Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ದುಬೈ ನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿ ಆರ್ ಐ ಕಸ್ಟಡಿಯಲ್ಲಿದ್ದ ನಟಿ ರನ್ಯಾರಾವ್ ಇಂದು ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಮತ್ತೆ ಅಧಿಕಾರಿಗಳು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಿದ್ದಾರೆ. ಕೋರ್ಟ್ ನಲ್ಲಿ ನಟಿ ರನ್ಯಾರಾವ್ ಹಾಜರಾದ ಬಳಿಕ ಕಣ್ಣೀರು ಹಾಕಿದರು. ಈ ವೇಳೆ ಹಲ್ಲೆ ಮಾಡಿದ್ರ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದಾಗ, ಕೋರ್ಟ್ನಲ್ಲೇ ನಟಿ ರನ್ಯರಾವ್ ಅತ್ತಿದ್ದಾರೆ. ನಾನು ಎಮೋಷನಲ್ ಬ್ರೋಕನ್ ಆಗಿದ್ದೇನೆ. ಕೆಟ್ಟದಾಗಿ ನನಗೆ ಬೈದಿದ್ದಾರೆ. ತಲೆಗೆ ಸುತ್ತಿಗಿಯಲ್ಲಿ ಹೊಡೆದಂತೆ ಪ್ರಶ್ನೆ ಮಾಡಿದ್ದಾರೆ. ಮಾನಸಿಕವಾಗಿ ನಾನು ಕುಗ್ಗಿದ್ದೇನೆ ಎಂದು ರನ್ಯಾ ಜಡ್ಜ್ ಮುಂದೆ ಹೇಳಿದರು. ಕೆಟ್ಟ ಪದ ಬಳಸಿದ್ದಾರೆ. ದೈಹಿಕವಾಗಿ ಹಲ್ಲೆ ಮಾಡಿಲ್ಲ. ಹೇಳಿಲ್ಲ ಅಂದರೆ ಏನಾಗುತ್ತೆ ಅನ್ನೋದು ಗೊತ್ತಲ್ಲ. ಒಂದು ಬೆದರಿಕ ರೀತಿಯಲ್ಲಿ ಅಧಿಕಾರಿಗಳು ಮಾತನಾಡಿದ್ದಾರೆ ಎಂದು ಜಡ್ಜ್ ಜಜ್ ಮುಂದೆ ನಟಿ ರನ್ಯಾರಾವ್ ತಿಳಿಸಿದ್ದಾರೆ. ಇದೆ ವೇಳೆ ಈ ವೇಳೆ ನ್ಯಾಯಾಧೀಶರು ಡಿ ಆರ್ ಐ…
ಬೆಂಗಳೂರು : ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು, ಬಂಧಿತ ಉದ್ಯಮಿ ಪುತ್ರ ತರುಣ್ ರಾಜ್ ನನ್ನು ಮಾರ್ಚ್ 15 ರವರೆಗೆ ಡಿ ಆರ್ ಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹೌದು ಬಂಧಿತ ತರುಣ ರಾಜ್ ಕುಮಾರ್ ಮಾರ್ಚ್ 15 ರವರೆಗೆ ಡಿ ಆರ್ ಐ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಇಂದು ಜಡ್ಜ್ ನಿವಾಸದಲ್ಲಿ ಹಾಜರುಪಡಿಸಿ ಆರೋಪಿಯನ್ನು ಡಿ ಆರ್ ಐ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಡಿ ಆರ್ ಐ ಅಧಿಕಾರಿಗಳ ಮನವಿಯ ಮೇರೆಗೆ ನ್ಯಾಯಾಧೀಶರು ಕಷ್ಟಡಿಗೆ ನೀಡಿ ಅದೇಶಿಸಿದ್ದಾರೆ.
