Author: kannadanewsnow05

ಬೆಂಗಳೂರು : ಕಳೆದ ಹಲವು ದಿನಗಳಿಂದ ಮಳೆರಾಯ ತಣ್ಣಗಾಗಿದ್ದ ಎನ್ನುವಷ್ಟರಲ್ಲಿ ಇದೀಗ ಮತ್ತೆ ವರ್ಣಾರ್ಭಟ ಆರಂಭವಾಗಲಿದ್ದು, ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯಕ್ಕೆ ರಾಜ್ಯಾದ್ಯಂತ ಚಳಿಯ ವಾತಾವರಣವಿದೆ.ಆದರೆ ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 18ರಿಂದ ಮಳೆಯಾಗಲಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

Read More

ಬೆಂಗಳೂರು : ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ತಾಲೂಕಿನ ಮಾಯಸಂದ್ರದಲ್ಲಿ ನಡೆದಿದೆ. ಹೌದು ಮಾಯಸಂದ್ರದ ಬಳಿ ರೌಡಿಶೀಟರ್ ಕಾಲಿಗೆ ಪೊಲೀಸರಿಂದ ಫೈರಿಂಗ್ ನಡೆದಿದೆ. ರೌಡಿಶೀಟರ್ ಮನೋಜ್ ಮೇಲೆ ಲೋಕಿ ಗ್ಯಾಂಗ್ ದಾಳಿ ಮಾಡಿತ್ತು. ಘಟನೆ ಬಳಿಕ ಲೋಕಿ ಮತ್ತು ಆತನ ಗ್ಯಾಂಗ್ ತಲೆಮೆರೆಸಿಕೊಂಡಿತ್ತು.ಇಂದು ಬಂಧಿಸಲು ಹೋಗಿದ್ದಾಗ ಪೊಲೀಸರ ಮೇಲೇನೆ ಲೋಕಿ ಹಲ್ಲೆಗೆ ಯತ್ನಿಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಮಾಡಿ ಲೋಕೇಶ್ ಯತ್ನಿಸಿ ಪರಾರಿಯಾಗುವ ವೇಳೆ ಆತ್ಮ ರಕ್ಷಣೆಗಾಗಿ ಜಿಗಣಿ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿದ್ದಾರೆ. ಗಾಯಗೊಂಡಿರುವ ರೌಡಿ ಶೀಟರ್ ಲೋಕಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ನವದೆಹಲಿ : ಖ್ಯಾತ ತಬಲಾ ವಾದಕ ಮತ್ತು ಉಸ್ತಾದ್ ಅಲ್ಲಾ ರಖಾ ಅವರ ಹಿರಿಯ ಪುತ್ರ ಉಸ್ತಾದ್ ಜಾಕೀರ್ ಹುಸೇನ್ ಪ್ರಸ್ತುತ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇದೀಗ ಅವರು ನಿಧನರಾಗಿದ್ದಾರೆ ಬಲ್ಲ ಮೂಲಗಳಿಂದ ಎಂದು ತಿಳಿದುಬಂದಿದೆ.ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವ್ರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಸಧ್ಯ ಜಾಕೀರ್ ಹುಸೇನ್ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಅಂದ್ಹಾಗೆ, ಜಾಕೀರ್ ಹುಸೇನ್ ಅವ್ರ ಹೆಸರನ್ನ ಸಂಗೀತ ಜಗತ್ತಿನಲ್ಲಿ ಗೌರವದಿಂದ ತೆಗೆದುಕೊಳ್ಳಲಾಗುತ್ತದೆ. 9 ಮಾರ್ಚ್ 1951 ರಂದು ಮುಂಬೈನಲ್ಲಿ ಜನಿಸಿದ ಉಸ್ತಾದ್ ಜಾಕಿರ್ ಹುಸೇನ್ ಅವರಿಗೆ 1988ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಮತ್ತು 2023ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನ ನೀಡಲಾಯಿತು. ಜಾಕಿರ್ ಹುಸೇನ್ ಮೂರು ಗ್ರ್ಯಾಮಿ ಪ್ರಶಸ್ತಿಗಳನ್ನ ಸಹ ಪಡೆದಿದ್ದಾರೆ.

