Author: kannadanewsnow05

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿ ಜಿಲ್ಲೆಯ ಬೈಲಾಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಯಣ್ಣ ಶಾಲೆಯನ್ನು ಉದ್ಘಾಟಿಸಿ ಮಾತನಾಡಿ ರಾಯಣ್ಣ ಶಾಲೆಯಲ್ಲಿ ಕನ್ನಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶೇಕಡ 65 ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಓರ್ವ ಯೋಧ.ಹಿಂದೆ ಸೈನಿಕ ಶಾಲೆ ನಿರ್ಮಿಸಲು 110 ಎಕರೆ ಜಮೀನು ನೀಡಿದ್ದೆ. ನಾನೇ ಶಂಕುಸ್ಥಾಪನೆ ಕೂಡ ಮಾಡಿದ್ದೆ. ಜಮೀನಿಗೆ ಹಣ ನಾನೇ ಕೊಟ್ಟಿದ್ದೆ ಎಂದು ತಿಳಿಸಿದರು. ಈಗ ನಾನೇ ಉದ್ಘಾಟನೆ ಮಾಡಿದ್ದು ಸಂತೋಷದ ಸಂಗತಿಯಾಗಿದೆ. ರಾಯಣ್ಣ ಶಾಲೆಯಲ್ಲಿ ಕನ್ನಡ ಮಕ್ಕಳಿಗೆ ಮೀಸಲಾತಿ ನೀಡಲು ಸಿದ್ಧ.ರಾಯಣ್ಣ ಶಾಲೆಯಲ್ಲಿ ಶೇ.65 ರಷ್ಟು ಕನ್ನಡ ಮಕ್ಕಳಿಗೆ ಮೀಸಲು ನೀದ್ಲಾಗುತ್ತದೆ.ಗುಣಮಟ್ಟದ ಶಿಕ್ಷಣ ನೀಡಲು ಸೈನಿಕ ಶಾಲೆ ಸ್ಥಾಪನೆ ಮಾಡಿದ್ದೇವೆ ಎಂದು ಸಂಗೊಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಎಂಪಿ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿದರೆ…

Read More

ಬೆಂಗಳೂರು : ಇತ್ತೀಚಿಗೆ ಹೈದ್ರಾಬಾದ್ ನಲ್ಲಿ ಮೈಸೂರು ನಕಲಿ ಸೋಪು ತಯಾರಿಕೆಯಲ್ಲಿ ಬಿಜೆಪಿ ನಾಯಕರು ಶಾಮೀಲಾಗಿದ್ದಾರೆ ಎಂದು ಗ್ರಾಮೀಣಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರವಾದಂತ ಆರೋಪ ಮಾಡಿದರು. ಬೆಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ಒಂದು ಪ್ರಕರಣದಲ್ಲಿ ಬಿಜೆಪಿ ನಾಯಕರು ಶಾಮಿಲಾಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯ ನಾಯಕರು ಕೂಡ ಶಾಮೀಲು ಆಗಿದ್ದಾರೆ. ನಕಲಿ ಮಾಡುವುದರಲ್ಲಿ ಬಿಜೆಪಿ ನಾಯಕರು ಶಾಮೀಲು ಎಂದು ಆರೋಪಿಸಿದರು. ಅಲ್ಲದೆ ಮಣಿಕಂಠ ರಾಠೋಡ್ಗೂ ತಯಾರಿಕರಿಗೂ ಏನು ನಂಟಿದೆ? ಬಿಜೆಪಿ ದುಡ್ಡು ಮಾಡಲು ಯಾವುದಕ್ಕೂ ಹೇಸುವುದಿಲ್ಲ ನಕಲಿ ಸೋಪ್ ತಯಾರಕ ಮಹಾವೀರ ಜೈನ್ ಇದ್ದಾನೆ ಮಹಾವೀರ ಜೈನ್ ಕೂಡ ಇದರಲ್ಲಿ ಭಾಗಿಯಾಗಿದ್ದಾನೆ ಎಂದು ಬೆಂಗಳೂರಿನಲ್ಲಿ ಹೆಚ್ಚು ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಹೈದರಾಬಾದ್​​ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ನಕಲಿ ತಯಾರಿಸಿ ಮಾರಾಟ…

