Author: kannadanewsnow05

ಬೆಂಗಳೂರು : ಒಂದು ಕಡೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಕಾಂಗ್ರೆಸ್ ಪಾಳಯದಲ್ಲಿ ಕೇಳಿಬರುತ್ತದೆ. ನವೆಂಬರ್ ನಲ್ಲಿ ಕ್ರಾಂತಿ ಅಗಲಿದೆ ಎಂದು ಈಗಾಗಲೇ ಕೆಲವು ನಾಯಕರು ಹೇಳಿಕೆ ನೀಡಿದ್ದು ಇದರ ಮಧ್ಯ ನಾಯಕತ್ವ ಬದಲಾವಣೆ ಕುರಿತು ಕೂಡ ಭಾರಿ ಚರ್ಚೆ ಆಗುತ್ತಿದೆ. ಇನ್ನು ಸಂಪುಟ ಪುನಾರಚನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸುಳಿವು ನೀಡಿದ್ದಾರೆ. ಈ ನಡುವೆ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ರಾಜರಾಜಕಾರಣಕ್ಕೆ ಬರುತ್ತಾರ? ಎನ್ನುವುದರ ಕುರಿತು ಗೃಹ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು ಕರ್ನಾಟಕ ರಾಜ್ಯ ರಾಜಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದರೆ ಸ್ವಾಗತಿಸುತ್ತೇನೆ ಎಂದು ತಿಳಿಸಿದರು. ಈ ವಿಚಾರವಾಗಿ ಮಾತನಾಡಿದ ಅವರು ಖಂಡಿತವಾಗಿಯೂ ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರು ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಅದರಲ್ಲೂ ಮುಖ್ಯವಾಗಿ ಖರ್ಗೆಯವರು ಕರ್ನಾಟಕಕ್ಕೆ ಬರಲು ಮನಸ್ಸು ಮಾಡಿದರೆ ಬರಲಿ. ಅವರು ನಮ್ಮ ದೊಡ್ಡ ನಾಯಕರು ಅವರು ಕರ್ನಾಟಕಕ್ಕೆ ಬರಲು ಬಯಸಿದರೆ ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್…

Read More

ಹಾಸನ : ನಿನ್ನೆ ಡಿಕೆ ಶಿವಕುಮಾರ್ ಹಾಸನಕ್ಕೆ ಭೇಟಿ ನೀಡಿ ಹಾಸನಾಂಬೆ ದೇವಿಯ ದರ್ಶನ ಮಾಡಿ ಪೂಜೆ ಸಲ್ಲಿಸಿದರು. ಇಂದು ಮುಖ್ಯಮಂತ್ರಿ ಆಗಿ ಎರಡನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿಯ ದರ್ಶನ ಪಡೆದರು. ಕಳೆದ ವರ್ಷ ಕೂಡ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದು, ಈ ಬಾರಿಯೂ ಕೂಡ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿಯ ದರ್ಶನ ಪಡೆದರು. ಸಿಎಂ ಸಿದ್ದರಾಮಯ್ಯಗೆ ಸಚಿವ ರಾಮಲಿಂಗಾ ರೆಡ್ಡಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶಾಸಕರಾದ ಶಿವಲಿಂಗೇಗೌಡ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು. ಇನ್ನು ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಭಾರಿ ದೊಡ್ಡ ಕ್ರಾಂತಿಯಾಗಲಿದೆ ಎಂದು ಗುಸು-ಗುಸು ಕೇಳಿ ಬರುತ್ತಿದೆ. ಇದರ ಮಧ್ಯೆ ಸಂಪುಟ ಪುನರ್ ರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರಿಗೆ ಸಚಿವರಿಗೆ ಔತನಕೂಟ ಏರ್ಪಡಿಸಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಔತಣಕೂಟಕ್ಕೂ ನಾಯಕತ್ವ ಬದಲಾವಣೆಗೂ ಯಾವುದೇ ರೀತಿ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.…

