Author: kannadanewsnow05

ಹಾಸನ : ಹುಟ್ಟುಹಬ್ಬ ಆಚರಿಸಿಕೊಳ್ಳಲು ಜಾಲಿ ರೈಡ್ ಮಾಡುತ್ತಿದ್ದ ಯುವಕರ ಕಾರು ಒಂದು ಅಪಘಾತಕ್ಕೆ ಈಡಾಗಿ ಜಮೀನಿನಲ್ಲಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಬರ್ತಡೇ ಸೆಲೆಬ್ರೇಶನ್ ವೇಳೆ ಯುವಕರು ಜಾಲಿ ರೈಡ್ ಹೋಗುವಾಗ ಅಪಘಾತ ನಡೆದಿದು, ಕಾರಿನಲ್ಲಿದ್ದ ರಕ್ಷಿತ್(24) ಕುಶಾಲ್ (22) ಮೃತ ದುರ್ದೈವಿಗಳೇ ಆಗಿದ್ದಾರೆ.ಅಪಘಾತವು ಹಾಸನ ತಾಲೂಕಿನ ಮಡೆನೂರು ಬಳಿ ನಿನ್ನೆ ರಾತ್ರಿ ನಡೆದ ಘಟನೆಯಾಗಿದೆ. ಯುವಕರು ಜಾಲಿ ರೈಡ್ ಮಾಡುವ ವೇಳೆ ಎಲೆಕ್ಟ್ರಿಕ್ ಪೋಲ್ ಗೆ ಡಿಕ್ಕಿ ಹೊಡೆದು ಜಮೀನಿನಲ್ಲಿ ಕಾರು ಉರುಳಿ ಬಿದ್ದಿದೆ.ರಕ್ಷಿತ್ ಸ್ಥಳದಲ್ಲಿ ಸಾವನ್ನಪ್ಪಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದ ಕುಶಾಲ್ ಕೊನೆಯುಸಿರೆಳಿದಿದ್ದಾನೆ. ಅಭಿಷೇಕ್, ಅಮಿ ಶಾಂತ ಮಂಜುನಾಥ್, ಎಂಬವರಿಗೆ ಗಂಭೀರವಾದಂತಹ ಗಾಯಗಳಾಗಿವೆ.ಗಯಾಳುಗಳಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹುಟ್ಟು ಹಬ್ಬದ ಆಚರಣೆಗೆ ಬಂದಿದ್ದ ಚಿನ್ನರಾಯಪಟ್ಟಣದ ಯುವಕರು ಎಂದು ಹೇಳಲಾಗುತ್ತಿದ್ದು ಗಿರೀಶ್ ಎಂಬುವವರಿಂದ ಕುಶಾಲ್ ಕಾರು ಪಡೆದುಕೊಂಡು ಬಂದಿದ್ದರು ಎನ್ನಲಾಗಿದೆ.ಅಪಘಾತದಲ್ಲಿ ಡಿಕ್ಕಿ ರಭಸಕ್ಕೆ ಕಾರು…

