Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಿಗ್ ಬಾಸ್ ವಿನ್ನರ್ ಶಶಿಕುಮಾರ್ ಸಿನಿಮಾ ಶೂಟಿಂಗ್ ವೇಳೆ ಆಯತಪ್ಪಿ ಕಟ್ಟಡದ ಮೇಲಿಂದ ಬಿದ್ದು ಗಾಯಗೊಂಡಿರುವ ಘಟನೆ ಒಂದು ತಿಂಗಳ ಹಿಂದೆ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ. ಮೆಹಬೂಬ ಸಿನಿಮಾ ಶೂಟಿಂಗ್ ವೇಳೆ ನಡೆದ ಘಟನೆಯಾಗಿದ್ದು, ಕಟ್ಟಡದ ಮೇಲಿಂದ ಬಿಗ್ ಬಾಸ್ ವಿನ್ನರ್ ಬಿದ್ದಿರುವ ಕಾರಣ ಗಂಭೀರವಾಗಿ ಗಾಯಗೊಂಡಿದ್ದರು. ಕಳೆದ ತಿಂಗಳು ಸಿನಿಮಾ ಶೂಟಿಂಗ್ ವೇಳೆ ಶಶಿಕುಮಾರ್ ಬಿದ್ದಿದ್ದರು. ಈ ವೇಳೆ ಗಾಯಗೊಂಡ ಶಶಿಕುಮಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದ್ದು ಇದೀಗ ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಶಶಿಕುಮಾರ್ ಅವರು ಇದೀಗ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ಮಾಜಿ ಸಚಿವ ಎಚ್ ಆಂಜನೇಯ ಕಿಡಿಕಾರಿದ್ದು ಹುಚ್ಚರ ಬಗ್ಗೆ ಯಾರಾದರೂ ಮಾತನಾಡುತ್ತಾರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಚ್ಚರ ಬಗ್ಗೆ ಯಾರಾದರೂ ಮಾತಾಡ್ತಾರಾ? ಅನಂತ ಕುಮಾರ್ ಹೆಗಡೆ ಒಬ್ಬ ಹುಚ್ಚ, ಹುಚ್ಚರ ಬಗ್ಗೆ ಯಾರಾದರೂ ಮಾತಾಡ್ತಾರಾ? ಅವನ ಬಗ್ಗೆ ಮಾತಾಡಲ್ಲ. ಅವನ ಬಗ್ಗೆ ಮಾತಾಡಿ ದೊಡ್ಡವನನ್ನಾಗಿಸಿದಂತೆ ಆಗುತ್ತದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ರಾಮರಾಜ್ಯದ ಕನಸು ಅನಾವರಣ ಮಾಡಿ ಕಾರ್ಯರೂಪಕ್ಕೆ ತಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಅನಂತ ಕುಮಾರ್ ಒಬ್ಬ ಮನುಷ್ಯನಾ ?. ಅವನು ಬೆಳೆದ ಹಿನ್ನೆಲೆ ಸಂಸ್ಕೃತಿ ಅದೇ ರೀತಿ ಇರಬೇಕು. ಹೀಗಾಗಿ ಅವನು ಆ ರೀತಿ ವರ್ತನೆ ಮಾಡುತ್ತಾನೆ. ನಾವು ಆ ರೀತಿ ಅಲ್ಲ ನಾನು ಸಹ ಏಕವಚನ ಬಳಸಬಾರದು. ಆದರೆ ಅವನಿಗೆ ಯಾವ ಭಾಷೆ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವದ ವೇಳೆ ಭಾರೀ ಅನಾಹುತವೊಂದು ತಪ್ಪಿದ್ದು, ಘಾಟಿ ಸುಬ್ರಹ್ಮಣ್ಯ ರಥೋತ್ಸವ ಸಂದರ್ಭದಲ್ಲಿ ರಥ ಎಳೆಯುವಾಗ ಚಕ್ರದ ಅಡಿಯಲ್ಲಿ ಮಹಿಳೆಯೊಬ್ಬಳು ಸಿಲುಕಿದ್ದಳು. ತಕ್ಷಣ ಪೊಲೀಸರು ಹಾಗೂ ಸಿಬ್ಬಂದಿಗಳು ಮಹಿಳೆಯನ್ನು ಚಕ್ರದಿಂದ ಎಳೆದುಕೊಂಡಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈ ಘಟನೆ ಸಂಭಬಿಸಿದ್ದು ಘಾಟಿ ಸುಬ್ರಮಣ್ಯ ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿ ಚಕ್ರದ ಬಳಿ ಮಹಿಳೆಯೊಬ್ಬಳು ಸಿಲುಕಿದ್ದಳು. ಕೂಡಲೇ ಎಚ್ಚೆತ್ತು ಪೊಲೀಸ್ ಹಾಗೂ ಸಿಬ್ಬಂದಿ ಮಹಿಳೆಯನ್ನು ಪಕ್ಕಕ್ಕೆ ಎಳಿದುಕೊಂಡರು ಪಕ್ಕಕ್ಕೆ ಏಳದಿದ್ದರಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರಾಗಿದ್ದಾಳೆ. ಈ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದ್ದು, ಸರ್ಪ ದೋಷ ಪರಿಹಾರ ಸೇರಿದಂತೆ ವಿವಿಧ ರೀತಿಯ ನಾಗಾರಾಧನೆಗೆ ಇದು ಪ್ರಸಿದ್ದವಾಗಿದೆ.ಇತಿಹಾಸ ಪ್ರಸಿದ್ದ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬ್ರಹ್ಮರಥೋತ್ಸವ ಸಂಭ್ರಮದಿಂದ ಜರುಗಿದ್ದು, ಪುಷ್ಪ ಶುದ್ದ ಷಷ್ಟಿ ಹಿನ್ನಲೆ ಬ್ರಹ್ಮರಥೋತ್ಸವಕ್ಕೆ ಭಕ್ತ ಸಾಗರ ಹರಿದು ಬಂದಿತ್ತು. 12 ಗಂಟೆಗೆ…
ಚಾಮರಾಜನಗರ : ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ವಿಚಾರವಾಗಿ ಮಾತನಾಡಿದ ಸಚಿವ ಕೆ. ವೆಂಕಟೇಶ್ ಅವರು, ಸಂಸದ ಅನಂತ್ ಕುಮಾರ್ ಹೆಗಡೆಗೆ ಸಂಸ್ಕಾರನೇ ಇಲ್ಲ.ಆ ಮನುಷ್ಯನಿಗೆ ಸಂಸ್ಕಾರ ಅಂದರೆ ಏನು ಅಂತಾನೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಭಟ್ಕಳದಲ್ಲೂ ಮಸೀದಿ ನಿರುನಾಮ ಮಾಡುತ್ತೇವೆ ಅಂದಿದ್ದಾರೆ.ಇದಕ್ಕೆ ಏನು ಬಂದೋಬಸ್ತ್ ಮಾಡಬೇಕು ಮಾಡುತ್ತದೆ.ನಮ್ಮ ಸರ್ಕಾರ ಏನೆಲ್ಲ ಕ್ರಮ ಕೈಗೊಳ್ಳಬೇಕು ಯಾವ ರೀತಿ ಬಂದೋಬಸ್ ಮಾಡಬೇಕು ಎಲ್ಲವನ್ನು ಮಾಡುತ್ತದೆ.ಬೇರೆ ಸಮಾಜದ ದೇಗುಲ ದ್ವಂಸ ಮಾಡಲು ಬಿಡೋಕ್ಕಾಗುತ್ತಾ? ಎಂದು ಚಾಮರಾಜನಗರದಲ್ಲಿ ಸಚಿವ ಕೆ ವೆಂಕಟೇಶ್ ಪ್ರತಿಕ್ರಿಯೆ ನೀಡಿದರು. ಇನ್ನು ಲೋಕಸಭೆ ಚುನಾವಣೆಗೆ ಮೈಸೂರು ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಅವರು ಸ್ಪರ್ಧೆ ಮಾಡುವ ವಿಚಾರವಾಗಿ ಉತ್ತರಿಸಿದ ಅವರು, ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯತೀಂದ್ರ ಸ್ಪರ್ಧೆ ಮಾಡುವುದಿಲ್ಲ ಮೈಸೂರಿಂದ ಯತೀಂದ್ರ ಕಣಕ್ಕೆ ಇಳಿಯುವುದಿಲ್ಲ. ನಾನಂತೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಇದು ನನ್ನ ಕೊನೆ ಚುನಾವಣೆ ನನಗೂ ಕೂಡ ವಯಸ್ಸಾಗಿದೆ ಅಸೆಂಬ್ಲಿ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ಚಾಮರಾಜನಗರದಲ್ಲಿ…
