Author: kannadanewsnow05

ಹುಬ್ಬಳ್ಳಿ : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನ ಹಾಗೂ ಮಂದಿರ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿದ್ದು, ಸಂಖ್ಯೆಯಲ್ಲಿ ಅಯೋಧ್ಯೆಗೆ ತೆರಳಲಿದ್ದಾರೆ.ಅವರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ರಾಜ್ಯದ ವಿವಿಧೆಡೆಯಿಂದ 12ಕ್ಕೂ ಅಧಿಕ ವಿಶೇಷ ರೈಲುಗಳನ್ನು ಓಡಿ ಸಲು ಚಿಂತನೆ ನಡೆಸಿದೆ. ಶೀಘ್ರದಲ್ಲೇ ರೈಲುಗಳ ಸಮಯ ಹಾಗೂ ದಿನ ನಿಗದಿಪಡಿಸಿ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಅತ್ತ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮುಗಿಯುತ್ತಿದ್ದಂತೆ, ಇತ್ತ ನೈಋತ್ಯ ರೈಲ್ವೆ ವಲಯ ರಾಜ್ಯದ ವಿವಿಧೆಡೆಯಿಂದ 12ಕ್ಕೂ ಅಧಿಕ ವಿಶೇಷ ರೈಲುಗಳನ್ನು ಓಡಿ ಸಲು ಚಿಂತನೆ ನಡೆಸಿದೆ. ಶೀಘ್ರದಲ್ಲೇ ರೈಲುಗಳ ಸಮಯ ಹಾಗೂ ದಿನ ನಿಗದಿಪಡಿಸಿ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ. ಸದ್ಯಕ್ಕೆ ಅಯೋಧ್ಯೆ ಯಿಂದ ಬಂದ ಮಂತ್ರಾಕ್ಷತೆಯನ್ನು ಎಲ್ಲ ಭಕ್ತರ ಮನೆಗಳಿಗೆ ಮುಟ್ಟಿಸಲಾಗುತ್ತಿದೆ. ಆದರೆ, ಜ.22ರಂದು ಎಲ್ಲರಿಗೂ ಅಯೋಧ್ಯೆಗೆ ತೆರಳಲು ಅವಕಾಶವಿಲ್ಲ. ಸದ್ಯದ ಮಾಹಿತಿ ಪ್ರಕಾರ ಅತ್ತ ಶ್ರೀರಾಮ ಮೂರ್ತಿಯ…

