Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ವಾರದ ರಜೆಯನ್ನು ಹೊರತು ಮಾಡಿಸಿ ವಿಶೇಷ ರಜೆ ತೆಗೆದುಕೊಳ್ಳದೆ ಒಂದು ತಿಂಗಳು ಪೂರ್ತಿ ಕಾರ್ಯ ನಿರ್ವಹಿಸುವ ಚಾಲಕರಿಗೆ ಬಿಎಂಟಿಸಿ ಮಾಸಿಕವಾಗಿ ವಿಶೇಷ ರಜೆ ಭತ್ಯೆಯಾಗಿ 500 ರೂ. ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ. ಚಾಲನಾ ಸಿಬ್ಬಂದಿ ಗೈರಿನಿಂದ ಸಮರ್ಪಕವಾಗಿ ಬಸ್ ಸೇವೆ ನೀಡಲು ಆಗುತ್ತಿರುವ ಸಮಸ್ಯೆ ನಿವಾರಿಸಲು ವಾರದ ರಜೆ ಹೊರತುಪಡಿಸಿ ಬೇರೆ ರಜೆಯನ್ನು ತೆಗೆದುಕೊಳ್ಳದೆ ಕೆಲಸ ಮಾಡುವ ಚಾಲನಾ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಲು ಬಿಎಂಟಿಸಿ ನಿರ್ಧರಿಸಿದೆ. ಬಿಎಂಟಿಸಿಯ ಚಾಲನಾ ಸಿಬ್ಬಂದಿ ಪೈಕಿ ಪ್ರತಿದಿನ ಶೇಕಡ 6.8 ರಷ್ಟು ಸಿಬ್ಬಂದಿ ದೈನಂದಿನ ಅಥವಾ ಧೀರ್ಘಾವಧಿ ರಜೆಯಲ್ಲಿರುತ್ತಾರೆ. ಚಾಲನಾ ಸಿಬ್ಬಂದಿ ಪದೇಪದೆ ರಜೆ ಪಡೆಯುವು ದರಿಂದಾಗಿ ಬಿಎಂಟಿಸಿ ಸಮರ್ಪಕವಾಗಿ ಬಸ್ ಸೇವೆ ನೀಡಲಾಗುತ್ತಿಲ್ಲ. ನಿಗಮದ ಅಂಕಿ ಅಂಶದ ಪ್ರಕಾರ ಚಾಲನಾ ಸಿಬ್ಬಂದಿ ಗೈರಿನಿಂದ 2023ರ ಏಪ್ರಿಲ್‌ನಿಂದ 2023ರ ಅಕ್ಟೋಬರ್ ವರೆಗೆ 44.27 ಲಕ್ಷ ಅನುಸೂಚಿ (ಶೆಡ್ಯೂಲ್) ರದ್ದಾಗಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ಪರಿಹರಿಸಲು ಚಾಲನಾ ಸಿಬ್ಬಂದಿಗೆ ವಿಶೇಷ…

