Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಬದಲಾವಣೆ ನಡೆದಿದ್ದು, ಸಂಪುಟ ಪುನಾರ ರಚನೆ ಕುರಿತು ಇದೀಗ ಕೂಗು ಕೇಳು ಬರುತ್ತಿದೆ. ಅಧಿಕಾರ ಹಸ್ತಾಂತರದ ಮಧ್ಯೆ ಸಂಪುಟ ವಿಸ್ತರಣೆ ಕೂಗು ಸಹ ಕೇಳಿ ಬಂದಿದೆ. ಇದೀಗ ಮೊದಲ ಬಾರಿಗೆದ್ದಂತಹ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ. ಹೌದು ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ಯಾವಾಗ ಬೇಕಾದರೂ ಯಾವ ಬೆಳವಣಿಗೆ ನಡೆದರೂ ಕೂಡ ಅಚ್ಚರಿಪಡಬೇಕಿಲ್ಲ. ಕಾಂಗ್ರೆಸ್ ನಲ್ಲಿ ಸಂಪುಟ ಪುನಾರಚನೆ ಕುರಿತು ಕಾಂಗ್ರೆಸ್ ಹೈಕಮಾಂಡ್ಗೆ ಮೊದಲ ಬಾರಿ ಗೆದ್ದ ಶಾಸಕರು ಪತ್ರ ಬರೆದಿದ್ದಾರೆ. ರಾಹುಲ್ ಗಾಂಧಿ ಹಾಗೂ ರಣದೀಪ ಸಿಂಗ್ ಸುರ್ಜೆವಾಲಗೆ ಶಾಸಕರು ಪತ್ರ ಬರೆದಿದ್ದಾರೆ. ಮೊದಲ ಬಾರಿ ಗೆದ್ದ ಶಾಸಕರಿಂದ ರಾಹುಲ್ ಗಾಂಧಿಗೆ ಪತ್ರ ಬರೆಯಲಾಗಿದೆ. ನಮಗೂ ಸಂಪುಟದಲ್ಲಿ ಅವಕಾಶ ಕೊಡಿ ಎಂದು ಶಾಸಕರು ಪತ್ರದಲ್ಲಿ ಮನವಿ ಮಾಡಿದ್ದಾರೆ. ಹೈಕಮಾಂಡ್ ತಟ್ಟಿದ ಮೊದಲ ಬಾರಿ ಗೆದ್ದ ಶಾಸಕರು, 5 ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡಲು ಬೇಡಿಕೆ ಇಟ್ಟಿದ್ದಾರೆ. ಹಾಗಾಗಿ ಈ…
ಗದಗ : ಗುತ್ತಿಗೆದಾರನ ಬಳಿ 5 ಲಕ್ಷ ರೂಪಾಯಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿರಹಟ್ಟಿ ಬಿಜೆಪಿ ಶಾಸಕ ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಆದರೆ ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಸ್ವಾಮೀಜಿ ಒಬ್ಬರ ಜೊತೆ ಶಾಸಕ ಚಂದ್ರು ಲಮಾಣಿ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಹೌದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ಇನ್ನು ಈ ಪ್ರಕರಣದ ಕುರಿತು ಮಾತನಾಡಿರುವ ಸ್ವಾಮೀಜಿ, ಶಾಸಕ ಡಾ.ಚಂದ್ರು ಲಮಾಣಿ ಬಗ್ಗೆ ನಾನು ಮಾತನಾಡಿರೋದು ಸತ್ಯ. ಆಡಿಯೋದಲ್ಲಿ ಇರುವ ಧ್ವನಿ ನನ್ನದೇ ನಾನೇ ಮಾತನಾಡಿರುವುದು. 6 ತಿಂಗಳ ಹಿಂದೆ ಚಂದ್ರು ಲಮಾಣಿ ಬಗ್ಗೆ ಮಾತಾಡಿರೋ ಆಡಿಯೋ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು…