Read More

ಹಾಸನ : ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಭಾರಿ ದೊಡ್ಡ ಕ್ರಾಂತಿಯಾಗಲಿದೆ ಎಂದು ಗುಸು-ಗುಸು ಕೇಳಿ ಬರುತ್ತಿದೆ. ಇದರ ಮಧ್ಯೆ ಸಂಪುಟ ಪುನರ್ ರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕ, ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಇತ್ತೀಚಿಗೆ ಅವರು ಎಲ್ಲರಿಗೂ ಔತಣಕೂಟ ಏರ್ಪಡಿಸಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಔತಣಕೂಟಕ್ಕೂ ನಾಯಕತ್ವ ಬದಲಾವಣೆಗೂ ಯಾವುದೇ ರೀತಿ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಾಸನದಲ್ಲಿ ಮಾತನಾಡಿದ ಅವರು, ಡಿನ್ನರ್ ಪಾರ್ಟಿಗೂ ರಾಜಕೀಯಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ. ಯಾವಾಗಲೂ ನಾವು ಸೇರುತ್ತೇವೆ ಪಕ್ಷದ ವಿಚಾರದ ಕುರಿತು ಚರ್ಚಿಸುತ್ತೇವೆ. ಆಗಾಗ ಊಟಕ್ಕೆ ಸೇರುತ್ತೇವೆ. ಗೆಟ್ ಟುಗೆದರ್ ಮಾಡುತ್ತೇವೆ. ಹಾಗಾಗಿ ಔತಣ ಕೂಟಕ್ಕೂ ನಾಯಕತ್ವ ಬದಲಾವಣೆಗೆ ಯಾವುದೇ ರೀತಿಯಾದ ಸಂಬಂಧ ಇಲ್ಲ. ಹೈಕಮಾಂಡ್ ಬಿಹಾರ ಚುನಾವಣೆಯ ಬಗ್ಗೆ ಗಮನಹರಿಸಿದೆ ಹೈಕಮಾಂಡ್ ಏನು ಹೇಳುತ್ತದೆ ಹಾಗೆ ಮಾಡೋಣ ಎಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ಬೆಂಗಳೂರು : ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಮಾನಹಾನಿ ವಿಡಿಯೋ ಪ್ರಸಾರ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಯೂಟ್ಯೂಬರ್ ಸಮೀರ್ ಎಂ.ಡಿ ಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಮಿಲಿಯನ್ ಘಟನೆ ವೀವ್ಸ್ ಪಡೆದಿದ್ದರೆ ಮಾನ ಹಾನಿ ಆಧಾರದ ವಿಡಿಯೋ ಡಿಲೀಟ್ ಮಾಡಲು ಕೋರ್ಟ್ ಆದೇಶ ನೀಡಿದೆ. ಹೌದು ಮೂರು ದಿನದೊಳಗೆ ವಿಡಿಯೋ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ ನೀಡಿದೆ ಯೂಟ್ಯೂಬರ್ ಸಮೀರ್, ಅನಂತ್ ಅಂಚನ್ ಮತ್ತು ಶ್ರೀನಾಥ ಶೆಟ್ಟಿ ಸೇರಿದಂತೆ ಗಿರೀಶ್ ಮಟ್ಟಣ್ಣನವರಿಗೆ ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಶಾಶ್ವತ ನಿರ್ಬಂಧ ಹೆರಬೇಕು ಎಂದು ಹರ್ಷೇಂದ್ರ ಕುಮಾರ್ ಎನ್ನುವವರು ಮೂಲಧೆ ದಾವೆ ಹೂಡಿದ್ದರು. ಇದೀಗ ಕೋರ್ಟ್ ವಿಡಿಯೋ ಡಿಲೀಟ್ ಮಾಡುವಂತೆ ಎಂ ಡಿ ಸಮೀರ್ ಗೆ ಸೂಚನೆ ನೀಡಿದೆ.