Read More

ತುಮಕೂರು : ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದ ಪೊಲೀಸರು ಇದೀಗ ನಿನ್ನೆ ಡ್ರೋನ್ ಪ್ರತಾಪ್ ನ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ. ಇದೀಗ ಡ್ರೋನ್ ಪ್ರತಾಪ್ ಸೇರಿದಂತೆ ಮೂವರ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಲಿದೆ. ಡ್ರೋನ್ ಪ್ರತಾಪ್, ಸ್ನೇಹಿತ ಪ್ರಜ್ವಲ್ ಹಾಗೂ ಕ್ಯಾಮರಾ ಮೆನ್ ವಿನಯ್ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ. ಬೆಳಿಗ್ಗೆ 11:30 ಕ್ಕೆ ತುಮಕೂರು ಜಿಲ್ಲೆಯ ಮಧುಗಿರಿ ಕೋರ್ಟ್ ಗೆ ಮೂವರು ಹಾಜರಾಗಲಿದ್ದಾರೆ. ಕೋರ್ಟಿಗೆ ಮಿಡಿಗೇಶಿ ಪೊಲೀಸರು ಮೂವರನ್ನು ಹಾಜರುಪಡಿಸಲಿದ್ದಾರೆ. ಕೃಷಿಹೊಂಡದಲ್ಲಿ ಡೋಂಡ್ರೋನ್ ಟ್ ಪ್ರತಾಪ್ ಸೋಡಿಯಂ ಎಸೆದು ಸ್ಪೋಟಿಸಿದ್ದ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೊಟಿ ಬಳಿ ಈ ಒಂದು ಘಟನೆ ನಡೆದಿತ್ತು.ಈ ಸಂಬಂಧ ಬಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡ್ರೋನ್ ಪ್ರತಾಪ್ ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು ಶನಿವಾರ ತಡರಾತ್ರಿ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ…

