Author: kannadanewsnow05

ಬೆಂಗಳೂರು : ನಗರದ ಸುಂಕದಕಟ್ಟೆ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ಸಲ್ಲಾಪುರದಮ್ಮ ದೇವಾಲಯ ಟ್ರಸ್ಟ್ ಸದಸ್ಯರು ದೇವಸ್ಥಾನ ನಿರ್ಮಿಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿವಾದಿತ ಸ್ಥಳವನ್ನು ಸರ್ವೇ ನಡೆಸಿ ಮೂರುವಾರದಲ್ಲಿ ವಸ್ತುನಿಷ್ಠ ವರದಿ ಸಲ್ಲಿಸುವಂತೆ ಬೆಂಗಳೂರು ಜಿಲ್ಲಾಧಿಕಾರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತಂತೆ ಸುಂಕದಕಟ್ಟೆ ನಿವಾಸಿ ಸಿ. ಹೊನ್ನಯ್ಯ ಮತ್ತಿತರರು ಸಲ್ಲಿಸಿದ್ದ ಸಾರ್ವ ಜನಿಕ ಜನಿಕ ಹಿತಾಸಕಿ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ಜತೆಗೆ, ಪ್ರತಿವಾದಿಯಾಗಿರುವ ಸರ್ಕಾರ, ಬಿಬಿಎಂಪಿ ಹಾಗೂ ಸಲ್ಲಾಪುರದಮ್ಮ ದೇವಾಲಯ ಟ್ರಸ್ಟ್ ಸದಸ್ಯರಿಗೆ ನೋಟಿಸ್ ಜಾರಿಗೊಳಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸರ್ಕಾರಿ ರಸ್ತೆ ಒತ್ತುವರಿ ಮಾಡಿ ದೇವಸ್ಥಾನ ನಿರ್ಮಿಸುತ್ತಿದ್ದಾರೆ ಹಾಗೂ ಸಾರ್ವಜನಿಕರ ಓಡಾಟಕ್ಕೆ ರಸ್ತೆ ನಿರ್ಬಂಧಿಸಿ ದ್ದಾರೆ ಎಂದು ಪೀಠದ ಗಮನಕ್ಕೆ ತಂದರು..ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ದೇವಾ ಲಯ ನಿರ್ಮಿಸಲಾಗಿದೆಯೇ? ಸಾರ್ವಜನಿಕ…

Read More

ಬೆಂಗಳೂರು: ರಾಮಲಲ್ಲಾ ಪ್ರತಿಷ್ಠಾಪನೆಗೆ ಆಮಂತ್ರಣ ನೀಡಿದರೂ ಹೋಗುವುದಿಲ್ಲ ಎಂಬ ತೀರ್ಮಾನ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಇಡೀ ದೇಶವೇ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿದೆ. ರಾಮರಾಜ್ಯ ಹಾಗೂ ರಾಮನ ಕನಸು ನನಸಾಗಬೇಕಿದೆ. ಅಂತಹ ಸಂದರ್ಭದಲ್ಲಿ ಕಾಂಗ್ರೆಸ್‌ ಕೈಗೊಂಡ ನಿರ್ಧಾರವನ್ನು ನಾನು ಖಂಡಿಸುತ್ತೇನೆ’ ಎಂದರು. ‘ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅಂತಹವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪಪಡುತ್ತಾರೆ’ ಎಂದು ಹೇಳಿದರು. ಇಲ್ಲಿಯವರೆಗೆ ಜಾತ್ಯತೀತತೆಯ ಮುಖವಾಡ ಹಾಕಿದ್ದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ರಾಮಲಲ್ಲಾ ಪ್ರತಿಷ್ಠಾಪನೆ ಆಹ್ವಾನ ತಿರಸ್ಕರಿಸುವ ಮೂಲಕ ಅದು ಮತೀಯವಾದಿ ಪಕ್ಷ ಎಂಬುದು ಸಾಬೀತಾಗಿದೆ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ರಾಮಮಂದಿರ ನಿರ್ಮಿಸಲಾಗಿದೆ.…

