Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಮಾಜದಲ್ಲಿ ಇಂತಹ ಗಂಡಸರು ಇರ್ತಾರ ಅಂತ ಒಮ್ಮೊಮ್ಮೆ ಆಶ್ಚರ್ಯ ಆಗುತ್ತ. ಇದೀಗ ಬೆಂಗಳೂರಿನಲ್ಲಿ ವರದಕ್ಷಿಣೆಗಾಗಿ ಪತಿಯಿಂದ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. 4 ಕೋಟಿ ರೂಪಾಯಿ ವರದಕ್ಷಿಣೆ ಕೊಡದಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿಯ ವಾಟ್ಸಾಪ್ ಗ್ರೂಪ್ ಗಳಲ್ಲಿ ಖಾಸಗಿ ಫೋಟೋ ವೈರಲ್ ಮಾಡಿ ಕಿರುಕುಳ ನೀಡಿದ್ದಾನೆ. ಪತಿ ವಂದೇಮಾತರಂ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ಪತ್ನಿ ದೂರು ನೀಡಿದ್ದಾರೆ. ಪಶ್ಚಿಮ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಇದೀಗ ಪತ್ನಿಯ ದೂರು ಆಧರಿಸಿ ಪತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ರಾಜಸ್ಥಾನದ ಬಲೋತ್ರ ಜಿಲ್ಲೆಯ ದಂಪತಿ ವಾಸವಾಗಿದ್ದಾರೆ ಸ್ವಂತ ಬಿಜಿನೆಸ್ ಮಾಡಲು 4 ಕೋಟಿ ರೂಪಾಯಿ ವರದಕ್ಷಿಣೆಗಾಗಿ ವಂದೇ ಮಾತರಂ ತನ್ನ ಪತ್ನಿಯ ಬಳಿ ಬೇಡಿಕೆ ಇಟ್ಟಿದ್ದಾನೆ ಹಣ ತರದಿದಕ್ಕೆ ವಾಟ್ಸಾಪ್ ಗ್ರೂಪ್ಗಳಲ್ಲಿ ತನ್ನ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ್ದಾನೆ. ಈ ವಿಚಾರವನ್ನು ಸಂಬಂಧಿಕರು ಸಂತ್ರಸ್ಥೆಗೆ ತಿಳಿಸಿದ್ದಾರೆ. ವಿಚಾರ ಗೊತ್ತಾಗಿ ಪತಿಯನ್ನು ವಿಚಾರಿಸಿದಾಗ ಆಕೆಯ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೀಗ ಪರಪ್ಪನ ಅಗ್ರಹಾರ ಜೈಲಿನ ಬಳಿ ಕರಡಿ ಪ್ರತ್ಯಕ್ಷವಾಗಿದೆ. ದರ್ಶನ್ ಇರುವಾಗ ಜೈಲಿನ ಕಾಂಪೌಂಡ್ ಬಳಿ ಈಗ ಕರಡಿ ಪ್ರತ್ಯಕ್ಷವಾಗಿದೆ. ಸೆಪ್ಟೆಂಬರ್ 3ರಂದು ಸಂಜೆ ಜೈಲಿನ ಬಳಿ ಕರಡಿ ಕಾಣಿಸಿಕೊಂಡಿದೆ.ಕರಡಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಚ್ಚರಿಕೆ ಇರುವಂತೆ ಸೂಚನೆ ನೀಡಲಾಗಿದೆ ಕರಡಿ ಕಾಣಿಸಿಕೊಂಡ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಕರಡಿ ಕಾಣಿಸಿಕೊಂಡ ಹಿನ್ನೆಲೆ ರೈಲು ಸಿಬ್ಬಂದಿಗಳಿಗೆ ಆತಂಕ ಹೆಚ್ಚಿದೆ.