Read More

ಬೆಳಗಾವಿ : ವಕ್ಫ್ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅನ್ವರ್‌ ಮಾಣಿಪ್ಪಾಡಿ ಅವರಿಗೆ 150 ಕೋಟಿ ರೂಪಾಯಿ ಆಮಿಷ ಒಡ್ಡಿರುವ ಆರೋಪ, ಕೋವಿಡ್ ಅಕ್ರಮಗಳ ಕುರಿತ ನ್ಯಾಯಮೂರ್ತಿ ಡಿಕುನ್ಹ ವರದಿ, ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸ್‌ ಪ್ರಕರಣವನ್ನು ವಿಧಾನಮಂಡಲದ ಅಧಿವೇಶನದಲ್ಲಿ ಪ್ರಸ್ತಾಪಿಸಲು ಕಾಂಗ್ರಸ್ ಸಿದ್ಧತೆ ನಡೆಸಿದೆ. ಇಂದಿನಿಂದ ಎರಡನೇ ವಾರದ ವಿಧಾನ ಮಂಡಲದ ಕಲಾಪ ಆರಂಭವಾಗಲಿದ್ದು, ಕಲಾಪದ ವೇಳೆ ಬಳ್ಳಾರಿ ಬೆಳಗಾವಿ ಹಾಗೂ ರಾಯಚೂರು ಜಿಲ್ಲೆಯಲ್ಲಿ ಬಾಣಂತಿಯರ ಹಾಗೂ ಶಿಶುಗಳ ಸಾವು, ಅಲ್ಲದೇ ಅಬಕಾರಿ ಸಚಿವರಿಂದ 700 ಕೋಟಿ ರೂ. ವಸೂಲಿ ಆರೋಪದ ವಿಷಯಗಳನ್ನು ಪ್ರಸ್ತಾಪಿಸಲು ಸಿದ್ಧತೆ ನಡೆಸಿರುವ ಬಿಜೆಪಿಯನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ಪ್ರತಿತಂತ್ರ ರೂಪಿಸಿದೆ. ಕಳೆದ ಶುಕ್ರವಾರ ನಡೆದ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಿವೈ ವಿಜಯೇಂದ್ರ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದರು. ವಕ್ಫ್ ಆಸ್ತಿ ಕಬಳಿಕೆಯಲ್ಲಿ ಮೌನವಾಗಿರಲು ಬಿಜೆಪಿಯ ಮುಖಂಡ ಅನ್ವರ್ ಮಣಿಪಾಡಿಗೆ 150 ಕೋಟಿ ರೂಪಾಯಿ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ನಿನ್ನೆ ಬೆಂಗಳೂರಿನ ಎಚ್ ಬಿ ಆರ್ ಲೇಔಟ್ ಬಳೆ ಕಳ್ಳರಿಬ್ಬರು ಮೊಬೈಲ್ ಕದ್ದುಪರಾರಿಯಾಗಲು ಯತ್ನಿಸಿದಾಗ ಮಾಜಿ ಕಾರ್ಪೊರೇಟರ್ ಗಣೇಶ್ ರೆಡ್ಡಿ ಅವರು ಚೇಸ್ ಮಾಡಿ ಅವರ ಬೈಕ್ ಗೆ ಗುದ್ದಿ ಬೀಳಿಸಿದ್ದ ಘಟನೆ ನಡೆದಿತ್ತು. ಇದೀಗ ತಡರಾತ್ರಿ ಕೂಡ ಬೆಂಗಳೂರಿನ ಶಿವಾಜಿನಗರದಲ್ಲಿ ಮೊಬೈಲ್ ಅಂಗಡಿ ಶಟರ್ ಮುರಿದು ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ ಮಾಡಿದ್ದಾರೆ. ಹೌದು ಬೆಂಗಳೂರಿನ ಶಿವಾಜಿನಗರದ ಬಳಿ ಇರು ವಿಶ್ವಾಸ್ ಕಮ್ಯುನಿಕೇಷನ್ ಎಂಬ ಮೊಬೈಲ್ ಅಂಗಡಿಯ ಶಟರ್ ಮುರಿದ ಬಳಿಕ ಮುಖಕ್ಕೆ ಮಾಸ್ಕ ಧರಿಸಿದ ಖದೀಮರು, ಸಿಸಿಟಿವಿ ಕ್ಯಾಮೆರಾದಲ್ಲಿ ತಮ್ಮ ಮುಖ ಕಾಣಬಾರದೆಂದು ಈ ರೀತಿ ಪ್ಲಾನ್ ಮಾಡಿದ್ದಾರೆ. ಈ ವೇಳೆ ಅವರು ಲಕ್ಷಾಂತರ ಮೌಲ್ಯದ ಮೊಬೈಲ್ ಗಳನ್ನು ಗೋಣಿಚೀಲದಲ್ಲಿ ತುಂಬಿಕೊಂಡು ಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಹೌದು ಬೆಂಗಳೂರಿನಲ್ಲಿ ರಾತ್ರೋರಾತ್ರಿ ಮೊಬೈಲ್ ಕಳ್ಳತನ ಮಾಡಲಾಗಿದೆ. ರಾತ್ರೋರಾತ್ರಿ ಮೊಬೈಲ್ ಅಂಗಡಿ ಲೂಟಿ ಮಾಡಿದ್ದಾರೆ. ಶೆಟರ್ ಮುರಿದು,…