ಬೆಂಗಳೂರು : ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶ ನೀಡಿದೆ. ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಧ್ಯಂತರ ರಿಲೀಫ್ ವಿಸ್ತರಿಸಿದ ಹೈಕೋರ್ಟ್, ಮುಂದಿನ ವಿಚಾರಣೆ ಅವರಿಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಎಫ್ಐಆರ್ ಆಧರಿಸಿ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಕೇಳುವಂತಿಲ್ಲ. 10 ವರ್ಷ ಹಳೆಯ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಕೇಳುವಂತಿಲ್ಲ. ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಏಕ ಸದಸ್ಯ ಪೀಠದ ನಿಬಂಧ ವಿಸ್ತರಣೆ ಮಾಡಿದ್ದು, ನವೆಂಬರ್ 6ರ ನಿರ್ಬಂಧ ತಿರವಿಗೆ ಲೋಕಾಯುಕ್ತ ಪರ ವಕೀಲ ವೆಂಕಟೇಶ್ ಅರಬಟ್ಟಿ ಮನವಿ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ಅರ್ಜಿ ಸಲ್ಲಿಸಿದರೆ ವಿಚಾರಣೆ ನಡೆಸಲಾಗುವುದು ಎಂದು ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿತು.ಬಳಿಕ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದರು.
ಚಾಮರಾಜನಗರ : ರಾಜ್ಯದಲ್ಲಿ ಇಂದು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಾಲ್ಯ ವಿವಾಹ ಮತ್ತು ಬಾಲಕಿಯ ನಿಶ್ಚಿತಾರ್ಥವನ್ನು ಅಧಿಕಾರಿಗಳು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಚಾಮರಾಜನಗರದ ಎಪಿ ಮೊಹಲ್ಲಾದಲ್ಲಿ ಬಾಲ್ಯ ವಿವಾಹಕ್ಕೆ ಅಧಿಕಾರಿಗಳು ಬ್ರೇಕ್ ಹಾಕಿದ್ದು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಪೊಲೀಸರು ಬಾಲ್ಯ ವಿವಾಹವನ್ನು ತಡೆದಿದ್ದಾರೆ. ಬಳಿಕ ಪೋಷಕರಿಗೆ ಈ ಕುರಿತು ಅರಿವು ಮೂಡಿಸಿದರು. ಇನ್ನು 2ನೇ ಪ್ರಕಾರಣವೂ ಚಾಮರಾಜನಗರ ತಾಲೂಕಿನ ಬಿಸಿಲವಾಡಿ ಗ್ರಾಮದಲ್ಲಿ ನಡೆದಿದ್ದು, ಯುವಕನ ಜೊತೆಗೆ ಬಾಲಕಿಗೆ ನಿಶ್ಚಿತಾರ್ಥ ನೆರವೇರಿಸುತ್ತಿದ್ದರು. ಬಾಲಕಿಗೆ ನಿಶ್ಚಿತಾರ್ಥದ ಬಗ್ಗೆ ಮಕ್ಕಳ ಸಹಾಯವಾಣಿಗೆ ದೂರಿ ಸಲ್ಲಿಕೆಯಾಗಿದೆ. ತಕ್ಷಣ ಅಧಿಕಾರಿಗಳು ದೂರನ್ನು ಆಧರಿಸಿ ಬಿಸಲವಾಡಿ ಗ್ರಾಮಕ್ಕೆ ಧಾವಿಸಿ ಬಾಲಕಿಯ ನಿಶ್ಚಿತಾರ್ಥಕ್ಕೆ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಅಲ್ಲಿದ್ದ ಎಲ್ಲರಿಗೂ ಸಹ ಬಾಲ್ಯ ವಿವಾಹದ ಕುರಿತು ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದ್ದಾರೆ. ಈ ವೇಳೆ ಎರಡು ಕಡೆ ಪೋಷಕರಿಂದ ಅಧಿಕಾರಿಗಳು ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದಾರೆ. ಮಕ್ಕಳ ರಕ್ಷಣಾ ಘಟಕ ಮಕ್ಕಳ…
