Author: kannadanewsnow05

ಹಾವೇರಿ : ಹಾನಗಲ್ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಜನವರಿ 20ರಂದು ಹಾವೇರಿಯಲ್ಲಿ ಪ್ರತಿಭಟನೆಗೆ ನಿರ್ಧರಿಸಿದೆ ಅಂದು ಮಧ್ಯಾಹ್ನದ ಎಸ್ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿದೆ. ಅಂದು ಮಧ್ಯಾಹ್ನ ಎಸ್ಪಿ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿದ್ದು, ಬಸವರಾಜ್ ಬೊಮ್ಮಾಯಿ ಆರ್ ಅಶೋಕ್ ಪ್ರತಿಭಟನೆಯ ನೇತೃತ್ವವನ್ನು ವಹಿಸಲಿದ್ದಾರೆ.ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಈ ಪ್ರಕರಣ ಸಂಬಂಧ ಪೊಲೀಸರು ಇದುವರೆಗೂ 8 ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಅವ್ರು ಹಾಕಿದ್ದು ಈ ಘಟನೆಯನ್ನು ವಹಿಸುವಂತೆ ಆಗ್ರಹಿಸುತ್ತಿದ್ದಾರೆ. ಅದರ ಭಾಗವಾಗಿ ಜನವರಿ 20 ಶನಿವಾರದಂದು ಹಾವೇರಿಯ ಎಸ್‌ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ಇಂದು ನಡೆಯುವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕುರಿತಂತೆ ಚರ್ಚೆ ನಡೆಸುವ ಹಿನ್ನೆಲೆಯಲ್ಲಿ ದಲಿತ ನಾಯಕರು ಅಲರ್ಟ್ ಆಗಿದ್ದು, ಸಚಿವ ಎಚ್ ಸಿ ಮಹದೇವಪ್ಪ ಮನೆಯಲ್ಲಿ ದಲಿತ ನಾಯಕರ ಸಭೆ ನಡೆದಿದೆ.ಮಹದೇವಪ್ಪ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದಿದೆ ಎಂದು ಹೇಳಲಾಗುತ್ತಿದೆ. ಒಳಮೀಸಲಾತಿ ಕುರಿತಂತೆ ದಲಿತ ಸಮುದಾಯದ ಸಚಿವರು ಮುಖಂಡರಿಂದ ಚರ್ಚೆ ನಡೆದಿದ್ದು, ಸಚಿವ ಕೆ. ಹೆಚ್.ಮುನಿಯಪ್ಪ ರಾಜ್ಯಸಭಾ ಸದಸ್ಯ ಎಲ್ ಹನುಮಂತಯ್ಯ, ಪರಿಷತ್ ಸದಸ್ಯರಾದ ಸುಧಾಮದಾಸ್, ಡಾ. ತಿಮ್ಮಯ್ಯ ಭಾಗಿಯಾಗಿದ್ದು ಒಳ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಂಪುಟದಲ್ಲಿ ತೀರ್ಮಾನ : ಗೃಹ ಸಚಿವರು ಒಳ ಮೀಸಲಾತಿ ಕುರಿತಂತೆ ಇಂದು ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಲ್ಲಿ ಗೃಹ ಖಾತೆ ಸಚಿವ ಡಾ.…

Read More

ಬೆಂಗಳೂರು : ಒಳ ಮೀಸಲಾತಿ ಕುರಿತಂತೆ ಇಂದು ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಗ್ರಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಲ್ಲಿ ಗೃಹ ಖಾತೆ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶ ಮಾಡಿ ನಿರ್ಣಯ ತೆಗೆದುಕೊಂಡಿದ್ದು, ನ್ಯಾ. ಸದಾಶಿವ ಆಯೋಗದ ವರದಿ ಬಗ್ಗೆ ನಿರ್ಣಯಕ್ಕೆ ತೀರ್ಮಾನಿಸಲಾಗಿದೆ. ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ವರದಿಯನ್ನೇ ತಿರಸ್ಕಾರ ಮಾಡಿದರು ಎಂದು ಅವರು ತಿಳಿಸಿದರು. ಕಾನೂನಾತ್ಮಕವಾಗಿ ಒಳ ಮೀಸಲಾತಿಯನ್ನು ಕೊಡಬೇಕಾಗುತ್ತದೆ.ನಾವೇ ಸವಿಧಾನಕ್ಕೆ ತಿದ್ದುಪಡಿ ತರಲು ಆಗುವುದಿಲ್ಲ.ಶಿಫಾರಸು ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಗ್ರಹ ಖಾತೆ ಸಚಿವಾಜಿ ಪರಮೇಶ್ವರ್ ತಿಳಿಸಿದರು.

