Subscribe to Updates
Get the latest creative news from FooBar about art, design and business.
Author: kannadanewsnow05
ಚಿತ್ರದುರ್ಗ : ಕೌಟುಂಬಿಕ ಕಲಹ ಹಿನ್ನೆಲೆ 2 ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುಷ್ಪ (25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಕಾಟಿಹಳ್ಳಿ ಗ್ರಾಮದ ಹರೀಶ್ ನಗರದ ಖಾಸಗಿ ಗಾರ್ಮೆಂಟ್ಸ್ ಕಾರ್ಮಿಕನಾಗಿದ್ದ. ಈ ವೇಳೆ ಈ ಗಾರ್ಮೆಂಟ್ಸ್ಗೆ ತೆರಳ್ತಿದ್ದ ಪುಷ್ಪ ಹಾಗೂ ಹರೀಶ್ ಮಧ್ಯೆ ಪ್ರೇಮಾಂಕುರವಾಗಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದ್ರೆ ಅನ್ಯಜಾತಿ ಎಂಬ ಕಾರಣಕ್ಕೆ ಹರೀಶ್ ಹಾಗೂ ಪುಷ್ಪ ಪೋಷಕರ ಮಧ್ಯೆ ತಾರತಮ್ಯ ಭಾವವಿದ್ದು, ಹರೀಶ್ ಮನೆಗೆ ಪುಷ್ಪ ಪೋಷಕರಿಗೆ ಎಂಟ್ರಿ ಇರಲಿಲ್ಲ. ಆದರೂ ಎದೆಗುಂದದೇ ಪತಿಯೇ ಪರದೈವ ಎಂದು ನಂಬಿ ಸತತ ಎರಡು ವರ್ಷಗಳಿಂದ ಅನ್ಯೋನ್ಯವಾಗಿದ್ದ ಪುಷ್ಪ ಹಾಗೂ ಹರೀಶ್ಗೆ ಒಂದೂವರೆ ವರ್ಷದ ಒಂದು ಮದ್ದಾದ ಗಂಡು ಮಗುವಿದೆ. ಈ ಮದ್ಯೆ, ಸಣ್ಣಪುಟ್ಟ ವಿಚಾರಕ್ಕೆ ಪದೇ ಪದೇ ಕೌಟಂಬಿಕ ಕಲಹ ಶುರುವಾಗಿದ್ದು, ಪರಸ್ಪರ ವಿಚ್ಛೇದನ ಪಡೆಯುವ ಮಟ್ಟಕ್ಕೆ ತಿರುಗಿತ್ತು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ದಂಪತಿ ಪೊಲೀಸ್…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಬಂಧನ ಭೀತಿಯಲ್ಲಿರುವ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನಿಗಾಗಿ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಷೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಾಲಯ, ಬಿಕ್ಲು ಶಿವ ಹತ್ಯೆ ಪ್ರಕರಣದ ಎ5 ಆಗಿರುವ ಭೈರತಿ ಬಸವರಾಜ್ ಗೆ ಲಿಂಕ್ ಆಗಿರುವ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ. ಹೈಕೋರ್ಟ್ ಗೆ ನೀಡಿದ್ದ ಮಾಹಿತಿಯನ್ನು ಸಲ್ಲಿಸುವಂತೆ ಎಸ್ ಪಿಪಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೂಚಿಸಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ನೀರಿನ ಟ್ಯಾಂಕರ್ ಗೆ ಆಯಿಲ್ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಾದಪ್ಪನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಟ್ಯಾಂಕರ್ ಸಿಬ್ಬಂದಿ ಗಿಡಗಳಿಗೆ ನೀರು ಹಾಕುತ್ತಿದ್ದ. ಈ ವೇಳೆ ವೇಗವಾಗಿ ಬಂದು ಟ್ಯಾಂಕರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಯಿಲ್ ಟ್ಯಾಂಕರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹೊಸಕೋಟೆ-ದಾಬಸ್ಪೇಟೆ ನಡುವಿನ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತ ಸ್ಥಳಕ್ಕೆ ಸೂಲಿಬೆಲೆ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಪ್ರೀತಿಸಿ ಅಂತರ್ಜಾತಿ ಮದುವೆಯಾಗಿದ್ದಕ್ಕೆ ಹೆತ್ತ ಮಗಳನ್ನು ಮರ್ಯಾದೆ ಹತ್ತೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೋಬಳಿ ಪೊಲೀಸರು ಮತ್ತೆ ಮೂರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.ಹುಬ್ಬಳ್ಳಿ ಗ್ರಾಮಾಂತರ ಠಾಣೆಯ ಪಿ ಐ ಮುರುಗೇಶ್ ನೇತೃತ್ವದಲ್ಲಿ ಬಂಧಿಸಲಾಗಿದೆ. ಇನಾಂ ವೀರಾಪುರ ಗ್ರಾಮದ ಫಕೀರ ಗೌಡ ಪಾಟೀಲ್, ಬಸನಗೌಡ ಪಾಟೀಲ್ ಹಾಗು ಗುರುಸಿದ್ದಗೌಡ ಪಾಟೀಲ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಇನ್ನು ಇದೆ ಘಟನೆಗೆ ಸಂಬಂಧಿಸಿದಂತೆ ರೋಚಕ ಟ್ವಿಸ್ಟ್ ದೊರೆತಿದೆ. ಮರ್ಯಾದಾ ಹತ್ಯೆಗೂ ಮುನ್ನ ಅಳಿ ವಿವೇಕಾನಂದನ ಇಡೀ ಕುಟುಂಬವನ್ನೇ ನಾಶ ಮಾಡಲು ತಂದೆ ಪ್ರಕಾಶ್ ಗೌಡ ಸಂಚು ರೂಪಿಸಿದ್ದ ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ದಲಿತ ಯುವಕ ವಿವೇಕಾನಂದನನ್ನು ಮದುವೆಯಾಗಿದ್ದಕ್ಕೆ 20 ವರ್ಷ ವಯಸ್ಸಿನ ಮಾನ್ಯಾ ಪಾಟೀಲ್ ಅವರನ್ನು ಅವರ ತಂದೆ ಪ್ರಕಾಶ್ ಗೌಡ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ. ಆದರೆ, ಕೇವಲ ಮಗಳ ಹತ್ಯೆ ಮಾತ್ರವಲ್ಲ, ಅಳಿಯ ವಿವೇಕಾನಂದನ ತಂದೆ ಮತ್ತು ವಿವೇಕಾನಂದನನ್ನೂ ಕೊಲ್ಲಲು ಪ್ರಕಾಶ್ ಗೌಡ…
ಬೆಂಗಳೂರು : ಮತಕಳ್ಳತನ ಕುರಿತಾಗಿ ಹೇಳಿಕೆ ನೀಡಿ ಸಚಿವ ಸ್ಥಾನದಿಂದ ವಜಾಗೊಂಡಿರುವ ಕೆ ಎನ್ ರಾಜಣ್ಣ ಅವರು ರಾಹುಲ್ ಗಾಂಧಿ ಅವರಿಗೆ ಸುದೀರ್ಘ ಪತ್ರಬರೆದಿದ್ದಾರೆ. ಪತ್ರದಲ್ಲಿ, ನಾನು ಈ ಪತ್ರ ಬರೆದ ಉದ್ದೇಶ ಇಷ್ಟೇ. ನನ್ನ ವಿರುದ್ದ ತಮಗೆ ತಪ್ಪು ಮಾಹಿತಿ ನೀಡಿದವರ ಮೇಲೆ ಕ್ರಮ ಆಗಬೇಕು. ನನ್ನ ಹೇಳಿಕೆಯ ಉದ್ದೇಶವನ್ನ ತಮಗೆ ತಪ್ಪಾಗಿ ಅರ್ಥೈಸುವಂತೆ ಮಾಡಿದವರ ಮೇಲೆ ಕ್ರಮ ಆಗಬೇಕು. ಜೊತೆಗೆ ಈ ಬಗ್ಗೆ ಕೂಲಂಕುಷವಾಗಿ ಚರ್ಚಿಸಲು ತಮ್ಮ ಭೇಟಿಗೆ ಅವಕಾಶ ನೀಡಿ ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ರಾಹುಲ್ ಗಾಂಧಿ ಬಳಿ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ, ನಾನು ತುಮಕೂರು ಜಿಲ್ಲೆಯ ಮಧುಗಿರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಹಕಾರ ಸಚಿವ ಹಾಗೂ ಹಾಸನ ಜಿಲ್ಲೆಯ ಉಸ್ತುವಾರಿ ಸಚಿವನಾಗಿದ್ದೆ. ನನ್ನನ್ನು ಸಂಪುಟದಿಂದ ವಜಾ ಮಾಡಿರುವ ಸಂಬಂಧ ನಾನು ಕೆಲ ಸತ್ಯಾಂಶಗಳನ್ನು ನಿಮ್ಮ ಗಮನಕ್ಕೆ ತರಲು…
ಬೆಂಗಳೂರು : 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ನಾನೇ ಉದ್ಘಾಟನೆ ಮಾಡ್ತೀನಿ. ಈ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಸಮಿತಿ ನಿರ್ಧರಿಸಿದಂತೆ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದೆ. 400 ಪ್ರದರ್ಶನಗಳು ಇರಲಿವೆ. ಈ ವರ್ಷ ಆಸ್ಕರ್ ಪ್ರಶಸ್ತಿಗಳಿಗೆ ಶಾರ್ಟ್ ಲಿಸ್ಟ್ ಆಗಿರೋ ಚಿತ್ರಗಳು ಪ್ರದರ್ಶನ ಆಗಲಿವೆ. ಜೊತೆಗೆ ಇತ್ತೀಚಿಗೆ ಅಗಲಿದ ನಟ ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್, ರಘು, ಇನ್ನಿತರ ಗಣ್ಯರ ಸ್ಮರಣಾರ್ಥ ಶ್ರದ್ಧಾಂಜಲಿ ಮತ್ತು ಸವಿನೆನಪು ವಿಭಾಗದಲ್ಲಿ…
ಚಾಮರಾಜನಗರ : ಚಾಮರಾಜನಗರದಲ್ಲಿ ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತನೊಬ್ಬ ಲಾಕ್ ಆಗಿರುವ ಘಟನೆ ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.ಕುತೂಹಲಕ್ಕೆ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದ ರೈತ 3 ಗಂಟೆ ಕಾಲ ಲಾಕ್ ಆಗಿದ್ದಾನೆ. ಗ್ರಾಮದ ಕಿಟ್ಟಿ ಎಂಬ ರೈತ ಮೂರು ಗಂಟೆಗಳ ಕಾಲ ಬೋನಿನೊಳಗೆ ಲಾಕ್ ಆಗಿದ್ದರು.ಬೋನಿನ ಬಾಗಿಲು ತೆರೆಯಲು ಯತ್ನಿಸಿದರೂ ಕೂಡ ಆಗದೇ ವಿಫಲರಾಗಿದ್ದಾರೆ. ಬಳಿಕ ಕಾಪಾಡಿ ಕಾಪಾಡಿ ಎಂದು ಕೂಗಿಕೊಂಡಿದ್ದು, ಕಿಟ್ಟಿಯ ಚೀರಾಟ ಕೇಳಿ ಸ್ಥಳಕ್ಕೆ ಬಂದ ರೈತರು ಬಂಧ ಮುಕ್ತಗೊಳಿಸಿದ್ದಾರೆ. ಗ್ರಾಮದಲ್ಲಿನ ಮೂರು ಹಸುಗಳನ್ನು ಚಿರತೆ ಕೊಂದು ಹಾಕಿತ್ತು. ಈ ಹಿನ್ನೆಲೆ ಚಿರತೆ ಸೆರೆಗೆ ರುದ್ರ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟಿದ್ದರು. ಈ ವೇಳೆ ಕಿಟ್ಟಿ ಯಾರೂ ಇಲ್ಲದ ವೇಳೆ ಕುತೂಹಲದಿಂದ ಬೋನಿನ ಒಳಹೊಕ್ಕಿದ್ದರು. ಈ ವೇಳೆ ಆಟೋಮ್ಯಾಟಿಕ್ ಆಗಿ ಮುಚ್ಚಿಕೊಂಡ ಬೋನಿನ ಬಾಗಿಲು ಲಾಕ್ ಆಗಿದೆ.
