Author: kannadanewsnow05

ಮಂಗಳೂರು : ಪಡಿತರ ಚೀಟಿಯಲ್ಲಿ ತನ್ನ ಹೆಸರು ಸೇರಿಸಲು ಆಗದೆ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಲಾಭವನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಇರುವುದರಿಂದ ಕೋಪಗೊಂಡ ಯುವಕನೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ. ಸಾಮಾಜಿಕ ಜಾಲತಾಣದಲ್ಲಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪೋಸ್ಟ್ ಹರಿದಾಡುತ್ತಿದ್ದಂತೆ ಅವಹೇಳನ ಮಾಡಿದವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ಎನ್​ಎಸ್​ಯುಐ ದೂರು ಸ್ವೀಕರಿಸಿದ್ದಾರೆ. ಈ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸರ್ಕಾರದ ಯೋಜನೆಗಳ ಲಾಭಗಳನ್ನು ಪಡೆಯಲು ಸಾಧ್ಯವಾಗದೆ ಕೋಪಗೊಂಡ ಯುವಕ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಡಿಸಿಎಂ ವಿರುದ್ಧ ಅಶ್ಲೀಲ ಪದ ಬಳಸಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ದ ಅಶ್ಲೀಲವಾಗಿ ಕನ್ನಡದಲ್ಲಿ…

Read More

ಹಾಸನ : ಒಂದೆಡೆ ಕಾಂಗ್ರೆಸ್ ನ ಹಲವು ಸಚಿವರು ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಿ ಎಂದು ಹೇಳಿಕೆ ನೀಡುತ್ತಿರುವ ಸಂದರ್ಭದಲ್ಲಿ ಇದೀಗ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಪೂರ್ಣಾವಧಿ ಆಡಳಿತದಲ್ಲಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ತಿಳಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚು ಲೋಕಸಭಾ ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗುತ್ತಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ. ಚುನಾವಣೆಗೂ ಮೊದಲು 5 ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬಾ ಮೊದಲೇ ಐದು ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ.ಬಡವರು ಶೋಷಿತರ ಕೆಲಸ ಮಾಡುವ ಹಂಬಲ ಕಾಂಗ್ರೆಸ್ ಪಕ್ಷಕ್ಕೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು.ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸಬೇಕಿದೆ ಎಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯಪುತ್ರ…

Read More

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್‌ಗೆ ಮಾರುತಿ ಓಮಿನಿ ವ್ಯಾನ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಜರುಗಿದೆ. ಚನ್ನಗಿರಿ ತಾಲ್ಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ಒಂದೇ ಕುಟುಂಬದ ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80) ಮೃತ ದುರ್ದೈವಿಗಳು. ರತ್ನಮ್ಮ ಅವರಿಗೆ ತೀವ್ರ ಗಾಯಗಳಾಗಿವೆ. ಇವರು ಎಲ್ಲರು ಸೇರಿ ವಾಹನದಲ್ಲಿ ಸಂತೇಬೆನ್ನೂರು ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿದ್ದರು. ಈ ವೇಳೆ ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾರೆ. ಹೊಡೆತದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸಿಎಂ ಕಾರ್ಯದರ್ಶಿಯ ಪಿಎ ಎಂದು ಹೇಳುವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆರೋಪಿಯನ್ನ ವಿಕ್ರಂ ಗೋಪಾಲಸ್ವಾಮಿ ಎಂದು ಹೇಳಲಾಗುತ್ತಿದೆ. ಸಿಎಂ ಕಾರ್ಯದರ್ಶಿ ಪಿಎ ಎಂದು ಹೇಳಿ ಮಹಿಳಾಧಿಕಾರಿ ಕುರಿತು ಮಾಹಿತಿ ಗಳಿಸಿದ್ದಾನೆ. ಪೊಲೀಸರಿಂದ ಆರೋಪಿಯನ್ನು ಇದೀಗ ಬಂಧಿಸಲಾಗಿದೆ. ಆರೋಪಿಯೂ ಕಂದಾಯ ಅಧಿಕಾರಿ ಚಲನವಲನವನ್ನು ಗಮನಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಸಿಎಂ ಕಾರ್ಯದರ್ಶಿ, ಪಿಎ ಕಂದಾಯ ಸಚಿವರ ಪಿಎ ಎಂದು ಆರೋಪಿ ಹೇಳಿದ್ದ. ಡಿಜಿ ಕಚೇರಿ, ಕಮಿಷನರ್ ಕಚೇರಿಯಿಂದ ಕರೆ ಮಾಡುತ್ತಿದ್ದೇನೆ ಎಂದು ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಕಚೇರಿಗೆ ಕರೆ ಮಾಡಿ ಅಧಿಕಾರಿಗಳ ವಿವರ ಕೇಳಿದ ವಿಕ್ರಂ ಗೋಪಾಲಸ್ವಾಮಿ ಕಂದಾಯ ಇಲಾಖೆ ಬಹಳ ಅಧಿಕಾರಿ ಬಗ್ಗೆ ಆಸಾಮಿ ವಿವರ ಕೇಳಿದ ಎನ್ನಲಾಗುತ್ತಿದ್ದು, ವಿಚಾರ ತಿಳಿದು ಅಧಿಕಾರಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರನ್ನು ಆಧರಿಸಿ ಆರೋಪಿ ವಿಕ್ರಂ ಗೋಪಾಲ ಸ್ವಾಮಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ನಿವೃತ್ತ ಅಧಿಕಾರಿ ಒಬ್ಬರ ಮಗ ಎಂದು ಬೆಳಕಿಗೆ ಬಂದಿದೆ. ವಿಧಾನಸೌಧ ಎಂ ಎಸ್…

