Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯನಗರ : ವಿಜಯನಗರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರು ಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೊದಲಗಟ್ಟೆ ಗ್ರಾಮದ ಬಳಿ ನಡೆದಿದೆ. ನೀರು ಪಾಲಾಗಿರುವ ಯುವಕನನ್ನು ವಿನೋದ ಸ್ವಾಮಿ ಚನ್ನವೀರಯ್ಯ ಹಿರೇಮಠ (25) ಎಂದು ತಿಳಿದುಬಂದಿದೆ. ಈತ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದವ ಎಂದು ತಿಳಿದುಬಂದಿದೆ.ವಿನೋದ ಮುಂಡರಗಿ ತಾಲೂಕಿನ ಶೀರನಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಮೊದಲಗಟ್ಟಿ ಬಳಿ ಇರುವ ನದಿಗೆ ಈಜಲು ಹೋಗಿದ್ದಾನೆ. ಈ ಸಂದರ್ಭದಲ್ಲಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಪತ್ತೆ ಕಾರ್ಯಚರಣೆ ಪ್ರಾರಂಭಿಸಿದ್ದಾರೆ. ಇದೇ ಸ್ಥಳದಲ್ಲಿ ಕಳೆದ 4-5 ದಿನಗಳ ಹಿಂದೆ ಮೂವರು ಯುವಕರು ನೀರು ಪಾಲಾಗಿದ್ದರು. ಇದೀಗ ಇಂದು ಮತ್ತೊಂದು ದುರ್ಘಟನೆ ನಡೆದಿದೆ. ಘಟನೆ ಕುರಿತು ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಉಡುಪಿಯಲ್ಲಿ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಫೈರಿಂಗ್ ಆಗಿದೆ. ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ಶೂಟ್ ಔಟ್ ನಡೆದಿದೆ. ಇಸಾಕ್ ಗರುಡ ಗ್ಯಾಂಗ್ ನಟೋರಿಯಸ್ ಸದಸ್ಯ ಎಂದು ತಿಳಿದುಬಂದಿದೆ. ಮಣಿಪಾಲ್ ಪೊಲೀಸರು ಇದೀಗ ಇಸಾಕ್ ಮೇಲೆ ಫೈರಿಂಗ್ ನಡೆಸಿದ್ದಾರೆ. ಮಣಿಪಾಲ್ ಠಾಣೆಯ ಇನ್ಸ್ಪೆಕ್ಟರ್ ದೇವರಾಜ್ ಅವರು ಗರುಡ ಗ್ಯಾಂಗ್ ನಟೋರಿಯಸ್ ಸದಸ್ಯ ಇಸಾಕ್ ಮೇಲೆ ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ನಡೆಸಿದ ಬಳಿಕ ತಕ್ಷಣ ಪೊಲೀಸರು ಇಸಾಕ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೀದರ್ : ಬೀದರ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಭಾಲ್ಕಿ ಪೊಲೀಸರು, ಆತನಿಂದ ಬರೋಬ್ಬರಿ 14 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ಪವನ್ ಎಂದು ತಿಳಿದುಬಂದಿದೆ. ಈತ ಹೈದ್ರಾಬಾದ್ ಮೂಲದವನು ಎಂದು ತಿಳಿದುಬಂದಿದೆ.ಪವನ್ ರೈಲು ಮೂಲಕ ಮಹಾರಾಷ್ಟ್ರದಿಂದ ಹೈದರಾಬಾದ್ಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದರ ಬಗ್ಗೆ ಖಚಿತ ಮಾಹಿತಿ ತಿಳಿದು ದಾಳಿ ಮಾಡಿದ ಭಾಲ್ಕಿ ಪೊಲೀಸರು, ಆತನ ಬ್ಯಾಗನಲ್ಲಿದ್ದ 14 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.