ಹಾಸನ : ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹಾಗೂ ಜೆಡಿಎಸ್ ಪಕ್ಷದ ನಾಯಕ ಎಚ್ಡಿ ರೇವಣ್ಣ ಕುಟುಂಬದ ಮಧ್ಯ ಸಂಘರ್ಷ ತೀವ್ರ ತಾರಕಕ್ಕೆ ಏರಿದು ಇದೀಗ ವಕೀಲ ಎಚ್ ಡಿ ರೇವಣ್ಣ ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಿದ್ದು ಕಳೆದ ಲೋಕಸಭಾ ಚುನಾವಣೆಯಲ್ಲಿ ರೇವಣ್ಣ ಅವರು ಮತಗಟ್ಟೆಯಲ್ಲಿ ನಿಂತು ಕಳ್ಳ ಮತ ಹಾಕಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತಂತೆ ಅವರು ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಮತಗಟ್ಟೆಯಲ್ಲಿ ನಿಂತು ಎಚ್ ಡಿ ರೇವಣ್ಣ ಕಳ್ಳ ಮತ ಹಾಕಿಸಿದ್ದರು.ಹೈಕೋರ್ಟ್ ನಲ್ಲಿ ರೇವಣ್ಣ ಅಪರಾಧಿ ಎಂದು ಆದೇಶ ಬಂತು.ಎಚ್ ಡಿ ರೇವಣ್ಣ ವರದಿ ಎಂದು ತೀರ್ಪು ಬಂದಿದೆ. ರೇವಣ್ಣ ರಾಜಪಾಲರಿಂದ ಪ್ರಮಾಣವಚನ ಸ್ವೀಕರಿಸಿದರು ಎಂದು ತಿಳಿಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 40 ರಿಂದ 50 ನಿಮಿಷಗಳ ಕಾಲ ಮತಗಟ್ಟೆಯಲ್ಲಿ ನಿಂತಿದ್ದರು. ಸಿಸಿಟಿವಿಯಲ್ಲಿ ಕಳ್ಳ ಮತ ಹಾಕಿಸಿರುವ ವಿಡಿಯೋ ಇದೆ. ಮತಗಟ್ಟೆ ಸಂಖ್ಯೆ 244ರಲ್ಲಿ ರೇವಣ್ಣ ಕಳ್ಳ ಮತ ಹಾಕಿಸಿದ್ರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಇದು ನಡೆದಿತ್ತು.…
ಉಡುಪಿ : ಗ್ರಾಮ ಪಂಚಾಯತಿ ಸದಸ್ಯನ ಮೇಲೆ 35 ಜನರಿಂದ ಡೆಡ್ಲಿ ಅಟ್ಯಾಕ್ ಆಗಿದ್ದು, ಜಟ್ಕಲ್ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗ್ಯಾಂಗ್ ಅಟ್ಯಾಕ್ ನಡೆದಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಜಡಕಲ್ ನಲ್ಲಿ ಈ ಅಟ್ಯಾಕ್ ನಡೆದಿದೆ ಎನ್ನಲಾಗುತ್ತಿದೆ. ಗ್ರಾ. ಪಂ ಸದಸ್ಯ ಚಂದ್ರಮೋಹನ್ ನಾಯಕ್ ಮೇಲೆ ಈ ಒಂದು ಹಲ್ಲೆ ನಡೆದಿದ್ದು ಬೈಕಿಗೆ ಜೀಪ್ ಟಚ್ ಆಗಿದ್ದಕ್ಕೆ ಬೈಕ್ ಸವಾರ ಬೈದಿದ್ದ ಎನ್ನಲಾಗಿದೆ.ಈ ವೇಳೆ ಗ್ರಾಮ ಪಂಚಾಯತಿ ಸದಸ್ಯ ಚಂದ್ರಮೋಹನ್ ಕ್ಷಮೆ ಕೇಳಿದ್ದ ಆದರೂ ಕೂಡ ಕ್ಷಮೆ ಕೇಳಿದರು ಕೂಡ ಮನೆ ಬಳಿ ಬಂದು ಸುಮಾರು 35 ಜನರಿಂದ ಸದಸ್ಯನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮನೆ ಬಳಿ ಬಂದಾಗ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ 35 ಜನರು ಏಕಾಏಕಿ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ತಕ್ಷಣ ಗಾಯಾಳನ್ನು ಕುಂದಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗದಗ : ಗದಗದಲ್ಲಿ ಟಂ ಟಂ ಚಾಲಕರು