ದಕ್ಷಿಣಕನ್ನಡ : ಎಷ್ಟು ದಿನ ಅಂತ ಲವ್ ಜಹಾದ್ ಬಗ್ಗೆ ಮಾತನಾಡುತ್ತಿರೋಣ? ಎಷ್ಟು ದಿನ ಅಂತ ನಮ್ಮ ಹೆಣ್ಣು ಮಕ್ಕಳನ್ನೇ ನೋಡುತ್ತಿರಿ? ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ, ಮದುವೆಯಾಗಿ ಎಂದು ದಕ್ಷಿಣ ಕನ್ನಡದ ಉಳ್ಳಾಲ ತಾಲೂಕಿನ ಕುತ್ತಾರೂನಲ್ಲಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅನ್ಯ ಧರ್ಮದವರನ್ನು ಪ್ರೀತಿಸಿ, ಮದುವೆಯಾಗಿ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ದಕ್ಷಿಣ ಕನ್ನಡದ ಉಳ್ಳಾಲ ತಾಲೂಕಿನ ಕುತ್ತಾರೂನಲ್ಲಿ ಕಾರ್ಯಕ್ರಮದಲ್ಲಿ ಎಲ್ಲಿವರೆಗೂ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಿರೋಣ? ಸ್ವಲ್ಪ ಬದಲಾವಣೆ ತರೋಣ. ಹುಡುಗಿ ಸಿಗಲಿಲ್ಲ ಅಂತ ಎಷ್ಟು ದಿನ ನೀವು ಹೇಳುತ್ತೀರಿ? ಎಷ್ಟು ದಿನ ಅಂತ ನಮ್ಮದೇ ಹೆಣ್ಣು ಮಕ್ಕಳನ್ನು ನೋಡ್ತೀರಾ?ಅನ್ಯ ಧರ್ಮದೇವತೆಯನ್ನು ಪ್ರೀತಿಸಿ ಮದುವೆಯಾಗಿ ಎಂದು ಹೇಳಿಕೆ ನೀಡಿದ್ದಾರೆ.
ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ ಪಕರಣ ಕೆ ಇದೀಗ ಮತ್ತೊಂದು ತಿರುಗು ಸಿಕ್ಕಿದ್ದು ರನ್ಯಾರಾವ್ ಮತ್ತು ಉದ್ಯಮಿಯ ಪುತ್ರ ಸ್ನೇಹಿತರಾಗಿದ್ದರು ಎಂದು ಹೇಳಲಾಗಿದ್ದು ಇದೀಗ ವಿಚಾರಣೆಯ ಬಳಿಕ ಉದ್ಯಮಿಯ ಪುತ್ರನನ್ನು DRI ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ವಿಚಾರಣೆ ನಡೆಸಿದ ಬಳಿಕ ಡಿ ಆರ್ ಐ ಅಧಿಕಾರಿಗಳು ಉದ್ಯಮಿಯ ಪುತ್ರನನ್ನು ಅರೆಸ್ಟ್ ಮಾಡಿದ್ದಾರೆ. ಉದ್ಯಮಿ ಪುತ್ರ ಹಾಗೂ ರನ್ಯಾ ರಾವ್ ಸ್ನೇಹಿತರಾಗಿದ್ದರು. ಇದೀಗ ಡಿ ಆರ್ ಐ ಅಧಿಕಾರಿಗಳಿಂದ ಉದ್ಯಮಿಯ ಪುತ್ರ ಬಂಧನವಾಗಿದೆ. ಫೈವ್ ಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗನನ್ನು ಅರೆಸ್ಟ್ ಮಾಡಲಾಗಿದೆ. ಉದಿನಿ ಪುತ್ರರನ್ನು ಅರೆಸ್ಟ್ ಮಾಡಿರುವ ಗಡಿಯಾರ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಉದ್ಯಮಿ ಪುತ್ರ ತರುಣ್ ರಾಜು ನನ್ನು ಅರೆಸ್ಟ್ ಮಾಡಿದ್ದಾರೆ. ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ನಟಿ ರನ್ಯಾ ರಾವ್ ಲಿಂದ…
