Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 23ನೇ ಕಂತಿನ ಹಣ ಇನ್ನು ಒಂದು ವಾರದಲ್ಲಿ ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ಇನ್ನೂ ಒಂದು ವಾರದಲ್ಲಿ ಗೃಹಲಕ್ಷ್ಮಿಯ 23ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ರಾಜ್ಯ ಮಟ್ಟದ ಸಮಾವೇಶದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗೃಹಲಕ್ಷ್ಮಿ ಬ್ಯಾಂಕ್ ಯೋಜನೆಯು ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಪ್ರಾರಂಭಿಸಲಾಗುತ್ತಿದ್ದು, ಪ್ರತಿಯೊಬ್ಬ ಮಹಿಳೆಯು ಒಂದು ಸಾವಿರ ರೂ.ಗಳಿಂದ ಖಾತೆಯನ್ನು ಪ್ರಾರಂಭಿಸಿ ಪ್ರತಿ ತಿಂಗಳು 200 ರೂಗಳನ್ನು ಉಳಿತಾಯ ಮಾಡಿದರೆ, ಆರು ತಿಂಗಳ ನಂತರ ಮಹಿಳೆಯು 30 ಸಾವಿರ…
ಧಾರವಾಡ : ಧಾರವಾಡದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕ ಮಲ್ಲಿಗವಾಡ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ತಂದೆ ಇಬ್ಬರು ಮಕ್ಕಳ ಜೊತೆಗೆ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ವಿಠಲ ರಾವ್ (85) ಪುತ್ರನಾರಾಯಣ ಶಿಂಧೆ (42) ಮಕ್ಕಳಾದ ಶಿವರಾಜ್ (12) ಹಾಗೂ ಶ್ರೀನಿಧಿ (10) ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದುಬಂದಿದೆ. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಘಟನೆ ಕುರಿತು ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ನಡೆ ಇದೀಗ ತೀವ್ರ ಕುತೂಹಲ ಕೆರಳಿಸಿದೆ. ಏಕೆಂದರೆ ದಿಢೀರ್ ಬೆಳವಣಿಗೆಯೊಂದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರದತ್ತ ಹೊರಟಿದ್ದಾರೆ.ಇಬ್ಬರು ಕಾಂಗ್ರೆಸ್ ಶಾಸಕರು ಜೈಲಿನಲ್ಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಹೌದು ಧಾರವಾಡದ ಶಾಸಕ ವಿನಯ್ ಕುಲಕರ್ಣಿ ಮತ್ತು ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ (ಅವರನ್ನು ಭೇಟಿ ಮಾಡಲು ಡಿಕೆ ಶಿವಕುಮಾರ್ ಜೈಲಿಗೆ ಭೇಟಿಯಾಗಲು ಹೊರಟ್ಟಿದ್ದಾರೆ.ಈಗಾಗಲೇ ಡಿಕೆಶಿ ಬಣದ ಕೆಲ ಶಾಸಕರು ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಬಣದ ಶಾಸಕರು ಬೆಂಗಳೂರಿನಲ್ಲಿ ಡಿನ್ನರ್ ಸಭೆ ನಡೆಸಿದ್ದಾರೆ. ಈ ಹಿಂದೆಯೇ ನವೆಂಬರ್ ಕ್ರಾಂತಿ ಆಗಲಿದೆ ಎಂಬ ಸುದ್ದಿ ಬಂದಿತ್ತು. ಆದರೆ ಈಗ ನವೆಂಬರ್ ಕ್ರಾಂತಿ ಆರಂಭವಾಗಿದ್ದು ನಂಬರ್ ಕ್ರಾಂತಿ ಆಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಒಂದು ವೇಳೆ ಅಧಿಕಾರ ಹಂಚಿಕೆ ವಿಚಾರ ಬಂದರೆ ಎರಡು ಬಣದಲ್ಲಿ ಎಷ್ಟು ಜನ ಶಾಸಕರಿದ್ದಾರೆ ಎನ್ನುವುದು ಮುಖ್ಯವಾಗುತ್ತದೆ. ಈ…
ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಸಮೀಪ ಚಿರತೆಯೊಂದು ಪ್ರತ್ಯಕ್ಷ ಆಗಿದೆ. ಇದರಿಂದ ಸ್ಥಳೀಯ ಜನರಲ್ಲಿ ಚಿರತೆ ಪ್ರತ್ಯಕ್ಷ ಆಗಿರುವ ಕಾರಣ ಆತಂಕ ಹೆಚ್ಚಾಗಿದೆ. ಚಿಕ್ಕರಾಂಪುರದಿಂದ ಅಂಜನಹಳ್ಳಿಗೆ ಹೋಗುವ ಮಾರ್ಗ ಮಧ್ಯದ ಬೆಟ್ಟದಲ್ಲಿ ಚಿರತೆ ಕಂಡುಬಂದಿದೆ. “ಕಳೆದ 15 ದಿನದಲ್ಲಿ ಮೂರನೇ ಬಾರಿಗೆ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಅಂಜನಾದ್ರಿಯಲ್ಲಿ ಡಿಸಂಬರ್ 2 ಮತ್ತು 3ರಂದು ಹನುಮ ಮಾಲೆ ನಡೆಯಲಿದೆ. ಇದಕ್ಕಾಗಿ ರಾಜ್ಯದ ನಾನಾ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇದರ ತಯಾರಿ ಮಧ್ಯೆ ಹನುಮ ಮಾಲೆ ನಡೆಯಲಿರುವ ಜಾಗದ ಸನಿಹದಲ್ಲಿ ಅಂಜನಾದ್ರಿ ಸಮೀಪ ಚಿರತೆ ಕಾಣಿಸಿಕೊಂಡಿದೆ. ಅಂಜನಾದ್ರಿ ಬೆಟ್ಟದಲ್ಲಿ ನಡೆಯುವ ಹನುಮ ಮಾಲೆ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ ಹಗಲು – ರಾತ್ರಿ ದೇವರ ದರ್ಶನ ಪಡೆಯಲಿದ್ದಾರೆ. ಹಾಗಾಗಿ, ಕೂಡಲೇ ಅರಣ್ಯ ಇಲಾಖೆ ಬೋನ್ ಇಟ್ಟು ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮೈಸೂರು : ಕಳೆದ ಎರಡು ದಿನಗಳ ಹಿಂದೆ ಅಷ್ಟೇ ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಬಜೆಟ್ ಸಹ ನಾನೇ ಮಾಡಿಸುತ್ತೇನೆ ಎಂದು ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ಕೂಡ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಮುಂದಿನ ಬಜೆಟ್ ಸಹ ನಾನೇ ಮಾಡಿಸುತ್ತೇನೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಎಂ ಆಗಿ ನಾನೇ ಮುಂದುವರಿಯುತ್ತೇನೆ . ನಾನೇ ಬಜೆಟ್ ಮಂಡಿಸುತ್ತೇನೆ. ನಾಯಕತ್ವ ಬದಲಾವಣೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾಯಕತ್ವದ ಬದಲಾವಣೆ ಮತ್ತು ಸಂಪುಟ ಪುನಾರಚನೆಯ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತಾರೆ ಎಂದು ತಿಳಿಸಿದರು. ಅಂತಿಮವಾಗಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಅದಕ್ಕೆ ನಾವೆಲ್ಲ ಬದ್ದರಾಗಿದ್ದೇವೆ. ಹೈಕಮಾಂಡ್ ತೀರ್ಮಾನವನ್ನು ನಾನು ಕೇಳಬೇಕು. ಸಚಿವ ಚೆಲುವರಾಯಸ್ವಾಮಿ ದೆಹಲಿಗೆ ಹೋಗಿದ್ದಾರೋ ಇಲ್ಲವೋ ನನಗೆ ಗೊತ್ತಿಲ್ಲ ಅವರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ನಾನು ಮಾತನಾಡಿದ್ದೇನೆ ಕೇಂದ್ರ ಸಚಿವರ ಜೊತೆಗೆ ಭೇಟಿಗೆ ಹೋಗಿರುವ ಬಗ್ಗೆ ನನಗೆ ಮಾಹಿತಿ ನೀಡಿದ್ದಾರೆ ಎಂದು…