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕುರಿತು ಮಹಿಳಾ ಪತ್ರಕರ್ತೆಯೊಬ್ಬರು ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ನೀಡಿದ ಉತ್ತರ ವಿವಾದಕ್ಕೀಡಾಗಿದೆ. ಹೌದು ಪತ್ರಕರ್ತೆಯೊಬ್ಬರು ಮಹಿಳೆಯರಿಗೆ ಇಲ್ಲಿ ಹೆರಿಗೆ ಸರಿಯಾದ ಸೌಲಭ್ಯ ಇಲ್ಲ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಯಾವಾಗ ಸಿಗುತ್ತದೆ ಎಂದು ಪ್ರಶ್ನಿಸಿದಾಗ ನಿನಗೆ ಹೆರಿಗೆ ಆಗಬೇಕೇ? ಹೇಳು, ನಾನು ಮಾಡಿಸಿ ಕೊಡುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಇತ್ತೀಚೆಗೆ ಸೂಪಾ ಜಲಾಶಯಕ್ಕೆ ಬಾಗಿನ ಸಲ್ಲಿಸಿದ ಆರ್.ವಿ.ದೇಶಪಾಂಡೆ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಖಾಸಗಿ ವಾಹಿನಿಯ ಹಿರಿಯ ಪತ್ರಕರ್ತೆಯೊಬ್ಬರು, ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಇಲ್ಲಿನ ಜನರು ತುರ್ತು ಸಂದರ್ಭದಲ್ಲಿ ಹೊರ ಜಿಲ್ಲೆಯ ಆಸ್ಪತ್ರೆಗಳನ್ನು ಅವಲಂಬಿಸಬೇಕು. ನಿಮ್ಮ ಹಳಿಯಾಳ ಕ್ಷೇತ್ರದಲ್ಲಿ ಹೆರಿಗೆ ಆಗಬೇಕೆಂದರೂ ಸಮಸ್ಯೆ ಇದೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ನಿಂದೇನಾದ್ರೂ ಹೆರಿಗೆ ಮಾಡಿಸಬೇಕಾ ಹೇಳು.. ಮಾಡಿಸ್ತೀನಿ’ ಎಂದು ಹೇಳಿದ್ದರು. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಶಾಸಕರ ಈ…
ಬೆಂಗಳೂರು : ಈ ಬಾರಿ ನವರಾತ್ರಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನತೆಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದು ಔಷಧಿ ಆಟೊಮೊಬೈಲ್ ಸೇರಿದಂತೆ ಹಲವು ವಸ್ತುಗಳ ಮೇಲಿನ ಜಿ ಎಸ್ ಟಿ ದರ ಭಾರಿ ಇಳಿಕೆ ಮಾಡಿ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ವಿಚಾರವಾಗಿ ಕಂದಾಯ ಸಚಿವ ಕೃಷ್ಣಭೇರೇಗೌಡ ಅವರು ಕೇಂದ್ರ ಸರ್ಕಾರದ ಡಿಎಸ್ಟಿ ತೀರ್ಮಾನಗಳಿಂದ ರಾಜಕೀಯ ವಾರ್ಷಿಕ 70,000 ಕೋಟಿ ಖೋತಾ ಆಗಲಿದೆ ರಾಜ್ಯಕ್ಕೆ ಆರ್ಥಿಕ ಹೊರೆ ಆಗಬಹುದು ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು. ಕೇಂದ್ರದ ತೀರ್ಮಾನಗಳಿಂದ 2016-17 ಮತ್ತು 2024-25ರ ನಡುವೆ ಆಗಿರುವಂತಹ ಕರ್ನಾಟಕಕ್ಕೆ ಆದಾಯದ ಖೋತಾ 70 ಸಾವಿರ ಕೋಟಿ. ಇದು ರಾಜ್ಯದ ಪರಿಸ್ಥಿತಿ ಆಗಿದ್ದು ಬೇರೆ ಬೇರೆ ರಾಜ್ಯಗಳದ್ದು ಬೇರೆ ಬೇರೆ ರೀತಿ ಇರಬಹುದು. 2024 ಮತ್ತು 25ನೇ ಸಾಲಿಗೆ 70 ಸಾವಿರ ಕೋಟಿ ಒಂದು ವರ್ಷಕ್ಕೆ ಮಾತ್ರ ಖೋತ ಆಗಲಿದೆ ಎಂದು ದರ ಸರಳಿಕರಣದಿಂದ ಆಗುವ ಅವರ ಬಗ್ಗೆ ಸಚಿವ…
ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರ ಸಂಘ ಮಾಡಿದ್ದ ಕಮಿಷನ್ ಆರೋಪ ಹಾಗೂ ಅವ್ಯವಹಾರವನ್ನು ಸಾಬೀತು ಪಡಿಸುವ ಸಂದಿಗ್ಧತೆಗೆ ಸಿಲುಕಿರುವ ಕಾಂಗ್ರೆಸ್ ಸರ್ಕಾರ, ತನಿಖಾ ಸಂಸ್ಥೆ ನಿಗದಿಪಡಿಸುವ ಮೂಲಕ ಪ್ರಕರಣವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಹಾಗಾಗಿ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಗುತ್ತಿಗೆದಾರರ ಸಂಘದ ಆರೋಪ ಪರಿಗಣಿಸಿ ಸರ್ಕಾರ ಎರಡು ತನಿಖಾ ಆಯೋಗ ರಚಿಸಿತ್ತು. ಈ ಪೈಕಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಿ ವರದಿ ನೀಡಲು ನ್ಯಾ.ನಾಗಮೋಹನ್ ದಾಸ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ನ್ಯಾ.ನಾಗಮೋಹನ್ ದಾಸ್ ಕಳೆದ ವಾರ ವರದಿಯನ್ನು ಸಿಎಂಗೆ ಸಲ್ಲಿಸಿದ್ದರು. ಮುಂದುವರಿದ ಪ್ರಕ್ರಿಯೆಯ ಭಾಗವಾಗಿ ನಿವೃತ್ತ ಇಂಜಿನಿಯರ್ಗಳ ತಂಡ ಎಡಬಿಡದೆ ಈ ವರದಿ ವಿಶ್ಲೇಷಿಸಿದ್ದು, ಯಾವೆಲ್ಲ ಪ್ರಕರಣ ತನಿಖೆಗೆ ಸೂಕ್ತವಾಗಿದೆ ಎಂಬುದನ್ನು ಪಟ್ಟಿ ಮಾಡಿ ವರದಿ ಸಿದ್ಧಮಾಡಿದೆ. ಇದೇ ವೇಳೆ ಇಂದು ನಡೆಯುವ ಸಂಪುಟ…
ಬೆಂಗಳೂರು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೆ.ಎನ್ ರಾಜಣ್ಣ ಬಿಜೆಪಿ ಪಕ್ಷಕ್ಕೆ ಸೇರಿಕೊಳ್ಳಲು ಅರ್ಜಿ ಹಾಕಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಾಲಕೃಷ್ಣ ನಿನ್ನೆ ಸ್ಪೋಟಕ ಹೇಳಿಕೆ ನೀಡಿದ್ದರು. ಇವರ ಹೇಳಿಕೆಗೆ ಇದೀಗ ಮಾಜಿ ಸಚಿವ ರಾಜಣ್ಣ ತಿರುಗೇಟು ನೀಡಿದ್ದು ಸಿಎಂ ಸಿದ್ದರಾಮಯ್ಯ ಇರುವವರೆಗೂ ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ ಎಂದು ತಿಳಿಸಿದರು. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವವರೆಗೂ ಹಾಗೂ ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿಕೊಂಡರುವವರೆಗೂ ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ ಬೇರೆ ಯಾವುದೇ ಪಕ್ಷಕ್ಕೆ ಹೋಗಲ್ಲ ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಯಾವನು ಹೇಳಿದ್ದು? ಅವನು ಹೇಳೋದು ಹೇಳಿಕೊಳ್ಳಲಿ, ಅವನೇ ಬೇಕಾದರೂ ಬ್ರೆನ್ ಮ್ಯಾಪಿಂಗ್ ಮಾಡಿಕೊಳ್ಳಲಿ ಎಂದು ಏಕವಚನದಲ್ಲಿ ತಿರುಗೇಟು ನೀಡಿದರು. ನಾನ್ಯಾಕೆ ಬಿಜೆಪಿಗೆ ಹೋಗಲಿ. ನಾನ್ಯಾಕೆ ಪಕ್ಷ ಬಿಡಲಿ. ಪಕ್ಷ ನನಗೇನು ಕಡಿಮೆ ಮಾಡಿದೆ? ಸಿದ್ದರಾಮಯ್ಯ ಸಿಎಂ ಆಗಿ ಇರುವ ತನಕ ಹಾಗೂ ಪಕ್ಷದ ನೇತೃತ್ವ…
