Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರು ಗ್ರಾಮಾಂತರದಲ್ಲಿ ಹಾಸನ, ತುಮಕೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 75 ಮತ್ತು 48ರ ಟೋಲ್ ದರಗಳು ಏರಿಕೆಯಾಗಿವೆ. ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ 5 ರಿಂದ 10 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಫಾಸ್ಟ್ಟ್ಯಾಗ್ ಇಲ್ಲದ ವಾಹನ ಸವಾರರಿಗೆ ದಂಡದ ಮೊತ್ತವೂ ಹೆಚ್ಚಾಗಿದೆ. ಇದರಿಂದ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ರಾಜ್ಯದ ವಿವಿಧ ಟೋಲ್ಗಳು ಏಪ್ರಿಲ್ನಲ್ಲಿ ದರ ಏರಿಕೆ ಮಾಡಿ ವಾಹನ ಸವಾರರಿಗೆ ಶಾಕ್ ನೀಡಿದ್ದರು, ಈಗ ಬೆಂಗಳೂರಿನಿಂದ ಹಾಸನ, ಮಂಗಳೂರು, ಧರ್ಮಸ್ಥಳ, ತುಮಕೂರು, ಚಿತ್ರದುರ್ಗ ಸೇರಿದಂತೆ ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹೋಗುವ ವಾಹನ ಸವಾರರಿಗೆ ಸೆಪ್ಟೆಂಬರ್ 1 ರಿಂದ ಟೋಲ್ ಶುಲ್ಕದ ಹೆಚ್ಚಳ ಸಂಕಷ್ಟದ ಮೇಲೆ ಬರೆ ಎಳೆದಂತಾಗಿದೆ. ಫಾಸ್ಟ್ಟ್ಯಾಗ್ ಹೊಂದಿರುವ ಲಘುವಾಹನಗಳ ಏಕಮುಖ ಪ್ರಮಾಣ 55ರಿಂದ 60ಕ್ಕೆ ಏರಿಕೆಯಾದರೆ, ವಾಣಿಜ್ಯ ಮತ್ತು ಸರಕು ವಾಹನಗಳ ಏಕಮುಖ ಸಂಚಾರಕ್ಕೆ 200ರಿಂದ 205 ಏರಿಕೆ ಆಗಿದೆ,ಇದೇ ಟೋಲ್ಗಳಲ್ಲಿ ದ್ವಿಮುಖ ಸಂಚಾರಕ್ಕೆ ಹಿಂದಿನದರದ ಮೇಲೆ 10ರೂ ಸಹ ಏರಿಕೆಯಾಗಿದೆ. ಫಾಸ್ಟ್ಟ್ಯಾಗ್…
ಉಡುಪಿ : ರಾಜ್ಯದಲ್ಲಿ ಮತ್ತೊಂದು ಘೋರವಾದ ದುರಂತ ಒಂದು ನಡೆದಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ತಾನು ಹೆತ್ತ ಮಗುವನ್ನೇ ತಾಯಿಯೊಬ್ಬಳು ನೇಣು ಬಿಗಿದು ಕೊಂದ ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಹೇರಂಜೆ ಕ್ರಾಸ್ ಬಳಿ 1 ವರ್ಷ 6 ತಿಂಗಳ ಮಗುವನ್ನು ನೇಣಿಗೆ ಹಾಕಿದ ಸುಷ್ಮಿತಾ (23) ಆತ್ಮಹತ್ಯೆ ಮಾಡಿಕೊಂಡ ತಾಯಿ ಎಂದು ತಿಳಿದು ಬಂದಿದೆ.ನನ್ನ ಸಾವಿಗೆ ನಾನೇ ಕಾರಣ ಎಂಬುದಾಗಿ ಮರಣ ಪತ್ರ ಬರೆದಿಟ್ಟು ಸುಷ್ಮಿತಾ ತನ್ನ ಮಗು ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಕೂಡ ತಮ್ಮ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಹೆಚ್ಚುವರಿ ಮಾಹಿತಿ ಕಲೆ ಹಾಕಿದರು.
