Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಮಾಹಿತಿ ನೀಡಿದ್ದು, ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದೆ. ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ. ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ. https://twitter.com/dineshgrao/status/1897154599750131749?t=DCWKI_Ml4BnrO8LPAYEusA&s=19
ಬೆಂಗಳೂರು : ಬೆಂಗಳೂರಿನಲ್ಲಿ ಬ್ಲಾಕ್ ಅಂಡ್ ವೈಟ್ ದಂಧೆ ನಡೆಸುತ್ತಿದ್ದು, ಬ್ಲಾಕ್ ಅಂಡ್ ವೈಟ್ ದಂಧೆ ಹೆಸರಲ್ಲಿ ದರೋಡೆ ನಡೆಸಲಾಗುತ್ತಿದೆ. 1 ಕೋಟಿ ಕ್ಯಾಶ್ ಕೊಟ್ಟರೆ 1.20 ಕೋಟಿ ಕೊಡುವುದಾಗಿ ನಂಬಿಸಿ ಇದೀಗ ಪೊಲೀಸರಿಗೆ ಅತಿಥಿಯಾಗಿರುವ ಘಟನೆ ವರದಿಯಾಗಿದೆ. ಹೌದು ಬ್ಲ್ಯಾಕ್ & ವೈಟ್ ದಂಧೆ ಹೆಸರಲ್ಲಿ ದರೋಡೆ ಮಾಡುತ್ತಿದ್ದ ಮೂವರು ಆರೋಪಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಒಂದು ಆಸೆಯಿಂದ ಚನ್ನಪಟ್ಟಣದದಿಂದ ಜಯಚಂದ್ರ ಎನ್ನುವವರಿಗೆ ಆರೋಪಿ ಶ್ರೀನಿವಾಸ್ ನಂಬಿಸಿದ್ದ. ಜಯಚಂದ್ರ ರನ್ನು ಶ್ರೀನಿವಾಸ್ ಬೆಂಗಳೂರಿಗೆ ಕರೆಸಿಕೊಂಡಿದ್ದ. ಪರಿಚಯಸ್ಥ ಶ್ರೀನಿವಾಸ್ ಮಾತಿನಂತೆ ಜಯಚಂದ್ರ ಬೆಂಗಳೂರಿಗೆ ಬಂದಿದ್ದ. ಬೆಂಗಳೂರಿನ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಡಿಲೀಟ್ ಮಾತುಕತೆ ನಡೆದಿದೆ. ಶ್ರೀನಿವಾಸ್ ಗೆ ಒಂದು ಕೋಟಿ ಹಣ ಕೊಡಲು ಜಯಚಂದ್ರ ಬಂದಿದ್ದ ಈ ವೇಳೆ ಅಂಬರೀಶ್, ಮಾರ್ಟಿನ್, ರವಿ ಮತ್ತು ವೆಂಕಟೇಶ್ ಅಲ್ಲಿಯೇ ಇದ್ದರು ಎರಡು ದಿನಗಳಲ್ಲಿ ನಿಮ್ಮ ಅಕೌಂಟಿಗೆ ಹಣ ಬರುವುದಾಗಿ ಭರವಸೆ ಕೊಟ್ಟಿದ್ದಾರೆ. ಸಚಿನ್ ಎಂಬಾತನಿಂದ ಅಕೌಂಟ್ಗೆ ಹಣ…
ಬೆಳಗಾವಿ : ಕುಡಿದು ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದರಿಂದ ಮನನೊಂದ ಪತ್ನಿ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಇದೀಗ ಈ ಒಂದು ಪ್ರಕಾರಣಕ್ಕೆ ಸಂಬಂಧಿಸಿದಂತೆ ರಕ್ಷಿಸಲ್ಪಟ್ಟಿದ್ದ ಅನುಷ್ಕಾ ಎನ್ನುವ ಪುತ್ರಿ ಇದೀಗ ಚಿಕಿತ್ಸೆಫಲಿಸಿದೆ ಸಾವನಪ್ಪಿದ್ದಾಳೆ. ಹೌದು ಬೆಳಗಾವಿಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಕೃಷ್ಣ ನದಿಗೆ ಹಾರಿ ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ತಾಯಿ ಶಾರದ ಹಾಗೂ ಮಕ್ಕಳಾದ ಅಮೃತ, ಆದರ್ಶ ಸಾವನಪ್ಪಿದ್ದಾರೆ. ಆದರೆ ಘಟನೆಯಲ್ಲಿ ಅನುಷ್ಕಾ ಡಾಲೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಪತಿ ಅಶೋಕ್ ಡಾಲೆ ಕಿರುಕುಳಕ್ಕೆ ಬೇಸತ್ತು ತಾಯಿ ಶಾರದಾ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿತ್ಯ ಕುಡಿದು ಬಂದು ಪತಿ ಅಶೋಕ್ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಪತ್ನಿ ಶಾರದ ಋಷಿ ಹೋಗಿದ್ದಳು ಈ ವೇಳೆ ಚಿಂಚಲಿ ಗ್ರಾಮದ ಹೊರವಲಯದಲ್ಲಿರುವ…