Read More

ಬೆಂಗಳೂರು : ಹಿಂದಿನಿಂದ ವೇಗವಾಗಿ ಬಂದ ಕೆ ಎಸ್ ಆರ್ ಟಿ ಸಿ ಬಸ್ ಒಂದು ಬೈಕ್ ಗೆ ಡಿಕ್ಕಿ ಹೊಡೆದಿರುವ ಪರಿಣಾಮ ಬೈಕ್ ಸವಾರ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ನಡೆದಿರುವ ಅಪಘಾತವಾಗಿದೆ. ಫುಡ್ ಡೆಲಿವರಿ ಬಾಯ್ ಬಸವರಾಜ್ ದುರ್ಮರಣ ಹೊಂದಿದ್ದಾರೆ.ಹಿಂದಿನಿಂದ ವೇಗವಾಗಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿರುವ ಪರಿಣಾಮವಾಗಿ ಫುಡ್ ಡೆಲಿವರಿ ಬಸವರಾಜ್ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಯುವಕ ಸಾವು ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮರಕ್ಕೆ ಡಿಕ್ಕಿಯಾಗಿ ಬಳಿಕ ಕಂಪೌಂಡಿಗೆ ಕಾರು ಗುದ್ದಿದೆ ಕಾರಿನಲ್ಲಿದ್ದ ಮಲ್ವೆನ್ ಜೋಶ್ವ (25)ಎನ್ನುವ ಯುವಕ ದುರ್ಮರಣ ಹೊಂದಿದ್ದಾನೆ . ತಡರಾತ್ರಿ 2.10ರ ಸುಮಾರು ನಡೆದಿರುವ ಘಟನೆಯಾಗಿದೆ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಆಡಳಿತರೂಢ ಕಾಂಗ್ರೆಸ್ ಪಕ್ಷದ ಪ್ರಮುಖರಿಗೆ ಈ ವಾರದೊಳಗೇ ಅಧಿಕಾರ, ಸ್ಥಾನಮಾನ ಸಿಗುವ ನಿರೀಕ್ಷೆ ಮತ್ತೆ ಗರಿಗೆದರಿದೆ.ಈ ವಾರದಲ್ಲಿ ನಿಗಮ ಮಂಡಳಿಗಳ ನೇಮಕವಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನಿಗಮ ಮಂಡಳಿಗಳಿಗೆ ಶಾಸಕರ ನಾಮನಿರ್ದೇಶನದ ಜತೆಗೆ, ಕೆಲವು ಪ್ರಮುಖ ಕಾರ್ಯಕರ್ತರಿಗೂ ಅವಕಾಶ ಸಿಗಲಿದೆ. ಜತೆಗೆ, ರಾಜ್ಯ, ಜಿಲ್ಲೆ ಮತ್ತು ತಾಲೂಕು ಈ 3 ಹಂತದಲ್ಲಿ ‘ಗ್ಯಾರಂಟಿಗಳ ಅನುಷ್ಠಾನ ಸಮಿತಿ’ಗಳಿಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ನೇಮಕ ನಡೆಯಲಿದೆ.ಲೋಕಸಭೆ ಚುನಾವಣೆಗೆ ಅಖಾಡ ಫೈನಲ್ ಆಗುವ ಮುನ್ನ ಪಕ್ಷದ ಶಾಸಕರು ಹಾಗೂ ಪ್ರಮುಖರಿಗೆ ಅಧಿಕಾರ ಹಂಚಿ, ಸ್ಥಾನಮಾನದೊಂದಿಗೆ ಉತ್ಸಾಹ ತುಂಬಲು ನಿರ್ಧರಿಸಲಾಗಿದೆ. ಈಗಾಗಲೇ ಅಂತಿಮಗೊಂಡಿರುವ ಶಾಸಕರ ಪಟ್ಟಿಜತೆಗೆ, ಮುಖಂಡರ ಪಟ್ಟಿಯನ್ನೂ ಆಖೈರುಗೊಳಿಸ ಲಾಗಿದೆ. ಗ್ಯಾರಂಟಿ ಸಮಿತಿಗಳಿಗೂ ಪಟ್ಟಿ ಸಿದ್ದಪಡಿಸಲಾಗುತ್ತಿದೆ. ಈ ವಾರದೊಳಗೆ ಶಾಸಕರ ನಾಮನಿರ್ದೆಶನ ಪ್ರಕ್ರಿಯೆ ನಡೆಯಲಿದ್ದು, ಅದರ ಜತೆಜತೆಗೆ, ಗ್ಯಾರಂಟಿ ಸಮಿತಿಗಳ ನೇಮಕಕ್ಕೂ ಸಿದ್ದತೆಯಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

Read More

ಬೆಂಗಳೂರು : ತುಮಕೂರು ಮುಖ್ಯರಸ್ತೆಯ ಪೀಣ್ಯ ಮೇಲ್ಲೇತುವೆಯಲ್ಲಿ ಜ. 16ರಿಂದ ಮೂರು ದಿನ ತುರ್ತು ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪೀಣ್ಯ ಮೇಲ್ಲೇತುವೆಯ ವಯಾಡಕ್ಷನ ದುರಸ್ತಿ ಕಾಮಗಾರಿ ಕೈಗೊಳ್ಳಲು ವಾಹನ ಸಂಚಾರ ನಿರ್ಬಂಧಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಗರ ಸಂಚಾರ ಪೊಲೀಸರನ್ನು ಕೋರಿದ್ದರು. ಹಾಗಾಗಿ, ಜ. 16ರ ರಾತ್ರಿ 11 ಗಂಟೆಯಿಂದ 19ರ ಬೆಳಗ್ಗೆ 11 ಗಂಟೆವರೆಗೆ ಮೇಲೇತುವೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಎಂಟಿಐ ಜಂಕ್ಷನ್‌ನಿಂದ ನೆಲಮಂಗಲ ಕಡೆಗೆ ಸಾಗುವ ವಾಹನಗಳು: ಪಾರ್ಲೆ-ಜಿ ಟೋಲ್ ತಲುಪಲು ಪ್ರೈಓವರ್ ಪಕ್ಕದ ಎನ್.ಎಚ್.ರಸ್ತೆ ಹಾಗೂ ಸರ್ವೀಸ್ ರಸ್ತೆಯಲ್ಲಿ ಎಸ್‌ಆರ್‌ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, 8ನೇ ಮೈಲಿ ಮುಖಾಂತರ ಮುಂದೆ ಹೋಗಲು ಅವಕಾಶ ಮಾಡಿಕೊಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪರ್ಯಾಯ ಮಾರ್ಗ: ಮೇಲ್ಲೇತುವೆ ಬಂದ್ ಹಿನ್ನೆಲೆಯಲ್ಲಿ ನೆಲಮಂಗಲ ಕಡೆಯಿಂದ ನಗರಕ್ಕೆ ಬರುವ ವಾಹನಗಳು: ಕೆನ್ನಮೆಟಲ್ ವಿಡಿಯಾ ಹತ್ತಿರದ ರಾಷ್ಟ್ರೀಯ ಹೆದ್ದಾರಿ-4ರ ರಸ್ತೆ…

