Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಐಶ್ವರ್ಯ ಗೌಡಳನ್ನು ಅರೆಸ್ಟ್ ಮಾಡಿದ್ದಾರೆ. ಇಡಿ ಬಂಧನ ಪ್ರಶ್ನಿಸಿ ಐಶ್ವರ್ಯಗೌಡ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಐಶ್ವರ್ಯ ಗೌಡ ಅರ್ಜಿಯ ವಿಚಾರಣೆ 22ಕ್ಕೆ ಮುಂದೂಡಿ ಆದೇಶ ಹೊರಡಿಸಿದರು. ಇಂದು ಇಡಿ ಬಂಧನ ಪ್ರಶ್ನಿಸಿ ಐಶ್ವರ್ಯ ಗೌಡ ಅರ್ಜಿ ಸಲ್ಲಿಸಿದ್ದು, ವಂಚನೆ ಪ್ರಕರಣದಲ್ಲಿ ಐಶ್ವರ್ಯಗೌಡ ಅರೆಸ್ಟ್ ಆಗಿದ್ದಾರೆ. ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ ಎಂದು ಐಶ್ವರ್ಯ ಗೌಡ ಪರವಾಗಿ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದರು. ವಂಚನೆ ಸೇರಿದಂತೆ ಹಲವು ಆರೋಪಗಳನ್ನು ಐಶ್ವರ್ಯ ಕೂಡ ಎದುರಿಸುತ್ತಿದ್ದಾಳೆ. ಈ ಸಂದರ್ಭದಲ್ಲಿ ಇಡಿ ಪರ ವಕೀಲರಿಂದ ವಾದ ಮಂಡನೆಗೆ ಕಾಲಾವಕಾಶ ಕೋರಲಾಯಿತು. ಬಳಿಕ ವಿಚಾರಣೆಯನ್ನು ಹೈಕೋರ್ಟ್ ಮೇ 22ಕ್ಕೆ ಮುಂದೂಡಿತು.
ಬೆಂಗಳೂರು : ರಾಜ್ಯದಲ್ಲಿ ಬೆಂಗಳೂರು ಮಹಾನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಅಂತೂ ವರುಣ ಅಬ್ಬರಿಸುತ್ತಿದ್ದು ರಸ್ತೆಯಲ್ಲಿ ನೀರು ನಿಂತು ಸಂಪೂರ್ಣವಾಗಿ ನದಿಯಂತೆ ಬದಲಾಗಿವೆ. ಇದೀಗ ಹವಾಮಾನ ಇಲಾಖೆಯು ಮುಂದಿನ ಏಳು ದಿನಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಕುರಿತು @karnatakaSNDMC ಟ್ವೀಟ್ ಮಾಡಿದ್ದು, ಮುಂದಿನ 7 ದಿನಗಳ ಹವಾಮಾನ ಮುನ್ಸೂಚನೆ ಮತ್ತು ಎಚ್ಚರಿಕೆಗಳು ನೀಡಿದ್ದು, ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದು ಮತ್ತು ನಾಳೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ, IMD ಯಿಂದ ರೆಡ್ಅಲರ್ಟ್ ನೀಡಲಾಗಿದೆ. ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. https://twitter.com/KarnatakaSNDMC/status/1924656493439418801?t=fFvL6AkxcaOBYwPNXuubug&s=19
ಬೆಂಗಳೂರು : ತನ್ನ ಗೆಳತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಗೊಂಡು ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಸಜೀವ ದಹಿಸಿರುವ ಘಟನೆಯೊಂದು ಕಡುಬೀಸನಹಳ್ಳಿಯ ಕರಿಯಮ್ಮನ ಅಗ್ರಹಾರದಲ್ಲಿ ಶುಕ್ರವಾರ ನಡೆದಿದೆ.ಮೃತ ವ್ಯಕ್ತಿಯನ್ನು ಇಜುಲ್ ಹಕ್ (25) ಎಂದು ಗುರುತಿಸಲಾಗಿದೆ.