Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಶಿಶು ಮರಣ ಹಾಗೂ ಜನನ ಪ್ರಮಾಣ ದರದಲ್ಲಿ ಇಳಿಕೆ ಕಂಡಿದೆ. ರಿಜಿಸ್ಟರ್​ ಆಫ್​ ಇಂಡಿಯಾ ಬಿಡುಗಡೆ ಮಾಡಿರುವ ಮಾದರಿ ನೋಂದಣಿ ವ್ಯವಸ್ಥೆ (ಎಸ್​ಆರ್​ಎಸ್) ಇದು ಬಹಿರಂಗಗೊಂಡಿದೆ. ಈ ಕುರಿತು ರಿಜಿಸ್ಟರ್​ ಆಫ್​ ಇಂಡಿಯಾ ಬಿಡುಗಡೆ ಮಾಡಿರುವ 2023 ಎಸ್​ಆರ್​ಎಸ್​ನಲ್ಲಿ ಜನನ ದರ, ಮರಣ ದರ, ನೈಸರ್ಗಿಕ ಬೆಳವಣಿಗೆ ದರ ಮತ್ತು ಶಿಶು ಮರಣ ದರ (ಐಎಂಆರ್​​)ಗಳ ಅಂದಾಜುಗಳನ್ನು ನೀಡಲಾಗಿದೆ. ಮಾದರಿ ನೋಂದಣಿ ವ್ಯವಸ್ಥೆ ಎಂಬುದು ಶಿಶು ಮರಣ ಪ್ರಮಾಣ, ಜನನ ಪ್ರಮಾಣ, ಮರಣ ಪ್ರಮಾಣ ಮತ್ತು ಇತರ ಫಲವತ್ತತೆ ಮತ್ತು ಮರಣ ಸೂಚಕಗಳ ವಾರ್ಷಿಕ ಅಂದಾಜುಗಳನ್ನು ಒದಗಿಸಲು ನಡೆಸುವ ಭಾರತದ ಅತಿ ದೊಡ್ಡ ಜನಸಂಖ್ಯಾ ಸಮೀಕ್ಷೆ ಆಗಿದೆ. ದೇಶದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಭಾರತದ ರಿಜಿಸ್ಟ್ರಾರ್ ಜನರಲ್ ಕಚೇರಿಯಿಂದ ಪ್ರತಿ ವರ್ಷ ನಡೆಸಲ್ಪಡುವ ದೊಡ್ಡ ಪ್ರಮಾಣದ ಜನಸಂಖ್ಯಾ ಸಮೀಕ್ಷೆಯಾಗಿದೆ. ಕಳೆದ ಐದು ದಶಕಗಳಿಗೆ ಹೋಲಿಕೆ ಮಾಡಿದರೆ ದೇಶದೆಲ್ಲೆಡೆ ಜನನ ದರ ಪ್ರಮಾಣ ಗಣನೀಯ ಪ್ರಮಾಣದಲ್ಲಿ…

Read More

ಶಿವಮೊಗ್ಗ : ಶಿವಮೊಗ್ಗದ ಕೋಟೆ ರಸ್ತೆಯ ಭೀಮೇಶ್ವರ ದೇಗುಲದಲ್ಲಿ ಹಿಂದೂ ಮಹಾಸಭಾ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿದ್ದು, ಇಂದು 11ನೇ ದಿನಕ್ಕೆ ಗಣೇಶನ ವಿಸರ್ಜನೆ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ಹಿನ್ನಲೆಯಲ್ಲಿ ನಗರವು ಸಂಫೂರ್ಣವಾಗಿ ಕೇಸರಿಮಯವಾಗಿದೆ. ಮುಂಜಾಗ್ರತ ಕ್ರಮವಾಗಿ ಇಂದು ಶಿವಮೊಗ್ಗ ನಗರದ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು 1ನೇ ತರಗತಿಯಿಂದ ಪಿಯುಸಿವರೆಗೆ ರಜೆ ಶಿವಮೊಗ್ಗ ಬಿಇಒ ರಮೇಶ್ ಆದೇಶ ಹೊರಡಿಸಿದ್ದರೆ, ಪಿಯುಸಿ ಕಾಲೇಜುಗಳಿಗೆ ರಜೆ ನೀಡಿ ಪಿಯು ಡಿಡಿ ಚಂದ್ರಪ್ಪ ಆದೇಶಿಸಿದ್ದಾರೆ. ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಭಾರೀ ಪ್ರಸಿದ್ಧಿ ಪಡೆದುಕೊಂಡಿದ್ದು, ಪ್ರತಿ ವರ್ಷ ವಿಜೃಂಭಣೆಯಿಂದ ನಡೆಯುವ ಹಿಂದೂ ಮಹಾಸಭಾ ಗಣೇಶನ ವಿಸರ್ಜನಾ ಮೆರವಣಿಗೆ ರಾಜ್ಯದ ಗಮನ ಸೆಳೆದಿದೆ. ನಗರದ ಕೋಟೆ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪ ನಾಯಕವೃತ್ತ, ಅಮೀರ್ ಅಹ್ಮದ್ ವೃತ್ತ, ನೆಹರು ರಸ್ತೆ, ಗೋಪಿ ವೃತ್ತ, ಎಂಆರ್ ಎಸ್ ಸರ್ಕಲ್…