Read More

ಬೆಂಗಳೂರು : ಬೆಂಗಳೂರಲ್ಲಿ ಕಾಮುಕರ ಅಟ್ಟಹಾಸ ನಿಲ್ಲುತ್ತಿಲ್ಲ ಇದೀಗ ಮತ್ತೆ ಅವರ ಅಟ್ಟಹಾಸ ಮುಂದುವರೆದಿದ್ದು ಯುವತಿಯನ್ನು ಟಚ್ ಮಾಡಿ ಯುವಕನೋರ್ವ ವಿಕೃತಿ ಮೇರೆದಿದ್ದಾನೆ ಹೋಟೆಲ್ಗೆ ಬಂದಂತಹ ಯುವತಿಯ ಜೊತೆಗೆ ಗಲಾಟೆ ಕೂಡ ಆಗಿದ್ದು ವಿಜಯನಗರದ ನಮೂರ ಹೋಟೆಲ್ ನಲ್ಲಿ ಈ ದುರ್ಘಟನೆ ನಡೆದಿದೆ. ಕಾಮುಕ ಯುವಕನೊಬ್ಬ ವಿಕೃತಿ ಮೆರೆದಿರುವ ಘಟನೆಯು ಸಿಸಿಟಿವಿಯಲ್ಲಿ ಕಾಮುಕನ ಕೃತ್ಯದ ದೃಶ್ಯ ಸಂಪೂರ್ಣವಾಗಿ ಸೆರೆಯಾಗಿದೆ.ಯುವತಿನ ಟಚ್ ಮಾಡುವ ಮೊದಲೇ ಮೂವರು ಯುವಕರು ಪ್ಲಾನ್ ಮಾಡಿಕೊಂಡಿರುತ್ತಾರೆ. ಮೂವರಿಂದ ಈ ಕುರಿತು ಪ್ಲಾನ್ ಕೂಡ ನಡೆದಿರುತ್ತದೆ ಎನ್ನಲಾಗುತ್ತದೆ. ಘಟನೆ ಸಂಭಂದ ಜನವರಿ 10ರಂದು ಈ ಕುರಿತು ವಿಜಯನಗರ ಠಾಣೆಯಲ್ಲಿ FIR ದಾಖಲಾಗಿದೆ. ಇದೀಗ ಆರೋಪಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಅಲ್ಲದೆ ಕಳೆದ ಬಾರಿ ಕೂಡ ಮಾಲ್ ಒಂದರಲ್ಲಿ ಯುವತಿಯ ಜೊತೆಗೆ ಹಿರಿಯ ನಾಗರಿಕರು ಒಬ್ಬರು ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿತ್ತು. ಇದೀಗ ಮತ್ತೆ ಕಾಮುಕರು ವಿಕೃತಿ ಮೆರೆದಿದ್ದು ಯುವತಿಯನ್ನು ಟಚ್ ಮಾಡುವ ಮೂಲಕ ಅಸಭ್ಯ ವರ್ತನೆ ತೋರಿದ್ದಾರೆ. ತಕ್ಷಣ…

