Author: kannadanewsnow05

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಈ ಪ್ರಕರಣವನ್ನು ಪೊಲೀಸರು ಮುಖ್ಯ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯುವತಿಯನ್ನು ಥಳಿಸಿ ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ. ಪೊಲೀಸರು ಪ್ರಕರಣ ಮುಚ್ಚುಡುವ ಪ್ರಯತ್ನ ಮಾಡುತ್ತಿದ್ದಾರೆ.ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆರೋಪಿಸಿದರು. ನಾನು ಕರೆ ಮಾಡಿ ಕೇಳಿದರೂ ಕೂಡ ಮೊಂಡುವಾದ ಮಾಡುತ್ತಾರೆ. ನನ್ನ ಜೊತೆಗೆ ಪೊಲೀಸರು ಮೊಂಡುವದ ಮಾಡಿದರು ಎಂದು ಆರೋಪಿಸಿದರು. ಗ್ಯಾಂಗ್ ರೇಪ್ ಆದರು ಎಫ್ಐಆರ್ ದಾಖಲು ಮಾಡಿಲ್ಲ ಬೇರೆ ಕೋಮಿನವರು ಆಗಿದ್ರೆ ಒಳಗೆ ಹಾಕಿ ವಿಚಾರಣೆ ನಡೆಸುತ್ತಿದ್ದರು.ಮೊದಲು ಒಳಗೆ ಹಾಕಿ ನಂತರ ವಿಚಾರಣೆ ಮಾಡುತ್ತಿದ್ದರು ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಅಲ್ಪಸಂಖ್ಯಾತ ಹೆಣ್ಣು ಮಗಳ ಮೇಲೆ ಅತ್ಯಾಚಾರ ಆಗಿದೆ ಅಲ್ಪಸಂಖ್ಯಾತರ ರಕ್ಷಕರೆಂದು ಬಿಂಬಿಸುವವರು ರಕ್ಷಿಸಿಲ್ಲ ನಿಮ್ಮ ಕೆಲಸ ಮಾಡುವವರಿಗೆ ಮಾತ್ರ…

Read More

ಬೆಳಗಾವಿ : ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪಂಚನಾಮೆ ನಡೆಸಿದರು. ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪಂಚನಾಮೆ ನಡೆಸಿದರು. ಬಳಿಕ ಸತ್ತಿರುವ ನವಿಲುಗಳನ್ನು ತೆಗೆದುಕೊಂಡು ಹೋದರು. ಈ ಒಂದು ಗ್ರಾಮದಲ್ಲಿ ಕೃಷ್ಣಾ ನದಿಗೆ ಹೊಂದಿಕೊಂಡಿರುವಂತಹ ಗ್ರಾಮವಾಗಿದ್ದು ಇದರಲ್ಲಿ ಸಾಕಷ್ಟು ನವಿಲುಗಳು ವಾಸ ಮಾಡುತ್ತವೆ. ಅಲ್ಲದೆ ಬೆಳೆಗಳು ಹೆಚ್ಚಾಗಿ ಬೆಳೆಯುವುದರಿಂದ ಇದನ್ನು ಆಗದೇ ಇರುವುದರಿಂದ ದುಷ್ಕರ್ಮಿಗಳು ವಿಷ ಹಾಕಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.ನವಿಲುಗಳಿಗೆ ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನವಿಲುಗಳ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೆಳಗಾವಿಗೆ ರವಾನಿಸಲಾಗಿದೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ರಾಮನಗರ : ರಾಮಮಂದಿರ ಪೂರ್ಣ ಪ್ರಮಾಣದಲ್ಲಿ ನಿರ್ಮಾಣ ಆಗಿಲ್ಲ ಆದರೂ ರಾಜಕೀಯಕ್ಕೋಸ್ಕರ ಉದ್ಘಾಟನೆ ಮಾಡುತ್ತಿದ್ದಾರೆ ಇಂತಹ ರಾಜಕೀಯ ಕಾರ್ಯಕ್ರಮಕ್ಕೆ ನಾವು ಹೋಗಬೇಕಾ? ಎಂದು ರಾಮನಗರ ಜಿಲ್ಲೆ, ಮಾಗಡಿಯಲ್ಲಿ ಶಾಸಕ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅವರು ಮನೆ ಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ನಾವು ಗೃಹಲಕ್ಷ್ಮಿ ಯೋಜನೆ ಅಡಿ 2,000 ಕೊಡುತ್ತಿದ್ದೇವೆ.ಯಾರಿಗೆ ಮತ ಹಾಕಬೇಕೆಂದು ಜನ ತೀರ್ಮಾನಿಸುತ್ತಾರೆ. ಹೀಗಾಗಿ ಜನರು ಮತವನ್ನು ಮಂತ್ರಾಕ್ಷತೆಗಾ ಅಥವಾ 2000 ಕೊಟ್ಟವರೇಗಾ ಯಾರಿಗೆ ಮತ ಹಾಕಬೇಕೆಂದು ಜನರು ಈ ಕುರಿತು ತೀರ್ಮಾನಿಸುತ್ತಾರೆ.ಮಾಗಡಿಯಲ್ಲಿ ಕೈ ಶಾಸಕ ಹೆಚ್ಚಿಸಿ ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ರಾಮಮಂದಿರ ಕಟ್ಟಲು ನಾವು ಜಾಗ ಹುಡುಕುತ್ತಿದ್ದೇವೆ ಒಂದೆರಡು ಅಲ್ಲ 20 ರಿಂದ 25 ಎಕರೆ ಜಾಗದಲ್ಲಿ ಮಂದಿರ ಕಟ್ಟುತ್ತೇವೆ ರಾಮಮಂದಿರ ಅದ್ದೂರಿಯಾಗಿ ನಿರ್ವಹಣಾ ಮಾಡುತ್ತೇವೆ. ರಾಮ ಮಂದಿರ ಬಿಜೆಪಿ ಕಾಂಗ್ರೆಸ್ ಸ್ವತ್ತಲ್ಲ. ರಾಮಮಂದಿರ ಈ ಸಮಾಜದ ಸ್ವತ್ತು ಎಂದು ತಿಳಿಸಿದರು. ನಾವು ರಾಮಮಂದಿರ ಬಗ್ಗೆ ಚರ್ಚೆ ಮಾಡಲ್ಲ. ಮಂದಿರ ಕಟ್ಟಲು ಪ್ರಾಮಾಣಿಕವಾಗಿ…