Read More

ಬೆಂಗಳೂರು : ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳು, ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರು, ಮಧ್ಯಮ ವರ್ಗದ ಕಾರ್ಮಿಕರು, ಮಹಿಳೆಯರು ಸೇರಿದಂತೆ ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಆಟೋ ಬಸ್ ಬಿಟ್ಟು ಮೆಟ್ರೋ ಟ್ರೈನ್ ನಲ್ಲಿ ಪ್ರಯಾಣಿಸುತ್ತಾರೆ. ಆದರೆ ಪೆಟ್ರೋದಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಎಷ್ಟು? ಮೆಟ್ರೋ ಕೆ ಇದರಿಂದ ಬರುವ ಮಾಸಿಕ ಆದಾಯವೆಷ್ಟು? ಬನ್ನಿ ಇಲ್ಲಿ ತಿಳಿಯೋಣ ಇದೇ ಮೊದಲ ಬಾರಿಗೆ ನಮ್ಮ ಮೆಟ್ರೋದಲ್ಲಿ ಮಾಸಿಕ 2 ಕೋಟಿಗಿಂತ ಹೆಚ್ಚಿನ ಪ್ರಯಾಣಿಕರು ಸಂಚರಿಸಿದ್ದು, ₹55 ಕೋಟಿ ಆದಾಯ ಗಳಿಸಿ ಸಾಧನೆ ಮಾಡಿದೆ. ದೈನಂದಿನ ಸರಾಸರಿ ಪ್ರಯಾಣಿಕರ ಸಂಖ್ಯೆ 6.88 ಲಕ್ಷ ತಲುಪಿದ್ದು, 2023ರ ಜನವರಿಗೆ ಹೋಲಿಸಿದರೆ ಶೇ. 30ರಷ್ಟು ಏರಿಕೆಯಾಗಿದೆ. 2023ರ ಅಕ್ಟೋಬರ್‌ನಲ್ಲಿ ನೇರಳೆ ಮಾರ್ಗ ಪೂರ್ಣಗೊಂಡಿದ್ದರೂ 2 ತಿಂಗಳು ಹೇಳಿಕೊ ಳ್ಳುವಂತಹ ಆದಾಯ ಬಿಎಂಆರ್‌ಸಿಎಲ್‌ಗೆ ಬಂದಿರಲಿಲ್ಲ. ಪ್ರಸ್ತುತ ಕೂಡ ನಮ್ಮ ಮೆಟ್ರೋ ನಿರೀಕ್ಷೆಯಂತೆ ನಿತ್ಯ 7 ಲಕ್ಷ ಸರಾಸರಿ ಪ್ರಯಾ ಣಿಕರಿಗೆ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ. ಆದರೆ, ಕ್ರಿಸ್ಮಸ್, ಹೊಸ ವರ್ಷ…

Read More

ಶಿವಮೊಗ್ಗ : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಲ್ಲ ಪಕ್ಷಗಳು ಪ್ರಮುಖವಾದಂತ ಸಭೆಗಳನ್ನು ನಡೆಸುತ್ತಿದ್ದು ಅಲ್ಲದೆ ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಬಹಳ ಮಹತ್ವವನ್ನು ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಕುಡಿದಂತೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಲೋಕಸಭೆ ಚುನಾವಣೆ ಹತ್ತಿರ ಆಗುತ್ತಿದ್ದಂತೆ ನಿದ್ದೆಯಿಂದ ಮೇಲೆದ್ದಿರುವ ಬಿಜೆಪಿಗರು ರಾಮ, ಕೃಷ್ಣರ ಜಪ ಮಾಡುತ್ತಿದ್ದಾರೆ. ಇಂಥ ಅಧ್ಯಾತ್ಮ ಗಿಮಿಕ್‌ಗಳು ನಡೆಯುವುದಿಲ್ಲ. ಈ ಕಾಲಕ್ಕೆ ಏನಿದ್ದರೂ ಅಭಿವೃದ್ಧಿಯ ಜಪ ಮಾತ್ರ ಗೆಲುವಿನ ಸಾಧನ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಸೊರಬ ಪಟ್ಟಣದ ಬಂಗಾರಧಾಮದಲ್ಲಿ ಯುವನಿಧಿ ಕಾರ್ಯಕ್ರಮ ಅಂಗವಾಗಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದ ಜಾಗತಿಕ ಮಟ್ಟದಲ್ಲಿ ದೇಶದ ಸಂಸ್ಕೃತಿ ಎತ್ತಿಹಿಡಿದಿದ್ದಾರೆ. ಅವರ ಜನ್ಮದಿನದಂದು ಯುವಜನತೆಗೆ ಸ್ಫೂರ್ತಿಯಾಗಿ ರಾಜ್ಯ ಸರ್ಕಾರ ಯುವನಿಧಿ ಹೆಸರಿನಲ್ಲಿ 5ನೇ ಗ್ಯಾರಂಟಿ ಜಾರಿಗೊಳಿಸುತ್ತಿದೆ. ಪದವೀಧರರಿಗೆ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದರು.…