Read More

ಗದಗ : ನಟ ಯಶ್ ಅವರ ಹುಟ್ಟು ಹಬ್ಬದ ಅಂಗವಾಗಿ ಕಟೌಟ್ ಕಟ್ಟುವ ವೇಳೆ ವಿದ್ಯುತ್ ತಂತಿ ತಗುಲಿ ಮೂರು ಯುವಕರು ಸಾವನಪ್ಪಿದ್ದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುವರ್ಣಗಿ ಗ್ರಾಮದಲ್ಲಿ ನಡೆದಿತ್ತು. ಅದರ ಪ್ರಯುಕ್ತ ಇಂದು ಯಶ್ ಅಭಿಮಾನಿಗಳ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ನಟ ಯಶ್ ಸ್ನೇಹಿತರಿಂದ ಇಂದು ಮೃತ ಕುಟುಂಬಗಳಿಗೆ ಭೇಟಿ ನೀಡಿ ಪರಿಹಾರದ ನೆರವು ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಬೆಳಿಗ್ಗೆ 10 ಗಂಟೆಯ ಸ್ನೇಹಿತರಾದ ರಾಕೇಶ್ ಚೇತನ್ ಗದಗ ಜಿಲ್ಲೆಯ ಯಶ್ ಬಳಗದ ಜಿಲ್ಲಾಧ್ಯಕ್ಷ ಮಂಜುನಾಥ್ ಭೇಟಿ ನೀಡಲಿದ್ದಾರೆ. ಮೃತ ಕುಟುಂಬಗಳಿಗೆ ಯಶ ಸ್ನೇಹಿತರು ಪರಿಹಾರದ ಚೆಕ್ ಅನ್ನು ವಿತರಿಸಲಿದ್ದಾರೆ. ಜನವರಿ 7ರಂದು ಮುರುಳಿ ಹನುಮಂತ ನವೀನ್ ಮೃತಪಟ್ಟಿದ್ದರು. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸುರಣಿಗಿ ಎಲ್ಲಿ ನಡೆದಿದೆ ಘಟನೆಯಾಗಿತ್ತು. ಯಶ್ ಕಟೌಟ್ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನಪ್ಪಿದ್ದರು. ನಟ ಯಶ್ ಗ್ರಾಮಕ್ಕೆ ಭೇಟಿ ನೀಡಿ ಮೃತ ಕುಟುಂಬಗಳಿಗೆ ನಟ ಯಶ್ ಸಾಂತ್ವನ ಹೇಳಿದ್ದರು.