Read More

ದಾವಣಗೆರೆ : ಕಳೆದ ಕೆಲವು ತಿಂಗಳ ಹಿಂದೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸರಣಿ ಆತ್ಮಹತ್ಯೆ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಸಂಬಂಧ ರಾಜ್ಯ ಸರ್ಕಾರ ಕೂಡ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಡೆಗೆ ಹೊಸ ಕಾನೂನು ಜಾರಿ ಮಾಡಿತ್ತು. ಆದರೂ ಸಹ ಇಂದಿನವರೆಗೂ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಪ್ಪಿಲ್ಲ. ಇದೀಗ ದಾವಣಗೆರೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್‌ನಿಂದ ಪಡೆದಿದ್ದ ಸಾಲದ 2 ತಿಂಗಳ ಕಂತು ಕಟ್ಟಲಿಲ್ಲವೆಂಬ ಕಾರಣಕ್ಕೆ ಬ್ಯಾಂಕ್, ಫೈನಾನ್ಸ್ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡಿದ್ದರಿಂದ ನೊಂದ ವ್ಯಕ್ತಿಯೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಿರಮಗೊಂಡನಹಳ್ಳಿಯ ಚಿತ್ರಲಿಂಗ (31) ಎಂದು ತಿಳಿದುಬಂದಿದೆ. ಈತ ಖಾಸಗಿ ಫೈನಾನ್ಸ್‌ನಲ್ಲಿ ಸಾಲ ಮಾಡಿಕೊಂಡಿದ್ದು, 2…