Read More

ಶಿವಮೊಗ್ಗ : ಅಯ್ಯೋ ದೆಹಲಿಯಲ್ಲಿ ಜನವರಿ 22ರಂದು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಹ್ವಾನವನ್ನು ತಿರಸ್ಕರಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ ಈ ಒಂದು ರಾಮಮಂದಿರ ನಿರ್ಮಾಣದ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಸರ್ಕಾರದ 5ನೇ ಗ್ಯಾರಂಟಿ ಯೋಜನೆಯದ ಯುವನಿಧಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ತೆರಳುವ ಮುನ್ನ ವಿಮಾ ಶಿವಮೊಗ್ಗ ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾವು ಕೂಡ ಶ್ರೀರಾಮ ಭಕ್ತರು ಆದರೆ ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಿಸಿ ರಾಜಕೀಯ ಮಾಡೋದಕ್ಕೆ ಹೊರಟಿದ್ದಾರೆ. ನಾವು ಧಾರ್ಮಿಕ ವಿಷಯಗಳಲ್ಲಿ ರಾಜಕೀಯ ವಿರೋಧಿಸುತ್ತಿವೆ ಹೊರತು ಶ್ರೀ ರಾಮನನ್ನು ವಿರೋಧಿಸಿಲ್ಲ.ನಾನು ಕೂಡ ಶ್ರೀರಾಮನ ಭಕ್ತ ಆದ್ದರಿಂದ ನಾನು ಹೋಗಿ ನೋಡಿಕೊಂಡು ಬರುತ್ತೇನೆ 22 ರಂದು ರಾಜ್ಯದಲ್ಲಿ ನಮ್ಮ ಎಲ್ಲ ಕಾರ್ಯಕರ್ತರು ಎಲ್ಲ ಶ್ರೀ ರಾಮನ ಮಂದಿರಕ್ಕೆ ಪೂಜೆ ಸಲ್ಲಿಸುತ್ತಾರೆ. ಬಿಜೆಪಿಯವರು ಕೇವಲ ರಾಜಕೀಯ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು ಏಳು ಜನರನ್ನು ಪೆಡ್ಲರ್ ಗಳನ್ನು ಸಿಸಿಬಿ ಅಧಿಕಾರಿಗಳು ಇದೀಗ ಬಂದಿಸಿ ಸುಮಾರು 1.66 ಕೋಟಿ ರೂಪಾಯಿ ಡ್ರಗ್ಸ್ ಅನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರಲ್ಲಿ ವಿದೇಶಿಗರು ಸೇರಿ 7 ಡ್ರಗ್ ಪೆಡ್ಲರ್ ಗಳ ಬಂಧನವಾಗಿದ್ದು, ಕಳೆದ ಒಂದು ವಾರದಿಂದ ಬೆಂಗಳೂರಿನ ವಿವಿಧೆಡೆ ಕಾರ್ಯಾಚರಣೆ ಮಾಡಲಾಗಿದ್ದು, ಗಿರಿನಗರ, ಮಡಿವಾಳ,ಚಿಕ್ಕಜಾಲ, ಆರ್ ಟಿ ನಗರ ಬೈಯಪ್ಪನಹಳ್ಳಿ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು ಬಂದಿತರ ವಿರುದ್ಧ ಒಟ್ಟು ಐದು ಪ್ರಕರಣಗಳನ್ನು ಸಿಸಿಬಿ ದಾಖಲಿಸಿದೆ. ಏಳು ಜನ ಬಂದಿದ್ದರಲ್ಲಿ ಕೆಲವರು ವಿದೇಶಿ ಪೆಡ್ಲರ್ ಗಳು ಸೇರಿದ್ದು, ಬಂದಿದರಿಂದ ಸುಮಾರು ಒಂದುವರಿ ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿಕೊಂಡು ಇದೀಗ ಏಳು ಜನರ ವಿರುದ್ಧ ಸುಮಾರು ಐದು ಪ್ರಕರಣಗಳನ್ನು ಸಿಸಿಬಿ ಅಧಿಕಾರಿಗಳು ದಾಖಲಿಸಿದ್ದಾರೆ.