Read More

ರಾಮನಗರ : ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿಸಿ ಎಂದು ಕಾಂಗ್ರೆಸ್ ನಾಯಕರ ಕೂಗು ಕೇಳಿ ಬರುತ್ತಿದ್ದು ಇದೇ ವಿಷಯವಾಗಿ ರಾಮನಗರ ಜಿಲ್ಲೆಯಲ್ಲಿ ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಸ್ವಪಕ್ಷ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದು ಲೋಕಸಭೆ ಚುನಾವಣೆಯಲ್ಲಿ ಎರಡೆರಡು ಕ್ಷೇತ್ರಗಳನ್ನು ಗೆಲ್ಲಿಸಿಕೊಟ್ಟವರನ್ನು ಡಿಸಿಎಂ ಮಾಡಿ ಎಂದು ಟಾಂಗ್ ನೀಡಿದರು. ಈ ವಿಷಯದ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ಡಿಸಿಎಂ ಮಾಡಬೇಕೆಂಬ ಬೇಡಿಕೆಯ ವಿಚಾರ ಸ್ವಪಕ್ಷೀಯ ಸಚಿವರ ಹೇಳಿಕೆಗೆ ಶಾಸಕ HC ಬಾಲಕೃಷ್ಣ ಟಾಂಗ ನೀಡಿದ್ದು, ಈ ಹೇಳಿಕೆ ನೀಡುತ್ತಿರುವವರಿಗೆ ಎಂಪಿ ಚುನಾವಣೆ ಟಾಸ್ಕ್ ನೀಡಬೇಕು ಎಂದು ರಾಮನಗರದಲ್ಲಿ ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಹೆಚ್ಚುವರಿ ಡಿಸಿಎಂ ಬೇಡಿಕೆ ಇಟ್ಟವರು ಎರಡೆರಡು ಕ್ಷೇತ್ರ ಗೆಲ್ಲಿಸಿ ಕೊಡಲಿ.ಎರಡೆರಡು ಕ್ಷೇತ್ರ ಗೆಲ್ಲಿಸಿಕೊಟ್ಟುವವರನ್ನು ಡಿಸಿಎಂ ಮಾಡೋಣ. ಜಾತಿ ಹೆಸರಿನಲ್ಲಿ ಡಿಸಿಎಂ ಮಾಡಿ ಅನ್ನುವುದು ಸರಿಯಲ್ಲ.ಆದರೆ ಕೆಲ ಸಚಿವರು ಅನಾವಶ್ಯಕವಾಗಿ ಹೇಳಿಕೆಯನ್ನು ನೀಡುತ್ತಿದ್ದಾರೆ.ಬೇಕಿದ್ದರೆ ಹೈಕಮಾಂಡ್ ಭೇಟಿಯಾಗಿ ಅವರು ಮನವಿ…