Read More

ಬೆಂಗಳೂರು : ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ಕನಿಷ್ಠ 30 ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅಂಕ ಸೇರಿದಂತೆ 30 ಅಂಕ ಪಡೆದು 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ. 2025 ಮತ್ತು 26ನೇ ಸಾಲಿನಿಂದ ಪರೀಕ್ಷಾ ಪಾಸಿಂಗ್ ಅಂಕ ಕಡಿತ ಅಗಲಿದ್ದು, ಅದೇ ರೀತಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ. ಕೂಡ 625ಕ್ಕೆ ಕನಿಷ್ಠ 26 ಅಂಕ ಗಳಿಸಿದರೆ ವಿದ್ಯಾರ್ಥಿಗಳು ಪಾಸ್ ಆದಂತೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.ವಿದ್ಯಾರ್ಥಿಗಳು ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 30 ಅಂಕಗಳನ್ನು ಪಡೆಯಬೇಕು. ಪಾಸಿಂಗ್ ಮಾರ್ಕ್ಸ್ ಕಡಿತ ವಿಚಾರವಾಗಿ ಪಬ್ಲಿಕ್ ಅಭಿಪ್ರಾಯ ಹಾಕಿದ್ದೆವು. ಶೇಕಡ 33 ರಷ್ಟು ಪರವಾಗಿ 701 ಪತ್ರಗಳು ಬಂದಿದ್ದವು. ಶೇಕಡ 35ರಷ್ಟು ಪರವಾಗಿ 8 ಪತ್ರಗಳು ಬಂದಿದ್ದವು. ಹೀಗಾಗಿ 2025 ಮತ್ತು 26 ನೇ…

Read More

ತುಮಕೂರು : ತುಮಕೂರಿನಲ್ಲಿ ಜಮೀನು ವಿಚಾರಕ್ಕೆ ಸಂಬಂಧಪಟ್ಟಂತೆ ಭೀಕರವಾದ ಕೊಲೆ ನಡೆದಿದ್ದು, ಜಮೀನು ವಿಚಾರವಾಗಿ ಸಹೋದರರ ನಡುವೆ ಗಲಾಟೆಯಾಗಿದೆ. ಮಚ್ಚು ಹಿಡಿದು ಹೊಡೆದಾಡುವ ದೃಶ್ಯ ಇದೀಗ ವೈರಲ್ ಆಗಿದೆ. ಹೊಡೆದಾಟದಲ್ಲಿ ಶ್ರೀನಿವಾಸ್ ಎನ್ನುವ ವ್ಯಕ್ತಿಯ ಕೊಲೆಯಾಗಿದ್ದು ಗಲಾಟೆ ಸಂಬಂಧಪಟ್ಟಂತೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕೊಲೆ ನಡೆಯುವ ಒಂದು ತಿಂಗಳ ಹಿಂದೆ ಕೂಡ ಒಂದು ಗಲಾಟೆ ನಡೆದಿದೆ. ಕೊಲೆಯಾದ ಶ್ರೀನಿವಾಸ್ ಮತ್ತು ಆತನ ಸಹೋದರ ಕೃಷ್ಣಪ್ಪನ ಮಗ L. ಪ್ರಮೋದ್ ನಡುವೆ ಗಲಾಟೆ ಆಗಿದೆ. ಈ ವೇಳೆ ಜೊತೆಯಾದ ಶ್ರೀನಿವಾಸ್ ಮತ್ತು ಸಹೋದರ ಲಕ್ಷ್ಮಣ ಹೊಡೆದಾಟದ ದೃಶ್ಯ ವೈರಲ್ ಆಗಿದೆ. ಅಂದು ಪೊಲೀಸರು ಕೇಸ್ ದಾಖಲಿಸಿಕೊಂಡು ಬಿಟ್ಟು ಕಳಿಸಿದ್ದರು. ಆದರೆ ಇದೀಗ ಶ್ರೀನಿವಾಸ್ ಕೊಲೆಯಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಪ್ರಿಯಾಂಕ ಖರ್ಗೆ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಈ ಕುರಿತು ಸಚಿವ ಪ್ರಿಯಾಂಕ ಖರ್ಗೆ ಇಂದು ಟ್ವೀಟ್ ನಲ್ಲಿ ವಿಡಿಯೋ ಸಹ ರಿಲೀಸ್ ಮಾಡಿದ್ದಾರೆ. ಈ ವಿಚಾರವಾಗಿ ಪರಮೇಶ್ವರ ಬೆದರಿಕೆ ಕರೆ ಹಾಕುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಈ ಕುರಿತು ತನಿಖೆಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಅವರು ಪ್ರಿಯಾಂಕ ಖರ್ಗೆ ಬೆದರಿಕೆಗೆ ಪರಮೇಶ್ವರ್ ಸೂಚನೆ ನೀಡಿದ್ದು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಯಾರು ಬೆದರಿಕೆ ಹಾಕಿದ್ದಾರೆ ಎಲ್ಲಿಂದ ಬೆದರಿಕೆ ಬಂದಿದೆ ಎನ್ನುವುದರ ಕುರಿತು ಎಲ್ಲವನ್ನು ತನಿಖೆ ಮಾಡುತ್ತೇವೆ. ಒಬ್ಬ ಸಚಿವರು ತಮ್ಮ ಅಭಿಪ್ರಾಯ ಹೇಳಿರಬಹುದು. ಆದರೆ ಸರ್ಕಾರದ ತೀರ್ಮಾನ ಆಗೋದೇ ಬೇರೆ ಹಾಗಾಗಿ ಸಚಿವರಿಗೆ ಬೆದರಿಕೆ ಹಾಕುವುದು ಸರಿಯಲ್ಲ ಅದಕ್ಕೆ ಏನು ಕ್ರಮ ಕೈಗೊಳ್ಳಬೇಕು ತೆಗೆದುಕೊಳ್ಳುತ್ತೇವೆ ಎಂದರು.