Read More

ಉತ್ತರಕನ್ನಡ : ಅಡಕೆ ತೋಟಕ್ಕೆ ಬಳಸುತ್ತಿದ್ದ ಏರ್‌ಗನ್ ನಿಂದ ವ್ಯಕ್ತಿ ಗುಂಡು ಹಾರಿಸಿದ್ದರಿಂದ 9 ವರ್ಷದ ಬಾಲಕ ಮೃತಪಟ್ಟಿರುವ ಉ.ಕನ್ನಡದ ಘಟನೆ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿ ಚಿಪಗಿ ಸಮೀಪದ ಸೋಮನಳ್ಳಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಹೊಸಕಿತ್ತೂರಿನ ಕರಿ ಯಪ್ಪಬಸಪ್ಪ ಉಂಡಿ (9) ಮೃತ ಬಾಲಕ ಎಂದು ತಿಳಿದುಬಂದಿದೆ. ಕೊಲೆ ಆರೋಪದ ಮೇಲೆ ನಿತೀಶ ಲಕ್ಷ್ಮಣ ಗೌಡ ಲೈಸನ್ಸ್ ಪಡೆಯದೇ ಏರ್ ಗನ್ ಇಟ್ಟುಕೊಂಡಿದ್ದ ರಾಘವ ಹೆಗಡೆ ಎಂಬುವರನ್ನು ಬಂಧಿಸಲಾಗಿದೆ. ಹೊಸಕಿತ್ತೂರಿನ ಬಸಪ್ಪ ಉಂಡಿ ಎನ್ನು ವವರು ತನ್ನ ಪತ್ನಿ ಹಾಗೂ ಮೂವರು ಮಕ್ಕಳ ಜತೆ ಸೋಮನಳ್ಳಿಯಲ್ಲಿ ವಾಸವಿದ್ದು, ರಾಘವ ಹೆಗಡೆ ಅವರ ತೋಟದ ಕೆಲಸ ಮಾಡಿಕೊಂಡಿದ್ದರು. ರಾಘವ ಲೈಸನ್ಸ್ ಇಲ್ಲದ ಏರ್‌ಗನ್ ಇಟ್ಟುಕೊಂಡು ತೋಟದಲ್ಲಿ ಮಂಗಗಳ ಉಪಟಳ ನಿಯಂತ್ರಿಸಲು ನಿತೀಶ, ಲಕ್ಷ್ಮಣಗೌಡಗೆ ನೀಡಿದ್ದರು. ಈ ಮೂವರು ಮಕ್ಕಳು ಶುಕ್ರವಾರ ಆಟವಾಡುವಾಗ ನಿತೀಶ ಗೌಡ ಮಕ್ಕಳನ್ನು ಬೆದರಿಸುತ್ತಾ ಏರ್‌ಗನ್‌ನಿಂದ ಕರಿಯಪ್ಪನ ಎದೆಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ ಎಂದು ಬಾಲಕನ ತಾಯಿ…