ಸಾರ್ವಜನಿಕವಾಗಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಸೈಬರ್ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಮತ್ತೊಬ್ಬ ಟಂಟಂ ಚಾಲಕ ಇದೆ ವೇಳೆ ಪರಾರಿಯಾಗಿದ್ದಾನೆ. ಸಾರ್ವಜನಿಕವಾಗಿ ಜನನಿಬಿಡ ಬಸ್ ನಿಲ್ದಾಣದ ಬಳಿ ರಸ್ತೆಯ ಮೇಲೆ ನಿಂತು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಟಂ ಟಂ ಚಾಲಕರ ಮೇಲೆ ಸಿಇಎನ್ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಮತ್ತೊಬ್ಬ ಪರಾರಿಯಾದ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. ಸಿಇಎನ್ ಪೊಲೀಸ್ ಠಾಣೆಯ ಎಸ್. ಎಮ್. ಶಿರಗುಪ್ಪಿ ಹಾಗೂ ಸಿಬ್ಬಂದಿ ದಾಳಿ ಮಾಡಿದ್ದು, ಹುಲಕೋಟಿ ಗ್ರಾಮದ ಸಾಯಿ ನಗರ ನಿವಾಸಿಗಳಾದ ಟಂ ಟಂ ಚಾಲಕರಾದ ಮಣಿಕಂಠ ತಂದೆ ಕರಿಯಪ್ಪ ಕೊಂಡಿಕೊಪ್ಪ (22), ಹರೀಶ್ ತಂದೆ ಹನಮಂತಪ್ಪ ಹರಕುಣಿ (23) ಎಂಬ ಇಬ್ಬರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಮರಿಯಪ್ಪ ತಂದೆ ಕರಿಯಪ್ಪ ಕವಡಿಕಿ ಎಂಬ ಟಂ ಟಂ ಚಾಲಕ ಪರಾರಿಯಾಗಿದ್ದಾನೆ. ಬಂಧಿತರಿಂದ 13,440…
ಬೆಂಗಳೂರು: ಕಲ್ಲು ಒಡೆದು, ಗುಡಿ ಕಟ್ಟುವವರು ನೀವು, ವಿಗ್ರಹ ತರುವವರು ನೀವು, ಆದರೆ, ನಿಮಗೆ ಪೂಜೆಗೆ ಅವಕಾಶವಿಲ್ಲ. ಹಾಗಾಗಿ, ನೀವೇ ದೇವಸ್ಥಾನ ಕಟ್ಟಿಕೊಂಡು, ನೀವೇ ಪೂಜಾರಿಗಳಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸಲಹೆ ನೀಡಿದರು. ನಗರದಲ್ಲಿ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶೂದ್ರರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡದಿದ್ದಾಗ, ನಾರಾಯಣಗುರುಗಳು ಅವುಗಳನ್ನು ತಿರಸ್ಕರಿಸಿ, ದೇವಸ್ಥಾನಗಳನ್ನು ನಿರ್ಮಿಸಿದ್ದಾರೆ. ಅದೇ ಮಾರ್ಗವನ್ನು ನೀವೂ ಅನುಸರಿಸಬೇಕು ಎಂದು ತಿಳಿಸಿದರು. “ಸಬ್ ಕಾ ಸಾಥ್-ಸಬ್ ಕಾ ವಿಕಾಸ್” ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ. ಆದರೆ ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು. ವೈಚಾರಿಕ – ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು. ಶರಣರು ನುಡಿದಂತೆ ನಡೆದರು. ಹೇಳಿದಂತೆಯೇ ತಮ್ಮ ಬದುಕನ್ನು ಆಚರಿಸಿದರು. ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಒಪ್ಪಬಾರದು.…