ಮಂಡ್ಯ :- ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಜರುಗಿದೆ. ಮದ್ದೂರು ತಾಲೂಕಿನ ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚಗಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಈ ಘಟನೆ ಜರುಗಿದ್ದು, ಯುವತಿಯ ತಂದೆ ಚನ್ನೇಗೌಡನಿಗೂ ಸಣ್ಣ ಪುಟ್ಟ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುಂಚಗಹಳ್ಳಿ ಗ್ರಾಮದ ವಿನೋದ್ ಎಂಬ ಯುವಕ ಪಕ್ಕದ ಮನೆಯ ಯುವತಿ ಕಾವ್ಯ ಎಂಬ ಯುವತಿಯನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಕಳೆದ ಗುರುವಾರದಂದು ಯುವತಿಯ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದಾರೆ. ಈ ಘಟನೆಯಿಂದ ಕುಪಿತಗೊಂಡಿದ್ದ ಯುವತಿಯ ತಂದೆ ಚನ್ನೇಗೌಡ ಶನಿವಾರ ಬೆಳಿಗ್ಗೆ ಯುವಕನ ಮನೆಗೆ ಬೆಂಕಿ ಹಚ್ಚುವ ವೇಳೆ ಯುವಕನ ಮನೆಯಲ್ಲಿ ಯಾರು ಇಲ್ಲದ ಪರಿಣಾಮ ಹೆಚ್ಚಿನ ಪ್ರಾಣಾಪಾಯ ಸಂಭವಿಸಿಲ್ಲ. ತಕ್ಷಣವೇ ಅಕ್ಕ ಪಕ್ಕದ ಮನೆಯವರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಸ್ಥಳಕ್ಕೆ ಮದ್ದೂರು ಅಗ್ನಿಶಾಮಕ ದಳದವರು ಆಗಮಿಸುವಷ್ಟರಲ್ಲಿ ಮನೆಯಲ್ಲಿದ್ದ ಪೀಠೋಪಕರಣ, ಎಲೆಕ್ಟ್ರಾನಿಕ್…
ಉಡುಪಿ : ಉಡುಪಿಯಲ್ಲಿ ವಾಹನಗಳ ದಟ್ಟಣೆ ನಡುವೆ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾನೆ. ಉಡುಪಿ ನಗರದ ಕಲ್ಸಂಕ ಜಂಕ್ಷನ್ ನಲ್ಲಿ ಈ ಒಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಸ್ಥಳೀಯ ಪೊಲೀಸರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ಒಂದು ತಪ್ಪಿದೆ. ಗದಗ ಮೂಲದ ವ್ಯಕ್ತಿ ಒಬ್ಬ ಪೆಟ್ರೋಲ್ ಮೈ ಮೇಲೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಯುವಕನ ಹುಚ್ಚಾಟಕ್ಕೆ ಕೆಲ ಹೊತ್ತು ಭಯದ ವಾತಾವರಣ ನಿರ್ಮಾಣವಾಗಿತ್ತು. ಪೆಟ್ರೋಲ್ ಬಾಟಲ್ ಅನ್ನು ವ್ಯಕ್ತಿ ಕೈಯಲ್ಲಿ ಹಿಡಿದುಕೊಂಡು ಬಂದಿದ್ದ ಹಲವು ಬಾರಿ ಪೆಟ್ರೋಲ್ ಬಾಟಲಿಯನ್ನು ಸಂಚಾರಿ ಪೊಲೀಸರು ಕಸಿದುಕೊಂಡಿದ್ದರು. ಮತ್ತೆ ಬಾಟಲಿಯಲ್ಲಿ ಪೆಟ್ರೋಲ್ ತಂದು ಯುವಕ ಮೈ ಮೇಲೆ ಸುರಿದುಕೊಂಡಿದ್ದಾನೆ. ಕುಟುಂಬ ಕಲಹದಿಂದ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಯುವಕನನ್ನು ಉಡುಪಿ ನಗರ ಪೊಲೀಸ್ರು ರಕ್ಷಿಸಿ ವಶಕ್ಕೆ ಪಡೆದಿದ್ದಾರೆ. ಪೊಲೀಸರ ಸಮಯ ಪ್ರಜ್ಞೆಗೆ ಸಾರ್ವಜನಿಕರಿಂದ ಇದೀಗ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯುವಕನನ್ನು ಗದಗ…
ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಾಜನೀಶ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ, ಸ್ನೇಹಮಯಿ ಆಡಿಯೋ ಬಾಂಬ್ ಗೆ ಸ್ಪೋಟಕವಾದ ಟ್ವಿಸ್ಟ್ ಸಿಕ್ಕಿದೆ. ಸ್ನೇಹಮಯಿ ಕೃಷ್ಣ ಸಿಲುಕಿಸಲು ಇಬ್ಬರು ಸೇರಿ ಬಲೆ ಹೆಣದಿದ್ದು, ಇದೀಗ ಆ ಒಂದು ಬಲೆಗೆ ಮುಡಾ ಮಾಜಿ ಆಯುಕ್ತ ನಟೇಶ್ ಹಾಗೂ ವಿನೋದ್ ಬಲೆಗೆ ಬಿದ್ದಿದ್ದಾರೆ. ಹೌದು ನಟೇಶ್ ಹಾಗೂ ಚಿನ್ನದ ಉದ್ಯಮಿ ವಿನೋದ್ ಸೇರಿ ಸ್ನೇಹಮಯಿ ಕೃಷ್ಣ ಅವರನ್ನು ಕಾನೂನು ಕುಣಿಕೆಯಲ್ಲಿ ಸಿಲುಕಿಸಲು ಪ್ಲಾನ್ ಮಾಡಿದ್ದರು. ಆದರೆ ಇದೀಗ ಸಿಸಿಬಿಗೆ ವಿನೋದ್ ಮತ್ತು ನಟೇಶ್ ಜೊತೆಗಿರುವ ಫೋಟೋ ಲಭ್ಯವಾಗಿದ್ದು, ಸ್ನೇಹಮಯಿ ಕೃಷ್ಣ ಅವರನ್ನು ಟ್ರ್ಯಾಕ್ ಮಾಡಲು ನಟೇಶ್ ಮತ್ತು ವಿನೋದ್ ಇಬ್ಬರು ಪ್ಲಾನ್ ಮಾಡಿದ್ದರು ಎನ್ನುವುದು ಸಿಸಿಬಿ ತನಿಖೆಯಲ್ಲಿ ಬದಲಾಗಿದೆ. ನಟೇಶ್ ಮಾತನಾಡಿದ್ದು ಎನ್ನಲದ ಆಡಿಯೋವನ್ನು ವಿನೋದ್ ಕೊಟ್ಟಿದ್ದ. ಈ ಮೂಲಕ ಸ್ನೇಹಮಯಿ ಕೃಷ್ಣ ಅವರ ವಿಶ್ವಾಸ ಗಳಿಸಿದ್ದ. ವಿನೋದ್ ಸಿಎಸ್ ಗೆ ನಟೇಶ್ ಲಂಚ ಕೊಟ್ಟ ಬಗ್ಗೆಯೂ ವಿನೋದ್ ಹೇಳಿದ್ದ.…
ಹಾಸನ : ಇತ್ತೀಚಿಗೆ ಅಷ್ಟೇ ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್ಗೆ ಯುವಕನೊಬ್ಬ ಬಲಿಯಾಗಿದ್ದ ಅದರ ಬೆನ್ನಲ್ಲೇ ಇದೀಗ ಹಾಸನದಲ್ಲಿ ಅವೈಜ್ಞಾನಿಕ ಹಂಪಿಗೆ ವಿದ್ಯಾರ್ಥಿನಿ ಒಬ್ಬಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಚಲಾಯಸುತ್ತಿದ್ದ ಬೈಕ್ನಿಂದ ಬಿದ್ದು ಯುವತಿಯೋರ್ವಳು ಸಾವನ್ನಪ್ಪಿರು ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ. ಇದೇ ಬೈಕ್ನಲ್ಲಿದ್ದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಗಾಯಾಳು ಸ್ವಾತಿಯನ್ನು (24) ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಸ್ತೆಯಲ್ಲಿದ್ದ ಹಂಪ್ ಕಾಣದ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಯುವತಿಯರಿಬ್ಬರು ಹೆಲ್ಮೆಟ್ ಧರಿಸದ ಕಾರಣ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಪ್ರಿಯಾ ಮತ್ತು ಸ್ವಾತಿ ಹೆಲ್ಮೆಟ್ ಧರಿಸದೆ ಬುಲೆಟ್ ರೈಡ್ ಮಾಡುತ್ತಿದ್ದರು. ಯುವತಿಯರಿಬ್ಬರು ಎಂಸಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರು.
