Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ಐದು ಲಕ್ಷ ರು. ನೀಡುವುದಾಗಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನಡೆಗೆ ಹೈಕೋರ್ಟ್ ಆಕ್ಷೇಪಿಸಿದೆ.ಯತ್ನಾಳ್ ಅವರ ಮಾತಿಗೆ ಛೀಮಾರಿ ಹಾಕಿದೆ. ರಾಜಕಾರಣಿಗಳು ವಿವಿಧ ಧರ್ಮೀಯರ ಮಧ್ಯೆ ಸಹ ಬಾಳ್ವೆ ಮೂಡಿಸುವಂಥ ಕ್ರಾಂತಿಕಾರಕ ಕೆಲಸ ಮಾಡ ಬೇಕೇ ಹೊರತು ದ್ವೇಷ ಭಾವನೆ ಮೂಡಿಸುವ ಕೆಲಸವ ನ್ನಲ್ಲ ಎಂದಿದೆ. ಕೊಪ್ಪಳ ಟೌನ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ಐ. ಅರುಣ್ ಅವರ ಪೀಠ ಹೀಗೆ ನುಡಿಯಿತು. ಇದೇ ವೇಳೆ ಪೊಲೀಸರು ಬಲವಂತದ ಕ್ರಮ ಜರುಗಿಸಬಾರದು. ತನಿಖೆಗೆ ಯತ್ನಾಳ್ ಸಹಕರಿಸಬೇಕು ಎಂದು ಮಧ್ಯಂತರ ಆದೇಶ ನೀಡಿತು. ಪ್ರಕರಣ ಹಿನ್ನೆಲೆ? ಕೊಪ್ಪಳದಲ್ಲಿ ಹಿಂದೂ ಯುವಕನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಪ್ಪಳ ನಗರಕ್ಕೆ ಭೇಟಿ ನೀಡಿದಾಗ ಹಿಂದೂ ಯುವಕರು ಮುಸ್ಲಿಂ…
ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿಯ 101 ಉಪಜಾತಿಗಳನ್ನು ಪ್ರವರ್ಗ ಎ,ಬಿ ಮತ್ತು ಸಿ ಎಂದು ಮೂರು ಪ್ರವರ್ಗಗಳಾಗಿ ವರ್ಗೀಕರಿಸಿ ಜಾರಿಗೊಳಿಸಿರುವ ಒಳ ಮೀಸಲಾತಿಗೆ ಅನುಗುಣವಾಗಿ ರಾಜ್ಯ ಸಿವಿಲ್ ಸೇವೆಗಳ ಹುದ್ದೆ ಗಳ ನೇರ ನೇಮಕಾತಿಯಲ್ಲಿ ಪ್ರವರ್ಗವಾರು ಹುದ್ದೆಗಳ ಹಂಚಿಕೆಗೆ ಸಂಬಂಧಿಸಿ ರೋಸ್ಟರ್ ಬಿಂದು ಪರಿಷ್ಕರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಬುಧವಾರ ಸರ್ಕಾರ ಆದೇಶಿಸಿದೆ. ಹಾಗಾಗಿ ಆ ಪ್ರಕಾರ, ಎಸ್ಸಿ ಸಮುದಾಯಕ್ಕೆ ರಾಜ್ಯದಲ್ಲಿ ಒಟ್ಟಾರೆ ಒಟ್ಟಾರೆ ಇರು ಇರುವ ಶೇ.17 ಮೀಸಲಾತಿಯಲ್ಲಿ ಇನ್ನು ಮುಂದೆ ಪ್ರವರ್ಗ ಎ ಅಡಿ ಬರುವ ಉಪಜಾತಿಗಳಿಗೆ ಶೇ.6, ಪ್ರವರ್ಗ ಬಿ ಅಡಿ ಬರುವ ಉಪಜಾತಿಗಳಿಗೆ ಶೇ.6 ಮತ್ತು ಪ್ರವರ್ಗ ಸಿ ಅಡಿ ಬರುವ ಉಪಜಾತಿಗಳಿಗೆ ಶೇ.5 ಹುದ್ದೆಗಳು ಲಭ್ಯವಾಗಲಿವೆ. ಅಂದರೆ ನೂರು ಹುದ್ದೆಯಲ್ಲಿ ಪ್ರಸ್ತುತ ಪರಿಶಿಷ್ಟ ಜಾತಿಯವರಿಗೆ ಮೀಸಲಿರುವ 17 ಹುದ್ದೆಗಳಲ್ಲಿ ಒಳಮೀಸಲಾತಿಯಡಿ ಪ್ರವರ್ಗ ಎ ಅಡಿ ಬರುವ ಎಸ್ಸಿ ಉಪ ಜಾತಿಗಳಿಗೆ 6 ಹುದ್ದೆ, ಪ್ರವರ್ಗ ಬಿ ಅಡಿ ಬರುವ ಉಪ ಜಾತಿಗಳಿಗೆ 6…