Read More

ಬೆಂಗಳೂರು :ಲಾಲ್‌ಬಾಗ್ ಬೊಟಾನಿಕಲ್‌ ಉದ್ಯಾನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜ.18ರಿಂದ 28ರವರೆಗೆ ‘ವಿಶ್ವ ಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ’ 215 ನೇ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸಕಲ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಕುರಿತಂತೆ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಡಾ| ಶಮ್ಮಾ ಇಟ್ಬಾಲ್ ಅವರು, ಪ್ರದರ್ಶನದಲ್ಲಿ ಸಾರ್ವ ಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನಾಲ್ಕು ಪ್ರಮುಖ ದ್ವಾರಗಳು ಮತ್ತು ಗಾಜಿನ ಗಾಳ ಮನೆಯ ಪ್ರವೇಶ ದ್ವಾರಗಳಲ್ಲಿ ಡೋರ್‌ಪ್ರೇಮ್ ಮೆಟಲ್ ಡಿಕೆಕ್ಟರ್ಸ್ ಅಳವಡಿಸಲಾಗುವುದು. ದ್ವಾರಗಳು, ಗಾಜಿನಮನೆ ಮತ್ತು ಪ್ರಮುಖ ಪ್ರದೇಶಗಳಲ್ಲಿ ಹ್ಯಾಂಡ್‌ಹೆಲ್ತ್ ಮೆಷಿನ್ಸ್ ಮೂಲಕ ಅನುಮಾನಾಸ್ಪದ ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸಲಾಗುವುದು. ಉದ್ಯಾನದ ಎಲ್ಲೆಡೆ 136 ಸಿಸಿ ಕ್ಯಾಮೆರಾ ಅಳವಡಿಸಿದ್ದು ಕಣ್ಣಾವಲು ಕಣ್ಣಾವಲು ಇಡಲಾಗುವುದು. ಅವಶ್ಯಕತೆಗೆ ಅನುಗುಣವಾಗಿ ಪೊಲೀಸರು, ಗೃಹರಕ್ಷಕರು, ಭದ್ರತಾ ಸಿಬ್ಬಂದಿ, ಸ್ವಯಂಸೇವಕರನ್ನು ನೇಮಿಸಲಾಗುವುದು ಎಂದು ತಿಳಿಸಿದರು. ಅಗ್ನಿಶಾಮಕ ದಳದ ವಾಹನ, 38 ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಆಯ್ದ ಪ್ರದೇಶಗಳಲ್ಲಿ ಪ್ಯಾರಾ ಮೆಡಿಕಲ್…

Read More

ಬೆಂಗಳೂರು : ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿ ಮಾಡಿದ್ದೂ, ಅದೇ ರೀತಿಯಾಗಿ ಸರ್ಕಾರ ಆರನೇ ಗ್ಯಾರಂಟಿಯಾಗಿ ಬಡಜನತೆಗೆ ನಿವೇಶನಗಳನ್ನು ಹಂಚಿಕೆ ಮಾಡುತ್ತಿದೆ. ವಸತಿ ಯೋಜನೆಗಳಡಿ ನಿರ್ಮಿಸಿಕೊಡುತ್ತಿರುವ 2.32 ಲಕ್ಷ ಮನೆಗಳ ಪೈಕಿ ಮೊದಲ ಹಂತದಲ್ಲಿ ಫೆ.24ರಂದು 36000 ಮನೆಯನ್ನು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಆಹ್ಮದ್ ಖಾನ್ ಘೋಷಿಸಿದರು. ಮಂಗಳವಾರ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಆಯೋಜಿಸಿದ್ದ ‘ಮನೆ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ಪ್ರಣಾಳಿಕೆಯಲ್ಲಿ ಹೇಳದಿದ್ದರೂ ಆರನೇ ಗ್ಯಾರಂ ಟಿಯಾಗಿ ವಸತಿ ಯೋಜನೆಗೆ ಫಲಾನುಭವಿಗಳು ಕೊಡಬೇ ಕಾದ ಹಣವನ್ನು ಸರ್ಕಾರದಿಂದಲೇ ಭರಿಸುತ್ತಿದ್ದೇವೆ. 7400 ಕೋಟಿ ಸ್ಲಂ ಬೋರ್ಡ್‌ ಹಾಗೂ 1800 ಕೋಟಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ನೀಡಲು ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಸಿಕ್ಕಿದೆ.ಮೊದಲಹಂತದಲ್ಲಿ ಮುಖ್ಯಮಂತ್ರಿಗಳು *500 ಕೋಟಿ ಬಿಡುಗಡೆ ಮಾಡಿದ್ದಾರೆ. ಫೆ.24ರಂದು 36000 ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಇನ್ನೊಂದು ವರ್ಷದಲ್ಲಿ ಎಲ್ಲ ಮನೆಗಳನ್ನು ಹಂಚಿಕೆ ಮಾಡುವ ಗುರಿ…

Read More

ಬೆಂಗಳೂರು : ಕೆಂದ ಸರ್ಕಾರ ಹಿಟ್ ಆ್ಯಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ಮಾಡಬಾರದು ಎಂಬದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಡರೇಷನ್‌ ಕರ್ನಾಟಕ ಲಾರಿ ಮಾಲೀಕರ ಸಂಘದಿಂದ ಬುಧವಾರ ದಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ಈ ಮುಷ್ಕರದಿಂದಾಗಿ ಸುಮಾರು ಎರಡು ಲಕ್ಷ ಲಾರಿಗಳಸೇರಿ ಆಫ್ ಸಂಚಾರ ಸ್ಥಬ್ದವಾಗಲಿದೆ ಎನ್ನಲಾಗುತ್ತಿದೆ. ಆದರೆ, ಫೆಡರೇಷನ್ ಆಫ್ ಕರ್ನಾಟಕ ಲಾರಿ ಮಾಲೀಕರ ಮತ್ತು ಏಜೆಂಟರ ಸಂಘ ಮುಷ್ಕರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಲಾರಿ ಮುಷ್ಕರ ಯಶಸ್ವಿಯಾಗುವ ಬಗ್ಗೆ ಅನುಮಾನ ಮೂಡಿಸಿದೆ ಎಂದು ಹೇಳಲಾಗುತ್ತಿದೆ. ಅಪಘಾತ ನಡೆಸಿ ಪರಾರಿಯಾದ ಪ್ರಕರಣದಲ್ಲಿ ಲಾರಿ ಚಾಲಕರಿಗೆ 10 ವರ್ಷ ಜೈಲು ಹಾಗೂ 7 ಲಕ್ಷ ರು. ದಂಡ ವಿಧಿಸುವ ಕುರಿತು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ಮುಂದಾಗಿತ್ತು. ಅದನ್ನು ವಿರೋಧಿಸಿ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಲಾರಿ ಮಾಲೀಕರು ಮತ್ತು ಚಾಲಕರು ಮುಷ್ಕರ ನಡೆಸಿದ್ದರು. ಕೊನೆಗೆ ಕೇಂದ್ರ ಕಠಿಣ ನಿಯಮ ಜಾರಿಯಿಂದ…