Read More

ಕಲಬುರಗಿ : ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಕಲಬುರ್ಗಿಗೆ ಆಗಮಿಸಲಿದ್ದು ಈ ಹಿನ್ನಲೆಯಲ್ಲಿ ಕಲ್ಬುರ್ಗಿಯ ವಿಮಾನ ನಿಲ್ದಾಣದ ಸುತ್ತಮುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಿಆರ್ಪಿಸಿ ಸೆಕ್ಷನ್ 144ರ ಅಡಿ ಗ್ರೌಂಡ್ ಹೋರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಭದ್ರತಾ ದೃಷ್ಟಿಯಿಂದ ಡ್ರೋನ್ ಕ್ಯಾಮರಾ ಹಾರಾಟ ನಿಷೇಧಿಸಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಾಗಿದೆಎಂದು ತಿಳಿದುಬಂದಿದೆ.ನಾಳೆ ಬೆಳಿಗ್ಗೆ ಆರರಿಂದ ಸಂಜೆ ಆರು ಗಂಟೆವರೆಗೆ ಡ್ರೋನ್ ಹಾರಾಟ ನಿಷೇಧವಿರಲಿದೆ. ನಾಳೆ ಬೆಳಗ್ಗೆ 9:40ಕ್ಕೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.ವಿಮಾನ ನಿಲ್ದಾಣದಿಂದ ನೇರವಾಗಿ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಿದ್ದು, ಅಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ವಿತರಿಸಲಿದ್ದಾರೆ. ಸೋಲಾಪುರದಿಂದ ಮಧ್ಯಾನ ಒಂದು ಗಂಟೆಗೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.ನಾಳೆ ಮಧ್ಯಾಹ್ನ 1.05ಕ್ಕೆ ವಿಮಾನ ನಿಲ್ದಾಣದಲ್ಲಿ ಮೋದಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.

Read More

ಚಿಕ್ಕಬಳ್ಳಾಪುರ: ಇತ್ತೀಚಿಗೆ ಗದಗನಲ್ಲಿ ಯಶ್ ಬರ್ತಡೇ ಕಟೌಟ್ ನಿಲ್ಲಿಸಲು ಹೋಗಿ ವಿದ್ಯುತ್ ಅಂತ ಬಲಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಇನ್ನು ಹಸಿರಾಗಿರುವಾಗಲೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್‌ಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ನಡೆದಿದೆ. ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಈ ದುರ್ಘಟನೆ ನಡೆದಿದ್ದು, ಮೀನಾಕ್ಷಿ-ಮೂರ್ತಿ ದಂಪತಿಗಳ ಪುತ್ರ ನಾಗೇಂದ್ರ (8) ಕರೆಂಟ್ ಶಾಕ್‌ನಿಂದ ಮೃತಪಟ್ಟಿದ್ದಾನೆ. ರಸ್ತೆ ದಾಟಲು ಹೋದ ಸಂದರ್ಭ ಟ್ರಾನ್ಸ್‌ಫಾರ್ಮರ್ ಗ್ರೌಂಡಿಂಗ್ ವೈರ್‌ನಿಂದ ವಿದ್ಯುತ್ ಶಾಕ್ ತಗುಲಿ ಬಾಲಕ ಕೊನೆಯುಸಿರೆಳೆದಿದ್ದಾನೆ. ರಸ್ತೆ ಅಗಲೀಕರಣಕ್ಕಾಗಿ ಟ್ರಾನ್ಸ್‌ಫಾರ್ಮರ್ ಬಳಿ ಮಣ್ಣು ತೆಗೆಯಲಾಗಿತ್ತು. ಮಣ್ಣು ತೆಗೆದ ಪರಿಣಾಮ ಹೊಂಡದಲ್ಲಿ ನೀರು ಶೇಖರಣೆಯಾಗಿದೆ. ರಸ್ತೆ ದಾಟಲು ಟ್ರಾನ್ಸ್‌ಫಾರ್ಮರ್ ಬದಿಯಲ್ಲಿ ಹೋಗುವಾಗ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಕಳೆದ ವರ್ಷ ಬೆಂಗಳೂರಿನಲ್ಲಿ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ ಸಂದರ್ಭದಲ್ಲಿ ತಾಯಿ ಮಗಳು ರಸ್ತೆಯಲ್ಲಿ ತುಂಡಾಗಿ…