ಬೆಂಗಳೂರು : ಈಗಾಗಲೇ KPSC ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ, ಪ್ರಕರಣ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆಗೆ ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇದೀಗ KAS ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ನಿರ್ಧರಿಸಿದ್ದೇವೆ ಎಂದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಲೋಪದೋಷಗಳಿಗೆ ಕಾರಣರಾದ ವಿಷಯ ತಜ್ಞರನ್ನು…
ಕೋಲಾರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕಾಮುಕ ತಂದೆಯೊಬ್ಬ ಮಗಳ ಮೀ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಹೀನ ಕೃತ್ಯ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಈ ಒಂದು ಬೆಚ್ಚಿ ಬೆಳಿಸುವ ಘಟನೆ ವರದಿಯಾಗಿದೆ. ಹೌದು ಕಾಮುಕ ತಂದೆಯೊಬ್ಬ ತನ್ನ 20 ವರ್ಷದ ಮಗಳ ಮೇಲೆ 5 ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಗೆ ಮೂವರು ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರನಿದ್ದಾನೆ. ತಾಯಿ ಇಲ್ಲದ ಹೆಣ್ಣು ಮಕ್ಕಳನ್ನು ತಂದೆ ತಾನೆ ನೋಡಿಕೊಳ್ಳುತ್ತಿದ್ದ. ಅಲ್ಲದೇ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಆಗಿದೆ. ಇದೀಗ 20 ವರ್ಷದ ಮಗಳ ಮೇಲೆ ನಿರಂತರವಾಗಿ 5 ತಿಂಗಳಿನಿಂದ ಅತ್ಯಾಚಾರ ಎಸಗಿದ್ದಾನೆ. ಹೊಟ್ಟೆನೋವು ಎಂದು ಆಸ್ಪತ್ರೆಗೆ ಹೋದಾಗ ಈ ಒಂದು ಕೃತ್ಯ ಬೆಳಕಿಗೆ ಬಂದಿದೆ. ಮಗಳ ದೂರಿನ ಮೇರೆಗೆ ಪೊಲೀಸರು ತಂದೆಯನ್ನು ಅರೆಸ್ಟ್ ಮಾಡಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ನಡೆದಿದ್ದು, ಕೌಟುಂಬಿಕ ಕಲಹದಿಂದ ನೊಂದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಂಠಿ ತಾಂಡದಲ್ಲಿ ನಡೆದಿದೆ. ಮೃತರನ್ನು ನೀಲಾಬಾಯಿ ಶಂಕರ್ (35) ಪುತ್ರಿಯರಾದ ರಾಜೇಶ್ವರಿ (10) ನಿಶಾ (4) ಎಂದು ತಿಳಿದುಬಂದಿದೆ.ನೀಲಾಬಾಯಿಗೆ ನಾಲ್ವರು ಪುತ್ರಿಯರು ಹಾಗೂ ಓರ್ವ ಪುತ್ರ ಸೇರಿ ಒಟ್ಟು ಐದು ಜನ ಮಕ್ಕಳಿದ್ದು, ಬೇಬಿ (12) ಹಾಗೂ 11 ತಿಂಗಳ ಗಂಡು ಮಗು ಶೆವಾನನ್ನು ಮನೆಯಲ್ಲಿ ಬಿಟ್ಟು, ಇನ್ನುಳಿದ ಮೂವರು ಹೆಣ್ಣು ಮಕ್ಕಳನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ತಾಂಡಾದ ಬಳಿ ಇರುವ ಬಾವಿಗೆ ತೆರಳಿದ್ದಾರೆ. ಮೊದಲು ಇಬ್ಬರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿದ್ದಾಳೆ. ಇನ್ನೊಬ್ಬ ಮಗಳು ಸಂಜುಳನ್ನು ಬಾವಿಗೆ ತಳ್ಳುವಾಗ ಬಾಲಕಿ ತಪ್ಪಿಸಿಕೊಂಡು ಓಡಿ ಹೋಗಿ ತಾಂಡಾದಲ್ಲಿ ಈ ವಿಷಯ ತಿಳಿಸಿದ್ದಾಳೆ. ಆದರೆ ಅಲ್ಲಿನ ನಿವಾಸಿಗಳು ಬಾವಿಯ ಹತ್ತಿರ ಬರುವಷ್ಟರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ…
ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾ ರಾವ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಈ ಒಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿ ಪ್ರಕರಣದ ಕುರಿತು ಮಾರ್ಚ್ 14ರಂದು ಆದೇಶ ಪ್ರಕಟಿಸಲಿದ್ದಾರೆ. ಇಂದು ಆರ್ಥಿಕ ವಿಶೇಷ ನ್ಯಾಯಾಲಯದಲ್ಲಿ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು, DRI ಪರವಾಗಿ ವಕೀಲ ಮಧು ರಾವ್ ವಾದ ಮಂಡನೆ ಮಾಡಿದರು. 135 (1) A & B ಅಡಿ ಕೇಸ್ ದಾಖಲಿಸಿದ್ದಾರೆ. 50 ಲಕ್ಷ ರೂಪಾಯಿಗಿಂತ ಹೆಚ್ಚಿನ ಅಕ್ರಮ ಸಾಗಾಣೆ ನಿಷಿದ್ಧವಾಗಿದೆ. ಕಸ್ಟಂ ಕಾಯ್ದೆ 104ರ ಅಡಿ ಬಂಧನದ ಅಧಿಕಾರವಿದೆ. ಬಂಧನದ ನಂತರ ಅದಕ್ಕೆ ಕಾರಣಗಳನ್ನು ನೀಡಬೇಕು. ದುಬೈ ನಿಂದ ವಿಮಾನ ಬಂದು ಏರ್ಪೋರ್ಟ್ ನಲ್ಲಿ ನಿಂತಿತ್ತು. ರಾಜ್ಯದ ಪ್ರೊಟೊಕಾಲ್ ಆಫೀಸರ್…