Read More

ಬೆಂಗಳೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯನವರು ಮುಂದಿನ ಐದು ವರ್ಷದವರೆಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು ಗ್ಯಾರಂಟಿ ಯೋಜನೆಗಳು ಕೂಡ ಐದು ವರ್ಷದ ಅವಧಿಗೆ ಇರುತ್ತವೆ ಎಂಬ ಹೇಳಿಕೆಗೆ ಕಾಂಗ್ರೆಸ್ ನಾಯಕರು ಇದೀಗ ತಮ್ಮ ಪ್ರತಿಕ್ರಿಯೆ ನೀಡಿದ್ದು ಎಲ್ಲರೂ ಅದು ಯತೀಂದ್ರ ಅವರ ವೈಯಕ್ತಿಕ ಹೇಳಿಕೆ ಎಂದು ತಿಳಿಸಿದ್ದಾರೆ. MP ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ CM’ಆಗಿರುತ್ತಾರೆ ಎಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಸದ್ಯ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್​ನ ಅನೇಕ ನಾಯಕರು ಈ ಬಗ್ಗೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ ಇದೀಗ ಮಾಜಿ ಶಾಸಕ ಯತೀಂದ್ರ ಹೇಳಿಕೆಗೆ ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಸಿಎಂ ಮುಂದುವರಿಸುವುದು ಬಿಡುವುದು ನಮ್ಮ ಹೈಕಮಾಂಡ್ ನಿರ್ಧಾರ ಮಾಡ್ತಾರೆ. ಸಿಎಂ ಬಗ್ಗೆ ನಿರ್ಧಾರ ಮಾಡುವುದು ನಾವಲ್ಲ. ಲೋಕಸಭೆ ಚುನಾವಣೆಯಲ್ಲಿ ಕೇವಲ ಸಿಎಂ ಸಿದ್ದರಾಮಯ್ಯ ಮಾತ್ರವಲ್ಲ. ಕೆಪಿಸಿಸಿ…

Read More

ಬೆಂಗಳೂರು : ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ ಎಂದು ಬರೆದು ನಿನ್ನೆ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ನಿದ್ದೆ ಮಾಡುವ ರೀತಿಯ ಫೋಟೋ ಟ್ವೀಟ್ ಮಾಡಿದ್ದರು.ಸದ್ಯ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಜನ ನಿಮ್ಮನ್ನು ಮುಂದೆ ನಿದ್ರೆಗೆ ಬ್ರ್ಯಾಂಡ್ ಮಾಡುತ್ತಾರೆ ನೋಡಿ ಎಂದು ಕೌಂಟರ್ ಕೊಟ್ಟಿದ್ದಾರೆ. ಕಾರ್ಯಕ್ರಮಗಳಲ್ಲಿ ಪ್ರಧಾನಿ ನಿದ್ದೆ ಮಾಡ್ತಿರುವ ಒಂದು ದಾಖಲೆ ಕೊಡಿ. ಸಿದ್ದರಾಮಯ್ಯ ಮಲಗಿರೋದಕ್ಕೆ ಸಾಕ್ಷಿ ಇದೆ. ಇತರರು ಬಂದು ಎದ್ದೇಳಣ್ಣೋ ಸಿದ್ರಾಮಣ್ಣ ಅಂತಾ ಎಚ್ಚರಿಸಿದ್ದಾರೆ. ಮೋದಿ ಹಾಗೇ ಮಲಗಿರೋದು ಒಂದು ಫೋಟೋ ತೋರಿಸಿ. ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಅವಧಿ ಕೆಲಸ‌ ಮಾಡಿದ್ದಾರೆ. ನೀವು 5 ತಾಸು ಕೆಲಸ ಮಾಡಲ್ಲ, ನಿಮ್ಮಿಂದ ಅಭಿವೃದ್ಧಿ ಮಾಡಲಾಗಿಲ್ಲ. ಅಭಿವೃದ್ಧಿ ಮಾಡುವವರನ್ನು ಸಿದ್ದರಾಮಯ್ಯನವರು ಟೀಕೆ‌ ಮಾಡ್ತಾರೆ. ಮಲಗಿರುವ ಒಂದು ಫೋಟೋ ನಿಮ್ಮ ಮನೆಯಲ್ಲಿ ಹಾಕಿಕೊಳ್ಳಿ. ನಿದ್ದೆರಾಮಯ್ಯ ಅಂತಾನೇ ನಿಮಗೆ ಹೆಸರಿದೆ ಎಂದು ಅಶೋಕ್ ಕಿಡಿ ಕಾರಿದ್ದಾರೆ.…