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಿಸಿ, ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ರೌಡಿಶೀಟರ್ಗಳ ಸಹಿತ ಆರು ಜನ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಅಲಿಯಾಸ್ ಅಪ್ಪಿ, ಸೀನಾ ಅಲಿಯಾಸ್ ಬಾಂಬೆ ಸೀನಾ, ಲೋಕೇಶ್ ಕುಮಾರ್, ನವೀನ್ ಕುಮಾರ್, ಸೋಮಯ್ಯ ಮತ್ತು ಯುಕೇಶ್ ಬಂಧಿತ ಆರೋಪಿಗಳು. ಬಂಧಿತರು ಆಗಸ್ಟ್ 26ರಂದು ರಾಜಾಜಿನಗರದ ಮೋದಿ ಆಸ್ಪತ್ರೆ ಸರ್ಕಲ್ನಿಂದ ರಿಯಲ್ ಎಸ್ಟೇಟ್ ಉದ್ಯಮಿ ಹೆಚ್.ವಿ.ಮನೋಜ್ ಕುಮಾರ್ (25) ಅವರನ್ನು ಅಪಹರಿಸಿ ಸುಲಿಗೆ ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮನಗರ : ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಎನ್ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಹೊಸ ಬಾಂಬ್ ಒಂದು ಸಿಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಣ್ಣರ ಬ್ರೈನ್ ಮ್ಯಾಪಿಂಗ್ ಆದರೆ ಎಲ್ಲವೂ ಗೊತ್ತಾಗುತ್ತದೆ. ಯಾರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಯಲಿದೆ ನಮ್ಮ ಸರ್ಕಾರ ಇದೆ ಎಂದು ಪಕ್ಷದಲ್ಲಿ ಇದ್ದಾರೆ. ಇಲ್ಲದಿದ್ದರೆ ಎಷ್ಟೊತ್ತಿಗೆ ಅವರು ಪಕ್ಷ ಬಿಟ್ಟು ಹೋಗುತ್ತಿದ್ದರು . ಈಗಾಗಲೇ ರಾಜಣ್ಣ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದಾರೆ ಬೇರೆ ಬೇರೆ ನಾಯಕರಾದ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ ಎಂದರು. ಕೆಎನ್ ರಾಜಣ್ಣ ತಮ್ಮ ಮಾತಿನಿಂದಲೇ ಕೆಟ್ಟು ಹೋದರು ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಎಂಬ ಮಾತಿದೆ. ಇದರಲ್ಲಿ ನಮ್ಮ ನಾಯಕರ ಷಡ್ಯಂತರ ಇಲ್ಲವೇ ಇಲ್ಲ. ಪಕ್ಷದ ಮೇಲೆ ಗೂಬೆ ಕೂರಿಸಲು ಪಿತೂರಿ ನಡೆಯುತ್ತಿದೆ ನಡೆಸಲಿ. ಡೆಲ್ಲಿ ಸಮಾವೇಶ ಮಾಡಲಿ ನಾವು ಹಿಡಿದುಕೊಳ್ಳಲು ಆಗುತ್ತಾ ಎಂದು ಬಾಲಕೃಷ್ಣ ಹೇಳಿಕೆ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಲೆ ಆರೋಪಿ ಪವಿತ್ರ ಗೌಡಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ನಿಂದ ತೀರ್ಪು ಬಂದ ಬಳಿಕ ಪವಿತ್ರ ಗೌಡ ಬಿಲ್ ಅರ್ಜಿ ಸಲ್ಲಿಸಿದರು. ಇಂದು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ಪವಿತ್ರ ಗೌಡ ಸಲ್ಲಿಸಿದ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ ಈ ಮೂಲಕ ಪವಿತ್ರ ಗೌಡಗೆ ಜೈಲೇ ಗತಿ ಎಂಬಂತಾಗಿದೆ.
ಬೆಂಗಳೂರು : ವಾಲ್ಮೀಕಿ ಹಗರಣ ಮುಡಾ ಹಗರಣದ ಬಳಿಕ ಇದೀಗ ಭೋವಿ ಅಭಿವೃದ್ಧಿ ನಿಗಮದಲ್ಲೂ ಕೂಡ ಬೃಹತ್ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು ಈ ನೆಲೆಯಲ್ಲಿ ಬೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಿಎಂ ಕಚೇರಿಯಿಂದ ಮಾಹಿತಿ ತಿಳಿದು ಬಂದಿದೆ. ಹೌದು ಭೋವಿ ನಿಗಮದ ಅಧ್ಯಕ್ಷ ರಾಜೀನಾಮೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ರವಿಕುಮಾರ್ ಗೆ ರಾಜೀನಾಮೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ ಲಂಚದ ಆರೋಪ ಬಯಲಾಗುತ್ತಿದ್ದಂತೆ ರಾಜೀನಾಮೆಗೆ ಸೂಚನೆ ನೀಡಿದ್ದಾರೆ ಹಾಗಾಗಿ ರವಿಕುಮಾರ್ ಶೀಘ್ರದಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಭಾರಿ ಮಳೆ ಸುರಿದಿದ್ದು ರಾತ್ರಿ ಘೋರ ದುರಂತ ಒಂದು ಸಂಭವಿಸಿದೆ. ಈ ವೇಳೆ ಜೋರಾದ ಮಳೆ ಸುರಿದಿದ್ದು, ನಿರ್ಮಾಣ ಹಂತದ ಕಟ್ಟಡ ಪಕ್ಕದಲ್ಲಿದ್ದ ಮಣ್ಣು ಕುಸಿದು ಆಂಧ್ರಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದ ಆದರೆ ಇದೀಗ ಮತ್ತೊಂದು ಕಾರ್ಮಿಕ ದುರಂತದಲ್ಲಿ ಸಾವನಪ್ಪಿದ್ದಾನೆ. ಮಣ್ಣಿನಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಇದೀಗ ಎರಡಕ್ಕೆ ಏರಿದೆ ಜೆ.ಶಿವ ಹಾಗೂ ಮಧುಸೂದನ್ ರೆಡ್ಡಿ ಮೃತಕಾರ್ಮಿಕರು ಎಂದು ತಿಳಿದುಬಂದಿದೆ. ಇಬ್ಬರು ಆಂಧ್ರಪ್ರದೇಶದ ಮೂಲದ ಕಟ್ಟಡ ಕಾರ್ಮಿಕರು ಎಂದು ತಿಳಿದುಬಂದಿದೆ ಸದ್ಯ ಮೃತ ದೇಹ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.