Read More

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಶ್ರೀಗಳಿಂದ ಗುರುವಾರ ರಾಜಾಂಗಣದಲ್ಲಿ ಸಾರ್ವಜನಿಕ ದರ್ಬಾರ್ ನೆರವೇರಿತು. ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ಇತರ ಮಠಗಳ ಶ್ರೀಗಳು ಗೈರಾಗುತ್ತಿದ್ದಾರೆ. ಇದರೊಂದಿಗೆ 2008ರ ಇತಿಹಾಸ ಪುನರಾವರ್ತನೆಯಾದಂತಾಗಿದೆ. ಸಂಪ್ರದಾಯದಂತೆ ಮೊದಲು ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಕೃಷ್ಣ ಮಠದಲ್ಲಿ ಖಾಸಗಿ ದರ್ಬಾರ್ ನಡೆಸಿದರು. ನಂತರ ಸಾರ್ವಜನಿಕ ದರ್ಬಾರ್​‌ನಲ್ಲಿ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಭಾಗಿಯಾದರು. ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರ ಸಾರ್ವಜನಿಕ ಪರ್ಯಾಯ ದರ್ಬಾರ್​​​ನಲ್ಲಿ ಅನೇಕ ರಾಜಕೀಯ ಮುಖಂಡರೂ ಭಾಗವಹಿಸಿದರು. ಇದಕ್ಕೂ ಮುನ್ನ ನಡೆದ ಮೆರವಣಿಗೆಯಲ್ಲಿ ಅಯೋಧ್ಯೆಯ ರಾಮಮಂದಿರ ನಿರ್ಮಾಣವನ್ನು ಸಂಕೇತಿಸುವ ಟ್ಯಾಬ್ಲೋ ಸೇರಿದಂತೆ ಹತ್ತಾರು ಟ್ಯಾಬ್ಲೋಗಳು ಗಮನ ಸೆಳೆದವು. 2008 ರಲ್ಲಿ ಕೂಡ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ವಿರೋಧ ವ್ಯಕ್ತವಾಗಿತ್ತು. ಆ ಸಂದರ್ಭ ಅಂದಿನ ಶೀರೂರು ಶ್ರೀಗಳು ಅವರ ಜೊತೆ ನಿಂತಿದ್ದರು. ಉಳಿದ 6 ಮಠಗಳ ಶ್ರೀಗಳು ಪರ್ಯಾಯದಿಂದ ದೂರ ಉಳಿದಿದ್ದರು.ಸ್ಪೀಕರ್ ಯು.ಟಿ ಖಾದರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ‌ಮಾಜಿ ಸಿಎಂ…

Read More

ಬೆಳಗಾವಿ : ಮೋದಿಯವರನ್ನು ಮತ್ತೆ ಗೆಲ್ಲಿಸಬೇಕೆಂಬುದು ದೇವರ ನಿರ್ಣಯವಾಗಿದೆ ಅಡ್ವಾಣಿ ವಾಜಪೇಯಿ ರಾಮಮಂದಿರಕ್ಕಾಗಿ ಯಾತ್ರೆ ಮಾಡಿದ್ರು ಅಂದು ಯಾತ್ರೆಯಲ್ಲಿ ಕೋಟ್ಯಾಂತರ ಜನ ಭಾಗಿಯಾಗಿದ್ದರು ಆದರೆ ರಾಮ ಆಯ್ಕೆ ಮಾಡಿಕೊಂಡಿದ್ದು ಮೋದಿ ಕೈಯಲ್ಲಿ ಪ್ರತಿಷ್ಠಾಪಿಸಲು ಇದು ದೇವರ ನಿರ್ಣಯ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದರು. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಈ ಬಾರಿಯೂ ನನ್ನನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು. ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿರಲಿಲ್ಲ ಈ ಕಳೆದ ಬಾರಿ ಚುನಾವಣೆಯಲ್ಲಿ ಮೊದಲ ಬಾರಿ ಕಾಂಗ್ರೆಸ್ ಗೆದ್ದಿತು. ಎಂಇಎಸ್ ಗೆದ್ದಿದರೆ ನಮ್ಮ ಸಹೋದರ ಗೆದ್ದಿದ್ದಾರೆ ಅಂದುಕೊಳ್ಳಬಹುದಿತ್ತು ಎನ್ನುವ ಮೂಲಕ MES ಪುಂಡರನ್ನು ಸಂಸದ ಸಹೋದರರು ಎಂದು ಕರೆದರು. ಈ ಬಾರಿ ಮತ್ತೆ ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದ್ದಾರೆ. ಕಳೆದ ಎರಡು ವರ್ಷದಿಂದ ಖಾನಾಪುರಕ್ಕೆ ಬರಲು ಆಗಿರಲಿಲ್ಲ. ನನ್ನ ಆರೋಗ್ಯ ಸರಿ ಇಲ್ಲದ ಕಾರಣ ಖಾನಾಪುರಕ್ಕೆ ಬರಲು ಆಗಿರಲಿಲ್ಲ. ಈ ಸಂದರ್ಭದಲ್ಲಿ ನಾನು…