ಮೈಸೂರು : ಮೆಕ್ಕೆಜೋಳ ವಿಚಾರವಾಗಿ ಇಂದು ಸಭೆ ನಡೆಸಿದ್ದೇನೆ. ಕರ್ನಾಟಕ ರಾಜ್ಯದಲ್ಲಿ 55 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆಯಲಾಗಿದೆ. ಕೇಂದ್ರ ಸರ್ಕಾರ ರೈತರಿಂದ ಮೆಕ್ಕೆಜೋಳ ಖರೀದಿಸಬೇಕಾಗಿತ್ತು ಎಂದು ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಮೆಕ್ಕೆಜೋಳ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತರಿಂದ ಮೆಕ್ಕೆಜೋಳ ಖರೀದಿಸಬೇಕಾಗಿತ್ತು ಎಂ ಎಸ್ ಪಿ ದರ ನಿಗದಿ ಮಾಡಿ ಕೇಂದ್ರ ಸರ್ಕಾರ ಖರೀದಿ ಮಾಡಬೇಕಾಗಿತ್ತು. ಕೇಂದ್ರ ಸರ್ಕಾರ 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಆಮದು ಮಾಡಿಕೊಳ್ಳುತ್ತಿದೆ. ನಮ್ಮ ರಾಜ್ಯದಲ್ಲೇ 5 ಲಕ್ಷ ಮೆಟ್ರಿಟನ್ ಬೆಳೆಯಲಾಗಿದೆ ಹಾಗಾಗಿ ಕೇಂದ್ರ ಸರ್ಕಾರ ರೈತರಿಂದ ಮೆಕ್ಕೆಜೋಳ ಖರೀದಿಸಬೇಕಾಗಿತ್ತು. ಡಿಸ್ಟಲರಿ ರೈತರಿಂದ ಮೆಕ್ಕೆಜೋಳ ಖರೀದಿ ಮಾಡಬೇಕಾಗಿತ್ತು ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಸಿಗುತ್ತಿರುವುದರಿಂದ ಖರೀದಿಸಬೇಕಾಗಿತ್ತು. ಡಿಸ್ಟಲರಿಗಳು ಮುಕ್ತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಖರೀದಿಸಿದೆ ಎಂದು ತಿಳಿಸಿದರು.
ಬೆಂಗಳೂರು : ಕಾಂಗ್ರೆಸ್ ನಲ್ಲಿ ಯಾವುದೇ ಕ್ರಾಂತಿ ಆಗಲ್ಲ ಬದಲಾವಣೆ ಆಗಬೇಕಿದ್ದರೆ ವರಿಷ್ಠರು ತೀರ್ಮಾನ ಕೈಗೊಳ್ಳಬೇಕು ಬದಲಾವಣೆ ಆಗಬೇಕಾದರೆ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು ಐದು ವರ್ಷ ಮುಖ್ಯಮಂತ್ರಿ ಅಂತ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ನಾಯಕತ್ವ ಬದಲಾವಣೆ ಚರ್ಚೆ ಸಧ್ಯ ಪ್ರಸ್ತುತ ಮತ್ತು ಅನಗತ್ಯವಾಗಿದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ತಿಳಿಸಿದರು. ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದು ನಾವು ನಂಬಿದ್ದೇವೆ. ಸಿದ್ದರಾಮಯ್ಯನಾಯಕತ್ವದಲ್ಲಿ ಜನಪರ ಕಾರ್ಯಕ್ರಮ ಕೊಡುತ್ತೇವೆ. ವ್ಯಕ್ತಿಗತವಾಗಿ ಯಾರೋ ಒಬ್ಬರು ಕ್ರಾಂತಿ ಅಂತ ಮಾತನಾಡುತ್ತಾರೆ ಇದೇನು ತಮಾಷೆ ಏನ್ರೀ? ಮುಂದಿನ ಬಜೆಟ್ ಗೆ ಸಿದ್ದರಾಮಯ್ಯ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದರು.