ನವದೆಹಲಿ : ದೇಶದ ಜನತೆಗೆ ಪ್ರಧಾನಿ ಮೋದಿ ಸರ್ಕಾರ ಈ ಬಾರಿ ದಸರಾ ಹಬ್ಬದ ಭರ್ಜರಿ ಗಿಫ್ಟ್ ನೀಡಿದ್ದು, ಆರೋಗ್ಯ, ವಿಮೆ ಮರುವಿಮೆಯ ಮೇಲಿನ ಜಿಎಸ್ಟಿ ಸಂಪೂರ್ಣ ರದ್ದು ಮಾಡಿದೆ. ಕ್ಯಾನ್ಸರ್ ಅಪರೂಪದ ಕಾಯಿಲೆ ಮತ್ತು ಇತರ ತೀವ್ರ ದೀರ್ಘಕಾಲದ ಔಷದ ಮೇಲಿನ ಜಿ ಎಸ್ ಟಿ ಯನ್ನು ರದ್ದು ಮಾಡಿದೆ. ಅಷ್ಟೇ ಅಲ್ಲದೆ ಮೂರು ಜೀವ ಉಳಿಸುವ ಔಷದ ಮೇಲಿನ ಜಿಎಸ್ಟಿ ಶೇಕಡ 5ರಿಂದ ಶೂನ್ಯಕ್ಕೆ ಇಳಿಕೆ ಮಾಡಿದೆ ಇತರೆ ಎಲ್ಲಾ ಔಷಧಗಳ ಮೇಲೆ ಬಿಎಸ್ಟಿ ಶೇಕಡಾ 12 ರಿಂದ ಶೇಕಡ ಶೂನ್ಯಕ್ಕೆ ಇಳಿಕೆ ಮಾಡಿದ್ದು, ನವೀಕರಿಸಬಹುದಾದ ಇಂಧನ ಸಾಧನೆಗಳು ಮತ್ತು ಅವುಗಳ ಉತ್ಪಾದನೆಗೆ ಬಳಸುವ ಭಾಗಗಳ ಮೇಲಿನ ಜಿ ಎಸ್ ಟಿ ತರ ಶೇಕಡ 12 ರಿಂದ 5ಕ್ಕೆ ಇಳಿಕೆ ಮಾಡಿದೆ. ಪ್ರತಿದಿನ 7500ರೂ. ಅಥವಾ ಅದಕ್ಕಿಂತ ಕಡಿಮೆ ಮೌಲ್ಯದ ಹೋಟೆಲ್, ವಸತಿ ಸೇವೆಗಳ ಮೇಲೆ ಶೇಕಡ 12 ರಿಂದ ಶೇಕಡ 5ಕ್ಕೆ ಇಳಿಕೆ ಮಾಡಿದೆ ಸಲೂನ್, ಯೋಗ…
ಬೆಂಗಳೂರು: ಆನ್ಲೈನ್ ಮತ್ತು ಆಫ್ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಸಂಬಂಧ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್) ಕಾಯ್ದೆಯಡಿ ಬಂಧಿಸಿರುವ ಕ್ರಮವನ್ನು ಕಾನೂನುಬಾಹಿರ ಎಂದು ಘೋಷಿಸುವಂತೆ ಕೋರಿ ವೀರೇಂದ್ರ ಪತ್ನಿ ಆರ್.ಡಿ.ಚೈತ್ರಾ ಸಲ್ಲಿಸಿರುವ ಅರ್ಜಿ ಸಂಬಂಧ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ವೀರೇಂದ್ರ ಅವರ ಬಂಧನವನ್ನು ಕಾನೂನು ಬಾಹಿರವೆಂದು ಘೋಷಿಸಿ, ತಕ್ಷಣವೇ ಅವರನ್ನು ಬಿಡುಗಡೆಗೊಳಿಸಲು ಆದೇಶಿಸುವಂತೆ ಕೋರಿ ಚೈತ್ರಾ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ಪೀಠ ಈ ಆದೇಶ ಮಾಡಿ ವಿಚಾರಣೆಯನ್ನು ಸೆ.8ಕ್ಕೆ ಮುಂದೂಡಿತು. ಪ್ರಕರಣ ಏನು? ಆಗಸ್ಟ್ 22ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ಮೇಲೆ ಮುಂಜಾನೆ 5 ಗಂಟೆಗೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಮಧ್ಯರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಅಂದು ಪಪ್ಪಿ ಮನೆಯಲ್ಲಿ ಕೋಟಿ ಕೋಟಿ ಹಣ ಜೊತೆ ಚಿನ್ನಾಭರಣ ವಿದೇಶಿ ಕರೆನ್ಸಿಯನ್ನ ಇಡಿ ವಶಕ್ಕೆ ಪಡೆದಿತ್ತು. ಸತತ 18…