ಪ್ರಕರಣ ಸಂಬಂಧ ಡೆಲಿವರಿ ಏಜೆಂಟ್ ಆಗಿದ್ದ ಮುನಾವರ್ ಅಲಿ (22) ಎಂಬಾತನನ್ನು ಪೊಲೀಸರು ಬಂದನಕ್ಕೊಳಪಡಿಸಿದ್ದಾರೆ. ಮೃತ ಇಜುಲ್ ಹಕ್ ಹಾಗೂ ಆರೋಪಿ ಅಲಿ ಇಬ್ಬರೂ ಅಸ್ಸಾಂ ಮೂಲದವರಾಗಿದ್ದಾರೆ. ಮೃತ ವ್ಯಕ್ತಿ ವಿವಾಹಿತನಾಗಿದ್ದು, 6 ತಿಂಗಳ ಹೆಣ್ಣು ಮಗುವಿದೆ. ಪತ್ನಿ ಹಾಗೂ ಮಗು ಅಸ್ಸಾಂನಲ್ಲೇ ವಾಸವಿದ್ದು, ಒಂದು ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿದ್ದ. ಸಲಾವುದ್ದೀನ್ ಎಂಬುವವರ ಶೆಡ್ ನಲ್ಲಿ ವಾಸವಿದ್ದ ಎಂದು ತಿಳಿದುಬಂದಿದೆ. ಆರೋಪಿ ಅಲಿ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಆಕೆಯೊಂದಿಗೆ ಹಕ್ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಿಸಿದ್ದಾನೆ. ಇದರಂತೆ ಕಳೆದ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಈ ವೇಳೆ ಹಕ್ ಅವರ ಇಬ್ಬರು ಸ್ನೇಹಿತರಾದ ಶಹನೂರ್ ರೆಹಮಾನ್ ಮತ್ತು ಫರೀದುಲ್ ಇಸ್ಲಾಂ ಬೆಂಬಲಕ್ಕೆ ಬಂದಿದ್ದು, ಈ…
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಳಗಾವಿ ನಗರದ ಹೊರವಲಯದಲ್ಲಿರುವ ರೆಸಾಟ್೯ನಲ್ಲಿ ಮೂರು ಜನ ಅಪ್ತಾಪ್ತ ಬಾಲಕರು 15 ವರ್ಷದ ಬಾಲಕಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿರುವ ಘಟನೆ ನಡೆದಿದೆ. ಹತ್ತು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ಮನೆಗೆ ಬಾಲಕಿ ವಾಪಾಸ್ ಆದಾಗ ಹೊಟ್ಟೆ ನೋವು ಎಂದಿದ್ದಳು. ಈ ಪ್ರಕರಣದಲ್ಲಿ ಸಾಕೀಬ್ ಎಂಬಾತನನ್ನು ಒಳಗೊಂಡಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಆರೋಪಿಗಳು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಸ್ನೇಹಿತನಾಗಿದ್ದ ಒಬ್ಬ ಅಪ್ರಾಪ್ತ ಆರೋಪಿಯು ಆಕೆಯನ್ನು ರೆಸಾರ್ಟ್ಗೆ ಕರೆತಂದಿದ್ದಾನೆ. ಸಾಕೀಬ್ ಈ ಮೊದಲೇ ರೆಸಾರ್ಟ್ನಲ್ಲಿ ರೂಮ್ ಬುಕ್ ಮಾಡಿದ್ದರು. ಆಕೆಯನ್ನು ರೆಸಾರ್ಟ್ಗೆ ಕರೆತಂದ ನಂತರ, ಮೂವರು ಆರೋಪಿಗಳು ಸಾಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಮಗನೊಬ್ಬ ಶಾಮಿಲಾಗಿದ್ದಾನೆ. ಅವನನ್ನು ಹೊರತು ಪಡಿಸಿ ಇಬ್ಬರು ಬಾಲಕರನ್ನು ಪೊಲೀಸರು…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಕೇಜಿ ಹಳ್ಳಿ ಸಬ್ ಇನ್ಸ್ಪೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇಜಿಹಳ್ಳಿ ಸಬ್ ಇನ್ಸ್ಪೆಕ್ಟರ್ ನಾಗರಾಜ್ ಪತ್ನಿ ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ಮನೆಯಲ್ಲಿ ನಾಗರಾಜ್ ಪತ್ನಿ ಶಾಲಿನಿ ಅವರು ನೇಣಿಗೆ ಶರಣಾಗಿದ್ದಾರೆ. ನಾಗರಾಜ್ ಅವರನ್ನು ಶಾಲಿನಿ ಎರಡನೇ ಮದುವೆಯಾಗಿದ್ದರು. ಘಟನೆ ಕುರಿತು ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಶಾಲಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೃದಯಘಾತ ಎನ್ನುವುದು ಸಾಮಾನ್ಯ ಕಾಯಿಲೆಯಾಗಿದೆ. ಇದೀಗ ಸ್ಯಾಂಡಲ್ ವುಡ್ ನಟ ದರ್ಶನ್ ಅವರಿಗೆ ಮೇಕಪ್ ಮಾಡುತ್ತಿದ್ದ ಮೇಕಪ್ ಆರ್ಟಿಸ್ಟ್ ಒಬ್ಬರು ಹೃದಯಘಾತದಿಂದ ಸಾವನಪ್ಪಿರುವ ಘಟನೆ ನಡೆದಿದೆ. ಹೌದು ಕನ್ನಡ ಚಿತ್ರರಂಗದ ಹಿರಿಯ ಮೇಕಪ್ ಕಲಾವಿದರಾದ ಹೊನ್ನೇಗೌಡ (54) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ. ಖ್ಯಾತ ನಟ ದರ್ಶನ್ ತೂಗುದೀಪ ಅವರ ಬಹುತೇಕ ಚಿತ್ರಗಳಿಗೆ ಮೇಕಪ್ ಕಲಾವಿದರಾಗಿ ಕೆಲಸ ಮಾಡಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿಕೊಂಡ ಹೊನ್ನೇಗೌಡ ಅವರಿಗೆ ಹೃದಯಘಾತವಾಗಿದೆ. ಇಂದು ಬೆಳಿಗ್ಗೆ ಅವರು ಮೃತಪಟ್ಟಿರುವುದು ಖಚಿತವಾಗಿದೆ. 2002ರಲ್ಲಿ ನಟ ದರ್ಶನ್ ಅವರ ಮೆಜೆಸ್ಟಿಕ್ ಸಿನಿಮಾದಿಂದ ಹಿಡಿದು ಇವತ್ತಿನ ಡೆವಿಲ್ ಸಿನಿಮಾ ವರೆಗೂ ಬಹುತೇಕ ದರ್ಶನ್ ಅವರ ಎಲ್ಲ ಚಿತ್ರಗಳಲ್ಲೂ ಹೊನ್ನೇಗೌಡ ಮೇಕಪ್ ಕಲಾವಿದರಗಿ ಕೆಲಸ ಮಾಡಿದ್ದರು.
ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಯಶಸ್ವಿಯಾಗಿ ಪೂರೈಸಿದ್ದಕ್ಕೆ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಯೋಜನೆ ಮಾಡಲಾಗಿದೆ. ಈ ಒಂದು ಸಾಧನಾ ಸಮಾವೇಶದಲ್ಲಿ ಖರ್ಗೆ ಪಹಲ್ಗಾಮ್ ಘಟನೆ ಕುರಿತು ಮಾತನಾಡಿ ಮೋದಿ ಸರ್ಕಾರ ಭದ್ರತೆ ಕೊಡದಿದ್ದಕ್ಕೆ ಅಲ್ಲಿ 26 ಜನರ ಅಮಾಯಕರ ಕೊಲೆಯಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 17ರಂದು ಕಾಶ್ಮೀರಕ್ಕೆ ಹೋಗುವವರಿದ್ರು. ಆದರೆ ಬೇಹುಗಾರಿಕೆ, ಗುಪ್ತಚರ ದಳದವರು ಹೋಗಬೇಡಿ ಎಂದಿದ್ದರು. ಅದೇ ಕಾರಣಕ್ಕೆ ಮೋದಿ ಕಾಶ್ಮೀರ ಪ್ರವಾಸ ರದ್ದು ಮಾಡಿಸಿದ್ರು. ಇದೆಲ್ಲಾ ಮೋದಿಗೆ ಗೊತ್ತಿತ್ತು, ಹಾಗಿದ್ದರೂ ಯಾಕೆ ಹೇಳಲಿಲ್ಲ. ಮೋದಿ ಅಂದೇ ಹೇಳಿದ್ದರೆ 26 ಪ್ರಾಣ ಉಳಿಯುತ್ತಿದ್ದವು ಎಂದು ಹೇಳಿದರು. ಆದರೆ ಈ ವೇಳೆ ಸರ್ಕಾರ, ಮಿಲಿಟರಿ ಯಾರೂ ಜನರಿಗೆ ಸಹಕಾರ ಕೊಟ್ಟಿಲ್ಲ ಎಂದು ಖರ್ಗೆ ಆರೋಪಿಸಿದ್ದಾರೆ. ಪಾಕಿಸ್ತಾನದ ಕೆಲಸ ಯಾವಾಗಲೂ ನಮ್ಮ ದೇಶದ ಮೇಲೆ ಗೂಬೆ ಕೂಡಿಸೋದು. ಪಾಕಿಸ್ತಾನಕ್ಕೆ ಶಕ್ತಿ ಇಲ್ಲ. ಹೀಗಾಗಿ ಭಯೋತ್ಪಾದಕರಿಂದ ದಾಳಿ…
ವಿಜಯನಗರ : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಇವಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ನಾವು ಕೊಟ್ಟ 593 ಭರವಸೆಗಳಲ್ಲಿ 242 ಭರವಸೆ ಈಗಾಗಲೇ ಈಡೇರಿಸಿದ್ದೇವೆ ಎಂದು ತಿಳಿಸಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಆಯಿತು ಕೊಟ್ಟ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿಯವರು ಹಕ್ಕು ಪತ್ರ ವಿತರಿಸಿದ್ದಾರೆ. ಹೊಸಪೇಟೆಯ ಈ ಕಾರ್ಯಕ್ರಮ ಯಶಸ್ವಿಯಾಗಿದೆ. ಜನರಿಗೆ 2 ವರ್ಷಗಳ ಹಿಂದೆ ಹಲವು ಭರವಸೆಗಳನ್ನು ನೀಡಿದ್ವಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ಪ್ರಣಾಳಿಕೆ ನೀಡಿದ್ದೆವು. 