Author: kannadanewsnow05

ಶಿವಮೊಗ್ಗ : ಶಿವಮೊಗ್ಗದಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಮದುವೆ ಆದ 6 ತಿಂಗಳಿಗೆ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಪತಿ ಹಾಗೂ ಪತಿಯ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ತಿಳಿದುಬಂದಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿ ಎಸ್ ಸಿ ಮತ್ತು ಬಿಎಡ್ ಪದವೀಧರೆ ಆಗಿದ್ದರು ಎಂದು ತಿಳಿದು ಬಂದಿದೆ. 2025 ಏಪ್ರಿಲ್ 14 ರಂದು ಶಿಕಾರಿಪುರದ ಗುರುರಾಜ್ ಜೊತೆಗೆ ಲತಾ ವಿವಾಹವಾಗಿತ್ತು. ಆರು ತಿಂಗಳ ಹಿಂದೆ ಅಷ್ಟೇ ಲತಾ ಗುರುರಾಜ್ ನನ್ನು ಮದುವೆಯಾಗಿದ್ದರು ಬಿ ಆರ್ ಪಿ ಯ ಕೆಪಿಸಿಎಲ್ ನಲ್ಲಿ ಲತಾಪತಿ ಗುರುರಾಜ್ ಎಇಇ ಆಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ನಾಲೆಗೆ ಹಾರಿ ನವ ವಿವಾಹಿತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೆ ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದಿದ್ದು ಪತಿ ಹಾಗೂ…

Read More

ಬೆಂಗಳೂರು : ನಿನ್ನೆ ಬೆಳಂ ಬೆಳಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ದಾಳಿಯ ವೇಳೆ ಅಧಿಕಾರಿಗಳ ಅಕ್ರಮ ಆಸ್ತಿ ಕಂಡು, ಶಾಕ್ ಆಗಿದ್ದಾರೆ. ಇದುವರೆಗೂ ಲೋಕಾಯುಕ್ತ ಅಧಿಕಾರಿಗಳು 35.31 ಆಸ್ತಿ ಪತ್ತೆ ಹಚ್ಚಿದ್ದಾರೆ. ಹೌದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 10 ಮಂದಿ ನೌಕರರಿಗೆ ಸೇರಿದ 47 ಸ್ಥಳಗಳ ಮೇಲೆ ಏಕಕಾಲದಲ್ಲಿ ಮಂಗಳವಾರ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ. ನಿನ್ನೆ ಬೆಳ್ಳಂಬೆಳಗ್ಗೆ ಬೆಂಗಳೂರು ನಗರ, ಮೈಸೂರು, ಮಂಡ್ಯ, ಬೀದರ್, ಹಾವೇರಿ, ಧಾರವಾಡ, ಗದಗ, ಕೊಡಗು ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 10 ಮಂದಿ ಅಧಿಕಾರಿಗಳ ಮನೆ – ಕಚೇರಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಿ ಸುಮಾರು 35.31 ಕೋಟಿ ಮೌಲ್ಯದ ಚರಾಸ್ತಿ ಹಾಗೂ ಸ್ಥಿರಾಸ್ತಿ ಪತ್ತೆ ಹಚ್ಚಿದ್ಧಾರೆ.