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪವಿಶಾಚಿಕ ಕೃತ್ಯ ನಡೆದಿದ್ದು ಮಾದಕ ಮಾತ್ರೆಗಳನ್ನು ನೀಡಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಆಕೆಯ ಸ್ನೇಹಿತರೆ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು 19 ವರ್ಷದ ವಿದ್ಯಾರ್ಥಿನಿ ಬೆಲೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿದ್ದು ಈ ಕುರಿತು ಬೆಂಗಳೂರಿನ ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬನ್ನೇರುಘಟ್ಟ ಖಾಸಗಿ ಕಾಲೇಜು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ, ಪಶ್ಚಿಮ ಬಂಗಾಳ ಮೂಲದ ಡಿಕ್ಸಿನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇತ್ತೀಚೆಗೆ ಡಿಕ್ಸಿನ್ ಮತ್ತು ಮತ್ತೋರ್ವ ಗೆಳೆಯ ನಿಖಿಲ್ ಎಂಬಾತನೊಂದಿಗೆ ಸಂತ್ರಸ್ತೆ ವಿಲ್ಲಾಗೆ ತೆರಳಿದ್ದಳು. ಈ ವೇಳೆ ಯುವತಿಗೆ ನಶೆ ಮತ್ತು ಮಾದಕ ಮಾತ್ರೆಗಳನ್ನು ನೀಡಿ ಡಿಕ್ಸಿನ್ ಮತ್ತು ನಿಖಿಲ್ ಅತ್ಯಾಚಾರಗೈದು ಹಲ್ಲೆ ನಡೆಸಿದ್ದಾರೆ. ಪ್ರೀತಿಯ ಹೆಸರಲ್ಲಿ ಇಬ್ಬರಿಂದ ಅತ್ಯಾಚಾರ ನಡೆದಿದಿ ಎಂಬ ಗಂಭೀರ ಆರೋಪವನ್ನು ಯುವತಿ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ನಿಖಿಲ್ ಹಾಸನ ಜಿಲ್ಲೆಯ ಸಕಲೇಶಪುರ ಮೂಲದವನು ಎಂದು ತಿಳಿದು ಬಂದಿದೆ.
ದಾವಣಗೆರೆ : ದಾವಣಗೆರೆಯಲ್ಲಿ ಬೆಚ್ಚಿಬಿಳಿಸುವ ಘಟನೆ ಒಂದು ನಡೆದಿದ್ದು, ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹಾನಿಕಾರಕ ಚುಚ್ಚುಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ನಗರದ ಎಂಸಿಸಿ ‘ಬಿ’ ಬ್ಲಾಕ್ನಲ್ಲಿರುವ ಹಾಸ್ಟೆಲ್ನಲ್ಲಿ ನಡೆದಿದೆ. ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಚರ್ಮರೋಗ ವಿಭಾಗದ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ ಮಹಾರಾಷ್ಟ್ರದ ಸಿದ್ದಾರ್ಥ್ ತ್ರಯಂಬಕೆ (30) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ರಾತ್ರಿಯಿಂದ ವಿದ್ಯಾರ್ಥಿ ಕೊಠಡಿಯ ಬಾಗಿಲು ತೆರೆದಿರಲಿಲ್ಲ. ಅನುಮಾನಗೊಂಡು ಕೊಠಡಿಯ ಬಾಗಿಲು ತೆರೆದು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಬಡಾವಣೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಕುಟುಂಬಸ್ಥರ ದೂರಿನನ್ವಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
BREAKING : ಮಂಡ್ಯದಲ್ಲಿ ಬ್ರೇಕ್ ಫೇಲ್ ಆಗಿ ರೈಲಿಂಗ್ಸ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : ಪ್ರಯಾಣಿಕರೆಲ್ಲರೂ ಬಚಾವ್!