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮೊದಲ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿದೆ. ಸಿದ್ದಾಪುರ ಮೂಲದ ವ್ಯಕ್ತಿ ಹೊರಗೆ ಮಂಗನ ಕಾಯಿಲೆ ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಸಿದ್ದಾಪುರದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆ ಇರುವ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ವರ್ಷಗಳಿಂದ ಮಂಗನ ಕಾಯಿಲೆ ಇಳಿಕೆ ಕಂಡಿತ್ತು. ಜಿಲ್ಲೆಯಲ್ಲಿ ಇದೀಗ ಮತ್ತೆ ಮಂಗನ ಕಾಯಿಲೆ ಪತ್ತೆಯಾಗಿದೆ ಕಳೆದ ಚಳಿಗಾಲದ ಅಧಿವೇಶನದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಕಾಯಿಲೆ ಕುರಿತು ಅಧಿವೇಶನದಲ್ಲಿ ಮಾತನಾಡಿ, ಮಲೆನಾಡಿನ ಜನರನ್ನು ಕಾಡುತ್ತಿರುವ ಕೆಎಫ್‌ಡಿ ಸಮಸ್ಯೆಯನ್ನು ಸರ್ಕಾರ ಗಂಭೀರ ಪರಿಗಣಿಸಿದೆ. ಹೀಗಾಗಿ, ಐಸಿಎಂಆರ್ ಜೊತೆ ಚರ್ಚೆ ನಡೆಸಿದ್ದು, ಹೊಸ ಲಸಿಕೆ ಸಂಶೋಧನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಮಂಗನ ಕಾಯಿಲೆ ತಡೆಗೆ ನೀಡುತ್ತಿದ್ದ ಯಾವುದೇ ರೀತಿಯ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ, ಲಸಿಕೆ ವಿತರಣೆ ಸ್ಥಗಿತಗೊಳಿಸಲಾಗಿದೆ. ಖಾಸಗಿ ಕಂಪನಿಯ ಸಹಯೋಗದೊಂದಿಗೆ ಹೊಸ ಲಸಿಕೆ ಸಂಶೋಧನೆ ನಡೆಸಲಾಗುತ್ತಿದೆ ಎಂದು ಎಂದು…

Read More

ಕೋಲಾರ : ಮುಳಬಾಗಿಲು ಪಟ್ಟಣದಲ್ಲಿ ಶ್ರೀ ರಾಮನ ಫ್ಲೆಕ್ಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗುಣಗುಂಟೆಪಾಳ್ಯದಲ್ಲಿ ಸಂಕ್ರಾತಿ ಹಬ್ಬದ ಅಂಗವಾಗಿ ಶ್ರೀ ರಾಮನ ಬ್ಯಾನರ್ ಹಾಗೂ ಫ್ಲಕ್ಸ್ ಗಳನ್ನು ಹಾಕಲಾಗಿತ್ತು.ನಿನ್ನೆ ರಾತ್ರಿ ಕಿಡಿಗೇಡಿಗಳು ಬ್ಲೇಡ್ನಿಂದ ರಾಮನ ಕಟ್ ಔಟ್ ಹಾಗೂ ಫ್ಲಾಕ್ಸ್ ಗಳನ್ನು ಮಾಂಸ ಕಡಿಯುವ ಮಚ್ಚಿನಿಂದ ಹರಿದು ಹಾಕಿ ಶಾಂತಿ ಕದಡುವಕೆಲಸ ನಡೆದಿದೆ. ಘಟನೆ ಹಿನ್ನೆಲೆ ಇದೇ 22ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮಂದಿರ ಉದ್ಘಾಟನೆ ಕಾರ್ಯಕ್ರಮ ಆಯೋಜನೆ ಮಾಡಿದ್ದು ದೇಶದ ರಾಮನ ಭಕ್ತರಲ್ಲಿ ಸಂಭ್ರಮ ಮನೆ ಮಾಡಿದ್ದು ಒಂದೆಡೆಯಾದರೆ ಇನ್ನೊಂದೆಡೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಶ್ರೀರಾಮನ ಭಾವಚಿತ್ರ ಇರುವ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಹರಿದು ಹಾಕಿ ಗಲಭೆಯನ್ನು ಸೃಷ್ಟಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲಿನ ಗುಣಗಂಟೆಪಾಳ್ಯದಲ್ಲಿ ಘಟನೆ ನಡೆದಿದ್ದು, ನಿನ್ನೆ ರಾತ್ರಿ 10:4ರ ಸುಮಾರಿಗೆ…