Read More

ಬೆಂಗಳೂರು : ಲೋಕಸಭೆ ಚುನಾವಣೆ ಇನ್ನೇನು ಸಮೀಪಿಸುತ್ತಿದ್ದು ಬಿಜೆಪಿ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿದ್ದು ಕಾಂಗ್ರೆಸ್ ಕೂಡ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ.ಈ ಹಿನ್ನೆಲೆಯಲ್ಲಿ ನಿನ್ನೆ ವರಿಷ್ಠರ ಕರೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಚಿವರು ದೆಹಲಿಗೆ ತೆರಳಿದ್ದು, ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕೆಲವು ಸಚಿವರಿಗೆ ಕೂಡ ಲೋಕಸಭೆಯ ಟಿಕೆಟ್ ನೀಡುವುದರ ಕುರಿತು ಚರ್ಚಿಸಲಾಯಿತು. ಈ ವಿಷಯದ ಕುರಿತಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಮಾತನಾಡಿ, ಎಂಪಿ ಚುನಾವಣೆಯನ್ನು ಜವಾಬ್ದಾರಿಯಿಂದ ನಿರ್ವಹಿಸಲು ಸೂಚಿಸಿದ್ದಾರೆ.ಒಂದು ವೇಳೆ ಎಂಪಿ ಚುನಾವಣೆಯಲ್ಲಿ ಸೋತರೆ ಇಲ್ಲದಿದ್ದರೆ ಸಚಿವರ ತಲೆದಂಡವು ಆಗಲಿದೆ ಎಂದು ಎಚ್ಚರಿಸಿದ್ದಾರೆ ಎಂದು ತಿಳಿಸಿದರು. ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಗೆ ಬಂದರೆ ಅಭ್ಯಂತರ ಇಲ್ಲ ಎಂದು ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಆದರೆ ಟಿಕೆಟ್ ವಿಚಾರದಲ್ಲಿ ಕೆಲ ಮಾನದಂಡ ಅನ್ವಯವಾಗಲಿದೆ. ಒಬ್ಬ ಮುಖಂಡ ಬರುತ್ತಾರೆಂದರೆ ಅದನ್ನೇ ನಾವು ನಿರೀಕ್ಷೆ ಮಾಡಿರುತ್ತೇವೆ.ಮುದ್ದ ಹನುಮಗೌಡ ನನ್ನನ್ನು ಮತ್ತು ಪಕ್ಷದ ಅಧ್ಯಕ್ಷರನ್ನು ಭೇಟಿಯಾಗಿದ್ದರು. ಮುದ್ದಹನುಮೇಗೌಡ…

Read More

ಬೆಂಗಳೂರು : ನಟ ದರ್ಶನ್ ಅವರು ನಟಿಸಿದ ಕಾಟೇರ ಚಿತ್ರ ಇತ್ತೀಚಿಗೆ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಗೊಳ್ಳುತ್ತಿದೆ ಈ ಹಿನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಒರಿಯನ್ ಮಾಲ್ ಎದುರುಗಡೆ ಇರುವ ಜೆಟ್ ಲಾಗ್ ಪಬ್ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯ ಪೊಲೀಸರು ನಟ ದರ್ಶನ್ ಸೇರಿದಂತೆ ಎಂಟು ಜನರಿಗೆ ನೋಟಿಸ್ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಮಣ್ಯ ಪೊಲೀಸ್ ಠಾಣೆ ಅಧಿಕಾರಿಗಳು ನಟ ದರ್ಶನ್ ಇಂದು ವಿಚಾರಣೆಗೆ ನಡೆದರ್ಶನ್ ಹಾಜರಾಗುವ ಸಾಧ್ಯತೆ ಎನ್ನಲಾಗುತ್ತಿದೆ ದರ್ಶನ್ ಸೇರಿ 8 ಸೆಲೆಬ್ರೆಟಿಗಳಿಗೆ ಪೊಲೀಸರಿಂದ ನೋಟಿಸ್ ನೀಡಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ನಗರದ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿತ್ತು. ವಿದೇಶದಿಂದ ದರ್ಶನ್, ನೀನಾಸಂ ಸತೀಶ್,ಡಾಲಿ ಧನಂಜಯ್, ಹರಿಕೃಷ್ಣ, ರಾಕ್ ಲೈನ್ ವೆಂಕಟೇಶ್, ಚಿಕ್ಕಣ್ಣ ಮತ್ತು ಅಭಿಷೇಕ್ ಅಂಬರೀಶ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಆದರೆ ಚಿತ್ರ ಯಶಸ್ವಿಯಾಗಿದ್ದಕ್ಕೆ ಸಂಭ್ರಮಾಚರಣೆಗೆ ಚಿತ್ರತಂಡವು ಕೆಲವು ದಿನಗಳ…