ಚಿಕ್ಕಬಳ್ಳಾಪುರ : ವಿಚ್ಛೇದಿತ ಮಹಿಳೆಯರನ್ನು ಮರುಮದುವೆಯಾಗುವುದಾಗಿ ವಂಚಿಸಿದ್ದ ಪ್ರಕರಣದ ಆರೋಪಿ ಸಿ.ಎಂ. ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಕನ್ನಂಪಲ್ಲಿ ಮನೆಯಲ್ಲಿ ನೇಣು ಬಿಗಿದು ಗಿರೀಶ್ ಸೂಸೈಡ್ ಮಾಡಿಕೊಂಡಿದ್ದು, ವಂಚನೆ ಪ್ರಕರಣ ಸಂಬಂಧ ನಾಲ್ವರು ಸಂತ್ರಸ್ತೆಯರು ಈತನ ವಿರುದ್ಧ ದೂರು ನೀಡಿದ್ದರು.ದೂರು ದಾಖಲಾಗುತ್ತಿದ್ದಂತೆ ಭಯದಿಂದ ಗಿರೀಶ್ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಹಿನ್ನೆಲೆ? ಸಿ.ಎಂ.ಗಿರೀಶ್ ಅಲಿಯಾಸ್ ಸಾಯಿಸುದೀಪ್ ಎನ್ನುವ ಈತ ಒಬ್ಬಂಟಿ ವಿವಾಹಿತ ಮಹಿಳೆಯರನ್ನೇ ಟಾರ್ಗೆಟ್ ಮಾಡ್ತಿದ್ದ. ಫೇಸ್ಬುಕ್ ಮೂಲಕ ಪರಿಚಯ ಮಾಡಿಕೊಂಡು, ಮರುಮದುವೆ ಹೆಸರಲ್ಲಿ ಅವರನ್ನು ಪುಸಲಾಯಿಸುತ್ತಿದ್ದ. ಲೈಂಗಿಕವಾಗಿ ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ವಿಡಿಯೋ ಮತ್ತು ಆಡಿಯೋಗಳನ್ನು ಇಟ್ಟುಕೊಂಡಿದ್ದ. ನಂದಗುಡಿ, ಬೆಂಗಳೂರು, ಚಿಕ್ಕಬಳ್ಳಾಪುರ, ಬಂಗಾರಪೇಟೆ ಸೇರಿದಂತೆ 5ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿ, ಅವರಿಂದ ಲಕ್ಷಾಂತರ ರೂ. ಹಣ ಪಡೆದುಕೊಂಡಿದ್ದ ಎಂದು ಆರೋಪಿಸಲಾಗಿತ್ತು. ಮರುಮದುವೆ ಮಾಡಿಕೊಳ್ಳೊದಾಗಿ ನಂಬಿಸಿ ಬೆಂಗಳೂರಿನ ಮಹಿಳೆಯಿಂದ 25 ಲಕ್ಷ ಹಣ ಪಡೆದು ವಂಚನೆ, ಚಿಕ್ಕಬಳ್ಳಾಪುರ ಮೂಲದ ಸರ್ಕಾರಿ ಉದ್ಯೋಗಿ ಮಹಿಳೆ ಬಳಿ 5 ಲಕ್ಷ…
ದಾವಣಗೆರೆ : ದಾವಣಗೆರೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ. ಮೃತ ಯುವತಿಯನ್ನು ಪ್ರಿಯಾ (21) ಹಾಗೂ ಗಾಯಗೊಂಡ ಯುವಕನನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ಇಬ್ಬರು ದಾವಣಗೆರೆ ನಿವಾಸಿಗಳಾಗಿದ್ದು, ಕಾಲೇಜು ಮುಗಿಸಿ ಡಾಬಾವೊಂದಕ್ಕೆ ಸ್ನೇಹಿತರ ಜೊತೆ ಊಟಕ್ಕೆ ಹೋಗಿದ್ದರು. ಊಟ ಮುಗಿಸಿ ವಾಪಸ್ಸಾಗುವ ವೇಳೆ ಈ ಅಪಘಾತ ನಡೆದಿದೆ. ಪ್ರಿಯಾ ಹಾಗೂ ಯೋಗೇಶ್ ನಡುವೆ ಡಾಬಾದಲ್ಲೇ ಗಲಾಟೆ ನಡೆದಿತ್ತು. ಇನ್ನೂ ಇಬ್ಬರ ಜಗಳ ಸಿಸಿ ಕ್ಯಾಮೆರಾದಲ್ಲಿ ಸಹ ಸೆರೆಯಾಗಿದೆ. ಜಗಳವಾಡಿ ಪ್ರಿಯಾ ಹಾಗೂ ಆಕೆಯ ಸ್ನೇಹಿತೆ ಒಂದು ಬೈಕ್ನಲ್ಲಿ ಹೋಗುತ್ತಿದ್ದರು. ಈ ವೇಳೆ, ಬುಲೆಟ್ ಬೈಕ್ನಲ್ಲಿ ಯುವತಿಯರನ್ನು ಹಿಂಬಾಲಿಸಿ ಹೊರಟ ಯೋಗೇಶ್, ನಡು ರಸ್ತೆಯಲ್ಲಿ ನಿಲ್ಲಿಸಿ ಪ್ರಿಯಾಳನ್ನು ತನ್ನ ಬೈಕ್ನಲ್ಲಿ ಕೂರಿಸಿಕೊಂಡು ಬಂದಿದ್ದ. ಆಗಲೂ ಜಗಳವಾಡುತ್ತಾ ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದು, ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಹಾವೇರಿ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ಒಂದು ನಡೆದಿದ್ದು, ಈ ಹಿಂದೆ ಬೆಂಗಳೂರು ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪತ್ನಿಯ ಕಿರುಕುಳಕ್ಕೆ ಬೇಸತ್ತು ಗಂಡಂದಿರು ವಿಡಿಯೋ ಮಾಡಿಟ್ಟು ಹಾಗೂ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದವು. ಇದೀಗ ಹಾವೇರಿಯಲ್ಲಿ ಕೂಡ ಪತ್ನಿ ಹಾಗೂ ಅತ್ತೆ ಮಾವನ ಕಿರುಕುಳಕ್ಕೆ ಬಯಸತ್ತು ಪತಿ ನೇಣು ಬಗೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಹೌದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ವರಹ ಗ್ರಾಮದಲ್ಲಿ ಮೂಲತಃ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ನಿವಾಸಿಯಾಗಿರುವ ಮಂಜುನಾಥ್ ಚಿಲ್ಲೋಜಿ (26) ಆತ್ಮಹತ್ಯೆ ಮಾಡಿಕೊಂಡ ಪತಿ ಎಂದು ತಿಳಿದುಬಂದಿದೆ. ಪತ್ನಿ, ಅತ್ತೆ-ಮಾವ ಮತ್ತು ಅವರ ಮಾವ ಹೊನ್ನಸಿದ್ದಪ್ಪ ಹಾಗೂ ರಾಜಪ್ಪ ಕಿರುಕುಳಕ್ಕೆ ಬೇಸತ್ತು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಮಂಜುನಾಥ್ ವೀಡಿಯೋ ಮಾಡಿಟ್ಟು ಕಿರುಕುಳದ ಬಗ್ಗೆ ವಿವರಿಸಿದ್ದಾರೆ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮಾನಸಿಕವಾಗಿ ಬಹಳ ಹಿಂಸೆ ನೀಡಿದ್ದಾರೆ. ನನ್ನ…