ನವದೆಹಲಿ : ಸೆಪ್ಟೆಂಬರ್ 22ರಿಂದ ನೂತನ ಜಿಎಸ್ಟಿ ದರ ಜಾರಿಗೆ ಬರಲಿದೆ. 4ರ ಬದಲು ಶೇ. 5 ಮತ್ತು ಶೇ. 18ರ ಎರಡು ತೆರಿಗೆ ಸ್ಲ್ಯಾಬ್ ದರಗಳಿಗೆ GST ಮಂಡಳಿ ಅನುಮೋದನೆ ನೀಡಿದೆ. ಇಂದು ನಡೆದ ಜಿಎಸ್ಟಿ ಮಂಡಳಿಯ ಸಭೆಯಲ್ಲಿ 5% ಮತ್ತು 18%ರ ತೆರಿಗೆ ಸ್ಲ್ಯಾಬ್ಗಳನ್ನು ಎರಡಕ್ಕೆ ಕಡಿತಗೊಳಿಸುವುದಾಗಿ ಘೋಷಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಈ ಜಿಎಸ್ಟಿ (GST) ದರಗಳಿಗೆ ಇಂದು ನಡೆದ ಜಿಎಸ್ಟಿ ಮಂಡಳಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ GST ಮಂಡಳಿಯ 56ನೇ ಸಭೆಯು ಈ ನಿರ್ಧಾರ ತೆಗೆದುಕೊಂಡಿದೆ. ಅಸ್ತಿತ್ವದಲ್ಲಿರುವ ಶೇ. 12 ಮತ್ತು ಶೇ. 28ರ ಸ್ಲ್ಯಾಬ್ಗಳನ್ನು ರದ್ದುಗೊಳಿಸಲಾಗಿದೆ. ಹೀಗಾಗಿ, ಇನ್ಮುಂದೆ ಶೇ. 5 ಮತ್ತು ಶೇ. 18ರ ಸ್ಲ್ಯಾಬ್ ದರಗಳು ಮಾತ್ರ ಜಾರಿಯಲ್ಲಿರಲಿವೆ. ನನ್ನ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ, ಜಿಎಸ್ಟಿಯಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳನ್ನು ತರುವ ನಮ್ಮ ಬಯಕೆಯ ಬಗ್ಗೆ ನಾನು ಮಾತನಾಡಿದ್ದೆ.…
ನವದೆಹಲಿ : ನಿನ್ನೆ ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯಕ್ಕೆ ಅಸ್ತಿತ್ವದಲ್ಲಿರುವ 4 ಜಿಎಸ್ಟಿ ಸ್ಲ್ಯಾಬ್ಗಳಲ್ಲಿ ಎರಡನ್ನು ರದ್ದು ಮಾಡಿ ಎರಡೇ ಸ್ಲ್ಯಾಬ್ ಜಾರಿಗೆ ತರಲು ಜಿಎಸ್ಟಿ ಮಂಡಳಿ ಅನುಮೋದನೆ ನೀಡಿದೆ. ಹೀಗಾಗಿ, ದಸರಾ ಹಬ್ಬಕ್ಕೂ ಮುನ್ನ ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ ಸರ್ಕಾರವು ಸಲ್ಲಿಸಿದ ಜಿಎಸ್ಟಿ ಕಡಿತ ಮತ್ತು ಸುಧಾರಣೆಗಳ ಪ್ರಸ್ತಾವನೆಗಳನ್ನು ಸರ್ವಾನುಮತದಿಂದ ಅನುಮೋದಿಸಿದೆ. ಇದು ಸಾಮಾನ್ಯ ಜನರು, ರೈತರು, ಎಂಎಸ್ಎಂಇಗಳು, ಮಧ್ಯಮ ವರ್ಗ, ಮಹಿಳೆಯರು ಮತ್ತು ಯುವಕರಿಗೆ ಪ್ರಯೋಜನವನ್ನು ನೀಡುತ್ತದೆ. 56ನೇ ಜಿಎಸ್ಟಿ ಕೌನ್ಸಿಲ್ ಸಭೆಯ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿದ್ದು, ಮಧ್ಯಮ ವರ್ಗ ಮತ್ತು ಸಾಮಾನ್ಯ ಜನರ ಬಳಕೆಯ ವಸ್ತುಗಳ ಮೇಲಿನ ಜಿಎಸ್ಟಿ ದರವನ್ನು ಸಂಪೂರ್ಣವಾಗಿ ಕಡಿಮೆ ಮಾಡಲಾಗಿದೆ. * ಕೇಶ ತೈಲ (ಹೇರ್ ಆಯಿಲ್) * ಟಾಯ್ಲೆಟ್ ಸೋಪ್, ಸೋಪ್ ಬಾರ್ಗಳು *…
ಬೆಂಗಳೂರು : ಬೆಂಗಳೂರು ಅರಮನೆ ಮೈದಾನದಲ್ಲಿ ಈದ್ ಉನ್ನಬಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ವಿದೇಶಿ ಧರ್ಮ ಪ್ರಚಾರಕರು ಭಾಗವಹಿಸುವ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ಸಂಘಟಕರಿಗೆ ಪೊಲೀಸ್ ಆಯುಕ್ತರ ಮೂಲಕ ಮಾಹಿತಿ ನೀಡಲಾಗಿದೆ.ವೀಸಾ ನಿಯಮ ಉಲ್ಲಂಘನೆ ಮಾಡಿದಂತೆ ಕ್ರಮಕ್ಕೆ ಸೂಚಿಸಲಾಗಿದೆ. ಈ ವೇಳೆ ವಿದೇಶಿ ಪ್ರಚಾರಕರು ಭಾಷಣ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಒಂದು ಕಾರ್ಯಕ್ರಮದಲ್ಲಿ ವಿದೇಶಿ ಧರ್ಮ ಗುರುಗಳು ಭಾಗವಹಿಸಲು ಅವಕಾಶ ಇಲ್ಲ. ಅಲ್ಲದೆ ಭಾಷಣವನ್ನು ಮಾಡುವಂತಿಲ್ಲ ನಿಮ್ಮ ಉಲ್ಲಂಘಿಸಬಾರದು ಎಂದು ಈಗಾಗಲೇ ಸಂಘಟಕ ಗರಿಗೆ ಸೂಚಿಸಲಾಗಿದೆ ಇಡೀ ಕಾರ್ಯಕ್ರಮದ ಮೇಲೆ ರಾಜ್ಯ ಸರ್ಕಾರ ನಿಗಾ ಇಡಲಿದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ. ವಿರೋಧ ಪಕ್ಷಗಳಿಗಿಂತ 10 ಪಟ್ಟು ನಮಗೆ ಹೆಚ್ಚು ಜವಾಬ್ದಾರಿ ಇದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಧಾರವಾಡ : ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಇದೀಗ ಇಂದು ಧಾರವಾಡ ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಹೌದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೇಹಾ ಕೊಲೆ ಕೆಎಸ್ ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿ ಧಾರವಾಡ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಕೋರಿ ಫಯಾಜ್ ಅರ್ಜಿ ಸಲ್ಲಿಸಿದ್ದ ಈ ಹಿಂದೆ ಹುಬ್ಬಳ್ಳಿಯ 1ನೇ ಹಿರಿಯ ಮತ್ತು ಸತ್ರ ನ್ಯಾಯಾಲಯ ಕೂಡ ಫಯಾಜ್ ಅರ್ಜಿಯನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಧಾರವಾಡ ಹೈಕೋರ್ಟ್ ಕೂಡ ಇದೀಗ ಫಯಾಜ್ ಜಾಮೀನು ಅರ್ಜಿಯನ್ನು ವಜಾ ಗೊಳಿಸಿದೆ.