Read More

ಬೆಂಗಳೂರು : ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯು ದಕ್ಷಿಣ ಯಾತ್ರಾ ಯೋಜನೆ ಆರಂಭಿಸಿದ್ದು, ದಕ್ಷಿಣ ಭಾರತದ ಪ್ರಸಿದ್ಧ ತೀರ್ಥಕ್ಷೇತ್ರಗಳಿಗೆ ಈ ಯಾತ್ರೆ ನಡೆಯಲಿದೆ. ಆಸಕ್ತರು ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡಬಹುದಾಗಿದ್ದು, ಯಾತ್ರಿಕರಿಗೆ ಸಬ್ಸಿಡಿ ಆಫರ್ ಕೂಡ ನೀಡಲಾಗಿದೆ. ದಕ್ಷಿಣ ತೀರ್ಥಕ್ಷೇತ್ರಗಳಿಗೆ ನಡೆಯು ಯಾತ್ರೆಗೆ ಧಾರ್ಮಿಕ ದತ್ತಿ ಇಲಾಖೆ ಟಿಕೆಟ್ ಬುಕ್ಕಿಂಗ್ ಆರಂಭಿಸಿದ್ದು, ಆಸಕ್ತ ಜನರು IRCTC ರೈಲ್ವೇ ಆ್ಯಪ್ ಮೂಲಕ ಆನ್​ಲೈನ್​ನಲ್ಲಿ ಟಿಕೆಟ್ ಬುಕ್ ಮಾಡಬಹುದು. ಮೊದಲ ಹಂತದಲ್ಲಿ ಎರಡು ರೈಲುಗಳಲ್ಲಿ ದಕ್ಷಿಣ ಯಾತ್ರೆ ನಡೆಯಲಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ ಹಾಗೂ ತಿರುವನಂತಪುರಂನಲ್ಲಿರುವ ತೀರ್ಥ ಕ್ಷೇತ್ರಗಳ ದರ್ಶನ ಮಾಡಿಸುವ ಯಾತ್ರೆ ಇದಾಗಿದೆ. ಬೆಳಗಾವಿ, ಹುಬ್ಬಳ್ಳಿ, ಬೀರೂರು, ತುಮಕೂರು, ಹಾವೇರಿ, ದಾವಣಗೆರೆ, ಯಶವಂತಪುರ ನಿಲ್ದಾಣಗಳಿಂದ ಯಾತ್ರಿಕರು ರೈಲು ಹತ್ತಬಹುದು. ದಕ್ಷಿಣ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಒಟ್ಟು ಆರು ದಿನಗಳ ಯಾತ್ರೆ ನಡೆಯಲಿದೆ. ಇದಕ್ಕೆ ಒಟ್ಟು ತಗಲುವ ವೆಚ್ಚ 15 ಸಾವಿರ ರೂಪಾಯಿ ಆಗಿದ್ದು, ಸರ್ಕಾರದಿಂದ 5 ಸಾವಿರ ರೂಪಾಯಿ ಸಬ್ಸಿಡಿ…

Read More

ನಮಗೆಲ್ಲಾ ತಿಳಿದಿರುವ ಹಾಗೆ ಅಯೋಧ್ಯೆಯ ರಾಮಮಂದಿರದ ಮಂತ್ರಾಕ್ಷತೆ ದೇಶದ ಪ್ರತಿಯೊಂದು ಹಿಂದೂವಿನ ಮನೆ ತಲುಪಿದೆ ಇನ್ನು ಕೆಲವು ಮನೆಗೆ ತಲುಪಬೇಕಿದೆ. ಮಂತ್ರಾಕ್ಷತೆ ಸಿಕ್ಕಿದ ಬಳಿಕ ಅದನ್ನು ನಾವು ಈಗಲೇ ಉಪಯೋಗ ಮಾಡುವಂತಿಲ್ಲ. ಜನವರಿ 22ನೇ ತಾರಿಕಿನ ವರೆಗೆ ತಮ್ಮತಮ್ಮ ದೇವರ ಸ್ಟಾಂಡ್ ಲ್ಲಿ ಅಥವಾ ದೇವರಕೋಣೆಯಲ್ಲಿ ಇಡಬೇಕು. ದಿನನಿತ್ಯ ದೇವರಿಗೆ ಪೂಜೆ ಮಾಡುವಾಗ ಆ ಮಂತ್ರಾಕ್ಷತೆಗೂ ಪೂಜೆ ಸಲ್ಲಿಸಬೇಕು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ…