ತಮಿಳುನಾಡು : ಮರು ವಿಂಗಡಣೆಯಿಂದ ಕ್ಷೇತ್ರಗಳನ್ನು ಕಳೆದುಕೊಳ್ಳುವ ಭೀತಿ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಎಂ ಕೆ ಸ್ಟಾಲಿನ್ ಮಾತನಾಡಿ 1971ರ ಜನಗಣತಿ ಆಧರಿಸಿ ಕ್ಷೇತ್ರ ಪುನರ್ ವಿಂಗಡಣೆ ಮಾಡಲಿ. ಪ್ರಧಾನಿಯವರು ಈ ಬಗ್ಗೆ ಭರವಸೆ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಗ್ರಹಿಸಿದ್ದಾರೆ. ಮರು ವಿಂಗಡಣೆಯಿಂದ ಕ್ಷೇತ್ರಗಳನ್ನು ಕಳೆದುಕೊಳ್ಳುವ ಭೀತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಸರ್ವಪಕ್ಷಗಳ ತುರ್ತು ಸಭೆ ಕರೆದಿದ್ದರು. ಸಭೆಯಲ್ಲಿ ಕ್ಷೇತ್ರ ವಿಂಗಡಣೆಯ ವಿಷಯ ಕುರಿತು ಜನರಿಗೆ ಜಾಗೃತಿ ಮೂಡಿಸುತ್ತೇವೆ. ಹೋರಾಟಕ್ಕೆ ದಕ್ಷಿಣ ಭಾರತದ ಜಂಟಿ ಕ್ರಿಯಾ ಸಮಿತಿ ರಚಿಸುತ್ತೇವೆ. ಕ್ಷೇತ್ರಗಳ ಸಂಖ್ಯೆ ಹೆಚ್ಚಿಸಿದರೆ ನಮಗೆ 22 ಹೆಚ್ಚುವರಿ ಸ್ಥಾನ ಸಿಗಬೇಕು ಎಂದು ಅವರು ತಿಳಿಸಿದರು. ಪ್ರಸ್ತುತ ಜನಸಂಖ್ಯಾ ಪ್ರಕಾರ ಕೇವಲ 10 ಹೆಚ್ಚುವರಿ ಸ್ಥಾನಗಳು ಸಿಗುತ್ತವೆ ಅಂದರೆ ನಾವು 12 ಸ್ಥಾನಗಳನ್ನು ಕಳೆದುಕೊಳ್ಳುತ್ತೇವೆ. ತಮಿಳುನಾಡಿನ ರಾಜಕೀಯ ಪ್ರಾತಿನಿಧ್ಯದ ಮೇಲೆ ನೇರ ದಾಳಿಯಾಗಿದೆ. ತಮಿಳುನಾಡಿನ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ನಾವು ಕ್ಷೇತ್ರ ಪುನರ್…
ಬೆಂಗಳೂರು : ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಾಯುಪಡೆಗೆ 1987ರಲ್ಲಿ ಮಂಜೂರು ಮಾಡಲಾಗಿದ್ದ 570 ಎಕರೆ ಭೂಮಿಯ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ, 2017ರಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಭಾರತೀಯ ವಾಯು ಪಡೆ ಮಾ.1ರಂದು ಎಫ್.ಸಿ. (ಅರಣ್ಯ ತೀರುವಳಿ) ಅನುಮತಿ ಪಡೆಯದೆ ಅಕ್ರಮವಾಗಿ ನಿರ್ಮಾಣ ಕಾಮಗಾರಿ ಆರಂಭಿಸಿತ್ತು. ಇದನ್ನು ತಡೆಯಲಾಗಿದೆ ಎಂದು ಅರಣ್ಯಾಧಿಕಾರಿಗಳು ಇಂದು ತಿಳಿಸಿದ ಹಿನ್ನೆಲೆಯಲ್ಲಿ ಅರಣ್ಯ ಸಚಿವರು ಈ ಸೂಚನೆ ನೀಡಿದ್ದಾರೆ. ಸರ್ಕಾರದ 2017ರ ಆದೇಶದನ್ವಯ ಮ್ಯುಟೇಷನ್ ಆಗಿದ್ದು, ಪ್ರಸ್ತುತ ಈ ಜಮೀನಿನ ಪಹಣಿಯಲ್ಲಿ ಮೀಸಲು ಅರಣ್ಯ ಎಂದು ನಮೂದಾಗಿದೆ. ಅರಣ್ಯ ಇಲಾಖೆ ಈ ವಿಷಯವನ್ನು ವಾಯುಪಡೆಯ ಅಧಿಕಾರಿಗಳ ಗಮನಕ್ಕೆ ತಂದು ಸದರಿ…