Read More

ಹುಬ್ಬಳ್ಳಿ : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮನ ಮಂದಿರ ಉದ್ಘಾಟನೆಯ ಆಹ್ವಾನವನ್ನು ಕಾಂಗ್ರೆಸ್ ಪಕ್ಷ ಗೌರವ ಯುತವಾಗಿ ತಿರಸ್ಕರಿಸಿದೆ. ಈ ವಿಷಯದ ಕುರಿತಾಗಿ ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್ ಬಿ ತಿಮ್ಮಪೂರ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು,ಶ್ರೀರಾಮ ಒಬ್ಬನೇ ದೇವರ ನಮ್ಮೂರಲ್ಲೂ ಅನೇಕ ದೇವರುಗಳಿವೆ ಮತದಾರರಿಗೆ ಅಕ್ಷತೆಗಳು ಕೊಟ್ಟು ಮತ ಕೇಳುತ್ತಾರೆ ಎಂದು ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು. ಶ್ರೀರಾಮ ಒಬ್ಬನೇ ದೇವರ ನಮ್ಮೂರಲ್ಲಿ ಕೂಡ ಅನೇಕ ದೇವರುಗಳು ಇವೆ ಕಾಳವ್ವ ಹನುಮಂತ ದುರ್ಗವ್ವ ಇವರೆಲ್ಲರೂ ದೇವರು ಅಲ್ಲವಾ? ರಾಮಮಂದಿರಕ್ಕೆ ಹೋದವರು ಮಾತ್ರ ಹಿಂದೂಗಳ? ಹಳ್ಳಿಯಲ್ಲಿರೋ ದೇವರು ಬಿಜೆಪಿಯವರಿಗೆ ಕಾಣುವುದಿಲ್ವಾ? ರಾಮನ ಹೆಸರಲ್ಲಿ ಚುನಾವಣೆಗೆ ಹೊರಟಿದ್ದಾರೆ ಬಿಜೆಪಿಯವರಿಗೆ ಮೋದಿ ಅವರೇ ದೇವರು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲ ಅಕ್ಷತೆ ಕೊಡುತ್ತೇವೆ ನಮಗೆ ಮತ ಹಾಕಿ ಎಂದು ರಾಜಕಾರಣ ಮಾಡಲು ಹೊರಟಿದ್ದಾರೆ. ಲೋಕಸಭೆ ಚುನಾವಣೆಗೆ ರಾಮನ ಹೆಸರನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ…

Read More

ಬೆಂಗಳೂರು : ಕಳೆದ ನಾಲ್ಕು ದಿನಗಳ ಹಿಂದೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯ ತಲೆ ಮೇಲೆ ರುಬ್ಬುವ ಗುಂಡು ಕಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಿರುವ ಪ್ರೇಮಿಗಳಿಬ್ಬರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ನಂದಿನಿಬಾಯಿ ಮತ್ತು ನಿತೀಶ್ ಕುಮಾರ್ ಬಂಧಿತ ಆರೋಪಿಗಳು. ವೆಂಕಟ್ ನಾಯಕ್(30) ಕೊಲೆಯಾದ ವ್ಯಕ್ತಿ (Murder). ಇದೇ ತಿಂಗಳ 09ರಂದು ಹೆಚ್​ಎಸ್​ಆರ್ ಲೇಔಟ್​ನ ಮನೆಯಲ್ಲಿ ಆರೋಪಿ ನಂದಿನಿಬಾಯಿ ತನ್ನ ಪ್ರಿಯಕರ ನಿತೀಶ್ ಕುಮಾರ್ ಜೊತೆ ಸೇರಿ ತನ್ನ ಪತಿ ವೆಂಕಟ್ ನಾಯಕ್ ತಲೆ ಮೇಲೆ ರುಬ್ಬುವ ಗುಂಡು ಹಾಕಿ ಕೊಲೆ ಮಾಡಿದ್ದರು. ಸದ್ಯ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಗಂಡ ಮನೆಯಲ್ಲಿ ಇಲ್ಲ ಎಂದು ಹೇಳಿ ನಂದಿನಿ ಬಾಯಿ ಜನವರಿ‌ 09 ರಂದು ಪ್ರಿಯಕರ ನಿತೇಶ್​ನನ್ನು ಹೆಚ್​ಎಸ್​ಆರ್ ಲೇಔಟ್​ನ ತನ್ನ ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಗಂಡ ವೆಂಕಟನಾಯಕ್ ಧಿಡೀರ್ ಮನೆಗೆ ಬಂದಿದ್ದ. ಮನೆಗೆ ಕಾಲಿಡುತ್ತಿದ್ದಂತೆ ರೂಮ್​ನಲ್ಲಿ ತನ್ನ ಪತ್ನಿ ಬೇರೊಬ್ಬನ ಜೊತೆ ಆತ್ಮೀಯ ಸಲುಗೆಯಲ್ಲಿದ್ದದನ್ನು…