Read More

ಶಿವಮೊಗ್ಗ : ರಾಜ ಕಾಂಗ್ರೆಸ್ ಸರ್ಕಾರದ ಪ್ರಮುಖವಾದ ಐದನೇ ಹಾಗೂ ಕೊನೆಯ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗುತ್ತಿದ್ದು, ಈ ವೇಳೆ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಮಾತನಾಡಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನಮ್ಮ ಸರ್ಕಾರದ ಯೋಜನೆಗಳು ತಲುಪಿವೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಎಂಬ ಬಿಜೆಪಿ ನಾಯಕರು ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೆರೆಯ ನೀರು ಕೆರೆಗೆ ಚೆಲ್ಲುವಂತೆ ಶರಣರು ಹೇಳಿದ್ದಾರೆ. ಅದೇ ರೀತಿಯಾಗಿ ಸರ್ಕಾರದ ದುಡ್ಡು ಇದು.ಯಾರದೋ ದುಡ್ಡು ಅಲ್ಲ ಸಾರ್ವಜನಿಕರ ದುಡ್ಡು ಇದು.ರಾಜ್ಯದ ಬೊಕ್ಕಸದಲ್ಲಿ ಇರುವಂತಹ ಬಡವರ ಹಣ . ಈ ಹಣ ಬಡವರಿಗೆ ಸೇರಬೇಕು. ಕರ್ನಾಟಕ ರಾಜ್ಯದಲ್ಲಿ ಸುಮಾರು 58000 ಕೋಟಿ ನಮ್ಮ ಪಕ್ಷದ ಸಿಂಹ ಪಾಲನ್ನು ಬಡವರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ನಿಸ್ವಾರ್ಥತೆಯಿಂದ ಕಟ್ಟಕಡೆಯ ಸಾಮಾನ್ಯ ವ್ಯಕ್ತಿಗೂ ಹಣ ತಲುಪಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ ಎಂದು ಅವರು…

Read More

ಬೆಂಗಳೂರು : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಭಯಾನಕ ವರದಿಯೊಂದು ಬಹಿರಂಗವಾಗಿದ್ದು, ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (ಆರ್‌ಸಿಎಚ್) ಪೋರ್ಟಲ್ ಪ್ರಕಾರ, 2023ರ ಜನವರಿಯಿಂದ ನವೆಂಬರ್ ವರೆಗಿನ 11 ತಿಂಗಳಲ್ಲಿ ರಾಜ್ಯದ 28,657 ಬಾಲಕಿಯರು ಗರ್ಭಿಣಿಯರು ಆಗಿದ್ದಾರೆ ಎಂಬ ಭಯಾನಕ ವರದಿ ಬಹಿರಂಗವಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ, 2,815 ಬಾಲಗರ್ಭಿಣಿಯರು ಬೆಂಗಳೂರಿನಲ್ಲಿದ್ದರೆ, ಬೆಳಗಾವಿ ಜಿಲ್ಲೆಯಲ್ಲಿ 2,254 ಮಂದಿ ಗರ್ಭಿಣಿಯರು ಇದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 2,004 ಬಾಲಕಿಯರು ಗರ್ಭಿಣಿಯರಾಗಿದ್ದರೆ, ಅತೀ ಕಡಿಮೆ ಅಂದರೆ, 56 ಪ್ರಕರಣಗಳು ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿವೆ. ಬಾಲಕಿಯರು ಗರ್ಭಿಣಿ ಆಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪೋಕ್ಸೆ ಕಾಯ್ದೆ 2012 ಸೆಕ್ಷನ್ 19ರಡಿ ಪೊಲೀಸ್‌ ಠಾಣೆಗೆ ದೂರು ನೀಡಬೇಕಿತ್ತು. ಆದರೆ, ಈ ಕೆಲಸ ನಡೆದಿಲ್ಲ’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸುದ್ದಿ ಮಾಧ್ಯಮ ಒಂದಕ್ಕೆ ತಿಳಿಸಿದರು. ರಾಜ್ಯದಲ್ಲಿ…

Read More

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು ಮತ್ತೆ ಇದೀಗ ರಾಜ್ಯ ರಾಜಧಾನಿಯಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು 9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಖಾಸಗಿ ಬಸ್ ಕ್ಲೀನರ್ ಒಬ್ಬ ಅತ್ಯಾಚಾರ ಎಸಿಗಿರುವಂತಹ ಘಟನೆ ಜರುಗಿದೆ. ಖಾಸಗಿ ಬಸ್ ಕ್ಲೀನರ್ ನಿಂದ 9ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಅತ್ಯಾಚಾರ ಆರೋಪಿ ದೊಡ್ಡಬಳ್ಳಾಪುರದ ಆನಂದ್ (24)ಎಂದು ಹೇಳಲಾಗುತ್ತಿದ್ದು ತಕ್ಷಣ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಕಳೆದ ಒಂದು ವಾರದ ಹಿಂದೆ ಶಾಲೆಗೆ ಹೋಗಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಮೊಬೈಲ್ ಕರೆ ಆಧರಿಸಿ ಇದೀಗ ಅತ್ಯಾಚಾರಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.2021 ರಲ್ಲಿ ಕೂಡ ಪೋಕ್ಷೋ ಪ್ರಕರಣದಲ್ಲಿ ಆನದ 3 ವರ್ಷಗಳ…