Read More

ಉಡುಪಿ : ಇದೇ 22ರಂದು ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಇದಕ್ಕೆ ಕಾಂಗ್ರೆಸ್ ಪಕ್ಷಕ್ಕೂ ಕೂಡ ಆಹ್ಹಾನ ನೀಡಲಾಗಿತ್ತು ಆದರೆ ಕಾಂಗ್ರೆಸ್ ಪಕ್ಷ ಇದನ್ನು ಗೌರವಯುತವಾಗಿ ತಿರಸ್ಕರಿಸಿದೆ. ಆದರೆ ಇದೀಗ ಉಡುಪಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ನಾನೂ ಕೂಡ ಅಯೋಧ್ಯ ರಾಮಮಂದಿರಕ್ಕೆ ದೇಣಿಗೆ ಕೊಟ್ಟಿದ್ದೇನೆ ಒಂದಲ್ಲ ಒಂದು ದಿನ ರಾಮಮಂದಿರಕ್ಕೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ. ರಾಮ ಹಾಗು ಕೃಷ್ಣನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ ನಾನು ನಮ್ಮ ಸಂಸ್ಕೃತಿ ಹಾಗೂ ಭಕ್ತಿಯನ್ನು ಆಚರಿಸುತ್ತೇನೆ ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡುವುದಿಲ್ಲ ನಾನು ಪಕ್ಷದ ಅಧ್ಯಕ್ಷ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ ನಾನು ದೈವಿಭಕ್ತರು ಎಂದು ಪದೇಪದೇ ಹೇಳುತ್ತೇನೆ ರಾಮಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗುವೆ ಅಯೋಧ್ಯೆಯಲ್ಲಿರುವ ರಾಮಮಂದಿರ ದೇಶದ 140 ಕೋಟಿ ಜನರದ್ದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ, ಲಕ್ಷ್ಮಿ…

Read More

ಮೈಸೂರು : ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿ ಕೊಟ್ಟರೆ ಮುಂದಿನ ಪೂರ್ಣಾ ಅವಧಿಯಲ್ಲಿ ಸಿದ್ದರಾಮಯ್ಯನವರು ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂಬ ಯತೀಂದ್ರ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದು, ಐದು ವರ್ಷ ಸಿಎಂ ಆಗುವ ಆಸೆ ಇರುವ ಸಿದ್ದರಾಮಯ್ಯನವರು ಮಗನ ಮೂಲಕ ಹೇಳಿಸಿದ್ದು ಡಿಕೆ ಶಿವಕುಮಾರ್ ಅವರೇ ಸಿದ್ದರಾಮಯ್ಯನವರೇ ನಿಮಗೆ ವಿರೋಧಿಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಬಗ್ಗೆ ನನಗೆ ಪಾಪ ಅನ್ನಿಸುತ್ತದೆ. ಎಸ್ಎಂ ಕೃಷ್ಣ ಬಳಿಕ ಮತ್ತೊಮ್ಮೆ ಅವಕಾಶ ಬಂದಿದೆ ಎಂದು ಹೇಳಿದ್ದರು.ಚುನಾವಣೆಗೆ ಮುನ್ನ ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯಕ್ಕೆ ತಿಳಿಸಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ಪಕ್ಷ ಕಟ್ಟಿ ಬಂಡವಾಳವನ್ನು ಹಾಕಿದ್ರು ಅಧಿಕಾರ ಬಂದ ಮೇಲೆ ಹಠ ಹಿಡಿದು ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು ಎಂದು ಹೇಳಿದರು. ಕುರ್ಚಿಯಲ್ಲಿ ಕೂತ ಕೂಡಲೇ ಪೂರ್ಣಾವಧಿ ಮುಖ್ಯಮಂತ್ರಿಯಾಗುವ ಪ್ಲಾನ್ ಆಗಿತ್ತು. ಎಂಬಿ ಪಾಟೀಲ್, ಸತೀಶ್, ರಾಜಣ್ಣ ಮೂಲಕ ಮೊದಲು ಹೇಳಿಸಿದ್ದರು. ಈಗ ಮಗನಿಂದ…