Read More

ಬೆಂಗಳೂರು : ಬಿಜೆಪಿ ಮುಖಂಡ ಅನ್ವರ್ ಮಣಪ್ಪಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ವಕ್ಫ್ ವಿಚಾರವಾಗಿ ಮೌನವಹಿಸುವಂತೆ 150 ಕೋಟಿ ರೂಪಾಯಿ ಆಫರ್ ನೀಡಿದರು ಎಂಬ ಕಾಂಗ್ರೆಸ್ ಆರೋಪದ ವಿಚಾರವಾಗಿ ಸಚಿವ ಕೃಷ್ಣ ಭೈರೇಗೌಡ ಈ ಪ್ರಕರಣದ ಕುರಿತಂತೆ ಬಿವೈ ವಿಜಯೇಂದ್ರ ವಿರುದ್ಧ ಸಿಬಿಐ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಕೃಷ್ಣಭೈರೇಗೌಡ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮೇಲೆ ಬಿಜೆಪಿ ಮುಖಂಡರೇ ಆದ ಅನ್ವರ್ ಮಾಣಪ್ಪಾಡಿ 150 ಕೋಟಿ ರು. ಆಮಿಷದ ಆರೋಪ ಮಾಡಿದ್ದರೂ ಸಿಬಿಐ ಹಾಗೂ ಇಡಿ ಏನು ಮಾಡುತ್ತಿವೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಆಕ್ರೋಶ ಹೊರ ಹಾಕಿದರು. ಶಾಸಕ ಬಸನಗೌಡ ಯತ್ನಾಳ ಕೂಡ ಇದೇ ವಿಚಾರವನ್ನು ಬೇರೆ ಬೇರೆ ರೀತಿಯಲ್ಲಿ ಹೇಳಿದ್ದಾರೆ. ಹೀಗಾಗಿ ಸಿಬಿಐ ತನಿಖೆ ನಡೆಯಬೇಕು ಎಂದರು. ಸುಳ್ಳು ಆರೋಪಿಗಳಿಗೆಲ್ಲಾ ಇ.ಡಿ ಹಾಗೂ ಸಿಬಿಐ…

Read More

ಮಂಡ್ಯ : ಮಂಡ್ಯದಲ್ಲಿ ಒಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ದುಷ್ಕರ್ಮಿಗಳು ಸರ್ಕಾರದ ಲಾಂಛನ ಹಾಗೂ ಅಬಕಾರಿ ಇಲಾಖೆಯ ಚಿನ್ಹೆಯನ್ನು ಬಳಸಿ ನಕಲಿ ಮದ್ಯ ತಯಾರಿಸಿ ಮಾರಾಟ ಮಾಡುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಹೌದು ಮಂಡ್ಯದಲ್ಲಿ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ನಕಲಿ ಮದ್ಯ ತಯಾರಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಮಂಡ್ಯ ನಗರದಲ್ಲಿ ನಕಲಿ ಮದ್ಯದ ದಂಧೆ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಸರ್ಕಾರದ ಲಾಂಛನ ಜಗು ಅಬಕಾರಿ ಇಲಾಖೆಯ ಚಿಹ್ನೆ ಬಳಸಿ ನಕಲಿ ಮದ್ಯ ತಯಾರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ವೇಳೆ ದಾಳಿ ಮಾಡಿದ ಪೊಲೀಸರು ಸುಮಾರು 20 ಲಕ್ಷಕ್ಕೂ ಹೆಚ್ಚು ಮೌಲ್ಯದ ನಕಲಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಗ್ಯಾಂಗೊಂದು ಮನೆಯೊಂದನ್ನು ಬಾಡಿಗೆ ಪಡೆದು ‘ಕಾಮಧೇನು ಕಂಫರ್ಟ್ಸ್’ ಅನ್ನೋ ಹೆಸರಲ್ಲಿ ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಮದ್ಯ ತಯಾರಿಕೆ ದಂಧೆ ನಡೆಸುತ್ತಿತ್ತು. ಮನೆಯಲ್ಲೇ ಮದ್ಯದ ಸ್ಯಾಚೆಟ್, ಸ್ಟಿಕ್ಕರ್ ತಯಾರಿಸುವ ಯಂತ್ರ ಇಟ್ಟುಕೊಂಡಿದ್ದರು. ಕರ್ನಾಟಕ ಸರ್ಕಾರದ ಲಾಂಛನ, ಅಬಕಾರಿ ಇಲಾಖೆ ಚಿಹ್ನೆಯನ್ನೂ ಬಳಕೆ ಮಾಡುತ್ತಿದ್ದರು ಎಂದು…