Read More

ರಾಯಚೂರು : ರಾಯಚೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಟ್ರಕ್ ಗೆ ಡಿಕ್ಕಿಯಾಗಿ ಶಾಲಾ ವಾಹನದಲ್ಲಿರುವ ಎಂಟು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರೈಚೂರ್ ಜಿಲ್ಲೆಯ ಮಾನ್ವಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಎಂಟು ಮಕ್ಕಳಿಗೆ ಗಾಯಗಳಾಗಿದ್ದು ಮಾನ್ವಿ ಸರ್ಕಾರಿ ಆಸ್ಪತ್ರೆಗೆ ಮಕ್ಕಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂಞಚ್ ಸನ್ನಿಧಿ ಎಂಬ ವಿದ್ಯಾರ್ಥಿನಿಗೆ ಗಂಭೀರವಾದ ಗಯಗಳಾಗಿದ್ದು ಆಕೆಯನ್ನು ರಾಯಚೂರಿನ ಖಾಸಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೆನ್ನೆ ಸಂಜೆ ನಡೆದಿರುವ ಅಪಘಾತ ಇಂದು ತಳವಾಗಿ ಬೆಳಕಿಗೆ ಬಂದಿದೆ. ಮಾನ್ವಿ ಪಟ್ಟಣದ ಖಾಸಗಿ ಶಾಲೆಗೆ ಶಾಲಾ ವಾಹನ ಸೇರಿದೆ. ಮಕ್ಕಳನ್ನು ಬಿಟ್ಟು ಬರಲು ಕೊಟ್ನೆಕಲ್ ಗ್ರಾಮಕ್ಕೆ ಶಾಲಾ ವಾಹನ ತೆರುಳುತ್ತಿತ್ತು.ಸುಮಾರು 15ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಶಾಲಾ ಬಸ್ ಕರೆದುಕೊಂಡು ಹೋಗುತ್ತಿತ್ತು ಈ ವೇಳೆ ಟ್ರಕ್ ಓವರ್ಟೇಕ್ ಮಾಡಲು ಹೋಗಿ ಶಾಲಾ ಬಸ್ ಗೆ ಡಿಕ್ಕಿ ಹೊಡೆದಿದೆ. ಶಾಲಾ ಬಸ್ ಡಿಕ್ಕಿಯಾಗಿ ಎಂಟು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಮಾನ್ವಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಒಂದರ ಮೇಲೆ ಮೂವರು ವಿದ್ಯಾರ್ಥಿಗಳು ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಮರ್ಥ ಸುಖದೇವ್ ಅಪ್ಪಾಜಿಗೋಳ (20) ಎಂದು ತಿಳಿದುಬಂದಿದೆ. ಇನ್ನು ಬೈಕ್ ನಲ್ಲಿ ಇದ್ದಂತಹ ಇನ್ನಿಬ್ಬರು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿವೆ. ಚಿಕ್ಕೋಡಿ ಪಟ್ಟಣದಲ್ಲಿ ಮೂರು ಬೈಕ್ ಮೇಲೆ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಸಮರ್ಥ ಸ್ಥಳದಲ್ಲಿ ಸಾವನಪ್ಪಿದ್ದು, ಉಳಿದ ಇಬ್ಬರು ಸ್ನೇಹಿತರಾದ ಅರವಿಂದ ಶಂಕರ ಮ್ಯಾಗೇರಿ (19) ಹಾಗೂ ಸಚಿನ್ ಮಹಾಂತೇಶ್ ಬಡಕೆ (19) ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಬೆಳಗಾವಿಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ಪದವಿ ಓದುತ್ತಿದ್ದರು ಎಂದು ತಿಳಿದುಬಂದಿದೆ.

Read More

ಬೆಂಗಳೂರು : ವೇತನ, ಪಿಎಫ್ (ಪ್ರಾವಿಡೆಂಟ್ ಫಂಡ್), ಇಎಸ್ಐ ಮತ್ತು ಇತರ ಸವಲತ್ತುಗಳ ಪಾವತಿಯಲ್ಲಿ ವಿಳಂಬದ ಜೊತೆಗೆ ಕಡಿಮೆ ಪಾವತಿ ಮೂಲಕ ಹೊರಗುತ್ತಿಗೆ ಸಿಬ್ಬಂದಿಯನ್ನು ಖಾಸಗಿ ಏಜೆನ್ಸಿಗಳು ಶೋಷಣೆ ಮಾಡುತ್ತಿವೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು 2028ರ ವೇಳೆಗೆ ಸಂಪೂರ್ಣವಾಗಿ ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಬೇಡಿಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಹಾಗಾಗಿ ಡಿಸೆಂಬರ್ 8 ರಿಂದ ಆರಂಭವಾಗಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಸರ್ಕಾರ ಮಂಡಿಸಲು ತಯಾರಿ ನಡೆಸಿದೆ. ಖಾಸಗಿ ಹೊರಗುತ್ತಿಗೆ ಸಂಸ್ಥೆಗಳ ಜೊತೆಗಿನ ಎಲ್ಲಾ ವ್ಯವಸ್ಥೆ ಮತ್ತು ಒಪ್ಪಂದಗಳನ್ನು ಸರ್ಕಾರವು ಮಾರ್ಚ್ 31, 2028 ರೊಳಗೆ ಹಂತಹಂತವಾಗಿ ಕಡಿತಗೊಳಿಸಲಿದೆ. ಅಲ್ಲಿಯವರೆಗೆ, ಹೊರಗುತ್ತಿಗೆ ಪಡೆದ ಉದ್ಯೋಗಿಗಳನ್ನು ನಿರ್ವಹಿಸಲು ರಾಜ್ಯಾದ್ಯಂತ ‘ಬೀದರ್ ಮಾದರಿ’ಯನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

Read More

ಧಾರವಾಡ : ಕೊಲ್ಹಾಪುರದ ಕನ್ನೆರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗೆ ಧಾರವಾಡ ಜಿಲ್ಲೆಗೆ ನಿರ್ಬಂಧ ಹೇರಲಾಗಿತ್ತು. ಈ ವಿಚಾರವಾಗಿ ಶ್ರೀಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಕನ್ನೇರಿ ಮಠದ ಶ್ರೀಗಳಿಗೆ ಹಾಕಿದ್ದ ನಿರ್ಬಂಧ ತೆರವುಗೊಳಿಸಿ ಆದೇಶ ನೀಡಿದೆ. ಧಾರವಾಡ ಹೈಕೋರ್ಟ್ ಪೀಠ ಈ ಆದೇಶ ಪ್ರಕಟಿಸಿದ್ದು ಧಾರವಾಡ ಜಿಲ್ಲೆ ಪ್ರವೇಶ ನಿರ್ಬಂಧಿಸಿದಂತೆ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸಿದ್ದರು. ನವೆಂಬರ್ 5 ರಂದು ಹಳ್ಳಿಕೇರಿಯಲ್ಲಿ ಕಾರ್ಯಕ್ರಮ ನಿಗದಿಯಾಗಿತ್ತು. ಕನ್ಹೆರಿ ಕಾಡಸಿದ್ದೇಶ್ವರ ಶ್ರೀಗಳ ಕಾರ್ಯಕ್ರಮ ಇತ್ತು.ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಈ ವೇಳೆ ಜಿಲ್ಲಾಧಿಕಾರಿ ಕಾರ್ಯಕ್ರಮಕ್ಕೆ ಬರದಂತೆ ನಿರ್ಬಂಧ ವಿಧಿಸಿದ್ದರು. ಈ ಹಿನ್ನೆಲೆಯಲ್ಲಿ ಕನ್ನೇರಿ ಶ್ರೀಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನಿರ್ಬಂಧ ತೆರವು ಮಾಡಿ ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ದುಃಖ ಮೊದಲು ಕನ್ನೇರಿ ಶ್ರೀ ಗಳಿಗೆ ಲಿಂಗಾಯತ ಸಮುದಾಯದ ಕುರಿತು ಅವಹೇಳನ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಗೆ ನಿರ್ಬಂಧ ವಿಧಿಸಲಾಗಿತ್ತು ಈ ಕುರಿತು…