Read More

ಯಾದಗಿರಿ : ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆ ಆರೋಪದ ಹಿನ್ನೆಲೆಯಲ್ಲಿ ಪ್ರೌಢಶಾಲಾ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಜರುಗಿದೆ. ಯಾದಗಿರಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯೊಂದರ ಶಿಕ್ಷಕ ಹನುಮೇಗೌಡ ಎಂದು ಹೇಳಲಾಗುತ್ತಿದ್ದು, ಶಿಕ್ಷಕ ಹಣಮೇಗೌಡ ವಿರುದ್ಧ ಇದೀಗ ಪೋಕ್ಸೋ ಕಾಯ್ದೆ ಅಡಿ ಕೆಸ್ ದಾಖಲಾಗಿದೆ.ಆರೋಪಿ ಶಿಕ್ಷಕನ ವಿರುದ್ಧ ಇದೀಗ ಕೇಸ್ ದಾಖಲಾಗಿದ್ದು, ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಶಿಕ್ಷಕ ಹಣಮೆಗೌಡನನ್ನು ನಿನ್ನೆ ಜಿಲ್ಲಾ ಪಂಚಾಯತ್ ಸಿ ಇ ಓ ಅಮಾನತು ಮಾಡಿದ್ದಾರೆ.ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಗರಿಮಾ ಪನ್ವರ್ ಆದೇಶ ಹೊರಡಿಸಿದ್ದಾರೆ. ಇದೆ ವೇಳೆ ಘಟನೆ ನಡೆದ ತಕ್ಷಣ ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣ ಇಲಾಖೆಯ ನಾಲ್ವರು ಅಧಿಕಾರಿಗಳ ತಂಡವು ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಮಂಡ್ಯ : 2017ರಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಬೈಕ್ ರ್ಯಾಲಿ ನಡೆಸಿದಂತಹ ಬಿಜೆಪಿ 17 ಕಾರ್ಯಕರ್ತರಿಗೆ ಇದಿಗ ಮಂಡ್ಯ ಜಿಲ್ಲೆ ಪಾಂಡವಪುರ JMFC ಕೋರ್ಟಿಂದ ಸಮನ್ಸ್ ಜಾರಿ ಮಾಡಿದೆ ಎಂದು ಹೆಳಲಾಗುತ್ತಿದೆ. ಎಸ್ ಡಿ ಪಿ ಐ ಹಾಗೂ ಪಿ ಎಫ್ ಐ ವಿರುದ್ಧ ಪ್ರತಿಭಟನೆಗೆ ಮಂಗಳೂರಿಗೆ ಬಿಜೆಪಿ ಕಾರ್ಯಕರ್ತರು ಹೊರಟಿದ್ದರು ಎನ್ನಲಾಗಿದ್ದು, ಪಾಂಡವಪುರದಿಂದ ಮಂಗಳೂರಿಗೆ ಬೈಕ್ ರ್ಯಾಲಿ ಮೂಲಕ ಹೊರಟಿದ್ದರು. ಇದೇ ವೇಳೆ ಪಾಂಡವಪುರದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದರು. ಬಳಿಕ ಪೊಲೀಸರಿಂದ ಎಫ್ ಆರ್ ದಾಖಲಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು.ವಿಚಾರಣೆಗೆ ಕೋರ್ಟಿಗೆ ಹಾಜರಾಗದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 17 ಜನ ಕಾರ್ಯಕರ್ತರ ವಿರುದ್ಧ ಜಾರಿ ಮಾಡಲಾಗಿದೆ.ಡಿಸೆಂಬರ್ ತಿಂಗಳಲ್ಲಿ JMFC ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು ಎನ್ನಲಾಗಿದೆ.

Read More