Read More

ಬೆಳಗಾವಿ : ನಾವು ಹಿಂದೂಗಳು ಎಂದು ಮರೆತು ಹೋಗಿತ್ತು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದ್ರೇ ಅವರ ಜಾತಿ ಹೆಸರು ಹೇಳ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಕೆಲವು ಮಂದಿ ಜಾತ್ಯಾತೀತ ಅಂತಾ ಹೇಳ್ತಾರೆ. ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯಾತೀತ ಅಂತಾ ಹೇಳ್ತಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ದ ಮತ್ತೊಮ್ಮೆ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ. ಈಗಾಗಲೇ ರಾಮ ಮಂದಿರ ಉದ್ಘಾಟನೆ ಅಕ್ಷತೆ ಮನೆ ಮನೆಗೆ ಹೋಗಿದೆ. ಐನೂರು ವರ್ಷದ ನಂತರ ನಮಗೆ ಜಯ ಸಿಕ್ಕಿದೆ. ರಾಮ ಮಂದಿರವನ್ನು ಯಾರೋ ಉದ್ಯಮಿ, ಕೈಗಾರಿಕೋದ್ಯಮಿಗಳು ಕಟ್ಟಿಲ್ಲ. ಹಳ್ಳಿ ಹಳ್ಳಿಯಿಂದ ಇಟ್ಟಿಗೆ ಕಳಿಸಿದ್ದೇವೆ, ಇಡೀ ದೇಶದ ಜನ ಜಾಗೃತರಾಗಿ ಕಟ್ಟಿದ್ದು. ಅಯೋಧ್ಯ ಹಿಂದೂಗಳ ಪ್ರತೀಕ, ಸೌರಾಷ್ಟ್ರದ ಸೋಮನಾಥ ದೇವಾಲಯ ಸರ್ಕಾರ ಕಟ್ಟಿದ್ದು.ರಾಮ ಮಂದಿರ ಸರ್ಕಾರ ಕಟ್ಟಿಲ್ಲ, ಹಿಂದೂಗಳು ಕಟ್ಟಿದ್ದಾರೆ ಎಂದರು ಜಾತಿ ಹೆಸರಲ್ಲಿ, ಭಾಷೆ ಹೆಸರಲ್ಲಿ ನಮ್ಮನ್ನ ಒಡೆದ್ರು. ಮರಾಠಿ, ಕನ್ನಡ ಒಂದಾಗ್ತಾರೆ ಅಂದ್ರೇ…

Read More

ಬೆಂಗಳೂರು : ಖಾಸಗಿ ಬಸ್ ಒಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಓರ್ವ ಸವಾರ ಸಾವನ್ನಪ್ಪಿದ್ದು ಪತ್ನಿ ಹಾಗೂ ಮಗುವಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿ ನಡೆದಿದೆ. ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದು, ಬೈಕ್ ನಲ್ಲಿದ್ದ ಮಹಿಳೆ ಹಾಗೂ ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮೇಲಿನ ನಾಯಕರಂಡಹಳ್ಳಿ ನಿವಾಸಿ ಪ್ರಕಾಶ್ ನಾಯಕ್ (26) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ.ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More