Read More

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿಯ ಜೊತೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಾತ್ಯಾತೀತ ಪಕ್ಷವಾಗಿ ಇದೀಗ ಜೆಡಿಎಸ್ ಪಕ್ಷ ಉಳಿದಿಲ್ಲ ಎಂಬ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ರಾಜ್ಯದ ಅಭಿವೃದ್ಧಿ ಕುಂಠಿತದ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ. ಜೆಡಿಎಸ್ ಜಾತ್ಯಾತೀತ ಪಕ್ಷವಾಗಿ ಉಳಿದಿಲ್ಲ ಎಂಬ ಸಿಎಂ, ಡಿಸಿಎಂ, ಸಚಿವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಜಾತ್ಯಾತೀತ ಅನ್ನೋದು ಪ್ರಶ್ನೆ ಅಲ್ಲ. ಕರ್ನಾಟಕದಲ್ಲಿ ಕನ್ನಡಿಗರು, ಜನರು ನೋವುಗಳನ್ನ ಅನುಭವಿಸುತ್ತಿದ್ದಾರೆ. ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತಗೊಂಡಿದೆ. ಒಐಂಗಳಿಗೆ ಕರೆ ಮಾಡಿ ಕೇಳಿ ಕ್ಷೇತ್ರಗಳಿಗೆ ಅನುದಾನ ಕೊಡೋಕೆ ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ. ಇದರ ಬಗ್ಗೆ ಮೊದಲು ಕಾಂಗ್ರೆಸ್ ಅವರು ಉತ್ತರ ಕೊಡಲಿ ಅಂತ ವಾಗ್ದಾಳಿ ನಡೆಸಿದರು. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ದಿ ಕುಂಠಿತವಾಗಿ ಸಿಎಂ, ಡಿಸಿಎಂ, ಸಚಿವರು ಇದರ ಬಗ್ಗೆ ಮೊದಲು…

Read More

ಬೆಂಗಳೂರು : ಕೆಂಪುಕೋಟೆಯಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಕೇಂದ್ರ ನಿರಾಕರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಸಿ ಎನ್ ಅಶ್ವತ್ ನಾರಾಯಣ್ ಕಿಡಿಕಾರಿದ್ದು ಮೊಮ್ಮಕ್ಕಳನ್ನು ನೋಡಿಕೊಳ್ಳುವ ಈ ವಯಸ್ಸಲ್ಲಿ ಸಿಎಂ ಸಿದ್ದರಾಮಯ್ಯಗೆ ಯಾಕೆ ಇಂತಹ ಕೆಟ್ಟ ಬುದ್ಧಿ ಬಂದಿದೆ ಎಂದು ಕಿಡಿ ಕಾರಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ವಿಚಾರದಲ್ಲಿ ರಾಜಕೀಯ ಹೇಳಿಕೆ ಸರಿಯಲ್ಲ. ಎಂದು ಬಿಜೆಪಿ ಶಾಸಕಾ ಸಿಎನ್ ಅಶ್ವಥ್ ನಾರಾಯಣ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ.ಐವತ್ತಕ್ಕಿಂತ ಹೆಚ್ಚು ವರ್ಷಗಳ ಕಾಲ ಆಡಳಿತದಲ್ಲಿ ಅನುಭವವನ್ನು ಹೊಂದಿದ್ದಾರೆ ಎಂದು ತಿಳಿಸಿದರು. ರಾಜಕೀಯ ಪ್ರೇರಿತವಾಗಿ ಹೇಳಿಕೆ ಕೊಡುವುದು ಬಹಳ ಕಷ್ಟಕರ. ಕರ್ನಾಟಕಕ್ಕೆ ಅವಮಾನ ಆಗುವ ರೀತಿ ರಾಜಕೀಯ ಮಾಡ್ತಿದ್ದಾರೆ. ಯಾವುದೋ ಒಂದು ಸಮಿತಿಯು ಟ್ಯಾಬ್ಲೋ ಆಯ್ಕೆ ಮಾಡುತ್ತದೆ. ಸಿದ್ದರಾಮಯ್ಯಗೆ ಯಾಕೆ ಈ ವಯಸ್ಸಿನಲ್ಲಿ ಕೆಟ್ಟ ಬುದ್ಧಿ ಬಂದಿದೆ? 75ನೇ ವಯಸ್ಸಿನಲ್ಲಿ…

