರಸ್ವಾಮಿಯನ್ನು ಉಚ್ಛಾಟಿಸಲಾಗಿತ್ತು, ಸಿಎಂ ಆದರು. ಈಗ ನನ್ನ ಸರದಿ ನನ್ನನ್ನೂ ಉಚ್ಛಾಟಿಸಲಾಗಿದೆ 2028ಕ್ಕೆ ನೋಡಬೇಕು ಸಿಎಂ ಆಗ್ತೀನೇನೋ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು. ಪಟ್ಟಣದ ಹಿಂದೂ ಮಹಾಗಣಪತಿ ಸಮಿತಿ 12ನೇ ವರ್ಷದ ಗಣೇಶೋತ್ಸವದ ಧರ್ಮ ಜಾಗೃತಿ ಸಭೆ ಉದ್ಘಾಟಿಸಿ ಅವರು ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆ ಆದ ನಂತರ ಬಹಳಾ ಪಾಪ್ಯುಲರ್ ಆಗಿರಿ ಎಂದು ಜನರು ಹೇಳುತ್ತಾರೆ, ನಿಜ ಅಂದ್ರೆ ನಮ್ಮವರು ನಾನು ಪಾಪ್ಯುಲರ್ ಆಗಲೀ ಅಂತಾನೆ ಉಚ್ಚಾಟನೆ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು. ನಮ್ಮವರು ಅಡ್ಜಸ್ಟ್ಮೆಂಟ್ ಬಿಟ್ಟು ಧರ್ಮ ಉಳಿಸಲು ಒಂದಾಗಬೇಕು. ಸನಾತನ ಧರ್ಮವನ್ನು ಅಪವಿತ್ರ ಮಾಡುವವರನ್ನು, ಧರ್ಮವನ್ನು ಅವಹೇಳನ ಮಾಡುವವರ ವಿರುದ್ಧ ಹೋರಾಟ ನಿಶ್ಚಿತ. ರಾಜ್ಯದಲ್ಲಿ ಎಲ್ಲ ಸಮುದಾಯಗಳ…
ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಪ್ರೀತಿಯಲ್ಲಿ ಬಿದ್ದ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಗುಂಪುಗಳ ನಡುವೆ ಗಲಾಟೆ ನಡೆದು ನಾಲ್ವರಿಗೆ ಚಾಕು ಇರಿಲಾಗಿದೆ. ಮಹಮ್ಮದ್ ಖಾಜಿ, ಮಹಮ್ಮದ್ ಅಟ್ಮಾಸ್ ಗುಂಪಿನ ಮಧ್ಯೆ ಈ ಒಂದು ಗಲಾಟೆ ನಡೆದಿದ್ದು ಬೆಳಗಾವಿಯ ಅನ್ನಪೂರ್ಣ ವಾಡಿಯ ರಾಯಲ್ ಸ್ಕೂಲ್ ಬಳಿ ಈ ಒಂದು ಘಟನೆ ಸಂಭವಿಸಿದೆ. ಅಪ್ರಾಪ್ತ ಬಾಲಕಿಯನ್ನು ಇಬ್ಬರು ಯುವಕರು ಪ್ರೀತಿ ಮಾಡುತ್ತಿದ್ದರು. ಆಕೆ ಸಹವಾಸ ಮಾಡಬೇಡ ಅವಳು ನನ್ನ ಫ್ರೆಂಡ್ ಲವ್ವರ್ ಎಂದು ಮೊಹಮ್ಮದ್ ಖಾಜಿ ಜೊತೆಗೆ ಮಹಮ್ಮದ್ ಅಟ್ಮಾಸ್ ಗುಂಪಿನಿಂದ ಗಲಾಟೆ ಆಗಿದೆ. ಗಾಯಗೊಂಡ ಮಹಮ್ಮದ್ ಖಾ mಜಿಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಗಲಾಟೆಯಲ್ಲಿ ಉಳಿದ ಇಬ್ಬರಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ ಹೇಳಿಕೆ ನೀಡಿದ್ದ, ಇದರ ಬೆನ್ನಲ್ಲೆ ರಾಜ್ಯ ಸರ್ಕಾರ ಸಹ ಎಸ್ಐಟಿ ರಚನೆ ಮಾಡಿ ತನಿಖೆಗೆ ಆದೇಶ ನೀಡಿತ್ತು. ಆದರೆ ತನಿಖೆಯಲ್ಲಿ ದಿನವೊಂದಕ್ಕೆ ಟ್ವಿಸ್ಟ್ ಸಿಕ್ಕಿದ್ದು ಕೊನೆಗೆ ಮಾಸ್ಕ್ ಮ್ಯಾನ್ ಚಿನ್ನಯ ತಪ್ಪು ಒಪ್ಪಿಕೊಂಡಿದ್ದಾನೆ. ಬಳಿಕ ಮಾಸ್ ಮ್ಯಾನ್ ಚಿನ್ನಯನನ್ನು SIT ಅಧಿಕಾರಿಗಳು ವಶಕ್ಕೆ ಪಡೆದು ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ಐಟಿ ಕಸ್ಟಡಿಗೆ ನೀಡಿತು. ಇದೀಗ ಇಂದು ಕಸ್ಟಡಿ ಅವಧಿ ಅಂತ್ಯವಾಗಲಿದೆ. ಇಂದು ಮತ್ತೆ ಚಿನ್ನಯ್ಯನ್ನು ಕೋರ್ಟಿಗೆ ಹಾಜರಪಡಿಸಲಿದ್ದು ಚಿನ್ನಯ್ಯ ಬಹುತೇಕ ಜೈಲು ಪಾಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಚಿನ್ನಯನನ್ನು ಎಸ್ ಐ ಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ 15 ದಿನಗಳ ಕಾಲ ಚಿನ್ನಯ ಎಸ್ಐಟಿ ಪೊಲೀಸರ ಕಸ್ಟಡಿಯಲ್ಲಿ ಇದ್ದ. ಆಗಸ್ಟ್ 23 ರಂದು ಎಸ್ಐಟಿ ಅಧಿಕಾರಿಗಳು ಚಿನ್ನಯನನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ ಪ್ರಾರಂಭದಲ್ಲಿ 12…