Read More

ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಪತ್ರ ಬರೆಯುತ್ತಿದ್ದಂತೆ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಇತ್ತೀಚಿಗೆ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು ಇದೀಗ ಬೆದರಿಕೆ ಕರೆ ಕುರಿತು ಸಚಿವ ಪ್ರಿಯಾಂಕ ಖರ್ಗೆ ತಮ್ಮ ಟ್ವೀಟ್ ಖಾತೆಯಲ್ಲಿ ವಿಡಿಯೋವನ್ನು ರಿಲೀಸ್ ಮಾಡಿದ್ದಾರೆ. ಹೌದು, ಸಚಿವ ಪ್ರಿಯಾಂಕ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದು ಬೆಳಗ್ಗೆ ಕರೆಯ ವಿಡಿಯೋ ರಿಲೀಸ್ ಮಾಡಿದ ಸಚಿವ ಪ್ರಿಯಾಂಕ ಖರ್ಗೆ ವಿಡಿಯೋ ರಿಲೀಸ್ ಮಾಡಿ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡುತ್ತಿರುವ ವಿಡಿಯೋ ರಿಲೀಸ್ ಮಾಡಿದ್ದಾರೆ.ಹಿಂದಿಯಲ್ಲಿ ಮಾತನಾಡುತ್ತ ಅಶ್ಲೀಲವಾಗಿ ನಿಂದನೆ ಮಾಡುತ್ತಿದ್ದಾರೆ.ಆರ್ ಎಸ್ ಎಸ್ ಶಾಖೆಯಲ್ಲಿ ಇದನ್ನೆ ಕಲಿಸುತ್ತಾರ? ಮೋಹನ್ ಭಾಗವತ್ ನಿಮಗೆ ಇದನ್ನೇ ಕಲಿಸುತ್ತಾರ? ಎಂದು ಕರೆ ಮಾಡಿದ ವ್ಯಕ್ತಿಗೆ ಪ್ರಿಯಾಂಕ ಖರ್ಗೆ ಖಾರವಾಗಿ ಪ್ರಶ್ನೆ ಮಾಡಿದ್ದಾರೆ ಆರ್ ಎಸ್ ಎಸ್ ಯುವಜನತೆಯ ಮನಸ್ಸಿನಲ್ಲಿ ಕಲ್ಮಶ ತುಂಬುತ್ತದೆ ಅಂತ…