Read More

ಬೆಂಗಳೂರು : GST ಸರಳೀಕರಣದಿಂದ ರಾಜ್ಯಕ್ಕೆ 15,000 ದಿಂದ 20,000 ಕೋಟಿ ರು. ನಷ್ಟ ಉಂಟಾಗಲಿದೆ. ಆದರೂ ಜನರ ಆರ್ಥಿಕ ಭಾರ ತಗ್ಗಿಸುವ ಸಲುವಾಗಿ ಈ ನಿರ್ಧಾರ ಸ್ವಾಗತಿಸುತ್ತೇವೆ. ಆದರೆ ದುರುಪಯೋಗ ಮಾಡಿಕೊಳ್ಳದಂತೆ ತಡೆಯ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಜಿಎಸ್‌ಟಿ ಸರಳೀಕರಣ ಎಂಬುದು ಮೋದಿ ಸರ್ಕಾರದ ಹೊಸ ಅವಿಷ್ಕಾರವೇನಲ್ಲ. ಅತ್ಯಂತ ಅವಸರದಲ್ಲಿ ಎನ್‌ಡಿಎ ಸರ್ಕಾರ 2017ರಲ್ಲಿ ದೋಷ ಪೂರ್ಣ ಜಿಎಸ್‌ಟಿ ಜಾರಿಗೊಳಿಸಿದಾಗಲೇ ರಾಹುಲ್ ಗಾಂಧಿ ಮತ್ತು ವಿರೋಧ ಪಕ್ಷಗಳ ನಾಯಕರು ಸುಧಾ ರಣೆಗೆ ಒತ್ತಾಯಿಸಿದ್ದರು. ಗಬ್ಬರ್‌ಸಿಂಗ್ ತೆರಿಗೆ ದೇಶದ ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಿದ್ದನ್ನು ಸಾಕ್ಷ್ಯ ಸಹಿತ ಬಹಿರಂಗಪಡಿಸಿದ್ದರು. ಕೊನೆಗೂ ಮೋದಿ ಎಚ್ಚೆತ್ತು ಕೊಂಡಿದ್ದಾರೆ ಎಂದು ಹೇಳಿದ್ದಾರೆ. ವಾಸ್ತವದಲ್ಲಿ ಜಿಎಸ್‌ಟಿ ತೆರಿಗೆ ವ್ಯವಸ್ಥೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಕಪಿಮುಷ್ಟಿಯಲ್ಲಿದೆ. ಇದೀಗ ರಾಜ್ಯಗಳ ಒತ್ತಾಯದಿಂದ ಜಿಎಸ್‌ಟಿ ಸರಳೀಕರಣಕ್ಕೆ ಮುಂದಾಗಿದ್ದಾರೆ. ಜಿಎಸ್ಟಿ ಸುಧಾರಣೆಯ ಲಾಭ ಬಳಕೆದಾರ ಜನತೆಗೆ ತಲುಪುವಂತೆ ಮಾಡುವುದು ಕೇಂದ್ರ ಸರ್ಕಾರ…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಬಳಸುವ ಸರ್ಕಾರಿ ಕಾರಿನ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಮೇಲೆ 2000 ರು. ದಂಡ ಪಾವತಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಎಕ್ಸ್ ತಾಣದಲ್ಲಿ ‘ಆರ್‌ಸಿ ಬೆಂಗಳೂರು’ ಹೆಸರಿನ ಖಾತೆಯಲ್ಲಿ ಮುಖ್ಯಮಂತ್ರಿ ಕಾರಿನ ಫೋಟೋ ಪೋಸ್ಟ್ ಹಾಕಲಾಗಿದೆ. ಸಿಎಂ ಸರ್ಕಾರಿ ಕಾರು ಕೆಎ-05, ಜಿಎ- 2023 ಕಾರಿನ ಮೇಲೆ ನಿಯಮ ಉಲ್ಲಂಘನೆ ಸಂಬಂಧ 7 ಕೇಸ್ ಬಾಕಿ ಇದ್ದು, 2000 ರು. ದಂಡ ಪಾವತಿಸ ಬೇಕಿದೆ ಎಂದು ಬರೆಯಲಾಗಿತ್ತು ಈ ಪೈಕಿ 6 ಸಲ ಸೀಟ್ ಬೆಲ್ಟ್ ಧರಿಸದೆ, ಒಮ್ಮೆ ವೇಗವಾಗಿ ಚಾಲನೆಗೆ ದಂಡ ಬಿದ್ದಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರಿನ ಮೇಲೆ ಹಾಕಲಾಗಿರುವ ದಂಡ ಪಾವತಿಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನಲ್ಲಿ ಎಗ್ಗಿಲ್ಲದೆ ಒಸಿ ಮಟ್ಕಾ ದಂಧೆ ನಡೆಯುತ್ತಿದೆ. ಯಾವುದೇ ಪೊಲೀಸರ ಭಯ ಇಲ್ಲದೆ ಮಟ್ಕಾ ದಂಧೆ ನಡೆಸುತ್ತಿದ್ದಾರೆ. ಕಂಪ್ಲಿ ಪಟ್ಟಣ ಒಂದರಲ್ಲಿಯೇ ಐದು ಮಟ್ಕಾ ಪಾಯಿಂಟ್ ಗಳಲ್ಲಿ ಈ ಒಂದು ದಂಧೆ ನಡೆಸಲಾಗುತ್ತಿದೆ. ಅಷ್ಟೆ ಅಲ್ಲದೇ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿಯೇ ಮಟ್ಕಾ ದಂಧೆ ನಡೆಯುತ್ತಿದ್ದು, ಪೊಲೀಸರು ಇದಕ್ಕೆ ಸಾತ್ ನೀಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಇದನ್ನು ಬಯಲು ಮಾಡಲು ಸ್ಥಳೀಯ ನಿವಾಸಿ ನಾರಾಯಣ ಸ್ವಾಮಿ ತೆರಳಿದ್ದಾರೆ. ಈ ವೇಳೆ ಮೊಬೈಲ್ ನಲ್ಲಿ ದಂಧೆಯ ಚಿತ್ರೀಕರಣ ಮಾಡಿದ್ದಾರೆ. ಈ ವೇಳೆ ಮಟ್ಕಾ ದಂದೆಕೋರರು ನಾರಾಯಣಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ಹಲ್ಲೆಗೆ ಒಳಗಾದಂತಹ ನಾರಾಯಣ ಸ್ವಾಮಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಟ್ಕಾ ದಂಧೆಯ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆರೋಪ ಕೇಳಿ ಬಂದಿದೆ. ಮಟ್ಕಾ ದಂದೆ ಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