ಬೆಂಗಳೂರು : ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಸೂರ್ಯ ಅವರು ಭಾನುವಾರ ನಡೆದ ಅದ್ಧೂರಿ ಆರತಕ್ಷತೆಗೂ ಮುನ್ನ ವಿಶೇಷ ಮನವಿಯೊಂದನ್ನು ಮಾಡಿದ್ದರು. ಆರತಕ್ಷತೆಗೆ ಬರುವವರು ದಯವಿಟ್ಟು ಹೂವಿನ ಬೊಕ್ಕೆಗಳು ಹಾಗೂ ಡ್ರೈಫ್ರೂಟ್ಸ್ಗಳನ್ನು ತರಬೇಡಿ ಎಂದು ಸವಿನಯದಿಂದ ಮನವಿ ಮಾಡಿದ್ದರು.ಹೂವಿನ ಬೊಕ್ಕೆಗಳಿಗೆ ಸುಮ್ಮನೆ ದುಂದು ವೆಚ್ಚ ಮಾಡಬೇಡಿ. ಕೇವಲ ಒಂದು ನಿಮಿಷದಲ್ಲಿ ಆ ಹೂವನ್ನು ಸ್ವೀಕರಿಸಿ, ಪಕ್ಕಕ್ಕೆ ಇಡಲಾಗುತ್ತೆ. ಇದೆಲ್ಲ ಸುಮ್ಮನೆ ವೇಸ್ಟ್ ಎಂದು ಹೇಳಿಕೆ ನೀಡಿದ್ದರು. ಆರತಕ್ಷತೆ ಕಾರ್ಯಕ್ರಮಕ್ಕೆ ಹೂವಿನ ಬೊಕ್ಕೆಗಳು, ಡ್ರೈಫ್ರೂಟ್ಸ್ಗಳನ್ನು ದಯವಿಟ್ಟು ತರಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಫೇಸ್ ಬುಕ್ ಹಾಗೂ ಯು ಟ್ಯೂಬ್ ಲೈವ್ ನಲ್ಲಿ ಕಾರಣವನ್ನೂ ಸಹ ಕೊಟ್ಟಿದ್ದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ತೇಜಸ್ವಿ ಸೂರ್ಯ ಅವರ ಇಂತಹ ಹೇಳಿಕೆಗಳು ಅನುಚಿತ ಮತ್ತು ತಮ್ಮ ಜೀವನಕ್ಕಾಗಿ ಪುಷ್ಪ ಕೃಷಿಯನ್ನು ಅವಲಂಬಿಸಿರುವ ಲಕ್ಷಾಂತರ ರೈತರ ಶ್ರಮವನ್ನು ದುರ್ಬಲಗೊಳಿಸುತ್ತವೆ ಎಂದು ದಕ್ಷಿಣ ಭಾರತ ಪುಷ್ಪ ಕೃಷಿ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್ ಹೇಳಿದ್ದಾರೆ. ತೇಜಸ್ವಿ ಸೂರ್ಯ…
ಬೆಂಗಳೂರು : ವಿಧಾನಸಭೆಯಲ್ಲಿ ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆಯಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಇಂದು ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ ಮಂಡಿಸಿದ್ದಾರೆ. ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ವಿಧೇಯಕ ಮಂಡಿಸಿದ ನಂತರ ಪೊಲೀಸರನ್ನು ಗ್ರೇಟರ್ ಬೆಂಗಳೂರು ಆಡಳಿತದ ಅಡಿ ತರಲು ಚಿಂತನೆ ನಡೆಸಲಾಗಿತ್ತಿದೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಗ್ರೇಟರ್ ಬೆಂಗಳೂರು ಅಧ್ಯಕ್ಷರಾಗಿ ಇರುತ್ತಾರೆ. ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ತೆರಿಗೆ ವಿಚಾರವನ್ನು ಕೂಡ ಇದರಲ್ಲಿ ಪ್ರಸ್ತಾಪ ಮಾಡಲಾಗಿದೆ. ಪೊಲೀಸರನ್ನು ಗ್ರೇಟರ್ ಬೆಂಗಳೂರು ಆಡಳಿತದ ಅಡಿ ತರಲು ಚಿಂತನೆ ನಡೆಸಲಾಗಿದೆ. ಬಿಡಿಎ ಅಧ್ಯಕ್ಷರು ಸಹ ಗ್ರೇಟರ್ ಬೆಂಗಳೂರು ಸದಸ್ಯರಾಗಿರುತ್ತಾರೆ. ಬಿಬಿಎಂಪಿ ಮುಖ್ಯ ಆಯುಕ್ತರು ಡಿಫ್ಯಾಕ್ಟೋ ಸದಸ್ಯರಾಗಿರುತ್ತಾರೆ. ಸದಸ್ಯರು ಹಾಗೂ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುತ್ತೇವೆ ಎಂದರು. ವಿಶೇಷ ತಜ್ಞರ ಸಮಿತಿ ಮಾಡುತ್ತಿದ್ದೇವೆ. ಆರ್ ವೆಂಕಟೇಶ ಸಮಿತಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಇರುತ್ತದೆ. ಮೂಲಭೂತ ಸೌಕರ್ಯ ಸಾಮಾಜಿಕ ವ್ಯವಸ್ಥೆ ನಿರ್ವಹಣೆ ಸೇರಿದಂತೆ ಒಟ್ಟು 6 ಸಮಿತಿ…
