Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ವಿದೇಶದಲ್ಲಿ ಯಾವುದೇ ಆಸ್ತಿ ಇಲ್ಲ ಎಂದು ವಿಜಯೇಂದ್ರ ಘೋಷಣೆ ಮಾಡಲಿ. ಯಾವುದೇ ಬ್ಯಾಂಕ್ ನಲ್ಲಿ ಹಣ ಇಟ್ಟಿಲ್ಲ ಅಂತ ಆಣೆ ಮಾಡಲಿ. ಎಡೆಯೂರು ಸಿದ್ದಲಿಂಗೇಶ್ವರನ ದೇವಸ್ಥಾನಕ್ಕೆ ಹೋಗಿ ಆಣೆ ಮಾಡಲಿ. ಪ್ರತಿ ಮೂರು ತಿಂಗಳಿಗೊಮ್ಮೆ ಅಪ್ಪ ಮಕ್ಕಳು ದುಬೈಗೆ ಯಾಕೆ ಹೋಗುತ್ತೀರಿ? ವಿದೇಶದಲ್ಲಿ ಆಸ್ತಿ ಮಾಡಿದವರಿಗೆ ನೈತಿಕತೆ ಇಲ್ಲ ಎಂದು ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಒಬ್ಬ ಮಹಾನ್ ಭ್ರಷ್ಟ. ಯಡಿಯೂರಪ್ಪ ತಾನು ಲಿಂಗಾಯತ ಅನ್ನೋದನ್ನ ಸಾಬೀತು ಮಾಡಿದ್ದಾರ? ಕೋವಿಡ್ ವೇಳೇ ಲೂಟಿ ಮಾಡಿದ್ದ ಎಂದೆ ಅದರ ಬಗ್ಗೆ ಪ್ರತಿಕ್ರಿಯಿಸಲಿಲ್ಲ. ಬಿವೈ ವಿಜಯೇಂದ್ರ ನಮ್ಮ ಭಿಕ್ಷೆಯಿಂದ ಶಾಸಕನಾಗಿದ್ದಾನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಅದಕ್ಕೆ ರಾಜೀನಾಮೆ ಕೊಟ್ಟು ಗೆಲ್ಲುತ್ತೇನೆ ಅಂತ ವಿಜಯೇಂದ್ರ ಹೇಳಲಿಲ್ಲ. ನೀನೆ ಮಹಾಭ್ರಷ್ಟ ಈಗ ಸಿದ್ದರಾಮಯ್ಯ ಬಗ್ಗೆ ಮಾತನಾಡುತ್ತಿದ್ದೀಯಾ? ಎಂದು ವಾಗ್ದಾಳಿ ನಡೆಸಿದರು.…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಿತು ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 15 ಕ್ಕೆ ಮುಂದೂಡಿ ಆದೇಶಿಸಿದರು. ವಿಚಾರಣೆ ಆರಂಭವಾದಾಗ ಹೈಕೋರ್ಟ್ ನ್ಯಾಯಾಧೀಶರು ಎಸ್ ಪಿ ಪಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದರು. ಬಳಿಕ ಜಾಮೀನು ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿ ಆದೇಶಿಸಿದರು. ಸದ್ಯ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ಪ್ರಕರಣ ಸಂಬಂಧ ಜಾಮೀನು ಷರತ್ತು ಸಡಿಲಿಕೆ ಕೋರಿ ಬಿಎಸ್ ಯಡಿಯೂರಪ್ಪ ಪರ ವಕೀಲರು ಮನವಿ ಮಾಡಿದರು. ಬಳಿಕ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಹಿರಿಯ ರಾಜಕಾರಣಿ ಆಗಿ ಖಂಡನೀಯ ಕೃತ್ಯ ನಡೆಸಬಾರದು ಇತರರಿಗೆ ಮಾದರಿಯಾಗಿರಬೇಕು ಎಂದು ಅಭಿಪ್ರಾಯಪಟ್ಟತು. ಬಳಿಕ ವಿಚಾರಣೆಯನ್ನು ಮುಂದೂಡಿದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಆರಂಭವಾದಾಗ ಜಾಮೀನು ಷರತ್ತು ಸಡಿಲಿಕೆ ಕೋರಿ ಬಿಎಸ್ ಯಡಿಯೂರಪ್ಪ ಪರ ವಕೀಲರು ಮನವಿ ಮಾಡಿದರು. ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ ಷರತ್ತು ಸಡಿಲಿಕೆಗೆ ಮನವಿ ಮಾಡಿದರು. ಹಿರಿಯ ರಾಜಕಾರಣಿ ಆಗಿರುವುದರಿಂದ ದೆಹಲಿಗೆ ತೆರಳಬೇಕಿದೆ.ಅಲ್ಲದೆ ರಾಜಕೀಯ ಪಕ್ಷದ ಸಂಸದೀಯ ಸಮಿತಿ ಸದಸ್ಯರಾಗಿದ್ದಾರೆ. ಹೀಗಾಗಿ ಷರತ್ತು ಸಡಿಲಿಸಲು ಬಿಎಸ್ ಯಡಿಯೂರಪ್ಪ ಪರ ವಕೀಲರು ಮನವಿ ಮಾಡಿದರು. ಹಿರಿಯ ರಾಜಕಾರಣಿಯಾಗಿ ಖಂಡನೀಯ ಕೃತ್ಯ ನಡೆಸಬಾರದು. ಇತರರಿಗೆ ಮಾದರಿಯಾಗುವಂತಹ ನಡವಳಿಕೆ…