Read More

ಬೆಂಗಳೂರು : ಜುವೆಲ್ಲರೀ ಶಾಪಿಗೆ ನುಗ್ಗಿ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.ಜೂನ್ 25 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಾಚೋಹಳ್ಳಿಯಲ್ಲಿ ದರೋಡೆ ಪ್ರಕರಣ ನಡೆದಿತ್ತು. ಇದೀಗ ಮಾದನಾಯಕನಹಳ್ಳಿ ಪೊಲೀಸ್ರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮೊಹಮ್ಮದ್ ರಫೀಕ್, ನೌಶಾದ್ ಹಾಗೂ ಮೊಹಮ್ಮದ್ ಇಬ್ತೆಹಾರ್ ಆರೋಪಿಗಳು ಎಂದು ತಿಳಿದು ಬಂದಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದರೋಡೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಮಾಚೋಹಳ್ಳಿಯಲ್ಲಿ ಜುವೆಲರಿ ಶಾಪ್ ಗೆ ನುಗ್ಗಿ ದರೋಡೆ ಮಾಡಿದ್ದರು ಇಡೀ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನೇ ಈ ಒಂದು ದರೋಡೆ ಪ್ರಕರಣ ಬೆಚ್ಚಿ ಬೀಳಿಸಿತ್ತು. ಪ್ಲಾಸ್ಟಿಕ್ ಗನ್ ಹಿಡಿದು ಈ ಗ್ಯಾಂಗ್ ಗೋಲ್ಡ್ ಶಾಪ್ ರಾಬರಿ ಮಾಡಿತ್ತು. 90 ಗ್ರಾಮ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಂದಿದ್ದರಿಂದ 30 ಲಕ್ಷ ಮೌಲ್ಯದ 90 ಗ್ರಾಮ್ ಚಿನ್ನಾಭರಣ ಎರಡು…

Read More

ಕಲಬುರ್ಗಿ : ರಾಜ್ಯದಲ್ಲಿ ಹೃದಯಾಘಾತಕ್ಕೆ ಇದೀಗ ಮತ್ತೊಂದು ಬಲಿಯಾಗಿದೆ. ಕರ್ತವ ನಿರತ ಹೆಡ್ ಕಾನ್ಸ್ಟೇಬಲ್ ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೆಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಳಖೆಡ ಠಾಣೆಯ ಹೆಡ್ ಕಾನ್ಸ್ಟೇಬಲ್ ಮನೋಹರ್ ಪವಾರ್ (46) ಸಾವನ್ನಪ್ಪಿದ್ದಾರೆ. ನಿನ್ನೆ ಕರ್ತವ್ಯದ ಮೇಲೆ ಸೇಡಂ ಪಟ್ಟಣಕ್ಕೆ ಮನೋಹರ ಆಗಮಿಸಿದ್ದರು ಈ ವೇಳೆ ಹೃದಯಘಾತದಿಂದ ಹೆಡ್ ಕಾನ್ಸ್ಟೇಬಲ್ ಮನೋಹರ್ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಹಿಟ್ & ರನ್ ಪ್ರಕರಣದಲ್ಲಿ ಇಬ್ಬರು ಬೈಕ್ ಸಮಾರರು ದುರ್ಮರಣ ಹೊಂದಿದ್ದಾರೆ. ಈ ಒಂದು ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರುಗೋಡ ಗ್ರಾಮದ ಹೊರ ವಲಯದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ಇದ್ದಂತಹ ವಿಶಾಲ ಲಮಾಣಿ (20) ಅಪ್ಪು ಲಮಾಣಿ (23) ಸಾವನ್ನಪ್ಪಿದ್ದಾರೆ ಮೃತರು ಸವದತ್ತಿ ತಾಲೂಕಿನ ಹುಲಿಕೇರಿ ತಾಂಡಾದ ನಿವಾಸಿಗಳು ಎಂದು ತಿಳಿದುಬಂದಿದೆ. ಬೈಕ್ ಡಿಕ್ಕಿ ಹೊಡೆದು ಅಪರಿಚಿತ ವಾಹನ ಸಮೇತ ಚಾಲಕ ಪರಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಲಗಿ-ಮುರಗೋಡ ರಸ್ತೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಘಟನೆ ಕುರಿತಂತೆ ಮುರುಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More