593 ಭರವಸೆಗಳನ್ನು ರಾಜ್ಯದ ಜನರಿಗೆ ಕೊಟ್ಟಿದ್ದೆವು ಎರಡು ವರ್ಷದಲ್ಲಿ 242 ಬರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಭರವಸೆಗಳನ್ನು ಮುಂದಿನ ಎರಡು ವರ್ಷದಲ್ಲಿ ಈಡೇರಿಸುತ್ತೇವೆ ಎಂದರು. ರಾಜ್ಯದ ಜನರಿಗಾಗಿ ನಾವು ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ ಕಳೆದ…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ವಿಚಾರಣೆ ಮುಂದುವರಿದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಇಂದು ನ್ಯಾಯಾಲಯದೆದುರು ಹಾಜರಾಗಿದ್ದಾರೆ. ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ವಿಚಾರಣೆ ನಡೆಯಿತು. ಕಳೆದ ಬಾರಿ ವಿಚಾರಣೆಗೆ ನಟ ದರ್ಶನ್ ಗೈರಾಗಿದ್ದರು. ಹೀಗಾಗಿ, ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಲಯ, ಆರೋಪಿಗಳು ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಬೇಕು ಎಂದು ದರ್ಶನ್ ಪರ ವಕೀಲರಿಗೆ ಸೂಚಿಸಿತ್ತು. ಅದರಂತೆ, ಇಂದಿನ ವಿಚಾರಣೆಗೆ ನಟ ದರ್ಶನ್ ಅವರು ಖುದ್ದು ಹಾಜರಾಗಿದ್ದಾರೆ. ಮತ್ತೊಂದೆಡೆ, ಆರೋಪಿ ಪವಿತ್ರಾ ಗೌಡ ಸಹ ವಿಚಾರಣೆಗೆ ಹಾಜರಾಗಿದ್ದಾರೆ. ಜುಲೈ 10ಕ್ಕೆ ವಿಚಾರಣೆ ಮುಂದೂಡಿರುವ ನ್ಯಾಯಾಲಯ, ಅಂದು ಎಲ್ಲಾ ಆರೋಪಿಗಳಿಗೂ ಹಾಜರಾಗುವಂತೆ ಸೂಚಿಸಿದೆ.
ವಿಜಯನಗರ : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಈ ವೇಳೆ ಡಿಕೆ ಶಿವಕುಮಾರ್ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಇರುವವರೆಗೂ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ತಿಳಿಸಿದರು. ಸಮಾವೇಶದ ಕುರಿತಂತೆ ಡಿಕೆ ಶಿವಕುಮಾರ್ ಅವರು ಮಾತನಾಡಿ ವಿಪಕ್ಷದವರು ನಮ್ಮ ಬಗ್ಗೆ ಟೀಕೆಗಳನ್ನು ಮಾಡುತ್ತಿದ್ದಾರೆ. ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ. ಉದ್ಯೋಗ ಹೆಚ್ಚಳಕ್ಕೆ ನಾವು ಕ್ರಮ ಕೈಗೊಂಡಿದ್ದೇವೆ. ಕೊಟ್ಟ ಭರವಸೆಯಂತೆ 5 ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ರಾಜ್ಯದ ಜನರ ಋಣ ತೀರಿಸಲು ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ನಮ್ಮನ್ನು ನಂಬಿ 136 ಸ್ಥಾನಗಳನ್ನು ಕೊಟ್ಟಿದ್ದೀರಿ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು. ಈ ಪಕ್ಷದವರು ಟೀಕೆಗಳನ್ನು ಮಾಡ್ತಾ ಇರಲಿ 5 ಗ್ಯಾರಂಟಿಗಳ ಜೊತೆಗೆ ಇಂದು ಆರನೇ ಗ್ಯಾರಂಟಿ ಕೊಟ್ಟಿದ್ದೇವೆ. ಇಂದು ಭೂ ಗ್ಯಾರಂಟಿ ಕೊಟ್ಟಿದ್ದೇವೆ. ಪ್ರವಾಸೋದ್ಯಮ ಸಂಸ್ಕೃತಿ ಕನ್ನಡ ಇಲಾಖೆಯಲ್ಲಿ ಹೊಸ ಯೋಜನೆ, ಜನರ…