Read More

ಬೆಳಗಾವಿ : ರಾಜ್ಯದಲ್ಲೊಂದು ಮನಕಲಕುವ ಘಟನೆ ನಡೆದಿದ್ದು, ತಾಯಿಯೊಬ್ಬಳು ತನಗೆ 4ನೇ ಮಗುವು ಹೆಣ್ಣಾಗಿ ಹುಟ್ಟಿದ್ದರಿಂದ ಬೇಸರಗೊಂಡು ತಾಯಿಯೊಬ್ಬಳು ಹಸುಗೂಸನ್ನೇ ಕತ್ತು ಹಿಸುಕಿ ಕೊಂದು ಹಾಕಿರುವಂತ ಘಟನೆ ನಡೆದಿದೆ. ಬೆಳಗಾವಿಯಲ್ಲಿ ಹಸುಗೂಸನ್ನೇ ಪಾಪಿ ತಾಯಿಯೊಬ್ಬಳು ಕೊಂದು ಹಾಕಿದ್ದಾಳೆ. 3 ದಿನದ ಹೆಣ್ಣಮಗು ಕತ್ತು ಹಿಸುಕಿ ಕ್ರೂರಿ ತಾಯಿ ಕೊಂದು ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗದ ಹಿರೇಮುಲಂಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಶ್ವಿನಿ ಹಳಕಟ್ಟಿ(28) ಎಂಬುವರೇ ಹಸುಗೂಸು ಕೊಂದ ಪಾಪಿ ತಾಯಿಯಾಗಿದ್ದಾರೆ. ನವೆಂಬರ್ 23ರಂದು ಮುದಕವಿಯಲ್ಲಿ ಅಶ್ವಿನಿಗೆ ಹೆರಿಗೆಯಾಗಿತ್ತು. ಗಂಡು ಮಗು ನಿರೀಕ್ಷೆಯಲ್ಲಿದ್ದ ಅಶ್ವಿನಿಗೆ ಹೆಣ್ಣುಮಗು ಜನಿಸಿದ್ದರಿಂದ ನಿರಾಸೆಯಾಗಿತ್ತು. ಮಗಳು ಉಸಿರಾಡ್ತಿಲ್ಲ ಅಂತ ಡ್ರಾಮಾವನ್ನು ಅಶ್ವಿನಿ ಮಾಡಿ ಆಸ್ಪತ್ರೆಗೆ ಮಗು ತಂದಿದ್ದಾರೆ. ಈ ವೇಳೆ ಅಶ್ವಿನಿ ಉಸಿರುಗಟ್ಟಿಸಿ ಹಸುಗೂಸು ಕೊಂದಿರುವಂತ ಕೃತ್ಯ ಬೆಳಕಿಗೆ ಬಂದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ನಡೆದಿದ್ದ 7.11 ಕೋಟಿ ರೂ ದರೋಡೆ ಪ್ರಕರಣದಲ್ಲಿ ಪೊಲೀಸರು 7.01 ಕೋಟಿ (ಶೇ.98) ಹಣವನ್ನು ರಿಕವರಿ ಮಾಡಿದ್ದಾರೆ. ಈವರೆಗೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ತಂಡದ ಕಾರ್ಯವನ್ನು ಶ್ಲಾಘಿಸಿದ್ದು, ಹೆಚ್ಚುವರಿ ಬಹುಮಾನ ಘೋಷಿಸಿದ್ದಾರೆ. ಇನ್ನು CMS ಸಿಬ್ಬಂದಿ ವಿಚಾರಣೆ ವೇಳೆ ಮತ್ತೊಂದು ನಿರ್ಲಕ್ಷದ ಕುರಿತು ಬಯಲಾಗಿದೆ. ಹೌದು ಕೋಟ್ಯಾಂತರ ದರೋಡೆ ನಡೆದರೂ ಸಹ ಸಿಎಂಸಿ ಸಿಬ್ಬಂದಿಗಳಿಗೆ ಊಟವೆ ಮುಖ್ಯವಾಗಿತ್ತು. ಸಿದ್ದಾಪುರ ಠಾಣೆ ಪೊಲೀಸರು CMS ವಾಹನ ಸಿಬ್ಬಂದಿ ವಿಚಾರಣೆ ವೇಳೆ ಮತ್ತಷ್ಟು ಸಂಗತಿಗಳು ಬೆಳಕಿಗೆ ಬಂದಿವೆ. ಅಷ್ಟು ದೊಡ್ಡ ದರೋಡೆ ನಡೆದಿದ್ದರೂ ಸಿಬ್ಬಂದಿಗೆ ಊಟವೇ ಮುಖ್ಯವಾಗಿತ್ತು. ನ.19ರಂದು CMS ವಾಹನ ಅಡ್ಡಗಟ್ಟಿ 7.11 ಕೋಟಿ ರೂ ದರೋಡೆ ನಡೆದಿತ್ತು. ಇನ್ನೋವಾ ಕಾರಿನಲ್ಲಿ ಕಸ್ಟೋಡಿಯನ್, ಗನ್​ಮ್ಯಾನ್ ಕರೆದೊಯ್ದಿದ್ದರು. ಮಾರ್ಗಮಧ್ಯೆ ಕಸ್ಟೋಡಿಯನ್, ಗನ್​ಮ್ಯಾನ್ ಇಳಿಸಿ ಗ್ಯಾಂಗ್ ತೆರಳಿತ್ತು. ದರೋಡೆಕೋರರು ಇಳಿಸಿದ್ದ ಸ್ಥಳದಿಂದ ಠಾಣೆಗೆ ಕೂಗಳತೆ ದೂರದಲ್ಲಿದ್ದರು ಈ ಬಗ್ಗೆ CMS ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ ಎಂದು…