Read More

ಬೆಂಗಳೂರು: ಕರ್ನಾಟಕ ಪರೀಕ್ಷಾಪ್ರಾಧಿಕಾರ (ಕೆಇಎ) ಜ.23ರಂದು ನಡೆಸಲಿರುವ ಪಿಎಸ್‌ಐ ನೇಮಕಾತಿ ಪರೀಕ್ಷೆಗೆ ವಸ್ತ್ರ ಸಂಹಿತೆ ನಿಯಮಾವಳಿ ಪ್ರಕಟಿಸಿದ್ದು, ಸರಳ ಉಡುಪು ಧರಿಸಿ ಬರಲು ಸೂಚಿಸಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರ ತುಪಡಿಸಿ ಇನ್ಯಾವುದೇ ಆಭರಣಗಳನ್ನು ಧರಿಸಿ ಬರುವಂತಿಲ್ಲ ಎಂದು ತಿಳಿಸಿದೆ. ಇತ್ತೀಚಿನ ನಿಗಮ ಮಂಡಳಿ ಪರೀಕ್ಷೆಗಳ ವೇಳೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವ ಮುನ್ನ ಮಂಗಳಸೂತ್ರ ಮತ್ತು ಕಾಲುಂಗುರವನ್ನು ತೆಗೆಸಿದ್ದು ಭಾರೀ ವಿವಾದಕ್ಕೀಡಾಗಿತ್ತು. ಇದು ಬಹುಸಂಖ್ಯಾತ ಹಿಂದೂ ಸಂಸ್ಕೃತಿಗೆ ಅಗೌರವ ತೋರಲಾಗಿದೆ ಎಂದು ಸಾರ್ವಜನಿಕರು ಹಾಗೂ ರಾಜಕೀಯ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕೆ-ಸೆಟ್ ಪರೀಕ್ಷೆ ನಂತರ ಇದೀಗ ಪಿಎಸ್‌ಐ ಪರೀಕ್ಷೆಗೂ ಮಂಗಳ ಸೂತ್ರ ಮತ್ತು ಕಾಲುಂಗುರ ಧರಿಸಿ ಬರಲು ಅವಕಾಶ ನೀಡಲಾಗಿದೆ. ಆದರೆ, ತಪಾಸಣೆ ದೃಷ್ಟಿಯಿಂದ ಪರೀಕ್ಷಾ ಸಮಯಕ್ಕೆ ಎರಡು ಗಂಟೆ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಹಾಲ್ ಟಿಕೆಸ್ ‌ ಸೇರಿದಂತೆ ಸೂಚಿತ ದಾಖಲೆಗಳೊಂದಿಗೆ ಹಾಜರಿರಬೇಕು ಎಂದು ಸೂಚಿಸಿದೆ. ವಸ್ತ್ರಸಂಹಿತೆ ಏನು: ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚಿನ…

Read More

ಮಡಿಕೇರಿ : ಬೆಂಗಳೂರು ಮೂಲದ ಐಟಿ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿ ಮಡಿಕೇರಿಯ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮೂರು ದಿನಗಳ ಹಿಂದೆ ಸಂದೇಶ ಎನ್ನುವ ವ್ಯಕ್ತಿ ಮಡಿಕೇರಿಗೆ ಆಗಮಿಸಿದ್ದ ಎನ್ನಲಾಗಿದೆ. ಬೆಂಗಳೂರಿನಲ್ಲಿ ಸಂದೇಶ ಐಟಿ ಕೆಲಸವನ್ನು ಮಾಡುತ್ತಿದ್ದ ಮಡಿಕೇರಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕಿಗೆ ರೈತರ ಮುತ್ತಿಗೆ ಕಾನೂನು ಬಾಹಿರವಾಗಿ ರೈತನ ಮನೆ ಹರಾಜು ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ವಿಜಯನಗರದ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘದ ರೈತರಿಂದ ಪ್ರತಿಭಟನೆ ರೈತ ದೊರೆಸ್ವಾಮಿ ಮನೆ ಹರಾಜು ಹಾಕಿರುವ ಆರೋಪ ಕೇಳಿ ಬಂದಿದೆ. ರೈತ ದೊರೆಸ್ವಾಮಿ ಬ್ಯಾಂಕ್ನಿಂದ 15 ಲಕ್ಷ ಸಾಲವನ್ನು ಪಡೆದಿದ್ದರು ಎಂದು ಹೇಳಲಾಗುತ್ತಿದ್ದು, ಬಡ್ಡಿ ಸಮೇತ 18 ಲಕ್ಷ 98 ಸಾವಿರ ರೂಪಾಯಿಯನ್ನು ದೊರೆಸ್ವಾಮಿ ತೀರಿಸಿದ್ದರು. ಆದರೂ ಕೂಡ ಮನೆ ಹರಾಜು ಹಾಕಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.ಅದರಿಂದ ವಿಜಯನಗರದ ಬ್ಯಾಂಕಿನ ಪ್ರಧಾನ ಕಚೇರಿಗೆ ರೈತ ಸಂಘಟನೆ ಮುತ್ತಿಗೆ ಹಾಕಿವೆ.

Read More