ಉತ್ತರ ಕನ್ನಡ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆಯವರು ಏಕವಚನ ಪದ ಬಳಕೆ ಮಾಡಿ ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಅನಂತ್ ಕುಮಾರ್ ಹೆಗಡೆ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು ಸಿದ್ದರಾಮಯ್ಯನವರು ಸಂಸ್ಕೃತಿಯ ಕುರಿತು ನನ್ನೆದುರು ಬಂದು ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಏಕವಚನ ಪದವಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಂಸ್ಕೃತ ಬಗ್ಗೆ ಸಿಎಂ ನನ್ನೆದುರು ಬಂದು ಮಾತನಾಡಲಿ ಇದು ನನ್ನ ವೈಯಕ್ತಿಕ ಹೇಳಿಕೆ ಪಕ್ಷದ ಹೇಳಿಕೆಯಲ್ಲ. ಬಿವೈ ವಿಜಯೇಂದ್ರ ಸರಿಯಾಗಿ ಹೇಳಿದ್ದಾರೆ ಎಂದು ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮೋದಿ ಬಿಎಸ್ ವೈ ಬಗ್ಗೆ ಹಗುರಾಗಿ ಮಾತನಾಡುತ್ತಾರೆ. ನಮ್ಮ ದೇಗುಲದ ಬಗ್ಗೆ ಕೀಳಾಗಿ ಮಾತನಾಡುವುದು ಏಕೆ?ನಮ್ಮ ಪ್ರಧಾನಿ ಅಮಿತ್ ಶಾ ಬಗ್ಗೆ ಏನೆಲ್ಲಾ ಹೇಳಿದ್ದಾರೆ ಯಾರ್ಯಾರು ಏನೇನು ಮಾತನಾಡಿದ್ದಾರೆಂದು ಹೇಳಬೇಕಾ? ಮೋದಿಗೆ ಸಿದ್ದರಾಮಯ್ಯ ಮಾಸ್ ಮರ್ಡರ್ ಅಂದಿದ್ದರು ಕಾಂಗ್ರೆಸ್ ಸಿದ್ದರಾಮಯ್ಯ…
ಮೈಸುರು : ಇದೆ 22ರಂದು ಅಯೋಧ್ಯ ಶ್ರೀ ರಾಮಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮ ಆ ಯೋಜನೆ ಮಾಡಲಾಗಿದ್ದು, ಈ ಒಂದು ಶ್ರೀ ರಾಮನ ಗರ್ಭಗುಡಿಯಲ್ಲಿ ರಾಜ್ಯದ ಮೈಸೂರು ಜಿಲ್ಲೆಯ ಹೆಗ್ಗಡ ದೇವನಕೋಟೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಯಲ್ಲಿ ಮೂಡಿಬಂದ ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗುವುದು ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಈ ವಿಷಯವಾಗಿ ಮೈಸೂರಿನಲ್ಲಿ ಅವರ ಪತ್ನಿ ವಿಜೇತ ಅವರು ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ರಾಮನ ಮೂರ್ತಿ ಕೆತ್ತಿದ ಅರುಣ್ ಯೋಗಿರಾಜ್ ಪತ್ನಿ ವಿಜೇತ ಹೇಳಿಕೆ ನೀಡಿದ್ದು, ನನ್ನ ಪತಿ ಕೆತ್ತಿದ ಮೂರ್ತಿಯೇ ಆಯ್ಕೆಯಾಗುತ್ತೆ ಅಂತ ಅನ್ನಿಸಿತ್ತು. ನಮಗೆ ಇದು ಹೆಮ್ಮೆ ವಿಚಾರವಾಗಿದೆ. ರಾಮಲಲ್ಲ ಮೂರ್ತಿ ಬಹಳ ಸುಂದರವಾಗಿ ಮೂಡಿ ಬಂದಿದೆ. ಕೆತ್ತನೆ ಮಾಡುವ ಸಂದರ್ಭದಲ್ಲಿ ಸಾಕಷ್ಟು ರೀತಿಯಲ್ಲಿ ಪತಿ ಅಧ್ಯಯನ ಮಾಡಿದ್ದರು ಎಂದು ಅವರು ತಿಳಿಸಿದರು. ರಾಮನ ಮೂರ್ತಿ ಕೆತ್ತನೆ ಬಹಳ ಕಷ್ಟದ ಕೆಲಸವಾಗಿತ್ತು. ಕಾಲ್ಪನಿಕವಾಗಿದ್ದರಿಂದ ಹೇಗೆ ಮೂಡಿ ಬರುತ್ತೆ ಅಂತ ಗೊತ್ತಿರಲಿಲ್ಲ. ಮೂರ್ತಿ ಕೆತ್ತನೆ…