ರಾಯಚೂರು : ರಾಯಚೂರಿನಲ್ಲಿ ಬಿಹಾರ್ ಮೂಲದ ಶಂಕಿತ ನಕ್ಸಲ್ ಅರೆಸ್ಟ್ ಬಿಹಾರ ಪೊಲೀಸರು ಹಾಗೂ ರಾಯಚೂರು ಗ್ರಾಮೀಣ ಪೊಲೀಸರ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಬಿಹಾರ್ ಮೂಲದ ನಕ್ಸಲ್ ಮನೋಜ್ ಸದಾ ಎನ್ನುವ ನಕ್ಸಲ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮನೋಜ್ ವಿರುದ್ಧ ಕೊಲೆ ಸುಲಿಗೆ ಜೀವ ಬೆದರಿಕೆ ಆರೋಪ ಕೇಳಿ ಬಂದಿದ್ದು, ರಾಯಚೂರಿನ ಯರಮರಸ ಇಂಡಸ್ಟ್ರಿಯಲ್ ಏರಿಯಾದಲ್ಲಿ ಅರೆಸ್ಟ್ ಮಾಡಲಾಗಿದೆ. ಖಾಸಗಿ ರೈಸ್ ಮಿಲ್ ಒಂದರಲ್ಲಿ ಆರೋಪಿ ಮನೋಜ್ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಅರೆಸ್ಟ್ ಬಳಿಕ ಮನೋಜನನ್ನು ಪೊಲೀಸರು ಕೋರ್ಟ್ ಗೆ ಹಾಗಿರುಪಡಿಸಿ ಬಿಹಾರ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು : ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಸಮಾಧಿ ಕೆಡುವಲಾಗಿತ್ತು. ಈ ವಿಚಾರವಾಗಿ ಇಂದು ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಧಿ ನಿರ್ಮಾಣಕ್ಕಾಗಿ ಭೂಮಿ ನೀಡಿ ಎಂದು ಮನವಿ ಮಾಡಿದರು. ಅಲ್ಲದೇ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಎಂದು ಸಹ ಮನವಿ ಮಾಡಿದರು. ಅದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ ಈ ವಿಚಾರವಾಗಿ ನಾಳೆ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗುತ್ತದೆ ಎಂದು ಭರವಸೆ ನೀಡಿದ್ದು, ಹಾಗಾಗಿ ನಾಳೆ ಅಧಿಕೃತವಾಗಿ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಆಗುವ ಸಾಧ್ಯತೆ ಇದೆ. ನಟ ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು, ನಾಳೆ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.ನಿನ್ನೆ ಈ ವಿಚಾರವಾಗಿ ನಟ ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್…
ಬೆಂಗಳೂರು : ವಿಷ್ಣುವರ್ಧನ್ ಅವರ ಅಭಿನವ್ ಸ್ಟುಡಿಯೋದಲ್ಲಿನ ಸಮಾಧಿ ಕೆಡವಿದ್ದಾರೆ. ಸ್ಮಾರಕ ನಿರ್ಮಾಣಕ್ಕಾಗಿ 10 ಗುಂಟೆ ಜಾಗ ನೀಡುವಂತೆ ಭಾರತಿ ವಿಷ್ಣುವರ್ಧನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಅಲ್ಲದೆ, ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅಭಿಮಾನಿಗಳ ಮನವಿಯನ್ನೂ ಅವರು ಮುಂದಿಟ್ಟಿದ್ದಾರೆ. ಇಂದು ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರೋ ವಿಷ್ಣುವರ್ಧನ್ ಸಮಾಧಿ ಕೆಡವಿದ ವಿಚಾರ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಸ್ಟುಡಿಯೋದ 10 ಗುಂಟೆ ಜಾಗವನ್ನು ತಮಗೆ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದರು. ಭಾರತಿ ವಿಷ್ಣುವರ್ಧನ್ ಅವರು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಿಷ್ಣು ಅಳಿಯ ಅನಿರುದ್ಧ್ ಜತ್ಕರ್ ಕೂಡ ಈ ಸಂದರ್ಭದಲ್ಲಿ ಇದ್ದರು. ಅಭಿಮಾನಿಗಳಿಗಾಗಿ ಸ್ಟುಡಿಯೋದಲ್ಲಿ ಜಾಗ ಕೊಡಿ ಎಂದು ಸಿಎಂ ಬಳಿ ಕೇಳಿದ್ದೇವೆ. ಅಭಿಮಾನಿಗಳ ಬಂದು ನಮಸ್ಕಾರ ಮಾಡಿ ಹೋಗಲು ಅವಕಾಶ ಮಾಡಿ ಕೊಡಬೇಕು ಎಂಬುದು ನಮ್ಮ ಮನವಿ ಎಂದಿದ್ದಾರೆ. ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಕೊಡಬೇಕು ಎಂಬುದು ಹಲವು ವರ್ಷಗಳ ಕೋರಿಕೆ.…
ಬೆಂಗಳೂರು : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದ್ದು, ಆರ್ಎಂಸಿ ಯಾರ್ಡ್ ಮಹಿಳೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಕ್ಲೀನ್ಚಿಟ್ ಸಿಕ್ಕಿದೆ. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ ಎಸ್ಐಟಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ. ತಮ್ಮ ಮೇಲಿನ ಆರೋಪ ಸುಳ್ಳೆಂದು ಪ್ರಕರಣ ರದ್ದು ಕೋರಿ ಮುನಿರತ್ನ ಅರ್ಜಿ ಸಲ್ಲಿಸಿದ್ದರು. ಈಗ, ಆರೋಪ ಸಾಬೀತಾಗಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಹೈಕೋರ್ಟ್ಗೆ ಶಾಸಕ ಮುನಿರತ್ನ ಪರ ವಕೀಲರು ತಿಳಿಸಿದ್ದಾರೆ. ಬಂಧಿಸದಂತೆ ನೀಡಿದ್ದ ಮಧ್ಯಂತರ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮಹಿಳೆಯೊಬ್ಬರು ಸಾಮೂಹಿಕ ಅತ್ಯಾಚಾರದ ದೂರು ನೀಡಿದ್ದರು. ಆರ್ಎಂಸಿ ಯಾರ್ಡ್ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.ಮಹಿಳೆ ಮಾತ್ರೆ ಸೇವಿಸುವಾಗಲೂ ರಿಹರ್ಸಲ್ ಮಾಡಿರೋದು ಬೆಳಕಿಗೆ ಬಂದಿದೆ. 8 ಬಾರಿ ರಿಹರ್ಸಲ್ ಮಾಡಿದ್ದಳು. ಆಕೆ ದೇಹದಲ್ಲಿ ನಿದ್ರೆ ಮಾತ್ರೆ ಅಂಶ ಇಲ್ಲ. ಮಹಿಳೆ ಮಾಡಿರುವ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ. ಹೀಗಾಗಿ, ಕೋರ್ಟ್ಗೆ ಎಸ್ಐಟಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ.