Read More

ಬೆಂಗಳೂರು : ನಾಳೆ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫಘಾನಿಸ್ತಾನ ಮಧ್ಯೆ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೊ ಪ್ರಯಾಣದ ಅವಧಿಯನ್ನು ಅಂದು ರಾತ್ರಿ 11.45ರವರೆಗೆ ವಿಸ್ತರಿಸಲಾಗಿದೆ. ನೇರಳೆ ಹಾಗೂ ಹಸಿರು ಮಾರ್ಗದಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೊ ನಿಲ್ದಾಣಗಳಿಂದ ರೈಲು ಸೇವೆಗಳನ್ನು ರಾತ್ರಿ 11.45 ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಯಾಣಿಕರ ಅನೂಕೂಲಕ್ಕಾಗಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಗಳು ಎಲ್ಲಾ ಮೆಟ್ರೊ ನಿಲ್ದಾಣಗಳಲ್ಲಿ ಜ.17ರ ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಮಾರಾಟಕ್ಕೆ ಲಭ್ಯ. ಈ ಕಾಗದದ ಟಿಕೆಟ್‌ಗಳು ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್ ಮತ್ತು ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣದಿಂದ ಯಾವುದೇ ಇತರ ಮೆಟ್ರೊ ನಿಲ್ದಾಣಕ್ಕೆ ದಿನದ ವಿಸ್ತ್ರತ ಅವಧಿಯಲ್ಲಿ ಒಂದು ಪ್ರಯಾಣಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಿಯಾಯಿತಿ ವ್ಯವಸ್ಥೆ: 50 2. ಪೇಪರ್ ಟಿಕೆಟ್ ಜತೆಗೆ, ಸಾಮಾನ್ಯ ದರದಲ್ಲಿ ಶೇ.5ರ ರಿಯಾಯಿತಿಯೊಂದಿಗೆ ಕ್ಯೂ ಆರ್ ಕೋಡ್ ಟಿಕೆಟ್ಗಳನ್ನು ಪಂದ್ಯದ ದಿನದಂದು ಖರೀದಿಸಿದರೆ ಇಡೀ ದಿನಕ್ಕೆ…