Read More

ತುಮಕೂರು : ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್​ನಿಂದ ಹೊರಬಂದು ಬಿಜೆಪಿಗೆ ಬಾಹ್ಯ ಬೆಂಬಲ ಕೊಟ್ಟರೆ ಒಪ್ಪುತ್ತೇವೆ. ಆದರೆ ಅವರನ್ನೇ ಮುಖ್ಯಮಂತ್ರಿ ಮಾಡುತ್ತೇವೆ ಎಂದರೆ ಅದು ಕೇಂದ್ರದ ನಿರ್ಧಾರಕ್ಕೆ ಬಿಟ್ಟ ವಿಚಾರ. ಅಲ್ಲದೇ ಕೇಂದ್ರದ ವರಿಷ್ಠರು ಅವರನ್ನೇ ಮುಖ್ಯಮಂತ್ರಿ ಮಾಡಲು ನಾವೇ ಡಿ.ಕೆ. ಶಿವಕುಮಾರ್​ಗೆ ಬಾಹ್ಯ ಬೆಂಬಲ ಕೊಡುತ್ತೇವೆ ಎಂದರೆ ನಾವು ಒಪ್ಪುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ತಿಳಿಸಿದರು. ಪ್ರಸ್ತುತ ಪರಿಸ್ಥಿತಿಯಲ್ಲಿ ಡಿಕೆ ಶಿವಕುಮಾರ್‌ ಕಾಂಗ್ರೆಸ್‌ ಪಕ್ಷ ಬಿಡುವುದಿಲ್ಲ. ನಾವು ಅವರೊಂದಿಗೆ ಸೇರಿ ಸರಕಾರವನ್ನೂ ಮಾಡಲ್ಲ. ಪಕ್ಷದಿಂದ ಹೊರಬಂದು ಚುನಾವಣೆ ಮಾಡುವುದು ಕಷ್ಟ. ಅಕಸ್ಮಾತ್ ಕೇಂದ್ರದವರು ಡಿ.ಕೆ. ಶಿವಕುಮಾರ್​ಗೆ ಮುಖ್ಯಮಂತ್ರಿ ಆಗಲು ಬಾಹ್ಯ ಬೆಂಬಲ ಕೊಡಿ ಎಂದರೆ ಅದಕ್ಕೆ ನಮ್ಮ ಯಾವುದೇ ತಕರಾರರಿಲ್ಲ ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಘನತೆ, ಗೌರವ, ಮಾನ, ಮರ್ಯಾದೆ ಇದೆಲ್ಲವೂ ಇದ್ದರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅವರು ಸರಕಾರ ವಿಸರ್ಜನೆ ಮಾಡಿ ಜನಾಶಿರ್ವಾದ ಪಡೆದುಕೊಂಡು ಬರಲಿ ಎಂದರು. 70 ಜನ ಶಾಸಕರು ಡಿ.ಕೆ. ಶಿವಕುಮಾರ್‌…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟ ನಡೆಯುತ್ತಿದ್ದು ಸದ್ಯ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಈ ವಿಚಾರವಾಗಿ ತೀವ್ರ ಜಟಾಪಟಿ ನಡೆಯುತ್ತಿದೆ. ಇದೀಗ ಇಂದು ಬೆಂಗಳೂರಲ್ಲಿ ಡಿಕೆ ಶಿವಕುಮಾರ್ ಅವರು ಸದಾಶಿವ ನಗರದಿಂದ ಕೆಂಪೇಗೌಡ ವಿಮಾನ ನಿಲ್ದಾಣದವರೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಒಂದೇ ಕಾರಿನಲ್ಲಿ ತೆರಳಿರುವುದು ಕುತೂಹಲ ಮೂಡಿಸಿದೆ. ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನೀವು ಯಾವುದಕ್ಕೂ ಆತಂಕ ಪಡಬೇಡಿ ಎಂದು ಅಭಯ ನೀಡಿದ್ದಾರೆ. ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ಸಂಗ್ರಹಿಸಿ ಎಂದು ದೆಹಲಿಗೆ ತೆರಳಿದ್ದು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಬಳಿಕ ನಿಮಗೆ ಅವರು ಕರೆ ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ರಾಹುಲ್ ಗಾಂಧಿ ಸಭೆ ಮಾಡಿದರೆ ನಾನು ಈ ವಿಚಾರವಾಗಿ ಚರ್ಚಿಸುತ್ತೇನೆ. ನಾಳೆ ಸಭೆ ಮಾಡಿದರೆ ಚರ್ಚಿಸುತ್ತೇನೆ ಇದು ಬಹಿರಂಗವಾಗಿ ಮಾತನಾಡುವ ವಿಷಯವಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ…

Read More