ರಾಯಚೂರು : ರಾಯಚೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕಾಲುವೆ ನೀರಿನಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಗಾಣದಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ನಿನ್ನೆ ಪಂಚಮುಖಿ ಆಂಜನೇಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಪೋಷಕರ ಜೊತೆ ಮಕ್ಕಳು ಜಾತ್ರೆಗೆ ಬಂದಿದ್ದಾಗ ನೀರು ಪಾಲಾಗಿದ್ದಾರೆ. ಕಾಲುವೆಯಲ್ಲಿ ಆಟವಾಡುತ್ತಿದ್ದ ವೇಳೆ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ನಡೆದಿದೆ ತೆಲಂಗಾಣದ ಗದ್ವಾಲ್ ಮೂಲದ ಅಂಜಲಿ (17) ಹಾಗೂ ಆಂಧ್ರಪ್ರದೇಶದ ಎಮ್ಮಿಗನೂರಿನ ರಘು (14) ನೀರು ಪಾಲಾಗಿದ್ದಾರೆ. ಕಾಲುವೆಯಲ್ಲಿ ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿಗಳು ಮಕ್ಕಳಿಗಾಗಿ ಶೋಧ ನಡೆಸುತ್ತಿದ್ದಾರೆ. ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಭೋವಿ ನಿಗಮದ ಮೇಲೆ ಇಡಿ ದಾಳಿ ಪ್ರಕರಣ ಸಂಬಂಧ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ಹಣ ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ (ED) ಅಧಿಕೃತ ಮಾಹಿತಿ ನೀಡಿದೆ. ಹೌದು ಭೋವಿ ಸಮುದಾಯದ ಏಜೆಂಟರ ಮೂಲಕ ಹಣ ವರ್ಗಾವಣೆ ಆಗಿದೆ. ನಕಲಿ ಫಲಾನುಭವಿಗಳ ಖಾತೆ ಬಳಸಿಕೊಂಡು, ಹಣ ವರ್ಗಾವಣೆ ಮಾಡಲಾಗಿದೆ. ಕೆಬಿಡಿಸಿ ಇಂದ ಹಣ ಬೇರೆ ಕಡೆಗೆ ವರ್ಗಾಯಿಸಿರುವುದು ಇಡಿ ತನಿಖೆಯ ವೇಳೆ ಪತ್ತೆಯಾಗಿದೆ. ನಾಗರಾಜಪ್ಪ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿದ್ದು ಪತ್ತೆಯಾಗಿದೆ. ದಾಳಿಯ ವೇಳೆ ಸಂಗ್ರಹಿಸಿದ ಪುರಾವೆಗಳ ಆಧಾರದ ಅಡಿ ಇದೀಗ ನಾಗರಾಜಯ್ಯನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ನಕಲಿ ಖಾತೆಗಳನ್ನು ಬಳಸಿಕೊಂಡು ತಮ್ಮ ಸ್ನೇಹಿತರು ಮತ್ತು ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿ ಹಣ ವರ್ಗಾವಣೆ ಮಾಡಿದ್ದಾರೆ.ಸದ್ಯ ನಾಗರಾಜಪ್ಪನನ್ನು ಬಂಧಿಸಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ ಹೆಚ್ಚಿನ ತನಿಖೆಗಾಗಿ ನಾಗರಾಜಪ್ಪನನ್ನು 14 ದಿನ ವಶಕ್ಕೆ ಪಡೆದಿದೆ. ಇಡಿ ತನಿಖೆ ವೇಳೆ ಅಕ್ರಮ ಹಣ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ ಎಂದು ಇ.ಡಿ…
ಕಲಬುರಗಿ : ಮನೆಯಲ್ಲಿ ಯಾರು ಇಲ್ಲದ ವೇಳೆ 14 ವರ್ಷದ ಬಾಲಕಿಯ ಮೇಲೆ ಅತಿಥಿ ಶಿಕ್ಷಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ಮಾದನಹಿಪ್ಪರಗ ಎಂಬ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕ ಶಿವರಾಜ ಹಣಮಂತ (32) ಬಂಧಿತ ಶಿಕ್ಷಕ ಎಂದು ತಿಳಿದುಬಂದಿದೆ. 8ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ. ಶಿಕ್ಷಕನ ವಿರುದ್ಧ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, 14 ವರ್ಷದ ವಿದ್ಯಾರ್ಥಿನಿಯ ಮೇಲೆ ಅತಿಥಿ ಶಿಕ್ಷಕ ಶಿವರಾಜ್ ಅತ್ಯಾಚಾರ ಎಸಗಿದ್ದಾನೆ. ಅದೇ ಗ್ರಾಮದ ಶಾಲೆಯಲ್ಲಿ ಶಿವರಾಜ್ ಹಣಮಂತ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದಿದ್ದಾಗ ಶಿವರಾಜ್ ಮನೆಗೆ ನುಗ್ಗಿ ಅತ್ಯಾಚಾರ ಆಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯ ತಾಯಿ ಯುಗಾದಿ ಹಬ್ಬಕ್ಕೆ ಮೂವರು ಮಕ್ಕಳನ್ನು ಕರೆದುಕೊಂಡು…