Read More

ಉಡುಪಿ : ಯುವ ಕ್ರಿಕೆಟಿಗನೊಬ್ಬ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಮೃತ ಯುವಕನನ್ನು ಉದ್ಯಾವರ ಕೇದಾರ್‌ ಬೊಳ್ಜೆ ನಿವಾಸಿ, ಯುವ ಕ್ರಿಕೆಟರ್‌ ಆದಿತ್ಯ (24) ಎಂದು ತಿಳಿಸಿದರು. ಆದಿತ್ಯ ಶನಿವಾರ ರಾತ್ರಿ ಪೆರಂಪಳ್ಳಿಯಲ್ಲಿ ನಡೆದ ಕ್ರಿಕೆಟ್‌ ಪಂದ್ಯಾಟದಲ್ಲಿ ತನ್ನ ತಂಡದೊಂದಿಗೆ ಭಾಗವಹಿಸಿದ್ದ. ಬಳಿಕ ರವಿವಾರ ಮುಂಜಾನೆ 3 ಗಂಟೆಗೆ ಮನೆಗೆ ಬಂದ ಬಳಿಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಇ ವೇಳೆ ಬೆಳಗ್ಗೆ 7.30ಕ್ಕೆ ಅಜ್ಜಿ ಬಾಗಿಲು ಬಡಿದಾಗ, ಬಾಗಿಲು ತೆರೆಯದೇ ಇದ್ದು ಕಿಟಕಿಯಿಂದ ಇಣುಕಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ತಂದೆ ತಾಯಿ ಇಲ್ಲದೆ ಅಜ್ಜಿ ಮತ್ತು ಸಹೋದರನ ಹತ್ತಿರ ಬೆಳೆದಿರುವ ಆದಿತ್ಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆತನ ಸಹೋದರ ಸಚಿನ್‌ ಅವರು ನೀಡಿರುವ ದೂರಿನಂತೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಶುಕ್ರವಾರ ಹೈಕೋರ್ಟ್ ನಟ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತ್ತು. ಆದರೆ ಕೆಲವು ಕಾನೂನು ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಇಂದು ಡಿ ಗ್ಯಾಂಗ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಹೌದು ಕಳೆದ ಶುಕ್ರವಾರ ಕೊಲೆ ಆರೋಪಿಯಾಗಿರುವಂತಹ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಅನುಕುಮಾರ್, ಪ್ರದೋಷ್ ಜಗದೀಶ್, ಲಕ್ಷ್ಮಣ್ ಹಾಗೂ ನಾಗರಾಜುಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಇತ್ತ ಬೆನ್ನು ನೋವಿನ ಸಮಸ್ಯೆ ತಿಳಿಸಿ ಬಳ್ಳಾರಿ ಜಿಲ್ಲೆಯ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಎಂದು ದಾಖಲಾಗಿದ್ದರು. ಈ ವೇಳೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿತ್ತು. ಈ ಒಂದು ಪ್ರಕರಣದಲ್ಲಿ ಜಾಮೀನು ಪಡೆದುಕೊಂಡ ಆರೋಪಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇದ್ದಾರೆ. ಪವಿತ್ರಾಗೌಡ ಅನು ಕುಮಾರ್ ಪ್ರದೋಷ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರೆ, ಇನ್ನೂ ಜಗದೀಶ್…

Read More