Read More

ಉತ್ತರಕನ್ನಡ : ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಅನಧಿಕೃತ ಮಸೀದಿಗಳನ್ನು ತೆರವುಗೊಳಿಸುವಂತೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಅನಧಿಕೃತ ಮಸೀದಿ ತೆರವು ಕುರಿತಾಗಿ ಭಟ್ಕಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಮನವಿ ಸಲ್ಲಿಕೆಯಾಗಿದ್ದು. ಅನಧಿಕೃತ ಮಸೀದಿ ತೆರುವುಗೊಳಿಸುವಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ಜಾಲಿ ಪಟ್ಟಣದಲ್ಲಿ ನಿರ್ಮಿಸಿರುವ ಅನಧಿಕೃತ ಮಸೀದಿಗೆ ತೆರವಿಗೆ ಒತ್ತಾಯಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಭಟ್ಕಳ ತಾಲೂಕಿನ ಜಾಲಿ ಪಟ್ಟಣದಲ್ಲಿನ ಮಸೀದಿ ತೆರವಿಗೆ ಮನವಿ ಸಲ್ಲಿಸಿದ್ದಾರೆ. ಮದರಸಾ ಉದೇಶಕ್ಕಾಗಿ ಕಟ್ಟಡದ ಪರವಾನಿಗೆ ಪಡೆಯಲಾಗಿತ್ತು.ಆದರೆ ಕಟ್ಟಡದ ಎರಡನೇ ಮಹಡಿಯಲ್ಲಿ ಮಸೀದಿಯಾಗಿ ಪರಿವರ್ತನೆ ಮಾಡಲಾಗಿದೆ.ಅನಧಿಕೃತ ಮಸೀದಿ ನಿರ್ಮಿಸುವುದನ್ನು ತೆರುಗುಗೊಳಿಸಲು ಹಿಂದೂ ಕಾರ್ಯಕರ್ತರು ಅಗ್ರಹಿಸಿದ್ದಾರೆ. ಅದರಂತೆ ಜಾಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ ಈ ಕುರಿತಂತೆ ಮನವಿ ಸಲ್ಲಿಸಿವೆ. ಕಟ್ಟಡದ ಎರಡನೇ ಮಹಡಿಗೆ ಯಾವುದೇ ಪರವಾನಿಗೆ ಪಡೆಯದೆ ನಿರ್ಮಾಣ ಮಾಡಲಾಗಿದೆ. ಮಸೀದಿಯಲ್ಲಿರುವ…

Read More

ಕೋಲಾರ : ಇದೇ 22ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮಂದಿರ ಉದ್ಘಾಟನೆ ಕಾರ್ಯಕ್ರಮ ಆಯೋಜನೆ ಮಾಡಿದ್ದು ದೇಶದ ರಾಮನ ಭಕ್ತರಲ್ಲಿ ಸಂಭ್ರಮ ಮನೆ ಮಾಡಿದ್ದು ಒಂದೆಡೆಯಾದರೆ ಇನ್ನೊಂದೆಡೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಶ್ರೀರಾಮನ ಭಾವಚಿತ್ರ ಇರುವ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಹರಿದು ಹಾಕಿ ಗಲಭೆಯನ್ನು ಸೃಷ್ಟಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲಿನ ಗುಣಗಂಟೆಪಾಳ್ಯದಲ್ಲಿ ಘಟನೆ ನಡೆದಿದ್ದು, ನಿನ್ನೆ ರಾತ್ರಿ 10:4ರ ಸುಮಾರಿಗೆ ಕಿಡಿಗೇಡಿಗಳು ಶ್ರೀ ರಾಮನ ಬ್ಯಾನರ್ ನನ್ನು ಬ್ಲೇಡ್ ಇಂದ ಫ್ಲೆಕ್ಸ್ ಹರಿದಿದ್ದಾರೆ ಎಂದು ಹೇಳಲಾಗುತ್ತಿದೆ.ಸಂಕ್ರಾಂತಿ ಹಬ್ಬ ಹಿನ್ನಲೆಯಲ್ಲಿ ಶ್ರೀರಾಮನ ಕಟೌಟ್ ಹಾಗೂ ಫ್ಲೆಕ್ಸ್ ಅನ್ನು ಅಳವಡಿಸಲಾಗಿತ್ತು. ಯುವಕರು ಅಳವಡಿಸಿದ್ದ ಕಟೌಟ್ ಅನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ ಎಂದ ಹೇಳಲಾಗುತ್ತಿದ್ದು. ಘಟನಾ ಸ್ಥಳಕ್ಕೆ ಮುಳಬಾಗಿಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯ ಪೊಲೀಸರು ಸಿಸಿ ಕ್ಯಾಮರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.ಸ್ಥಳಕ್ಕೆ ಸಂಸದ ಮುನಿಸ್ವಾಮಿ ಸೇರಿ ಹಲವು ಮುಖಂಡರು ಆಗಮಿಸಿದ್ದಾರೆ.

Read More