ಮಂಡ್ಯ : ಮಂಡ್ಯದಲ್ಲಿ ಭೀಕರ ಮತ ಅಪಘಾತ ಸಂಭವಿಸಿದ್ದು ಬ್ರೇಕ್ ಆಗಿ ರೈಲಿಂಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ ಅದೃಷ್ಟ ಬಸ್ನಲ್ಲಿ ಇದ್ದಂತಹ 60 ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳು ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. KSRTC ಬಸ್ ಕೆ.ಆರ್ ಪೇಟೆಯಿಂದ ಬೇರಿಯ ಕಡೆಗೆ ತೆರಳುತ್ತಿತ್ತು. ಡಿಕ್ಕಿ ರಬಸಕ್ಕೆ ಕೆಎಸ್ಆರ್ಟಿಸಿ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ಜಕಮ್ ಗೊಂಡಿದೆ. ಕೆಆರ್ ಪೇಟೆ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮದುವೆ ಹೆಸರಿನಲ್ಲಿ ಕ್ರಿಪ್ಟೋದಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ ಎಸಗಲಾಗಿದೆ. ಯುವತಿಯೊಬ್ಬಳು ಯುವಕನಿಗೆ ಮದುವೆ ಹೆಸರಲ್ಲಿ 21.22 ಲಕ್ಷ ವಂಚಿಸಿದ್ದಾಳೆ. ಬೆಂಗಳೂರಿನ ಟಿ ದಾಸರಹಳ್ಳಿ ಮೂಲದ ಯುವಕನಿಗೆ ಯುವತಿ ವಂಚನೆ ಎಸಗಿದ್ದಾಳೆ. ಮ್ಯಾಟ್ರಿಮೋನಿಯಲ್ಲಿ ವಧು ಹುಡುಕುತ್ತಿದ್ದ ಸಿ.ಎಸ್ ರಾಕೇಶ್ ಎಂಬ ಯುವಕನಿಗೆ ಶಿರಿಷ ಎಂಬಾಕೆ ಪರಿಚಯವಾಗಿದ್ದಳು. ಇಬ್ಬರು ಪರಸ್ಪರ ಸ್ನೇಹಿತರಾಗಿ ಫೋನ್ ಕಾಂಟಾಕ್ಟ್ ನಲ್ಲಿದ್ದರು. ನಂತರ ಮದುವೆಯಾಗೋಣ ಎಂದು ಯುವಕನಿಗೆ ಶಿರೀಶ ಆಮಿಷ ಒಡ್ಡಿದ್ದಾಳೆ. ಕ್ರಿಪ್ಟೋದಲ್ಲಿ ಟ್ರೇಡಿಂಗ್ ಮಾಡಲು ಹೇಳಿದ್ದಳು. ವೆಬ್ಸೈಟ್ ಲಿಂಕ್ ಹಾಗೂ ಬ್ಯಾಂಕ್ ಖಾತೆ ನೀಡಿ ಹಣ ಹೂಡಿಕೆ ಮಾಡಲು ಹೇಳಿದ್ದಾಳೆ. ಕೆಲ ದಿನಗಳ ಕಾಲ ಲಾಭದ ಅಂಶ ತೋರಿಸಿದ್ದ ಶಿರೀಶ ನಂತರ ಹಣ ಡ್ರಾ ಮಾಡಲು ಕಮಿಷನ್ ಕಟ್ಟಬೇಕು ಎಂದು ಸೂಚನೆ ನೀಡಿದ್ದಾಳೆ. ಹಂತ ಹಂತವಾಗಿ 21. 22 ಲಕ್ಷ ರೂಪಾಯಿ ಹಾಕಿಸಿಕೊಂಡು ವಂಚನೆ ಎಸಗಿದ್ದಾಳೆ. ಬಳಿಕ ಹೂಡಿಕೆ ಮಾಡಿದ ಹಣ ನೀಡದೆ ಲಾಭವು ನೀಡದೆ ವಂಚನೆ ಎಸಗಿದ್ದಾಳೆ. ಮೋಸ ಹೋದ ವಿಚಾರ ತಿಳಿದು…