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ‘ಎಲ್ಲೋ’ ಅಲರ್ಟ್ ಘೋಷಿಸಲಾಗಿದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಎದ್ದಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲೆ ಉಂಟಾಗಲಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು : ನಂದಿನಿ ಹಾಲಿನ ಬೆಲೆ, ವಿದ್ಯುತ್ ದರ ಏರಿಕೆ, ಡೀಸೆಲ್ ಏರಿಕೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಇಂದು ಬಿಜೆಪಿ ಜನಾಕ್ರೋಶ ಹೋರಾಟವನ್ನು ಆರಂಭಿಸುತ್ತಿದ್ದು, ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಒಂದು ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ. ಈ ಒಂದು ಹೋರಾಟದ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಆಕ್ರೋಶ ಅವರಿಗೆ ಆಗಿರಬೇಕು ಆದರೆ ಜನರಿಗೆ ಆಗಿಲ್ಲ ಎಂದು ಬಿಜೆಪಿ ಹೋರಾಟಕ್ಕೆ ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೋರಾಟಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕಿಡಿ ಕಾರಿದ್ದು, ಆಕ್ರೋಶ ಅವರಿಗೆ ಆಗಿರಬೇಕು ಆದರೆ ಜನರಿಗೆ ಆಗಿಲ್ಲ. ಗ್ಯಾರಂಟಿಗಳನ್ನು ಜಾರಿ ಮಾಡಿದ್ದೆ ಬೆಲೆ ಏರಿಕೆ ದೇವರ ಕೆಲಸ ನಮ್ಮ ಕೆಲಸ ಅಂದುಕೊಂಡಿದ್ದೇವೆ. ನಾವು ಇದ್ದೇವೆ ಎಂದು ತೋರಿಸಲು ಹೀಗೆ ಮಾಡುತ್ತಿದ್ದಾರೆ.ಬಿಜೆಪಿ ಜನಾಕ್ರೋಶ ಯಾತ್ರೆಯ ವಿರುದ್ಧ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ವಂಚನೆಯಿಂದ ಸಾಲ ನೀಡಿದ ಹಣವನ್ನು ಮರಳಿ ಪಡೆಯಲು ಕಪ್ಪು ಶಾಯಿ ಪರಿಹಾರ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ,…
ಕೊಡಗು : ಹೋಂ ಸ್ಟೇ ನಲ್ಲಿ ತಂಗಿದ್ದ ಬೆಂಗಳೂರು ಮೂಲದ ಮಹಿಳೆಗೆ ಹೋಂಸ್ಟೇ ನಿರ್ವಾಹಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಈ ಒಂದು ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯ ಈಶ್ವರ ನಿವಾಸ ಹೋಂಕೆನಲ್ಲಿ ನಡೆದಿದೆ. ಹೌದು ಹೋಂ ಸ್ಟೇ ನಿರ್ವಾಹಕ ಪ್ರವೀಣ್ ನಿಂದ ಮಹಿಳೆಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮುಂಜಾನೆ 3 ಗಂಟೆಗೆ ಕುಡಿದು ಬಂದು ಪ್ರವೀಣ್ ಕಿರುಕುಳ ನೀಡಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿಯ ಈಶ್ವರ ನಿಲಯ ಹೋಂ ಸ್ಟೇನಲ್ಲಿ ಮಹಿಳೆಯ ಕಿರುಕುಳ ನೀಡಿರುವ ಘಟನೆ ನಡೆದಿದೆ. ಬಾಗಿಲು ತೆಗೆಯದಿದ್ದಕ್ಕೆ ಕಾರಿನ ಮಾಡಿದ ಪ್ರವೀಣ್, ಬೆಂಗಳೂರು ಮೂಲದ ಪ್ರವಾಸಿ ಮಮತಾ ಗೆ ಪ್ರವೀಣ್ ಕಿರುಕುಳ ನೀಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ನಗರ ಪೊಲೀಸ್ ಠಾಣೆಗೆ ಈಗ ಮಹಿಳೆ ಮಮತಾ ಈ ಕುರಿತು ದೂರು ನೀಡಿದ್ದಾರೆ.