Read More

ಬೆಳಗಾವಿ : ಸ್ಕೂಟಿ ಕಿ ಕೊಡಲಿಲ್ಲವೆಂದು ಕೋಪಗೊಂಡು ಚಿಕ್ಕಮ್ಮನನ್ನೇ ಮಗನೊಬ್ಬ ರಾಡ್ ನಿಂದ ತಲೆಗೆ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ನಡೆದಿದೆ. ಜನವರಿ 8ರಂದು ಈ ಘಟನೆ ಸಂಭವಿಸಿದ್ದು, ಮಗನಿಂದ ಹತ್ಯೆಗೆ ಒಳಗಾದ ಚಿಕ್ಕಮ್ಮನನ್ನು ಮಂಗಳ ಸಾವರ್ಡ್ಕರ್ ಎಂದು ಹೇಳಲಾಗುತ್ತಿದ್ದು, ಆರೋಪಿ ಸಂಜಯ್ ಸವಾಡ್ಕರ್ ಚಿಕ್ಕಮ್ಮನ ಬಳಿ ಸ್ಕೂಟಿ ಕಿ ಕೇಳಿದ್ದಾನೇ ಆಗ ಚಿಕ್ಕಮ್ಮ ಸ್ಕೂಟಿ ಕಿ ಕೊಡಲವೆಂದು ತಿಳಿಸಿದಾಗ ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯದು ವಿಕೋಪಕ್ಕೆ ತಿರುಗಿದಾಗ ಸಂಜಯ್ ಅಲ್ಲೇ ಇದ್ದ ರಾಡ್ ನಿಂದ ಚಿಕ್ಕಮಗೆ ತಲೆಗೆ ಬಲವಾಗಿ ಹೊಡೆದಿದ್ದಾನೆ. ಚಿಕ್ಕಮ್ಮಗೆ ಬಲವಾಗಿ ಹೊಡೆದ ನಂತರ ಸಂಜಯ್ ಅಲ್ಲಿಂದ ಕಾಲ್ ಕಿತ್ತಿದ್ದಾನೆ ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಸಂಜಯ್, ತನ್ನ ಚಿಕ್ಕಮ್ಮನ ಬಳಿ ಸ್ಕೂಟಿ ಕಿ ಸಲುವಾಗಿ ಜಗಳ ತೆಗೆದು ಈ ರೀತಿ ಕೊಲೆ ಮಾಡಿದ್ದಾನೆ. ಇದೀಗ ಅಥಣಿ ಪೊಲೀಸ್ ಠಾಣೆಯಲ್ಲಿ ಕಡಿಮೆ ಕುರಿತು…

Read More

ಬೆಂಗಳೂರು : ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂ ಗೆ ಇಮೇಲ್ ಮುಖಾಂತರ ಉಸಿಬಾಂಬ್ ಬೆದರಿಕೆ ಸಂದೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಪೊಲೀಸರ ಪರಿಶೀಲನೆ ಬಳಿಕ ಹುಸಿ ಮೇಲ್ ಎಂಬುದು ಪತ್ತೆಯಾಗಿದೆ. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು ಉಗ್ರ ಸಂಘಟನೆ ಹೆಸರನ್ನು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು‘ Morgue999lol’ ಎಂಬ ಮೇಲ್ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ ಹೆಸರನ್ನು ಉಲ್ಲೇಖಿಸಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದರು. ಈ ಘಟನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮ್ಯೂಸಿಯಂಗೆ ಡಾಗ್ ಸ್ಕ್ವಾಡ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದಾದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ…

Read More

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಇವನಿಗೆ ಯೋಜನೆಗೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ . ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಸಚಿವರು ಭಾಗಿಯಾಗಲಿದ್ದಾರೆ. ಈ ಕುರಿತಂತೆ ಕೌಶಲ್ಯ ಅಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾವು ನುಡಿದಂತೆ ನಡೆಯುತ್ತಿರುವುದಕ್ಕೆ ಬಿಜೆಪಿಗೆ ಹೊಟ್ಟೆಕಿಚ್ಚು. ಯುವನಿಧಿ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂದು ಅವರು ತಿಳಿಸಿದರು. ರಾಜ್ಯದ ಯುವಜನರ ಹಿತಕ್ಕಾಗಿ ಈ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ.ಬಿಜೆಪಿ ಅಧಿಕಾರದಲ್ಲಿದ್ದಾಗ ಅಕ್ರಮ ಭ್ರಷ್ಟಾಚಾರದಲ್ಲಿ ಮುಳುಗಿದ್ದರು. ನಿರುದ್ಯೋಗ ದೇಶದ ಬಹುದೊಡ್ಡ ಸಮಸ್ಯೆ ಮೋದಿ ಸರ್ಕಾರ ನಿರುದ್ಯೋಗ ನಿವಾರಣೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ನಿರುದ್ಯೋಗ ನಿವಾರಣೆಗೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ನಿರುದ್ಯೋಗಿ ಬತ್ತೆ ಜೊತೆಗೆ ನಾವು ತರಬೇತಿಯನ್ನು ಕೂಡ ನೀಡುತ್ತೇವೆ ಕಲಿಕೆಯ ಜೊತೆಗೆ ಕೌಶಲ್ಯ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ

Read More

ಹಾಸನ : ಹುಟ್ಟುಹಬ್ಬ ಆಚರಿಸಿಕೊಳ್ಳಲು ಜಾಲಿ ರೈಡ್ ಮಾಡುತ್ತಿದ್ದ ಯುವಕರ ಕಾರು ಒಂದು ಅಪಘಾತಕ್ಕೆ ಈಡಾಗಿ ಜಮೀನಿನಲ್ಲಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಬರ್ತಡೇ ಸೆಲೆಬ್ರೇಶನ್ ವೇಳೆ ಯುವಕರು ಜಾಲಿ ರೈಡ್ ಹೋಗುವಾಗ ಅಪಘಾತ ನಡೆದಿದು, ಕಾರಿನಲ್ಲಿದ್ದ ರಕ್ಷಿತ್(24) ಕುಶಾಲ್ (22) ಮೃತ ದುರ್ದೈವಿಗಳೇ ಆಗಿದ್ದಾರೆ.ಅಪಘಾತವು ಹಾಸನ ತಾಲೂಕಿನ ಮಡೆನೂರು ಬಳಿ ನಿನ್ನೆ ರಾತ್ರಿ ನಡೆದ ಘಟನೆಯಾಗಿದೆ. ಯುವಕರು ಜಾಲಿ ರೈಡ್ ಮಾಡುವ ವೇಳೆ ಎಲೆಕ್ಟ್ರಿಕ್ ಪೋಲ್ ಗೆ ಡಿಕ್ಕಿ ಹೊಡೆದು ಜಮೀನಿನಲ್ಲಿ ಕಾರು ಉರುಳಿ ಬಿದ್ದಿದೆ.ರಕ್ಷಿತ್ ಸ್ಥಳದಲ್ಲಿ ಸಾವನ್ನಪ್ಪಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದ ಕುಶಾಲ್ ಕೊನೆಯುಸಿರೆಳಿದಿದ್ದಾನೆ. ಅಭಿಷೇಕ್, ಅಮಿ ಶಾಂತ ಮಂಜುನಾಥ್, ಎಂಬವರಿಗೆ ಗಂಭೀರವಾದಂತಹ ಗಾಯಗಳಾಗಿವೆ.ಗಯಾಳುಗಳಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹುಟ್ಟು ಹಬ್ಬದ ಆಚರಣೆಗೆ ಬಂದಿದ್ದ ಚಿನ್ನರಾಯಪಟ್ಟಣದ ಯುವಕರು ಎಂದು ಹೇಳಲಾಗುತ್ತಿದ್ದು ಗಿರೀಶ್ ಎಂಬುವವರಿಂದ ಕುಶಾಲ್ ಕಾರು ಪಡೆದುಕೊಂಡು ಬಂದಿದ್ದರು ಎನ್ನಲಾಗಿದೆ.ಅಪಘಾತದಲ್ಲಿ ಡಿಕ್ಕಿ ರಭಸಕ್ಕೆ ಕಾರು…