Read More

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…

Read More

ಬೆಂಗಳೂರು : ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧ ಚಿತ್ರವನ್ನು ಕೇಂದ್ರ ನಿರಾಕರಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಇದು ಕರ್ನಾಟಕಕ್ಕೆ ಮಾಡಿದ ಅಪಮಾನ ಮತ್ತು ಅನ್ಯಾಯ ಎಂದು ಕಿಡಿ ಕಾರಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕರ್ನಾಟಕಕ್ಕೆ ಆಗಿರುವಂತಹ ಅವಮಾನ ಮತ್ತು ಅನ್ಯಾಯವಾಗಿದೆ.ಈ ಹಿಂದೆಯೂ ರಾಜ್ಯದ ಟ್ಯಾಬ್ಲೋ ತಿರಸ್ಕಾರ ಮಾಡಿದ್ದರು ಈಗಾಗಲೇ ಕೇಂದ್ರಕ್ಕೆ ಈ ಕುರಿತಂತೆ ಪತ್ರ ಬರೆದಿದ್ದೇನೆ. ಮತ್ತೆ ಪತ್ರವನ್ನು ಬರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇದೇ ವಿಷಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಕಿಡಿ ಕಾರಿದ್ದಾರೆ.ನಲ್ಲಿ ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ.ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ…

Read More

ಪಣಜಿ: 4 ವರ್ಷದ ಪುತ್ರನನ್ನು ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ಬೆಂಗಳೂರಿಗೆ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ಬಿದ್ದ ಸಿಇಓ ಸುಚನಾ ಸೇಠ್‌ ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆ ನಾನೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಗೋವಾ ಪೊಲೀಸರ ವಿಚಾರಣೆಯ ವೇಳೆ ಮಗುವನ್ನು ತಾನೇ ಕೊಂದಿರುವುದಾಗಿ ಆಕೆ ಹೇಳಿದ್ದಾಳೆ. ಅಲ್ಲದೆ ಕಾರಣವನ್ನು ಕೂಡ ಸುಚನಾ ವಿವರಿಸಿದ್ದಾಳೆ. ಭಾನುವಾರ ತಂದೆ ಮಗುವಿಗೆ ಪದೇ ಪದೇ ಕರೆ ಮಾಡುತ್ತಿದ್ದರು. ಅಲ್ಲದೆ ಮಗು ಜೊತೆ ಮಾತನಾಡುವುದಕ್ಕೆ ವಿಡಿಯೋ ಕಾಲ್ ಮಾಡಿದ್ರು. ಆಗ ಮಗು ಮಲಗಿದೆ ಎಂದು ಪತ್ನಿಸುಚನಪತಿಗೆ ತಿಳಿಸಿದ್ದಾಳೆ ತಂದೆ ಜೊತೆ ಮಗು ಮಾತನಾಡಿಸೋಕೆ ಸುಚನಗೆ ಇಷ್ಟವಿರಲಿಲ್ಲ ಹೀಗಿದ್ದರೂ ತಂದೆ ಮಗುವಿನ ಜೊತೆ ಮಾತನಾಡಲು ಪದೇಪದೇ ಕಾಲ್ ಮಾಡಿದ್ರು. ವಾರಕ್ಕೊಮ್ಮೆ ಪತಿ ವೆಂಕಟರಮಣನಿಗೆ ಮಗುವನ್ನ ವಿಡೀಯೋ ಕಾಲ್ ಮೂಲಕ ತೋರಿಸಬೇಕಿತ್ತು. ಆದರೆ ಗಂಡನಿಗೆ ಮಗುವನ್ನು ತೋರಿಸುವುದಕ್ಕೆ ಇಷ್ಟ ಇರಲಿಲ್ಲ. ನನ್ನ ಮಗು ಕಂಡರೆ ನನಗೂ ಕೂಡ ಬಹಳ ಪ್ರೀತಿ.ಸೌಂಡ್ ಆಗುತ್ತಿದೆ ಮಲಗು ಅಂತ ಮಗುವಿಗೆ…