ಬೆಂಗಳೂರು : ಗೃಹ ಸಚಿವ ಪರಮೇಶ್ವರ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಇಂದು ಭೇಟಿಯಾದರು. ಜಿ ಪರಮೇಶ್ವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಸದಾಶಿವನಾಗರದಲ್ಲಿರುವ ಪರಮೇಶ್ವರ್ ನಿವಾಸದಲ್ಲಿ ಎಸ್ಐಟಿ ಮುಖ್ಯಸ್ಥ ಆಗಿರುವ ಪ್ರಣಬ್ ಮೋಹಂತಿ ಧರ್ಮಸ್ಥಳ ಪ್ರಕರಣದ ಕುರಿತು ಚರ್ಚಿಸಿದರು. ಬೆಂಗಳೂರಿನ ಸದಾಶಿವ ನಗರ ನಿವಾಸಕ್ಕೆ ಆಗಮಿಸಿದ ಎಸ್ ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ, ಗೃಹ ಸಚಿವ ಡಾ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಧರ್ಮಸ್ಥಳ ಪ್ರಕರಣದಲ್ಲಿ ಈವರೆಗಿನ ತನಿಖಾ ಬೆಳವಣಿಗೆ, ಎಸ್ ಐಟಿ ಕೈಗೊಳ್ಳಲಿರುವ ಮುಂದಿನ ನಡೆ ವಿಚಾರವಾಗಿ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.
ಮೈಸೂರು : ಬಿಜೆಪಿ ನಾಯಕರಿಂದ ಧರ್ಮಸ್ಥಳ ಯಾತ್ರೆ ವಿಚಾರವಾಗಿ ಬಿಜೆಪಿ ಅವರು ಮೊದಲೇ ಏಕೆ ಧರ್ಮಸ್ಥಳ ಯಾತ್ರೆ ಮಾಡಲಿಲ್ಲ? ವೀರೇಂದ್ರ ಹೆಗಡೆಯವರೇ ಎಸ್ಐಟಿ ತನಿಖೆಯನ್ನು ಸ್ವಾಗತ ಮಾಡಿದ್ದಾರೆ. ಸತ್ಯ ಹೊರಗೆ ಬರಬೇಕು ಅಂತ ವೀರೇಂದ್ರ ಹೆಗ್ಗಡೆ ಅವರೇ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುತ್ತಿಲ್ಲ ಇಷ್ಟೆಲ್ಲ ಮಾಡಬೇಕಾದರೆ ದುಡ್ಡು ಎಲ್ಲಿಂದ ಬಂದಿದೆ? ಹೋರಾಟ ಮಾಡಲು ಬಿಜೆಪಿ ಅವರಿಗೆ ಹೊರದೇಶದಿಂದ ದುಡ್ಡು ಬಂದಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದರು. ಸೌಜನ್ಯ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವ ವಿಚಾರವಾಗಿ ಸಿಬಿಐ ಯಾರ ಕೈ ಕೆಳಗೆ ಇದೆ? ಸುಪ್ರೀಂ ಕೋರ್ಟ್ ಮೊರೆ ಹೋಗುವುದು ಸೌಜನ್ಯ ಕುಟುಂಬಕ್ಕೆ ಬಿಟ್ಟಿದ್ದು. ಒಂದು ಕಡೆ ಬಿಜೆಪಿಯವರು ವೀರೇಂದ್ರ ಹೆಗ್ಗಡೆಗೆ ಜೈಕಾರ ಅಂತಾರೆ. ಮತ್ತೊಂದು ಕಡೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ವಿಪಕ್ಷದವರು ಹೇಳುವ ವಿಚಾರ ಎಲ್ಲವೂ ಸತ್ಯನ ಅಸೆಂಬ್ಲಿಯಲ್ಲಿ ಆರ್ ಅಶೋಕ್, ಸುನಿಲ್ ಕುಮಾರ್ ಇಬ್ಬರು ಚರ್ಚೆ ಮಾಡಿದರು. ಸೌಜನ್ಯ ಪ್ರಕರಣದ ಬಗ್ಗೆ…
ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ, ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ ಸುವರ್ಣ ರಥದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಮನುಷ್ಯರಿಗೆ ಸಂಪತ್ತನ್ನು ದಯಪಾಲಿಸುತ್ತಾರೆ ಮತ್ತು…