ಕಲಬುರ್ಗಿ : ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಕೆಲ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೆ, ಇನ್ನು ಕೆಲವರು ಡಿಕೆ ಶಿವಕುಮಾರ್ ಸಿಎಂ ಅಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ ಇದರ ಮಧ್ಯ ಬಿಜೆಪಿಯ ಮಾಜಿ ಸಚಿವ ಗೋವಿಂದ ಕಾರಜೋಳ ರಾಜ್ಯದಲ್ಲಿ ದಲಿತ ಸಿಎಂ ಆಗುವ ಸಮಯ ಬಂದಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಕಲ್ಬುರ್ಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತ ಸಿಎಂ ಆಗುವ ಸಮಯ ಬಂದಿದೆ. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕಿತ್ತು. ಸಿದ್ದರಾಮಯ್ಯ ದಲಿತರು ಸಿಎಂ ಆಗಲು ಸಹಕಾರ ನೀಡಬೇಕು. ಮಲ್ಲಿಕಾರ್ಜುನ ಖರ್ಗೆ ಮನಸ್ಸು ಮಾಡಿದರೆ ರಾಜ್ಯದಲ್ಲಿ ದಲಿತರು ಸಿಎಂ ಆಗಬಹುದು ಎಂದು ಕಲ್ಬುರ್ಗಿಯಲ್ಲಿ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.
ಬೆಂಗಳೂರು : ಕರೆದ ಹಸಿರು ಪುಟಾಣಿಯಲ್ಲಿ ಇದೀಗ ಅಪಾಯಕಾರಿ ಅಂಶ ಪತ್ತೆಯಾಗಿದೆ ಬಟಾಣಿಗಳಲ್ಲಿ ಪತ್ತೆಯಾಗಿದ್ದು ಬಟಾಣಿಯಲ್ಲಿ ಆರೋಗ್ಯಕ್ಕೆ ಹಾನಿಕಾರ ಉಂಟಾಗಲಿದೆ ಟಾಟಾ ಬಣ್ಣದಿಂದ ಆ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಸಿರು ಬಟಾಣಿಯಿಂದ ದೇಹಕ್ಕೆ ಹಾನಿಕರ ಎಂದು ಇದೀಗ ವರದಿಯಲ್ಲಿ ಬಯಲಾಗಿದೆ. ಹೌದು ಕರಿದ ಹಸಿರು ಬಟಾಣಿಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ಬಟಾಣಿಯಲ್ಲಿ ಕಲರ್ ಬಳಕೆ ಆರೋಗ್ಯಕ್ಕೆ ಹಾನಿಕಾರಕ ಟಾರ್ಟಾಜಿನ್ ಬಣ್ಣದಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಹಸಿರು ಬಟಾಣಿ ಡೇಂಜರ್ ಎಂದು ವರದಿಯಲ್ಲಿ ಬಯಲಾಗಿದೆ. 96 ಮಾದರಿಯಲ್ಲಿ 64 ಮಾದರಿ ಅಸುರಕ್ಷಿತ ಎಂದು ವರದಿಯಲ್ಲಿ ತಿಳಿದು ಬಂದಿದೆ, ಲ್ಯಾಬರೋಟರಿ ಪರೀಕ್ಷೆಯಲ್ಲಿ ವರದಿ ಬಂದಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಕುರಿತು ಮಾಹಿತಿ ಬಂದಿದೆ. ಈ ಕುರಿತು ಕೃತಕ ಬಣ್ಣ ಪತ್ತೆಗೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಔಷಧ ಗುಣಮಟ್ಟ ಇಲಾಖೆ ಅಧಿಕಾರಿಗಳು ಕರಿದ ಹಸಿರು ಬಟಾಣಿಗಳ 96 ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಿದ್ದು, ಅವುಗಳಲ್ಲಿ 64…
ಬೆಳಗಾವಿ : ಕುಡಿದು ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದರಿಂದ ಮನನೊಂದ ಪತ್ನಿ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಹೌದು ಬೆಳಗಾವಿಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಕೃಷ್ಣ ನದಿಗೆ ಹಾರಿ ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ತಾಯಿ ಶಾರದ ಹಾಗೂ ಮಕ್ಕಳಾದ ಅಮೃತ, ಆದರ್ಶ ಸಾವನಪ್ಪಿದ್ದಾರೆ. ಆದರೆ ಘಟನೆಯಲ್ಲಿ ಅನುಷ್ಕಾ ಡಾಲೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಪತಿ ಅಶೋಕ್ ಡಾಲೆ ಕಿರುಕುಳಕ್ಕೆ ಬೇಸತ್ತು ತಾಯಿ ಶಾರದಾ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿತ್ಯ ಕುಡಿದು ಬಂದು ಪತಿ ಅಶೋಕ್ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಪತ್ನಿ ಶಾರದ ಋಷಿ ಹೋಗಿದ್ದಳು ಈ ವೇಳೆ ಚಿಂಚಲಿ ಗ್ರಾಮದ ಹೊರವಲಯದಲ್ಲಿರುವ ಕೃಷ್ಣಾ ನದಿಗೆ ತನ್ನ ಮೂವರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ದುರಾದೃಷ್ಟ ಘಟನೆಯಲ್ಲಿ ತಾಯಿ ಇಬ್ಬರು…
ಚೈನ್ನೈ : ಮರು ವಿಂಗಡಣೆಯಿಂದ ಕ್ಷೇತ್ರಗಳನ್ನು ಕಳೆದುಕೊಳ್ಳುವ ಭೀತಿ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಸರ್ವಪಕ್ಷಗಳ ತುರ್ತು ಸಭೆ ಕರೆದಿದ್ದು, ಈ ಒಂದು ಸಭೆಗೆ ಬಿಜೆಪಿ ಗೈರಾಗಿದೆ ಎಂದು ತಿಳಿದುಬಂದಿದೆ. ಸಿಎಂ ಸ್ಟಾಲನ್ ನೇತೃತ್ವದಲ್ಲಿ ಇದೀಗ ಸರ್ವ ಪಕ್ಷ ಸಭೆ ನಡೆಯುತ್ತಿದ್ದು, ಚೆನ್ನೈನಲ್ಲಿ ಸರ್ವಪಕ್ಷಗಳ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸ್ಟಾಲಿನ್ ತಮಿಳುನಾಡಿನ ಸರ್ವಪಕ್ಷಗಳ ಸಭೆಗೆ ಬಿಜೆಪಿ ಗೈರಾಗಿದೆ. ಸರ್ವಪಕ್ಷಗಳ ಸಭೆಯಲ್ಲಿ ನಟ ಕಮಲ್ ಹಾಸನ್ ಭಾಗವಹಿಸಿದ್ದಾರೆ. ಕ್ಷೇತ್ರಮರು ವಿಂಗಡಣೆಯಲ್ಲಿ 8 ಕ್ಷೇತ್ರಗಳನ್ನು ಕಳೆದುಕೊಳ್ಳುವ ಭೀತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಸರ್ವ ಪಕ್ಷಗಳ ಸಭೆಗೆ ಆಹ್ವಾನಿಸಿದ್ದಾರೆ.
ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ಬಂಧಿಸಲ್ಪಟ್ಟಿರುವ ನಟಿ ರನ್ಯಾ ರಾವ್ ಅವರ ಮನೆಯಲ್ಲಿಯೂ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸೋಮವಾರ ರಾತ್ರಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆದ ಬಳಿಕ ಅವರು ವಾಸವಿದ್ದ ನಗರದ ಲ್ಯಾವೆಲ್ಲೆ ರಸ್ತೆಯಲ್ಲಿರುವ ಫ್ಲ್ಯಾಟ್ನಲ್ಲಿ ಡಿಆರ್ಐ ಅಧಿಕಾರಿಗಳ ತಂಡ ಶೋಧ ನಡೆಸಿದ್ದು, ಈ ವೇಳೆ 2.06 ಕೋಟಿ ರೂ. ಮೌಲ್ಯದ ಚಿನ್ನ ಹಾಗೂ 2.67 ಕೋಟಿ ರೂ. ನಗದು ಸೇರಿದಂತೆ ಕೆಲ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ರನ್ಯಾ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ರನ್ಯಾ ಬಂಧನ ಬಳಿಕ ಆಕೆ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್ ನಲ್ಲಿರುವ ಫ್ಲಾಟ್ ಅನ್ನು ಅಧಿಕಾರಿಗಳ. ಪರಿಶೀಲನೇ ನಡೆಸಿದ್ದಾರೆ ಮೊನ್ನೆ ಸಹ ರಾತ್ರಿ ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 3 ದೊಡ್ಡ ಪೆಟ್ಟಿಗೆಯನ್ನು ಅಧಿಕಾರಿಗಳು ತೆಗೆದುಕೊಂಡು ಹೋದರು ಎಂದು…