Read More

ಶಿವಮೊಗ್ಗ : ಯುವನಿಧಿ ಕಾರ್ಯಕ್ರಮಕ್ಕೆ ಸಂಸದ ಬಿ ವೈ ರಾಘವೇಂದ್ರ ಕಿಡಿಕಾರಿದ್ದು ಇನ್ನೆರಡು ತಿಂಗಳಲ್ಲಿ ಲೋಕಸಭೆ ಚುನಾವಣೆ ಇದೆ.ತರಾತುರಿಯಲ್ಲಿ ಯುವನಿಧಿ ಚಾಲನೆ ನೀಡಿದ್ದಾರೆ ಯುವನಿಧಿ ಯೋಜನೆಯ ಮುಂದುವರೆಯುವುದು ಅನುಮಾನವಾಗಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಶಿವಮೊಗ್ಗದಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮರಳು ಮಾಡಲು ಹೊರಟಿದೆ. ಗ್ಯಾರೆಂಟಿಗೆ ಶರತ್ತು ಹಾಕಿ ಸಂಖ್ಯೆ ಕಡಿಮೆ ಮಾಡುತ್ತಿದೆ.ಸರ್ಕಾರ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಿದೆ.ಚುನಾವಣೆಯ ಬಳಿಕ ಮುಂದುವರೆಯುವುದು ಅನುಮಾನವಾಗಿದೆ ಈ ಗ್ಯಾರಂಟಿ ಮುಂದುವರಿಯುವ ವಿಶ್ವಾಸವೇ ಇಲ್ಲದಂತಾಗಿದೆ ಎಂದು ಆಕ್ರೋಶ ಹೊರಹಕಿದ್ದಾರೆ. ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಶಿವಮೊಗ್ಗದಲ್ಲಿ ಸಂಸದ ಬಿ ವೈ ರಾಘವೇಂದ್ರ ವಾಗ್ದಾಳಿ ನಡೆಸಿದರು.ಯುವಜನರ ಕಣ್ಣಿಗೆ ಮಣ್ಣೆತ್ತಿಸುವ ಕೆಲಸ ಮಾಡಿದೆ ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಭರವಸೆ ನೀಡಿದೆ.ಆದರೆ ಈ ಯೋಜನೆಯಲ್ಲಿ ಫಲಾನುಭವಿಗಳನ್ನು ಪಡೆಯಲು ಮಾನದಂಡಗಳನ್ನು ಹಾಕಲಾಗಿದ್ದು ಯುವಕರು ಮತ್ತು ಮತದಾರರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದೆ ಎಲ್ಲರ ನಿರೀಕ್ಷೆ ಸುಳ್ಳಾಗಿದೆ ಎಂದು…