Read More

ಚಾಮರಾಜನಗರ : ಭತ್ತ ಕಟಾವು ಮಾಡುವ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಮೂವರು ಬೈಕ್ ಸಾವಾರರು ಸಾವನ್ನಪ್ಪಿರು ಘಟನೆಗೆ ಸಬಂಧಿಸಿದಂತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊರ್ವ ಬಾಲಕ ಸಾವನ್ನಪ್ಪಿದ್ದಾನೆ. ಇದೀಗ ಸಾವಿನ ಸಂಖ್ಯೆ 3 ರಿಂದ 4ಕ್ಕೆ ಏರಿದಂತಾಗಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಒಂಬತ್ತು ವರ್ಷದ ಬಾಲಕ ಅಭಿ ಸಾವನ್ನಪ್ಪಿದ್ದಾನೆ.ಶವಗಾರದ ಬಳಿ, ಕುಟುಂಬಸ್ಥರ ಆಕರಂದನ ಮುಗಿಲುಮುಟ್ಟಿದೆ. ಭತ್ತ ಕಟಾವು ಮಾಡುವ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಮೂವರು ಬೈಕ್ ಸಾವಾರರು ಸಾವನ್ನಪ್ಪಿರು ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸವಾರರನ್ನು ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಯುವಕರು ಎಂದು ಹೇಳಲಾಗುತ್ತಿದೆ.ಕೊಳ್ಳೇಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತದ ಕುರಿತಂತೆ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮಾತಿನ ಭರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ವಾಗ್ದಾಳಿ ನಡೆಸಿದ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಸ್ವೀಟ್ ನಲ್ಲಿ ಅನಂತಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಟ್ವೀಟ್ ನಲ್ಲಿ ಕಾಂಗ್ರೆಸ್ ಸಂಸದ ಅನಂತಕುಮಾರ್ ಕುಂಭಕರ್ಣನಿದ್ದಂಗೆ,ನಾಲ್ಕುವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದುದಲಿತ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಏಳಿಗೆಯನ್ನು ಸಹಿಸದ ವಿಕೃತ ಮನಸ್ಥಿತಿಯ ಪರಂಪರೆಯನ್ನು ಮುಂದುವರಿಸುವ ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್ ನಂತೆ ಕಾಡುತ್ತವೆ, ಈ ಕ್ಯಾನ್ಸರ್ ಗೆ ಸಂವಿಧಾನದಲ್ಲಿ ಔಷಧವಿದೆ. ಕಾಂಗ್ರೆಸ್ ಪಕ್ಷದ ಬಗ್ಗೆ, ಸಿದ್ದರಾಮಯ್ಯ ಅವರ ಬಗ್ಗೆ ತನ್ನ ಕೊಳಕು ನಾಲಿಗೆ ಹರಿಬಿಡುವ ಮೊದಲು ಸಂಸದನಾಗಿ ತನ್ನ ಸಾಧನೆ ಏನು ಎಂಬುದನ್ನು ಜನತೆಗೆ ತಿಳಿಸಲಿ.ಈ ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ, ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ ಎಂದು ವಾಗ್ದಾಳಿ ನಡೆಸಿದೆ. ಸಂಸದರು ಹೇಳಿದ್ದೇನು?…

Read More

ಹಾವೇರಿ : ಜಿಲ್ಲೆಯ ಹಾನಗಲ್ ನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಾವೇರಿ ಜಿಲ್ಲೆಯ ನರಸೀಪುರ ಎಲ್ಲಿ ಪ್ಯಾಡ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಪ್ರಕರಣದಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ.ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಪ್ರಕರಣದಲ್ಲೂ ಯಾರು ಕಾನೂನನ್ನು ಕೈ ತೆಗೆದುಕೊಂಡಿದ್ದರೊ ಅವರಿಗೆ ಶಿಕ್ಷೆ ನೀಡಲಾಗುತ್ತದೆ. ಯಾರನ್ನು ಕೂಡ ರಕ್ಷಿಸುವ ಪ್ರಶ್ನೆಯೇ ಇಲ್ಲ. ಈಗ ತಾನೇ ಸಂತ್ರಸ್ತ ಕುಟುಂಬಸ್ಥರು ಈಗ ತಾನೇ ಅರ್ಜಿಯನ್ನು ಕೊಟ್ಟಿದ್ದಾರೆ. ಸರ್ಕಾರ ಅರ್ಜಿಯನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತದೆ ಎಂದರು. ಬೊಮ್ಮಾಯಿ ಈ ಪ್ರಕರಣ ಕುರಿತು sit ತನಿಖೆಗೆ ಆಗ್ರಹಿಸಿದ್ದಾರೆ ಎಂದು ಪ್ರಶ್ನೆ ಕೇಳಿದಾಗ ಉತ್ತರಿಸಿದ ಅವರು, ಎಸ್ ಐ ಟಿ ಅಲ್ಲಿ ಇರುವವರು ಪೊಲೀಸ್ ಅಧಿಕಾರಿಗಳೇ ಈಗಿರುವ ಅಧಿಕಾರಿಗಳು ಕೂಡ ಪೊಲೀಸರೇ. ಬೊಮ್ಮಾಯಿ ಅವರು ಹೇಳಿದರು ಅಂತ ಮಾಡುವುದಿಲ್ಲ. ಎಂದು ಅವರಿಗೆ ತಿಳಿಸಿದರು. ಬೆಳಗಾವಿ ಘಟನೆ ಆಗಿರಬಹುದು…