Read More

ದಕ್ಷಿಣಕನ್ನಡ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರಕ್ಕೆ ಸಂಬಂಧಪಟ್ಟಂತೆ ಯೂಟ್ಯೂಬ್ ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಅಡಿ ಟಿ. ಜಯಂತ್ ವಿರುದ್ಧ ಇದೀಗ ಎಫ್ ಆರ್ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ FIR ದಾಖಲಿಸಿಕೊಂಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರಕ್ಕೆ ಸಂಬಂಧಪಟ್ಟಂತೆ ಇದೊಂದು ಷಡ್ಯಂತರ ಅಂತ ಟಿ.ಜಯಂತ ಸುದ್ದಿ ಪ್ರಸಾರ ಮಾಡಿದ್ದ. ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ್ದ. ಗಡಿಪಾಡಿನ ಸತ್ಯತೆ ತಿಳಿದಿದ್ದರೂ ಕೂಡ ಜಯಂತ್ ಅಪೂರ್ಣವಾದ ಮಾಹಿತಿ ನೀಡಿದ್ದಾನೆ. ಇದೊಂದು ಷಡ್ಯಂತರ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪದ ನೆರೆಗೆ ಬೆಳ್ತಂಗಡಿ ಠಾಣೆಯಲ್ಲಿ ಬಿ ಎನ್ ಎಸ್ 353 (1) (b) ಅಡಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರು ಜಲ ಮಂಡಳಿ ಇದೀಗ ಮತ್ತೊಂದು ಗರಿ ಮುಡಿಗೇರಿಸಿಕೊಂಡಿದ್ದು, ವಿಶ್ವ ಮಟ್ಟದ ಸ್ಮಾರ್ಟ್ ವಾಟರ್ ನೆಟ್​ವರ್ಕ್ಸ್ ಫೋರಂ ಎಂದು ಕರೆಯಲಾಗುವ “ಸ್ವಾನ್” ಸದಸ್ಯತ್ವ ಪಡೆದ ಭಾರತದ ಮೊದಲ ನೀರು ಬಳಕೆದಾರರ ಸಂಸ್ಥೆಯಾಗಿ ಹೊರಹೊಮ್ಮಿದೆ. ಹೌದು ದಕ್ಷಿಣ ಏಷ್ಯಾದ ಪ್ರಮುಖ ಪರಿಸರ ತಂತ್ರಜ್ಞಾನ ವೇದಿಕೆಯಾದ ಐಎಫ್ಏಟಿ ಇಂಡಿಯಾ 2025 ಸಂದರ್ಭದಲ್ಲಿ ಸ್ವಾನ್ ಸದಸ್ಯತ್ವದ ಘೋಷಣೆ ಮೊಳಗಿದ್ದು, ಈ ಕಾರ್ಯಕ್ರಮದಲ್ಲಿ ಬಿಡಬ್ಲ್ಯುಎಸ್ಎಸ್‌ಬಿ ಅಧ್ಯಕ್ಷ ಡಾ. ವಿ. ರಾಮ ಪ್ರಸಾತ್ ಮನೋಹರ್, ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ರೂಪಾ ಮಿಶ್ರಾ, ನ್ಯಾಷನಲ್ ಮಿಷನ್ ಫಾರ್ ಕ್ಲೀನ್ ಗಂಗಾ ಅಭಿಯಾನದ ಮಹಾನಿರ್ದೇಶಕ ರಾಜೀವ್ ಕುಮಾರ್ ಮಿತಲ್ ಹಾಗೂ ಆಸ್ಟ್ರೇಲಿಯಾ, ಸ್ವೀಡನ್, ನಾರ್ವೆ ಮತ್ತು ನೆದರ್‌ ಲ್ಯಾಂಡ್ಸ್​ನ ಜಾಗತಿಕ ನೀರು ರಾಯಭಾರಿಗಳು ಭಾಗವಹಿಸಿದ್ದರು. ಜಲಮಂಡಳಿಗೆ ಸ್ವಾನ್ ಸದಸ್ಯತ್ವದ ಅವಕಾಶ ಲಭಿಸಿರುವ ಬಗ್ಗೆ ಬಿಡಬ್ಲ್ಯುಎಸ್ಎಸ್‌ಬಿ ಅಧ್ಯಕ್ಷ ಡಾ. ರಾಮ ಪ್ರಸಾತ್ ಮನೋಹರ್ ಹರ್ಷ ವ್ಯಕ್ತಪಡಿಸಿದ್ದಾರೆ. “ಬ್ರ್ಯಾಂಡ್‌ ಬೆಂಗಳೂರು ಅಭಿಯಾನದ ಅಡಿ ಜಾಗತಿಕ…

Read More