Read More

ಬೆಂಗಳೂರು : ಲೋಕಸಭೆ ಚುನಾವಣೆ ಇನ್ನೇನು ಸಮೀಪಿಸುತ್ತಿದ್ದು ಬಿಜೆಪಿ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿದ್ದು ಕಾಂಗ್ರೆಸ್ ಕೂಡ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ.ಈ ಹಿನ್ನೆಲೆಯಲ್ಲಿ ನಿನ್ನೆ ವರಿಷ್ಠರ ಕರೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಚಿವರು ದೆಹಲಿಗೆ ತೆರಳಿದ್ದು, ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕೆಲವು ಸಚಿವರಿಗೆ ಕೂಡ ಲೋಕಸಭೆಯ ಟಿಕೆಟ್ ನೀಡುವುದರ ಕುರಿತು ಚರ್ಚಿಸಲಾಯಿತು. ಈ ವಿಷಯದ ಕುರಿತಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಮಾತನಾಡಿ, ಎಂಪಿ ಚುನಾವಣೆಯನ್ನು ಜವಾಬ್ದಾರಿಯಿಂದ ನಿರ್ವಹಿಸಲು ಸೂಚಿಸಿದ್ದಾರೆ.ಒಂದು ವೇಳೆ ಎಂಪಿ ಚುನಾವಣೆಯಲ್ಲಿ ಸೋತರೆ ಇಲ್ಲದಿದ್ದರೆ ಸಚಿವರ ತಲೆದಂಡವು ಆಗಲಿದೆ ಎಂದು ಎಚ್ಚರಿಸಿದ್ದಾರೆ ಎಂದು ತಿಳಿಸಿದರು. ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಗೆ ಬಂದರೆ ಅಭ್ಯಂತರ ಇಲ್ಲ ಎಂದು ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಆದರೆ ಟಿಕೆಟ್ ವಿಚಾರದಲ್ಲಿ ಕೆಲ ಮಾನದಂಡ ಅನ್ವಯವಾಗಲಿದೆ. ಒಬ್ಬ ಮುಖಂಡ ಬರುತ್ತಾರೆಂದರೆ ಅದನ್ನೇ ನಾವು ನಿರೀಕ್ಷೆ ಮಾಡಿರುತ್ತೇವೆ.ಮುದ್ದ ಹನುಮಗೌಡ ನನ್ನನ್ನು ಮತ್ತು ಪಕ್ಷದ ಅಧ್ಯಕ್ಷರನ್ನು ಭೇಟಿಯಾಗಿದ್ದರು. ಮುದ್ದಹನುಮೇಗೌಡ…

Read More

ಬೆಂಗಳೂರು : ನಟ ದರ್ಶನ್ ಅವರು ನಟಿಸಿದ ಕಾಟೇರ ಚಿತ್ರ ಇತ್ತೀಚಿಗೆ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಗೊಳ್ಳುತ್ತಿದೆ ಈ ಹಿನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಒರಿಯನ್ ಮಾಲ್ ಎದುರುಗಡೆ ಇರುವ ಜೆಟ್ ಲಾಗ್ ಪಬ್ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯ ಪೊಲೀಸರು ನಟ ದರ್ಶನ್ ಸೇರಿದಂತೆ ಎಂಟು ಜನರಿಗೆ ನೋಟಿಸ್ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಮಣ್ಯ ಪೊಲೀಸ್ ಠಾಣೆ ಅಧಿಕಾರಿಗಳು ನಟ ದರ್ಶನ್ ಇಂದು ವಿಚಾರಣೆಗೆ ನಡೆದರ್ಶನ್ ಹಾಜರಾಗುವ ಸಾಧ್ಯತೆ ಎನ್ನಲಾಗುತ್ತಿದೆ ದರ್ಶನ್ ಸೇರಿ 8 ಸೆಲೆಬ್ರೆಟಿಗಳಿಗೆ ಪೊಲೀಸರಿಂದ ನೋಟಿಸ್ ನೀಡಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ನಗರದ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿತ್ತು. ವಿದೇಶದಿಂದ ದರ್ಶನ್, ನೀನಾಸಂ ಸತೀಶ್,ಡಾಲಿ ಧನಂಜಯ್, ಹರಿಕೃಷ್ಣ, ರಾಕ್ ಲೈನ್ ವೆಂಕಟೇಶ್, ಚಿಕ್ಕಣ್ಣ ಮತ್ತು ಅಭಿಷೇಕ್ ಅಂಬರೀಶ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಆದರೆ ಚಿತ್ರ ಯಶಸ್ವಿಯಾಗಿದ್ದಕ್ಕೆ ಸಂಭ್ರಮಾಚರಣೆಗೆ ಚಿತ್ರತಂಡವು ಕೆಲವು ದಿನಗಳ…

Read More