ತುಮಕೂರು : ದನದ ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದ ಪರಿಣಾಮ 1 ಕರು ಸೇರಿದಂತೆ 4 ಹಸುಗಳು ಸಜೀವವಾಗಿ ದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮದಲ್ಲಿ ನಡೆದಿದೆ. ಕಳೆದ ಮಾರ್ಚ್ 10 ರಂದು ನಡೆದಿದ್ದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮದ ರೈತ ಕೊಂಡಪ್ಪನ ಜಮೀನಿನ ತೋಟದಲ್ಲಿದ್ದ ದನದ ಹಟ್ಟಿಯಲ್ಲಿ ದುರ್ಘಟನೆ ಸಂಭವಿಸಿದೆ.ತೋವಿನಕೆರೆ ಗ್ರಾಮದ ರೈತ ಕೊಂಡಪ್ಪ ಎಂಬಾತನ ಜಮೀನಿನ ಶೆಡ್ಡಿನಲ್ಲಿ ಹಸುಗಳನ್ನು ಕಟ್ಟಿ ಹೋದ ನಂತರ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಶೆಡ್ಡಿಗೆ ವಿದ್ಯುತ್ ಸಂಪರ್ಕವು ಇಲ್ಲ, ಮತ್ತು ದೀಪದ ಬೆಳಕು ಇರದಿದ್ದರೂ ಹೇಗೆ ಬೆಂಕಿ ಆವರಿಸಿದೆ ಎಂದು ರೈತ ಅನುಮಾನ ವ್ಯಕ್ತಪಡಿಸಿದ್ದಾನೆ. ಸ್ಥಳಕ್ಕೆ ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ನಾಗಭೂಷನ್, ಕಂದಾಯ ಇಲಾಖೆ ಪ್ರತಾಪ್, ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : 2013ರಲ್ಲಿ ಹಲ್ಲೆ ಅಟ್ರಾಸಿಟಿ ಪ್ರಕರಣದಲ್ಲಿ ಸಚಿವ ಕೆ ಎಸ್ ಮುನಿಯಪ್ಪ ಗೆ ಸಂಕಷ್ಟ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದೀಗ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯ ಸಂತೋಷ ಗಜಾನನ ಭಟ್ ಅವರು ಕೆ.ಎಚ್ ಮುನಿಯಪ್ಪಗೆ ಜಾಮೀನು ನೀಡಿ ಆದೇಶಿಸಿದ್ದಾರೆ. 2013ರ ಹಲ್ಲೆ ಅಟ್ರಾಸಿಟಿ ಕೇಸ್ ನಲ್ಲಿ ಸಚಿವ ಕೇಸ್ ಮುನಿಯಪ್ಪ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಕನ್ನಡಕ್ಕೆ ಸಂಬಂಧಪಟ್ಟಂತೆ ಮುನಿಯಪ್ಪ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಅವರು ಕೋರ್ಟಿಗೆ ಗೈರು ಹಾಜರಾಗಿದ್ದರು. ಹಾಗಾಗಿ ಜನಪ್ರತಿನಿಧಿ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಗರಂ ಆಗಿದ್ದರು. ಇಂದು ಕೋರ್ಟಿಗೆ ಸಚಿವ ಕುಂದು ಹಾಜರಾಗಬೇಕಿತ್ತು ರಾಬರ್ಟ್ ಸನ್ ಪೇಟೆ ಪೊಲೀಸರು ಪೊಲೀಸರ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ವೇಳೆ ಕೊರ್ಯೆ ಬಿ ರಿಪೋರ್ಟ್ ತಿರಸ್ಕರಿಸಿದ ಮೇಲೆ ಸಚಿವ ಮುನಿಯಪ್ಪಗೆ ಸಮನ್ಸ್ ಜಾರಿಗೊಳಿಸಿತ್ತು. ಹಾಗಾಗಿ ಇಂದು ಖುದ್ದು…
ಕಲಬುರ್ಗಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಇದುವರೆಗೂ ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇತ್ತೀಚಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಿದ್ದರು ಸಹ ಈ ಒಂದು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಇದೀಗ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮತ್ತೊಂದು ಜೀವ ಬಲಿಯಾಗಿದ್ದು ಕಲ್ಬುರ್ಗಿಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.ಚಂದ್ರಕಾಂತ ಪೂಜಾರಿ (35) ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಕಲಬುರಗಿ ನಗರದ ಸಿದ್ದಾರೂಢ ಕಾಲೋನಿ ನಿವಾಸಿಯಾಗಿದ್ದ ಚಂದ್ರಕಾಂತ, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಚಂದ್ರಕಾಂತ ತಮ್ಮ ಸ್ನೇಹಿತರಿಗೆ ಆಡಿಯೋ ಸಂದೇಶವೊಂದನ್ನು ರೆಕಾರ್ಡ್ ಮಾಡಿದ್ದಾರೆ. ನಾನು ರೊಕ್ಕಕ್ಕಾಗಿ ಸಾಯುತ್ತಿಲ್ಲ, ಮಂದಾಕಿನಿ ಪಾಟೀಲ್ ಮತ್ತು ಅವರ ಮಗನ ಟಾರ್ಚರ್ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಮೃತ ಚಂದ್ರಕಾಂತ ಪೂಜಾರಿ,…