Read More

ಬೆಂಗಳೂರು : ಮಾಡಿರುವಂತಹ ಸಾಲವನ್ನು ತೀರಿಸಲಾಗದೆ ಇರುವುದರಿಂದ ಬ್ಯಾಂಕ್ ಜಮೀನನ್ನು ಹರಾಜು ಹಾಕಿದ್ದರಿಂದ ದಂಪತಿಗಳಿಬ್ಬರ ಹೈಡ್ರಾಮ ನಡೆದಿದ್ದು ವಿಧಾನಸೌಧದ ಮುಂಭಾಗದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಂಕಿನಿಂದ ಸಾಲ ಪಡೆದಿದ್ದ ಮಹಿಳೆಯಿಂದ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಧಾನಸೌಧ ಮುಂಭಾಗದಲ್ಲಿ ನಡೆದಿದೆ. ಸಾಲ ಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್ ಜಮೀನು ಹರಾಜು ಹಾಕಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯ ವಿಧಾನಸೌಧ ಮುಂಭಾಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ವಿಧಾನಸೌಧ ಮುಂಭಾಗವೇ ಸೀಮೆಎಣ್ಣೆ ಸುರಿದುಕೊಂಡು ಜಯನಗರದ ಶಾಯಿಸ್ತಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬ್ಯಾಂಕ್ನಿಂದ ದಂಪತಿಗಳು ಸಾಲವನ್ನು ಪಡೆದಿದ್ದರು. ಸಾಲ ಪಾವತಿಸಿದ ಹಿನ್ನೆಲೆಯಲ್ಲಿ ಬ್ಯಾಂಕ್ ಜಮೀನು ಹರಾಜು ಹಾಕಿತ್ತು ಈ ಹಿನ್ನೆಲೆಯಲ್ಲಿ ದಂಪತಿಯು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಧಾನಸೌಧ ಮುಂಭಾಗದಲ್ಲಿ ದಂಪತಿಗಳಿಬ್ಬರ ಹೈಡ್ರಾಮ ನಡೆದಿದ್ದು, ಬ್ಯಾಂಕ್ ಒಂದರಿಂದ ಸಾಲ ಪಡೆದಿದ್ದು ಅದನ್ನು ತೀರಿಸಲಾಗದೆ ಇದ್ದಿದ್ದರಿಂದ ಜಮೀನನ್ನು ಬ್ಯಾಂಕ್ ಹರಾಜು ಹಾಕಿದೆ ಇದರಿಂದ ವಿಧಾನಸೌಧ ಮುಂಭಾಗವೇ ದಂಪತಿಯು ಆತ್ಮಹತ್ಯೆಗೆ ಎದ್ದಿಸಿರುವ ಘಟನೆ ನಡೆದಿದೆ.ಬೆಂಗಳೂರಿನ ಜೆಜೆ ನಗರದ ದಂಪತಿಯಿಂದ ಸೀಮೆ ಎಣ್ಣೆ…

Read More

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು ಯಾವ ಅಭ್ಯರ್ಥಿಗೆ ಯಾವ ಕ್ಷೇತ್ರದಲ್ಲಿ ಟಿಕೇಟಿ ನೀಡಿದರೆ ಗೆಲ್ಲಬಹುದೆಂಬ ಲೆಕ್ಕಾಚಾರದಲ್ಲಿ ತೊಡಗಿವೆ ಇದರ ಮಧ್ಯ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ನಾನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂಬ ಅಭಿಪ್ರಾಯಕ್ಕೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂದುಕೊಂಡಿದ್ದೆ, ಸದ್ಯ ನಾನು ಸ್ಪರ್ಧೆ ಮಾಡಬಾರದೆಂದು ಅಭಿಪ್ರಾಯಕ್ಕೆ ಬಂದಿದ್ದೇನೆ. ಹಲವೆಡೆ ಸಚಿವರ ಸ್ಪರ್ಧೆ ಅನಿವಾರ್ಯತೆ ಇದೆ ಅಂತ ತಿಳಿಸುತ್ತಾರೆ.ನನ್ನ ಹೆಸರು ಬಂದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು. ಅಗತ್ಯವಿದ್ದರೆ ಸಚಿವರು ಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ.ಇನ್ನು ಯಾವ ಕ್ಷೇತ್ರಕ್ಕೂ ಅಭ್ಯರ್ಥಿ ಫೈನಲ್ ಆಗಿಲ್ಲ.ಶಿವಮೊಗ್ಗ ಕ್ಷೇತ್ರಕ್ಕೆ ಮಾತ್ರ ಕೆಪಿಸಿಸಿ ಅಧ್ಯಕ್ಷರು ಅಭ್ಯರ್ಥಿ ಹೇಳಿದ್ದಾರೆ. ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರನ್ನು ಕಣಕ್ಕೆ ಇಳಿಸುತ್ತೇವೆ ಎಂದು ಹೇಳಿದ್ದಾರೆ.ಅದು ಫೈನಲ್ ಆಗಿರಬಹುದೇನೋ ಗೊತ್ತಿಲ್ಲ ಎಂದು ಸಚಿವ ಕೆ ಎನ್ ರಾಜಣ್ಣ…

Read More