Read More

ದಾವಣಗೆರೆ : ರಸ್ತೆಯಲ್ಲಿ ಹಸು ಅಡ್ಡ ಬಂದಿದ್ದ ಕಾರಣ ಅದನ್ನು ಉಳಿಸಲು ಹೋಗಿ ಬೋಲೇರೋ ವಾಹನ ಒಂದು ಪಾರ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಚಿನ್ನಿಕಟ್ಟಿ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಚಂದನ ಕೆರೆಯ ನಾಗರಾಜ್ (38) ಗೌತಮ್ (17) ಹಾಗೂ ಮಂಜುನಾಥ್(45) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.ದಾವಣಗೆರೆ ಜಿಲ್ಲೆ, ನ್ಯಾಮತಿ ತಾಲೂಕಿನ ಸವಳಂಗ ದಲ್ಲಿ ಬೊಲೆರೋ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಹಸು ಅಡ್ಡ ಬಂದಿದ್ದಕ್ಕೆ ನಿಯಂತ್ರಣ ತಪ್ಪಿ ಬೋಲೇರೋ ವಾಹನ ಪಲ್ಟಿಯಾಗಿದೆ. ಈ ವೇಳೆ ವಾಹನದಲ್ಲಿದ್ದ ನಾಗರಾಜ್ ಗೌತಮ್ ಹಾಗೂ ಮಂಜುನಾಥ್ ದುರಂತ ಸಾವನ್ನು ಕಂಡಿದ್ದಾರೆ.ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಚಂದನಕೆರೆಯಲ್ಲಿ ಅಡಿಕೆ ಕೊಯ್ಲು ಮುಗಿಸಿ ವಾಪಸ್ ಆಗುವಾಗ ಈ ದುರಂತ ಸಂಭವಿಸಿದೆ 6 ಜನರಿಗೆ ಗಂಭೀರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಕುರಿತಂತೆ ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾವೇರಿ : ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಮುಸ್ಲಿಂ ಯುವಕರು ಸಾಮೂಹಿಕ ಅತ್ಯಾಚಾರ ಹಾಗೂ ಅಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಲ್ಲೆಗೆ ಒಳಗಾದ ಮಹಿಳೆಯ ಸಹೋದರ ಸಂಬಂಧಿಸಿದ ಸಂತ್ರಸ್ಥೆಗೆ ಸರ್ಕಾರಿ ನೌಕರಿ ನೀಡಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂತ್ರಸ್ಥೆ ಸಂಬಂಧಿ ಸೈಯದ್ ಬಶೀರ್ ಅವರು, ಹೇಳಿಕೆ ನೀಡಿರುವಂತದ್ದು ಎರಡು ಸ್ಥಳದಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ.ಮೊದಲ ದಿನ ಹೇಳಿಕೆ ನೀಡಿದಂತೆ ನನಗೆ ಒತ್ತಡ ಬಂದಿತ್ತು. ಪ್ರಕರಣದ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆ ಮಾಡಬೇಕು ಸಂತ್ರಸ್ತಗೆ ಸರ್ಕಾರಿ ಉದ್ಯೋಗ ಪರಿಹಾರವನ್ನು ಕೊಡಬೇಕು ಎಂದು ಅಗ್ರಹಿಸಿದ್ದಾರೆ. ಸದ್ಯ ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಪರಿಸ್ಥಿತಿ ಬಹಳ ಕೆಟ್ಟದ್ದಾಗಿದೆ.ಸಂತ್ರಸ್ಥೆಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು. ಯಾವುದೇ ಬೆದರಿಕೆ ಹಾಕಿದರೂ ನಾವು ಅಂಜುವುದಿಲ್ಲ ಎಂದು ಸಂತ್ರಸ್ತ ಸಂಬಂಧಿ ಸೈಯದ್ ಬಶೀರ್ ಹೇಳಿಕೆ ನೀಡಿದರು.

Read More