ರಾಯಚೂರು : ಇತ್ತೀಚಿಗೆ ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ದಂಧೆ ಹೆಚ್ಚುತ್ತಿದ್ದು, ಇದೀಗ ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಪೊಲೀಸ್ ಕಾನ್ಸ್ಟೇಬಲ್ ಮೇಲೆ ದುಷ್ಕರ್ಮಿಗಳು ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚೀಕಲಪರ್ವಿ ಎಂಬಲ್ಲಿ ನಡೆದಿದೆ. ಹೌದು ಮಾನ್ವಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಹೆಚ್ ಲಕ್ಷ್ಮಣ ಮೇಲೆ ಹಲ್ಲೆ ನಡೆಸಲಾಗಿದೆ. ಹೋಂ ಗಾರ್ಡ್ ಜೊತೆಗೆ ಕಾನ್ಸ್ಟೇಬಲ್ ಲಕ್ಷ್ಮಣ ಅವರು ತಪಾಸಣೆಗೆ ಎಂದು ತೆರಳಿದ್ದರು.ಅಕ್ರಮ ಮರಳು ತಪಾಸಣೆಗೆ ತೆರಳಿದ್ದ ಕಾನ್ಸ್ಟೇಬಲ್ ಲಕ್ಷ್ಮಣ ಮೇಲೆ ಹಲ್ಲೆ ನಡೆಸಿದ್ದಾರೆ. ಚಿಕ್ಕಲಪರ್ವಿ ಗ್ರಾಮದ ಬಳಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ವಾಹನ ತಡೆಯಲು ಪಿಸಿ ಲಕ್ಷ್ಮಣ ಹೋಗಿದ್ದಾರೆ. ಈ ವೇಳೆ ಕಾನ್ಸ್ಟೇಬಲ್ ಲಕ್ಷ್ಮಣ ಮೇಲೆ ದುಃಖರಮಿಗಳು ಹಲ್ಲೆ ನಡೆಸಿದ್ದಾರೆ ಕಾನ್ಸ್ಟೇಬಲ್ ಲಕ್ಷ್ಮಣ್ಗೆ ಮಾನ್ವಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪಟ್ಟಣದ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ‘ಗ್ರೇಟರ್ ಬೆಂಗಳೂರು’ ಕುರಿತು ಇಂದು ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ ವಿಧೇಯಕ ಮಂಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಎಂದರೇನು? ಬೆಂಗಳೂರನ್ನು ಏಳು ಭಾಗವಾಗಿ ಅಥವಾ ಇರುವ ಒಂದು ಪಾಲಿಕೆಯನ್ನು 7 ಪಾಲಿಕೆಗಳನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ. ಈ ಬೆಳವಣಿಗೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಅನ್ನು ಸರ್ಕಾರ ಪರಿಚಯಿಸಿದೆ. ಇದರ ಅಡಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಲಿದೆ. ಬೆಂಗಳೂರಿಗೆ ಮೂರು ಹಂತದ ಆಡಳಿತ ನೀಡುವುದು ಇದರ ಉದ್ದೇಶವಾಗಿದೆ.ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಸರಣಿ ಸಭೆಗಳು ನಡೆದಿದ್ದವು. ಗ್ರೇಟರ್ ಬೆಂಗಳೂರು ಬಿಲ್ ಅನ್ನು ಈಚೆಗೆ ರಾಜ್ಯ ಸರ್ಕಾರವು ಪ್ರಸ್ತಾಪಿಸಿತ್ತು.