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಇಂದು ಲಿಫ್ಟ್ ನ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಕೆಲಕಾಲ ಲಿಫ್ಟನಲ್ಲಿ ಸಿಲುಕಿರುವ ಘಟನೆ ನಡೆದಿದೆ ಪ್ರಗತಿ ಪರಿಶೀಲನ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬರುತ್ತಿದ್ದರು. ಬೆಂಗಳೂರಿನ ಬಿಎಂಆರ್ಸಿಎಲ್ ಮುಖ್ಯ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಬಂದಿದ್ದರು. ಈ ವೇಳೆ ಲಿಫ್ಟ್ ನಲ್ಲಿ ಕೆಲ ಕಾಲ ಸಿಲುಕಿದ್ದರು. ಬಳಿಕ ಸೆಕ್ಯೂರಿಟಿ ಗಾರ್ಡ್ ಗಳು ಲಿಫ್ಟ್ ಓಪನ್ ಮಾಡಿದರು.
ಬೆಂಗಳೂರು : ನಕಲಿ ಸ್ಟ್ಯಾಂಪ್ ಪೇಪರ್ ಹಗರಣದಲ್ಲಿ ಶ್ರೀನಿವಾಸ್ ನಾಯ್ಡು CBI ವಶಕ್ಕೆ ಪಡೆದುಕೊಂಡಿದೆ. ದಿ.ಆದಿಕೇಶವುಲು ನಾಯ್ಡು ಪುತ್ರ ಶ್ರೀನಿವಾಸ್ ನಾಯ್ಡುಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದಾರೆ. ಟಿಟಿಡಿ ಮಾಜಿ ಅಧ್ಯಕ್ಷ, ಮಾಜಿ ಸಂಸದ ಆದಿಕೇಶವುಲು ಪುತ್ರನನ್ನು ಇದೀಗ CBI ವಶಕ್ಕೆ ಪಡೆದುಕೊಂಡಿದ್ದಾರೆ. ಇದೆ ಪ್ರಕರಣದಲ್ಲಿ ಸಾಕ್ಷಿ ನಾಶ ಆರೋಪದಲ್ಲಿ ಡಿವೈಎಸ್ಪಿ ಮೋಹನ್ ಸಹ ಸಿಬಿಐ ವಶಕೆ ಪಡೆದುಕೊಂಡಿದ್ದಾರೆ. ನಕಲಿ ಸ್ಟ್ಯಾಂಪ್ ಪೇಪರ್ ಮತ್ತು ರಘುನಾಥ್ ಕೊಲೆ ಕೇಸ್ ನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಆದಿಕೇಶವುಲು ಪುತ್ರಿ ಕಲ್ಪಜಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 2019 ರಲ್ಲಿ ಗೆಸ್ಟ್ ಹೌಸ್ ನಲ್ಲಿ ರಘುನಾಥ್ ಮೃತಪಟ್ಟಿದ್ದರು. HAL ಠಾಣಾ ವ್ಯಾಪ್ತಿಯಲ್ಲಿ ನೇಣುಬಿಗಿದು ಸ್ಥಿತಿಯಲ್ಲಿ ಪತ್ತೆ ಆಗಿದ್ದ. ಸಾವಿಗೂ ಮುನ್ನ ಆಸ್ತಿ ತಮ್ಮ ಹೆಸರಿಗೆ ಮಾರಿದ ರೀತಿ ದಾಖಲೆ ಸೃಷ್ಟಿ ಮಾಡಿದ್ದಾರೆ. ಆಸ್ತಿಗಾಗಿ ಕೊಲೆ ಎಂದು HAL ಠಾಣೆಗೆ ದೂರು ನಿದ್ದಿದ್ದ ರಘುನಾಥ್ ಪತ್ನಿ ಪ್ರಕರಣದ ತನಿಖೆಯನ್ನು SIT ಗೆ ನೀಡಲಾಗಿತ್ತು. ನಂತರ ಈ ಪ್ರಕರಣ ಸಿಬಿಐಗೆ ನೀಡಿ ಹೈಕೋರ್ಟ್…
ಅವಿನಾಶ್ ಆರ್ ಭೀಮಸಂದ್ರ ನವದೆಹಲಿ: ನೀವು ಹೂಡಿಕೆಯನ್ನು ಯೋಜಿಸುತ್ತಿದ್ದರೆ ಮತ್ತು ನಿಮ್ಮ ಹಣವು ಸುರಕ್ಷಿತವಾಗಿರಲು ಮತ್ತು ಅದರ ಮೇಲೆ ಬಲವಾದ ಆದಾಯವನ್ನು ಪಡೆಯಲು ಬಯಸಿದರೆ, ಈ ನಿಟ್ಟಿನಲ್ಲಿ ಪೋಸ್ಟ್ ಆಫೀಸ್ (ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳು) ನಡೆಸುವ ಯೋಜನೆಗಳು ನಿಮಗೆ ಉಪಯುಕ್ತವಾಗಬಹುದು. ಇವುಗಳಲ್ಲಿ ಮಾಡಿದ ಹೂಡಿಕೆಗಳಿಗೆ, ಅಂದರೆ ಅಪಾಯ-ಮುಕ್ತ ಹೂಡಿಕೆಗೆ ಸರ್ಕಾರವೇ ಭದ್ರತೆಯನ್ನು ಖಾತರಿಪಡಿಸುತ್ತದೆ. ಇಂತಹ ಸರ್ಕಾರಿ ಯೋಜನೆಯ ಬಗ್ಗೆ ನಾವು ನಿಮಗೆ ಹೇಳುತ್ತಿದ್ದೇವೆ, ಇದರಲ್ಲಿ ಹಣವನ್ನು ಹೂಡಿಕೆ ಮಾಡುವ ಮೂಲಕ ನೀವು ಕೇವಲ 2 ಲಕ್ಷದವರೆಗೆ ಬಡ್ಡಿಯಿಂದ ಗಳಿಸಬಹುದು. ಹೌದು, ಇದೊಂದು ಅದ್ಭುತ ಯೋಜನೆ, ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಸ್ಕೀಮ್, ಇದರ ಬಗ್ಗೆ ತಿಳಿದುಕೊಳ್ಳೋಣ… 1 ರಿಂದ 5 ವರ್ಷಗಳವರೆಗೆ ಹೂಡಿಕೆಯ ಆಯ್ಕೆ ಪೋಸ್ಟ್ ಆಫೀಸ್ ಸಣ್ಣ ಉಳಿತಾಯ ಯೋಜನೆಗಳು ತಮ್ಮ ಉತ್ತಮ ಆದಾಯದಿಂದಾಗಿ ಸಾಕಷ್ಟು ಜನಪ್ರಿಯವಾಗಿವೆ. ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಸ್ಕೀಮ್ (ಪಿಒ ಟಿಡಿ ಸ್ಕೀಮ್) ಬಗ್ಗೆ ಮಾಹಿತಿ ತಿಳಿದುಕೊಳ್ಲೋಣ. ಆದ್ದರಿಂದ ಇದರಲ್ಲಿ ಹೂಡಿಕೆದಾರರು…