Read More

ಹಾಸನ : ಯುವತಿಯ ಹಿಂದೆ ಬಿದ್ದು ತನ್ನನ್ನು ಪ್ರೀತಿಸು ಎಂದು ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೂಡು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯನ್ನು ಸಂಗೀತ (21) ಎಂದು ಹೇಳಲಾಗುತ್ತಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಎಡಗೂಡು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮೃತ ಸಂಗೀತಾ ಬಿಕಾಂ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿದ್ದಳು.ಸಂಗೀತಾಳಿಗೆ ಪ್ರೀತಿಸು ಎಂದು ಶಿವು ಎನ್ನುವ ಯುವಕ ಪಡಿಸುತ್ತಿದ್ದ ಎಂದು ಹೇಳಲಾಗುತ್ತಿದೆ.ಅಲ್ಲದೆ ಇದೆ ವಿಷಯವಾಗಿ ಅವಾಚ್ಯವಾಗಿ ನಿಂದಿಸಿ ಆರೋಪಿಯು ಹಲ್ಲೆ ಕೂಡ ಮಾಡಿದ್ದ ಎಂದು ಹೇಳಲಾಗುತ್ತಿದ್ದು ಪ್ರೀತಿಸದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ. ಇದರಿಂದ ಮನನೊಂದ ಸಂಗೀತ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಆರೋಪಿಸಿ ಶಿವುನನ್ನು ಬೇಲೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಘಟನೆ ಕುರಿತಂತೆ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಗರದ ರೇಸ್ ಕೊರ್ಸ್ ಮೇಲೆ‌ ಸಿಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯ ರಾತ್ರಿ 1 ಗಂಟೆಗೆ ದಾಳಿ ಅಂತ್ಯಗೊಳಿಸಲಾಗಿದೆ. ದಾಳಿ ವೇಳೆ ಸುಮಾರು 3 ಕೋಟಿ 47 ಲಕ್ಷ ಹಣ ಪತ್ತೆಯಾಗಿದೆ. ಲೆಕ್ಕವಿಲ್ಲದ ಹಣ ಹಾಗೂ ಜಿಎಸ್‌ಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ 60 ಜನರನ್ನು ವಶಕ್ಕೆ ಪಡೆದು ಸ್ಟೇಷನ್ ಬೇಲ್ ಮೇಲೆ ಬಿಡುಗಡೆಗೊಳಿಸಲಾಗಿದೆ. ಸಿಸಿಬಿ ದಾಳಿಯಲ್ಲಿ ಸಿಕ್ಕವರ ಮೇಲೆ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸುಮಾರು 60 ಜನರನ್ನು ವಶಕ್ಕೆ ಪಡೆದು ಸ್ಟೇಷನ್ ಬೇಲ್‌ ಮೇಲೆ ಬಿಡುಗಡೆ ಮಾಡಲಾಗಿದೆ. ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆ ಲೆಕ್ಕಕ್ಕಿಂತ ಅಧಿಕ ಹಣ ಪತ್ತೆಯಾಗಿದ್ದು ಜೊತೆಗೆ ಜಿಎಸ್‌ಟಿ ವಂಚಿಸಿರುವ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ. ದಾಳಿ ವೇಳೆ ಸಿಕ್ಕ ಹಣಕ್ಕೆ ದಾಖಲೆ ಸಲ್ಲಿಸುವಂತೆ ಸಿಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದಾಖಲೆ…

Read More

ನವದೆಹಲಿ : ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧ ಕಡೆ ವಿಧ್ವಂಸಕ ಕೃತ್ಯ, ಆತ್ಮಾಹುತಿ ದಾಳಿ ಎಸಗಲು ಯೋಜನೆ ರೂಪಿಸಿದ್ದ ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಘಟನೆ ಲಷ್ಕರ್‌-ಎ-ತೊಯ್ಬಾ (ಎಲ್‌ಇಟಿ)ದ 8 ಶಂಕಿತ ಉಗ್ರರ ವಿರುದ್ಧ ಎನ್‌ಐಎ ಶುಕ್ರವಾರ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. 8 ಮಂದಿಯಲ್ಲಿ 6 ಜನರನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿರುವ ಎನ್‌ಐಎ, ಇವರ ವಿರುದ್ಧ ಉಗ್ರವಾದಕ್ಕೆ ಪಿತೂರಿ, ಆತ್ಮಾಹುತಿ ದಾಳಿ ನಡೆಸಲು ಯೋಜನೆ ರೂಪಿಸಿದ್ದರು ಎಂಬ ಆರೋಪ ಹೊರಿಸಿದೆ.ಈ ಪ್ರಕರಣದ ಪ್ರಮುಖ ಸೂತ್ರಧಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೇರಳ ಮೂಲದ ನಸೀರ್‌ ಆಗಿದ್ದು, ಇಬ್ಬರು ಉಗ್ರರಾದ ಜುನೈದ್‌ ಅಹ್ಮದ್‌ ಮತ್ತು ಸಲ್ಮಾನ್‌ ಖಾನ್‌ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿದೆ. ಇವರಲ್ಲದೇ ಕಳೆದ ಜುಲೈ 19ರಂದು ಬೆಂಗಳೂರಲ್ಲಿ ಬಂಧಿತರಾಗಿದ್ದ ಸೈಯದ್‌ ಸುಹೇಲ್‌ ಖಾನ್‌, ಮೊಹಮ್ಮದ್‌ ಉಮರ್‌, ಝಹೀದ್‌ ತಬ್ರೇಜ್‌, ಸೈಯದ್‌ ಮುದಾಸಿರ್‌ ಮತ್ತು ಫೈಸಲ್‌ ರಬ್ಬಾನಿ ಹೆಸರುಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಇವರೆಲ್ಲರ ವಿರುದ್ಧ ಐಪಿಸಿ,…

Read More