ಬೆಂಗಳೂರು : ರಾಜ್ಯ ಸರ್ಕಾರ ಇದೀಗ ಮತ್ತೊಂದು ಪೇಚಿಗೆ ಸಿಲುಕಿದ್ದು, ಕೇವಲ ಸರ್ಕಾರಿ ಕಾಮಗಾರಿ ನಡೆಸಿ ಗುತ್ತಿಗೆದಾರರ ಬಾಕಿ ಹಣ ಮಾತ್ರ ಉಳಿಸಿಕೊಂಡಿತ್ತು. ಆದರೆ ಇದೀಗ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಪಡೆದುಕೊಳ್ಳಲು ಹೋರಾಡಿ ಜೈಲು ಶಿಕ್ಷೆ ಅನುಭವಿಸಿದ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಲಾಗುವ ಗೌರವಧನವನ್ನು ಹಲವು ತಿಂಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಇದರ ಮೊತ್ತವೇ 4.85 ಕೋಟಿ ರೂಪಾಯಿ ದಾಟಿದೆ. ರಾಜ್ಯದಲ್ಲಿ 150 ಮಂದಿ ಸ್ವಾತಂತ್ರ್ಯ ಹೋರಾಟಗಾರರು ಮಾಸಿಕ 10 ಸಾವಿರ ರೂಪಾಯಿ ಗೌರವಧನ ಪಡೆಯುತ್ತಿದ್ದಾರೆ. ಮೃತಪಟ್ಟ ಸ್ವಾತಂತ್ರ್ಯ ಯೋಧರ ಶವ ಸಂಸ್ಕಾರಕ್ಕೆ ಸರ್ಕಾರ 4 ಸಾವಿರ ರೂಪಾಯಿ ನೀಡುತ್ತದೆ. ಧಾರವಾಡದಲ್ಲಿ 34, ಬೆಳಗಾವಿಯಲ್ಲಿ 30, ತುಮಕೂರು 15, ಕಲಬುರಗಿಯಲ್ಲಿ 10 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು 150 ಮಂದಿ ಸ್ವಾತಂತ್ರ್ಯ ಹೋರಾಟಗಾರರು ಗೌರವಧನ ಪಡೆಯುತ್ತಿದ್ದಾರೆ. ಕೆಲ ತಿಂಗಳಿಂದ ಸರ್ಕಾರವು ಮಾಸಾಶನ ನೀಡಿಲ್ಲ. ಇದರಿಂದ 4.85 ಕೋಟಿ ರೂಪಾಯಿ ಗೌರವಧನ ಬಾಕಿ ಉಳಿಸಿಕೊಂಡಿದೆ.
ಚಿತ್ರದುರ್ಗ : ಅಕ್ರಮ ಬೆಟ್ಟಿಂಗ್, ಆನ್ ಲೈನ್ ಗೇಮಿಂಗ್ ದಂಧೆ ಆರೋಪ ಮೇಲೆ ಇಡಿ ಅಧಿಕಾರಿಗಳು ಚಿತ್ರದುರ್ಗ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರ ನಿವಾಸದ ಮೇಲೆ ದಾಳಿ ಮಾಡಿದ್ದು, ಸದ್ಯ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ವಿರೇಂದ್ರ ಕೊಟ್ಟ ಮಾಹಿತಿ ಆಧರಿಸಿ ಇಡಿ ಅಧಿಕಾರಿಗಳು ಮನೆ, ಬ್ಯಾಂಕ್ ಅಕೌಂಟ್ ಗಳ ಶೋಧ ನಡೆಸಿದ್ದಾರೆ. ಇದೀಗ ಇಡಿ ಅಧಿಕಾರಿಗಳು ನಿನ್ನೆ ಮತ್ತೆ ದಾಳಿ ನಡೆಸಿ ಆರು ಐಷಾರಾಮಿ ಕಾರುಗಳು ಹಾಗೂ ಅಕೌಂಟಿನಲ್ಲಿದ್ದ 55 ಕೋಟಿ ರೂಪಾಯಿ ಜಪ್ತಿ ಮಾಡಿಕೊಂಡಿದ್ದಾರೆ. ಹೌದು ಶಾಸಕ ವಿರೇಂದ್ರಗೆ ಸಂಬಂಧಿಸಿದಂತೆ ಆಸ್ತಿಯನ್ನು ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ಸದ್ಯ ವೀರೇಂದ್ರಗೆ ಸೇರಿದ ಬ್ಯಾಂಕ್ ಅಕೌಂಟ್ಗಳಲ್ಲಿದ್ದ 55 ಕೋಟಿ ರೂಪಾಯಿಯನ್ನು ಜಪ್ತಿ ಮಾಡಿದೆ. ಒಟ್ಟು 9 ಬ್ಯಾಂಕ್ ಖಾತೆಗಳು, ಒಂದು ಡಿಮ್ಯಾಟ್ ಅಕೌಂಟ್ ಹಾಗೂ 262 ಮ್ಯೂಲ್ ಖಾತೆಗಳಲ್ಲಿದ್ದ ಅಂದಾಜು 55 ಕೋಟಿ ರೂ. ಜಪ್ತಿ ಮಾಡಿದೆ. ಅಲ್ಲದೇ 5 ದುಬಾರಿ ವಾಹನಗಳನ್ನು ವಶಕ್ಕೆ…











